Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಹುತ್ಮಾತ್ಮ ದಿನದ ಪ್ರಯುಕ್ತ ಉಘೇ ವೀರಭೂಮಿ ಕಾರ್ಯಕ್ರಮ | ವಾಗ್ಮಿ ಪ್ರಕಾಶ ಮಲ್ಪೆ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಾರತದ ಸ್ವಾತಂತ್ರ ಹೋರಾಟಕ್ಕೆ ಕ್ರಾಂತಿಕಾರಿ ಬದಲಾವಣೆಯ ದಿಕ್ಕನ್ನು ನೀಡಿ ಭಾರತ ಮಾತೆ ಬ್ರಿಟಿಷರ ಕಪಿಮುಷ್ಠಿಯಿಂದ ಬಿಡುಗಡೆಯಾಗಬೇಕು ಅನ್ನುವ ಉದ್ದೇಶಕ್ಕೆ ತಮ್ಮ ಪ್ರಾಣವನ್ನು ತ್ಯಾಗ ಮಾಡಿದ ಅಮರ ಕಲಿಗಳು ಸ್ಮರಿಸುವುದು ದೇಶದ ಪ್ರತಿಯೊಬ್ಬರ ಕರ್ತವ್ಯ ಎಂದು ವಾಗ್ಮಿ ಪ್ರಕಾಶ ಮಲ್ಪೆ ಮಾತನಾಡಿದರು.ನಗರದ ಹುತಾತ್ಮ ವೃತ್ತದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಆಯೋಜಿಸಿದ್ದ ಭಗತ್ ಸಿಂಗ್, ರಾಜಗುರು, ಸುಖದೇವ, ಅವರ ಹುತಾತ್ಮ ದಿನದ ಪ್ರಯುಕ್ತ ಆಯೋಜಿಸಿದ್ದ ಉಘೇ ವೀರಭೂಮಿ ಕಾರ್ಯಕ್ರಮದ ಮುಖ್ಯ ಭಾಷಣಕಾರರಾಗಿ ಮಾತನಾಡಿದ ಅವರು ತಾಯ್ನಾಡನ್ನು ಸ್ವತಂತ್ರಗೊಳಿಸುವ ಮಹಾನ್ ಗುರಿಯನ್ನು ಸಾಧಿಸಲು ಯಾವುದೇ ತ್ಯಾಗವು ಸಾಕಾಗುವುದಿಲ್ಲ’ ಸ್ವಾತಂತ್ರ್ಯ ಹೋರಾಟದಲ್ಲಿ ಅವರ ಸಹಚರರಾದ ಭಗತ್ ಸಿಂಗ್, ಸುಖದೇವ್ ಮತ್ತು ರಾಜಗುರು ಅವರ ಸ್ಪೂರ್ತಿದಾಯಕ ದೃಷ್ಟಿಕೋನವಾಗಿತ್ತು. ಚಂದ್ರಶೇಖರ್ ಆಜಾದ್ ಅವರ ಸಹಾಯದಿಂದ ಹಿಂದೂಸ್ತಾನ್ ಸೋಷಿಯಲಿಸ್ಟ್ ರಿಪಬ್ಲಿಕನ್ ಆರ್ಮಿ (ಎಚ್ಎಸ್ಆರ್ಎ) ಅನ್ನು ರಚಿಸಿದರು ಅದರ ಮೂಲಕ ಸ್ವಾತಂತ್ರದ…
ಉದಯರಶ್ಮಿ ದಿನಪತ್ರಿಕೆ ಮೋರಟಗಿ: ಗ್ರಾಮೀಣ ಬಾಗದ ಮಕ್ಕಳಲ್ಲಿ ಪ್ರತಿಭೆಗೇನು ಕಡಿಮೆ ಇಲ್ಲ ಅವರನ್ನು ಪ್ರೋತ್ಸಾಹಿಸಿ ಗುರುತಿಸುವ ಕಾರ್ಯ ನಿಮ್ಮಿಂದಗಬೇಕು ಸಿಡಿಪಿಒ ಎನ್ ಎನ್ ಹಿರೇಮಠ ಮನವಿ ಮಾಡಿದರು.