Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಖಡಕ್ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದೌಜನ್ಯ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಸಂತ್ರಸ್ತರ ಮನೆಗಳಿಗೆ ಭೇಟಿ ಮಾಡಿ, ಮಾಹಿತಿ ಕ್ರೋಡೀಕರಿಸಿ, ಕಾಲಮಿತಿಯೊಳಗೆ ಪ್ರಕರಣಗಳನ್ನು ಇತ್ಯರ್ಥಪಡಿಸಲು ಕ್ರಮ ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದರು.ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ದೌರ್ಜನ್ಯ ಪ್ರಕರಣಗಳಿಗೆ ಸಂಬಂಧಿಸಿದಂತೆ ಪ್ರತಿ ಪ್ರಕರಣಗಳನ್ನು ಅತ್ಯಂತ ಸೂಕ್ತ ರೀತಿಯಲ್ಲಿ ಪರಿಶೀಲನೆ ನಡೆಸಬೇಕು. ಅಧಿಕಾರಿಗಳು ದೌರ್ಜನ್ಯ ಪ್ರಕರಣಗಳನ್ನು ತ್ವರಿತ ಇತ್ಯರ್ಥಕ್ಕೆ ಆದ್ಯತೆ ನೀಡಬೇಕು. ದೌರ್ಜನ್ಯ ಪ್ರಕರಣಗಳ ಪರಿಹಾರ ಧನವನ್ನು ಆದ್ಯತೆ ಮೇಲೆ ಸಂತ್ರಸ್ತರಿಗೆ ಬಿಡುಗಡೆ ಮಾಡಲು ಕ್ರಮ ವಹಿಸಬೇಕು. ನಿಯಮಾನುಸಾರ ಹಾಗೂ ಪ್ರಕರಣಾನುಸಾರ ಕಾಲಮಿತಿಯೊಳಗೆ ಪರಿಹಾರ ಧನ ಒದಗಿಸಬೇಕು. ಯಾವುದೇ ಬಾಕಿ ಉಳಿಸಿಕೊಳ್ಳದಂತೆ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲೆಯ ವಿವಿಧ ನಿಗಮಗಳು ಭೂ ಒಡೆತನ ಯೋಜನೆಯಡಿಯ ಫಲಾನುಭವಿಗಳ ಮಾಹಿತಿಯನ್ನು ಇಂದೀಕರಣ ಮಾಡಿ, ಆದ್ಯತೆಯ ಮೇಲೆ ಅನುಪಾಲನಾ ವರದಿ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪತ್ನಿಯನ್ನು ಹತ್ಯೆಗೈದ ಪತಿ ನೇಣಿಗೆ ಶರಣಾದ ಘಟನೆ ತಾಲೂಕಿನ ಗೆದ್ದಲಮರಿ ಗ್ರಾಮದ ಜಮೀನಿನಲ್ಲಿ ನಡೆದಿದೆ.ಮೃತ ದುರ್ದೈವಿಗಳನ್ನು ಸಿದ್ದಪ್ಪ ಹರನಾಳ(೩೩) ಮತ್ತು ಮೇಘಾ ಹರನಾಳ(೨೮) ಎಂದು ಗುರುತಿಸಲಾಗಿದೆ. ಮೃತರ ಜಮೀನಿನಲ್ಲಿಯೇ ಈ ಘಟನೆ ಸಂಭವಿಸಿದ್ದು ಪ್ರಕರಣದ ಹಿಂದೆ ಸಿದ್ದಪ್ಪನ ಸಂಬಂಧಿಕರ ಕಿರುಕುಳ ಇತ್ತು ಎನ್ನಲಾಗಿದೆ. ಮೃತ ದಂಪತಿಗಳು ೮ವರ್ಷಗಳ ಹಿಂದೆ ಮದುವೆಯಾಗಿದ್ದು ನಾಲ್ಕು ಜನ ಮಕ್ಕಳಿದ್ದರು. ಘಟನಾ ಸ್ಥಳಕ್ಕೆ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಡಿವಾಯ್ಎಸ್ಪಿ ಬಲ್ಲಪ್ಪ ನಂದಗಾವಿ, ಸಿಪಿಐ ಮೊಹಮ್ಮದ ಫಸಿಯುದ್ದಿನ, ಪಿಎಸ್ಐ ಸಂಜಯ ತಿಪರೆಡ್ಡಿ ಭೇಟಿ ನೀಡಿ ಕಾನೂನು ಕ್ರಮ ಕೈಗೊಂಡಿದ್ದಾರೆ.