Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಲೇಖನವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಲಂಡನ್ ನಲ್ಲಿ ಗಾಂಧೀಜಿಯವರು ಕಾನೂನು( ಬ್ಯಾರಿಸ್ಟರ್ ) ಪದವಿಯನ್ನು ಓದುತ್ತಿದ್ದ ಸಮಯ. ಅವರಿಗೆ ಪಠ್ಯ ವಿಷಯವನ್ನು ತೆಗೆದುಕೊಳ್ಳುತ್ತಿದ್ದ ಪ್ರೊಫೆಸರ್ ಪೀಟರ್ ಎಂಬ ವ್ಯಕ್ತಿಗೆ ಗಾಂಧಿ ಎಂದರೆ ಕೊಂಚ ಅಸೂಯೆ ಸಿಟ್ಟು… ಕಾರಣವಿಷ್ಟೇ ಗಾಂಧಿ ಎಂದಿಗೂ ತಮ್ಮ ಆತ್ಯಾಭಿಮಾನವನ್ನು ಬಿಟ್ಟು ಕೊಟ್ಟು ಮಾತನಾಡುತ್ತಿರಲಿಲ್ಲ. ಅವರಿಬ್ಬರ ನಡುವೆ ಆಗಾಗ ವಾದಗಳು ನಡೆಯುತ್ತಿದ್ದುದು ಸಾಮಾನ್ಯವಾಗಿತ್ತು.ಒಂದು ದಿನ ವಿಶ್ವವಿದ್ಯಾಲಯದ ವಿಶಾಲವಾದ ಊಟದ ಕೋಣೆಯಲ್ಲಿ ಪೀಟರ್ ಆಹಾರವನ್ನು ಸ್ವೀಕರಿಸುತ್ತಿದ್ದರು ಮತ್ತು ಅದೇ ಸಮಯದಲ್ಲಿ ಗಾಂಧೀಜಿಯವರು ತಮ್ಮ ಊಟದ ಟ್ರೇಯನ್ನು ಹಿಡಿದು ಪ್ರೊಫೆಸರ್ ಪಕ್ಕದಲ್ಲಿ ಬಂದು ಕುಳಿತರು. ಇದು ಪ್ರೊಫೆಸರ್ ಗೆ ಇಷ್ಟವಾಗಲಿಲ್ಲ ಆ ಸಮಯದಲ್ಲಿ ಗಾಂಧಿಯನ್ನು ಕೆಣಕುವ ನಿಟ್ಟಿನಲ್ಲಿ ಪ್ರೊಫೆಸರ್ “ಮಿಸ್ಟರ್ ಗಾಂಧಿ ನಿಮಗೆ ಗೊತ್ತಿಲ್ವೇ! ಒಂದು ಹಂದಿ ಮತ್ತು ಒಂದು ಹಕ್ಕಿ ಎಂದೂ ಜೊತೆಯಾಗಿ ಊಟಕ್ಕೆ ಕುಳಿತುಕೊಳ್ಳುವುದಿಲ್ಲ” ಎಂದು ಗಾಂಧಿಯನ್ನು ಕಿಚಾಯಿಸಿದರು.ಇದಕ್ಕೆ ಪ್ರತ್ಯುತ್ತರವಾಗಿ ಗಾಂಧಿ “ಡೋಂಟ್ ವರಿ ಪ್ರೊಫೆಸರ್…ನಾನು ಹಾರಿ ಹೋಗುವೆ ” ಎಂದು ಹೇಳಿಕೂಡಲೇ ಪಕ್ಕದ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ. ಎಲ್ ಡಿ ಈ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆಸಿಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಮಹಾವಿದ್ಯಾಲಯದ ಐ ಕ್ಯೂ ಎ ಸಿ ಮತ್ತು ಐ ಐ ಸಿ ಸಿ ಸಂಯುಕ್ತಾಶ್ರಯದಲ್ಲಿ ಮಹವಿದ್ಯಾಲಯದ ಪದವಿ ಮತ್ತು ಸ್ನಾತಕೊತ್ತರ ಪದವಿಯ ಇಂಗ್ಲಿಷ್ ವಿಭಾಗವು ಇಂಗ್ಲೀಷ್ ಭಾಷೆಯನ್ನು ಪರಿಣಾಮಕಾರಿಯಾಗಿ ಮತ್ತು ಸಮರ್ಥವಾಗಿ ಹೇಗೆ ಮಾತನಾಡಬೇಕು ಎಂಬ ವಿಷಯದ ಮೇಲೆ ದತ್ತಿ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.