Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಇಂದಿನ ಯುವಕರಿಗೆ ಸ್ಪೂರ್ತಿ ತುಂಬುವ ನಿಟ್ಟಿನಲ್ಲಿ ವಿದ್ಯಾರ್ಥಿಗಳೊಂದಿಗೆ ಪರಿಣಿತರ ಸಂವಾದ ಕಾರ್ಯಕ್ರಮ ಅತ್ಯವಶ್ಯ ಎಂದು ಇತ್ತಿಚೆಗೆ ಯುಪಿಎಸ್‌ಸಿ ಪರೀಕ್ಷೆಯಲ್ಲಿ ೫೮೨ ರ‍್ಯಾಂಕ ಪಡೆದ ಡಾ.ಮಹೇಶ ಮಡಿವಾಳರ ಹೇಳಿದರು.ಪಟ್ಟಣದ ಎಲೈಟ್ ಪ್ರಾಥಮಿಕ, ಪ್ರೌಢಶಾಲೆ ಹಾಗೂ ವಿಜ್ಞಾನ ಪದವಿಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಜೊತೆ ಹಮ್ಮಿಕೊಂಡ ಸಂವಾದ ಕಾರ್ಯಕ್ರಮದಲ್ಲಿ ಸನ್ಮಾನಿಸಿ ಸ್ವೀಕರಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ತಮ್ಮ ಗುರಿ ತಲುಪಲು ವಿದ್ಯಾಭ್ಯಾಸದೆಡೆಗೆವ ಹೆಚ್ಚಿನ ಗಮನ ಹರಿಸಬೇಕು. ಈ ಯುಗವನ್ನು ಸ್ಪರ್ಧಾತ್ಮಕ ಯುಗವೆಂದು ಕರೆಯಲಾಗುತ್ತಿದೆ. ಹಾಗಾಗಿ ವಿದ್ಯಾರ್ಥಿಗಳು ಎಷ್ಟೇ ಓದಿದರು ಕಡಿಮೆ. ನಮ್ಮ ಗುರಿಯನ್ನು ತಲುಪಲು ಸದಾ ನಾವು ಓದಿನಲ್ಲಿ ನಿರತರಾಗಬೇಕು. ಅಂದಾಗ ತಂದೆ ತಾಯಿಗಳ ಕನಸು ನನಸಾಗಿಸಲು ಸಾಧ್ಯ. ಈ ವಯಸ್ಸಿನಲ್ಲಿ ಯಾವುದೇ ಕಡೆ ಚಿತ್ತವನ್ನು ಹರಿಸದೇ ಮಸ್ತಕಕ್ಕೆ ಪುಸ್ತಕದ ಚಿತ್ತವನ್ನು ಹರಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.ಈ ವೇಳೆ ಸಂಸ್ಥೆಯ ಅಧ್ಯಕ್ಷ ಮಹಿಬೂಬ ಅಸಂತಾಪೂರ, ಪ್ರಾಚಾರ್ಯ ಇಜಾಜ್ ಜುಮನಾಳ ಸೇರಿದಂತೆ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ಹೊರವಲಯದಲ್ಲಿರುವ ಜೇವರ್ಗಿ ಬೈಪಾಸ್ ಹತ್ತಿರ ಸರ್ಕಾರಿ ಬಸ್ ಹಾಗೂ ಕಾರಿನ ಮಧ್ಯ ಅಪಘಾತವಾಗಿದ್ದು, ನಾಲ್ಕು ಜನರಿಗೆ ಗಂಭೀರ ಗಾಯವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ತಿಳಿದು ಬಂದಿದೆ. ಸರ್ಕಾರಿ ಬಸ್ ಚಾಲಕನ ನಿರ್ಲಕ್ಷತೆಯಿಂದ ಈ ಅಪಘಾತವಾಗಿದ್ದು ಕಂಡು ಬಂದಿದೆ. ಘಟನಾ ಸ್ಥಳಕ್ಕೆ ಹೈವೇ ಪೆಟ್ರೋಲಿಯಂ ಪೊಲೀಸ್ ಗಸ್ತು ವಾಹನ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.