Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಬಿಜೆಪಿ ಹಿರಿಯ ನಾಯಕ ಪಂಚಮಸಾಲಿ ಸಮಾಜದ ನಾಯಕ, ಕೇಂದ್ರದ ಮಾಜಿ ಸಚಿವರು ಹಾಗೂ ವಿಜಯಪುರ ನಗರ ಹಾಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿ ಹೈ ಕಮಾಂಡ್ ಉಚ್ಚಾಟನೆ ಮಾಡಿದ್ದು. ಕೂಡಲೇ ಈ ಕ್ರಮವನ್ನು ಮರು ಪರಿಶೀಲಿಸಬೇಕು ಎಂದು ಬಿಜೆಪಿ ಯುವ ಮುಖಂಡ ಚೇತನ.ಎಸ್.ರಾಂಪೂರ ಕೋರಹಳ್ಳಿ ತಿಳಸಿದ್ದಾರೆ.ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಉತ್ತರ ಕರ್ನಾಟಕ ಅಭಿವೃದ್ಧಿ, ಭ್ರಷ್ಟಾಚಾರ ವಿರೋಧ, ವಂಶವಾದ ರಾಜಕಾರಣದ ವಿರೋಧ ಸರ್ವ ಸಮುದಾಯದ ಹಿತ ಬಯಸುವ ಯತ್ನಾಳ ಗೌಡ್ರು ಯುವಕರ ಆಶಾಕಿರಣವಾಗಿದ್ದು, ಹಾಗಾಗಿ ಪಕ್ಷದ ವರಿಷ್ಠರು ಕೂಡಲೇ ಈ ಉಚ್ಚಾಟನೆ ಕ್ರಮವನ್ನು ರದ್ದುಗೊಳಿಸಬೇಕೆಂದು ಪತ್ರಿಕಾ ಪ್ರಕಟಣೆಯ ಮೂಲಕ ಆಗ್ರಹಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪ್ರಸಕ್ತ ಸಾಲಿನ ೬ನೆಯ ವರ್ಗದ ಪ್ರವೇಶಕ್ಕಾಗಿ ಜ.೧೮ರಂದು ನಡೆದ ಪರೀಕ್ಷೆಗಳ ಫಲಿತಾಂಶ ಪ್ರಕಟಗೊಂಡಿದ್ದು, ಸಿಂದಗಿ ನಗರದ ಪ್ರತಿಷ್ಠಿತ ಆರ್.ಡಿ.ಕುಲಕರ್ಣಿ ಕೋಚಿಂಗ್ ಕ್ಲಾಸ್ನ ೨೩ ವಿದ್ಯಾರ್ಥಿಗಳು ಜವಾಹರ ನವೋದಯ ಶಾಲೆಗಳಿಗೆ ಆಯ್ಕೆಯಾಗುವ ಮೂಲಕ ಕೋಚಿಂಗ್ ಕ್ಲಾಸ್ಗೆ ಕೀರ್ತಿ ತಂದಿದ್ದಾರೆ ಎಂದು ಆರ್.ಡಿ.ಕುಲಕರ್ಣಿ ಹೇಳಿದರು.ವಿದ್ಯಾರ್ಥಿಗಳಾದ ಸತೀಶ ಗಡ್ಡಿ, ಪ್ರಮೋದ ತಾಳಕೇರಿ, ಜೀವನ ಯಂಕಂಚಿ, ಆರ್ಯನ ಕಲಶೆಟ್ಟಿ, ಸಾಮ್ರಾಟ ಪೂಜಾರಿ, ಪ್ರೀತಮ ಬೋಸಲೆ, ಸುದನರಾಜ ಪವಾರ, ಆದರ್ಶ ಕಲ್ಮನಿ, ಅಭಯ ಕಲ್ಮನಿ, ಗುರುರಾಜ ಬಡದಾಳ, ರಾಜು ಇಂಗಳೆ, ಶರಣು ಪೂಜಾರಿ, ಶರಣಗೌಡ ಕೊಣಸಿರಸಗಿ, ಹರ್ಷ ಪೋಲಿಸಪಾಟೀಲ, ಸಮರ್ಥ ಚನ್ನಾ, ಮಾಯಾವತಿ ಚವ್ಹಾಣ, ನಮ್ರತಾ ಕತ್ತಿ, ಚೈತನ್ಯ ತೊರವಿ, ವೇದಾ ಕರ್ಕಳ್ಳಿಮಠ, ಅನುಷ್ಕಾ ಸೋಮನಕಟ್ಟಿ, ಸ್ವಾತಿ ಕೊಳಕೂರ, ಶ್ರಾವಣಿ ಹಿರೇಮಠ, ತನುಜಾ ಚವ್ಹಾಣ ಆಯ್ಕೆಯಾಗಿದ್ದಾರೆ.