Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಚಡಚಣ: ಪ್ರತಿ ವರ್ಷದಂತೆ ಈ ವರ್ಷವು ಕೂಡಾ ಬಳ್ಳೊಳ್ಳಿ ಗ್ರಾಮದ ಗ್ರಾಮ ದೇವರು ಶ್ರೀ ವೀರಬದ್ರೇಶ್ವರ ದೇವರ ಜಾತ್ರಾ ಮಹೊತ್ಸವ ಆಚರಣೆ ಅದ್ಧೂರಿಯಾಗಿ ನಡೆಯಿತು, ಸೋಮವಾರ ದಿವಸ ಜಂಗಮ ವಟುಗಳಿಗೆ ಹಿರಿಯರ ವಾಡಿಕೆಯಂತೆ ಬಾಳಿಕಾಯಿ, ಚಪಾತಿ, ಹುಗ್ಗಿ ವಿಶೇಷ ಭೋಜನ ಉಣ ಬಡಿಸಿ ನಂತರ ಗ್ರಾಮದ ಭಕ್ತರು ಪ್ರಸಾದ ಸೇವಿಸಿದರು, ನಂತರ ಗೀಗೀ ಪದಗಳು ಜರುಗಿದವು, ಮಂಗಳವಾರ ಬೆಳಿಗಿನ ಜಾವದಲ್ಲಿ ಭಕ್ತಾದಿಗಳಿಂದ ಧೀರ್ಘದಂಡವತ, ಜವಳ ಸೇವೆ, ನಂತರ ವೇಷಧಾರಿ ಪುರವಂತರಿಂದ ಶಸ್ತ್ರಾಸ್ತ್ರಗಳಿಂದ ನೃತ್ಯ, ನಂದಿ ಧ್ವಜಗಳನ್ನು ಹೊತ್ತು ಭಕ್ತರ ಭವ್ಯ ಮೇರವಣಿಗೆ, ಮದ್ಯಾಹ್ನ ಸರಿಯಾಗಿ ಸುಡು ಬಿಸಿಲಿನಲ್ಲಿ ವೀರಬದ್ರೇಶ್ವರ ದೇವರ ಪೂಜಾರಿ ಮೋನಪ್ಪ ಬಡಿಗೇರ ಇವರಿಂದ ಅಗ್ನಿ ಪ್ರವೇಶ, ನಂತರ ಪಲ್ಲಕ್ಕಿ, ನಂದಿ ಧ್ವಜಗಳ ಮೆರವಣಿಗೆ ನಡೆಯಿತು. ನೂರಾರು ಭಕ್ತರು ಅಗ್ನಿ ಪ್ರವೇಶ ಮಾಡಿ ಪುನಿತರಾದರು.ಈ ಸಂದರ್ಭದಲ್ಲಿ ಮಾಜಿ ಸಚಿವ ಅಪ್ಪಾಸಾಹೇಬ ಪಟ್ಟಣಶೆಟ್ಟಿ, ಇಂಡಿ ಶಾಸಕ ಯಶವಂತರಾಗೌಡ ಪಾಟೀಲ, ಭೀಮಾಶಂಕರ ಸಕ್ಕರೆ ಕಾರ್ಖಾನೆಯ ಉಪಾಧ್ಯಕ್ಷ ಮಲ್ಲನಗೌಡ ಪಾಟೀಲ, ಝಳಕಿ…

Read More

ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಸುಶಾಂತ ಚೌಗಲೆ ಸಲಹೆ ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ವಿಶ್ವ ಗ್ರಾಹಕರ ದಿನಾಚರಣೆಯನ್ನು ರಾಷ್ಟ್ರೀಯ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿಯೂ ಆಚರಿಸಲಾಗುತ್ತದೆ ಎಂದು ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಸುಶಾಂತ ಚೌಗಲೆ ಹೇಳಿದರು.ನಗರದ ತಾಲೂಕು ಆಡಳಿತ ಸೌಧದ ಸಭಾಭವನದಲ್ಲಿ ಆಯೋಜಿಸಿದ್ದ ವಿಶ್ವ ಗ್ರಾಹಕರ ದಿನಾಚರಣೆ ಹಾಗೂ ಕಾನೂನು ಅರಿವು ನೆರವು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬ ಗ್ರಾಹಕನು ತನ್ನ ಹಕ್ಕುಗಳನ್ನು ಅರಿತುಕೊಳ್ಳುವುದು ಅತ್ಯಂತ ಮುಖ್ಯವಾಗಿದೆ ಎಂದರು. ವ್ಯಾಪಾರ-ವ್ಯವಹಾರಗಳಲ್ಲಿ ಗ್ರಾಹಕರಿಗೆ ಅನ್ಯಾಯವಾಗದಂತೆ ಕಾಯ್ದೆ-ಕಾನೂನುಗಳು ಅವರ ಹಕ್ಕುಗಳನ್ನು ರಕ್ಷಿಸುತ್ತವೆ ಎಂದು ತಿಳಿಸಿದರು.ಪ್ರತಿಯೊಬ್ಬ ಗ್ರಾಹಕರಿಗೂ ಸಮಾನ ಹಕ್ಕುಗಳಿದ್ದು, ಸರಿಯಾದ ಬೆಲೆಯಲ್ಲಿ ಗುಣಮಟ್ಟದ ವಸ್ತುಗಳು ದೊರಕಬೇಕು ಎಂಬ ಉದ್ದೇಶದಿಂದ ಸರ್ಕಾರ ಹಾಗೂ ಕಾನೂನು ಸೇವಾ ಪ್ರಾಧಿಕಾರವು ವಿವಿಧ ಮಟ್ಟಗಳಲ್ಲಿ ಜಾಗೃತಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿದೆ ಎಂದು ಹೇಳಿದರು.”ನಾವೆಲ್ಲರೂ ಗ್ರಾಹಕರೇ. ಒಂದು ಸಣ್ಣವಸ್ತು ಖರೀದಿಸಿದರೂ ನಾವು ಗ್ರಾಹಕರಾಗುತ್ತೇವೆ. ಆದ್ದರಿಂದ ಎಚ್ಚರಿಕೆಯಿಂದಿದ್ದು, ಸಂಬಂಧಿತ ಕಾಯ್ದೆಗಳ ಬಗ್ಗೆ ತಿಳಿದುಕೊಳ್ಳಬೇಕು” ಎಂದು ಅವರು ಸಲಹೆ ನೀಡಿದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ತಹಶೀಲ್ದಾರ…

Read More

ಉದಯರಶ್ಮಿ ದಿನಪತ್ರಿಕೆ ವರದಿ: ಸಿದ್ರಾಮ್ ಎಮ್ ಇಟ್ಟಿಜಮಖಂಡಿ: ಬೆಳಗಾವಿ, ವಿಜಯಪುರ ಹಾಗೂ ಬಾಗಲಕೋಟೆ ಜಿಲ್ಲೆಗಳ ರೈತರು, ಸಾರ್ವಜನಿಕರ ಪಾಲಿಗೆ ಜೀವಜಲ ಆಗಿರುವ ಹಿಪ್ಪರಗಿ ಜಲಾಶಯದಲ್ಲಿನ ನೀರು ಬಿರುಬೇಸಿಗೆಯಿಂದ ದಿನದಿಂದ ದಿನಕ್ಕೆ ಇಳಿಮುಖವಾಗುತ್ತಿದೆ.ಸದ್ಯ 2.80 ಟಿಎಂಸಿಯಷ್ಟು ನೀರು ಮಾತ್ರ ಸಂಗ್ರಹವಿದ್ದು, ಮಹಾರಾಷ್ಟ್ರದ ಕೋಯ್ನಾ ಜಲಾಶಯದಿಂದ ನೀರು ಬಿಡದಿದ್ದರೆ ಬರುವ ದಿನಗಳಲ್ಲಿ ನೀರಿಗಾಗಿ ಹಾಹಾಕಾರ ಉಂಟಾಗುವ ಭೀತಿ ಎದುರಾಗಿದೆ.