ಘಟನೆಯ ಕುರಿತು ಎಸ್ಪಿ ಲಕ್ಷ್ಮಣ ನಿಂಬರಗಿ ಮಾಧ್ಯಮದವರ ಜೊತೆ ಮಾತನಾಡಿ, ಘಟನೆಯಲ್ಲಿ ಮೇಘಾಳನ್ನು ಆಕೆಯ ಸೀರೆಯಿಂದ ಆಕೆಯ ಕುತ್ತಿಗೆ ಬಿಗಿದು ಹತ್ತೆಗೈದ ಸಿದ್ದಪ್ಪನು ತಾನು ನೇಣು ಹಾಕಿಕೊಂಡ ಬಗ್ಗೆ ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಮೃತ ದೇಹಗಳನ್ನು ಆಸ್ಪತ್ರೆಗೆ ರವಾನಿಸಲಾಗಿದ್ದು ತನಿಖೆಯ ನಂತರವೇ ಘಟನೆಯ ಹಿನ್ನೆಲೆ ತಿಳಿದು ಬರಲಿದೆ ಎಂದರು. ಪ್ರಕರಣ ದಾಖಲು ಘಟನೆಯ ಹಿನ್ನೆಲೆ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಬ್ರಹ್ಮಾಂಡದಲ್ಲಿ ಶೇ೭೫ ರಷ್ಟು ನೀರಿದ್ದರೂ ನಾವು ನೀರಿನ ಸಮಸ್ಯೆಯನ್ನು ಎದುರಿಸುತ್ತಿದ್ದೇವೆ. ಪ್ರತಿಯೊಬ್ಬರೂ ನೀರನ್ನು ಮಿತವಾಗಿ ಬಳಸುವ ಮೂಲಕ ನೀರಿನ ಸಮಸ್ಯೆಯನ್ನು ತಡೆಯಲು ಮುಂದಾಗಬೇಕು ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರೂ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ ಕರೆ ನೀಡಿದರು.ಪಟ್ಟಣದ ನ್ಯಾಯಾಲಯದಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಪುರಸಭೆ ಹಾಗೂ ಇತರ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ವಿಶ್ವ ಜಲ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.ನೀರಿಲ್ಲದೇ ನಮ್ಮ ಜೀವನವಿಲ್ಲ. ನೀರಿನ ಅಭಾವ ಉಂಟಾದಲ್ಲಿ ಮುಂದಿನ ಪೀಳಿಗೆಗೆ ಸಾಕಷ್ಟು ಹೊಡೆತ ಬೀಳಲಿದೆ ಎಂಬ ಅರಿವು ಪ್ರತಿಯೊಬ್ಬರಲ್ಲಿ ಮೂಡಬೇಕು ಎಂಬ ಉದ್ದೇಶದಿಂದ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ನೀರಿನ ಪ್ರಾಮುಖ್ಯತೆ ಮತ್ತು ಸಂರಕ್ಷಣೆಗಾಗಿ ಕೃಷಿ ಹೊಂಡದಂತಹ ಹಲವು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದು ಅವುಗಳ ಪ್ರಯೋಜನಗಳನ್ನು ಪಡೆದುಕೊಳ್ಳುವ ಮೂಲಕ ಅಂತರ್ಜಲ ಮಟ್ಟವನ್ನು ಹೆಚ್ಚಿಸಲು ಪ್ರಯತ್ನಿಸಬೇಕು ಎಂದರು.ಪುರಸಭೆ ಮುಖ್ಯಾಧಿಕಾರಿ ಮಲ್ಲನಗೌಡ ಬಿರದಾರ ಮಾತನಾಡಿ ನೀರನ್ನು…