ಮಕ್ಕಳ ಈ ಸಾಧನೆಗೆ ಕೋಚಿಂಗ ಶಾಲಾ ಸಂಚಾಲಕ ಆರ್.ಡಿ.ಕುಲಕರ್ಣಿ, ಪಿ.ಡಿ.ಕುಲಕರ್ಣಿ ಸಂಸ್ಥೆಯ ಆಡಳಿತ ಮಂಡಳಿಯ ಸದಸ್ಯರು, ಮುಖ್ಯಗುರುಮಾತೆ ಎಸ್.ಆಯ್.ಅಸ್ಕಿ ಮತ್ತು ಎಂ.ಪಿ.ಬುಕ್ಕಾ ಸೇರಿದಂತೆ ಬೋಧಕ-ಬೋಧಕೇತರ ಸಿಬ್ಬಂದಿಗಳು ಹರ್ಷ ವ್ಯಕ್ತಪಡಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಜ್ಯೋತಿರ್ಲಿಂಗಗಳಲ್ಲಿ ಒಂದಾದ ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ದೇವರ ಜಾತ್ರಾ ಮಹೋತ್ಸವವು ಪ್ರತಿ ವರ್ಷ ಯುಗಾದಿ ಅಮವಾಸ್ಯೆ ದಿನದಿಂದ ಜರುಗುತ್ತದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಿಂದ ಲಕ್ಷಾಂತರ ಭಕ್ತರು ಶ್ರೀಶೈಲ ಮಲ್ಲಿಕಾರ್ಜುನ ಸ್ವಾಮಿ ದೇವರ ದರ್ಶನಕ್ಕೆ ತೆರಳುತ್ತಾರೆ ಎಂದು ಸಿಂದಗಿ ಬಿಜೆಪಿ ಮುಖಂಡ ಶ್ರೀಶೈಲಗೌಡ ಬಿರಾದಾರ ಮಾಗಣಗೇರಿ ಹೇಳಿದರು.ಸಿಂದಗಿ ಪಟ್ಟಣದ ಸ್ನೇಹಿತರ ಬಳಗದ ವತಿಯಿಂದ ಆಂದ್ರ ಪ್ರದೇಶದ ಶ್ರೀಶೈಲದಲ್ಲಿ ಅನ್ನಪ್ರಸಾದ ನೆರವೇರಿಸುವುದಕ್ಕಾಗಿ ಸ್ನೇಹಿತರ ಬಳಗದಿಂದ ಭಕ್ತಾಧಿಗಳು ಶ್ರೀಶೈಲಕ್ಕೆ ತೆರಳುತ್ತಿರುವ ಸಂದರ್ಭದಲ್ಲಿ ಮಾತನಾಡಿದರು.ವಿಶೇಷವಾಗಿ ಉತ್ತರ ಕರ್ನಾಟಕದಿಂದ ಅಪಾರ ಸಂಖ್ಯೆಯಲ್ಲಿ ಭಕ್ತರು ಹೋಗುವುದು ವಾಡಿಕೆಯಾಗಿದೆ. ಹೀಗಾಗಿ ಪ್ರತಿ ವರ್ಷ ನಮ್ಮ ಸ್ನೇಹಿತರ ಬಳಗದಿಂದ ಶ್ರೀಶೈಲಕ್ಕೆ ಆಗಮಿಸುವ ಭಕ್ತರಿಗೆ ಅನ್ನ ಪ್ರಸಾದ ಸೇವೆಯನ್ನು ನೆರವೇರಿಸುತ್ತಾ ಬಂದಿದ್ದು, ಈ ನಿಟ್ಟಿನಲ್ಲಿ ಶ್ರೀಶೈಲಕ್ಕೆ ತೆರಳುತ್ತಿರುವುದಾಗಿ ತಿಳಿಸಿದರು.