Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಪ್ರಕರಣ ಎನ್ಐಎ ತನಿಖೆಗೆ ವಹಿಸಲು ವಿಪಕ್ಷ ನಾಯಕ ಆರ್.ಅಶೋಕ ಆಗ್ರಹ ಬೆಂಗಳೂರು: ಕೋಗಿಲು ಕ್ರಾಸ್ನ ಫಕೀರ್ ಬಡಾವಣೆ ಕ್ರಮೇಣ ಸ್ಲೀಪರ್ ಸೆಲ್ಗಳ ಕೇಂದ್ರವಾಗುವ ಅಪಾಯವಿದೆ. ಆದ್ದರಿಂದ ಅಕ್ರಮ ನಿವಾಸಿಗಳ ಪೌರತ್ವವನ್ನು ಸರ್ಕಾರ ಪರಿಶೀಲಿಸಬೇಕು. ಹೀಗಾಗಿ ಇದನ್ನು ಎನ್ಐಎ ತನಿಖೆಗೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ.ಕೋಗಿಲು ಕ್ರಾಸ್ನಲ್ಲಿ ಒತ್ತುವರಿ ತೆರವು ಮಾಡಿದ ವಿವಾದಿತ ಸ್ಥಳಕ್ಕೆ ಪ್ರತಿಪಕ್ಷ ನಾಯಕ ಆರ್.ಅಶೋಕ ಅವರು ಇಂದು ಬಿಜೆಪಿ ಮುಖಂಡರೊಂದಿಗೆ ಭೇಟಿ ನೀಡಿದರು. ಸ್ಥಳದಲ್ಲೇ ಇದ್ದ ನಿವಾಸಿಗಳ ಜೊತೆ ಮಾತನಾಡಿದ ಅವರು, ಗುರುತಿನ ಚೀಟಿ ಹಾಗೂ ಇತರೆ ದಾಖಲೆಗಳನ್ನು ಕೇಳಿ ಪರಿಶೀಲಿಸಿದರು.ಭೇಟಿ ವೇಳೆ ಸ್ಥಳೀಯ ಮಹಿಳೆಯೊಂದಿಗೆ ಮಾತುಕತೆ ನಡೆಸಿದ ಅವರು, ಇಲ್ಲಿ ಎಷ್ಟು ವರ್ಷಗಳಿಂದ ವಾಸಿಸುತ್ತಿದ್ದೀರಿ, ಕರೆತಂದವರು ಯಾರು, ನಿವೇಶನ ಮಂಜೂರು ಮಾಡಲಾಗಿದೆಯೇ ಎಂಬಿತ್ಯಾದಿ ಪ್ರಶ್ನೆಗಳನ್ನು ಕೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಮಹಿಳೆ, ಕಳೆದ 25 ವರ್ಷಗಳಿಂದ ಇಲ್ಲಿ ವಾಸವಿದ್ದೇವೆ ಎಂದು ತಿಳಿಸಿದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಪ್ರತಿಪಕ್ಷ ನಾಯಕ ಆರ್.ಅಶೋಕ, ಗೂಗಲ್ ನಕ್ಷೆಯಲ್ಲಿ 1 ವರ್ಷದ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಯಾಳವಾರದ ಚಿತ್ರಕಲಾ ಶಿಕ್ಷಕ, ಸಾಹಿತಿ ಗುಂಡಪ್ಪ ರಾ ಕುಂಬಾರ ಇವರಿಗೆ ರಂಗಮಿತ್ರ ನಾಟ್ಯ ಸಂಘ ( ರೀ ) ಕಲಬುರಗಿ, ಹಾಗೂ ಕರ್ನಾಟಕ ನಾಟಕ ಬರಹಗಾರರ (ಕವಿಗಳ) ಸಂಘ ಬೆಂಗಳೂರು ಅವರು “ಕನ್ನಡ ಕವಿರತ್ನ” ರಾಜ್ಯ ಪ್ರಶಸ್ತಿಗೆ ಆಯ್ಕೆಮಾಡಿ ಗೌರವಿಸಿದೆ.ಗುಂಡಪ್ಪ ಇವರು ರಂಗಭೂಮಿಗೆ ಸಲ್ಲಿಸಿದ ಸೇವೆಯನ್ನು ಗುರುತಿಸಿ ರಂಗಮಿತ್ರ ನಾಟ್ಯ ಸಂಘ ( ರೀ ) ಕಲಬುರಗಿ, ಹಾಗೂ ಕರ್ನಾಟಕ ನಾಟಕ ಬರಹಗಾರರ (ಕವಿಗಳ) ಸಂಘ ಬೆಂಗಳೂರು ಅವರು ದಿನಾಂಕ 4 -1-2025 ರಂದು ಡಾ ಎಸ್ ಎಂ ಪಂಡಿತ್ ರಂಗಮಂದಿರ ಕಲಬುರ್ಗಿಯಲ್ಲಿ ನಡೆಯುವ ಕವಿಸಂಗಮ ಕಾರ್ಯಕ್ರಮದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ರಾಜ್ಯಾಧ್ಯಕ್ಷ ಶಂಕರ್ಜಿ ಹೂವಿನ ಹಿಪ್ಪರಗಿ ಅವರು ತಿಳಿಸಿದ್ದಾರೆ.ಅವರ ಕಲೆ, ಸಾಹಿತ್ಯ ಕೃಷಿ, ನಾಟಕ ಅಭಿನಯ ಸೇರಿದಂತೆ, ಹಲವಾರು ಪ್ರಶಸ್ತಿಗಳು ಅವರ ಮುಡಿಗೇರಿವೆ, ಇವರ ಸರಳ ಸ್ವಭಾವ ಹಾಗೂ ಉತ್ತಮ ವ್ಯಕ್ತಿತ್ವಕ್ಕೆ ಸಂದ ಗೌರವವಾಗಿದೆ,.
ಲೇಖನ- ಶಿಲ್ಪಾ ಮೃತ್ಯುಂಜಯ ಮಿಣಜಿಗಿಶಿಕ್ಷಕರುಕೆ.ಇ.ಬೋರ್ಡ್ ಸೆಂಟ್ರಲ್ ಸ್ಕೂಲ್ಧಾರವಾಡ ಉದಯರಶ್ಮಿ ದಿನಪತ್ರಿಕೆ ಏಕೆಂದರೆ ಪತ್ರಿಕಾ ರಂಗದಲ್ಲಿ ಪ್ರಸಿದ್ದಿ ಹೊಂದುವುದೆಂದರೆ ಮುದ್ರಣವಾಗುವ ಪ್ರತಿಯೊಂದು ಅಕ್ಷರಗಳು ಓದುಗರ ಮನಸ್ಸೆಂಬ ಸ್ಪರ್ಧೆಯಲ್ಲಿ ವಿಜಯಶಾಲಿಯಾದಾಗ ಮಾತ್ರ ಅಭಿವೃದ್ಧಿಯ ಹಂತವನ್ನು ತಲುಪಲು ಸಾಧ್ಯ. “ಛಲವಿಲ್ಲದವರನೊಲ್ಲ ನಮ್ಮ ಕೂಡಲಸಂಗಮದೇವ” ಎಂಬ ಶರಣರ ವಾಣಿಯಂತೆ ಇಂದುಶೇಖರ ಅವರು ತಮ್ಮ ಸಂಪಾದಕತ್ವದ “ಉದಯರಶ್ಮಿ” ಕನ್ನಡ ದಿನಪತ್ರಿಕೆಯಲ್ಲಿ ಯುವ ಸಾಹಿತಿಗಳು, ಮತ್ತು ಬರಹಗಾರರಿಗೆ, ಪ್ರೋತ್ಸಾಹ ನೀಡುತ್ತ ಅವರ ಲೇಖನಕ್ಕೆ ತಮ್ಮ ಪತ್ರಿಕೆ ಮೂಲಕ ಒಂದು ವೇದಿಕೆಯನ್ನು ಸಿದ್ಧಪಡಿಸುತ್ತಾರೆ. ಯಾವುದೇ ಫಲಾಪೇಕ್ಷೆ ಬಯಸದೆ ಎಲೆಮರೆಯ ಕಾಯಿಯಂತಿರುವ ನನ್ನಂತಹ ಅನೇಕ ಯುವ ಬರಹಗಾರರಿಗೆ ಅವಕಾಶ ಕಲ್ಪಿಸಿಕೊಡುವ ಮೂಲಕ ನಮ್ಮ ಸಾಹಿತ್ಯ ಕೃಷಿಗೆ ನೀರೆರೆದು ಪೋಷಿಸುತ್ತಾರೆ. ಇವರ ಪತ್ರಿಕೆಯನ್ನು ಗಮನಿಸಿದಾಗ ನನಗೆ ಅನುಭವವಾದ ಮಾತು ಇದು. ಗದುಗಿನ ಲಿಂ. ಡಾ.ಸಿದ್ದಲಿಂಗ ಮಹಾಸ್ವಾಮಿಗಳ ಅಪ್ಪಟ ಪ್ರೀತಿಯ ಖಾಸ ಭಕ್ತರೆಂದು ಇಂದುಶೇಖರ ಅವರು ಬಹಳ ಪ್ರೀತಿಯಿಂದ, ಹೆಮ್ಮೆಯಿಂದ ನುಡಿಯುತ್ತಾರೆ. ಅನೇಕ ಬಾರಿ ಶ್ರೀಗಳ ದರ್ಶನಕ್ಕೆ ಗದುಗಿಗೆ ತೆರಳಿ ಅವರ ಶಿಷ್ಯಪ್ರೀತಿಯ ಆತಿಥ್ಯ ಸವಿದಿದ್ದಾರೆ.ಗದುಗಿನ…
