Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ತಾಲ್ಲೂಕಿನ ಯಾಳವಾರ ಗ್ರಾಮದ ಸೋಮೇಶ್ವರ ವಿದ್ಯಾವರ್ಧಕ ಸಂಘದ ಪ್ರೌಢಶಾಲೆ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.ಪರೀಕ್ಷೆಗೆ ಕುಳಿತ ೭೧ ವಿದ್ಯಾರ್ಥಿಗಳಲ್ಲಿ ಎಲ್ಲಾ ೭೦ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಪ್ರಥಮ ಸ್ಥಾನವನ್ನು ಲಕ್ಷಿö್ಮÃ ದೇಸಾಯಿ ಶೇ ೯೬.೬೪, ದ್ವಿತೀಯ ಸ್ಥಾನವನ್ನು ಕಸ್ತೂರಿಬಾಯಿ ಇಬ್ರಾಹಿಂಪೂರ ಶೇ ೯೩.೯೨ ತೃತೀಯ ಸ್ಥಾನವನ್ನು ಕೀರ್ತಿ ಹುಣಶ್ಯಾಳ ಶೇ ೯೧.೬೮ ಫಲಿತಾಂಶ ಪಡೆದಿದ್ದಾರೆ.ವಿದ್ಯಾರ್ಥಿ,ವಿದ್ಯಾರ್ಥಿನಿಯರ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ರಾಜುಗೌಡ ನಾಡಗೌಡ್ರ, ಮುಖ್ಯಶಿಕ್ಷಕ ಕೆ.ಆಯ್. ಹೊಸಮನಿ ಹರ್ಷ ವ್ಯಕ್ತಪಡಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ಹಿಂದೂ ದೇವಸ್ಥಾನವೆಂದರೆ ಅಲ್ಲಿನ ದೇವದೇವತೆಗಾಗಿ ಪ್ರತಿಷ್ಠಾಪಿಸಲಾದ ಒಂದು ಪವಿತ್ರ ಮನೆ. ಅದು ಒಂದು ಪ್ರಾರ್ಥನೆಯ ಸ್ಥಳ ಮಾತ್ರ ಅಲ್ಲ. ವೇದ ಮಂತ್ರಗಳಿಂದ ದೇವ-ದೇವತೆಯನ್ನು ಅಲ್ಲಿ ಎಂದಿಗೂ ನೆಲೆಸಿರುವಂತೆ ಆಹ್ವಾನಿಸಿ ಪ್ರತಿಷ್ಠಾಪಿಸಲಾಗುತ್ತದೆ. ದೇವಸ್ಥಾನಕ್ಕೆ ಬರುವ ಭಕ್ತರು ದೇವರ ಮನೆಗೆ ಬಂದ ಅತಿಥಿಗಳಂತೆ, ಆದರೆ ಆ ಭೇಟಿಗೆ ದೇವರ ಆಹ್ವಾನವಿರಬೇಕು. ಆಗ ಆ ಭೇಟಿ ಒಂದು ತೀರ್ಥಯತ್ರೆಯಾಗುತ್ತದೆ ಎಂದು ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಡಾ. ನಿಶ್ಚಲಾನಂದನಾಥ ಸ್ವಾಮೀಜಿ ಹೇಳಿದರು.ತಾಲೂಕಿನ ಹೈರಿಗೆ ಗ್ರಾಮದಲ್ಲಿ ಶ್ರೀ ರಾಮ ಒಕ್ಕಲಿಗರ ಸೇವಾ ಟ್ರಸ್ಟ್ ವತಿಯಿಂದ ನಿರ್ಮಾಣಗೊಂಡಿರುವ ಶ್ರೀ ರಾಮ ಮಂದಿರ ಉದ್ಘಾಟನಾ ಮಹೋತ್ಸವದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಆದಿಚುಂಚನಗಿರಿ ಮೈಸೂರು ಶಾಖಾ ಮಠದ ಸೋಮೇಶ್ವರನಾಥ ಸ್ವಾಮೀಜಿ ಮಾತನಾಡಿ, ಇಲ್ಲಿನ ದೇವಸ್ಥಾನ ಉದ್ಘಾಟನಾ ಮಹೋತ್ಸವಕ್ಕೆ ಜನರು ಸೇರಿರುವುದನ್ನು ನೋಡಿ ಖುಷಿಯಾಗುತ್ತೆ. ರಾಮನ ಮೇಲೆ ಇಲ್ಲಿನ ಜನರಿಗೆ ಎಷ್ಟು ಭಕ್ತಿಯಿದೆ ಎಂಬುದು ತಿಳಿಯುತ್ತೆ ಎಂದು ಹೇಳಿದರು.ಇದಕ್ಕೂ ಮುನ್ನ ಬುಧವಾರ ಬೆಳಗ್ಗೆ 5.30ರ ಬ್ರಾಹ್ಮಿ ಮುಹೂರ್ತದಲ್ಲಿ…