ಈ ವೇಳೆ ಗುರುಸಂಗಪ್ಪ ಪಟ್ಟಣಶೆಟ್ಟಿ, ನಿಂಗಪ್ಪ ಮುಂಡೇವಾಡಗಿ, ರವಿ ಬಿರಾದಾರ, ದವಲತರಾಯಗೌಡ ಮನ್ನಾಪೂರ, ವಿಜು ಪಟ್ಟಣಶೆಟ್ಟಿ, ಚನ್ನು ಮುಂಡೇವಾಡಗಿ, ಉಮೇಶ ಜೋಗೂರ, ಮಲ್ಲೇಶಪ್ಪ ಕುಂಬಾರ, ರುದ್ರಯ್ಯ ಮಠ, ಗುರುಪ್ಪ ಬಡಿಗೇರ,…
ಉದಯರಶ್ಮಿ ದಿನಪತ್ರಿಕೆ ಆಲಮೇಲ: ವಿಜಯಪುರ ಶಾಸಕ ಕಟ್ಟ ಹಿಂದೂತ್ವವಾದಿ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಚಾಟನೆ ಮಾಡಿರುವ ನಿರ್ಧಾರವನ್ನು ಹೈಕಮಾಂಡ ವಾಪಸ ಪಡೆದುಕೊಳ್ಳಬೇಕು ಇಲ್ಲದಿಂದ ಮುಂಬರುವ ದಿನಗಳಲ್ಲಿ ಬಿಜೆಪಿ ಪಕ್ಷಕ್ಕೆ ತಕ್ಕ ಉತ್ತರ ನೀಡಬೇಕಾಗುತ್ತದೆ ಎಂದು ಆಲಮೇಲ ಬಿಜೆಪಿ ಹಾಗೂ ಹಿಂದೂ ಯುವ ಕಾರ್ಯಕರ್ತರು ಪ್ರತಿಭಟಿಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದರು.ಗುರುವಾರ ಪಟ್ಟಣದ ಬಿಜೆಪಿ ಹಾಗೂ ಹಿಂದೂ ಯುವ ಕಾರ್ಯಕರ್ತರು ಬಸನಗೌಡ ಪಾಟೀಲ ಯತ್ನಾಳ ಅವರನ್ನು ಉಚ್ಚಾಟಿಸಿರುವದನ್ನು ಖಂಡಿಸಿ ಪಟ್ಟಣದ ಮೇನ ಬಜಾರದಿಂದ ಬಸ್ ನಿಲ್ದಾರಣದ ಹತ್ತರದ ಬಸವೇಶ್ವರ ವೃತ್ತದ ವರೆಗೆ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡು ಯಡಿಯುರಪ್ಪ ಹಾಗೂ ವಿಜಯೇಂದ್ರ ಅವರ ಭಾವಚಿತ್ರಕ್ಕೆ ಕಪ್ಪು ಮಸಿ ಬಳಿದು ಇಬ್ಬರ ಭಾವಚಿತ್ರ ನೆನಕ್ಕೆ ಒಗೆದು ಕಾಲಿಂದ ತಿಳಿದು ಆಕ್ರೋಶ ವ್ಯೆಕ್ತಪಡಿಸಿದರು.ಯುವ ಮುಖಂಡ ಕಮಲಾಕರ ಪತ್ತಾ ಮಾತನಾಡಿ ಬಸನಗೌಡ ಪಾಟೀಲ ಯತ್ನಾಳ ಅವರು ಸದಾ ಪಕ್ಷದ ಪರವಾಗಿ ಕೆಸಲ ಮಾಡಿದವರು ವೈಯಕ್ತಿಕವಾಗಿ ವಿರೋದಿಸಿದ್ದಾರೆ ಹೊರತು ಪಕ್ಷದ ವಿರುದ್ದ ಯಾವುದೆ ಚಟುವಟಿಕೆ ಮಾಡದಿರುವರನ್ನು ಉಚ್ಚಾಟಿಸಿರುವದು…