ಲೇಖನ- ಬಿ.ವಿ.ಹಿರೇಮಠಶಿಕ್ಷಕರು, ಸಿಂದಗಿವಿಜಯಪುರ ಜಿಲ್ಲೆಮೊ: 9972658355 ಉದಯರಶ್ಮಿ ದಿನಪತ್ರಿಕೆ ಕಾಲಚಕ್ರ ಉರುಳಿದಂತೆ ಹಳೆಯ ವರ್ಷದ ನೆನಪುಗಳನ್ನು ಬೆನ್ನಿಗಿಟ್ಟು, ಹೊಸ ನಿರೀಕ್ಷೆಗಳೊಂದಿಗೆ ನಾವು ಹೊಸ ವರ್ಷವನ್ನು ಬರಮಾಡಿಕೊಳ್ಳುತ್ತೇವೆ. ಪ್ರತಿ ಹೊಸ ವರ್ಷವು ನಮಗೆ ಹೊಸ ಶಕ್ತಿ, ಹೊಸ ಚೈತನ್ಯ ಮತ್ತು ಮುಖ್ಯವಾಗಿ ಹೊಸ ಭರವಸೆಗಳನ್ನು ಹೊತ್ತು ತರುತ್ತದೆ. ಕಳೆದ ಸಾಲಿನಲ್ಲಿ ಅನುಭವಿಸಿದ ಸೋಲು, ಕಹಿ ಘಟನೆಗಳು ಮತ್ತು ನಿರಾಸೆಗಳನ್ನು ಮರೆತು, ಧನಾತ್ಮಕ ಚಿಂತನೆಯೊಂದಿಗೆ ಮುನ್ನಡೆಯುವುದೇ ಈ ಸಂಕ್ರಮಣ ಕಾಲದ ವಿಶೇಷತೆ.ಹಳೆಯದನ್ನು ಕಳೆದು ಹೊಸದನ್ನು ಅಪ್ಪಿಕೊಳ್ಳಿಹೊಸ ವರ್ಷದ ಆರಂಭವೆಂದರೆ ನಮ್ಮನ್ನು ನಾವು ವಿಮರ್ಶಿಸಿಕೊಳ್ಳುವ ಸಮಯ. ಕಳೆದ ವರ್ಷದಲ್ಲಿ ನಾವು ಮಾಡಿದ ತಪ್ಪುಗಳು ನಮಗೆ ಪಾಠವಾಗಲಿ. ಆ ತಪ್ಪುಗಳನ್ನು ತಿದ್ದಿಕೊಂಡು, ಹೊಸ ಉತ್ಸಾಹದಿಂದ ಕೆಲಸ ಮಾಡಲು ಈ ಸಮಯ ಪ್ರಶಸ್ತವಾಗಿದೆ. “ಹೋದುದಕ್ಕೆ ಹಲುಬಬೇಡ” ಎಂಬ ಮಾತಿನಂತೆ, ಗತಕಾಲದ ನೋವುಗಳನ್ನು ಮರೆತು ಭವಿಷ್ಯದ ಕನಸುಗಳಿಗೆ ನೀರೆರೆಯಬೇಕು. ಗುರಿಗಳ ನಿರ್ಧಾರ ಮತ್ತು ಸಂಕಲ್ಪ (Resolutions)ಹೊಸ ವರ್ಷಕ್ಕೆ ಭರವಸೆ ಮೂಡಲು ಒಂದು ಸ್ಪಷ್ಟವಾದ ಗುರಿ ಇರಬೇಕು.ಆರೋಗ್ಯ: ದೈಹಿಕ ಮತ್ತು ಮಾನಸಿಕ…
ಲೇಖನ- ಜಯಶ್ರೀ.ಜೆ.ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಕಿಟಕಿಯಿಂದ ತೂರಿದ ಹೊಸ ಮುಂಜಾವಿನ ಕಿರಣಗಳು ನಮ್ಮನ್ನು ಹೊಸ ದಿನಕ್ಕೆ ಸ್ವಾಗತಿಸುತ್ತವೆ. ಆದರೆ ನಮಗೆಲ್ಲಿಯ ನವೋತ್ಸಾಹ? ಅಯ್ಯೋ! ಆಗಲೇ ಸೂರ್ಯ ಮತ್ತೆ ಬಂದನೇ? ಇವನು ತಾನು ನಿದ್ದೆ ಮಾಡುವುದಿಲ್ಲ. ನಮಗೂ ನಿದ್ದೆ ಮಾಡಲು ಬಿಡುವುದಿಲ್ಲ ಎಂದು ಲೊಚಗುಡುವುದರಿಂದಲೇ ದಿನಾರಂಭ. ನಾಳೆ ಬೇಗ ಏಳಬೇಕೆಂದು ಇಟ್ಟ ಅಲಾರಾಂ ಸದ್ದು ಮಾಡಿದಾಗ ಅದರ ತಲೆಗೊಂದು ಹೊಡೆದು ಮತ್ತೆ ಮುಸುಕೆಳೆದು ಮಲಗುವುದು ಸಾಮಾನ್ಯ. ಮನೆಯಲ್ಲಿನ ಹಿರಿಯರು ಹೊದ್ದ ರಗ್ಗು ಜಗ್ಗಿದಾಗ ವಟವಟ ಅನ್ನುತ್ತ ಒಲ್ಲದ ಮನಸ್ಸಿನಿಂದ ಹಾಸಿಗೆಯಿಂದ ಹೊರಬೀಳುವುದು ರೂಢಿ. ಹೀಗಿರುವಾಗ ಗೆಲುವು ಸಿಗುವುದಾದರೂ ಹೇಗೆ ಹೇಳಿ? ಸಣ್ಣ ಮಕ್ಕಳಿಂದ ಹಿಡಿದು ವಯಸ್ಸಾದವರ ಬಾಯಲ್ಲಿ ಅಯ್ಯೋ ಬೇಜಾರು ಎನ್ನುವ ಪದಗಳನ್ನು ಕೇಳುತ್ತಲೇ ಇರುತ್ತೇವೆ. ಉದ್ಯೋಗ ಕ್ಷೇತ್ರ ಯಾವುದೇ ಇರಲಿ ವಯಸ್ಸು ಎಷ್ಟೇ ಇರಲಿ ಗಂಡಿರಲಿ ಹೆಣ್ಣಿರಲಿ ಅದು ಯಾವುದೂ ಲೆಕ್ಕಕ್ಕೆ ಬರುವುದಿಲ್ಲ. ಅಂದರೆ ಬೇಜಾರು ಅನ್ನುವುದು ತುಂಬಾ ಸಹಜ. ಎಲ್ಲರದರಲ್ಲೂ ಬೇಜಾರು!ಬೆಳಿಗ್ಗೆ ಬೇಗ ಎದ್ದು ಮಾಡಲು ಸಾಕಷ್ಟು…
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇನ್ನೂ 7.5 ವರ್ಷ ಅಧಿಕಾರದಲ್ಲಿರುತ್ತದೆ | ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ವಿಶ್ವಾಸ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ 2026 ರಲ್ಲಿ ಮಾತನಾಡುವುದಾಗಿ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಮಂಗಳವಾರ ಹೇಳಿದ್ದು, ಮುಂದಿನ ವಿಧಾನಸಭಾ ಚುನಾವಣೆಯಲ್ಲೂ ಕಾಂಗ್ರೆಸ್ ಗೆಲ್ಲುತ್ತದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಇನ್ನೂ 7.5 ವರ್ಷ ಅಧಿಕಾರದಲ್ಲಿರುತ್ತದೆ ಎಂದು ಪ್ರತಿಪಾದಿಸಿದ ಡಿಸಿಎಂ, ತಮ್ಮ ಹೊಸ ವರ್ಷದ ಸಂಕಲ್ಪದ ಕುರಿತಾದ ಪ್ರಶ್ನೆಗೆ ಪ್ರತಿಕ್ರಿಯಿಸುತ್ತಾ, “ನಿಮ್ಮೆಲ್ಲರನ್ನೂ ಸಂತೋಷವಾಗಿಡುವುದೇ ನಮ್ಮ ಸಂಕಲ್ಪ. ರಾಜ್ಯದ ಜನರನ್ನು ಸಂತೋಷವಾಗಿಡುವುದು. ಹೊಸ ಚಿಂತನೆಯೊಂದಿಗೆ ರಾಜ್ಯಕ್ಕೆ ಸಮೃದ್ಧ ಆಡಳಿತ ನೀಡುವುದು. ಈ ವರ್ಷ ಉತ್ತಮ ಮಳೆ ಮತ್ತು ಫಸಲು ಬರಲಿ ಎಂದು ಬಯಸುತ್ತೇವೆ” ಎಂದರು.”