Read More

ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ನಾಯಕತ್ವ ಬದಲಾವಣೆ ವಿಷಯದಲ್ಲಿ ಕಾಂಗ್ರೆಸ್ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರವನ್ನು ತಾವು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಗೌರವಿಸಿ ಪಾಲಿಸುವುದಾಗಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.ತಮ್ಮ ಪಕ್ಷದ ನಾಯಕತ್ವದ ಮೇಲೆ ಪೂರ್ಣ ವಿಶ್ವಾಸವಿದೆ, ಹೈಕಮಾಂಡ್ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ ಎಂಬ ನಂಬಿಕೆ ನನಗೆ ಇದೆ ಎಂದರು.ಮೇ 4ರ ನಂತರ ನಾಯಕತ್ವ ಬದಲಾವಣೆ ಹಾಗೂ ಸಚಿವ ಸಂಪುಟ ಪುನಾರಚನೆ ಸಾಧ್ಯತೆಗಳ ಬಗ್ಗೆ ಊಹಾಪೋಹಗಳು ಹರಿದಾಡುತ್ತಿವೆ. ಮೇ 4ರಂದು ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಯ ಫಲಿತಾಂಶಗಳು ಪ್ರಕಟವಾಗಲಿದ್ದು, ಕರ್ನಾಟಕದ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಕೂಡ ಹೊರಬೀಳಲಿವೆ.ದೆಹಲಿ ಭೇಟಿ ಮುಗಿಸಿ ವಾಪಸ್ಸಾದ ನಂತರ ನಿನ್ನೆ ತಮ್ಮ ನಿವಾಸದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಡಿ ಕೆ ಶಿವಕುಮಾರ್, ರಾಜಕೀಯ ವಿಚಾರಗಳ ಬಗ್ಗೆ ಮಾಧ್ಯಮಗಳ ಮುಂದೆ ಮಾತನಾಡುವುದಿಲ್ಲ ಎಂದು ಹೇಳಿದರು. ಈಗಾಗಲೇ ನಾನು ಹೇಳಿದ್ದೇನೆ, ಸಮಯ ಬಂದಾಗ ನಿಮಗೆ ತಿಳಿಯುತ್ತದೆ. ಆದ್ದರಿಂದ ಈಗ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ಝಳಕಿ ಗ್ರಾಮದ ಸತೀಶ ಹಿರೇಮಠ ಅವರ ಪುತ್ರಿ ಭಾಗ್ಯಲಕ್ಷ್ಮಿ ಹಿರೇಮಠ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿ ಚಡಚಣ ವಲಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.ಅವರು ಒಟ್ಟು 615 ಅಂಕಗಳನ್ನು (98.4%) ಗಳಿಸಿ ಗಮನಾರ್ಹ ಸಾಧನೆ ಮಾಡಿದ್ದು, ಝಳಕಿ ಗ್ರಾಮ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾರೆ. ಈ ಸಾಧನೆಗೆ ಕುಟುಂಬದವರು, ಶಿಕ್ಷಕರು ಹಾಗೂ ಗ್ರಾಮಸ್ಥರು ಸಂತಸ ವ್ಯಕ್ತಪಡಿಸಿದ್ದಾರೆ.ಭಾಗ್ಯಲಕ್ಷ್ಮೀ ಅವರ ಈ ಯಶಸ್ಸನ್ನು ಸಂಭ್ರಮಿಸಲು ಸಿಹಿ ಹಂಚಿ ಸಂತೋಷ ವ್ಯಕ್ತಪಡಿಸಲಾಯಿತು.