ಉದಯರಶ್ಮಿ ದಿನಪತ್ರಿಕೆ ಇಂಡಿ: ಬಡವರ ಹಿಂದುಪರ ಹೋರಾಟಗಾರರಾದ ಶಾಸಕ ಬಸನಗೌಡ ಪಾಟೀಲ ಯತ್ನಳ ಇವರ ಉಚ್ಚಾಟನೆ ಖಂಡಿಸಿ ಇಂಡಿಯಲ್ಲಿ ಅಭಿಮಾನಿ ಗಳು ಪ್ರತಿಭಟನೆ ನಡೆಸಿ ರಸ್ತೆ ತಡೆ ಮಾಡಿದರು.ಪ್ರತಿಭಟನೆ ಬಸವೇಶ್ವರ ವೃತ್ತದಲ್ಲಿ ನಡೆದು ಅಲ್ಲಿ ರಸ್ತೆ ತಡೆ ಕೂಡ ಮಾಡಿದರು.ಅಲ್ಲಿ ಮಾತನಾಡಿದ ಶ್ರೀಧರ ಕ್ಷತ್ರಿ ಬಿಜೆಪಿಯಿಂದ ಬಸನಗೌಡ ಪಾಟೀಲ ಯತ್ನಾಳರನ್ನುಆರು ವರ್ಷ ಉಚ್ಚಾಟನೆ ಮಾಡಿರುವ ಕ್ರಮ ಸರಿಯಲ್ಲ.ವಂಶಾಡಳಿತ, ಭ್ರಷ್ಟಾಚಾರ, ಪಕ್ಷದೊಳಗೆ ಸುಧಾರಣೆ, ಏಕ ವ್ಯಕ್ತಿ ಶ್ರೇಷ್ಠ ಭಾವ, ಹಾಗೂ ಉತ್ತರ ಕರ್ನಾಟಕದ ಬಗ್ಗೆ ಮಾತನಾಡಿದ್ದಕ್ಕೆ ಅವರನ್ನು ಉಚ್ಚಾಟಿಸಲಾಗಿದೆ. ಅವರು ಹಿಂದು ಫೈರ ಬ್ರಾಂಡ ಆಗಿದ್ದಾರೆ ಎಂದರು.ಅಭಿಮಾನಿ ಬಳಗದ ವಿನೋದ ಹದಗಲ್ಲ, ಅಕ್ಷಯ ಪಾಟೀಲ, ಆನಂದ ದೇವರ, ರತನ ಹಲವಾಯಿ, ಶರಣಗೌಡ ಬಂಡಿ, ನಾಗರಾಜ ದಶವಂತ, ಅಂಬಣ್ಣ ಕವಟಗಿ, ಅಂಬಣ್ಣ ಕೌಟಗಿ, ರವಿಗೌಡ ಪಾಟೀಲ, ಶಿವು ತಾಂಬೆ, ಚಂದ್ರಶೇಖರ ದೇವರ, ಶಾಂತೇಶ ಕ್ಷತ್ರಿ, ಶಾಂತು ಪಾಸೋಡಿ, ಹರೀಶ ಆಳಂದಿಕರ, ಮಹೇಶ ಕುಂಬಾರ ಮತ್ತಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ಯಾದಗಿರಿ: ನಾರಾಯಣಪುರ ಬಲ, ಎಡದಂಡೆ ಕಾಲುವೆಗೆ ಏ. 15 ರವರೆಗೆ ನೀರು ಹರಿಸುವಂತೆ ಆಗ್ರಹಿಸಿ, ಬುಧವಾರ ನಾರಾಯಣಪುರ ಕೆಬಿಜೆಎನ್ ಎಲ್ ಮುಖ್ಯ ಅಭಿಯಂತರ ಕಚೇರಿ ಮುಂಭಾಗ ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ನರಸಿಂಹ ನಾಯಕ ರಾಜುಗೌಡ ನೇತೃತ್ವದಲ್ಲಿ ವಿವಿಧ ಪಕ್ಷದ ಮುಖಂಡರು, ರೈತ ಸಂಘಟನೆ ಹಾಗೂ ಕನ್ನಡಪರ ಸಂಘಟನೆ ಮುಖಂ ಡರು ಬೃಹತ್ ಟ್ರ್ಯಾಕ್ಟರ್ ರ್ಯಾಲಿ ನಡೆಸುವ ಮೂಲಕ ಪ್ರತಿಭಟನೆ ನಡೆಸಿದರು.