ಎಲ್ಲಾ ನದಿಗಳು ಮತ್ತು ಕೆರೆಗಳಿಗೆ ಹೇರಳವಾದ ನೀರು ಸಿಗಲಿ. ರೈತರು ಹೊಸ ವರ್ಷದಲ್ಲಿ ಸಂತೋಷವಾಗಿರಲಿ ಎಂದು ನಾವು ಬಯಸುತ್ತೇವೆ” ಎಂದು ಡಿಕೆಶಿ ಹೇಳಿದರು.2026 ರಲ್ಲಿ ರಾಜ್ಯದ ಆಡಳಿತ ನಿಮ್ಮ ನೇತೃತ್ವದಲ್ಲಿ ನಡೆಯುತ್ತದೆಯೇ ಎಂದು…
ಉದಯರಶ್ಮಿ ದಿನಪತ್ರಿಕೆ ಇಂಡಿ: ಕೆಲವರು ಬಡತನಕ್ಕಾಗಿ ಮನೆಯಲ್ಲಿ ದೊಡ್ಡವರ ಜೊತೆ ಚಿಕ್ಕವರ ಮದುವೆ ಮಾಡುತ್ತಿದ್ದರು. ಮತ್ತು ಮನೆಯಲ್ಲಿರುವ ಸಂಬಂಧಿಗಳ ಜೊತೆ ಚಿಕ್ಕವಯಸ್ಸಿನಲ್ಲಿಯೇ ಮದುವೆ ಮಾಡುವದು ಬೇಡ, ಬಾಲ್ಯ ವಿವಾಹ ಸಮಾಜಕ್ಕೆ ಒಂದು ಪಿಡುಗು ಎಂದು ಶಾಸಕ ಯಶವಂತರಾಯಗೌಡ ಪಾಟೀಲರು ಹೇಳಿದರು.ನಗರದ ಶ್ರೀ ಶಾಂತೇಶ್ವರ ಪದವಿಪೂರ್ವ ಮಹಾವಿದ್ಯಾಲಯದಲ್ಲಿ ಭಾರತ ಸರಕಾರದ ಕೇಂದ್ರ ಸಂವಹನ ಇಲಾಖೆ ವಿಜಯಪುರ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಶ್ರೀ ಶಾಂತೇಶ್ವರ ಪದವಿ ಪುರ್ವ ಮಹಾವಿದ್ಯಾಲಯ ಇವರ ಸಹಯೋಗದಲ್ಲಿ ಬಾಲ ವಿವಾಹ ಮುಕ್ತ ಭಾರತ ಅಭಿಯಾನ ಮತ್ತು ವಂದೇ ಮಾತರಂ ೧೫೦ ನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಬಾಲ್ಯ ವಿವಾಹ ತಡೆಗೆ ಗ್ರಾಮೀಣ ಮಟ್ಟದಲ್ಲಿ ೧೨ ಜನ ಮತ್ತು ನಗರ ಮಟ್ಟದಲ್ಲಿ ೯ ಜನ ಅಧಿಕಾರಿ ಇದ್ದಾರೆ. ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಸಾರ್ವಜನಿಕರ ಸಹಕಾರ ಅಗತ್ಯ ಎಂದರು.ವಂದೇ ಮಾತರಂ ಸಂದೇಶ ಸಾರಾಂಶ ಈಗಿನ ಪೀಳಿಗೆಗೆ ತಿಳಿಸುವ ಅವಶ್ಯಕತೆ ಇದೆ, ಹಾಡು ಬಂಕಿಮ ಚಂದ್ರ ಬರೆದಿದ್ದು ತ್ಯಾಗ ಬಲಿದಾನದ ಸಂಕೇತ ಎಂದರು.ಮಹಿಳಾ…