ಹಿಪ್ಪರಗಿ ಜಲಾಶಯದಿಂದ ಪ್ರತಿದಿನ 0.07 ಟಿಎಂಸಿಯಷ್ಟು ನೀರು ಖಾಲಿಯಾಗುತ್ತಿದೆ. ಜನತೆಯ ಬಳಕೆ ಒಂದು ಕಾರಣವಾದರೆ, ಬಿರುಬಿಸಿಲಿನ ತಾಪಕ್ಕೆ ನೀರು ಆವಿಗೊಂಡು ಜಲಾಶಯದಲ್ಲಿನ ನೀರು ಕಡಿಮೆಯಾಗುತ್ತಿದೆ.ನೀರಿನ ಮಟ್ಟ ಕೆಲ ದಿನಗಳಲ್ಲಿ ದಿಢೀರ್‌ ಕುಸಿತ ಕಂಡ ಹಿನ್ನೆಲೆಯಲ್ಲಿ ಜನರಿಗೆ ಬೇಸಿಗೆಯ ಆತಂಕ ಶುರುವಾಗಿದೆ. ಇದೇ ರೀತಿ ಪ್ರತಿ ದಿನ ಖಾಲಿಯಾದರೆ ಮೇ ಎರಡನೇ ವಾರದಲ್ಲಿ ನೀರು ಸಂಪೂರ್ಣ ಖಾಲಿ ಯಾಗಬಹುದೆಂದು ಅಂದಾಜಿಸಲಾಗಿದೆ.ಕುಡಿಯುವ ನೀರು ಬಿಡುಗಡೆಯಾದರೆ ಕೊಂಚ ನಿರಾಳ: ಪ್ರತಿವರ್ಷ ಬೇಸಿಗೆ ಸಂದರ್ಭ ಹಿಪ್ಪರಗಿ ಜಲಾಶಯದಿಂದ ಮುಂಭಾಗಕ್ಕೆ ಅಂದಾಜು ಸುಮಾರು 0.5 ಟಿಎಂಸಿಯಷ್ಟು ನೀರನ್ನು ಜಮಖಂಡಿ ಭಾಗಕ್ಕೆ ನೀರಿನ ಸಲುವಾಗಿ…

Read More

ಝಳಕಿಯಲ್ಲಿ ರೈತರ ಆಕ್ರೋಶ | ಕೆಬಿಜೆಎನ್‌ಎಲ್ ವಿರುದ್ಧ ರೈತರ ಪ್ರತಿಭಟನೆ | ಕೆಲಕಾಲ ಉದ್ವಿಗ್ನ ಪರಿಸ್ಥಿತಿ ನಿರ್ಮಾಣ ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲೂಕಿನ ರೈತರಿಗೆ ಕೆ. ಬಿ. ಜೆ. ಎನ್. ಎಲ್ ಅಧಿಕಾರಿಗಳು ಮಲತಾಯಿ ದೋರಣೆ ಮಾಡುತ್ತಿದ್ದಾರೆ, ನಮ್ಮ ರೈತರು, ಜಾನುವಾರುಗಳಿಗೆ, ಜಮೀನುಗಳಿಗೆ ನೀರಿಲ್ಲದೆ ಗೊಳಾಡಿದರೂ ರೈತರ ಕೂಗಿಗೆ ಸ್ಪಂದನೆ ಕೊಡುತ್ತಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘದ ವಿಜಯಪುರ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಆಕ್ರೋಶ ವ್ಯಕ್ತಪಡಿಸಿದರು.