ಶಿಶು ಅಭಿವೃದ್ದಿ ಯೋಜನೆ ಸಿಂದಗಿ ವ್ಯಾಪ್ತಿಯಲ್ಲಿ ಬರುವ ಸಮೀಪದ ಗಬಸಾವಳಗಿ ಅಂಗನವಾಡಿ ಕೇಂದ್ರ-೨ರಲ್ಲಿ ಮಕ್ಕಳಿಗೆ ವಿನೂತನವಾದ ಅಂಗನವಾಡಿ ಮಕ್ಕಳ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ವಾರ್ಷಿಕಸ್ನೇಹ ಸಮ್ಮೇಳನಗಳು ಕೇವಲ ಕಾನವೆಂಟ್ ಶಾಲೆಗಳಿಗೆ ಮಾತ್ರ ಸೀಮಿತವಾಗಿರದೇ, ಪಟ್ಟಣ ಸೇರಿದಂತೆ ಗ್ರಾಮೀಣ ಬಾಗದ ಅಂಗನವಾಡಿ ಕೇಂದ್ರದಲ್ಲಿ ಬಡ ಮಕ್ಕಳೇ ಹೆಚ್ಚು ಕಲಿಯುವುದರಿಂದ ಅವರಲ್ಲಿರುವಭಯ ಓಡಿಸಲು ಹಾಗೂ ಆ ಮಕ್ಕಳಲ್ಲಿ ಅಡಗಿರುವ ಪ್ರತಿಭೆಯನ್ನು ಗುರುತಿಸಲು ಈ ಕಾರ್ಯಕ್ರಮ ಮುಖ್ಯ ವೇದಿಕೆಯಗಲಿದೆ ಹೀಗಾಗಿ ಮುಂದಿನ ದಿನಗಳಲ್ಲಿ ಎಲ್ಲಾ ಕಾರ್ಯಕರ್ತೆಯರು ತಮ್ಮ ತಮ್ಮ ಗ್ರಾಮ ಪಂಚಾಯತ ಮಟ್ಟದಲ್ಲಿಯೂ ಇಂತಹ ವಿನೂತನ ಕಾರ್ಯಕ್ರಮಗಳನ್ನು ಆಯೋಜಿಸಲು ಕರೆ ನೀಡಿದರು.ಕಾರ್ಯಕ್ರಮಲ್ಲಿ ಮಕ್ಕಳಿಗೆ ನೃತ್ಯ, ವೇಷಭೂಷಣ, ಹಾಡು, ಕಿರುನಾಟಕ, ಚಿತ್ರಕಲೆ ಸ್ಪರ್ಧೇಗಳನ್ನು ಆಯೋಜಿಸಿ ಗಣ್ಯರಿಂದ ಮಕ್ಕಳಿಗೆ ಅಭಿನಂದನಾ ಪತ್ರಗಳನ್ನು ನೀಡಿ ಹುರಿದುಂಬಿಸಲಾಯಿತು. ಹಾಗೂ ಅಂಗನವಾಡಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ೬ ವರ್ಷದ ಪುಟಾಣಿ ಬಾಲಕಿ ಸಮಾ ಫಾತಿಮಾ ಫಯಾಜಹ್ಮದ ಕಲಾದಗಿ ರಂಜಾನ್ ಮಾಸಾಚರಣೆಯ ಪ್ರಥಮ ರೋಜಾ ಮಾಡಿದಳು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಾನಗರ ಪಾಲಿಕೆ ವ್ಯಾಪ್ತಿಯ ಆಸ್ತಿ ಮಾಲೀಕರು ಏಪ್ರಿಲ್ ೩೦ರೊಳಗಾಗಿ ೨೦೨೫-೨೬ನೇ ಸಾಲಿನ ಆಸ್ತಿ ತೆರಿಗೆ ಪಾವತಿಸಿ ಆಸ್ತಿ ತೆರಿಗೆಯ ಮೇಲೆ ಶೇ.೫ ರಷ್ಟು ರಿಯಾಯತಿ ಲಾಭ ಪಡೆದುಕೊಳ್ಳುವಂತೆ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ್ ಮೆಕ್ಕಳಕಿ ತಿಳಿಸಿದ್ದಾರೆ.