ಇಟಗಿಯಲ್ಲಿ ಮಕ್ಕಳ ಪ್ರತಿಭಾ ಪುರಸ್ಕಾರ ಹಾಗೂ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಸಮಾರಂಭ ಉದಯರಶ್ಮಿ ದಿನಪತ್ರಿಕೆ ನಿಡಗುಂದಿ: ಸಮಾಜವನ್ನು ನಿರ್ಮಾಣ ಮಾಡುವುದು ಮತ್ತು ಸಮಾದಲ್ಲಿ ಬದುಕಬೇಕು ಅಂದ್ರೆ ಶಿಕ್ಷಣ ಜೋತೆ ಸಂಸ್ಕಾರ ಅತ್ಯಮೂಲ್ಯ ಎಂದು ದೇವರ ಹಿಪ್ಪರಗಿ ಶಾಸಕ ರಾಜುಗೌಡ ಪಾಟೀಲ್ ಹೇಳಿದರು.ನಿಡಗುಂದಿ ತಾಲೂಕಿನ ಇಟಗಿ ಗುರು ನಾಗಲಿಂಗ ಗಿಡ್ಡಯ್ಯ ಅಜ್ಜಾ ಪ್ರೌಢ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಮತ್ತು ಮಕ್ಕಳ ಪುರಸ್ಕಾರ, ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಬೀಳ್ಕೊಡುವ ಹಾಗೂ ನಿವೃತ್ತ ಸಿಬ್ಬಂದಿಯ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.೨೦೨೫ ನೇ ಎಸ್ ಎಸ್ ಎಲ್ ಸಿ ಪರಿಕ್ಷೆ ಯಲ್ಲಿ ಅತಿ ಹೆಚ್ಚು ಅಂಕ ಪಡೆದ ಇಟಗಿ ಪ್ರೌಡ ಶಾಲೆ ಮೂರು ವಿದ್ಯಾರ್ಥಿನಿಯರಿಗೆ ಸಂಸ್ಥೆಯ ಪರವಾಗಿ ಹಾಗೂ ಶಾಸಕರಿಂದ ಸನ್ಮಾನಿಸಲಾಯಿತು. ಗುರು ನಾಗಲಿಂಗ ಗಿಡ್ಡಯ್ಯ ಅಜ್ಜಾ ಶಾಲೆಯಲ್ಲಿ ಸುಮಾರು ೬೦ ವರ್ಷ ಸೇವೆ ಸಲ್ಲಿಸಿದ ನಿವೃತ್ತಿ ಹೊಂದಿದ ,ರಾಮಪ್ಪ ಹೂ ಹುಗ್ಗಿ , ಅಟೆಂಡರ್ ಮತ್ತು ಮರಿಯಪ್ಪ ಯ ಚಲವಾದಿ,…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಶಿಕ್ಷಣ, ತಂತ್ರಜ್ಞಾನ, ಸಂಸ್ಕೃತಿಯನ್ನು ಸಂಯೋಜಿಸುವ ಒಂದು ವಿಶಿಷ್ಠ ಕಾರ್ಯಕ್ರಮವಾಗಿದ್ದು, ಮಕ್ಕಳಲ್ಲಿ ವೈಜ್ಞಾನಿಕ ಆಸಕ್ತಿ, ನಾವೀನ್ಯತೆ ಮತ್ತು ಸ್ಥಳೀಯ ಸಂಪ್ರದಾಯಗಳ ಅರಿವನ್ನು ಬೆಳೆಸುತ್ತದೆ ಎಂದು ಶಿಕ್ಷಕ ಸಿದ್ಧಲಿಂಗ ಚೌಧರಿ ಹೇಳಿದರು.ಸಿಂದಗಿ ಪಟ್ಟಣದ ವಿಜಯಪುರ ರಸ್ತೆಯ ಚಿಕ್ಕಸಿಂದಗಿ ಬಳಿ ಇರುವ ಶಿವಕಾಶಿ ಮಹಿಳಾ ಸಂಘದ ಶಾಂತಿನಿಕೇತನ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ಹಮ್ಮಿಕೊಂಡ ಹಳ್ಳಿ ಹಬ್ಬ ಮತ್ತು ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಬೆಳೆಸುವುದು ಪೋಷಕರ ಮತ್ತು ಶಾಲೆಗಳ ಆದ್ಯ ಕರ್ತವ್ಯ. ಜ್ಞಾನ ಮತ್ತು ತಂತ್ರಜ್ಞಾನದೆಡೆಗೆ ಮಕ್ಕಳನ್ನು ಕರೆದುಕೊಂಡು ಹೋಗುವಲ್ಲಿ ಶಾಲೆಯು ಉತ್ತಮ ವಾತಾವರಣ ಪ್ರದರ್ಶಿಸುತ್ತಿದೆ ಎಂದರು.