ಘಟನಾ ಸ್ಥಳಕ್ಕೆ ಸಿಂದಗಿ ಪಿಎಸ್‌ಐ ಆರೀಫ್ ಮುಶಾಪುರಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಈ ಘಟನೆ ಸಿಂದಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಬೈಕ್ ಅಪಘಾತದಲ್ಲಿ ಗ್ರಾಮ‌ ಆಡಳಿತಾಧಿಕಾರಿ ಸಾವನ್ನಪ್ಪಿರುವ ಘಟನೆ ಪಟ್ಟಣ ಸಿಂದಗಿ ರಸ್ತೆಯ ದೇಶಪಾಂಡೆ ತಾಂಡಾದ ಹತ್ತಿರ ನಡೆದಿದೆ.ಇಂಡಿ ತಾಲ್ಲೂಕಿನ ಸಾಲೋಟಗಿ ಗ್ರಾಮದ ಚಂದ್ರಕಾಂತ ಸೂರ್ಯವಂಶಿ ವಯಾ (36) ಎಂಬುವರು ಬೈಕ್ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಅವರು ಸುಮಾರು 14 ವರ್ಷದಿಂದ ಗ್ರಾಮ ಆಡಳಿತ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ‌ಪ್ರಸ್ತುತ್ ತಾಲ್ಲೂಕಿನ ಹಿರೇರೂಗಿ ಗ್ರಾಮ ಆಡಳಿತ ಅಧಿಕಾರಿಯಾಗಿ ಸೇವೆ ಸಲ್ಲಿಸಿದರು.ಆದರೆ ನಿನ್ನೆ ಸಾಯಂಕಾಲ ಮನೆಯಲ್ಲಿ ಲಕ್ಷ್ಮೀ ಎಂಬ ಮಗಳ ಜನ್ಮ ದಿನ ಇರುವುದರಿಂದ ಪಟ್ಟಣಕ್ಕೆ ತೆರಳಿ ಕೆಕ್ ತರುವ ಬಗ್ಗೆ ಮನೆಯಲ್ಲಿ ಹೇಳಿ ಹೋಗಿದ್ದರು. ಆದರೆ 7 :30 ಕ್ಕೆ ಮರಳಿ ಸಾಲೋಟಗಿ ಗ್ರಾಮಕ್ಕೆ ಬರುವಾಗ ಬೈಕ್ ಸ್ಕೀಡಾಗಿ ಬಿದ್ದು, ತಲೆಗೆ ಹಾಗೂ ಮುಖಕ್ಕೆ ಬಾರಿ ಪೆಟ್ಟು ಬಿದ್ದು ಸಾವು ಬದುಕಿನ ಮದ್ಯ ಹೋರಾಟ ಮಾಡುತ್ತಿರುವ ಸಂದರ್ಭದಲ್ಲಿ ತಾಲ್ಲೂಕು ಸಾರ್ವಜನಿಕ ಸರಕಾರಿ ಆಸ್ಪತ್ರೆಗೆ ದಾಖಲಿಸಿದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಗ್ರಾಮ ಆಡಳಿತ ಅಧಿಕಾರಿ ಸಾವನ್ನಪ್ಪಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಭಗೀರಥ ಮಹರ್ಷಿ ಅವರನ್ನು ಏಕೆ ಸ್ಮರಿಸಿಕೊಳ್ಳುತ್ತಾರೆ. ಪಟ್ಟಣದಲ್ಲಿ ಪ್ಲಾಟ್ ಖರದಿಸಿದ್ದಾರೆಯೇ..? ಸ್ವಿಸ್ ಬ್ಯಾಂಕ್ ನಲ್ಲಿ ಹಣ ಇಟ್ಟದ್ದಾರೆಯೇ..? ಇಲ್ಲ..! ನಿರಂತರ ಪ್ರಯತ್ನ ಮತ್ತು ಶ್ರಮದಿಂದ ಜಗತ್ತಿಗೆ ಅಮೂಲ್ಯವಾದ ವಸ್ತು ಕೊಡುಗೆ ನೀಡಿದ್ದಾರೆ. ಹಾಗಾಗಿ ಈ ಇಡೀ ನಾಡಿನಲ್ಲಿ ಸ್ಮರಿಸಿಕೊಳ್ಳುತ್ತೆವೆ ಎಂದು ಶಿರಶ್ಯಾಡದ ಅಭಿನವ ಮುರುಘೆಂದ್ರ ಶಿವಾಚಾರ್ಯರು ಹೇಳಿದರು.ಭಾನುವಾರ ಪಟ್ಟಣದ ತಾಲೂಕಾ ಆಡಳಿತ ಸೌಧದಲ್ಲಿ ತಾಲೂಕಾ ಆಡಳಿತ ವತಿಯಿಂದ ಹಮ್ಮಿಕೊಂಡ ಭಗೀರಥ ಮಹರ್ಷಿ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಭಗಿರಥ ಮಹರ್ಷಿಯನ್ನು ನೆನೆಯುವುದು, ಕೊಂಡಾಡುವುದನ್ನು ಕಂಡರೆ ಸಮಾಜದಲ್ಲಿ ಜಾಗೃತಿ ಅಲೆ ಬೆಳೆದಿದೆ ಎಂದರ್ಥ.‌ ಆದರೆ ಜಾಗೃತಿ ಅಲೆ ಕೇವಲ ಜಯಂತಿಗೆ ಸೀಮಿತವಾಗಿರದೆ, ಎಸ್ ಎಸ್ ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದ ಸಮುದಾಯದ ಪ್ರತಿಭಾನ್ವಿತ ಮಕ್ಕಳನ್ನು ಗುರುತಿಸಿ, ಅವರ ಶಿಕ್ಷಣ ಭವಿಷ್ಯಕ್ಕೆ ಹೊಸ ಸ್ವರೂಪ ನೀಡುವ ಕಾರ್ಯ ನಿಮ್ಮಿಂದಾಗಬೇಕು. ವಿಧ್ಯೆ ಯಾರು ಸ್ವತ್ತು ಅಲ್ಲಾ..!ವಿದ್ಯಗಿಂತ ಜಗತ್ತಿನಲ್ಲಿ ಯಾವ ದೊಡ್ಡ ಆಯುಧ ಇಲ್ಲ. ಅದಕ್ಕಾಗಿ ಸಮುದಾಯದಲ್ಲಿರುವ ಅನಾನುಕೂಲ…

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಪ್ರಸಕ್ತ ೨೦೨೪-೨೫ ನೇ ಸಾಲಿನ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ೧ ರಲ್ಲಿ ಸ್ಥಳೀಯ ವೀರಶೈವ ವಿದ್ಯಾಲಯ ಅಸೋಸಿಯೇಷನ್ ಸಂಸ್ಥೆಯ ಮಂಜಪ್ಪ ಹರ್ಡೇಕರ (ಎಂ.ಎಚ್.ಎಂ) ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ.ಪ್ರತಿಭಾವಂತ ವಿದ್ಯಾರ್ಥಿ ಪ್ರಜ್ವಲ್ ಶ್ರೀಕಾಂತ್ ಬಿರಾದರ್ ೬೨೫ ಕ್ಕೆ ೫೭೩ (ಶೇ, ೯೧.