Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಬಂಜಾರಾ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಸದಸ್ಯೆ ಡಾ.ಸುರೇಖಾ ಜಿ ರಾಠೋಡ ಅಭಿನಂದನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಶೋಕ ಸೋಮಲು ವಾಲಿಕಾರ ಅವರಿಗೆ ಬಂಜಾರಾ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯ 2024ನೇ ಸಾಲೀನ ವಾರ್ಷಿಕ ಪ್ರಶಸ್ತಿಯನ್ನು ಇತ್ತೀಚೆಗೆ ಪ್ರದಾನ ಮಾಡಲಾಯಿತು.ಮಾ.27 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆದ ಬಂಜಾರಾ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿಯು ಬೆಂಗಳೂರು ಪ್ರಶಸ್ತಿ ಪ್ರಧಾನ ಕಾರ್ಯಕ್ರಮದಲ್ಲಿ ಅವರಿಗೆ 2024ನೇ ಸಾಲೀನ ವಾರ್ಷಿಕ ಪ್ರಶಸ್ತಿಯನ್ನು ನೀಡಿ ಗೌರವಿಸಿತುಪ್ರಶಸ್ತಿಯನ್ನು ಪಡೆದ ಅಶೋಕ ಸೋಮಲು ವಾಲಿಕಾರರವರಿಗೆ ಎಸ್ ಅರ್ ನಾಯಕ್ ಬರಟಗಿ ಇವರು ಸನ್ಮಾನಿಸಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.ಹಾಗೆಯೆ ಭೂತನಾಳ ತಾಂಡಾದ ಹಿರಿಯರಾದ ಕಾಸು ನಾಯಕ, ಸಂತೋಷ ದಾಮುಲು ಕಾರಬಾರಿ, ಮುನ್ನು ಲಚ್ಚು ಡಾವ , ಹುನ್ನು ಶಂಕರ ನಾಯಕ, ಭೀಮು ರಾಮು ಢಾವ, ಮೋಹನ್ ಖುಬ್ಬು ಕಾರಬಾರಿ ಮತ್ತು ಬಂಜಾರಾ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಸದಸ್ಯರಾದ ಡಾ.ಸುರೇಖಾ ಜಿ ರಾಠೋಡ ಮತ್ತು ಆರ್ ಬಿ ನಾಯಕ ಅವರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
(ಏ.೦೨ ಬುಧವಾರ) ಆದ್ಯ ವಚನಕಾರ ದೇವರ ದಾಸಿಮಯ್ಯ ಅವರ ಜಯಂತಿ ಪ್ರಯುಕ್ತ ಈ ವಿಶೇಷ ಲೇಖನ ಲೇಖನ- ಮಲ್ಲಪ್ಪ. ಸಿ. ಖೊದ್ನಾಪೂರತಿಕೋಟಾವಿಜಯಪುರ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ನಮ್ಮದು ಭರತ ಭೂಮಿ. ವಿಶ್ವದಲ್ಲೇ ಅಧ್ಯಾತ್ಮಿಕತೆ ಮತ್ತು ಧಾರ್ಮಿಕತೆಯಲ್ಲಿ ಅತ್ಯಂತ ಸಮೃದ್ಧವಾದ ದೇಶ. ಅಧ್ಯಾತ್ಮಿಕೆಯನ್ನು ಸಾರಿದ ಪೂಣ್ಯಭೂಮಿ. ಅಂತಹ ಪುಣ್ಯ ಪುರುಷರಲ್ಲಿ ೧೦ ನೇಯ ಶತಮಾನದಲ್ಲಿ ಆದ್ಯ ವಚನಕಾರರಾಗಿ ಹೆಸರುವಾಸಿಯಾವರು ಶ್ರೀ ದೇವರ ದಾಸಿಮಯ್ಯ. ವೃತ್ತಿಯಲ್ಲಿ ನೇಯ್ಗೆಕಾರರಾಗಿದ್ದ ಅವರು ಶಿವನಿಗೆ ಬಟ್ಟೆಯನ್ನು ಕೊಟ್ಟು ಅಪೂರ್ವ ಭಕ್ತಿ ಮೆರೆದಂತಹ ಐತಿಹ್ಯಗಳು ಪುರಾಣಗಳಲ್ಲಿ ಉಲ್ಲೇಖವಾಗಿವೆ. ಅವರು ತಮ್ಮ ವಚನದಲ್ಲಿ,“ಕಡೆಗೀಲಿಲ್ಲದ ಬಂಡಿ ಹೊಡೆಗೆಡೆಯದೆ ಮಾಣ್ಬುದೆ? ಕಡೆಗೀಲು ಬಂಡಿಗಾಧಾರ. ಈ ಕಡುದರ್ಪವೇರಿದ ಒಡಲೆಂಬ ಬಂಡಿಗೆ ಮೃಢಭಕ್ತರ ನುಡಿಗಡಣವೆ ಕಡೆಗೀಲು ಕಾಣಾ ರಾಮನಾಥ// ”ಎಂಬ ವಚನದ ಮೂಲಕ ಇಡೀ ಬಸವಾದಿ ಶರಣರಲ್ಲಿ ಅಗ್ರ ಪಂಕ್ತಿಯ ವಚನಕಾರರಾಗಿದ್ದರು.ದೇವರ ದಾಸಿಮಯ್ಯನವರು ಈಗೀನ ಯಾದಗೀರ ಜಿಲ್ಲೆಯ ಸುರಪುರ ತಾಲೂಕಿನ ಸಪ್ತ ತೀರ್ಥಗಳ ನಿಸರ್ಗ ಸೌಂದರ್ಯದ ನಡುವಿರುವ ಮುದನೂರು ಎಂಬ ಪುಟ್ಟ ಗ್ರಾಮದಲ್ಲಿ ರಾಮನಾಥನ ಪರಮಭಕ್ತರು ಮತ್ತು…
ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಈರುಳ್ಳಿ ತುಂಬಿದ ಕ್ಯಾಂಟರ್ ಚಾಲಕನ ನಿಯಂತ್ರಣ ಕಳೆದುಕೊಂಡು ಕಾರು ಹಾಗೂ ಲಾರಿಗೆ ಡಿಕ್ಕಿ ಹೊಡೆದು ಕ್ಯಾಂಟರ್ ಉರುಳಿ ಬಿದ್ದ ಘಟನೆ ಸಂಗೀತ ಕಾರಂಜಿಯಿರುವ ಉದ್ಯಾನದ ಬಳಿ ಶನಿವಾರ ಸಂಜೆ ಜರುಗಿದೆ.ಕೊಲ್ಹಾರದಿಂದ ಈರುಳ್ಳಿ ತುಂಬಿಕೊಂಡು ಬಂಗಾರಪೇಟದತ್ತ ಹೊರಟಿದ್ದ ಕ್ಯಾಂಟರ್ ಆಲಮಟ್ಟಿ ಡ್ಯಾಂ ವೃತ್ತದಿಂದ ಆಲಮಟ್ಟಿ ಪೆಟ್ರೋಲ್ ಪಂಪ್ ರಸ್ತೆಗೆ ಹೋಗುತ್ತಿದ್ದಾಗ ಇಳಿಜಾರಿನಲ್ಲಿ ಬ್ರೇಕ್ ವಿಫಲಗೊಂಡಿದೆ. ಮೊದಲು ಕಾರಿಗೆ ಡಿಕ್ಕಿ ಹೊಡೆದು ನಂತರ ರಸ್ತೆ ಬದಿ ನಿಂತಿದ್ದ ಕ್ರೂಸರ್ ಗೆ ಡಿಕ್ಕಿ ಹೊಡೆದಿದೆ. ಆದರೆ ಯಾರಿಗೂ ಏನೂ ಆಗಿಲ್ಲ.ಕ್ರೂಸರ್ ವಾಹನ ರಸ್ತೆಯ ವಿಭಜಕದ ಮೇಲೆ ಹೋಗಿ ನಿಂತಿದೆ. ಕಾರಿನ ಹಿಂಬದಿ ನಜ್ಜುಗುಜ್ಜಾಗಿದೆ.ಕ್ಯಾಂಟರ್ ಉರುಳಿಬಿದ್ದ ಪರಿಣಾಮ,ಈರುಳ್ಳಿ ಚೀಲಗಳು ರಸ್ತೆಯ ಮೇಲೆ ಚಿಲ್ಲಾಪಿಲ್ಲಿಯಾಗಿ ಬಿದ್ದಿದ್ದವು.