Read More

ಉದಯರಶ್ಮಿ ದಿನಪತ್ರಿಕೆ ಅಥಣಿ: ಪಟ್ಟಣದ ಹೊರವಲಯದಲ್ಲಿರುವ ಶಿವಯೋಗಿ ನಗರದ ಅಧಿಕೃತ ನಾಮಫಲಕ ಅನಾವರಣ ಕಾರ್ಯಕ್ರಮವು ಅಥಣಿ ಶೆಟ್ಟರ ಮಠದ ಮರುಳಸಿದ್ಧ ಮಹಾಸ್ವಾಮೀಜಿಯವರ ಸಾನ್ನಿಧ್ಯದಲ್ಲಿ ಇತ್ತೀಚೆಗೆ ಅದ್ಧೂರಿಯಾಗಿ ಜರುಗಿತು. ಈ ವೇಳೆ ಆಶೀರ್ವಚನ ನೀಡಿದ ಅವರು, ನಗರದ ನಿವಾಸಿಗಳಲ್ಲಿ ಒಗ್ಗಟ್ಟು ಮತ್ತು ಅಭಿವೃದ್ಧಿಯ ಚಿಂತನೆ ಸದಾ ಇರಲಿ ಎಂದು ಹಾರೈಸಿದರು.ಮುಖ್ಯ ಅತಿಥಿಗಳಾಗಿ ಮಾತನಾಡಿದ ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಶಿವಾನಂದ ದಿವಾನಮಳ, “ಅಥಣಿಯ ಪುಣ್ಯಭೂಮಿಯಲ್ಲಿರುವ ಈ ಈ ನಗರದಲ್ಲಿ ಈಗಾಗಲೇ ಅನೇಕ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗಿದೆ. ಬರುವ ದಿನಗಳಲ್ಲಿ ನಾನು ಮತ್ತು ಎಸ್. ಕೆ. ಬೂಟಾಳಿ ಅವರು ಒಗ್ಗಟ್ಟಿನಿಂದ ಶ್ರಮಿಸಿ, ನಗರಕ್ಕೆ ಅಗತ್ಯವಿರುವ ಮೂಲಭೂತ ಸೌಕರ್ಯಗಳನ್ನು ಒದಗಿಸಲು ಬದ್ಧರಾಗಿದ್ದೇವೆ,” ಎಂದು ಭರವಸೆ ನೀಡಿದರು.ಕಾರ್ಯಕ್ರಮದಲ್ಲಿ ಪ್ರಮುಖರಾದ ಕೇದಾರೆಪ್ಪಾ ತೇರದಾಳ, ಈಶ್ವರ ಮಾಳಿ, ಸದಾಶಿವ ಬುಟಾಳಿ, ಬಸವರಾಜ ಬುಟಾಳಿ, ಮಹಾದೇವ ಹಳ್ಳದಮಳ, ಬಸವರಾಜ ಬಕಾರಿ, ಗಂಗಾಧರಯ್ಯಾ ಹಿರೇಮಠ, ಬಾಬು ಜೋಗಣಿ, ಗಿರೀಶ ದಿವಾನಮಳ, ಮೈಬುಬ ಬಾಗವನ, ಅಪ್ಪು ಕಿವಟಿ, ಚಿದ್ದು ಹಳ್ಳದಮಳ, ಅಲ್ಲಪ್ಪಾ ತೇರದಾಳ, ಗಣಪತಿ…