ಕಾರ್ಯಕ್ರಮಕ್ಕೆ ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ವಿ ಬಿ ರಜಪೂತ ಕಾರ್ಯ ಕ್ರಮವನ್ನುದ್ದೇಶಿಸಿ, ಇಂಗ್ಲೀಷ್ ಭಾಷೆ ಕಲಿಯುವುದು ಇಂದಿನ ದಿನಮಾನದಲ್ಲಿ ಅತ್ಯಗತ್ಯ .ವಿದ್ಯಾರ್ಥಿಗಳು ತಮ್ಮ ನಿತ್ಯ ಜೀವನದಲ್ಲಿ ಇಂಗ್ಲೀಷ್ ಭಾಷೆಯಲ್ಲಿ ಮಾತನಾಡುತ್ತಾ ಹೋದಂತೆ ಭಾಷೆ ಕಲಿಯುವುದು ಸುಲಭವಾಗುತ್ತದೆ ಎಂದು ಹೇಳಿದರು.ಮತ್ತು ವಿದ್ಯಾರ್ಥಿಗಳಿಗೆ ಇಂಗ್ಲೀಷ್ ಭಾಷೆಯಲ್ಲಿ ಸಂವಹನ ಮತ್ತು ಅದರ ಮಹತ್ವ , ಸ್ವಯಂ ವಿಕಸನ, ಏಕಾಗ್ರತೆ,ಕೇಳುವ ಕೌಶಲ್ಯಗಳ ಬಗ್ಗೆ ಸ್ಪಷ್ಟವಾಗಿ ತಿಳಿಸಿದರು .ಈ ಕಾರ್ಯಕ್ರಮದಲ್ಲಿ ಮಹಾವಿದ್ಯಾಲಯದ ಪ್ರಾಚಾರ್ಯೆ ಡಾ .ಆರ್ ಎಂ ಮಿರ್ದೇ, ಪ್ರೊ ಅಮೀನ್ ಲೆನ್…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಬೆಂಗಳೂರು ಇವರ ಆಶ್ರಯದಲ್ಲಿ ಮೂರು ದಿನಗಳ”ಯುವಸಮುದಾಯಕ್ಕಾಗಿ ಗಾಂಧೀ ಕಾರ್ಯಗಾರ ” ವನ್ನು ಆಯೋಜಿಸಿದ್ದು ಕಾರ್ಯಗಾರದಲ್ಲಿ ಪೋಸ್ಟರ್ ಮಾಡುವುದು, ಗಾಂಧೀ ಸಾಹಿತ್ಯ, ದೃಶ್ಯ ಮಾಧ್ಯಮದಲ್ಲಿ ಗಾಂಧೀ ಅರಿವು ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಗಾಂಧೀ ತತ್ವಗಳ ಪ್ರಸಾರ , ಸಾಮಾಜಿಕ ಜಾಲತಾಣಗಳ ಮೂಲಕ ಗಾಂಧಿ ತತ್ವಗಳನ್ನು ಪ್ರಸಾರ ಮಾಡುವ ಬಗ್ಗೆ ತರಬೇತಿ , ಆಡಿಯೋ , ವಿಡಿಯೋ ಎಡಿಟಿಂಗ್, ಕ್ಯಾಮೆರಾ ಬಳಕೆ , ಮತ್ತು ಯೂಟ್ಯೂಬ್ ಚಾನಲ್ ನಿರ್ವಹಣೆ ಬಗೆಗೆ ಮಾರ್ಗದರ್ಶನ ನೀಡಲಾಗುವುದು .ಕೇವಲ 40 ಜನಕ್ಕೆ ಮಾತ್ರ ಅವಕಾಶವಿದ್ದು 18 ರಿಂದ 35 ವರ್ಷದ ಎಲ್ಲರೂ ಭಾಗವಹಿಸಬಹುದು .ಮತ್ತು ಕಾರ್ಯಗಾರಕ್ಕೆ ಬರುವ ಶಿಬಿರಾರ್ಥಿಗಳಿಗೆ ಉಚಿತ ಊಟ ಮತ್ತು ವಸತಿ ಸೌಲಭ್ಯವಿರುತ್ತದೆ.ಯಾವುದೇ ರೀತಿಯ ಶುಲ್ಕವಿರುವುದಿಲ್ಲ .ಹೆಚ್ಚಿನ ಮಾಹಿತಿಗಾಗಿ ಆಸಕ್ತರು 9008149149 (ವಿಜಯ್ ಹನೆಕೆರೆ ನಿರ್ದೇಶಕರು ) ಈ ದೂರವಾಣಿ ಸಂಖ್ಯೆಗೆ ಸಂಪರ್ಕಿಸಬೇಕೆಂದು ಗಾಂಧೀ ಸ್ಮಾರಕ ನಿಧಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ .
