Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ತೆಲಗಿ ರಸ್ತೆಯಲ್ಲಿರುವ ಜಾಮೀಯಾ ಮಸೀದಿ ಮುಂಭಾಗ ಮುಸ್ಲಿಂ ಬಾಂಧವರು ಶುಕ್ರವಾರದ ಪ್ರಾರ್ಥನೆ ಮುಗಿಸಿಕೊಂಡು ಹೊರಬಂದ ನಂತರ ತೋಳಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಶುಕ್ರವಾರ ವಕ್ಫ್ (ತಿದ್ದುಪಡಿ) ಮಸೂದೆ-೨೦೨೪ ಕಾಯ್ದೆಯನ್ನು ಕೇಂದ್ರ ಸರ್ಕಾರ ರದ್ದುಪಡಿಸುವಂತೆ ಆಗ್ರಹಿಸಿ ಶಾಂತಿಯುತ ಪ್ರತಿಭಟನೆ ಮಾಡಿದರು.ಈ ಸಂದರ್ಭದಲ್ಲಿ ಜಮಾತೇ ಇಸ್ಲಾಮೀ ಹಿಂದು ಸಂಘಟನೆಯ ರಾಜ್ಯ ಕಾರ್ಯದರ್ಶಿ ಮೊಹಮ್ಮದಯುಸುಫ್ ಕಣಿ ಮಾತನಾಡಿ, ಕೇಂದ್ರ ಸರ್ಕಾರವು ಮಂಡಿಸುವ ವಕ್ಫ್ (ತಿದ್ದುಪಡಿ) ಮಸೂದೆ-೨೦೨೪ ಕಾಯ್ದೆಯು ವಕ್ ಆಸ್ತಿಗೆ ಸಂಬಂಧಿಸಿದಂತೆ ಸಂಪೂರ್ಣವಾಗಿ ವಿರೋಧವಾಗಿದೆ. ಈ ಕಾಯ್ದೆಯು ಯಾವುದೇ ಕಾರಣಕ್ಕೂ ಮಂಡನೆಯಾಗದೆ ಜಾರಿ ಬರಬಾರದು. ಇದನ್ನು ಕೇಂದ್ರ ಸರ್ಕಾರ ರದ್ದುಪಡಿಸಬೇಕು. ಈ ಕಾಯ್ದೆ ವಿರೋಧಿಸಿ ಇಂದು ರಾಷ್ಟ್ರವ್ಯಾಪಿಯಲ್ಲಿ ನಮ್ಮ ಬಾಂಧವರು ರಂಜಾನ ಹಬ್ಬದ ಕೊನೆಯ ಶುಕ್ರವಾರದ ಪ್ರಾರ್ಥನೆ ನಂತರ ತೋಳಿಗೆ ಕಪ್ಪು ಬಟ್ಟೆ ಕಟ್ಟಿಕೊಂಡು ಶಾಂತಿಯುತವಾಗಿ ಪ್ರತಿಭಟನೆ ಮಾಡುವ ಮೂಲಕ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಕೂಡಲೇ ಕೇಂದ್ರ ಸರ್ಕಾರವು ಈ ಕಾಯ್ದೆಯನ್ನು ಯಾವುದೇ ಕಾರಣಕ್ಕೂ ಜಾರಿಗೆ ತರಬಾರದು ಎಂದು ಆಗ್ರಹಿಸಿದರು.ಈ ಸಂದರ್ಭದಲ್ಲಿ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಛಾಟಿಸಿರುವುದನ್ನು ಖಂಡಿಸಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಲಿಂಗಾಯತ ಪಂಚಮಸಾಲಿ ಸಮಾಜ ಹಾಗೂ ವಿವಿಧ ಹಿಂದು ಪರ ಸಂಘಟನೆಗಳಿಂದ ಪ್ರತಿಭಟನೆ ನಡೆಯಿತು.ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಭಾವಚಿತ್ರಕ್ಕೆ ಚಪ್ಪಲಿಯಿಂದ ಹೊಡೆದು, ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದರು.