Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ತಾಲೂಕಿನ ಹುನ್ನೂರು ಗ್ರಾಮದ ಪ್ರಯಾಣಿಕರ ತಂಗುದಾಣದ ಮುಂಭಾಗದಲ್ಲಿ ವಿಶ್ವ ಜಲ ದಿನದಂದು ನೀರಿನ ಅರವಟಿಗೆ ಸೇವೆಗೆ ಚಾಲನೆ ನೀಡಲಾಯಿತು.ಪರಿಸರ ಪ್ರಿಯರು, ಜಲದಾನಿಗಳ ಸಹಕಾರದೊಂದಿಗೆ ಹಲವು ವರ್ಷಗಳಿಂದ ಪ್ರತಿ ಬೇಸಿಗೆಯಲ್ಲಿ ನೀರಿನ ಅರವಟಿಗೆ ಸೇವೆ ಜತೆಗೆ ಜಲದ ಮಹತ್ವದ ಬಗ್ಗೆ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಯುವಕರ ಗುಂಪೊಂದು ಮಾಡುತ್ತಿದೆ. ಜಗದುಳಿವಿಗೆ ಜಲವುಳಿಸಿಎಂಬ ಘೋಷ ವಾಕ್ಯದೊಂದಿಗೆ ಪ್ರಸಕ್ತ ವರ್ಷ ನೀರಿನ ಅರವಟಿಗೆ ಸೇವೆ ಕೈಗೊಂಡಿರುವುದು ಗಮನ ಸೆಳೆಯಿತು. ಮಾಜಿ ಶಾಸಕ ಆನಂದ ನ್ಯಾಮಗೌಡ ಅರವಟಿಗೆ ಸೇವೆಗೆ ಚಾಲನೆ ನೀಡಿದರು.ಗ್ರಾಮದ ಹಿರಿಯರಾದ ಚಂದ್ರಶೇಖರ ಸಾವಳಗಿ, ನರಸಪ್ಪ ತೇಲಿ, ಕಲ್ಲಪ್ಪ ದಫೇದಾರ, ಮಲ್ಲಪ್ಪ ಕಡಪಟ್ಟಿ, ರಾಜು ಕಡಪಟ್ಟಿ, ಈಶ್ವರ ಸಾವಳಗಿ, ಲಕ್ಕಪ್ಪ ಮೂಲಿಮನಿ, ರಮೇಶ ಪಾಯಗೊಂಡ, ರಮೇಶ ಬನ್ನವ್ವಗೋಳ ಇತರರು ಇದ್ದರು.
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ಜಾಯವಾಡಗಿ ಗ್ರಾಮದ ಆರಾಧ್ಯ ದೈವ ಸೋಮನಾಥೇಶ್ವರ, ಶಿವಪ್ಪ ಮುತ್ಯಾರ ಜಾತ್ರೆಯು ಮಾ.27 ರಿಂದ ಏ.3 ರವರೆಗೆ ನಡೆಯಲಿದೆ. ಜಾತ್ರೆಯ ಅಂಗವಾಗಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಮಾ.27 ರಂದು ಪಲ್ಲಕ್ಕಿಯು ಗಂಗಸ್ಥಳಕ್ಕೆ ಹೋಗುವದು, ಮಾ.28 ರಂದು ವಿವಿಧ ವಾದ್ಯಗಳೊಂದಿಗೆ ಪಲ್ಲಕ್ಕಿಯನ್ನು ಜಾಯವಾಡಗಿ ಗ್ರಾಮಕ್ಕೆ ಬರಮಾಡಿಕೊಳ್ಳಲಾಗುವುದು. ರಾತ್ರಿ 10-30 ಗಂಟೆಗೆ ಜಾಯವಾಡಗಿ, ಬ್ಯಾಕೋಡ, ಕಾನ್ನಾಳ, ಸೋಲವಾಡಗಿ, ಅಗಸಬಾಳ, ಕಾಜಿಅಗಸಬಾಳ ಹಾಗೂ ಪಡೇಕನೂರ ಗ್ರಾಮಗಳ ಭಜನಾ ಮಂಡಳಿ ಹಾಗೂ ಭಕ್ತರಿಂದ ಶಿವಭಜನೆ ನಡೆಯುವುದು.