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಶ್ವಗುರು ಬಸವಣ್ಣ ಕರ್ನಾಟಕದ ಸಾಂಸ್ಕೃತಿಕ ನಾಯಕ ಘೋಷಣೆಯ ವರ್ಷಾಚರಣೆ ನಿಮಿತ್ಯ ಬರುವ ಜೂನ್ ತಿಂಗಳಲ್ಲಿ ಅಮ್ಮ ಫೌಂಡೇಶನ್ ವತಿಯಿಂದ ರಾಜ್ಯಮಟ್ಟದ ಬಸವ ಸಂಸ್ಕೃತಿ ಉತ್ಸವ ಹಮ್ಮಿಕೊಳ್ಳಲಾಗುತ್ತಿದ್ದು, ಸಾಧಕರ ಸನ್ಮಾನ ಹಾಗೂ ಜಿಲ್ಲೆಯ ಎಸ್ಎಸ್ಎಲ್ಸಿ ಮತ್ತು ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ.೧೨ನೇ ಶತಮಾನದಲ್ಲಿ ವಿರಾಜಮಾನರಾಗಿದ್ದ ಅಣ್ಣ ಬಸವಣ್ಣನವರ ನಡೆ ನುಡಿ, ಕಾಯಕನಿಷ್ಠೆ, ಸಮಸಮಾಜಕ್ಕಾಗಿ ನೀಡಿದ ಕೊಡುಗೆ ಸ್ಮರಣೆಗಾಗಿ ಬಸವಣ್ಣನವರನ್ನು ಸ್ಮರಿಸಬೇಕಾಗಿದೆ. ಯುವ ಜನಾಂಗದಲ್ಲಿ ಬಸವಣ್ಣನವರ ಆದರ್ಶ ತತ್ವಗಳನ್ನು ಬಿತ್ತಬೇಕಾಗಿದೆ. ರಾಜ್ಯ ಸರಕಾರ ವಿಶ್ವ ಗುರು ಬಸವಣ್ಣನವರನ್ನು ಕರ್ನಾಟಕದ ಸಾಂಸ್ಕೃತಿಕ ರಾಯಭಾರಿಯನ್ನಾಗಿ ಮಾಡಿರುವ ಸ್ಮರಣೆಗಾಗಿ ವಿಜಯಪುರ ನಗರದ ಕಂದಗಲ್ ಹನುಮಮಂತರಾಯ ರಂಗಮಂದಿರದಲ್ಲಿ ರಾಜ್ಯ ಮಟ್ಟದ ಬಸವ ಸಂಸ್ಕೃತಿ ಉತ್ಸವ ಹಮ್ಮಿಕೊಳ್ಳಲಾಗುತ್ತಿದೆ. ವಿವಿಧ ಕ್ಷೇತ್ರಗಳಲ್ಲಿ ತಮ್ಮದೆ ಆದ ನಿಸ್ವಾರ್ಥ ಸೇವೆ ಸಲ್ಲಿಸಿ ಎಲೆಮರೆ ಕಾಯಿಯಾಗಿ ಸಮಾಜಮುಖಿಯಾಗಿರುವ ಸಾಧಕರಿಗೆ ರಾಜ್ಯಮಟ್ಟದ ಪ್ರಶಸ್ತಿ ನೀಡಿ ಸನ್ಮಾನಿಸಿ ಗೌರವಿಸಲಾಗುತ್ತಿದೆ. ನಾಡಿನ ಹಿರಿಯ ಸಾಹಿತಿಗಳು, ಬಸವ ತತ್ವ ಪ್ರಚಾರಕರ ಸಮ್ಮುಖದಲ್ಲಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನೀಟ್ ಪರೀಕ್ಷೆಯನ್ನು ಎದುರಿಸುತ್ತಿರುವ ವಿದ್ಯಾರ್ಥಿಗಳಿಗೆ ಶುಭ ಹಾರೈಸಿ ಮಾತನಾಡಿದ ಎಕ್ಸಲಂಟ್ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಅಧ್ಯಕ್ಷ ಬಸವರಾಜ ಕೌಲಗಿ; ವೈದ್ಯರಾಗಬೇಕು ಎನ್ನುವ ಕನಸಿನೊಂದಿಗೆ ಹಗಲು ರಾತ್ರಿಗಳ ಪರಿವೆ ಇಲ್ಲದೆ ಶ್ರಮವಹಿಸಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳು ನೀಟ್ ಪರೀಕ್ಷೆಯನ್ನು ಎದುರಿಸಲು ಸಿದ್ಧವಾಗಿದ್ದು ಅವರ ಕನಸು ನನಸಾಗಲಿ. ಪರೀಕ್ಷೆ ಎಂದ ಮೇಲೆ ಏಳು ಬೀಳುಗಳು ಇದ್ದೇ ಇರುತ್ತವೆ. ಅಂದುಕೊಂಡಂತೆ ಅಥವಾ ನಿರೀಕ್ಷೆಗೆ ತಕ್ಕಂತೆ ಪ್ರಶ್ನೆ ಬಾರದೇ ಇದ್ದ ಪಕ್ಷದಲ್ಲಿ ಯಾವ ವಿದ್ಯಾರ್ಥಿಯೂ ಸಹ ಧೃತಿಗೆಡದೇ ಏಕಾಗ್ರತೆ ವಹಿಸಿ ಪ್ರಯತ್ನಿಸಿದರೆ ಖಂಡಿತವಾಗಿಯೂ ಯಶಸ್ಸು ದೊರೆಯುತ್ತದೆ. ಒಂದು ವೇಳೆ ಅಂದುಕೊಂಡಂತೆ ಪರೀಕ್ಷೆಯನ್ನು ಎದುರಿಸುವುದಕ್ಕೆ ಸಾಧ್ಯವಾಗದೇ ಇದ್ದ ಪಕ್ಷದಲ್ಲಿ ಯಾವ ವಿದ್ಯಾರ್ಥಿಯೂ ಸಹ ಆತ್ಮಸ್ಥೈರ್ಯವನ್ನು ಕಳೆದುಕೊಳ್ಳಬಾರದು. ಪರೀಕ್ಷೆಗಳು ಎಷ್ಟು ಮುಖ್ಯವೋ ಬದುಕು ಅದಕ್ಕಿಂತ ಮುಖ್ಯವಾಗಿದ್ದು ಪರೀಕ್ಷೆಯಲ್ಲಿ ಅನುತ್ತೀರ್ಣರಾದವರು ಬದುಕಿನಲ್ಲಿ ಯಶಸ್ಸಿನ ಹಾದಿಯಲ್ಲಿ ಸಾಗಿದ್ದಕ್ಕೆ ಸಾಕಷ್ಟು ಉದಾಹರಣೆಗಳನ್ನು ನಾವು ನೋಡುತ್ತೇವೆ. ಆ ನಿಟ್ಟಿನಲ್ಲಿ ಯಾವುದೇ ನಕಾರಾತ್ಮಕ ವಿಚಾರಗಳ ಕಡೆಗೆ ಗಮನ ಕೊಡದೇ ದೃಢ ಮನಸ್ಸಿನಿಂದ…
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಜಿ.ಪಂ ಸಿಇಓ ರಿಷಿ ಆನಂದ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬೇಸಿಗೆ ಸಂದರ್ಭದಲ್ಲಿ ಜಿಲ್ಲೆಯ ಯಾವುದೇ ಗ್ರಾಮ ಹಾಗೂ ವಸತಿಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ಮುಂಜಾಗ್ರತಾ ಕ್ರಮವಹಿಸುವ ಮೂಲಕ ಯೋಜನಾಬದ್ಧವಾಗಿ ಕಾರ್ಯ ನಿರ್ವಹಿಸುವಂತೆ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳಾದ ರಿಷಿ ಆನಂದ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಅವರು, ನಗರದ ಜಿಲ್ಲಾ ಪಂಚಾಯತಿಯ ಸಭಾಭವನದಲ್ಲಿ ಶನಿವಾರ ಜಲಧಾರೆ ಮತ್ತು