Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಮಲ್ಲಿಕಾರ್ಜುನ ನಗರದ ಶಿವಾಲಯದಲ್ಲಿ ಮೇ.೦೨ ರಂದು ಸಂಜೆ ೬ ಗಂಟೆಗೆ ವಿಶ್ವಗುರು ಬಸವಣ್ಣನವರ ೮೯೨ ನೇ ಜಯಂತಿ ಉತ್ಸವವನ್ನು ಹಮ್ಮಿಕೊಳ್ಳಲಾಗಿದೆ.ನಗರದ ಜ್ಞಾನಯೋಗಾಸ್ರಮದ ಅಧ್ಯಕ್ಷರಾದ ಬಸವಲಿಂಗ ಸ್ವಾಮೀಜಿ ಸಾನಿಧ್ಯದಲ್ಲಿ ನಡೆಯಲಿರುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಿವೃತ್ತ ಜಂಟಿ ಕೃಷಿ ನಿರ್ದೇಶಕ ಸಿ.ಬಿ.ಬೇವನೂರ ವಹಿಸಲಿದ್ದು, ಧ್ವಜಾರೋಹಣವನ್ನು ನಿವೃತ್ತ ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಟಿ.ಜೇವೂರ ನೆರವೇರಿಸಲಿದ್ದಾರೆ. ರಾಜ್ಯ ರಾಷ್ಟ್ರೀಯ ದಳದ ಗೌರವಾಧ್ಯಕ್ಷ ಬಸವರಾಜ ಕೊಂಡಗೂಳಿ (ಕಗ್ಗೋಡ) ಪ್ರಾಸ್ತಾವಿಕ ನುಡಿಗಳಾಡಲಿದ್ದು, ನಿವೃತ್ತ ಸಹಾಯಕ ಕೃಷಿ ನಿರ್ದೇಶಕ ಎಸ್.ಬಿ.ಅವಜಿ ಸ್ವಾಗತಿಸಲಿದ್ದಾರೆ. ರಾಷ್ಟ್ರೀಯ ಬಸವದಳದ ಅಧ್ಯಕ್ಷ ಮಲ್ಲಿಕಾರ್ಜುನ ಹಳ್ಳಿ, ನಿವೃತ್ತ ಮುಖ್ಯೋಪಾಧ್ಯಾಯ ಜಿ.ಎಸ್.ಬಿರಾದಾರ ಮೊದಲಾದವರು ಪಾಲ್ಗೊಳ್ಳಲಿದ್ದು, ಬಸವಾಭಿಮಾನಿಗಳು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಂಗಟಕರು ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಸಮೀಪದ ಯಲಗೂರದ ಆಂಜನೇಯ ದೇವಸ್ಥಾನದಲ್ಲಿ ಗುರುವಾರ ಆವರಣದಲ್ಲಿನ ಮೂರು ಹುಂಡಿಗಳನ್ನು ಸುಮಾರು ಎರಡು ವರ್ಷಗಳ ನಂತರ ಒಡೆದು ಇಡೀ ದಿನ ಹುಂಡಿಯಲ್ಲಿನ ಹಣಗಳ ಎಣಕೆ ಕಾರ್ಯ ನಡೆಯಿತು.