ಕ್ಯಾಂಟರ್ ಇನ್ನೂ ೫೦ ಮೀ ಮುಂದೆ ಬಂದು ಉರುಳಿದ್ದರೆ ಭಾರಿ ಅನಾಹುತ ಸಂಭವಿಸುತ್ತಿತ್ತು.ಆಲಮಟ್ಟಿ ಅಣೆಕಟ್ಟು ವೃತ್ತ ಹಾಗೂ ಉದ್ಯಾನದ ರಸ್ತೆಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ ಕಾರಣ ಭಾರಿ ವಾಹನ ಪ್ರವೇಶ ನಿಷೇಧವಿದೆ. ಆದರೂ ಈರುಳ್ಳಿ ತುಂಬಿದ ವಾಹನ ಈ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದ ಆರಾಧ್ಯ ದೈವ ಶ್ರೀ ಭದ್ರಕಾಳಿ ಸಮೇತ ಶ್ರೀ ವೀರಭದ್ರೇಶ್ವರ (ರಾಚೋಟೇಶ್ವರ) ದೇವರ ಜಾತ್ರಾ ಮಹೋತ್ಸವ ಮಾರ್ಚ್ 30 ರಂದು ಅತ್ಯಂತ ವಿಜೃಂಭಣೆಯಿಂದ ಜರುಗಲಿದೆ ಎಂದು ಜಾತ್ರಾ ಕಮಿಟಿ ಪ್ರಕಟಣೆಯಲ್ಲಿ ತಿಳಿಸಿದೆ.ಮಾರ್ಚ್ 30 ರವಿವಾರ ರಂದು ಮುಂಜಾನೆ 4 ಗಂಟೆಗೆ ಕೊಲ್ಹಾರ ಹಾಗೂ ಬೇಲೂರು ಹಿರೇಮಠದ ಪ್ರಭುಕುಮಾರ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಹುಲಗೇರಿ ಕಾಡಸಿದ್ದೇಶ್ವರ ಮಠದ ಗುರುದೇವ ಶಾಸ್ತ್ರೀಗಳು ಇವರ ನೇತೃತ್ವದಲ್ಲಿ ಹೋಮ, ಹವನ ರುದ್ರಾಭಿಷೇಕ ಹಾಗೂ ಪೂಜಾ ಕೈಂಕರ್ಯಗಳು ಜರುಗುವವು. ಮುಂಜಾನೆ 10 ಗಂಟೆಗೆ ಪಲ್ಲಕ್ಕಿ ಉತ್ಸವ ಹಾಗೂ ಕಳಶದ ಮೆರವಣಿಗೆ ಮಧ್ಯಾಹ್ನ 1 ಗಂಟೆಗೆ ಪುರವಂತರ ಸೇವೆ, ಅಗ್ನಿ ಪ್ರವೇಶ, ಅನ್ನಸಂತರ್ಪಣೆ ಜರುಗುವುದು ಎಂದು ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇತ್ತೀಚೆಗೆ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯಲು ತೆರಳುತ್ತಿದ್ದಾಗ ಅಪಘಾತಕ್ಕೊಳಗಾಗಿ ನಗರದ ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯರನ್ನು ಶನಿವಾರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.ಈ ಸಂದರ್ಭದಲ್ಲಿ ಆಸ್ಪತ್ರೆ ವೈದ್ಯರೊಂದಿಗೆ ಅವರ ಆರೋಗ್ಯ ಕುರಿತಾಗಿ ಮಾಹಿತಿ ಪಡೆದುಕೊಂಡರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ರಿಷಿ ಆನಂದ ಅವರು ಸೇರಿದಂತೆ ಆಸ್ಪತ್ರೆಯ ವೈದ್ಯಾಧಿಕಾರಿಗಳು ಉಪಸ್ಥಿತರಿದ್ದರು.