Read More

ವಿಜಯಪುರದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ- 2026ರ ಅಂಗವಾಗಿ ಯೋಗ ಮಹೋತ್ಸವ–2026, 55 ದಿನಗಳ ಕೌಂಟ್‌ಡೌನ್ ಕಾರ್ಯಕ್ರಮ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಾನವನ ಸರ್ವತೋಮುಖ ಅಭಿವೃದ್ಧಿಯನ್ನು ಮುಖ್ಯ ಗುರಿ ಹೊಂದಿರುವ ಯೋಗ ವಿಶ್ವಾದ್ಯಂತ ಹೆಚ್ಚು ಮನ್ನಣೆ ಪಡೆದಿದೆ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ಸಂಶೋಧನ‌ ಕೇಂದ್ರದ ಸಂಯೋಜಕಿ ಡಾ. ನಿರ್ಮಲಾ ಕೆ. ಜಿ ಹೇಳಿದ್ದಾರೆ.ಸೋಮವಾರ ನಗರದ ಬಿ.ಎಲ್.ಡಿ.ಇ‌ ಸಂಸ್ಥೆಯ ಎ.ವಿ.ಎಸ್ ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ವೈದ್ಯಕೀಯ ಕೇಂದ್ರದಲ್ಲಿಕೇಂದ್ರ ಸರಕಾರದ ಆಯುಷ್ ಸಚಿವಾಲಯದ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಮೊರಾರ್ಜಿ ದೇಸಾಯಿ ರಾಷ್ಟ್ರೀಯ ಯೋಗ ಸಂಸ್ಥೆಯ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ- 2026ರ ಅಂಗವಾಗಿ ಯೋಗ ಮಹೋತ್ಸವ–2026, 55 ದಿನಗಳ ಕೌಂಟ್‌ಡೌನ್ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಇಂದು ನಮಗೆ ಸಾಕಷ್ಟು ವೈದ್ಯಕೀಯ ಚಿಕಿತ್ಸಾ ಸೌಲಭ್ಯಗಳಿದ್ದರೂ ಯೋಗವು ನಾನಾ ರೋಗಗಳನ್ನು ತಡೆಗಟ್ಟುವಲ್ಲಿ ಮಹತ್ತರ ಪಾತ್ರ ವಹಿಸುತ್ತಿದೆ. ಈ ಕಾರ್ಯಕ್ರಮ ಕೇವಲ ಒಂದು ದಿನಕ್ಕೆ ಸೀಮಿತವಾಗಬಾದು. ಪ್ರತಿಯೋಬ್ಬರೂ ಪ್ರತಿದಿನ ಯೋಗ ಮಾಡುವ ಮೂಲಕ ಆರೋಗ್ಯ ವೃದ್ಧಿಸಿಕೊಂಡು…