ಮಾ.29 ರಂದು ಕಾನ್ನಾಳ ಗ್ರಾಮದ ಸಜ್ಜನ ಬಂಧುಗಳು ಹಾಗೂ ಗ್ರಾಮದ ಭಕ್ತರೊಂದಿಗೆ ಕಳಸ, ಜಾಯವಾಡಗಿ ಗ್ರಾಮಸ್ಥರಿಂದ ಪಲ್ಲಕ್ಕಿಯು ವಿವಿಧ ವಾದ್ಯಗಳೊಂದಿಗೆ ದೇವಸ್ಥಾನಕ್ಕೆ ಆಗಮಿಸುವುದು. ಮಧ್ಯಾಹ್ನ 12 ಗಂಟೆಗೆ ಕಳಸವು ಶಿಖರಕ್ಕೆರುವುದು. ರಾತ್ರಿ 10-30 ಗಂಟೆಗೆ ನಾಟಕ ಪ್ರದರ್ಶನಗೊಳ್ಳಲಿದೆ.ಮಾ.30 ರಂದು ಬೆಳಗ್ಗೆ ತೇರಿಗೆ ಅಲಂಕಾರ ನಡೆಯುವುದು. ನಂತರ ಬ್ಯಾಕೋಡ ಗ್ರಾಮಸ್ಥರು ತೆಗೆದುಕೊಂಡು ಬರುವ ಕಳಸ ಏರಿಸುವುದು, ಸೋಲವಾಡಗಿ ಗ್ರಾಮಸ್ಥರು ರಥದ ಮಿಣಿ, ಅಗಸಬಾಳ ಗ್ರಾಮಸ್ಥರು ರಥದ ಬೆಳ್ಳಿ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಜಾನಪದ, ಕಲೆ, ಸಾಹಿತ್ಯ ಹಾಗೂ ಸಂಸ್ಕೃತಿಯನ್ನು ಮುಂದಿನ ಪೀಳಿಗೆಗೆ ಉಳಿಸಿ ಬೆಳೆಸುವ ಕೆಲಸವನ್ನು ಎಲ್ಲರೂ ಮಾಡಬೇಕು ಎಂದು ರಾಷ್ಟ್ರೀಯ ಬಸವಸೈನ್ಯದ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ಹೇಳಿದರು.ತಾಲೂಕಿನ ನಾಗೂರ ಗ್ರಾಮದಲ್ಲಿ ಆಯೋಜಿಸಿದ್ದ ಉತ್ತರ ಕರ್ನಾಟಕ ಯೂಟ್ಯೂಬ್ ಹಾಸ್ಯ ಕಲಾವಿದ ದಿ.ಬಸಯ್ಯ ಹಿರೇಮಠರ ಸ್ಮರಣೆ ಹಾಗೂ ಗುರುನಮನ ಕಾರ್ಯಕ್ರಮದಲ್ಲಿ ಅತಿಥಿ ಸ್ಥಾನ ವಹಿಸಿ ಮಾತನಾಡಿದ ಅವರು,ಕರ್ನಾಟಕವು ಸಾಂಸ್ಕೃತಿಕ ಕ್ಷೇತ್ರಕ್ಕೆ ತನ್ನದೇ ಆದ ಕೊಡುಗೆ ನೀಡಿದೆ. ರಾಜ್ಯದಲ್ಲಿ ಬಸವನಬಾಗೇವಾಡಿ ತಾಲೂಕು ಜಾನಪದ ಸೇರಿದಂತೆ ವಿವಿಧ ಕಲಾಕ್ಷೇತ್ರಗಳಿಗೆ ಹಲವು ಕೊಡುಗೆ ನೀಡಿದೆ. ಇಲ್ಲಿ ಕಲೆಯ ಆರಾಧಕರು ಇದ್ದಾರೆ. ಸ್ಥಳೀಯ ಕಲಾವಿದರಿಗೆ ಮಾನ್ಯತೆ ನೀಡಿ ಸಹಕಾರ ಕೊಟ್ಟರೆ ಅನುಕೂಲವಾಗುತ್ತದೆ ಎಂದು ಅಭಿಪ್ರಾಯ ಪಟ್ಟರು.