ಮಾದಕ ದ್ರವ್ಯಗಳ ನಿರ್ಮೂಲನಾ ಸಮಿತಿ ಜಿಲ್ಲಾ ಮಟ್ಟದ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಖಡಕ್ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಾದಕ ದ್ರವ್ಯಗಳ ಕಡಿವಾಣಕ್ಕೆ ಸಾರ್ವಜನಿಕರಲ್ಲಿ ಸೂಕ್ತ ಜಾಗೃತಿಯೊಂದಿಗೆ ಮಾದಕ ದ್ರವ್ಯ ಸೇವಿಸುವವರನ್ನು ಪರೀಕ್ಷೆಗೊಳಪಡಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಾದಕ ದ್ರವ್ಯಗಳ ನಿರ್ಮೂಲನಾ ಸಮಿತಿ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿ ಮಾದಕ ದ್ರವ್ಯಗಳ ಕಡಿವಾಣಕ್ಕಾಗಿ ಮಾದಕ ದ್ರವ್ಯಗಳ ಸೇವನೆಯಿಂದ ಜನರ ಆರೋಗ್ಯ ಮೇಲೆ ಬೀರುವ ದುಷ್ಪರಿಣಾಮಗಳ ಜಾಗೃತಿ ಜೊತೆಗೆ ಮಾದಕ ವಸ್ತು- ದ್ರವ್ಯ ಸೇವನೆಗೊಳಗಾದವರಿಗೆ ಪರೀಕ್ಷೆ ನಡೆಸಲು ಕ್ರಮ ವಹಿಸಬೇಕು. ಇದರಿಂದ ಜನರಲ್ಲಿ ಅತಿಯಾಗಿ ಜಾಗೃತಿ ಮೂಡುವುದರೊಂದಿಗೆ ಭಯದಿಂದ ಮಾದಕ ವಸ್ತುಗಳ ಬಳಕೆ ಪ್ರಮಾಣ ತಗ್ಗಲು ಸಹಕಾರಿಯಾಗಲಿರುವುದರಿಂದ ಮಾದಕ ದ್ರವ್ಯ ಸೇವನೆಗೊಳಗಾದವರನ್ನು ಪರೀಕ್ಷೆಗೆ ಕ್ರಮ ವಹಿಸುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲೆಯಲ್ಲಿ ಅಕ್ರಮ ಮದ್ಯ ಮಾರಾಟ ಕಡಿವಾಣಕ್ಕೆ ಸಂಬಂಧಿಸಿದ ಇಲಾಖೆಗಳು ಕಟ್ಟುನಿಟ್ಟಿನ…
S* ಮಾದಕ ದ್ರವ್ಯಗಳ ನಿರ್ಮೂಲನಾ ಸಮಿತಿ ಜಿಲ್ಲಾ ಮಟ್ಟದ ಸಭೆಯಲ್ಲಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಖಡಕ್ ಸೂಚನೆ B*ಮಾದಕ ದ್ರವ್ಯ ಕಡಿವಾಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಾದಕ ದ್ರವ್ಯಗಳ ಕಡಿವಾಣಕ್ಕೆ ಸಾರ್ವಜನಿಕರಲ್ಲಿ ಸೂಕ್ತ ಜಾಗೃತಿಯೊಂದಿಗೆ ಮಾದಕ ದ್ರವ್ಯ ಸೇವಿಸುವವರನ್ನು ಪರೀಕ್ಷೆಗೊಳಪಡಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಮಾದಕ ದ್ರವ್ಯಗಳ ನಿರ್ಮೂಲನಾ ಸಮಿತಿ ಜಿಲ್ಲಾ ಮಟ್ಟದ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ಜಿಲ್ಲೆಯಲ್ಲಿ ಮಾದಕ ದ್ರವ್ಯಗಳ ಕಡಿವಾಣಕ್ಕಾಗಿ ಮಾದಕ ದ್ರವ್ಯಗಳ ಸೇವನೆಯಿಂದ ಜನರ ಆರೋಗ್ಯ ಮೇಲೆ ಬೀರುವ ದುಷ್ಪರಿಣಾಮಗಳ ಜಾಗೃತಿ ಜೊತೆಗೆ ಮಾದಕ ವಸ್ತು- ದ್ರವ್ಯ ಸೇವನೆಗೊಳಗಾದವರಿಗೆ ಪರೀಕ್ಷೆ ನಡೆಸಲು ಕ್ರಮ ವಹಿಸಬೇಕು. ಇದರಿಂದ ಜನರಲ್ಲಿ ಅತಿಯಾಗಿ ಜಾಗೃತಿ ಮೂಡುವುದರೊಂದಿಗೆ ಭಯದಿಂದ ಮಾದಕ ವಸ್ತುಗಳ ಬಳಕೆ ಪ್ರಮಾಣ ತಗ್ಗಲು ಸಹಕಾರಿಯಾಗಲಿರುವುದರಿಂದ ಮಾದಕ ದ್ರವ್ಯ ಸೇವನೆಗೊಳಗಾದವರನ್ನು ಪರೀಕ್ಷೆಗೆ ಕ್ರಮ ವಹಿಸುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲೆಯಲ್ಲಿ ಅಕ್ರಮ…
ಉದಯರಶ್ಮಿ ದಿನಪತ್ರಿಕೆ ವರದಿ: ಸಂಪದಾ ಹಿರೇಮಠಆಲಮಟ್ಟಿ: ಬೆಳ್ಳಂ ಬೆಳಿಗ್ಗೆ ನೂರಾರು ದೇವ,ದೇವತೆಗಳ ಪಲ್ಲಕ್ಕಿಗಳ ಮಹಾಪೂರವೇ ಇಲ್ಲಿ ಹರಿದು ಬಂದಿತು. ಅವು ಕೃಷ್ಣಾ ನದಿ ತೀರದತ್ತ ಲಗ್ಗೆಯಿರಿಸಿ ಭಕ್ತಿ ಭಾವರಸಗಳ ಪರಿಮಳ ಬೀರಿದವು. ಎಲ್ಲೆಲ್ಲೂ ಪಲ್ಲಕ್ಕಿಗಳ ಕಲರವ. ಅರಿಷಿಣ ಭಂಡಾರಮಯದಲ್ಲಿ ಮೊಳಗಿ ಮಿನುಗಿದವು. ಕೃಷ್ಣೆಯ ಪವಿತ್ರ ಜಲ ಸಿಂಚನದಲ್ಲಿ ದೈವ ಪಲ್ಲಕ್ಕಿಗಳ ಪುಣ್ಯಸ್ನಾನ ಜೋರಾಗಿತ್ತು. ದೇವರ ಉತ್ಸವ ಮೂತಿ೯, ಪಲ್ಲಕ್ಕಿಗಳ ಶುದ್ಧೀಕರಣ ಕಾಯಕ ಭಕ್ತಿ ಪರಾಕಾಷ್ಠೆಯಲ್ಲಿ ಸಾಗಿತ್ತು.