ಹಿಂದೂ ಹುಲಿ ಬಸನಗೌಡ ಪಾಟೀಲ ಯತ್ನಾಳ ಮತ್ತೇ ಬಿಜೆಪಿಗೆ ಬರುವಂತಾಗಲಿ ಎಂಬ ಭಕ್ತನೊಬ್ಬನ ಬೇಡಿಕೆ ಹುಂಡಿಯಲ್ಲಿ ಕಂಡು ಬಂತು. ಇಡೀ ದಿನ ಸಾಮಾಜಿಕ ಜಾಲತಾಣದಲ್ಲಿ ಈ ಹರಕೆಯೇ ಹೆಚ್ಚು ವೈರಲ್ ಆಯಿತು. ಸರ್ಕಾರಿ ನೌಕರಿ ಕೊಡಿಸು, ನಾನು ಪ್ರೀತಿಸಿದ ಹುಡುಗಿ ನನಗೆ ಸಿಗುವಂತಾಗಲಿ, ಒಂದು ವರ್ಷದಿಂದ ಅನುಭವಿಸಿದ ಕಷ್ಟ ನೋವು ಮಾಯಮಾಡು ಎಂಬಿತ್ಯಾದಿ ಬೇಡಿಕೆಗಳುಳ್ಳ ಪತ್ರಗಳು ಕಂಡು ಬಂದವು.ಭಕ್ತರ ಹಲವು ತರೇಹವಾರಿ ಬೇಡಿಕೆಯುಳ್ಳ ಪತ್ರಗಳು ಪತ್ತೆಯಾಗಿವೆ. ಮೂರು ಹುಂಡಿಗಳಲ್ಲಿ ಹಣದ ಜತೆಗೆ ಹರಿದ ನೋಟು, ಚಿನ್ನ, ಬೆಳ್ಳಿಯ ಆಭರಣಗಳು, ಹಳೆಯ 2000 ನೋಟುಗಳು ಕೂಡಾ ಪತ್ತೆಯಾಗಿವೆ.54,73,921 ರೂ ಸಂಗ್ರಹ:ಒಟ್ಟಾರೇ ವಿವಿಧ ನೋಟುಗಳು ಹಾಗೂ ನಾಣ್ಯಗಳ ಎಣಕೆ ಕಾರ್ಯ ಸಂಜೆ ಪೂರ್ಣಗೊಂಡಿತು. ಪೂರ್ಣಗೊಂಡಾಗ ಒಟ್ಟಾರೇ ಮೂರು ಹುಂಡಿಗಳಿಂದ 54,73,921 ರೂಗಳು ಸಂಗ್ರಹವಾಗಿವೆ.…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಸ್ವಾತಂತ್ರ್ಯದ ಬಳಿಕ ದೇಶದಲ್ಲಿ ಪ್ರಪ್ರಥಮ ಬಾರಿಗೆ ಪ್ರಧಾನಿ ಮೋದಿಜೀಯವರು ದೇಶದಲ್ಲಿ ಜನಗಣತಿಯ ಜೊತೆಗೆ ಜಾತಿಗಣತಿಯ ಐತಿಹಾಸಿಕ ತೀರ್ಮಾನ ತೆಗೆದುಕೊಂಡಿದ್ದು ಹಿಂದೂ ಸಮಾಜದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ನಿರ್ಧಾರವಾಗಿದೆ. ಈ ತೀರ್ಮಾನ ಸ್ವಾಗತಾರ್ಹ ಎಂದು ರಾಜ್ಯ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎ.ಎ.ಸ್.ಪಾಟೀಲ ನಡಹಳ್ಳಿ ಹೇಳಿದರು.ಪಟ್ಟಣದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಹಿಂದು ಸಮಾಜದಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾದ ಅಸಮಾನತೆಯನ್ನು ಸಂಪೂರ್ಣವಾಗಿ ತೊಡೆದುಹಾಕಲು, ಹಿಂದೂ ಸಮಾಜದ ಪ್ರತಿಯೊಬ್ಬ ವ್ಯಕ್ತಿ ಸರ್ವ ರಂಗಗಳಲ್ಲಿ ಸಮಾನವಾಗಿ ಬೆಳೆಯುವಂತಾಗಬೇಕು ಎಂದು ಈ ನಿರ್ಧಾರ ಕೈಗೊಳ್ಳಲಾಗಿದೆ. ಹಿಂದೂ ಸಮಾಜದಲ್ಲಿನ ಜಾತಿ ವ್ಯವಸ್ಥೆಯನ್ನು ಬ್ರಿಟೀಷರ ಕಾಲದಿಂದಲೂ ನಮ್ಮನ್ನಾಳಿದ ಕಾಂಗ್ರೆಸ್ ಪಕ್ಷ ರಾಜಕೀಯ ಅಸ್ತçವನ್ನಾಗಿ ಬಳಸಿಕೊಂಡಿದೆ. ಜಾತಿ ಉಪಜಾತಿಗಳ ಸಮೀಕ್ಷೆಯ ನೆಪದಲ್ಲಿ ಹಿಂದೂ ಹಿಂದೂಗಳ ಮಧ್ಯೆ ವ್ಯತ್ಯಾಸವನ್ನು ತಂದಿಟ್ಟು ಸಮಾಜದಲ್ಲಿ ಒಡಕುಂಟು ಮಾಡುವಂತಹ ಕುತಂತ್ರ ರಾಜಕೀಯ ನೀತಿಯನ್ನು ಅನುಸರಿಸಲು ಪ್ರಾರಂಭಿಸಿದೆ. ಇದಕ್ಕೆಲ್ಲ ತಿಲಾಂಜಲಿ ಇಡಲು, ಹಿಂದು ಸಮಾಜವನ್ನು ಒಗ್ಗಟ್ಟಾಗಿಸಿ ಸರ್ವತೋಮುಖ…

Read More

ಐದು ವರ್ಷಗಳಿಂದ ಜಾತಿ ಗಣತಿ ನಡೆಸುವಂತೆ ಕೇಂದ್ರ ಸರ್ಕಾರಕ್ಕೆ ಅವಿರತ ಒತ್ತಡ | ಸಿಎಂ ಸಿದ್ದರಾಮಯ್ಯ ಹೇಳಿಕೆ ಬೆಂಗಳೂರು: ಜನಗಣತಿಯ ಜೊತೆಗೆ ಜಾತಿ ಗಣತಿ ನಡೆಸುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದಕ್ಕೆ ವಿಶೇಷವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಅವಿರತ ಪ್ರಯತ್ನ ಮತ್ತು ಒತ್ತಡ ಕಾರಣ ಎಂದು ಗುರುವಾರ ಹೇಳಿದ್ದಾರೆ.”ಕೇಂದ್ರದ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ. ಆದರೆ ಇದಕ್ಕಾಗಿ ನಾನು ರಾಹುಲ್ ಗಾಂಧಿ ಅವರನ್ನು ಹೆಚ್ಚು ಅಭಿನಂದಿಸುತ್ತೇನೆ. ಏಕೆಂದರೆ, ಕಳೆದ ಐದು ವರ್ಷಗಳಿಂದ, ಅವರು ಜಾತಿ ಗಣತಿ ನಡೆಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ ಮತ್ತು ಅದಕ್ಕಾಗಿ ವ್ಯಾಪಕ ಪ್ರಯತ್ನ ಮಾಡಿದ್ದಾರೆ” ಎಂದು ಸಿಎಂ ತಿಳಿಸಿದರು.