ಝಳಕಿ ಹಾಗೂ ಚಡಚಣ ತಾಲೂಕಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಕೆಲವು ತಿಂಗಳಿಂದ ನೀರಿನ ಕೊರತೆ ತೀವ್ರವಾಗಿದೆ. ಕೆಬಿಜೆಎನ್‌ಎಲ್‌ ಯೋಜನೆಗಳು ಸಮಯಕ್ಕೆ ಪೂರ್ಣಗೊಳ್ಳದ ಕಾರಣ ಕಾಲುವೆಗಳಿಗೆ ನೀರು ಸರಿಯಾಗಿ ಹರಿಯುತ್ತಿಲ್ಲ. ಇದರಿಂದ ರೈತರು ಬೆಳೆದ ಬೆಳೆಗಳು ಹಾನಿಗೊಳಗಾಗುತ್ತಿವೆ. ರೈತರ ಬೇಡಿಕೆಗಳಾದ ತಕ್ಷಣ ಕಾಲುವೆಗಳಿಗೆ ನೀರು ಬಿಡುಗಡೆ ಮಾಡಬೇಕು,ಬಾಕಿ ಉಳಿದ ನೀರಾವರಿ ಯೋಜನೆಗಳನ್ನು ಶೀಘ್ರ ಪೂರ್ಣಗೊಳಿಸಬೇಕು, ಬೆಳೆ ನಷ್ಟಕ್ಕೆ ಸರ್ಕಾರದಿಂದ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದರು.ರೈತರಿಗೆ ಸರಿಯಾದ ನೀರು ಪೋರೈಕೆ ಮಾಡಬೇಕು,…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ತಾಲ್ಲೂಕಿನ ಕಡಣಿ ಗ್ರಾಮದ ಭೋಗಲಿಂಗೇಶ್ಚರ ಜಾತ್ರೆಯು ಮಾ.೨೫ರಿಂದ ೨೭ರ ವರೆಗೆ ನಡೆಯಲಿದೆ ಎಂದು ಜಾತ್ರಾ ಕಮೀಟಿ ತಿಳಿಸಿದೆ.೧೨ನೇ ಶತಮಾನದ ವಚನಕಾರ ಕೆಂಭಾವಿ ಭೋಗಣ್ಣ ಅಂತಿಮ ದಿನಗಳನ್ನು ಕಡಣಿ ಗ್ರಾಮದ ಭೀಮಾತಟದಲ್ಲಿ ಕಳೆದನೆಂದು ಹೇಳಲಾಗಿದೆ. ಅಲ್ಲಿ ವಿಶಾಲವಾದ ಭವ್ಯ ದೇಗುಲವಿದ್ದು ಪ್ರತಿವರ್ಷ ಯುಗಾದಿ ಅಮಾವಾಸ್ಯೆಯ ೭ನೇ ದಿನದಿಂದ ಉತ್ಸವ ನಡೆಯುತ್ತದೆ.ಮಾರ್ಚ ೪ರಿಂದ ಆರಂಭವಾದ ಶರಣಬಸವೇಶ್ವರ ಪುರಾಣವು ಮಹಾಮಂಗಲಗೊಳ್ಳುವದರಿಂದ ಜಾತ್ರೆಯು ನಡೆಯುತ್ತದೆ ಎಂದು ಕಮೀಟಿಯ ಸಂತೋಷ ಕ್ಷತ್ರಿ ತಿಳಿಸಿದ್ದಾರೆ.ಕುಂಭಾಭಿಷೇಕ: ಮಾರ್ಚ ೨೫ರಂದು ಬೆಳಿಗ್ಗೆ ಸಹಸ್ರಾರು ಸುಮಂಗಲೆಯರಿಂದ ಕುಂಭಾಭಿಷೇಕ ನಡೆಯಲಿದೆ, ನಂತರ ಲಿಂಗಕ್ಕೆ ಬಿಲ್ವಾರ್ಚನೆ, ಧಾರ್ಮಿಕ ಆಚರಣೆಗಳು ನಡೆಯುತ್ತವೆ.