ಈ ವೇಳೆ ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದ ಉಪನ್ಯಾಸಕ ಸುಧಾಕರ ಚವ್ಹಾಣ ಮಾತನಾಡಿ, ಇದು ಪಠ್ಯಕ್ರಮದ ಒಂದು ಭಾಗವೇ ಆಗಿದ್ದು, ಮಕ್ಕಳಲ್ಲಿರುವ ಪ್ರತಿಭೆ ಅನಾವರಣ ಮಾಡಲು ಉತ್ತಮ ವೇದಿಕೆ ಎಂದರು.ಇದೇ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಆಗಮಿಸಿದ ಪತ್ರಕರ್ತ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದಲ್ಲಿ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಜ.೦೧ರ ಬೆಳೆಗ್ಗೆ ೧೦ ಗಂಟೆಗೆ ವಿಜಯಪುರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಲಾಗಿದೆ.ಉದ್ಘಾಟನೆಯನ್ನು ಬೃಹತ್ ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಸಚಿವರೂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಎಂ.ಬಿ.ಪಾಟೀಲ ಅವರು ನೆರವೇರಿಸಲಿದ್ದು,ಜವಳಿ,ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್. ಪಾಟೀಲ ಅವರು ಗೌರವ ಉಪಸ್ಥಿತರಿರಲಿದ್ದಾರೆ.ನಗರ ಶಾಸಕ ಬಸವನಗೌಡ ಆರ್. ಪಾಟೀಲ ಯತ್ನಾಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಮುಖ್ಯ ಅತಿಥಿಗಳಾಗಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ರವಿಕುಮಾರ ಎನ್, ಶಾಸಕರೂ ಆದ ನವದೆಹಲಿಯ ಕರ್ನಾಟಕ ಸರ್ಕಾರದ ವಿಶೇಷ ಪ್ರತಿನಿಧಿ-೨ ಪ್ರಕಾಶ ಬಿ. ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟಜೆಂಟ್ ನಿಯಮಿತದ ಅಧ್ಯಕ್ಷರು ಹಾಗೂ ಶಾಸಕರಾದ ಅಪ್ಪಾಜಿ ಸಿ. ಎಸ್ ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ, ಸುಧಾ ಮೂರ್ತಿ, ಶಾಸಕರಾದ…
