Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಧಾನಮಂತ್ರಿಗಳ ಇಂಟರ್ನಶಿಪ್ ಸ್ಕೀಮ್ ಅತ್ಯುತ್ತಮ ಕಂಪನಿಗಳ ಯೋಜನೆಯಡಿ ಉನ್ನತ ಮಟ್ಟದ ೫೦೦ ಕಂಪನಿಗಳಲ್ಲಿ ಒಂದು ಕೋಟಿ ಯುವಕರಿಗೆ ಇಂಟರ್ನಶಿಪ್ ಮೂಲಕ ಕೌಶಲ್ಯವನ್ನು ವೃದ್ದಿಸಿಕೊಳ್ಳುವ ತರಬೇತಿ ನೊಂದಣಿಗೆ ಅರ್ಹತೆ ಆಧಾರದ ಮೇಲೆ ಪೋರ್ಟಲ್‌ನಲ್ಲಿ ಅವಶ್ಯ ದಾಖಲೆಗಳೊಂದಿಗೆ ನೊಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.ಎಸ್.ಎಸ್.ಎಲ್.ಸಿ., ಐಟಿಐ, ಪಿಯುಸಿ, ಡಿಪ್ಲೋಮಾ, ಬಿಎ, ಬಿಎಸ್ಸಿ, ಬಿಕಾಂ, ಬಿಸಿಎ, ಬಿಬಿಎ, ಬಿಫಾರ್ಮ ಇತ್ಯಾದಿ ವಿದ್ಯಾರ್ಹತೆ ಹೊಂದಿರುವ ಆಸಕ್ತ ಅರ್ಹರು ದಿನಾಂಕ : ೩೧-೦೩-೨೦೨೫ರೊಳಗಾಗಿhttps://pminternship.mca.gov.in/login/ ಪೋರ್ಟಲ್‌ನಲ್ಲಿ ನೊಂದಾಯಿಸಿಕೊಳ್ಳಬಹುದಾಗಿದ್ದು, ಇಂಟರ್ನಶಿಪ್‌ಗೆ ಆಯ್ಕೆಯಾದ ಅಭ್ಯರ್ಥಿಗಳು ಕಂಪನಿ ಆಯೋಜಿಸಿದ ಸ್ಥಳಗಳಲ್ಲಿ ಹೋಗಿ ತರಬೇತಿ ಪಡೆಯಬೇಕು. ತರಬೇತಿ ಅವಧಿಯಲ್ಲಿ ಮಾಸಿಕ ೫ ಸಾವಿರ ರೂ. ಹಾಗೂ ತರಬೇತಿ ನಂತರ ಅರ್ಹತೆ ಆಧಾರದ ಮೇಲೆ ೬ ಸಾವಿರ ರೂ. ಅಭ್ಯರ್ಥಿಯ ಬ್ಯಾಂಕ್ ಖಾತೆಗೆ ಹಾಗೂ ಪ್ರಮಾಣ ಪತ್ರ ನೀಡಲಾಗುವುದು.ಜಿಲ್ಲೆಯ ಆಸಕ್ತ ನಿರುದ್ಯೋಗ ಯುವಕ-ಯುವತಿಯರು ಇಂಟರ್ನಶಿಪ್ ಯೋಜನೆಯಡಿ ನೊಂದಾಯಿಸಿಕೊಂಡು ಇದರ ಸದುಪಯೋಗ ಪಡೆದುಕೊಳ್ಳುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವ ವಿದ್ಯಾಲಯದ ಶೈಕ್ಷಣಿಕ ವರ್ಷ ಜನವರಿ-೨೦೨೫ರಲ್ಲಿ ಜರುಗಿದ ಬಿ.ಎ,ಬಿ.ಕಾಂ ಹಾಗೂ ಬಿಬಿಎ ಪದವಿ ಕೋರ್ಸಿನ ಪ್ರಥಮ,ತೃತೀಯ, ಹಾಗೂ ಐದನೇ ಸೆಮಿಸ್ಟರ್ ನ ರೆಗ್ಯೂಲರ್ ಹಾಗೂ ಪುನರಾವರ್ತಿತ ಪರೀಕ್ಷೆಗಳ ಫಲಿತಾಂಶವನ್ನು ದಿನಾಂಕ : ೨೫-೦೩-೨೦೨೫ ರಂದು ಪ್ರಕಟಿಸಲಾಗಿದೆ.ಫಲಿತಾಂಶವನ್ನುuucms.karnataka.gov.in ವೆಬ್ ಸೈಟ್ ನಲ್ಲಿ ನೋಡಬಹುದು ಎಂದು ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಮೌಲ್ಯಮಾಪನ ಕುಲಸಚಿವರಾದ ಪ್ರೊ. ಹೆಚ್. ಎಂ. ಚಂದ್ರಶೇಖರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರವಾಸೋದ್ಯಮ ಇಲಾಖೆ ವತಿಯಿಂದ ೨೦೨೪-೨೫ನೇ ಸಾಲಿನ ಎಸ್.