ಬೆಳಗ್ಗೆ ಹುಣಸಗಿ ಪಟ್ಟಣದಿಂದ ಹೊರಟ ನೂರಾರು ಟ್ರ್ಯಾಕ್ಟರ್ಗಳು ನಾರಾಯಣಪುರ ಜಲಾಶಯದವರೆಗೆ ಬಂದು ತಲುಪಿದವು. ದಾರಿಯುದ್ದಕ್ಕೂ ರೈತರು ಟ್ರ್ಯಾಕ್ಟರ್ಗಳಲ್ಲಿ ನಿಂತುಕೊಂಡು ಹಸಿರು ಟವೆಲ್ ಬೀಸುವ ಮೂಲಕ ಹೋರಾಟ ನಿರತರಿಗೆ ಸ್ಫೂರ್ತಿ ತುಂಬಿದರು. ರಾತೋರಾತ್ರಿ ತೆಲಂಗಾಣಾಕ್ಕೆ ನೀರು ಹರಿಸಿರುವ ರಾಜ್ಯ ಸರಕಾರದ ವಿರುದ್ಧ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.ನಂತರ ಕೆಬಿಜೆಎನ್ ಎಲ್ ಕಚೇರಿ ಮುಂಭಾಗ ನಡೆದ ಧರಣಿ ವೇಳೆ ಮಾಜಿ ಸಚಿವ, ಬಿಜೆಪಿ ರಾಜ್ಯ ಉಪಾಧ್ಯಕ್ಷ ರಾಜುಗೌಡ ಮಾತನಾಡಿ, ನಾರಾಯಣಪುರ ಎಡದಂಡೆ ಮುಖ್ಯ ಕಾಲುವೆಗೆ ನೀರು ಸ್ಥಗಿತಗೊಳಿಸಿದ್ದರಿಂದ ರೈತರಿಗೆ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರನ್ನು ಬಿಜೆಪಿ ಪಕ್ಷದಿಂದ ಉಚ್ಛಾಟಿಸಿದ್ದನ್ನು ಧಿಕ್ಕರಿಸಿ ಬಿಜೆಪಿ ವಿಜಯಪುರ ಜಿಲ್ಲಾ ಕಾರ್ಯದರ್ಶಿ ಸಿದ್ದು ಹೆಬ್ಬಾಳ ತಮ್ಮ ಹುದ್ದೆಗೆ ರಾಜೀನಾಮೆ ಸಲ್ಲಿಸಿದ್ದಾರೆ.ರಾಜೀನಾಮೆ ಪತ್ರವನ್ನು ಪತ್ರಿಕೆಗೆ ನೀಡಿ ಮಾತನಾಡಿದ ಅವರು ಯತ್ನಾಳರು ರಾಜ್ಯ ಬಿಜೆಪಿಯಲ್ಲಿ ಗಟ್ಟಿ ಧ್ವನಿಯಾಗಿದ್ದರು. ನೇರನುಡಿಯ ಮೂಲಕ ರಾಜ್ಯದ ಜನತೆಯ ಮನಗೆದ್ದಿದ್ದರು. ಕಳಂಕ ರಹಿತವಾಗಿದ್ದ ಅವರನ್ನು ಪಕ್ಷದಿಂದ ಉಚ್ಛಾಟಿಸಿದ್ದು ನನಗೆ ನೋವು ತಂದಿದೆ. ಕಾರಣ ಅವರನ್ನು ಬೆಂಬಲಿಸಿ ನಾನು ನನ್ನ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ ಎಂದರು.
ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ನೀರಿನ ಸುಸ್ಥಿರ ನಿರ್ವಹಣೆಯ ಬಗ್ಗೆ, ಜಾಗತಿಕ ನೀರಿನ ಬಿಕ್ಕಟ್ಟಿನ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಜೀವಜಲ ಸಂರಕ್ಷಿಸಲು ವಿದ್ಯಾರ್ಥಿಗಳು ಮುಂದಾಗಬೇಕಿದೆ ಎಂದು ಪ್ರಾಂಶುಪಾಲ ಡಾ ನಾಗಪ್ಪ ಚಾವಲ್ಕರ್ ಹೇಳಿದರು.