ಪ್ರತಿ ವರ್ಷ ಸ್ವಯಂ ಘೋಷಿತ ಆಸ್ತಿ ತೆರಿಗೆಯನ್ನು ಏಪ್ರಿಲ್ ತಿಂಗಳಲ್ಲಿ ಪಾವತಿಸುವ ಕರದಾತರಿಗೆ ಚಾಲ್ತಿ ಸಾಲಿನ ಆಸ್ತಿ ತೆರಿಗೆಯ ಮೇಲೆ ಶೇ.೫ ರಷ್ಟು ವಿಶೇಷ ರಿಯಾಯಿತಿಯನ್ನು ನೀಡಲಾಗುತ್ತದೆ. ೨೦೨೫-೨೬ನೇ ಸಾಲಿನ ಆಸ್ತಿ ತೆರಿಗೆಯನ್ನು ಏಪ್ರಿಲ್ ೩೦ರೊಳಗಾಗಿ ಪಾವತಿಸುವ ಕರದಾತರಿಗೆ ಶೇ.೫ ರಿಯಾಯಿತಿಯನ್ನು ನೀಡಲಾಗುತ್ತಿದ್ದು, ತೆರಿಗೆ ಪಾವತಿಸಿ ಇದರ ಲಾಭ ಪಡೆಯಬಹುದು. ಜೂನ್ ಒಳಗಾಗಿ ಪಾವತಿಸದಿದ್ದರೆ ಜುಲೈ ತಿಂಗಳಿನಿಂದ ಪ್ರತಿ ತಿಂಗಳಿಗೆ ಶೇ.೨ ರಷ್ಟು ದಂಡದೊಂದಿಗೆ ಪಾವತಿಸಬೇಕಾಗುತ್ತದೆ.ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಮೊತ್ತವನ್ನು ಸಕಾಲದಲ್ಲಿ ಪಾವತಿಸಲು ವಿಫಲರಾದ ಆಸ್ತಿ ಮಾಲೀಕರುಗಳ ವಿರುದ್ಧ ಕೆಎಂಸಿ ಕಾಯ್ದೆ ೧೯೭೬ರ ಅಧಿನಿಯಮಗಳನ್ವಯ ಬಾಕಿ ಇರುವ ಮೊತ್ತಗಳನ್ನು ವಸೂಲಿ ಮಾಡಲು, ಆಸ್ತಿ ಕರ ಬಾಕಿ ಉಳಿಸಿಕೊಂಡವರ ವಿರುದ್ಧ ನ್ಯಾಯಾಲಯದಲ್ಲಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ೨೦೨೫-೨೬ನೇ ಸಾಲಿನ ಸಂತೆ ಬಜಾರ, ಸಂಡೆ ಬಜಾರ, ಕೋಳಿ ಬಜಾರಗಳಲ್ಲಿ ವ್ಯಾಪಾರಸ್ಥರಿಂದ ನಿಗದಿತ ದರದಂತೆ ಶುಲ್ಕ ಸಂಗ್ರಹಿಸುವ ಬಹಿರಂಗ ಹರಾಜನ್ನು ಪಾಲಿಕೆ ಸಭಾಂಗಣದಲ್ಲಿ ದಿನಾಂಕ: ೨೭-೦೩-೨೦೨೫ ರಂದು ಜಿಲ್ಲಾಧಿಕಾರಿಗಳು ಹಾಗೂ ಆಡಳಿತಾಧಿಕಾರಿಗಳು ಮಹಾನಗರಪಾಲಿಕೆ ವಿಜಯಪುರ ಇವರ ಅಧ್ಯಕ್ಷತೆಯಲ್ಲಿ ಜರುಗಿತು.ಸಂತೆ ಹಾಗೂ ಸಂಡೆ ಬಜಾರಿನ ಲೀಲಾವಿನಲ್ಲಿ ೧೯ ಗುತ್ತಿಗೆದಾರರು ಭಾಗವಹಿಸಿದ್ದರು. ಸ್ಪರ್ಧಾತ್ಮಕ ಬಹಿರಂಗ ಹರಾಜು ಪ್ರಕ್ರಿಯೆಯಲ್ಲಿ ರೂ.೧,೩೭,೧೦,೦೦೦ ಬೇಡಿಕೆಯಾಗಿರುತ್ತದೆ. ಕೋಳಿ ಬಜಾರ ಬಹಿರಂಗ ಹರಾಜಿನಲ್ಲಿ ರೂ.೧.೭೬ಲಕ್ಷಕ್ಕೆ ದಾಖಲೆ ಮಟ್ಟಕ್ಕೆ ಹರಾಜು ಆಗಿದೆ.