ಮುಖಂಡರಾದ ಸಂಗನಗೌಡ ಚಿಕ್ಕೊಂಡ, ಪುರಸಭೆ ಮಾಜಿ ಅಧ್ಯಕ್ಷ ಜಗದೀಶ ಕೊಟ್ರಶೆಟ್ಟಿ, ಕರವೇ ರಾಜ್ಯ ಸಂಘಟನಾ ಕಾರ್ಯದರ್ಶಿ ಅಶೋಕ ಹಾರಿವಾಳ ಮಾತನಾಡಿ, ವೃತ್ತಿ ಕಲಾವಿದರು ತಮ್ಮ ಕಲೆಯ ಪ್ರದರ್ಶನ ನೀಡುವ ಮೂಲಕ ಬದುಕನ್ನು ಕಟ್ಟಿಕೊಂಡಿದ್ದಾರೆ. ಇನ್ನೂ ಕೆಲವು ಕಲಾವಿದರು ಪ್ರವೃತ್ತಿಯಾಗಿ ಕಲೆಗಳನ್ನು…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಜನಸಾಮಾನ್ಯರಿಗೆ ಸರಕಾರ ಪ್ರತಿಯೊಂದು ಅನುದಾನ ತಲುಪಲಿ ಎಂಬ ಭದ್ದತೆಯಿಂದ ಕಾಂಗ್ರೆಸ್ ಸರಕಾರ ಕಾರ್ಯನಿರ್ವಹಿಸುತ್ತಿದೆ. ಸಿಂದಗಿ ತಾಲೂಕಿಗೆ ಸಂಬಂಧಿಸಿದ ೧೪ ತ್ರಿಚಕ್ರ ವಾಹನಗಳನ್ನು ವಿಕಲಚೇತನರಿಗೆ ವಿತರಣೆ ಮಾಡಲಾಗಿದೆ. ಮುಂದಿನ ವಾರದಲ್ಲಿ ಆಲಮೇಲ ತಾಲೂಕಿಗೆ ಸಂಬಂಧಿಸಿದ ೧೫ ತ್ರಿಚಕ್ರ ವಾಹನಗಳನ್ನು ವಿಲಚೇತನರಿಗೆ ವಿತರಣೆ ಮಾಡಲಾಗುವುದು ಎಂದು ಶಾಸಕ ಅಶೋಕ ಮನಗೂಳಿ ಹೇಳಿದರು.ಸಿಂದಗಿ ಪಟ್ಟಣದ ತಾಲೂಕು ಪಂಚಾಯತ್ ಆವರಣದಲ್ಲಿ ೨೦೨೪-೨೫ನೆಯ ಸಾಲಿನ ಅನಿರ್ಬಂಧಿತ ಅನುದಾನದಲ್ಲಿ ತಾಲೂಕಿನ ೧೪ ಜನ ಅರ್ಹ ವಿಕಲಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನವನ್ನು ವಿತರಿಸಿ ಮಾತನಾಡಿದ ಅವರು, ಇಂದಿನ ಕಾಂಗ್ರೆಸ್ ಸರಕಾರ ಮತ್ತು ಸಿಎಂ ಸಿದ್ದರಾಮಯ್ಯ ಅವರು ವಿಶೇಷವಾಗಿ ವಿಲಕಚೇತನರಿಗೆ, ಕಾರ್ಮಿಕರಿಗೆ, ಮಹಿಳೆಯರಿಗೆ ಮತ್ತು ಯುವಕರಿಗೆ ವಿಶೇಷ ಆದ್ಯತೆಯನ್ನು ನೀಡುತ್ತಿದ್ದಾರೆ ಎಂದರು.ಈ ವೇಳೆ ಆಲಮೇಲ ತಾಪಂ ಫರೀದಾ ಪಠಾಣ, ಸಿಂದಗಿ ತಾಪಂ ಇಒ ರಾಮು ಅಗ್ನಿ, ಸಿಂದಗಿ ಜೋಗುರ ಹೀರೊ ಮೋಟರ್ಸ್ ಮಾಲೀಕ ರಮೇಶ ಜೋಗುರ, ಜಿಲ್ಲಾ ಕೆಡಿಪಿ ಸದಸ್ಯ ನೂರಅಹ್ಮದ ಅತ್ತಾರ, ತಾಲೂಕು ಕೆಡಿಪಿ ಸದಸ್ಯೆ ಮಹಾನಂದ…