ಪಟ್ಟಣದ ಶ್ರೀಮತಿ ಗಂಗೂಬಾಯಿ ಶಾಂತಗೌಡ ಪೋಲೀಸ್ ಪಾಟೀಲ್ ಮೆಮೋರಿಯಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕೆಂಭಾವಿ, ಹಾಗೂ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ಕಾಲೇಜು ಶಿಕ್ಷಣ ಇಲಾಖೆ ಸಹಯೋಗದಲ್ಲಿ ಗುರುವಾರ ಹಮ್ಮಿಕೊಂಡಿದ್ದ ವಿಶ್ವಜಲ ದಿನದಂದು ವಿಶ್ವದ ಬೃಹತ್ ಪ್ರತಿಜ್ಞಾವಿಧಿ ಅಭಿಯಾನ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಜಗದ ಜೀವಿಗಳು ಜೀವಿಸಲು ಜೀವಜಲ ಜೀವನಾಧಾರವಾಗಿದೆ, ಜೀವಜಲವನ್ನು ಹಿತಮಿತವಾಗಿ ಬಳಕೆ ಮಾಡೋಣಾ ಎಂದವರು, ನೀರನ್ನು ಮಹತ್ವ, ನೀರಿನ ಮೌಲ್ಯೀಕರಣ, ನೀರಿನ ಬಗ್ಗೆ ಜಾಗೃತಿ ಮೂಡಿಸುವ ಈ ದಿನವನ್ನು ಪ್ರಪಂಚದಾದ್ಯಂತ ಆಚರಿಸಲಾಗುತ್ತಿದೆ, ನೀರಿನ ಸಂರಕ್ಷಣೆ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಉತ್ತೇಜಿಸುವ ಸರ್ಕಾರದ ಅಭಿಯಾನ ಕಾರ್ಯಕ್ರಮಕ್ಕೆ ನಾವೆಲ್ಲರೂ ಕೈಜೋಡಿಸೋಣ ಎಂದು ಹೇಳಿದರು.ರಾಷ್ಟ್ರೀಯ ಸೇವಾ ಯೋಜನಾಧಿಕಾರಿ ಡಾ ಸಿದ್ದಲಿಂಗ ರಾಠೋಡ್ ಪ್ರತಿಜ್ಞಾವಿಧಿ…
ಕುಟುಂಬ ರಾಜಕಾರಣದಲ್ಲಿ ಮುಳುಗಿದ ಬಿಜೆಪಿ | ನೇಶನ್ ಫಸ್ಟ್, ಪಾರ್ಟಿ ನೆಕ್ಸ್ಟ್, ಸೆಲ್ಫ್ ಲಾಸ್ಟ್ ತತ್ವದಡಿ ಕೆಲಸ | ಶಾಸಕ ಬಸನಗೌಡ ಪಾಟೀಲ ಸ್ಪಷ್ಟನೆ ಬೆಂಗಳೂರು: ಕಾರ್ಯಕರ್ತರ ಪಕ್ಷ ಎಂದು ಹೆಸರುವಾಸಿಯಾಗಿದ್ದ ಭಾರತೀಯ ಜನತಾ ಪಕ್ಷ ಈಗ ಕುಟುಂಬ ರಾಜಕಾರಣದಲ್ಲಿ ಮುಳುಗಿರುವುದು ವಿಷಾದನೀಯ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ಯತ್ನಾಳ ಹೇಳಿದ್ದಾರೆ.