ಲೇಖನ- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕು,ದ.ಕ ಜಿಲ್ಲೆ-೫೭೪೧೯೮ದೂ:೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ಪ್ರತೀ ವರ್ಷ ಅಕ್ಟೋಬರ್ ೮ ನ್ನು ಭಾರತೀಯ ವಾಯುಸೇನಾ ದಿವಸ್ ಎಂಬುದಾಗಿ ಆಚರಿಸಲಾಗುತ್ತದೆ. ಈ ದಿವಸವನ್ನು ಭಾರತೀಯ ವಾಯು ಸೇನೆಯು ದೇಶ ರಕ್ಷಣೆಯ ಮತ್ತು ಯುದ್ಧದ ಸಂದರ್ಭದಲ್ಲಿ ತೋರಿದ ಅಪ್ರತಿಮ ಸಾಹಸ ಮತ್ತು ತ್ಯಾಗದ ಧ್ಯೋತಕವಾಗಿ ಆಚರಿಸಲಾಗುತ್ತದೆ.೧೯೬೫ರ ಭಾರತ ಪಾಕ್ ಯುದ್ಧದ ಸಮಯದಲ್ಲಿ ದೇಶದ ವಾಯುಸೇನೆಯ ಅತ್ಯಂತ ಹಳೆಯ ಡಕೋಟಾ ಎಕ್ಸ್ಪ್ರೆಸ್ ವಿಮಾನದಲ್ಲಿ ಪಾಕಿಸ್ತಾನಕ್ಕೆ ನುಗ್ಗಿ ಅಲ್ಲಿನ ಸೂಪರ್ ಸಾನಿಕ್ ಎಫ್-೧೦೪ ಸ್ಟಾರ್ ಫೈಟರ್ ವಿಮಾನದೊಂದಿಗೆ ಡಾಗ್ ಫೈಟ್ ನಡೆಸಿ ಅದನ್ನು ಹೊಡೆದು ಉರುಳಿಸಿ ತಾವೂ ಹುತಾತ್ಮರಾದ ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ಅವರ ತ್ಯಾಗ ರೋಮಾಂಚನ ಉಂಟುಮಾಡುತ್ತದೆ.ಅಂದಿನ ಭಾರತದ ವಾಯುಪಡೆಯ ಶಕ್ತಿಯು ಈಗಿನ ವಾಯುಪಡೆಯಷ್ಟು ಬಲಿಷ್ಠವಾಗಿ ಇರಲಿಲ್ಲ. ಇಂದು ಭಾರತೀಯ ವಾಯುಪಡೆಯಲ್ಲಿ ಪ್ರಪಂಚದ ವಿವಿಧ ದೇಶಗಳ ಅತ್ಯಾಧುನಿಕ ಯುದ್ಧ ವಿಮಾನಗಳು ಇವೆ. ೧೯೬೫ರ ಭಾರತ ಪಾಕಿಸ್ತಾನ ಯುದ್ಧದ ಸಂದರ್ಭದಲ್ಲಿ ಪಾಕಿಸ್ತಾನದ ವಾಯುಸೇನೆಯು ಭಾರತೀಯ…
ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ದತ್ತಿ ಸ್ಮರಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಚನಗಳಲ್ಲಿ ಆಧ್ಯಾತ್ಮ ಮತ್ತು ತಾತ್ವಿಕ ವಿಚಾರಗಳಿಗೆ ಹೆಚ್ಚಿನ ಮಹತ್ವವಿದೆ ಮತ್ತು ಅವು ಇಂದಿಗೂ ಸರ್ವಕಾಲಿಕ ಎಂದು ವಿಜಯಪುರದ ಜ್ಞಾನ ಯೋಗಾಶ್ರಮದ ಜ್ಞಾನಾನಂದ ಸ್ವಾಮೀಜಿ ಹೇಳಿದರು.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ ಸಿ ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಜಿಲ್ಲಾ ಶರಣ ಸಾಹಿತ್ಯ ಪರಿಷತ್ತು ಮತ್ತು ಕದಳಿ ಮಹಿಳಾ ವೇದಿಕೆ ಹಾಗೂ ಕನ್ನಡ ವಿಭಾಗದ ಸಯುಕ್ತಾಶ್ರಯದಲ್ಲಿ ಅಲ್ಲಮಪ್ರಭುದೇವರ ಜಯಂತಿಯ ಅಂಗವಾಗಿ ಹಾಗೂ ದಿವಂಗತ ಕೃಷ್ಣಾಭಾಯಿ ಹನುಮಂತ ಬಿದರಿ, ಲಿಂ. ಶಿವಲಿಂಗಮ್ಮ ಪರಪ್ಪ ಸಜ್ಜನ, ಲಿಂ ಶಾಂತಾಬಾಯಿ ಮಲ್ಲೇಶಪ್ಪ ಸಜ್ಜನ, ಕೋರವಾರ ಶಂಕರಗೌಡ ಶರಣಪ್ಪಗೌಡ ಪಾಟೀಲ ಇವರ ದತ್ತಿ ಸ್ಮರಣೆ ಕಾರ್ಯಕ್ರಮ ದತ್ತಿ ದಾಸೋಹಿಗಳಾದ ಪ್ರೊ ಆರ್ ಎಚ್ ಬಿದರಿ ಮತ್ತು ಪ್ರೊ ಜಯಶ್ರೀ ಸಜ್ಜನ ಅವರ ದತ್ತಿ ಕಾರ್ಯಕ್ರಮದಲ್ಲಿ “ಅಲ್ಲಮಪ್ರಭು ಅನುಭಾವ” ವಿಷಯದ ಕುರಿತು ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ವಿದ್ಯಾರ್ಥಿಗಳು…
ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿಕೆಗೆ ವ್ಯಾಪಕ ಖಂಡನೆ | ತಮ್ಮ ಹೇಳಿಕೆ ತಿರುಚಲಾಗಿದೆ ಎಂದ ಡಿಸಿಎಂ ಬೆಂಗಳೂರು: ರಾಜ್ಯದಲ್ಲಿ ಮುಸ್ಲಿಮರಿಗೆ ಶೇಕಡಾ 4 ರಷ್ಟು ಮೀಸಲಾತಿ ಕಲ್ಪಿಸಲು ಸಂವಿಧಾನ ಬದಲಾಯಿಸುವ ಕುರಿತು ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಹೇಳಿಕೆ ಖಂಡಿಸಿ ಮಂಗಳವಾರ ಬಿಜೆಪಿ ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸಿತು.ಆದಾಗ್ಯೂ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಅಂತಹ ಯಾವುದೇ ಹೇಳಿಕೆ ನೀಡಿಲ್ಲ ಮತ್ತು ತಮ್ಮ ಹೇಳಿಕೆಯನ್ನು “ತಿರುಚಲಾಗಿದೆ” ಎಂದು ಸೋಮವಾರ ಹೇಳಿದ್ದಾರೆ.ಡಿಕೆ ಶಿವಕುಮಾರ್ ಅವರ ಹೇಳಿಕೆಯನ್ನು ಖಂಡಿಸಿ, ಕರ್ನಾಟಕ ಸರ್ಕಾರ “ತುಷ್ಟೀಕರಣ ರಾಜಕೀಯ” ಮಾಡುತ್ತಿದೆ ಎಂದು ಆರೋಪಿಸಿ ಮಂಡ್ಯ, ಚಿಕ್ಕಬಳ್ಳಾಪುರ, ಮೈಸೂರು, ಕಲಬುರಗಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಇಂದು ರಾಜ್ಯದ ವಿವಿಧ ಭಾಗಗಳಲ್ಲಿ ಪ್ರತಿಭಟನೆ ನಡೆಸಿದರು.ಶಿವಕುಮಾರ್ ಅವರು ತಮ್ಮ ಹೇಳಿಕೆಗೆ ಕ್ಷಮೆಯಾಚಿಸಬೇಕು ಮತ್ತು ತಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದರು.”ಜೈ ಭೀಮ್” ಘೋಷಣೆಗಳನ್ನು ಕೂಗಿದ ಬಿಜೆಪಿ ಕಾರ್ಯಕರ್ತರು, ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ,…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಯೋಜನೆಗಳ ಲಾಭ ದೊರಕಿಸಲು ಯೋಜನೆಗಳ ಕುರಿತು ಕಾರ್ಯಕ್ರಮಗಳನ್ನು ಹಮ್ಮಿಕೊಂಡು ವ್ಯಾಪಕವಾಗಿ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಂತೆ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಇಲಿಯಾಸ್ ಬೋರಾಮಣಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಸೋಮವಾರ ಜಿಲ್ಲಾ ಪಂಚಾಯತಿ ಸಂಪನ್ಮೂಲ ಕೇಂದ್ರದ ಸಭಾಂಗಣದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದ ಅವರು, ಶಕ್ತಿ ಯೋಜನೆಯಡಿ ಜಿಲ್ಲೆಗೆ ಹೆಚ್ಚುವರಿ ಬಸ್ಗಳನ್ನು ಬೇಡಿಕೆಗಾಗಿ ಸರ್ಕಾರಕ್ಕೆ ಸಲ್ಲಿಸಿದ ಪ್ರಸ್ತಾವನೆಯ ಬಗ್ಗೆ ರಾಜ್ಯ ಮಟ್ಟದಲ್ಲಿ ಚರ್ಚಿಸಲಾಗುವುದು. ೫ ಗ್ಯಾರಂಟಿ ಯೋಜನೆಗಳ ವ್ಯಾಪಕ ಪ್ರಚಾರ ಹಮ್ಮಿಕೊಳ್ಳುವಂತೆ ಅವರು ತಿಳಿಸಿದರು.