ಎಸ್.ಬಿ.ವಿಜಡಮ್ ಕರಿಯರ್ ಅಕಾಡೆಮಿ ಆಡಳಿತಾಧಿಕಾರಿ ಬಾಗೇಶ ಮುರಡಿ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವರ್ತಮಾನ ಸವಾಲುಗಳ ನಡುವೆ ಕನ್ನಡ ಭಾಷೆ, ಜಗತ್ತಿನಲ್ಲಿ ಸು.೬೦೦೦ ಭಾಷೆಗಳಿದ್ದು, ಅದರಲ್ಲಿ ೪೦೦೦ಭಾಷೆಗಳಿಗೆ ಲಿಪಿಯೇ ಇಲ್ಲ. ಅದರಲ್ಲಿ ಕನ್ನಡ ಭಾಷೆ ತನ್ನ ಅಸ್ತಿತ್ವವನ್ನು ಗಟ್ಟಿಯಾಗಿ ಉಳಿಸಿಕೊಂಡಿದೆ ವಿಜಯಪುರದ ಎಸ್.ಬಿ.ವಿಜಡಮ್ ಕರಿಯರ್ ಅಕಾಡೆಮಿಯ ಆಡಳಿತಾಧಿಕಾರಿ ಬಾಗೇಶ ಮುರಡಿ ಹೇಳಿದರು.ಸಿಂದಗಿ ಪಟ್ಟಣದ ಶ್ರೀಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದಲ್ಲಿ ಕನ್ನಡ ಸಂಘದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅದನ್ನು ಮುಂದಿನ ಯುವ ಪೀಳಿಗೆಗೆ ವರ್ಗಾಯಿಸುವ ಜವಾಬ್ದಾರಿ ನಮ್ಮ ನಮ್ಮೆಲ್ಲರ ಮೇಲಿದೆ ಎಂದರು.ಈ ವೇಳೆ ಮರಗೂರಿನ ಭೀಮಾಶಂಕರ ಸಕ್ಕರೆ ಕಾರ್ಖಾನೆಯ ಅಭಿಯಂತರ ಶ್ರೀಶೈಲ ಮಠಪತಿ ಕಾರ್ಯಕ್ರಮವನ್ನು ಉದ್ಘಾಟಸಿ ಮಾತನಾಡಿದ ಅವರು, ತಾಂತ್ರಿಕ ಯುಗದಲ್ಲಿಯೂ ಕನ್ನಡ ಭಾಷೆಯ ಮಹತ್ವ ಕಡಿಮೆಯಾಗಿಲ್ಲ. ಮತ್ತು ಕನ್ನಡದ ಜ್ಞಾನ ಸಂಪತ್ತು ಅನನ್ಯವಾದದ್ದು, ಯುವಕರು ಈ ಭಾಷೆಯ ಮೇಲೆ ಹಿಡಿತ ಸಾಧಿಸುವುದು ಅತ್ಯವಶ್ಯಕ. ಕನ್ನಡ ಸಂಘವು ವಿದ್ಯಾರ್ಥಿಗಳಿಗೆ ತಮ್ಮ ಆಸಕ್ತಿ ಮತ್ತು ಕೌಶಲ್ಯಗಳನ್ನು ಪ್ರದರ್ಶಿಸಲು ಸೂಕ್ತ ವೇದಿಕೆ. ಇದರ ಸದುಪಯೋಗವನ್ನು ಎಲ್ಲ ಪ್ರಶಿಕ್ಷಣಾರ್ಥಿಗಳು…