ಈ ವರ್ಷದ ಹರಾಜಿನ ಮೊತ್ತವು ಹಿಂದಿನ ಆರ್ಥಿಕ ವರ್ಷಗಳಿಗೆ ಹೋಲಿಸಿದಲ್ಲಿ ದಾಖಲೆ ಮೊತ್ತಕ್ಕೆ ಜರುಗಿರುತ್ತದೆ.ಸನ್-೨೦೨೨-೨೦೨೩ ಸಾಲಿನಲ್ಲಿ ಸಂತೆ ಬಜಾರ ೯೯.೨೫ ಲಕ್ಷ ರೂ. ಹಾಗೂ ಕೋಳಿ ಬಜಾರ್ ರೂ.೧,೨೦,೦೦೦ ಮೊತ್ತಕ್ಕೆ ಹರಾಜು ಆಗಿತ್ತು.ಈ ಹಿಂದಿನ ವರ್ಷಗಳಿಗೆ ಹೋಲಿಸಿದಲ್ಲಿ ಈ ಬಾರಿ ದಾಖಲೆ ಮೊತ್ತಕ್ಕೆ ಹರಾಜು ಪ್ರಕ್ರಿಯೆ ಪೂರ್ಣಗೊಂಡಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ್ ಮೆಕ್ಕಳಕಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಆಲಮೇಲ: ರಂಜಾನ್ ಎಂದರೆ ಚಿಕ್ಕಮಕ್ಕಳಿಗೆ ಉಪವಾಸದ ಪರಿಚಯ ಮಾಡಿಕೊಡುವ ಸಮಯ, ಪವಿತ್ರ ತಿಂಗಳಲ್ಲಿ ಕನಿಷ್ಠ ಒಂದು ಅಥವಾ ಎರಡು ಉಪವಾಸಗಳನ್ನು ಆಚರಿಸಬೇಕು ಎಂದು ಮಕ್ಕಳ ಭಕ್ತಿಯಾಗಿರುತ್ತದೆ. ಅದೇ ರೀತಿಯಾಗಿ ಪಟ್ಟಣದ ಚಾಂದ ತಾರಾ ಗಲ್ಲಿಯ ನಿವಾಸಿ ಅಲ್ತಾಫ್ ಕಮಲಾಪೂರ ಅವರ 7 ವರ್ಷ ಮಗಳಾದ ಅಲೀನಾ ಕಮಲಾಪೂರ ರೋಜಾ (ರಂಜಾನ ಉಪವಾಸ) ವ್ರತವನ್ನು ಮಾಡಿದ್ದಾರೆ. ಮಗು ಉಪವಾಸ ವ್ರತ ಮಾಡಿದ್ದಕ್ಕೆ ಸಂಬಂಧಿಕರು ಶುಭಾಶಯಗಳನ್ನು ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿದ್ಯಾರ್ಥಿಗಳು ದೇಶಭಕ್ತಿಯ ಜೊತೆಗೆ ಪಾಲಕರಿಗೆ ಸದಾ ಗೌರವ ನೀಡುವ ಗುಣವನ್ನು ಬೆಳೆಸಿಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ಎನ್ಎಸ್ಎಸ್ ಸಲಹಾ ಸಮಿತಿಯ ಸದಸ್ಯ ಡಾ.ಜಾವಿದ್ ಜಮಾದಾರ ಹೇಳಿದರು.ನಗರದ ಕರ್ನಾಟಕ ರಾಜ್ಯ ಸರ್ಕಾರ ಎನ್ಎಸ್ಎಸ್ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಎನ್ಎಸ್ಎಸ್ ಪ್ರಾದೇಶಿಕ ನಿರ್ದೇಶನಾಲಯ, ಬೆಂಗಳೂರು ಭಾರತ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಗುರುವಾರ ಆಯೋಸಿದ್ದ ‘ರಾಷ್ಟ್ರೀಯ ಭಾವೈಕ್ಯತಾ ಶಿಬಿರ-೨೦೨೫’ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.