ಕೃಷ್ಣಾ ನದಿತೀರದ ದಂಡೆಯಲ್ಲಿಂದು ಯುಗಾದಿ ಅಮವಾಸ್ಯೆ ನಿಮಿತ್ಯ ಶುಕ್ರವಾರ ಕಂಡುಬಂದ ವಿಶೇಷ ದೃಶ್ಯಗಳಿವು.ಊರ ತುಂಬೆಲ್ಲಾ ಡೊಳ್ಳಿನ ನಿನಾದ. ಸಹಸ್ರಾರು ಜನರು ಪಲ್ಲಕ್ಕಿಯಲ್ಲಿ ದೇವರುಗಳ ಮೂರ್ತಿ ತರುತ್ತಿರುವ ದೃಶ್ಯ, ಪಲ್ಲಕ್ಕಿಗಳ ಸ್ನಾನ, ಗುಂಪಾಗಿ ಅಡುಗೆ ಮಾಡಿ, ನೈವೇದ್ಯ ಮಾಡುತ್ತಿರುವ ದೃಶ್ಯ ಝೇಂಕಾರ ಕಂಡುಬಂದಿತು. ಭಾರತೀಯ ಸಂಸ್ಕೃತಿ, ಪ್ರಕೃತಿ, ಪ್ರಕಾರ ಯುಗಾದಿ ಹಿಂದೂಗಳಿಗೆ ವಷಾ೯ರಂಭದ ಮೊದಲ ಹಬ್ಬ. ಧಾಮಿ೯ಕ ಚೌಕಟ್ಟಿನಲ್ಲಿ ವಿಶೇಷ ಮಹತ್ವ ಹೊಂದಿರುವ ಈ ದಿನ ಹೊಸ ವರ್ಷಕ್ಕೆ ಮುನ್ನುಡಿ ಬರೆದಿದೆ. ಹಾಗಾಗಿ ಯುಗಾದಿ ಅಮಾವಾಸ್ಯೆ ಹಿನ್ನೆಲೆಯಲ್ಲಿ…
ಪಂಚಮಸಾಲಿ ಜಗದ್ಗುರು ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಸ್ಪಷ್ಟನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಮ್ಮ ಸಮಾಜದ ಶಾಸಕರೊಬ್ಬರಿಗೆ ಅನ್ಯಾಯವಾಗಿದೆ, ಅದರ ವಿರುದ್ಧ ನಾನು ಧ್ವನಿ ಎತ್ತಿದ್ದೇನೆ, ಆದರೆ ವಿನಾಕಾರಣ ಕೆಲವರು ನಮ್ಮ ಸಮಾಜದ ವಿಷಯದಲ್ಲಿ ಮೂಗು ತೂರಿಸುತ್ತಿದ್ದಾರೆ, ನಮ್ಮ ಸಮಾಜದ ಒಗ್ಗಟ್ಟು, ಪ್ರಗತಿ ಸಹಿಸಿಕೊಳ್ಳದೇ ಹೊಟ್ಟೆಕಿಚ್ಚಿನಿಂದ ಕೆಲವರು ಹೇಳಿಕೆ ನೀಡುತ್ತಿದ್ದಾರೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮೀಜಿ ಹೇಳಿದರು.ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಅನ್ಯಾಯವಾದರೆ ನಾನು ಆತನ ನ್ಯಾಯದ ಪರವಾಗಿ ನಿಲ್ಲುವೆ, ಎಲ್ಲ ಸಮಾಜದ ಶ್ರೀಗಳು ಸಹ ತಮ್ಮ ಸಮಾಜಕ್ಕೆ ಅನ್ಯಾಯವಾದಾಗ ಪ್ರತಿಭಟನೆ ಮಾಡಿದ್ದು ಇದೆ, ಅದರಂತೆ ಪಂಚಮಸಾಲಿ ಹೋರಾಟ, ಉತ್ತರ ಕರ್ನಾಟಕ ಪ್ರಗತಿ ಕಳಕಳಿ ಹೊಂದಿರುವ ಜನಪರ ನಾಯಕ ಯತ್ನಾಳ ಅವರ ಬೆನ್ನಿಗೆ ನಿಂತಿದ್ದೇನೆ, ಉಚ್ಛಾಟನೆ ಮಾಡಿರುವುದನ್ನು ಖಂಡಿಸಿದ್ದೇನೆ ಎಂದರು.