ಸಿ.ಎಸ್.ಪಿ/ಟಿ.ಎಸ್.ಪಿ ಯೋಜನೆ ಅಡಿ ೨ನೇ ಹಂತದ ಪ್ರವಾಸೋದ್ಯಮ-ಆತಿಥ್ಯ ಕ್ಷೇತ್ರದ ಕೌಶಲ್ಯಾಭಿವೃದ್ಧಿಯ ೪ ತಿಂಗಳ ತರಬೇತಿಗಾಗಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕೇತ್ರ ಸಂಸ್ಥೆಗಳಾದ ಮೈಸೂರಿನ ಫುಡ್ ಕ್ರಾಫ್ಟ್ ಇನ್ಸಿಟ್ಯೂಟ್ ಹಾಗೂ ಇನ್ಸಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‌ಮೆಂಟ್ ಮೂಲಕ ಮ ೮ನೇ ತರಗತಿ ತೇರ್ಗಡೆಯಾದ ೨೦ ರಿಂದ ೪೫ ವಯಸ್ಸಿನ ಅಭ್ಯರ್ಥಿಗಳಿಗೆ ಲ್ಟಿ ಕ್ಯೂಸಿನ್ ಕುಕ್ ತರಬೇತಿ ಹಾಗೂ ೧೦ನೇ ತರಗತಿ ಪಾಸಾದ ೨೦ ರಿಂದ ೪೫ ವಯಸ್ಸಿನ ಅಭ್ಯರ್ಥಿಗಳಿಗೆ ಫುಡ್ ಮತತು ಬೇವರೇಜ್ ಸರ್ವಿಸ್ ಸ್ಟೇವರ್ಡ್ ವಸತಿ ಸಹಿತ ತರಬೇತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ.ಜಿಲ್ಲೆಯ ಆಸಕ್ತರು ಮಾ.೨೮ರಂದು ನಗರದ ಇಂಡಿ ರಸ್ತೆಯಲ್ಲಿರುವ ಪ್ರವಾಸೋದ್ಯಮ ಇಲಾಖೆಯಿಂದ ಅರ್ಜಿ ಪಡೆದು, ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ದಿನಾಂಕ : ೦೪-೦೪-೨೦೨೫ರೊಳಗೆ ಸಲ್ಲಿಸಬೇಕು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಪ್ರವಾಸೋದ್ಯಮ ಇಲಾಖೆ ಉಪನಿರ್ದೇಶಕರ ಕಚೇರಿ,…

Read More

ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಸಮಿಪದ ತುರಕನಗೇರಿ ಗ್ರಾಮದ ಶ್ರೀ ಸಿದ್ದಗಂಗಾ ಕಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ತುಮಕೂರಿನ ಸಿದ್ದಗಂಗಾ ಮಠದ ತ್ರಿವಿದ ದಾಸೋಹಿ ಲಿಂ. ಡಾ. ಶಿವಕುಮಾರ ಸ್ವಾಮೀಜಿ ಅವರ ೧೧೮ ನೇ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರತಿವರ್ಷ ಕೊಡಮಾಡುವ ಸಿದ್ದಂಗಂಗಾ ಶ್ರೀ ರತ್ನ ಪ್ರಶಸ್ತಿಗೆ ಕಲಕೇರಿ ಗ್ರಾಮದ ಶ್ರೀದೆವಿ ಈರಣ್ಣ ಝಳಕಿ ಆಯ್ಕೆಯಾಗಿದ್ದು ಇತ್ತಿಚೆಗೆ ನಡೆದ ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಶ್ಯಾಮಶುದ್ದಿನ್ ಇನಾಮದಾರ ಇವರ ಅಧ್ಯಕ್ಷತೆಯಲ್ಲಿ ದೇವರಹಿಪ್ಪರಗಿ ಮತಕ್ಷೇತ್ರದ ಶಾಸಕ ರಾಜುಗೌಡ ಪಾಟೀಲ ಕುದರಿಸಾಲೋಡಗಿ ಅವರು ಪ್ರಶಸ್ತಿಯನ್ನು ಪ್ರಧಾನ ಮಾಡಿದರು.

Read More

ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಗ್ರಾಮದ ರಾಣಿ ಚೆನ್ನಮ್ಮ ವಿಶ್ವವಿಧ್ಯಾಲಯದ ಆದೀನದಲ್ಲಿ ನಡಯುತ್ತಿರುವ ಆದರ್ಶ ಪ್ರಥಮ ದರ್ಜೆ ಪದವಿ ಕಾಲೇಜಿನ ಪ್ರಾಚಾರ್ಯ ಶಿವಾನಂದ ಸಜ್ಜನ ಅವರನ್ನು ರಾ.ಚ.ವಿ ದ ವಿಧ್ಯಾವಿಷಯಕ್ ಪರಿಷತ್ತಿನ ಪ್ರಾಧಿಕಾರಕ್ಕೆ ಸದಸ್ಯರನ್ನಾಗಿ ಕುಲಸಚಿವರು ನೇಮಕಮಾಡಿದ್ದಾರೆ. ಇವರ ಆಯ್ಕೆ ಅವಧಿ ೨೦-೦೩-೨೦೨೫ ರಿಂದ ೧೯-೦೩-೨೦೨೭ ರ ವರೆಗೆ ೨ ವರ್ಷದ ಅವಧಿಗೆ ಇವರನ್ನು ನೇಮಕ ಮಾಡಲಾಗಿದೆ ಎಂದು ಆದೇಶ ಪ್ರತಿಯಲ್ಲಿ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಮ್ಮ ದೇಶದ ಸಂಸ್ಕೃತಿ ಜಾನಪದದ ಮೂಲಕ ಪರಂಪರಾಗತವಾಗಿ ನಡೆದುಕೊಂಡು ಬರುತ್ತಿದೆ. ಜಾನಪದ ಆಚಾರ, ವಿಚಾರ, ನಂಬಿಕೆ, ಸಂಪ್ರದಾಯಗಳು ಮಾನವೀಯ ಮೌಲ್ಯಗಳನ್ನು ಬಿಂಬಿಸುತ್ತಿವೆ. ಜಾನಪದವು ಮೇರುಸ್ತರದ ವಿಚಾರಗಳನ್ನು ಕಲಿಸುತ್ತದೆ ಎಂದು ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾಧ್ಯಕ್ಷ ಬಾಳನಗೌಡ ಪಾಟೀಲ (ಪಡಗಾನೂರ) ಅಭಿಪ್ರಾಯಪಟ್ಟರು.ವಿಜಯಪುರ ನಗರದ ( ನವಬಾಗ) ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಕನ್ನಡ ಜಾನಪದ ಪರಿಷತ್ ವಿಜಯಪುರ ಜಿಲ್ಲಾ ಘಟಕದ ಸಹಯೋಗದಲ್ಲಿ ಹಮ್ಮಿಕೊಂಡಿದ್ದ “ಜಾನಪದ ಉತ್ಸವ ೨೦೨೫ ” ಅಡಿಯಲ್ಲಿ ” ನಮ್ಮ ಸಂಸ್ಕೃತಿ ನಮ್ಮ ಹೆಮ್ಮೆ ” ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತ ವಿದೇಶಿ ವ್ಯಾಮೋಹ ಮತ್ತು ವೈಜ್ಞಾನಿಕ ಪ್ರಭಾವದಿಂದ ಯುವ ಜನಾಂಗ ಜಾನಪದ ಸಂಸ್ಕೃತಿಯನ್ನು ಮರೆಯುತ್ತಿದ್ದಾರೆ. ಸಂಸ್ಕಾರವಿಲ್ಲದ ಶಿಕ್ಷಣ ಪಡೆದು ಸಂಸಾರಕ್ಕೆ ಕಂಟಕವಾಗುತ್ತಿದ್ದಾರೆ. ಅದಕ್ಕಾಗಿ ಯುವಕರು ಜಾನಪದ ಸಂಸ್ಕೃತಿ ಪ್ರೀತಿಸಬೇಕು ಅದರಂತೆ ಬದುಕಬೇಕು ಎಂದರು.ಅಧ್ಯಕ್ಷತೆವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲ ಡಾ ಎ ಆಯ್ ಹಂಜಗಿ, ಜಾನಪದ ನಡೆ- ನುಡಿ ತಾಯಿಯ ಎದೆಹಾಲಿನಂತೆ ಅಮೃತಕ್ಕೆ ಸಮಾನವಾಗಿವೆ.