ವಿದ್ಯಾರ್ಥಿಗಳು ದೇಶಭಕ್ತಿಯ ಮನೋಭಾವನೆ ಬೆಳೆಸಿಕೊಳ್ಳಬೇಕು. ನಮಗಾಗಿ ನಿತ್ಯ ಜೀವನವನ್ನೇ ತ್ಯಾಗ ಮಾಡುವ ಪಾಲಕರ ಋಣವನ್ನು ಯಾವತ್ತೂ ತೀರಿಸಲು ಸಾಧ್ಯವಿಲ್ಲ. ಪಾಲಕರಿಗೆ ನಾವು ಸದಾ ಗೌರವ ನೀಡಬೇಕು ಎಂದು ವಿದ್ಯಾರ್ಥಿಗಳಿಗೆ ಭಾವನಾತ್ಮಕವಾಗಿ ಕರೆ ನೀಡಿದರು. ಅಲ್ಲದೇ, ವಿದ್ಯಾರ್ಥಿಗಳು ಸಂಸ್ಕೃತಿ, ಆಚಾರ-ವಿಚಾರಗಳನ್ನು ಅರಿಯಬೇಕು. ಜನರೊಂದಿಗೆ ಒಡನಾಟ ಬೆಳೆಸಿಬೇಕು. ಎನ್.ಎಸ್.ಎಸ್ ಚಟುವಟಿಕೆಗಳ ಮೂಲಕ ಪಬ್ಲಿಕ್ ನೆಟ್ವರ್ಕಿಂಗ್ ಮಾಡಿಕೊಳ್ಳಬೇಕು ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಮಹಿಳಾ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಮಾತನಾಡಿ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರ ಶಾಸಕ ಬಸನಗೌಡ ಪಾಟೀಲ (ಯತ್ನಾಳ) ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ ಕಾಲ ಉಚ್ಛಾಟಿಸಿ ಹೊರಡಿಸಿರುವ ಆದೇಶವನ್ನು ಜಿಲ್ಲಾ ಬಿಜೆಪಿ ಕೋರ ಕಮಿಟಿ ಅನುಮೋದಿಸಿದೆ.ನಗರದ ಬಿಜೆಪಿ ಕಾರ್ಯಾಲಯದಲ್ಲಿ ಶುಕ್ರವಾರ ಪಕ್ಷದ ಜಿಲ್ಲಾಧ್ಯಕ್ಷ ಗುರಲಿಂಗಪ್ಫ ಅಂಗಡಿ ಅಧ್ಯಕ್ಷತೆಯಲ್ಲಿ ನಡೆದ ಕೋರಕಮಿಟಿ ಸಭೆಯಲ್ಲಿ ಶಾಸಕ ಯತ್ನಾಳರನ್ನು ಪಕ್ಷದಿಂದ ಉಚ್ಛಾಟನೆ ಮಾಡಿರುವ ಕುರಿತು ಸುದೀರ್ಘ ಸಮಾಲೋಚನೆ ನಡೆಸಿ ಅಂತಿಮವಾಗಿ ಕೇಂದ್ರ ಶಿಸ್ತು ಸಮಿತಿಯ ವರಿಷ್ಠರು ಕೈಗೊಂಡ ನಿರ್ಣಯವನ್ನು ಅನುಮೋದಿಸಲಾಯಿತು.