ಕಾಂಗ್ರೆಸ್ ತನ್ನ ಪ್ರಣಾಳಿಕೆಯಲ್ಲೇ ಜಾತಿ ಗಣತಿಯನ್ನು ಸೇರಿಸಿದೆ. ಕೇಂದ್ರದ ಈ ನಿರ್ಧಾರ ಮುಂಬರುವ ಬಿಹಾರ ಚುನಾವಣೆಗೆ ಲಿಂಕ್ ಮಾಡಬಹುದು. ಈ ಜನಗಣತಿ ಜೊತೆಗೆ ಸಮಗ್ರ ಸಾಮಾಜಿಕ-ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ಅಗತ್ಯವನ್ನು ಸಿದ್ದರಾಮಯ್ಯ ಒತ್ತಿ ಹೇಳಿದರು.ಈ ಜಾತಿ ಗಣತಿಗೆ ಒಂದು ಟೈಮ್ ಲೈನ್…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪರಿಶಿಷ್ಟ ಜಾತಿಯಲ್ಲಿ 101 ಜಾತಿಗಳಿವೆ. ಈ ಎಲ್ಲ ಬಾಂಧವರು ಸಾಮರಸ್ಯ,ಅನ್ಯೋನ್ಯವಾಗಿವಾಗಿದ್ದಾರೆ. ಸರ್ಕಾರವು ಒಳಮೀಸಲಾತಿ ಮಾಡುವ ಮೂಲಕ ಈ ಜಾತಿಗಳಲ್ಲಿ ಒಡಕು ಉಂಟು ಮಾಡಲು ಹೊರಟಿದೆ. ಈಚೆಗೆ ಸರ್ಕಾರ ತರಾತುರಿಯಲ್ಲಿ ಪ್ರಕಟಿಸಿದ ಜಾತಿ ಗಣತಿ ದತ್ತಾಂಶ ವಾಸ್ತವವಾಗಿಲ್ಲ ಎಂದು ಕರ್ನಾಟಕ ಪ್ರದೇಶ ಬಂಜಾರಾ ಸೇವಾ ಸಂಘದ ಜಿಲ್ಲಾಧ್ಯಕ್ಷ ಡಾ. ಬಸವರಾಜ ಚವ್ಹಾಣ ಹೇಳಿದರು.ಪಟ್ಟಣದ ಈರಕಾರ ಮುತ್ಯಾನ ದೇವಸ್ಥಾನದಲ್ಲಿ ಗುರುವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇದರಿಂದರಾಜ್ಯದಲ್ಲಿ ಪರಿಶಿಷ್ಟ ಜಾತಿಯವರ ಗಣತಿ ಕಾರ್ಯ ಮೇ. ೫ ರಿಂದ 17 ರವರೆಗೆ ಜಾತಿ ಸಮೀಕ್ಷೆ ಮಾಡಲಿದೆ. ಬಂಜಾರ ಸಮುದಾಯದವರು ಹೊಟ್ಟೆಪಾಡಿಗಾಗಿ ಗೂಳೆಹೋಗಿರುವದರಿಂದ ಸಮಾಜಕ್ಕೆ ಹಿನ್ನೆಡೆಯಾಗುವ ಭೀತಿ ಇರುವದರಿಂದ ಈ ಸಮೀಕ್ಷೆಯನ್ನು ಬಂಜಾರ ಸಮಾಜ ವಿರೋಧಿಸುತ್ತದೆ. ಸರ್ಕಾರ ಒಳಮಿಸಲಾತಿ ಸಮಿಕ್ಷೆಗೆ ಆತುರದ ನಿರ್ಧಾರ ಬೇಡ ಎಂದರು.ಒಳಮಿಸಲಾತಿ ಹೆಸರಲ್ಲಿ ಒಗ್ಗಟ್ಟಾಗಿರುವ ಸಮುದಾಯಗಳನ್ನು ಒಡೆದಾಳುವ ನೀತಿಯನ್ನು ಅನುಸರಿಸುತ್ತಿದೆ. ಇದು ಖಂಡನೀಯ. ಒಳಮೀಸಲಾತಿ ಜಾರಿಗಾಗಿ ನ್ಯಾ.ನಾಗಮೋಹನ ದಾಸ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗಿದೆ. ಮೇ ೨೦೨೫ರ ಅಂತ್ಯದ ಒಳಗಾಗಿ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ವಿಶ್ವಗುರು, ಸಾಂಸ್ಕ್ರತಿಕ ನಾಯಕ ಬಸವೇಶ್ವರರು ನುಡಿದಂತೆ ನಡೆಯುವ ಮೂಲಕ ನಿಷ್ಕಲ್ಮಶವಾದ ಆಡಳಿತವನ್ನು ನೀಡುವ ಜೊತೆಗೆ ಆದರ್ಶ ಜೀವನ ಸಾಗಿಸಲು ಬೇಕಾದ ವಚನ ಸಾಹಿತ್ಯವನ್ನು ನೀಡಿದ್ದಾರೆ. ಅವರು ನೀಡಿದ ವಚನ ಸಾಹಿತ್ಯ ಅರಿತುಕೊಳ್ಳುವ ಜೊತೆಗೆ ಅದರಂತೆ ನಡೆದರೆ ನಮ್ಮ ಜೀವನ ಆದರ್ಶಮಯವಾಗುತ್ತದೆ ಎಂದು ತಾಳಿಕೋಟಿಯ ಜೆಎಸ್ಜಿ ಪೌಂಡೇಶನ್ದ ಕಾರ್ಯದರ್ಶಿ ಶ್ರೀಕಾಂತ ಪತ್ತಾರ ಹೇಳಿದರು.ಪಟ್ಟಣದ ಬಸವೇಶ್ವರ ದೇವಸ್ಥಾನದ ಒಳಾವರಣದಲ್ಲಿ ಕೂಡಲಸಂಗಮ ಅಭಿವೃದ್ಧಿ ಮಂಡಳಿಯು ಬಸವ ಜಯಂತಿಯಂಗವಾಗಿ ಬುಧವಾರ ಸಂಜೆ ಹಮ್ಮಿಕೊಂಡಿದ್ದ ರಾಷ್ಟ್ರೀಯ ಬಸವೇಶ್ವರ ಜಯಂತೋತ್ಸವದಲ್ಲಿ ಉಪನ್ಯಾಸ ನೀಡಿ ಮಾತನಾಡಿದ ಅವರು, ಈ ಪಾವನ ನೆಲದಲ್ಲಿ ಜನಿಸಿದ ಬಸವೇಶ್ವರರು ವಚನ ಸಾಹಿತ್ಯ ನೀಡುವ ಮೂಲಕ ಸರ್ವರಿಗೂ ಸಮವಾಗಿ ಬಾಳಬೇಕೆಂಬ ತತ್ವ ಸಂದೇಶ ನೀಡಿದರು. ಬಸವೇಶ್ವರರ ಉದಾತ್ತ ಚಿಂತನೆ ಅರಿತುಕೊಂಡು ನಾವೆಲ್ಲರೂ ನಡೆದರೆ ನೈತಿಕ ಜೀವನ ನಮ್ಮದಾಗುತ್ತದೆ. ಕಾಯಕ-ದಾಸೋಹದ ಕಲ್ಪನೆಯನ್ನು ಜಗತ್ತಿಗೆ ನೀಡುವ ಮೂಲಕ ಕಾಯಕ ಗೌರವದ ಪ್ರತೀಕವಾಗಿದೆ. ಕಾಯಕದಿಂದ ಬರುವ ಸಂಪತ್ತಿನಲ್ಲಿ ದಾಸೋಹ ಮಾಡುವ ಮೂಲಕ ಎಲ್ಲರೊಂದಿಗೆ ಸಾಮರಸ್ಯದಿಂದ ಬದುಕು ಸಾಗಿಸಬೇಕೆಂಬ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರದೇಶದಲ್ಲಿನ ವಾಣಿಜ್ಯಿ ಮಳಿಗೆ ಮೇಲೆ ಮೊದಲ ಅಂತಸ್ತಿನಲ್ಲಿ ಅಂಗಡಿ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸುವಂತೆ ಕೃಷಿ ಮಾರುಕಟ್ಟೆ, ಜವಳಿ, ಸಕ್ಕರೆ ಹಾಗೂ ಕಬ್ಬು ಅಭಿವೃದ್ಧಿ ಸಚಿವ ಶಿವಾನಂದ ಪಾಟೀಲ ಸಂಬಂಧಿಸಿದ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿರುವ 950 ಮೆ.