ಭಾಜಪ ರಾಜ್ಯ ಅಧ್ಯಕ್ಷ ಬಿ. ವೈ. ವಿಜಯಂದ್ರ ಹಾಗೂ ಬಿ ಎಸ್ ಯಡಿಯೂರಪ್ಪ ಅವರಿಗೆ ಧಿಕ್ಕಾರ ಯತ್ನಾಳರ ಉಚ್ಛಾಟನೆ ಆದೇಶವನ್ನು ಮರಳಿ ಪಡೆಯಬೇಕು ಎಂದು ಘೋಷಣೆ ಕೂಗಿದ ಮುಖಂಡರು ನಂತರ ಬಸವೇಶ್ವರ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಟೈರಗೆ ಬೆಂಕಿ ಹಚ್ಚಿಕೆಲ ಹೊತ್ತು ರಸ್ತೆ ಸಂಚಾರ ಬಂದ್ ಮಾಡಿದರು.ಈ ಸಂಧರ್ಭದಲ್ಲಿ ಪಂಚಮಸಾಲಿ ಸಮಾಜದ ಅಧ್ಯಕ್ಷ ಬಸವರಾಜ ಗೊಳಸಂಗಿ ಮಾತನಾಡಿ, ಬಿ. ಎಸ್ .ಯಡಿಯೂರಪ್ಪ ಹಾಗೂ ಅವರ ಪುತ್ರ ವಿಜಯೇಂದ್ರನ ಪಿತ್ತೂರಿಯಿಂದಾಗಿ ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಛಾಟನೆ ಮಾಡಲಾಗಿದೆ ಗಂಭೀರ ಆರೋಪ…
ಅಂಜುಮನ್ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಸ್.ಎಂ.ಪಾಟೀಲ ಗಣಿಹಾರ ಸ್ಪಷ್ಟನೆ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ಮುಸ್ಲಿಂ ಸಮುದಾಯದ ಸರ್ವೇ ನಂಬರ್ ೧೦೨೭, ೧೦೨೯, ೮೩೪ ಮೂರು ಖಬರಸ್ತಾನಗಳಿದ್ದು, ಅವುಗಳು ಅಂಜುಮನ ಒಡೆತನದ ಆಸ್ತಿಗಳಾಗಿವೆ ಹೊರತು ವಕ್ಫ್ ಆಸ್ತಿಗಳಲ್ಲ. ಜನರಲ್ಲಿ ತಪ್ಪು ಭಾವನೆ ತುಂಬಿ ವಕ್ಫ್ ಅಧಿಕಾರಿಗಳು ಹಾಗೂ ಸ್ವಯಂ ಘೋಷಿತ ಖಬರಸ್ತಾನ ಕಮಿಟಿಯು ತಾರಾತುರಿಯಲ್ಲಿ ಜಾಗೆಯನ್ನು ಖಾಲಿ ಮಾಡಿಸಿ ಬಡಜನರ ಹೊಟ್ಟೆ ಮೇಲೆ ಬರೆ ಎಳೆಯುವ ಕೆಲಸ ಮಾಡಿದ್ದಾರೆ. ಅದಕ್ಕೆ ಅವರ ವಿರುದ್ಧ ಅಂಜುಮನ್ ಸಂಸ್ಥೆಯು ಇದೆ ೧೫ರಂದು ಹೈಕೊರ್ಟ್ನಿಂದ ತಡೆಯಾಜ್ಞೆ ತಂದಿದೆ ಎಂದು ಅಂಜುಮನ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಎಸ್.ಎಂ.ಪಾಟೀಲ ಗಣಿಹಾರ ಹೇಳಿದರು.ಪಟ್ಟಣದ ಅಂಜುಮನ ಶಿಕ್ಷಣ ಸಂಸ್ಥೆಯಲ್ಲಿ ವಕ್ಫ ಆಸ್ತಿಗಳ ಕುರಿತು ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.