ಕುಡಿಯುವ ನೀರಿನ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧಿಕಾರಿಗಳಿಗೆ ಶಾಸಕ ಅಶೋಕ ಮನಗೂಳಿ ಖಡಕ್ ವಾರ್ನಿಂಗ್ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪ್ರಗತಿ ಪರಿಶೀಲನಾ ಸಭೆಯಲ್ಲಿ ಬೇಕಾಬಿಟ್ಟಿಯಾಗಿ ವರದಿ ಸಲ್ಲಿಸಿ ಹೋಗದೇ ಅಲ್ಲಿನ ಸತ್ಯಾಂಶವನ್ನು ತಿಳಿದುಕೊಂಡು ಗ್ರಾಮಸ್ಥರಿಗೆ ಜೂನ್ ಮಧ್ಯದ ಅವಧಿಯವರೆಗೂ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು. ಜೆಜೆಎಂ ಕಾಮಗಾರಿ ಕಳಪೆ ಮಟ್ಟದ್ದಾಗಿವೆ ಎಂಬ ಮಾತುಗಳು ಕೇಳಿ ಬಂದದ್ದು, ಗುಣಮಟ್ಟ ಕಾಪಾಡಿಕೊಳ್ಳಬೇಕು ಎಂದು ಶಾಸಕ ಅಶೋಕ ಮನಗೂಳಿ ಎಚ್ಚರಿಕೆ ನೀಡಿದರು.ಪಟ್ಟಣದ ತಾಪಂ ಸಭಾಂಗಣದಲ್ಲಿ ಹಮ್ಮಿಕೊಂಡ ಕುಡಿಯುವ ನೀರಿನ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಅವರು, ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆಯ ಗಂಭೀರತೆಯನ್ನು ಅಧಿಕಾರಿಗಳು ಅರಿತುಕೊಂಡು ಜನ ಸಾಮಾನ್ಯರಿಗೆ ಸಮರ್ಪಕವಾಗಿ ಕುಡಿಯುವ ನೀರನ್ನು ಪೂರೈಕೆ ಮಾಡಲು ಆದ್ಯತೆ ವಹಿಸಬೇಕು. ಬಸ್ತಿಹಾಳ ಮತ್ತು ಹಂದಿಗನೂರ ಗ್ರಾಮಗಳಿಗೆ ಕುಡಿಯುವ ನೀರಿನ ವ್ಯವಸ್ಥೆಯಿಲ್ಲ ಎರಡು ದಿನಗಳಲ್ಲಿ ಕೆರೆಯಲ್ಲಿ ಮೋಟರ್ ಬಿಟ್ಟು ನೀರು ಹರಿಸಬೇಕು. ಮುಂಬರುವ ದಿನಮಾನಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಲಿದ್ದು, ಅಧಿಕಾರಿಗಳು ಹಾರಿಕೆ…
ರಾಜ್ಯ ಬಿಜೆಪಿ ಬಣ ಬಡಿದಾಟಕ್ಕೆ ಕೊನೆಗೂ ಹೈಕಮಾಂಡ್ ಬ್ರೇಕ್ | ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಆದೇಶ | ಪಕ್ಷದ ಶಿಸ್ತು ಪದೇ ಪದೇ ಉಲ್ಲಂಘನೆಗೆ ಈ ಕ್ರಮ ನವದೆಹಲಿ: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ಅವರ ಪುತ್ರ, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರುದ್ಧ ಬಹಿರಂಗವಾಗಿಯೇ ವಾಗ್ದಾಳಿ ನಡೆಸುತ್ತಿದ್ದ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕೊನೆಗೂ ಹೈಕಮಾಂಡ್ ಕ್ರಮ ಕೈಗೊಂಡಿದೆ.ಯತ್ನಾಳ್ ಅವರನ್ನು ಆರು ವರ್ಷಗಳ ಕಾಲ ಪಕ್ಷದಿಂದ ಉಚ್ಚಾಟಿಸಿ ಬಿಜೆಪಿ ಕೇಂದ್ರ ಶಿಸ್ತು ಸಮಿತಿ ಬುಧವಾರ ಆದೇಶ ಹೊರಡಿಸಿದೆ. ಈ ಮೂಲಕ ರಾಜ್ಯ ಬಿಜೆಪಿಯಲ್ಲಿನ ಬಣಬಡಿದಾಟಕ್ಕೆ ಕೊನೆಗೂ ಹೈಕಮಾಂಡ್ ಬ್ರೇಕ್ ಹಾಕಿದೆ.ಪಕ್ಷದ ಕೇಂದ್ರ ಶಿಸ್ತು ಸಮಿತಿಯು 2025 ಫೆಬ್ರವರಿ 10 ರಂದು ನೀಡಿದ್ದ ಶೋಕಾಸ್ ನೋಟಿಸ್ಗೆ ನಿಮ್ಮ ಪ್ರತಿಕ್ರಿಯೆಯನ್ನು ಪರಿಗಣಿಸಿದೆ ಮತ್ತು ಹಿಂದಿನ ಶೋಕಾಸ್ ನೋಟಿಸ್ಗಳಿಗೆ ಪ್ರತಿಕ್ರಿಯೆಯಾಗಿ ಉತ್ತಮ ನಡವಳಿಕೆಯ ಭರವಸೆಗಳನ್ನು ನೀಡಿದ್ದರೂ ಸಹ, ನೀವು ಪಕ್ಷದ ಶಿಸ್ತನ್ನು ಪದೇ ಪದೇ ಉಲ್ಲಂಘಿಸುತ್ತಿರುವುದನ್ನು…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣ ಪಂಚಾಯಿತಿಯಲ್ಲಿ ೨೦೨೪-೨೫ನೇ ಸಾಲಿನ ಪ್ರಧಾನಮಂತ್ರಿ ಇಂಟರ್ನ್ಶಿಪ್ ಸ್ಕಿಮ್ ಇನ್ ಟಾಪ್ ಕಂಪನಿಸ್ ಯೋಜನೆಯಡಿ ತರಬೇತಿಗೆ ಆಸಕ್ತರನ್ನು ಆಹ್ವಾನಿಸಲಾಗಿದೆ.ಪ್ರಧಾನಮಂತ್ರಿ ಇಂಟರ್ನ್ಶಿಪ್ ಸ್ಕಿಮ್ ಇನ್ ಟಾಪ್ ಕಂಪನಿಸ್ ಈ ಯೋಜನೆಯಡಿ ಉನ್ನತ ಮಟ್ಟದ ೫೦೦ ಕಂಪನಿಗಳಲ್ಲಿ ಒಂದು ಕೋಟಿ ಯುವಕರಿಗೆ ಇಂಟರ್ನ್ಶಿಪ್ ಮೂಲಕ ಕೌಶಲ್ಯವನ್ನು ವೃದ್ಧಿಸಲು ಯುವಕ, ಯುವತಿಯರಿಗೆ ತರಬೇತಿ ನೀಡಲಾಗುತ್ತದೆ. ತರಬೇತಿ ಪಡೆಯಲು ಇಚ್ಚಿಸುವವರು ಇದೇ ತಿಂಗಳ ದಿ: ೩೧ ರ ಒಳಗಾಗಿ ಪೋರ್ಟಲನಲ್ಲಿ ಅವಶ್ಯಕ ದಾಖಲೆಗಳೊಂದಿಗೆ ದಾಖಲಿಸಲು ಅವಕಾಶ ಕಲ್ಪಿಸಲಾಗಿದೆ. ಅಸಕ್ತಿ ಇರುವವನ್ನು ಅರ್ಹತೆ ಆಧಾರದ ಮೇಲೆ ನೋಂದಾಯಿಸಿಕೊಳ್ಳಲಾಗುವುದು.