ಕಾರಣವಿಲ್ಲದೇ ಒಬ್ಬ ಪ್ರಭಾವಿ ನಾಯಕನನ್ನು ಉಚ್ಛಾಟನೆ ಮಾಡಿರುವುದು ಸಮಸ್ತ ಪಂಚಮಸಾಲಿ ಸಮಾಜದ ಜನರ ಭಾವನೆಗಳಿಗೆ ನೋವು ತರಿಸಿದೆ ಎಂದರು.ಪಂಚಮಸಾಲಿ ಸಮಾಜ…
2025-26ನೇ ಸಾಲಿನ ಆಯ-ವ್ಯಯ ಬಜೆಟ್ ಮಂಡಿಸಿದ ಪೌರಾಯುಕ್ತೆ ಜ್ಯೋತಿ ಗಿರೀಶ ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ನಗರದ ದೇಸಾಯಿ ವೃತ್ತವನ್ನು 40 ಲಕ್ಷ ರೂಗಳಲ್ಲಿ ಅಭಿವೃದ್ಧಿಪಡಿಸಿ ಟ್ರಾಪಿಕ್ ಸಿಗ್ನಲ್ ದೀಪಗಳನ್ನು ಅಳವಡಿಸಲಾಗುವುದು ಎಂದು ಪೌರಾಯುಕ್ತ ಜ್ಯೋತಿ ಗಿರೀಶ ತಿಳಿಸಿದರು.ನಗರದ ನಗರಸಭೆಯ ಸಭಾ ಭವನದಲ್ಲಿ 2025-26ನೇ ಸಾಲಿನ ಆಯ-ವ್ಯಯ ಬಜೆಟ್ ಸಭೆಯಲ್ಲಿ ಅವರು ಮಾಹಿತಿ ನೀಡಿದರು. 34.84 ಕೋಟಿ ರೂ ನಿರೀಕ್ಷಿತ ಸ್ವೀಕೃತಿಯಾಗಲಿದೆ, 34.78 ಕೋಟಿ ರೂ ನಿರೀಕ್ಷಿತ ಪಾವತಿಯಾಗಲಿದೆ ಒಟ್ಟು 6.60 ಲಕ್ಷ ರೂ ಉಳಿತಾಯ ವಾಗಲಿದೆ ಎಂದು ಬಜೆಟ್ ಮಂಡಿಸಿದರು.ನಾಡಿನ ಒಳಗಡೆ ಕಾಡು ಎಂಬ ಶೀರ್ಷಿಕೆ ಅಡಿಯಲ್ಲಿ ಉದ್ಯಾನವನ ಅಭಿವೃದ್ಧಿ ಕಾಡು ಬೆಳೆಸುವುದಕ್ಕೆ 20 ಲಕ್ಷ, ಶಿವಾಜಿ ವೃತ್ತ ಅಭಿವೃದ್ಧಿಗೆ 15 ಲಕ್ಷ, ಟಿಪ್ಪು ಸುಲ್ತಾನ ಸರ್ಕಲ್ ಅಭಿವೃದ್ದಿ ಹಾಗೂ ಟ್ರಾಪಿಕ್ ಸಿಗ್ನಲ್ ದೀಪ ಅಳವಡಿಕೆಗೆ 15 ಲಕ್ಷ, ಪರಶುರಾಮ ಉದ್ಯಾನವನ ಅಭಿವೃದ್ಧಿಗೆ 25 ಲಕ್ಷ, ಹಿಂದೂ ರುದ್ರಭೂಮಿ ಅಭಿವೃದ್ಧಿಗೆ 40 ಲಕ್ಷ, ಮುಸ್ಲಿಂ ಸ್ಮಶಾನ ಅಭಿವೃದ್ಧಿಗೆ 20 ಲಕ್ಷ ರೂ,…