ಗುರುವಾರ ಈ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಅವರು, ಕೆಲ ರಾಜಕೀಯ ಪಟ್ಟಭದ್ರರು, ಅಡ್ಜಸ್ಟ್ಮೆಂಟ್ ರಾಜಕಾರಣದ ಹರಿಕಾರರಿಂದ ಲೋಕ ಸಭಾ ಚುನಾವಣೆಯಲ್ಲಿ ಪಕ್ಷಕ್ಕೆ ತೀವ್ರ ಹಿನ್ನಡೆಯಾಯಿತು. ಕಲ್ಬುರ್ಗಿ, ರಾಯಚೂರು, ಬಳ್ಳಾರಿ, ಚಿಕ್ಕೋಡಿಯಲ್ಲಿ ಆದ ಸೋಲಿನ ಪರಾಮರ್ಶೆಯನ್ನು ಹೈ ಕಮಾಂಡ್ ಮಾಡದೆ ಇರುವುದು ಕಲ್ಯಾಣ ಕರ್ನಾಟಕದಲ್ಲಿ ಪಕ್ಷದ ಅವನತಿಗೆ ಕಾರಣವಾಗಿದೆ. ಕಾರ್ಯಕರ್ತರ ಪಕ್ಷ ಎಂದು ಹೆಸರುವಾಸಿಯಾಗಿದ್ದ ಭಾರತೀಯ ಜನತಾ ಪಕ್ಷ ಈಗ ಕುಟುಂಬ ರಾಜಕಾರಣದಲ್ಲಿ ಮುಳುಗಿರುವುದು ವಿಷಾದನೀಯ ಎಂದು ಬೇಸರ ಹೊರಹಾಕಿದ್ದಾರೆ.ಪಕ್ಷದ ವಿರುದ್ದ ಬಹಿರಂಗವಾಗಿ ಮಾತನಾಡಿ ಹಾಗೂ ಆಡಳಿತಾರೂಢ ಪಕ್ಷದ ಸಭೆಯಲ್ಲಿ ಭಾಗವಹಿಸುತ್ತಿದ್ದ ಶಾಸಕರ ಉಚ್ಚಾಟನೆ ಮಾಡದೆ ಉತ್ತರ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿಗೆ ನೂತನವಾಗಿ ಸದಸ್ಯರಾಗಿ ಆಯ್ಕೆಯಾದ ಪ್ರಸಾದ ಧನಸಿಂಗ್ ಚವ್ಹಾಣ, ಅರವಿಂದ ಡಿ ಸಾಲವಾಡಗಿ, ಮಹಾದೇವ ಸಿದ್ರಾಮಪ್ಪ ಕಾಂಬಳೆ, ಮಳಸಿದ್ದ ನಾಲ್ನೋಡಿ ಅವರನ್ನು ವಿಜಯಪುರ ಉಪ ವಿಭಾಗಾಧಿಕಾರಿ ಗುರುನಾಥ ದಡ್ಡೆ ಹಾಗೂ ವಿವಿಧ ಅಧಿಕಾರಿಗಳು ಸನ್ಮಾನಿಸಿದರು.ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ನಡೆದ ಉಪವಿಭಾಗ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯಲ್ಲಿ ಹೊಸದಾಗಿ ಆಯ್ಕೆಯಾದ ಸದಸ್ಯರು ಸನ್ಮಾನ ಸ್ವೀಕರಿಸಿ ಮಾತನಾಡಿ, ಪರಿಶಿಷ್ಟ ಜಾತಿ/ಪಂಗಡದ ಜನರ ಸರ್ವತೋಮುಖ ಅಭಿವೃದ್ದಿಗಾಗಿ ಶ್ರಮಿಸಲಾಗುವುದು ಎಂದು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿದರು.ಸಮಿತಿಯ ಸದಸ್ಯ ಕಾರ್ಯದರ್ಶಿಗಳಾದ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ. ಜೆ ಇಂಡಿ ಸೇರಿದಂತೆ ವಿವಿಧ ಅಧಿಕಾರಿಗಳು ಉಪಸ್ಥಿತರಿದ್ದರು.