Read More

ಲೇಖನ*- ಶಿಲ್ಪಾ. ಮೃತ್ಯುಂಜಯ. ಮಿಣಜಿಗಿಶಿಕ್ಷಕಿ & ಲೇಖಕಿಧಾರವಾಡ ಉದಯರಶ್ಮಿ ದಿನಪತ್ರಿಕೆ ಕಾಲ ಬದಲಾದಂತೆ ಎಲ್ಲವೂ ಬದಲಾಗುತ್ತಿದೆ. ನೂತನ ಮಾದರಿಯ ತಂತ್ರಜ್ಞಾನ ಮತ್ತು ಹೊಸ ಹೊಸ ಆವಿಷ್ಕಾರದತ್ತ ಮಕ್ಕಳನ್ನು ಸಿದ್ಧಗೊಳಿಸಬೇಕೆನ್ನುವ ಹಂಬಲದಲ್ಲಿ ಎಲ್ಲ ಪಾಲಕ ವರ್ಗದವರು, ಶಿಕ್ಷಕರು ತಮ್ಮದೇ ಆದಂತಹ ಸತತ ಪರಿಶ್ರಮ ಮತ್ತು ಪ್ರಯತ್ನಗಳನ್ನು ಮಾಡುತ್ತಿರುತ್ತಾರೆ. ಅದೆಲ್ಲದರ ಫಲವೇ ಇಂದು ನಾವು ಎಐ ಶಿಕ್ಷಣ ಎಂದು ಹೇಳಬಹುದು.ಕೃತಕ ಬುದ್ಧಿಮತ್ತೆಯನ್ನು ಹೊಂದಿರುವಂತಹ ಈ ತಂತ್ರಜ್ಞಾನವು ತನ್ನದೇ ಆದಂತಹ ಛಾಪನ್ನು ಮೂಡಿಸಿದೆ. ವಿದ್ಯಾರ್ಥಿಗಳಿಗೆ ಈ ಶಿಕ್ಷಣವನ್ನು ಕೊಡುವುದರಿಂದ ಬದಲಾವಣೆಯ ಸಮಯದಲ್ಲಿ ಮಕ್ಕಳು ಬಹುಬೇಗ ಹೊಂದಿಕೊಳ್ಳುವ ಮನಸ್ಥಿತಿಯನ್ನು ತಮ್ಮಿಂದ ತಾವೇ ಅರಿತುಕೊಳ್ಳುವರು.ಎ ಐ ಶಿಕ್ಷಣದ ಉಪಯೋಗಗಳು ೧. ವೈಯಕ್ತಿಕ ಕಲಿಕೆಪ್ರತಿಯೊಬ್ಬ ಮಗುವಿನ ಕಲಿಯುವ ವೇಗ ಮತ್ತು ಸಾಮರ್ಥ್ಯ ಬೇರೆ ಬೇರೆಯಾಗಿರುತ್ತದೆ. ಎ ಐ ತಂತ್ರಜ್ಞಾನವು ಮಗುವಿನ ಆಸಕ್ತಿ ಮತ್ತು ದೌರ್ಬಲ್ಯಗಳನ್ನು ಗುರುತಿಸಿ, ಅವರಿಗೆ ತಕ್ಕಂತೆ ಪಠ್ಯಕ್ರಮವನ್ನು ವಿನ್ಯಾಸಗೊಳಿಸಲು ಸಹಾಯ ಮಾಡುತ್ತದೆ. ಇದರಿಂದ ಯಾರಿಗೂ ಹೊರೆಯಾಗದಂತೆ ಸುಲಭವಾಗಿ ಕಲಿಯಬಹುದು.೨. ಹೊಸ ಕೌಶಲಗಳ ಅಭಿವೃದ್ಧಿಭವಿಷ್ಯದ ಬಹುತೇಕ ಉದ್ಯೋಗಗಳು ತಂತ್ರಜ್ಞಾನದ…