ಜಲ ಜೀವನ ಮಿಷನ್ ಯೋಜನೆಗಳ ಕುರಿತು ಜಿಲ್ಲೆಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತರರು ಸೇರಿದಂತೆ ಎಲ್ಲ ಉಪ-ವಿಭಾಗಗಳ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು, ಶಾಖಾಧಿಕಾರಿಗಳು ಹಾಗೂ ಜಲಧಾರೆ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಗುತ್ತಿಗೆದಾರರು ಮತ್ತು ಯೋಜನಾ ನಿರ್ವಹಣೆ ಸಮಾಲೋಚಕರೊಂದಿಗೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದರು.ಜಿಲ್ಲೆಯಲ್ಲಿ ಕುಡಿಯುವ ನೀರಿಗೆ ಯಾವುದೇ ರೀತಿಯ ಸಮಸ್ಯೆಯಾಗದಂತೆ ಸಂಬಂಧಿಸಿದ ಇಲಾಖಾ ಅಧಿಕಾರಿಗಳೊಂದಿಗೆ ನಿಯತವಾಗಿ ಹಾಗೂ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ೨೦೨೪-೨೫ನೆಯ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ ೧ರಲ್ಲಿ ಕಲ್ಪವೃಕ್ಷ ಪ್ರೌಢಶಾಲೆಯ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದಿದ್ದಾರೆ. ವಿಷಯವಾರು ಹಿಂದಿ ವಿಷಯದಲ್ಲಿ ೪ ವಿದ್ಯಾರ್ಥಿಗಳು, ಗಣಿತದಲ್ಲಿ ಒರ್ವ ವಿದ್ಯಾರ್ಥಿ ಮತ್ತು ಸಮಾಜ ವಿಜ್ಞಾನ ವಿಷಯದಲ್ಲಿ ಒರ್ವ ವಿದ್ಯಾರ್ಥಿ ೧೦೦ಕ್ಕೆ ೧೦೦ ಅಂಕಗಳನ್ನು ಪಡೆದು ಸಾಧನೆ ಮಾಡಿದ್ದಾರೆ.ಲತಾ ಕುಂಟೋಜಿಮಠ ೬೨೫ಕ್ಕೆ ೬೧೩ (ಶೇ.೯೮.೦೮) ಅಂಕಗಳನ್ನು ಪಡೆಯುವ ಮೂಲಕ ಪ್ರಥಮ ಸ್ಥಾನ, ಲಕ್ಷ್ಮಿ ಪಾಟೀಲ ೫೯೨ (ಶೇ.೯೪.೭೨) ದ್ವಿತೀಯ ಸ್ಥಾನ, ಶಿವಲಿಂಗಪ್ಪ ಕುನ್ನೂರ ೫೯೦ (ಶೇ.೯೪.೪೦) ತೃತೀಯ ಸ್ಥಾನ, ಆಲಿಯಾ ಕಣ್ಣಿ ೫೮೮ (ಶೇ.೯೪.೦೮), ಪ್ರಕೃತಿ ಬಡಿಗೇರ ೫೮೩ (ಶೇ.೯೩.೨೮), ಕೆಂಚಪ್ಪ ಗೊರಗುಂಡಗಿ ೫೭೯ (ಶೇ.೯೨.೬೪), ಸೌಮ್ಯ ಘಂಟಿ ೫೭೬ (ಶೇ.೯೨.೧೬), ಅಭಿಷೇಕ ಹೂಗಾರ ೫೭೫ (ಶೇ.೯೨), ಮಲ್ಲಿಕಾರ್ಜುನ ಹೂಗಾರ ೫೬೮ (ಶೇ.೯೦.೮೮), ಭೀಮಾಶಂಕರ ನಾಯ್ಕೋಡಿ ೫೬೩ (ಶೇ.೯೦.