ಸಭೆಯ ನಂತರ ನಡೆದ ಪತ್ರಿಕಾಗೋಷ್ಟಿಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಗುರಲಿಂಗಪ್ಫ ಅಂಗಡಿ ಹಾಗೂ ವಿಧಾನ ಪರಿಷತ್ ಮಾಜಿ ಸದಸ್ಯ ಅರುಣ ಶಹಾಪೂರ ಕೇಂದ್ರ ಶಿಸ್ತು ಸಮಿತಿಯ ಆದೇಶ ಪತ್ರದ ಸಾರಾಂಶವನ್ನು ಓದಿ ಹೇಳಿದರು.ಇದು ರಾಷ್ಟ್ರಮಟ್ಟದಲ್ಲಿ ಆಗಿರುವ ನಿರ್ಣಯ. ಇದು ರಾಷ್ಟ್ರಮಟ್ಟದಲ್ಲಿ ಆಗಿದೆ. ಪಕ್ಷದ ಕೇಂದ್ರ ಶಿಸ್ತು ಸಮಿತಿಯ ವರಿಷ್ಠರು ಶಾಸಕ ಯತ್ನಾಳ ಅವರಿಗೆ ಶೋಕಾಸ್ ನೋಟೀಸ್ ನೀಡಿ, ಅವರಿಂದ ಉತ್ತರ ಪಡೆದುಕೊಂಡು ಎಲ್ಲ ಮುಂದಿನ ಸಾಧಕ ಬಾಧಕಗಳ ಬಗ್ಗೆ ಪರಾಮರ್ಶೆ ಮಾಡಿಯೇ…
ಬೆಂಗಳೂರಿನಲ್ಲಿ ಬಿಜೆಪಿ ಭಿನ್ನಮತೀಯ ನಾಯಕರ ಸಭೆ | ಬಿಜೆಪಿಯಲ್ಲಿ ಬದಲಾವಣೆಗಳಿಗಾಗಿ ಹೋರಾಟ ಮುಂದುವರಿಕೆಗೆ ನಿರ್ಧಾರ ಬೆಂಗಳೂರು: ಬಂಡಾಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಹೊರಗಿಟ್ಟಿದ್ದನ್ನು ಮರುಪರಿಶೀಲಿಸುವಂತೆ ಬಿಜೆಪಿ ಭಿನ್ನಮತೀಯ ನಾಯಕರು ಸಭೆ ಸೇರಿ ಪಕ್ಷದ ಹೈಕಮಾಂಡ್ಗೆ ಮನವಿ ಮಾಡಿದ್ದಾರೆ. ಪಕ್ಷದಿಂದ ದೂರವಾಗುವ ಯಾವುದೇ ಯೋಜನೆ ಇಲ್ಲ. ತಮ್ಮ ಕಡೆಯಿಂದ ಯಾವುದೇ ತಪ್ಪುಗಳನ್ನು ಸರಿಪಡಿಸಲು ಸಿದ್ಧರಿದ್ದೇವೆ. ಆದರೆ ರಾಜ್ಯ ಘಟಕದ ಅಧ್ಯಕ್ಷ ಬಿ ವೈ ವಿಜಯೇಂದ್ರ ಅವರನ್ನು ಬದಲಾಯಿಸುವುದು ಸೇರಿದಂತೆ ಕರ್ನಾಟಕ ಬಿಜೆಪಿಯಲ್ಲಿ ಬದಲಾವಣೆಗಳಿಗಾಗಿ ಹೋರಾಡುವುದನ್ನು ಮುಂದುವರಿಸುತ್ತೇವೆ ಎಂದು ಹೇಳಿದರು.ಮಾಜಿ ಕೇಂದ್ರ ಸಚಿವ ಜಿ ಎಂ ಸಿದ್ದೇಶ್ವರ ಅವರ ಬೆಂಗಳೂರಿನ ನಿವಾಸದಲ್ಲಿ ಯತ್ನಾಳ್ ಜೊತೆಗೆ, ಶಾಸಕರಾದ ರಮೇಶ್ ಜಾರಕಿಹೊಳಿ ಮತ್ತು ಬಿ ಪಿ ಹರೀಶ್, ಮಾಜಿ ಶಾಸಕ ಕುಮಾರ್ ಬಂಗಾರಪ್ಪ ಸೇರಿದಂತೆ ಇತರರು ಸಭೆಯಲ್ಲಿ ಭಾಗವಹಿಸಿದ್ದರು.