Read More

ಉದಯರಶ್ಮಿ ದಿನಪತ್ರಿಕೆ ಚಿಮ್ಮಡ: ಗ್ರಾಮದ ಮಾರ್ಗವಾಗಿ ಹರಿಯುವ ಘಟಪ್ರಭಾ ಎಡದಂಡೆ ಕಾಲುವೆಗೆ ಕಳೆದ ಎರಡು ದಿನಗಳಿಂದ ನೀರು ಹರಿಸಲಾಗುತ್ತಿದೆ. ಆದರೆ ಜಮಖಂಡಿ ಭಾಗದ ಗೇಟ್‌ಗಳನ್ನು ಬಂದ್ ಮಾಡಿದ್ದರಿಂದ ಆ ಭಾಗದ ರೈತರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಚಿಮ್ಮಡ ಗ್ರಾಮದಲ್ಲಿ ನಡೆದಿದೆ.ಬೇಸಿಗೆಯ ಪ್ರಯುಕ್ತ ಜನ ಜಾನುವಾರುಗಳಿಗೆ ಕುಡಿಯುವ ಉದ್ದೇಶಕ್ಕಾಗಿ ಜಿಎಲ್‌ಬಿಸಿ ಕಾಲುವೆ ಮೂಲಕ ಪ್ರತಿದಿನ ೨೪ ಕ್ಯುಸೆಕ್ ನೀರು ಹರಿಸಲಾಗುತಿದ್ದು ನೀರು ಗ್ರಾಮದ ಕಾಲುವೆ ತಲುಪುತಿದ್ದಂತೆಯೇ ಕುಡಚಿ, ಹಾರೂಗೇರಿ ಭಾಗದ ರೈತರು ಇಲ್ಲಿನ ಜಮಖಂಡಿ ಕಾಲುವೆಯ ನಾಲ್ಕೂ ಗೇಟ್‌ಗಳನ್ನು ಬಂದ್ ಮಾಡಿ ತಮ್ಮ ಭಾಗಕ್ಕೆ ಹೆಚ್ಚಿನ ಪ್ರಮಾಣದಲ್ಲಿ ನೀರು ಹರಿಯುವಂತೆ ನೋಡಿಕೊಂಡಿದ್ದರು. ನಂತರ ಜಮಖಂಡಿ ಭಾಗದ ರೈತರು ಸ್ಥಳಕ್ಕೆ ಆಗಮಿಸಿ ಗೆಟ್ ಗಳನ್ನು ತೆರೆದು ಜಮಖಂಡಿ ಭಾಗಕ್ಕೆ ನೀರು ಹರಿಸಲು ಪ್ರಯತ್ನಿಸಿದರೂ ಕುಡಚಿ, ಹಾರೂಗೇರಿ ಭಾಗದ ರೈತರು ಅವಕಾಶ ನೀಡಲಿಲ್ಲ. ನಂತರ ಕಾಂಗ್ರೆಸ್ ಮುಖಂಡ ಸಿದ್ದು ಕೊಣ್ಣೂರರನ್ನು ಸಂಪರ್ಕಿಸಿ ತಮ್ಮ ಭಾಗಕ್ಕೆ ನೀರು ಹರಿಸುವ ವ್ಯವಸ್ಥೆ ಕೈಗೊಳ್ಳಬೇಕೆಂದು ಮನವಿ ಮಾಡಿದರು. ಸಿದ್ದು ಕೊಣ್ಣೂರ…

Read More

ಮೈಸೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳು ಕರ್ನಾಟಕವನ್ನು ಆರ್ಥಿಕ ಸಂಕಷ್ಟದತ್ತ ತಳ್ಳುತ್ತಿವೆ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಹೇಳಿದ್ದಾರೆ.ಬಸವನಪುರದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು,ರಾಜ್ಯದ ಗೃಹಲಕ್ಷ್ಮಿ ಯೋಜನೆಯಡಿ ಮಹಿಳೆಯರಿಗೆ ಪ್ರತಿ ತಿಂಗಳು ರೂ.2,000 ನೀಡಲಾಗುತ್ತಿದೆ. ಆದರೆ ಈ ಹಣವನ್ನು ಸರ್ಕಾರ ಹೇಗೆ ಸಂಗ್ರಹಿಸುತ್ತಿದೆ ಎಂಬುದನ್ನು ಜನರು ಪರಿಶೀಲಿಸಬೇಕು ಎಂದು ಹೇಳಿದರು.“ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವುದಕ್ಕಾಗಿ ಸರ್ಕಾರ ಲಕ್ಷಾಂತರ ಕೋಟಿ ರೂಪಾಯಿ ಸಾಲ ಪಡೆದಿದೆ. ಈಗಾಗಲೇ ರಾಜ್ಯದ ಒಟ್ಟು ಸಾಲ ರೂ.7.26 ಲಕ್ಷ ಕೋಟಿಗೆ ಏರಿದ್ದು, ಪ್ರತಿ ನಾಗರಿಕನ ಮೇಲೂ ಸುಮಾರು ರೂ.1 ಲಕ್ಷದಷ್ಟು ಸಾಲದ ಹೊರೆ ಬಿದ್ದಿದೆ ಎಂದು ಆರೋಪಿಸಿದರು.ಈ ವಿಚಾರದಲ್ಲಿ ನಾನು ಯಾವುದೇ ವೇದಿಕೆಯಲ್ಲಿ ಚರ್ಚೆಗೆ ಬರಲು ನಾವು ಸಿದ್ಧನಿದ್ದೇನೆ. ಅವರಿಗೆ ಧೈರ್ಯವಿದ್ದರೆ, ಮುಂದಕ್ಕೆ ಬರಲಿ ಎಂದು ಸವಾಲು ಹಾಕಿದರು.ರಾಜ್ಯದ ಖಜಾನೆ ಮೇಲೆ ಈ ಯೋಜನೆಗಳಿಂದ ಭಾರೀ ಒತ್ತಡ ಉಂಟಾಗಿದೆ. ಸರ್ಕಾರಿ ನೌಕರರ ವೇತನವನ್ನು ಸಮಯಕ್ಕೆ ಪಾವತಿಸಲು ಕೂಡ ಸರ್ಕಾರ ಹೆಣಗಾಟ ನಡೆಸುತ್ತಿದೆ. ಹಿಮಾಚಲ ಪ್ರದೇಶದಲ್ಲೂ ಇದೇ ರೀತಿಯ…