ಟ. ಸಾಮರ್ಥ್ಯದ ಶೈತ್ಯಲೀಕರಣ ಸಂಗ್ರಹಾಗಾರ, 1 ಸಾವಿರ ಮೆ.ಟ. ಸಾಮರ್ಥ್ಯದ ಗೋದಾಮು, ಸಿ.ಸಿ. ರಸ್ತೆ ಕಾಮಗಾರಿ ಬುಧವಾರ ವೀಕ್ಷಿಸಿದ ಅವರು, ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ವಿಜಯಪುರ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯಾಪ್ತಿಯಲ್ಲಿನ ಬಸವನಬಾಗೇವಾಡಿ, ಮನಗೂಳಿ ಎಪಿಎಂಸಿ ಪ್ರಾಂಗಣದಲ್ಲಿ ಹಲವು ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಸೂಚಿಸಿದರು.ಬಸವನ ಬಾಗೇವಾಡಿ ಕೃಷಿ ಉತ್ಪನ್ನ ಮಾರುಕಟ್ಟೆ ಪ್ರದೇಶದಲ್ಲಿ ಈಗಾಗಲೇ ಇರುವ ವಾಣಿಜ್ಯ ಸಂಕೀರ್ಣದ ಮೇಲ್ಭಾಗದಲ್ಲಿ ಮೊದಲ ಅಂತಸ್ತಿನಲ್ಲಿ ವಾಣಿಜ್ಯ ಮಳಿಗೆಗಳನ್ನು ನಿರ್ಮಿಸುವ ಕುರಿತು ಪ್ರಸ್ತಾವನೆ ಸಲ್ಲಿಸುವಂತೆ ಸೂಚಿಸಿದರು.ಇದಲ್ಲದೆ ಮನಗೂಳಿ ಪಟ್ಟಣದಲ್ಲಿ ರಸ್ತೆ ಬದಿ ವ್ಯಾಪ್ತಿಯಲ್ಲಿ ಮಾಡುತ್ತಿದ್ದ ವರ್ತಕರನ್ನು ಉಪ ಮಾರುಕಟ್ಟೆ ಪ್ರದೇಶಕ್ಕೆ ಸ್ಥಳಾಂತರಿಸಿದ್ದು, ಸದರಿ…

Read More

ಇಂಡಿ: ಕಾರ್ಮಿಕರು ಹಾಗೂ ಕಾರ್ಮಿಕ ವರ್ಗವನ್ನು ದೇಶದ ಪ್ರಬಲ ಶಕ್ತಿ ಎಂದರೂ ತಪ್ಪಾಗಲಿಕ್ಕಿಲ್ಲ. ದೇಶದ ಅಭಿವೃದ್ಧಿಯಲ್ಲಿ ಇವರ ಪಾತ್ರ ಬಹಳ ಮಹತ್ವದ್ದು. ಕಾರ್ಮಿಕ ವರ್ಗದವರು ದೇಶದ ಅಭಿವೃದ್ಧಿಗೆ ಬೇರುಗಳಂತೆ ಭದ್ರವಾಗಿರುವವರು. ಆದರೆ ಇಡೀ ದೇಶ ಮತ್ತು ರಾಜ್ಯದಾದ್ಯಂತ ಮೇ – 1 ರಂದು ಅಂತರರಾಷ್ಟ್ರೀಯ ಕಾರ್ಮಿಕರ ದಿನಾಚರಣೆ ಮಾಡುತ್ತೀರುವ ಸಂದರ್ಭದಲ್ಲಿ, ತಾಲ್ಲೂಕಿನ ಆಡಳಿತ ಸೌಧದಲ್ಲಿರುವಕಾರ್ಮಿಕರ ಇಲಾಖೆಗೆ ಬೀಗ ಹಾಕಿದ್ದು, ಆಚರಣೆ ಬಗ್ಗೆ ನಿರ್ಲಕ್ಷ್ಯ ತೋರಿದ್ದರಿಂದ ಕಾರ್ಮಿಕರ ಆಕ್ರೋಶಕ್ಕೆ ಕಾರಣವಾಗಿದೆ.