ಪಲ್ಲಕ್ಕಿ ಉತ್ಸವ೨೬ರಂದು ರಾತ್ರಿ ೮ಕ್ಕೆ ಭೋಗೇಶ್ವರ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಇರಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆ ನಡೆಯುತ್ತದೆ, ವಿವಿಧ ಜಾನಪದ ಕಲಾ ತಂಡಗಳು ಪಾಲ್ಗೊಳ್ಳಲಿದ್ದು, ಪುರವಂತರು ಧಾರ್ಮಿಕ ಕೈಂಕರ್ಯದಲ್ಲಿ ಸೇವೆ ಸಲ್ಲಿಸುವರು. ಸುತ್ತಲಿನ ಹಳ್ಳಿಗಳ ಜನರು ಭಾಗವಹಿಸುವರು.ರಥೋತ್ಸವಮಾರ್ಚ್ ೨೭ರಂದು ಸಂಜೆ ರಥೋತ್ಸವ ಜರುಗಲಿದ್ದು, ಅಂದು ಮಧ್ಯಾಹ್ನ ಸಾಮೂಹಿಕ ವಿವಾಹ ಹಾಗೂ ಧಾರ್ಮಿಕ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಶ್ರೀ ದೇವರ ದಾಸಿಮಯ್ಯ ನವರ ಜಯಂತಿಯನ್ನು ಸಮಾಜದ ಮುಂಖಡರೊಂದಿಗೆ ಆಚರಿಸಲಾಯಿತು.ಈ ಸಂದರ್ಭದಲ್ಲಿ ಶಿರಸ್ತೇದಾರ್ ಕೃಷ್ಣಾ ಎಂ ಗುಡೂರ, ಸಂಗಪ್ಪ ಮ ಚೌಡಪ್ಪನವರ, ಸಂಗಪ್ಪ ಬಳೂರಗಿ, ಬಸವರಾಜ ಚೌಡಪ್ಪನವರ, ರಾಜು ಮೇಲಗಿರಿ ವಿಜಯಕುಮಾರ ನೀಲವಾಣಿ, ಪ್ರಕಾಶ ಕಲ್ಯಾಣಿ, ಶಿವು ಚೌಡಪ್ಪನವರ ಹಾಗೂ ಕಾರ್ಯಾಲಯದ ಸಿಬ್ಬಂದಿಯವರು ಹಾಜರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಜೀವನವೆಂದರೆ ಡೊನೇಷನ್ ಇಲ್ಲದ ಪಾಠಶಾಲೆ ಅದರಲ್ಲಿ ಪ್ರತಿಯೊಬ್ಬರೂ ಕಲಿಯಲೇಬೇಕು. ನಿಸರ್ಗವೇ ನಮಗೆ ಎಲ್ಲವನ್ನೂ ಕಲಿಸುವ ಮಹಾಗುರು ಎಂದು ಕೊಪ್ಪಳ ಸಂಸ್ಥಾನ ಶ್ರೀ ಗವಿಮಠದ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಹೇಳಿದರು.ತಾಲೂಕಿನ ರೋಣಿಹಾಳ ಗ್ರಾಮದಲ್ಲಿ ಎಡೆಯೂರು ಸಿದ್ಧಲಿಂಗೇಶ್ವರ ಪೂರ್ವ ಹಾಗೂ ಹಿರಿಯ ಪ್ರಾಥಮಿಕ ಪ್ರೌಢಶಾಲೆಯ ನೂತನ ಕಟ್ಟಡವನ್ನು ಉದ್ಘಾಟಿಸಿ ಅವರು ಮಾತನಾಡಿದರು.ನಿಸರ್ಗವೇ ಒಂದು ಮಹತ್ವದ ಪಾಠಶಾಲೆ. ಅದು ಪ್ರತಿಯೊಂದು ವಿಷಯವನ್ನು ಮನುಷ್ಯನಿಗೆ ಕಲಿಸುತ್ತದೆ. ಆದರೆ ಕಲಿಯುವ ಮನಸ್ಸುಗಳು ನಮ್ಮೊಳಗೆ ಇರಬೇಕು. ಅಂತಹ ಮನಸ್ಸುಗಳಿದ್ದರೆ ನಿಸರ್ಗವೇ ಗುರು, ನಾವು ಶಿಷ್ಯರು. ಭೂಮಿಯಲ್ಲಿ ಬಿತ್ತಿದ ಬೀಜದಂತೆ ಮಕ್ಕಳ ಹೃದಯದಲ್ಲಿ ಬಿತ್ತಿದ ಅಕ್ಷರ ಯಾವತ್ತೂ ವ್ಯರ್ಥವಾಗುವುದಿಲ್ಲ. ಶಿಕ್ಷಣದ ಈ ಮಹತ್ವವನ್ನು ನಮ್ಮ ಹಿಂದಿನ ಹಿರಿಯರು ಚೆನ್ನಾಗಿ ಅರಿತಿದ್ದರು ಎಂದು ಹೇಳಿದರು.ಸಣ್ಣ ಗ್ರಾಮದಲ್ಲೇ ಇಂತಹ ಸುಸಜ್ಜಿತ ಶಾಲೆಯನ್ನು ನಿರ್ಮಿಸಿ ಶಿಕ್ಷಣ ಸಂಸ್ಥೆಯನ್ನು ಬೆಳೆಸುವುದು ಸುಲಭವಲ್ಲ. ಈ ಊರಿನ ಹಿರಿಯರು ಉತ್ತಮ ವಾತಾವರಣದಲ್ಲಿ ಶಾಲೆ ಕಟ್ಟಿಸಿ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಕಾರ್ಯ ಮಾಡಿದ್ದಾರೆ ಎಂದು ಪ್ರಶಂಸಿಸಿದರು.ಕಾಖಂಡಕಿ ಗ್ರಾಮದ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಆಧ್ಯಾತ್ಮ ಮತ್ತು ಪುರಾಣಗಳ ಮಹತ್ವವನ್ನು ಅರಿತುಕೊಂಡು ಜೀವನದಲ್ಲಿ ಅಳವಡಿಸಿಕೊಳ್ಳಬೇಕು.ಸಂಸ್ಕಾರಯುತ ಸಮಾಜ ನಿರ್ಮಾಣಕ್ಕೆ ಆಧ್ಯಾತ್ಮ ಮತ್ತು ಪುರಾಣಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ ಎಂದು ನಿವೃತ್ತ ಶಿಕ್ಷಕರಾದ ಬಸವರಾಜ ಹಂಗರಗಿ ಹೇಳಿದರು.ಪಟ್ಟಣದ ದಿಗಂಬರೇಶ್ವರ ಸಂಸ್ಥಾನ ಮಠದಲ್ಲಿ ದಿಗಂಬರೇಶ್ವರ ಜಾತ್ರಾ ಮಹೋತ್ಸವದ ನಿಮಿತ್ಯ ಹಮ್ಮಿಕೊಂಡ ಮೂರು ಲೋಕದ ಗಂಡ ಬಬಲಾದಿ ಸದಾಶಿವ ಸ್ವಾಮೀಜಿಗಳ ಪುರಾಣ ಪ್ರಾರಂಭೋತ್ಸವ ಮತ್ತು ಯುಗಾದಿಯ ಹೊಸ ವರ್ಷಾಚರಣೆ ಹಾಗೂ ಬೇವು ಬೆಲ್ಲ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಆಧ್ಯಾತ್ಮವು ಮನಸ್ಸಿಗೆ ಶಾಂತಿ ನೀಡುವುದಲ್ಲದೆ, ಮಾನವ ಜೀವನವನ್ನು ಪಾವನಗೊಳಿಸುತ್ತದೆ ಎಂದು ಹೇಳಿದರು.ಪುರಾಣಗಳು ಕಥೆಗಳ ಮೂಲಕ ಧರ್ಮ, ಸತ್ಯ ಮತ್ತು ನೀತಿ ಮೌಲ್ಯಗಳನ್ನು ಬೋಧಿಸುತ್ತವೆ. ಇಂದಿನ ಯುವಜನತೆ ಮತ್ತು ಮಕ್ಕಳಲ್ಲಿ ಸಂಸ್ಕಾರ ಬೆಳೆಸಲು ಪುರಾಣ ಪ್ರವಚನಗಳು ಮತ್ತು ಸತ್ಸಂಗಗಳು ಅಗತ್ಯ.