ಅಭ್ಯರ್ಥಿಗಳು ೨೧ರಿಂದ ೨೪ ವಯಸ್ಸಿನ ವಯೋಮಾನದವರಾಗಿದ್ದು, ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ ಹಾಗೂ ಬಿಎ ಸಹಿತ ಇತ್ಯಾದಿ ಪದವಿ ಪೂರ್ಣಗೊಂಡಿರಬೇಕು. ಕುಟುಂಬದ ಆದಾಯ ವಾರ್ಷಿಕ ೮ ಲಕ್ಷ ಮೀತಿಗೆ ಒಳಪಟ್ಟಿರಬೇಕು. ಕುಟುಂಬದ ಯಾವುದೇ ಸದಸ್ಯ ಸರ್ಕಾರದ ಖಾಯಂ ನೌಕರರಾಗಿರಬಾರದು. ತರಬೇತಿ ಅವಧಿ ೧೨ ತಿಂಗಳಗಳಾಗಿದ್ದು, ಈ ಅವಧಿಯಲ್ಲಿ ಸರಿಯಾಗಿ ಹಾಜರಾದ ಅಭ್ಯರ್ಥಿಗೆ ಮಾಸಿಕ ೫ ಸಾವಿರ ರೂ.ಬ್ಯಾಂಕ್ ಖಾತೆಗೆ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಕಡ್ಲೇವಾಡ ಪಿಸಿಎಚ್ ಗ್ರಾಮದ ಚಿರಾಕಿ ನಸ್ರೂದ್ಧೀನ್ ದರ್ಗಾದ ೩ ದಿನಗಳ ಕಾಲದ ಉರುಸ್ ದಿ: ೨೭ ಗುರುವಾರದಂದು ಆರಂಭಗೊಳ್ಳಲಿದೆ.ದಿ:೨೭ ರಂದು ಸಾಯಂಕಾಲ ಕುದುರೆ ಕುಣಿತ, ಗ್ರಾಮದ ಪ್ರಮುಖರು ಹಾಗೂ ಭಕ್ತಾಧಿಗಳಿಂದ ಗದ್ದುಗೆಗೆ ಗಂಧ ಏರಿಸುವುದು ನಂತರ ಲೆಕ್ಕಪತ್ರ ವಿವರಣೆ, ಭಕ್ತರಿಂದ ಕಾಣಿಕೆ ಸ್ವೀಕರಣೆ ತದನಂತರ ರಂಗುರಂಗಿನ ಮದ್ದು ಸುಡುವ ಕಾರ್ಯಕ್ರಮ ಜರುಗಲಿದೆ.ದಿ:೨೮ ಶುಕ್ರವಾರ ಬೆಳಿಗ್ಗೆ ನೈವಿಧ್ಯ, ದೇವರ ದರ್ಶನ ನಂತರ ಜಿದ್ದಾಜಿದ್ದಿನ ಗೀಗೀ ಪದಗಳು ಜರುಗುವವು.ದಿ:೨೯ ಶನಿವಾರ ರಂದು ಮಧ್ಯಾನ್ಹ ಭಾರ ಎತ್ತುವುದು, ಸಾಯಂಕಾಲ ಜಂಗೀ ಕುಸ್ತಿ, ರಾತ್ರಿ ೧೦ ಘಂಟೆಗೆ ಜಮಖಂಡಿ ತಾಲ್ಲೂಕಿನ ಕುಲಹಳ್ಳಿ ಗ್ರಾಮದ ಶಿವಲಿಂಗೇಶ್ವರ ಪ್ರಸಾಧಿಕ ನಾಟ್ಯ ಸಂಘದಿಂದ ಸಾಮಾಜಿಕ ನಾಟಕ ಜರುಗುವುದು .