ಹೌದು ಭವಿಷ್ಯದ ಜಿಲ್ಲಾ ‌ಕೇಂದ್ರ ಎಂದು ಬಿಂಬಿತಗೊಂಡಿರುವ ಇಂಡಿ ತಾಲ್ಲೂಕಿನ ಆಡಳಿತ ಸೌಧದಲ್ಲಿ ಇರುವ ಕಾರ್ಮಿಕ ಕಛೇರಿ ನೌಕರರು ನಿರಂತರ ಸೇವೆ ನೀಡಿದರೂ ಉಪಯೋಗಬಾರದಂತಾಗಿದೆ. ಏಕೆಂದರೆ ಇಂದು ಕಾರ್ಮಿಕರಿಗೆ ಅತ್ಯಂತ ಮೌಲ್ಯಯುತ್ ದಿನ. ಅವರು ತಮ್ಮ ನೋವು ನಲಿವು, ಬೇಕು-ಬೇಡಿಕೆ ಭಾವನೆ ಹಂಚಿಕೊಳ್ಳುವ ದಿನಆದರೆ ಕಾರ್ಮಿಕ ಕಛೇರಿ ಬೀಗ ಹಾಕಿದ್ದರಿಂದ ತಾಲೂಕಿನ ಕಾರ್ಮಿಕರ ಕೆಂಗಣ್ಣಿಗೆ ಗುರಿಯಾಗಬೇಕಾಗಿದೆ.ಯಾವುದೇ ದೇಶಕ್ಕೆ ಕಾರ್ಮಿಕರು ಹಾಗೂ ಕಾರ್ಮಿಕ ವರ್ಗದವರು ಬೆನ್ನೆಲುಬಾಗಿರುವುದು ಬಹಳ ಮುಖ್ಯ.ಒಂದು ದೇಶ ಹಾಗೂ ರಾಜ್ಯ ತನ್ನದೇ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪಟ್ಟಣದ ಸದ್ಗುರು ಭೀಮಾಶಂಕರ ಸ್ವಾಮಿ ಸಂಸ್ಥಾನಮಠದಲ್ಲಿ ಮೇ.೦೨ ಶುಕ್ರವಾರದಂದು ಜಗದ್ಗುರು ಶಂಕರಾಚಾರ್ಯರ ಜಯಂತಿ ಮಹೋತ್ಸವ ಹಮ್ಮಿಕೊಳ್ಳಲಾಗಿದೆ ಎಂದು ಶ್ರೀಮಠದ ವತಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ತಿಳಸಿದ್ದಾರೆ.ಬೆಳಿಗ್ಗೆ ೦೯ಗಂಟೆಗೆ ಪಟ್ಟಣದ ಸಂಗಮೇಶ್ವರ ದೇವಸ್ಥಾನದಿಂದ ಶ್ರೀಮಠದವರೆಗೆ ಶೋಭಾಯಾತ್ರೆ, ಬೆಳಿಗ್ಗೆ ೧೦ಗಂಟೆಗೆ ಶ್ರೀಮಠದಲ್ಲಿ ಜಗದ್ಗುರು ಶಂಕರಾಚಾರ್ಯರ ಅಷ್ಟೋತ್ತರ ಪಾರಾಯಣ ಹಾಗೂ ಸಾಮೂಹಿಕ ನಮಃ ಶಂಕರಾಯ ಜಪ, ೧೧ಗಂಟೆಗೆ ವೇ.ಮೂ.ಶ್ರೀ ಆದಿತ್ಯ ವೈದ್ಯ ಅವರಿಂದ ಉಪನ್ಯಾಸ, ಮದ್ಯಾಹ್ನ ೧೨ಗಂಟೆಗೆ ಸದ್ಗುರು ದತ್ತಪ್ಪಯ್ಯ ಶ್ರೀಗಳಿಂದ ಆಶೀರ್ವಚನ ನಡೆಯಲಿದೆ. ಹಾಗೂ ೧೨:೪೦ಗಂಟೆಗೆ ಮಹಾಮಂಗಳಾರತಿ ಹಾಗೂ ಮಹಾಪ್ರಸಾದ ಜರುಗಲಿದೆ.