“ಇಂದಿನ ಯುಗದಲ್ಲಿ ಮಕ್ಕಳಲ್ಲಿ ಪಾಲಕರ ಮಾತು ಕೇಳುವ ಸಂಸ್ಕೃತಿ ನಿಧಾನವಾಗಿ ಕುಗ್ಗುತ್ತಿದೆ. ಸಂಸ್ಕಾರಯುತ ಶಿಕ್ಷಣ, ಸತ್ಸಂಗ ಹಾಗೂ ಧಾರ್ಮಿಕ ಚಟುವಟಿಕೆಗಳ ಮೂಲಕ ಮಕ್ಕಳಲ್ಲಿ ಹಿರಿಯರಿಗೆ ಗೌರವ ಮತ್ತು ಪಾಲಕರ ಮಾತು…

Read More

ಪಶುವೈದ್ಯೆ ಡಾ.ಸಮೀಕ್ಷಾ ರೆಡ್ಡಿ ನಿಧನಕ್ಕೆ ಕರ್ನಾಟಕ ಪಶು ವೈದ್ಯಕೀಯ ಸಂಘದ ರಾಜ್ಯಾಧ್ಯಕ್ಷ ಡಾ.ಶಿವಶರಣಪ್ಪ ಜಿ.ಯಲಗೋಡ, ಪ್ರಧಾನ ಕಾರ್ಯದರ್ಶಿ ಡಾ.ರಾಮಚಂದ್ರಯ್ಯ ಎಂ ಸಂತಾಪ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶಿವಮೊಗ್ಗದ ಮೃಗಾಲಯದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಶುವೈದ್ಯೆ ಡಾ.ಸಮೀಕ್ಷಾ ರೆಡ್ಡಿಯವರು, ನೀರಾನೆಗೆ ಚಿಕಿತ್ಸೆ ನೀಡುವ ಸಂದರ್ಭದಲ್ಲಿ ದಾಳಿಗೊಳಗಾಗಿ ಇತ್ತೀಚೆಗೆ ಮೃತರಾಗಿದ್ದು, ಅವರ ನಿಧನವು ಪಶುವೈದ್ಯಕೀಯ ವೃತ್ತಿಗೆ ತುಂಬಲಾರದ ನಷ್ಟವನ್ನುಂಟು ಮಾಡಿದೆ ಎಂದು ಕರ್ನಾಟಕ ಪಶು ವೈದ್ಯಕೀಯ ಸಂಘ ರಾಜ್ಯಾಧ್ಯಕ್ಷ ಡಾ.ಶಿವಶರಣಪ್ಪ ಜಿ.ಯಲಗೋಡ ಮತ್ತು ಪ್ರಧಾನ ಕಾರ್ಯದರ್ಶಿ ಡಾ.ರಾಮಚಂದ್ರಯ್ಯ ಎಂ ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು ಸೋಮವಾರ ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು, ಡಾ.ಸಮೀಕ್ಷಾ ರೆಡ್ಡಿ ನಿಧನಕ್ಕೆ ಕರ್ನಾಟಕ ಪಶು ವೈದ್ಯಕೀಯ ಸಂಘವು ತೀವ್ರ ಸಂತಾಪ ವ್ಯಕ್ತಪಡಿಸುತ್ತದೆ ಎಂದಿದ್ದಾರೆ.ವನ್ಯಜೀವಿ ಪಶುವೈದ್ಯಕೀಯ ಸೇವೆಯನ್ನು ಉತ್ಸಾಹದಿಂದಲೇ ಆಯ್ಕೆ ಮಾಡಿಕೊಂಡು ನಿಷ್ಠೆಯಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಡಾ.ಸಮೀಕ್ಷಾ ರೆಡ್ಡಿಯವರು ಕರ್ತವ್ಯಕ್ಕೆ ಹಾಜರಾದ ಕೇವಲ 1 ¾ ತಿಂಗಳಲ್ಲೇ ನಿರಾನೆ ದಾಳಿಗೆ ತುತ್ತಾಗಿರುವುದು ದುರದೃಷ್ಟಕರ.ಡಾ.ಸಮೀಕ್ಷಾ ರೆಡ್ಡಿಯವರ ಸಾವಿನ ಕುರಿತಾಗಿ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: 2025-26ನೇ ಸಾಲಿನ ಕಬ್ಬಿನ ಬಾಕಿ ಬಿಲ್ಲುಗಳನ್ನು ಇನ್ನೂ ಬಿಡುಗಡೆ ಮಾಡದ ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಬಾಗಲಕೋಟೆ, ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆಗಳ ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ಜಿಲ್ಲಾ ರೈತ ಮುಖಂಡ ಈರಪ್ಪ ಹಂಚಿನಾಳ ತೀವ್ರ ಆಕ್ರೋಶ ವ್ಯಕ್ತಪಡಿಸಿ ಹೋರಾಟದ ಎಚ್ಚರಿಕೆ ನೀಡಿದರು.ನಗರದ ಎಸ್.ಆರ್. ಕ್ಲಬ್‌ನಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರು ವರ್ಷ ಪೂರ್ತಿ ಶ್ರಮಪಟ್ಟು ಬೆಳೆದ ಕಬ್ಬಿನ ಹಣವನ್ನು ಬಿಡುಗಡೆಗೆ ತಡಮಾಡುವುದು ಅನ್ಯಾಯವಾಗಿದ್ದು, ತಕ್ಷಣ ಬಾಕಿ ಬಿಲ್ಲುಗಳನ್ನು ಬಿಡುಗಡೆ ಮಾಡಬೇಕು.ಇಲ್ಲವಾದರೆ ರಾಜ್ಯ ಮಟ್ಟದ ಹೋರಾಟವನ್ನು ಪ್ರಾರಂಭಿಸಲಾಗುವುದು ಎಂದು ಕಠಿಣ ಎಚ್ಚರಿಕೆ ನೀಡಿದರು.ಮಾರ್ಚ್ 30 ರಂದು ಬೆಳಗ್ಗೆ 11 ಗಂಟೆಗೆ ಜಮಖಂಡಿ ತಾಲೂಕಿನ ದೇಸಾಯಿ ವೃತ್ತದಲ್ಲಿ ಸಾವಿರಾರು ಕಬ್ಬು ಬೆಳೆಗಾರರು ಸೇರಿ ಮಹಾ ಪ್ರತಿಭಟನೆ ನಡೆಸಲಿದ್ದಾರೆ. ಈ ಪ್ರತಿಭಟನೆಯಲ್ಲಿ ಭಾಗವಹಿಸಲು ಬಾಗಲಕೋಟೆ ಜಿಲ್ಲೆಯ ವಿವಿಧ ತಾಲೂಕುಗಳಿಂದ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವಂತೆ ಕರೆ ನೀಡಲಾಗಿದೆ. ಹೋರಾಟದ ಮುಂದಿನ ಹಂತದ ರೂಪ ರೇಷೆಯನ್ನು ಅದೇ ದಿನ ನಿರ್ಧರಿಸಲಾಗುವುದು…

Read More