ಜಾತ್ರಾ ಪ್ರಯುಕ್ತ ಮಹಾರಾಷ್ಟç ಹಾಗೂ ಗೋವಾ ರಾಜ್ಯಗಳಿಂದ ಬರುವಂತ ಭಕ್ತರಿಗೆ ದೇವರಹಿಪ್ಪರಗಿ ಹಾಗೂ ಇಂಡಿ ಪಟ್ಟಣಗಳ ಮೂಲಕ ಬಸ್ಗಳ ವ್ಯವಸ್ಥೆಯಿದೆ ಎಂದು ಜಾತ್ರಾ ಸಮಿತಿಯ ಅಧ್ಯಕ್ಷ ಸೋಮನಗೌಡ ಪಾಟೀಲ ಹಾಗೂ ಸಾಯಿಕುಮಾರ ಬಿಸನಾಳ ಪತ್ರಿಕಾ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗುಣಮಟ್ಟದ ಸಿಇಟಿ ಮತ್ತು ನಿಟ್ ತರಬೇತಿಯನ್ನು ನೀಡುವ ಕಾರ್ಯವನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಮಾಡಿಕೊಂಡು ಬರುತ್ತಿದೆ ಎಂದು ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ ಹೇಳಿದರು.ನಗರದ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯುತ್ತಿರುವ ಉಚಿತ ಸಿಇಟಿ – ನಿಟ್ ತರಬೇತಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, ಆದುನಿಕ ಜಗತ್ತಿನಲ್ಲಿ ಬಹಳಷ್ಟು ಪೈಪೋಟಿಯಲ್ಲಿ ಯಶಸ್ಸು ಕಾಣಬೇಕಾಗಿದರೆ ವಿಧ್ಯಾರ್ಥಿಗಳು ಜೀವನದ ಮುಂದಿನ ಗುರಿಯನ್ನು ಇಟ್ಟುಕೊಂಡು ಅಧ್ಯಯನ ಶೀಲರಾಗಬೇಕು ಎಂದರು. ತಾವು ಪಡೆಯುವ ಶಿಕ್ಷಣ ಕೇವಲ ತಮಗಾಗಿ ಅಷ್ಟೇ ಸೀಮಿತವಾಗದೆ, ಸಮಾಜಕ್ಕೆ ಅಗತ್ಯವಿರುವ ಕಾರ್ಯಗಳಿಗೆ ಉಪಯೋಗವಾಗುವಂತೆ ಮುಂದಿನ ದಿನಗಳಲ್ಲಿ ತಮ್ಮ ತಮ್ಮ ಕ್ಷೇತ್ರಗಳಲ್ಲಿ ಕಾರ್ಯ ನಿರ್ವಹಿಸುವ ವ್ಯಕ್ತಿಗಳು ಆಗಬೇಕು ಎಂದರು.ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಚಂದ್ರಕಾಂತ ನಾಟಿಕಾರ ಅವರು ಮಾತನಾಡಿ, ಬಡ ರೈತ ಕಾರ್ಮಿಕರ ಮಕ್ಕಳಿಗೆ ಹೆಚ್ಚು ಹಣ ನೀಡಿ ಶಿಕ್ಷಣ ಪಡೆಯಲು ಕಷ್ಟ ಆಗುತ್ತಿರುವ ಸಂದರ್ಭದಲ್ಲಿ ಉಚಿತವಾಗಿ…