Read More

ಹಿರಿಯ ಬಿಜೆಪಿ ನಾಯಕ ರಾಮ್ ಮಾಧವ್ ಅಮೆರಿಕದಲ್ಲಿ ನೀಡಿದ ಹೇಳಿಕೆ | ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕೆ ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ “ಕೈಗೊಂಬೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಅವರು ಟೀಕಿಸಿದ್ದು, ಹಿರಿಯ ಬಿಜೆಪಿ ನಾಯಕ ರಾಮ್ ಮಾಧವ್ ಅವರು ಅಮೆರಿಕದಲ್ಲಿ ಇತ್ತೀಚೆಗೆ ನೀಡಿದ ಹೇಳಿಕೆ ಮೋದಿ ಸರ್ಕಾರದ “ಅಪಾಯಕಾರಿ” ಆದ್ಯತೆಗಳನ್ನು “ಬಹಿರಂಗಪಡಿಸಿದೆ” ಎಂದು ಹೇಳಿದ್ದಾರೆ.ಸಾಮಾಜಿಕ ಮಾಧ್ಯಮ ‘ಎಕ್ಸ್’ ನಲ್ಲಿ ಆರ್‌ಎಸ್‌ಎಸ್ ನಾಯಕ ರಾಮ್ ಮಾಧವ್ ಅವರ ವಿಡಿಯೋವನ್ನು ಸಿಎಂ ಸಿದ್ದರಾಮಯ್ಯ ಹಂಚಿಕೊಂಡಿದ್ದಾರೆ. ಅದರಲ್ಲಿ ಇರಾನ್ ಮತ್ತು ರಷ್ಯಾದಿಂದ ತೈಲ ಖರೀದಿಸುವುದನ್ನು ನಿಲ್ಲಿಸಲು ಭಾರತ ಒಪ್ಪಿಕೊಂಡಿದೆ ಮತ್ತು ಅಮೆರಿಕ ವಿಧಿಸಿದ ಹೆಚ್ಚಿನ ಸುಂಕಗಳಿಗೆ ಒಪ್ಪಿಗಿ ಸೂಚಿಸಿದೆ ಎಂದು ಮಾಧವ್ ಹೇಳಿದ್ದಾರೆ.ಅಮೆರಿಕದಲ್ಲಿ ಮಾಧವ್ ನೀಡಿದ ಹೇಳಿಕೆಗಳು “ಮೋದಿ ಸರ್ಕಾರದ ಅಪಾಯಕಾರಿ ಆದ್ಯತೆಗಳನ್ನು” ಬಹಿರಂಗಪಡಿಸಿದೆ ಎಂದು ಅವರು ಹೇಳಿದ್ದಾರೆ.ಆರ್‌ಎಸ್‌ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಅವರೊಂದಿಗೆ ಮಾಧವ್ ಅಮೆರಿಕಕ್ಕೆ ಭೇಟಿ ನೀಡಿದ್ದು, ವಾಷಿಂಗ್ಟನ್‌ನ ಹಡ್ಸನ್ ಇನ್‌ಸ್ಟಿಟ್ಯೂಟ್‌ನಲ್ಲಿ ನಡೆದ…

Read More