Read More

ಜಿಲ್ಲಾಧಿಕಾರಿ ಟಿ.ಭೂಬಾಲನ್ ರಿಂದ ನಗರದ ವಿವಿಧ ಕಾಮಗಾರಿಗಳು-ಅತಿಕ್ರಮಣ ಪ್ರದೇಶಗಳ ಸ್ಥಳ ಪರಿಶೀಲನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಧಿಕಾರಿ ಟಿ.ಭೂಬಾಲನ್ ನಗರದ ವಿವಿಧೆಡೆ ಕೈಗೊಂಡಿರುವ ಕಾಮಗಾರಿ ಹಾಗೂ ಅತಿಕ್ರಮಣವಾಗಿರುವ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ತಹಶೀಲ್ದಾರ ಕಚೇರಿ ಹಿಂಭಾಗದಲ್ಲಿರುವ ಖಾಲಿ ಜಾಗವನ್ನು ಪರಿಶೀಲನೆ ನಡೆಸಿದ ಅವರು, ಸದರಿ ಸ್ಥಳದಲ್ಲಿರುವ ತಗ್ಗು ಗುಂಡಿಗಳನ್ನು ದುರಸ್ತಿಗೊಳಿಸಿ, ಸಮತಟ್ಟುಗೊಳಿಸಿ ಪಾಲಿಕೆ ಆಯುಕ್ತರಿಗೆ ಸೂಚಿಸಿದ ಅವರು, ನಗರದಾದ್ಯಂತ ವಿವಿಧೆಡೆ ೧೦ ಸಾವಿರ ಗಿಡಗಳನ್ನು ಬೆಳೆಸುವ ಮೂಲಕ ಹಸಿರು ವಲಯಕ್ಕೆ ಕ್ರಮ ವಹಿಸುವಂತೆ ಅರಣ್ಯಾಧಿಕಾರಿಗಳಿಗೆ ಅವರು ಸೂಚನೆ ನೀಡಿದರು.ನಗರದ ರಿಂಗ್ ರಸ್ತೆ ಶ್ರಿ ನೇತಾಜಿ ಸುಭಾಷಚಂದ್ರ ಭೋಸ ವೃತ್ತದಿಂದ ಸೋಲಾಪುರ ರಾಷ್ಟ್ರೀಯ ಹೆದ್ದಾರಿವರೆಗೆ ಕೈಗೊಂಡಿರುವ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ತ್ವರಿತಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಿ, ಸಾರ್ವಜನಿಕರ ಸುಗಮ ಸಂಚಾರಕ್ಕೆ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.ನಗರದ ದರ್ಗಾ ರಸ್ತೆಯಲ್ಲಿ ಸೋಲಾಪುರ ಹಳೆಯ ಬೈಪಾಸ್‌ದಿಂದ ದರ್ಗಾ (ಇಟ್ಟಂಗಿಹಾಳ) ರಸ್ತೆವರೆಗೆ ಮುಖ್ಯ ರಸ್ತೆಯಲ್ಲಿರುವ ಅನಧಿಕೃತ- ಒತ್ತುವರಿಯಾಗಿರುವ ಕಟ್ಟಡ-ಶೆಡ್‌ಗಳನ್ನು ತೆರವುಗೊಳಿಸಿ ರಸ್ತೆ ಅಗಲೀಕರಣಕ್ಕಾಗಿ ಲೋಕೋಪಯೋಗಿ…

Read More