…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಹರನಾಳ ಗ್ರಾಮದಲ್ಲಿ ದಸಂಸ ಕಾರ್ಯಕರ್ತನ ಮೇಲಿನ ಹಲ್ಲೆ ಹಾಗೂ ಹರನಾಳ ಗ್ರಾಮ ಪಂಚಾಯಿತಿ ಅವ್ಯವಹಾರದಲ್ಲಿ ಭಾಗಿಯಾದ ಮಾಜಿ ಅಧ್ಯಕ್ಷ, ಹಾಗೂ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಬಿ.ಕೃಷ್ಣಪ್ಪ ಬಣದವರು, ಪ್ರತಿಭಟನಾ ಮೆರವಣಿಗೆ ಕೈಗೊಂಡು, ತಹಶೀಲ್ದಾರ ಕಾರ್ಯಾಲಯದ ಸಿಬ್ಬಂದಿ ಸಂಗಮೇಶ ಗ್ವಾಳೇದ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ಮೊಹರೆ ಹಣಮಂತ್ರಾಯ ವೃತ್ತದಲ್ಲಿ ಗುರುವಾರ ಸೇರಿದ ದಲಿತ ಸಂಘರ್ಷ ಸಮಿತಿ ಬಿ.ಕೃಷ್ಣಪ್ಪ ಬಣದವರು, ದಸಂಸ ಕಾರ್ಯಕರ್ತನ ಮೇಲಿನ ಹಲ್ಲೆ ಹಾಗೂ ಗ್ರಾಮ ಪಂಚಾಯಿತಿ ಅವ್ಯವಹಾರದಲ್ಲಿ ಭಾಗಿಯಾದ ಮಾಜಿಅಧ್ಯಕ್ಷ, ಹಾಗೂ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಮೆರವಣಿಗೆ ಹೊರಟು ಬಸ್ ನಿಲ್ದಾಣ, ಅಂಬೇಡ್ಕರ್ ವೃತ್ತ, ಇಂಡಿ ರಸ್ತೆಯ ಮೂಲಕ ತಹಶೀಲ್ದಾರ ಕಾರ್ಯಾಲಯ ತಲುಪಿ ನಂತರ ಸಭೆ ಕೈಗೊಂಡರು.ಈ ಸಂದರ್ಭದಲ್ಲಿ ಜಿಲ್ಲಾ ಸಂಘಟನಾ ಸಂಚಾಲಕ ಪ್ರಕಾಶ ಗುಡಿಮನಿ, ರಾಜ್ಯ ಸಂ.ಸಂಚಾಲಕ ರಮೇಶ ಆಸಂಗಿ, ಬೆಳಗಾವಿ ವಿಭಾಗೀಯ ಸಂಚಾಲಕ ವಿನಾಯಕ ಗುಣಸಾಗರ, ಜಿಲ್ಲಾ ಸಂಚಾಲಕ ಅಶೋಕ ಚಲವಾದಿ, ಸುರೇಶ…

Read More

ಬಿ.ಎಸ್.ಯಡಿಯೂರಪ್ಪ ಪ್ರತಿಕೃತಿ ದಹನ | ಪಂಚಮಸಾಲಿ ಸಮುದಾಯದ ಆಕ್ರೋಶ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಬಿಜೆಪಿ ಧುರೀಣ ಬಸನಗೌಡ ಪಾಟೀಲ(ಯತ್ನಾಳ) ಅವರನ್ನು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿದ ಕ್ರಮ ಖಂಡನೀಯ ಎಂದು ಕೋರವಾರ ಗ್ರಾಮದ ಪಂಚಮಸಾಲಿ ಸಮುದಾಯದ ಧುರೀಣ ಬಾಪುಗೌಡ ಬಿರಾದಾರ ಹೇಳಿದರು.ತಾಲ್ಲೂಕಿನ ಕೋರವಾರ ಗ್ರಾಮದಲ್ಲಿ ಗುರುವಾರ ಜರುಗಿದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು.ವಿಜಯಪುರ ನಗರ ಕ್ಷೇತ್ರ ಶಾಸಕ ಬಸನಗೌಡ ಪಾಟೀಲ(ಯತ್ನಾಳ) ಅವರನ್ನು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಿದ ಕ್ರಮ ತಪ್ಪು. ಇದರ ಪರಿಣಾಮ ಬಿಜೆಪಿಗೆ ಮುಂದಿನ ದಿನಗಳಲ್ಲಿ ಬರುವ ತಾಲ್ಲೂಕು, ಜಿಲ್ಲಾ, ವಿಧಾನಸಭೆ, ಲೋಕಸಭೆಯ ಚುನಾವಣೆಗಳಲ್ಲಿ ಗೊತ್ತಾಗುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.ಇದೇ ಸಂದರ್ಭದಲ್ಲಿ ಗ್ರಾಮದ ಸಮುದಾಯದ ಯುವಕರು ಉಚ್ಚಾಟನೆಗೆ ಕಾರಣರಾದ ಬಿ.ಎಸ್.ಯಡಿಯೂರಪ್ಪ ಅವರ ಪ್ರತಿಕೃತಿ ದಹನ ಮಾಡಿ ಆಕ್ರೋಶ ವ್ಯಕ್ತಪಡಿಸಿದರು.ಪ್ರತಿಭಟನೆಯಲ್ಲಿ ಭೀಮನಗೌಡ ಕುಳೇಕುಮಟಗಿ, ಅಪ್ಪುಗೌಡ ಪೊಲೀಸ್‌ಪಾಟೀಲ, ಮಾಂತಗೌಡ ಪಾಟೀಲ, ರಾಜುಗೌಡ ಬಿರಾದಾರ, ಮಹೇಶ ಬಿರಾದಾರ, ನಿಂಗಣ್ಣ ಕೊಟ್ಟಗಿ, ಬಸು ಬಾದೊಡ್ಗಿ, ಗೌಡು ಬುಳ್ಳಾ, ಮಲ್ಲು ಬಿರಾದಾರ, ಹಣಮಂತ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಗ್ರಾಮದ ವಾರ್ಡುಗಳಲ್ಲಿ ತಲೆದೋರಿರುವ ನೀರಿನ ಸಮಸ್ಯೆಯನ್ನು ಪರಿಹರಿಸುವಂತೆ ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಜಿ.ವ್ಹಿ.ಪಟ್ಟಣಶೆಟ್ಟಿ ಅವರಿಗೆ ಮನವಿ ಸಲ್ಲಿಸಿದರು.ತಾಲ್ಲೂಕಿನ ಕೋರವಾರ ಗ್ರಾಮದ ವಿವಿಧ ವಾರ್ಡುಗಳಲ್ಲಿ ಕಂಡು ಬರುತ್ತಿರುವ ನೀರಿನ ಸಮಸ್ಯೆಯ ಕುರಿತಾಗಿ ಜಯ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ಬುಧವಾರ ಗ್ರಾಮ ಪಂಚಾಯಿತಿಗೆ ಆಗಮಿಸಿ ಗಮನ ಸೆಳೆದರು.ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ವಕ್ತಾರ ಚನ್ನಪ್ಪಗೌಡ ಬಿರಾದಾರ ಮಾತನಾಡಿ, ಗ್ರಾಮದಲ್ಲಿ ನೀರಿನ ಸಮಸ್ಯೆ ಗಂಭೀರವಾಗಿದ್ದು, ತಿಂಗಳಿಗೊಮ್ಮೆ ನೀರು ಪೂರೈಸಲಾಗುತ್ತಿದೆ. ಇದರಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಆದ್ದರಿಂದ ಕೂಡಲೇ ಪುರದಾಳ ಕೆರೆಯಿಂದ ಪೈಪ್‌ಲೈನ್ ಮೂಲಕ ಬರುವ ನೀರು ಪೋಲಾಗದಂತೆ ತಡೆದು ನೀರಿನ ಸಮಸ್ಯೆ ನೀಗಿಸಬೇಕು ಎಂದರು.