ಪಕ್ಷದ ಶಿಸ್ತಿನ ಪದೇ ಪದೇ ಉಲ್ಲಂಘನೆ ಮಾಡಿದ್ದಕ್ಕಾಗಿ ಬಿಜೆಪಿ ಬುಧವಾರ ಮಾಜಿ ಕೇಂದ್ರ ಸಚಿವ ಯತ್ನಾಳ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಆರು ವರ್ಷಗಳ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಗ್ರಾಮಸ್ಥರಿಗೆ ಶುದ್ಧ ಕುಡಿಯುವ ನೀರಿನ ಪ್ರಯೋಜನಕಾರಿಯಾಗುವ ನಿಟ್ಟಿನಲ್ಲಿ ಧರ್ಮಸ್ಥಳ ಕ್ಷೇಮಾಭಿವೃದ್ಧಿ ಸಂಸ್ಥೆ ವತಿಯಿಂದ ಲಚ್ಯಾಣ ಗ್ರಾಮದಲ್ಲಿ ನಿರ್ಮಿಸಲಾದ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಶಾಸಕ ಯಶವಂತರಾಯಗೌಡ ಪಾಟೀಲರು ಚಾಲನೆ ನೀಡಿದರು.ತಾಲೂಕಿನ ಲಚ್ಯಾಣ ಗ್ರಾಮದಲ್ಲಿ ಗ್ರಾ.ಪಂ ಲಚ್ಯಾಣ ಮತ್ತು ಧರ್ಮಸ್ಥಳ ಕ್ಷೇಮಾಭಿವೃದ್ದಿ ಸಂಸ್ಥೆ ಸಹಯೋಗದಲ್ಲಿ಼ ಶುದ್ಧ ನೀರಿನ ಘಟಕ ಉದ್ಘಾಟಿಸಿ ಮಾತನಾಡಿದ ಶಾಸಕ ಯಶವಂತರಾಯಗೌಡ ಪಾಟೀಲರು ಧರ್ಮಸ್ಥಳ ಕ್ಷೇಮಾಭಿವೃದ್ದಿ ಸಂಸ್ಥೆ ತಾಲೂಕಿನಲ್ಲಿ ಜನೋಪಯೋಗಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಹಮ್ಮಿಕೊಂಡಿರುವದು ಶ್ಲಾಘನೀಯ. ಶುದ್ಧ ನೀರಿನ ಘಟಕದ ಮೂಲಕ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದೆ ಎಂದರು.ಮನುಕುಲ ಸೇವೆಯಲ್ಲಿ ಕಳೆದಿರುವ ಸಂಸ್ಥೆ ರಾಜ್ಯದ್ಯಾದಂತ ಲಕ್ಷಾಂತರ ಜನರಿಗೆ ಯೋಜನೆಗಳೊಂದಿಗೆ ಮಾನವ ಸೇವೆಗೆ ಮುಂದಾಗಿದೆ. ಗ್ರಾಮಸ್ಥರಿಗೆ ಅಗತ್ಯ ಶುದ್ಧ ಕುಡಿಯುವ ನೀರಿನ ಘಟಕದ ಮೂಲಕ ಧರ್ಮಸ್ಥಳ ಸಂಸ್ಥೆ ತನ್ನ ಕಾರ್ಯಯೋಜನೆಯನ್ನು ಮತ್ತಷ್ಟು ಅರ್ಥಪೂರ್ಣ ವಾಗಿಸಿಕೊಂಡಿದೆ ಎಂದರು.ತಾಲೂಕಿನ ಯೋಜನಾಧಿಕಾರಿ ನಟರಾಜ ಎಲ್.ಎಂ ಮಾತನಾಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆ ವತಿಯಿಂದ ತಾಲೂಕಿನಾದಂತ ಅನೇಕ ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಅದರಲ್ಲೂ…