ಶಕ್ತಿ ಯೋಜನೆಯಡಿ ಜಿಲ್ಲೆಯಲ್ಲಿ ೧೧.೪೨ ಕೋಟಿ ಮಹಿಳೆಯರು ಮತ್ತು ಮಕ್ಕಳು ಉಚಿತವಾಗಿ ಪ್ರಯಾಣಿಸಿದ್ದು, ೩೫೯.೨೨ ಕೋಟಿ ರೂ. ವೆಚ್ಚವಾಗಿದೆ. ಇನ್ನೂ ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶಗಳಿಗೆ, ವಿದ್ಯಾರ್ಥಿಗಳು ಶಾಲೆ ಕಾಲೇಜುಗಳಿಗೆ ಹೋಗಲು ಹೆಚ್ಚವರಿ ಬಸ್ಸುಗಳನ್ನು ಓಡಿಸಲು ಮತ್ತು ಅಂತರ…
ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಗೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಮಾಹಿತಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಿಳೆಯು ಶಕ್ತಿಯ ಪ್ರತಿಕ. ಮಹಿಳೆಯರನ್ನು ಗೌರವಿಸುವ ದೇಶ ನಮ್ಮದಾಗಿದೆ. ಮಹಿಳೆಯರು ಮುಂಚೂಣಿಯಲ್ಲಿರಬೇಕೆಂಬ ದೃಷ್ಟಿಯಿಂದ ಮಹಿಳೆಯರ ಅಭ್ಯುದಯಕ್ಕಾಗಿ ಜಿಲ್ಲೆಯಲ್ಲಿ ಹಲವು ಯೋಜನೆಗಳನ್ನು ಜಾರಿಗೊಳಿಸಿ ಆ ಮೂಲಕ ಕಾರ್ಯ ನಿರ್ವಹಿಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಹೇಳಿದರು.ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಸಮಗ್ರ ಶಿಶು ಅಭಿವೃದ್ಧಿ ಯೋಜನೆಗಳು, ವಿವಿಧ ಸ್ವಯಂ ಸೇವಾ ಸಂಸ್ಥೆಗಳು ಮತ್ತು ಜಿಲ್ಲಾ ಸ್ತ್ರೀ ಶಕ್ತಿ ಒಕ್ಕೂಟಗಳ ಸಂಯುಕ್ತಾಶ್ರಯದಲ್ಲಿ ಮಂಗಳವಾರ ಆಯೋಜಿಸಿದ್ದ ಮಹಿಳೆಯರ ಮತ್ತು ಹೆಣ್ಣು ಮಕ್ಕಳ ಹಕ್ಕುಗಳು, ಸಮಾನತೆ ಹಾಗೂ ಸಬಲೀಕರಣಕ್ಕಾಗಿ-ತ್ವರಿತ ಕ್ರಮ ಎಂಬ ಧ್ಯೇಯದಡಿ ಅಂತರಾಷ್ಟ್ರೀಯ ಮಹಿಳಾ ದಿನಾಚಾರಣೆ-೨೦೨೫ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.ಈ ಹಿಂದೆ ಅನೇಕ ಮೌಢ್ಯ ಮತ್ತು ಕಂದಾಚಾರಗಳಿದ್ದವು, ಈಗ ಬಹಳಷ್ಟು ಸುಧಾರಣೆಯಾಗಿವೆ. ಸಾಮಾಜಿಕ ಸ್ತರದಲ್ಲಿ ಮಹಿಳೆ ಸ್ವಾವಲಂಬಿಯಾಗಿ ತನ್ನ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಮ್ಮ ದೇಶ ಕೃಷಿ ಪ್ರಧಾನವಾದದ್ದು ಅದರಂತೆ ವಿದ್ಯಾರ್ಥಿಗಳು ಮಣ್ಣಿನ ಫಲವತ್ತತೆ ಮತ್ತು ನೀರಿನ ಬಗ್ಗೆ ಅರಿಯುವುದು ಅಲ್ಲದೆ ಪ್ರಯೋಗಿಕ ಕಲಿಕೆ ಅವಶ್ಯಕವಾಗಿದೆ ಎಂದು ರಾಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಎಸ್ ಡಿ ಲಮಾಣಿ ಅಭಿಪ್ರಾಯ ವ್ಯಕ್ತಪಡಿಸಿದರು.