೬೮) ಅಂಕ ಪಡೆಯುವ ಮೂಲಕ ಶಾಲೆಗೆ ಪ್ರಥಮ ಸ್ಥಾನ ಗಿಟ್ಟಿಸಿಕೊಂಡಿದ್ದಾನೆ. ಪ್ರತಿಭಾನ್ವಿತೆ ಅಶ್ವಿನಿ ಅ ಚೌಹಾಣ್ (ಶೇ, ೮೬.೪೦%) ದ್ವೀತಿಯ, ಸಾನಿಯಾ ಬೇಗಂ ನದಾಫ್ (ಶೇ,೮೨%) ತೃತೀಯ ಸ್ಥಾನ ಪಡೆದಿದ್ದಾರೆ.ಫೈರೋಜಾ ಬಾಗಲಕೋಟ ೫೨೯, ಅಕ್ಷತಾ ಅಮೀನಪ್ಪಗೋಳ ೫೦೦, ಪ್ರಜ್ವಲ್ ವಾಲಿಕಾರ ೪೯೦, ಸಾನಿಯಾ ಬೈಲ್ಕುರ್ ೪೮೫, ಚಂದ್ರಿಕಾ ಹಿರೇಮಠ ೪೮೦, ನಿಶ್ಮಿತಾ ಕೋಪನ್ನವರ್ ೪೮೦, ಐಶ್ವರ್ಯ ಮಂಗುಳ್ಳಿ ೪೭೦ ಅಂಕ ಪಡೆದು ಉತ್ತಮ ಸಾಧನೆ ಮಾಡಿದ್ದಾರೆ.ಪರೀಕ್ಷೆಯಲ್ಲಿ ಗುಣಾತ್ಮಕ ಸಾಧನೆಯೊಂದಿಗೆ ತೇರ್ಗಡೆಯಾಗಿ ಶಾಲೆಗೆ,ಸಂಸ್ಥೆಗೆ ಕೀರ್ತಿ ತಂದಿರುವ ಸಾಧಕ ಮಕ್ಕಳಿಗೆ ಸಂಸ್ಥೆಯ ಅಧ್ಯಕ್ಷರಾದ ಗದುಗಿನ ತೋಂಟದ ಡಾ. ಸಿದ್ದರಾಮ ಮಹಾಸ್ವಾಮಿಗಳವರು, ಸಂಸ್ಥೆಯ ಕ್ರಿಯಾಶೀಲ ಕಾರ್ಯದರ್ಶಿಗಳಾದ ಪ್ರೊ,ಶಿವಾನಂದ ಪಟ್ಟಣಶೆಟ್ಟರ…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ವಿಭೂತಿಹಳ್ಳಿಯ ಕಿತ್ತೂರ ರಾಣಿ ಚನ್ನಮ್ಮ ವಸತಿ ಶಾಲೆಯ ಎಸ್‌ಎಸ್‌ಎಲ್‌ಸಿ ಪರೀಕ್ಷಯೆ ೮೫% ಫಲಿತಾಂಶ ಬಂದಿದೆ.ಪವಿತ್ರಾ ಬಿರಾದಾರ ೫೯೫ (೯೪.೨೦%) ಅಂಕ ಪಡೆದು ಶಾಲೆಗೆ ಪ್ರಥಮ ಸ್ಥಾನ, ಸಾನಿಕಾ ಹೊಸಮನಿ ೫೯೪ (೯೫.೦೪%) ಅಂಕ ಪಡೆದು ದ್ವಿತೀಯ ಸ್ಥಾನ, ಸ್ನೇಹ ಚೌಹಾಣ (೯೪%) ಅಂಕ ಪಡೆದು ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ. ಒಟ್ಟು ೪೮ ವಿದ್ಯಾರ್ಥಿನಿಯರಲ್ಲಿ ೨೧ ವಿದ್ಯಾರ್ಥಿನಿಯರು ಡಿಸ್ಟಿಂಗಷನ ಪಾಸಾಗಿದ್ದರೆ, ೨೦ ವಿದ್ಯಾರ್ಥಿನಿಯರು ಪ್ರಥರ್ಮ ದರ್ಜೇಯಲ್ಲಿ ಪಾಸಾಗಿದ್ದಾರೆ, ೨ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನದಲ್ಲಿ ಪಾಸಾಗಿದ್ದಾರೆ. ವಿದ್ಯಾರ್ಥಿನಿಯರ ಸಾಧನೆಗೆ ಸಿಬ್ಬಂದಿ ಹರ್ಷ ವೆಕ್ತಪಡಿಸಿದ್ದಾರೆ ಎಂದು ಮುಖ್ಯ ಶಿಕ್ಷ ಪ್ರಭಾಕರ ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