೧೯೩೭-೩೮ರಲ್ಲಿ ಸ್ಥಾಪನೆಯಾದ ಅಂಜುಮನ ಶಿಕ್ಷಣ ಸಂಸ್ಥೆಯ ಸ್ವಂತ ಈ ಮೂರು ಆಸ್ತಿಗಳ ನಿರ್ವಹಣೆ ಮಾಡುತ್ತಿತ್ತು. ಅದನ್ನು ಇನ್ನಷ್ಚು ಅಭಿವೃದ್ಧಿ ಪಡಿಸಲು ವಕ್ಫಗೆ ಸಂರಕ್ಷಣೆ ಮಾಡಲು ಈ ಎಲ್ಲ ಆಸ್ತಿಗಳನ್ನು ನೀಡಿದ್ದು ಅವುಗಳು ಬೋರ್ಡ್…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಮಾಜಿ ಕೇಂದ್ರ ಸಚಿವ,ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಉಚ್ಚಾಟನೆಯನ್ನು ಹೈಕಮಾಂಡ್ ಮರು ಪರಿಶೀಲನೆ ಮಾಡಿ, ರದ್ದು ಮಾಡಬೇಕೆಂದು ಜ್ಞಾನ ಭಾರತಿ ವಿದ್ಯಾ ಮಂದಿರದ ಕಾರ್ಯದರ್ಶಿ ಸತೀಶ ಹಿರೇಮಠ ಆಗ್ರಹಿಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಉತ್ತರ ಕರ್ನಾಟಕದ ಅಭಿವೃದ್ದಿ ಚಿಂತಕ, ಶಿಕ್ಷಣ ಪ್ರೇಮಿ, ಭ್ರಷ್ಟಾಚಾರ ಮತ್ತು ವಂಶವಾರು ರಾಜಕಾರಣವನ್ನು ವಿರೋಧಿಸಿ ಸರ್ವ ಸಮಾಜದ ಹಿತ ಬಯಸಿದ ಹಿರಿಯ ರಾಜಕಾರಣಿ ಇಂದಿನ ಯುವ ಪೀಳಿಗೆಗೆ ಸ್ಪೂರ್ತಿಯಾದ ಯತ್ನಾಳರ ಉಚ್ಚಾಟನೆ ಖಂಡನೀಯ. ಪಕ್ಷದ ವರಿಷ್ಠರು ಕೂಡಲೇ ಇದನ್ನು ಪರಿಶೀಲಿಸಿ ರದ್ದುಗೊಳಿಸಿ ಆದೇಶ ಹೊರಡಿಸಬೇಕು ಎಂದು ಆಗ್ರಹಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಬೇಸಿಗೆ ಅವಧಿಯಲ್ಲಿ ಜಿಲ್ಲೆಯ ಗ್ರಾಮೀಣ ಪ್ರದೇಶದವರಿಗೆ ಸತತವಾಗಿ ಉದ್ಯೋಗ ಕಲ್ಪಿಸುವ ಅಂಗವಾಗಿ ಜಿಲ್ಲಾ ಪಂಚಾಯತಿ ವತಿಯಿಂದ ದುಡಿಯೋಣ ಬಾ ಅಭಿಯಾನ ಆಯೋಜಿಸಲಾಗಿದೆ. ಮಾರ್ಚ್ ೧೫ ರಿಂದ ಜಿಲ್ಲೆಯ ೧೩ ತಾಲೂಕಿನಲ್ಲಿ ದುಡಿಯೋಣ ಬಾ ಅಭಿಯಾನ ಯಶಸ್ವಿಯಾಗಿ ಆರಂಭವಾಗಿದ್ದು, ಜೂನ್ ಮಾಹೆಯ ಅಂತ್ಯದವರೆಗೆ ಈ ಅಭಿಯಾನ ನಡೆಯಲಿದೆ ಎಂದು ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಿಷಿ ಆನಂದ ಅವರು ತಿಳಿಸಿದ್ದಾರೆ.ಒಂದು ಆರ್ಥಿಕ ವರ್ಷದಲ್ಲಿ ಒಂದು ಕುಟುಂಬಕ್ಕೆ ೧೦೦ ದಿನಗಳ ಉದ್ಯೋಗ ಪಡೆಯಲು ಅವಕಾಶವಿದೆ. ಬೇಸಿಗೆ ಅವಧಿಯಲ್ಲಿ ೧೦೦ ದಿನ ಕೆಲಸ ನಿರ್ವಹಿಸಿದ್ದಲ್ಲಿ ರೂ.೩೭,೦೦೦/- ಪಾವತಿಯಾಗುತ್ತದೆ. ಅಲ್ಲದೇ ಯೋಜನೆಯಡಿ ಪುರುಷ ಮತ್ತು ಮಹಿಳೆಯರಿಗೆ ಸಮಾನ ಕೂಲಿ ನೀಡಲಾಗುತ್ತಿದೆ. ನರೇಗಾ ಯೋಜನೆಯಡಿ ಕೂಲಿ ದರವನ್ನು ಏಪ್ರಿಲ್ ೧ ರಿಂದ ರೂ. ೩೪೯ ರಿಂದ ರೂ.