೦೮) ಅಂಕಗಳನ್ನು ಪಡೆದುಕೊಂಡ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.ವಿದ್ಯಾರ್ಥಿಗಳ ಈ ಸಾಧನೆಗ ಶ್ರೀ ವ್ಹಿ.ಎಸ್.ಬಿ. ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷರು, ಆಡಳಿತಾಧಿಕಾರಿಗಳು, ಮುಖ್ಯ ಗುರುಗಳು, ಸಿಬ್ಬಂದಿಗಳು…
ಮಡಿಕೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಮಹೇಶ ಮಡಿವಾಳರ ಭರವಸೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಮ್ಮ ತಾಯಿ ಹಾಗೂ ತಮ್ಮನ ಸಹಕಾರದಿಂದ ಹೆಚ್ಚಿನ ವಿದ್ಯಾಭ್ಯಾಸ ಮಾಡಲು ತುಂಬಾ ಅನುಕೂಲವಾಯಿತು. ನಮ್ಮ ಮಡಿವಾಳ ಸಮಾಜದ ಮಕ್ಕಳು ಉನ್ನತ ವಿದ್ಯಾಭ್ಯಾಸ ಮಾಡಲು ಸಹಕಾರ ಮಾಡುತ್ತೇನೆ ಎಂದು ಮುದ್ದೇಬಿಹಾಳ ತಾಲೂಕಿನ ಮಡಿಕೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಮಹೇಶ ಮಡಿವಾಳರ ಹೇಳಿದರು.ಪಟ್ಟಣದ ರಾಜರಾಜೇಶ್ವರಿ ಕಲ್ಯಾಣ ಮಂಟಪದಲ್ಲಿ ತಾಲೂಕು ಮಡಿವಾಳ ಮಾಚಿದೇವ ಸೇವಾ ಸಂಘ ವತಿಯಿಂದ ಇತ್ತೀಚಗೆ ಯುಪಿಎಸ್ಸಿ ಪರೀಕ್ಷೆಯಲ್ಲಿ ೪೮೨ನೇ ರ್ಯಾಂಕ್ ಪಡೆದ ನಿಮಿತ್ಯ ಹಮ್ಮಿಕೊಂಡ ಸನ್ಮಾನ ಸಮಾರಂಭದಲ್ಲಿ ಸಿಂದಗಿ ತಾಲೂಕಿನ ಹೊನ್ನಳ್ಳಿ ಗ್ರಾಮದ ಯುವಕ, ಮುದ್ದೇಬಿಹಾಳ ತಾಲೂಕಿನ ಮಡಿಕೇಶ್ವರ ಪ್ರಾಥಮಿಕ ಆರೋಗ್ಯ ಕೇಂದ್ರದ ಆಡಳಿತ ವೈದ್ಯಾಧಿಕಾರಿ ಡಾ.ಮಹೇಶ ಮಡಿವಾಳರ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದ ಅವರು, ನನ್ನ ಈ ಸಾಧನೆಯಲ್ಲಿ ನಮ್ಮ ಕುಟುಂಬದ ಪಾತ್ರ ಮಹತ್ವದ್ದಾಗಿದೆ. ವಿದ್ಯೆ ಎಂಬುದು ಸಾಧಕನ ಸ್ವತ್ತೇ ಹೊರತು ಸೋಮಾರಿಯ ಸ್ವತ್ತಲ್ಲ. ಮಕ್ಕಳು ಕೇವಲ ವೇಷ ಭೂಷಣಗಳ ಕಡೆಗೆ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಗರದ ಪ್ರತಿಷ್ಠಿತ ವಿದ್ಯಾ ಸಂಸ್ಥೆಯಾದ ಶ್ರೀ ಪದ್ಮರಾಜ ವಿದ್ಯಾವರ್ಧಕ ಸಂಸ್ಥೆ, ಸಾರಂಗಮಠದ ಚೆನ್ನವೀರ ಸ್ವಾಮೀಜಿ ಪ್ರೌಢಶಾಲೆಯ ವಿದ್ಯಾರ್ಥಿಗಳು ೨೦೨೪-೨೫ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆ-೧ರಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ.ಭಾಗ್ಯಶ್ರೀ ಬಿರಾದಾರ ೬೨೫ ಅಂಕಗಳಿಗೆ ೬೧೫ (ಶೇ.೯೮.೪೦) ಅಂಕಗಳು ಪಡೆದು ಪ್ರಥಮ ಸ್ಥಾನ, ರಾಕೇಶ ಜೋಗುರ ೬೧೧ (ಶೇ.೯೭.೭೬%) ದ್ವಿತೀಯ, ಸೃಷ್ಟಿ ಹಿರೇಮಠ ೫೪೯ (ಶೇ.೮೭.೮೪) ಅಂಕಗಳನ್ನು ಪಡದುಕೊಂಡು ಅತ್ಯುನ್ನತ ಶ್ರೇಣಿಯಲ್ಲಿ ಪಾಸಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ.ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಉತ್ತರಾಧಿಕಾರಿ ಡಾ.ವಿಶ್ವಪ್ರಭುದೇವ ಶಿವಾಚಾರ್ಯರು, ಮುಖ್ಯಗುರುಗಳು ಜಿ.ಜಿ.ಬಿರಾದಾರ ಸೇರಿದಂತೆ ಶಾಲೆಯ ಆಡಳಿತ ಮಂಡಳಿ ಸದಸ್ಯರು, ಬೋಧಕ-ಬೋಧಕೇತರ ಸಿಬ್ಬಂದಿಗಳು ಅಭಿನಂದಿಸಿ ಹರ್ಷ ವ್ಯಕ್ತಪಡಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ನವಬಾಗ ಇವರ ಸಂಯುಕ್ತಾಶ್ರಯದಲ್ಲಿ ನಗರದ ನವಬಾಗದಲ್ಲಿನ ಸರಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಮೇ.೦೯ರ ಬೆಳಿಗ್ಗೆ ೧೦ಗಂಟೆಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ. ಈ ಮೇಳದಲ್ಲಿ ೨೦ಕ್ಕೂ ಹೆಚ್ಚು ಸ್ಥಳೀಯ ಹಾಗೂ ವಿವಿಧ ಎಂ.ಎನ್.ಸಿ ಕಂಪನಿಗಳು ಭಾಗವಹಿಸಲಿವೆ.ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐಟಿಐ, ಡಿ.ಇಡಿ, ಬಿ.ಇಡಿ ಹಾಗೂ ಯಾವುದೇ ಪದವಿಯಲ್ಲಿ ತೇರ್ಗಡೆಯಾಗಿರುವ ೩೫ ವರ್ಷದೊಳಗಿನ ಆಸಕ್ತ ಅಭ್ಯರ್ಥಿಗಳು ತಮ್ಮ ಶೈಕ್ಷಣಿಕ ದಾಖಲಾತಿ ಸಹಿತ ಸ್ವ-ವಿವರ (ಬಯೋಡೆಟಾ)ದ ಕನಿಷ್ಟ ೧೦ ಪ್ರತಿಗಳನ್ನು ಅಗತ್ಯದಾಖಲೆಯೊಂದಿಗೆ ಈ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಅಥವಾ ಮೊ.ಸಂ: ೮೭೨೨೭೮೦೭೬೭ ಹಾಗೂ ೯೯೪೫೦೦೦೭೯೩ಗೆ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