*ಉದಯರಶ್ಮಿ ದಿನಪತ್ರಿಕೆ* ಆಲಮೇಲ: ಪಟ್ಟಣದ ನಿರ್ಮಲಾಲಯ ಆಂಗ್ಲ ಮಾದ್ಯಮ ಶಾಲೆಯ ಎಸ್‌ಎಸ್‌ಎಲ್‌ಸಿ ಪರೀಕ್ಷೆ ೮೧% ಫಲಿತಾಂಶ ಬಂದಿದೆ.ತನುಶ್ರೀ ಮಾನಕರ ೬೧೦(೯೭.೬೦%) ಅಂಕ ಪಡೆದು ಪ್ರಥಮ ಸ್ಥಾನ, ಸಹನಾ ಕಡಗಂಚಿ ೬೦೮ (೯೭.೨೮%) ಅಂಕ ಪಡೆದು ದ್ವಿತೀಯ ಸ್ಥಾನ, ಎಂ.ಪಿ. ಚೇತನ ಮತ್ತು ಪೂರ್ಣಿಮಾ ಬಂಡಗಾರ ಇಬ್ಬರು ೫೮೪(೯೩.೪೪%) ಅಂಕ ಪಡೆದು ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.ಒಟ್ಟು ೫೫ ವಿದ್ಯಾರ್ಥಿಗಳಲ್ಲಿ ೧೩ ವಿದ್ಯಾರ್ಥಿಗಳು ಡಿಸ್ಟಿಂಗಷನ ಪಾಸಾಗಿದ್ದರೆ, ೧೭ ವಿದ್ಯಾರ್ಥಿಗಳು ಪ್ರಥರ್ಮ ದರ್ಜೇಯಲ್ಲಿ ಪಾಸಾಗಿದ್ದಾರೆ, ೬ ವಿದ್ಯಾರ್ಥಿಗಳು ದ್ವಿತೀಯ ಸ್ಥಾನದಲ್ಲಿ ಪಾಸಾಗಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆ ಮುಖ್ಯಸ್ಥರು ಹಾಗೂ ಸಿಬ್ಬಂದಿ ಹರ್ಷ ವೆಕ್ತಪಡಿಸಿದ್ದಾರೆ ಎಂದು ಮುಖ್ಯ ಶಿಕ್ಷಕಿ ಐರಿನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ತಾಲೂಕಿನ ದೇವರನಾವದಗಿ ಗ್ರಾಮದ ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಶೇ ೬೪% ರಸ್ಟು ಫಲಿತಾಂಶ ಬಂದಿದೆ.ಅಕ್ಕಮ್ಮ ಯರಗಲ್ ೬೦೭(೯೭%) ಅಂಕ ಪಡೆದು ಪ್ರಥಮ ಸ್ಥಾನ, ಪಲ್ಲವಿ ಸಿನ್ನೂರ ೫೯೩(೯೪%) ಅಂಕ ಪಡೆದು ದ್ವಿತೀಯ ಸ್ಥಾನ, ಕಾಳಮ್ಮ ಉಕಲಿ ೫೯೦(೯೪) ಅಂಕ ಪಡೆದು ತೃತೀಯ ಸ್ಥಾನ ಪಡೆದುಕೊಂಡು ಶಾಲೆಗೆ ಕಿರ್ತಿ ತಂದಿದ್ದಾರೆ. ಹಾಗೆ ೧೧ ವಿದ್ಯಾರ್ಥಿಗಳು ಡಿಸ್ಟಿಂಗಷನ ಪಾಸಾಗಿದ್ದರೆ, ೩೬ ವಿದ್ಯಾರ್ಥಿಗಳು ಪ್ರಥರ್ಮ ದರ್ಜೇಯಲ್ಲಿ ಪಾಸಾಗಿದ್ದಾರೆ, ೨೪ ವಿದ್ಯಾರ್ಥಿಗಳು ದ್ವಿತೀಯ ಸ್ಥಾನದಲ್ಲಿ ಪಾಸಾಗಿದ್ದಾರೆ. ಒಟ್ಟು ೧೧೭ ವಿದ್ಯಾರ್ಥಿಗಳಲ್ಲಿ ೭೫ ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದಾರೆ, ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಮಹಾಂತೇಶ ಹಾಗೂ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ ಹರ್ಷ ವೇಕ್ತಪಡಿಸಿದ್ದಾರೆ ಎಂದು ಮುಖ್ಯ ಶಿಕ್ಷಕ ಎಂ.ಜಿ. ಉಪ್ಪಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ತಾಲೂಕಿನ ದೇವರನಾವದಗಿ ಗ್ರಾಮದ ಮಲ್ಲಿಕಾರ್ಜುನ ಶಿಕ್ಷಣ ಸಂಸ್ಥೆಯ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಶೇ ೬೪% ರಸ್ಟು ಫಲಿತಾಂಶ ಬಂದಿದೆ.ಅಕ್ಕಮ್ಮ ಯರಗಲ್ ೬೦೭(೯೭%) ಅಂಕ ಪಡೆದು ಪ್ರಥಮ ಸ್ಥಾನ, ಪಲ್ಲವಿ ಸಿನ್ನೂರ ೫೯೩(೯೪%) ಅಂಕ ಪಡೆದು ದ್ವಿತೀಯ ಸ್ಥಾನ, ಕಾಳಮ್ಮ ಉಕಲಿ ೫೯೦(೯೪) ಅಂಕ ಪಡೆದು ತೃತೀಯ ಸ್ಥಾನ ಪಡೆದುಕೊಂಡು ಶಾಲೆಗೆ ಕಿರ್ತಿ ತಂದಿದ್ದಾರೆ. ಹಾಗೆ ೧೧ ವಿದ್ಯಾರ್ಥಿಗಳು ಡಿಸ್ಟಿಂಗಷನ ಪಾಸಾಗಿದ್ದರೆ, ೩೬ ವಿದ್ಯಾರ್ಥಿಗಳು ಪ್ರಥರ್ಮ ದರ್ಜೇಯಲ್ಲಿ ಪಾಸಾಗಿದ್ದಾರೆ, ೨೪ ವಿದ್ಯಾರ್ಥಿಗಳು ದ್ವಿತೀಯ ಸ್ಥಾನದಲ್ಲಿ ಪಾಸಾಗಿದ್ದಾರೆ. ಒಟ್ಟು ೧೧೭ ವಿದ್ಯಾರ್ಥಿಗಳಲ್ಲಿ ೭೫ ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದಾರೆ, ವಿದ್ಯಾರ್ಥಿಗಳ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಮಹಾಂತೇಶ ಹಾಗೂ ಆಡಳಿತ ಮಂಡಳಿ, ಸಿಬ್ಬಂದಿ ವರ್ಗ ಹರ್ಷ ವೇಕ್ತಪಡಿಸಿದ್ದಾರೆ ಎಂದು ಮುಖ್ಯ ಶಿಕ್ಷಕ ಎಂ.ಜಿ. ಉಪ್ಪಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಲೇಖನಡಾ.ಶಶಿಕಾಂತ ಪಟ್ಟಣರಾಮದುರ್ಗ ಉದಯರಶ್ಮಿ ದಿನಪತ್ರಿಕೆ ತಾಂಬೂಲ ಹಂಚುವ ಕಾಯಕವನ್ನುಹಡಪದ ರೇಚಣ್ಣ ಕೈಗೊಂಡಿದ್ದ ಈತ ಕಲ್ಯಾಣಕ್ರಾಂತಿಯ ಸಂದರ್ಭದಲ್ಲಿ ಶರಣರ ದಂಡಿನೊಂದಿಗೆ ಉಳುವಿಯ ಹೋಗಿದ್ದನೆಂದು ತಿಳಿಯುತ್ತದೆ. ಶಿವಭಕ್ತರ ಗುಣಲಕ್ಷಣ, ವ್ರತನಿಷ್ಠೆ, ಭಕ್ತರ ಗುಣ ಲಕ್ಷಣ, ಶರಣನ ಇರುವು ಅಪ್ರಾಮಾಣಿಕರ ದೂಷಣೆ, ಶರಣಸ್ತುತಿ ಅವುಗಳ ವಸ್ತು.ಮಹಾಮನೆಯಲ್ಲಿ ಪ್ರಸಾದವನ್ನು ಹಂಚುವುದು, ಪ್ರಸಾದವಾದ ಮೇಲೆ ಎಲೆ ಅಡಿಕೆ ತಾಂಬೂಲವನ್ನು ಹಂಚುವುದು ಅವನ ಕಾಯಕವಾಗಿತ್ತು.ಎನ್ನಾಧಾರಚಕ್ರಸ್ಥಾನದಲ್ಲಿ ಮೂರ್ತಿಗೊಂಡನಯ್ಯಾ ಬಸವಣ್ಣನು.ಎನ್ನ ಸ್ವಾದಿಷ್ಠಾನಚಕ್ರಸ್ಥಾನದಲ್ಲಿ ಮೂರ್ತಿಗೊಂಡನಯ್ಯಾ ಚೆನ್ನಬಸವಣ್ಣನು.ಎನ್ನ ಮಣಿಪೂರಕಚಕ್ರಸ್ಥಾನದಲ್ಲಿ ಮೂರ್ತಿಗೊಂಡನಯ್ಯಾಘಟ್ಟಿವಾಳ ಮದ್ದಯ್ಯನು.ಎನ್ನ ಅನಾಹತಚಕ್ರಸ್ಥಾನದಲ್ಲಿ ಮೂರ್ತಿಗೊಂಡನಯ್ಯಾ ಸಿದ್ಧರಾಮಯ್ಯನು.ಎನ್ನ ವಿಶುದ್ಧಿಚಕ್ರಸ್ಥಾನದಲ್ಲಿಸ ಮೂರ್ತಿಗೊಂಡನಯ್ಯಾ ಮರುಳಶಂಕರದೇವರು.ಎನ್ನ ಆಜ್ಞಾಚಕ್ರಸ್ಥಾನದಲ್ಲಿ ಮೂರ್ತಿಗೊಂಡನಯ್ಯಾ ಪ್ರಭುದೇವರು.ಆಧಾರಕ್ಕಾಚಾರಲಿಂಗವಾದಾತ ಬಸವಣ್ಣ.ಸ್ವಾಧಿಷ್ಠಾನಕ್ಕೆ ಗುರುಲಿಂಗವಾದಾತ ಚೆನ್ನಬಸವಣ್ಣ.ಮಣಿಪೂರಕಕ್ಕೆ ಶಿವಲಿಂಗವಾದಾತ ಘಟ್ಟಿವಾಳ ಮದ್ದಯ್ಯ.ಅನಾಹತಕ್ಕೆ ಜಂಗಮಲಿಂಗವಾದಾತ ಸಿದ್ಧರಾಮಯ್ಯ.ವಿಶುದ್ಧಿಗೆ ಪ್ರಸಾದಲಿಂಗವಾದಾತ ಮರುಳಶಂಕರದೇವರು.ಆಜ್ಞೆಗೆ ಮಹಾಲಿಂಗವಾದಾತ ಪ್ರಭುದೇವರು.ನಿಃಕಳಂಕ ಕೂಡಲ [ಚೆನ್ನ]ಸಂಗಮದೇವಾ,ನಿಮ್ಮ ಶರಣರ ಶ್ರೀಪಾದಕ್ಕೆ ನಮೋ ನಮೋ ಎನುತಿರ್ದೆನು.ಹಡಪದ ರೇಚಣ್ಣನ ಹೆಸರಿನ ಮುಂದೆ ಇರುವ ಹಡಪದ – ಅಡಪ -ಸಂಚಿ- ಎಲೆ ಅಡಿಕೆ ತಾಂಬೂಲ ಸಂಗ್ರಹಿಸಿ ಇಡುವ ಸಾಧನ ಕಟ್ಟಿಗೆಯ ಡಬ್ಬಿ . ಇವನೊಬ್ಬ ಅನುಭವಿ ಸಾಧಕ, ಈತನ ವಚನಾಂಕಿತವನ್ನು ಅವಲೋಕಿಸಿದಾಗ ,ಈತನು…

Read More