೩೭೦ಕ್ಕೆ ಹೆಚ್ಚಿಸಿ ಕೇಂದ್ರ ಸರಕಾರ ಆದೇಶ ಹೊರಡಿಸಿದೆ ಎಂದು ಅವರು ಹೇಳಿದರು.ಅಭಿಯಾನದ ಉದ್ದೇಶ: ಮಹಾತ್ಮ ಗಾಂಧಿ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಉತ್ತರ ಕರ್ನಾಟಕದ ಅಭಿವೃದ್ಧಿಗೆ, ಪಂಚಮಸಾಲಿ ಸಮಾಜದ ಮೀಸಲಾತಿಗೆ, ಹಿಂದೂ ಪರ ನಿಲುವುಗಳಿಗೆ ಯತ್ನಾಳ ಅವರು ಯಾವಾಗಲೂ ಮುಂದೆ ಬಂದಿದ್ದಾರೆ. ಎಲ್ಲ ಜಾತಿ ಸಮಾಜದವರೊಂದಿಗೆ ನಿಂತಿದ್ದಾರೆ. ಈಗ ಎಲ್ಲರೂ ಅವರ ಬೆಂಬಲಕ್ಕೆ ನಿಲ್ಲಲಿದ್ದಾರೆ ಎಂದು ಪಂಚಮಸಾಲಿ ಸಮಾಜದ ತಾಲೂಕಾಧ್ಯಕ್ಷ ಎಂ.ಎಂ.ಹಂಗರಗಿ ಹೇಳಿದ್ದಾರೆ.ಸಿಂದಗಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ೨ಎ ಮೀಸಲಾತಿ ಹೋರಾಟ ಸಮಿತಿ ರಾಷ್ಟ್ರೀಯ ಗೌರವಾಧ್ಯಕ್ಷ, ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿಯಿಂದ ಉಚ್ಚಾಟಿಸಿರುವುದನ್ನು ಖಂಡಿಸಿ ಶುಕ್ರವಾರ ಅಖಿಲ ಭಾರತ ಪಂಚಮಸಾಲಿ ಸಮಾಜ ತಾಲೂಕು ಘಟಕ ಸಿಂದಗಿ ವತಿಯಿಂದ ಪ್ರತಿಭಟನೆ ನಡೆಸಿ ಮಾತನಾಡಿದ ಅವರು, ಪಕ್ಷದಲ್ಲಿರುವ ಕೆಲವರ ಹೊಂದಾಣಿಕೆ ರಾಜಕಾರಣ, ಭ್ರಷ್ಟಾಚಾರ, ಕುಟುಂಬ ರಾಜಕಾರಣ, ವಿರೋಧಿಸಿದ್ದಕ್ಕೆ ತಳಮಟ್ಟದಿಂದ ಪಕ್ಷವನ್ನು ಸಂಘಟಿಸಿದ ಯತ್ನಾಳರನ್ನು ಬಿಜೆಪಿ ಪಕ್ಷದ ಕೇಂದ್ರ ವರಿಷ್ಠರು ೬ವರ್ಷಗಳ ಕಾಲ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿರುವುದು ಖೇದಕರ ಸಂಗತಿ. ಪಂಚಮಸಾಲಿ ಸಮಾಜದ ೨ಎ ಮೀಸಲಾತಿಗಾಗಿ ವಿಧಾನ ಸೌಧದ ಒಳಗೂ ಮತ್ತು ಹೊರಗೂ ಸಮಾಜದ ಪರವಾಗಿ ಧ್ವನಿ ಎತ್ತದ ಏಕೈಕ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಯುಗಾದಿ ಹಬ್ಬದ ಪ್ರಯುಕ್ತ ಶ್ರೀಶೈಲ ಶ್ರೀಮಲ್ಲಿಕಾರ್ಜುನ ಜಾತ್ರೆ ಹಿನ್ನೆಲೆಯಲ್ಲಿ ಯಾತ್ರಾರ್ಥಿಗಳ ಅನುಕೂಲಕ್ಕಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಜಯಪುರ ವಿಭಾಗದಿಂದ ವಿಶೇಷ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.