ತಾಲ್ಲೂಕಾಧ್ಯಕ್ಷ ಸಿದ್ರಾಮಪ್ಪ ಅವಟಿ ಮಾತನಾಡಿ, ಮುಂದಿನ ತಿಂಗಳು ಕೋರವಾರೇಶ ಜಾತ್ರಾ ನಿಮಿತ್ಯ ಆಗಮಿಸುವ ಭಕ್ತರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಕ್ರಮ ವಹಿಸಬೇಕು. ಮತ್ತು ಗ್ರಾಮದ ದೇವಸ್ಥಾನದ ಮುಖ್ಯರಸ್ತೆ ಹಾಗೂ ಚರಂಡಿಗಳನ್ನು ಸ್ವಚ್ಛಗೊಳಿಸಿ ಡಿಡಿಟಿ ಸಿಂಪಡಿಸಬೇಕು ಎಂದು ಆಗ್ರಹಿಸಿ ಮನವಿ…

Read More

ಹುಲ್ಯಾಳ ಗ್ರಾಮದಲ್ಲಿ 7ನೇ ತರಗತಿ ವಿದ್ಯಾರ್ಥಿಗಳ ಬೀಳ್ಕೊಡುಗೆ ಕಾರ್ಯಕ್ರಮ ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಶಿಸ್ತು ಮತ್ತು ಶಿಕ್ಷಣ ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ. ಉನ್ನತ ಶಿಕ್ಷಣ ಪಡೆಯುವ ಮೂಲಕ ಸಮಾಜ ಹಾಗೂ ಶಿಕ್ಷಣ ಸಂಸ್ಥೆ ಹಿರಿಮೆ ಹೆಚ್ಚಿಸಬೇಕೆಂದು ಹುಲ್ಕಾಳ ಗ್ರಾಮದ ಪಿಕೆಪಿಎಸ್ ನಿರ್ದೇಶಕ ಮಂಜುನಾಥ ಗಲಗಲಿ ಹೇಳಿದರು.ತಾಲೂಕಿನ ಹುಲ್ಯಾಳ ಗ್ರಾಮದ ಕಾಡಸಿದ್ದೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜರುಗಿದ ಏಳನೇ ವರ್ಗದ ವಿದ್ಯಾರ್ಥಿಗಳ ಬೀಳ್ಕೊಡುಗೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಆಧುನಿಕ ತಂತ್ರಜ್ಞಾನ ಯುಗದಲ್ಲಿ ಕಾಲಮಾನಕ್ಕೆ ತಕ್ಕಂತೆ ನಮ್ಮ ಜೀವನ ಕ್ರಮವನ್ನು ಕೂಡ ಪರಿವರ್ತಿಸಿಕೊಳ್ಳುವ ಅವಶ್ಯಕತೆ ಇದೆ ಎಂದು ಮಕ್ಕಳಿಗೆ ತಿಳಿಹೇಳಿದರು.ಸಾಹಿತಿ, ನಿವೃತ್ತ ಶಿಕ್ಷಕ ಗುರುನಾಥ ಸುತಾರ ಮಾತನಾಡಿ, ಪಠ್ಯದೊಂದಿಗೆ ಪಠ್ಯತರ ಚಟುವಟಿಕೆಯಲ್ಲಿ ಮಕ್ಕಳು ಕ್ರಿಯಾಶೀಲರಾಗುವ ಮೂಲಕ ಗುರುಹಿರಿಯರನ್ನು ಗೌರವದಿಂದ ಕಾಣಬೇಕು ಎಂದರು.ಸಂಸ್ಥೆ ಅಧ್ಯಕ್ಷ ಮಲ್ಲಪ್ಪ ತುಬಚಿ, ಸದಸ್ಯರಾದ ಪರಪ್ಪ ನೀಲವಾಣಿ, ಹಣಮಂತ ಮಂಡಗಣಿ, ಉಮೇಶ ಕೋರಿ, ಶ್ರೀಶೈಲ ಪೂಜಾರ, ನಿಂಗಪ್ಪ ದಬಾಳಿ, ಜೆ ಟಿ ಆಲಗುಂಡಿ, ಮುಖ್ಯಗುರು ಎಸ್.ಎಸ್.…

Read More