ದಿನಾಂಕ:೩೦-೦೩-೨೦೨೫ ರಂದು ಚಂದ್ರಮಾನ ಯುಗಾದಿಯಂದು ಶ್ರೀಶೈಲದಿಂದ ವಿಜಯಪುರಕ್ಕೆ ಹೆಚ್ಚಿನ ಜನದಟ್ಟಣೆಯಾಗಬಹುದಾದ ಹಿನ್ನೆಲೆಯಲ್ಲಿ ಯಾತ್ರಾರ್ಥಿಗಳ ಪ್ರಯಾಣದ ಅನುಕೂಲಕ್ಕಾಗಿ ಶ್ರೀಶೈಲದಲ್ಲಿ ೨೫೦ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಸಾರಿಗೆ ಕಾರ್ಯಾಚರಣೆ ವ್ಯವಸ್ಥೆ ಮಾಡಲಾಗಿದೆ. ಅದರಂತೆ ಯಾತ್ರಾರ್ಥಿಗಳು ಮಂತ್ರಾಲಯ ಹಾಗೂ ಮಹಾನಂದಿ ದರ್ಶನ ಮಾಡಲು ಇಚ್ಚಿಸಿದಲ್ಲಿ, ಮಹಾನಂದಿ ಹಾಗೂ ಮಂತ್ರಾಲಯ ಮಾರ್ಗವಾಗಿ ಬಸ್ ಕಾರ್ಯಾಚರಣೆ ಮಾಡಲಾಗುವುದು.ಈ ಕುರಿತು ಹೆಚ್ಚಿನ ಮಾಹಿತಿಗಾಗಿ ವಿಜಯಪುರ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಶ್ರೀಶೈಲದ ಜಾತ್ರಾ ಸ್ಥಳದಲ್ಲಿ ಬಸ್ ನಿಲ್ದಾಣದ ಜಾತ್ರಾ ಉಸ್ತುವಾರಿ ಅಧಿಕಾರಿ ಮೊಬೈಲ್ ಸಂಖ್ಯೆ: ೭೭೬೦೯೯೨೨೬೦, ವಿಭಾಗೀಯ ಸಾರಿಗೆ ಅಧಿಕಾರಿ ಮೊಬೈಲ್ ಸಂಖ್ಯೆ: ೭೭೬೦೯೯೨೨೫೨, ವಿಜಯಪುರ ಕೇಂದ್ರ ಬಸ್ ನಿಲ್ದಾಣ ಮೊಬೈಲ್ ಸಂಖ್ಯೆ: ೭೭೬೦೯೯೨೨೫೮, ಶ್ರೀಶೈಲಂ ಜಾತ್ರಾ ಬಸ್ ನಿಲ್ದಾಣದ ಸಾರಿಗೆ ನಿಯಂತ್ರಕರ ಮೊಬೈಲ್…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭಾರತೀಯ ನೌಕಾಪಡೆಯಲ್ಲಿ ಅವಿವಾಹಿತ ಪುರುಷ ಹಾಗೂ ಮಹಿಳಾ ಅಭ್ಯರ್ಥಿಗಳಿಂದ ಅಗ್ನಿವೀರ್ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಆಸಕ್ತ ಅಭ್ಯರ್ಥಿಗಳು ಇಲಾಖಾ ವೆಬ್ಸೈಟ್ http://joinindiannavy.gov.inನಲ್ಲಿ ದಿನಾಂಕ ೨೯-೦೩-೨೦೨೫ ರಿಂದ ದಿನಾಂಕ ೧೦-೦೪-೨೦೨೫ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಕಚೇರಿಯ ದೂರವಾಣಿ ಸಂಖ್ಯೆ :೦೮೩೫೨೨೫೦೯೧೩ ಅಥವ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತದ ವತಿಯಿಂದ ಶ್ರೀ ಅಗ್ನಿ ಬನ್ನಿರಾಯಸ್ವಾಮಿ ಜಯಂತಿ ಕಾರ್ಯಕ್ರಮವನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಮಾ.೨೮ ರಂದು ಸರಳವಾಗಿ ಹಾಗೂ ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿಜಯಪುರ ಉಪ ವಿಭಾಗಾಧಿಕಾರಿಗಳಾದ ಗುರುನಾಥ ದಡ್ಡೆ ಅವರು ಮಹನೀಯರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತಿಯ ಸಹಾಯಕ ಕಾರ್ಯದರ್ಶಿಗಳಾದ ಅನಸೂಯಾ ಚಲವಾದಿ, ಅಗ್ರಣೀಯ ಬ್ಯಾಂಕಿನ ವ್ಯವಸ್ಥಾಪಕರಾದ ನೇತಾಜಿ ಗೌಡರ್, ಖಾದಿ ಮಂಡಳಿಯ ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ ಎನ್.ಡಿ.ಕಾಂಬ್ಳೆ, ಮಹಾನಗರ ಪಾಲಿಕೆಯ ಉಪಾಯುಕ್ತರಾದ ವೈ.ಎಚ್.ನಾರಾಯಣಕರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರಾದ ಸಂತೋಷ ಭೋವಿ, ಅರವಿಂದ ಕನ್ನೂರು ಸೇರಿದಂತೆ ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳಿದ್ದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಪೌರ ನಿಗಮಗಳ ಅಧಿನಿಯಮದ ಅನ್ವಯ ಸ್ವತ್ತಿನ ಮಾರ್ಗಸೂಚಿ ಮೌಲ್ಯದ ಪರಿಷ್ಕರಣೆಯಾಗದ ವರ್ಷದಲ್ಲಿ ಪ್ರತಿ ಹಣಕಾಸು ವರ್ಷಕ್ಕೆ ಶೇ.೩ ರಿಂದ ೫ರಷ್ಟು ಆಸ್ತಿ ತೆರಿಗೆಯನ್ನು ಹೆಚ್ಚಳ ಮಾಡಲು ಅವಕಾಶ ಇರುವುದರಿಂದ ೨೦೨೫-೨೬ನೇ ವರ್ಷಕ್ಕೆ ಅನ್ವಯವಾಗುವಂತೆ ದಿನಾಂಕ:೦೧-೦೪-೨೦೨೫ ರಿಂದ ೩೧-೦೩-೨೦೨೬ರವರೆಗೆ ಆಸ್ತಿ ತೆರಿಗೆಯನ್ನು ಪರಿಷ್ಕರಣೆ ಮಾಡಲಾಗಿದೆ ಎಂದು ಮಹಾನಗರ ಪಾಲಿಕೆಯ ಆಯುಕ್ತರಾದ ವಿಜಯಕುಮಾರ ಮೆಕ್ಕಳಕಿ ತಿಳಿಸಿದ್ದಾರೆ.ವಿಜಯಪುರ ಮಹಾನಗರ ಪಾಲಿಕೆಯ ಆಸ್ತಿ ತೆರಿಗೆಯನ್ನು ದಿನಾಂಕ:೦೧-೦೪-೨೦೨೫ ರಿಂದ ಜಾರಿಗೆ ಬರುವಂತೆ ವಾಸದ ಕಟ್ಟಡಗಳು, ವಾಣಿಜ್ಯ ಕಟ್ಟಡಗಳು, ಖಾಲಿ ನಿವೇಶನಗಳು ಹಾಗೂ ಕೈಗಾರಿಕಾ ಪ್ರದೇಶಕ್ಕೆ ಶೇ.೩ರಷ್ಟು ಹೆಚ್ಚಿಸಿ ಪರಿಷ್ಕರಣೆ ಮಾಡಲಾಗಿದೆ. ಪಾಲಿಕೆಯ ೨೦೨೫-೨೬ಕ್ಕೆ ಅನ್ವಯವಾಗುವಂತೆ ಮೂಲ ಆಸ್ತಿ ತೆರಿಗೆಯಲ್ಲಿ ಶೇ.೩ರಷ್ಟು ಆಸ್ತಿ ತೆರಿಗೆ ಹೆಚ್ಚಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