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದ ಐಕ್ಯೂಎಸಿ ಮತ್ತು ರಾಸಾಯನಶಾಸ್ತ್ರ ವಿಭಾಗ ಸಹಯೋಗದಲ್ಲಿ ಇಟ್ಟಂಗಿಹಾಳ ಗ್ರಾಮದಲ್ಲಿ ಜರುಗಿದ ಒಂದು ದಿನದ ಮಣ್ಣು ಮತ್ತು ನೀರಿನ ಪರೀಕ್ಷೆಯ ವಿಶೇಷ ಶಿಬಿರದಲ್ಲಿ ಅವರು ಮಾತನಾಡಿದರು.ಅಯೋಜಿಸಲಾಯಿತು.ಮಹಾವಿದ್ಯಾಲಯದ ರಾಸಾಯನಶಾಸ್ತ್ರ ವಿಭಾಗ ಅಂತಿಮ ವರ್ಷದ ವಿದ್ಯಾರ್ಥಿಗಳು ಗ್ರಾಮದ ರೈತರು ಜೊತೆಗೂಡಿ ಅವರ ಹೊಲಗದ್ದೆಗಳಿಗೆ ಬೇಟಿ ನೀಡಿ ಅವರ ಹೊಲಗಳಲ್ಲಿನ ಮಣ್ಣು ಮತ್ತು ನೀರು ಸಂಗ್ರಹಣೆ ಮಾಡಿ 78 ರೈತರ ಮಣ್ಣು ಹಾಗೂ 35 ಜಮೀನುಗಳ ನೀರು ಪರೀಕ್ಷೆ ಮಾಡಿ ರೈತರಿಗೆ ವರದಿಯನ್ನು ಸಲ್ಲಿಸಿದರು.ಡಾ. ಎಸ್ ಡಿ ಲಮಾಣಿ, ಮಹೇಶ್ ಕುಮಾರ್ ಕೆ, ಡಾ ಎಸ್ ಎನ್ ಉಂಕಿ, ಡಾ.ಮಾಲತಿ ಚನಗೊಂಡ್, ಡಾ.ಅನಿಲ್ ಪಾಟೀಲ್…
ಉದಯರಶ್ಮಿ ದಿನಪತ್ರಿಕೆ ಇಂಡಿ: ಏಡ್ಸ್ ಮತ್ತು ಕ್ಷಯರೋಗ ನಿರ್ಮೂಲನೆ ಮತ್ತು ನಿಯಂತ್ರಣಕ್ಕಾಗಿ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಎಲ್ಲರೂ ಅನುಸರಿಸಬೇಕು ಎಂದು ಕ್ಷಯರೋಗ ಆಪ್ತ ಸಮಾಲೋಚಕ ಬಸವರಾಜ ಪಾಟೀಲ ಹೇಳೀದರು.ಅವರು ಇಂಡಿ ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಎನ್ ಎಸ್ ಎಸ್ ಘಟಕ ಹಾಗೂ ತಾಲೂಕು ಸಾರ್ವಜನಿಕ ಆಸ್ಪತ್ರೆಯ ವತಿಯಿಂದ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಏಡ್ಸ್ ಮತ್ತು ಕ್ಷಯರೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಉಪನ್ಯಾಸ ನೀಡಿದರು.ಮುಖ್ಯ ಅತಿಥಿಗಳಾದ ಸೋಮನಿಂಗ ಬಿರಾದಾರ ಮಾತನಾಡಿದರು. ಅಧ್ಯಕ್ಷತೆಯನ್ನು ಪ್ರಾಚಾರ್ಯ ಪ್ರೊ.ರಮೇಶ ಆರ್.ಎಚ್ ಮಾತನಾಡಿ ‘ ಏಡ್ಸ್ ಮತ್ತು ಕ್ಷಯರೋಗದ ಕುರಿತು ಸಮಾಜದಲ್ಲಿ ಅರಿವನ್ನು ಮೂಡಿಸಲು ಸಲಹೆ ನೀಡಿದರು. ವೇದಿಕೆಯಲ್ಲಿ ಐಕ್ಯೂಎಸಿ ಸಂಯೋಜಕ ಪ್ರೊ.ರವಿಕುಮಾರ ಅರಳಿ, ಪ್ರೊ. ಸಂಗಮೇಶ ಹಿರೇಮಠ, ಶಕುಂತಲಾ ದಶವಂತ, ಸೋಮಣ್ಣ ಸಜ್ಜನ ರಾಷ್ಟ್ರೀಯ ಸೇವಾ ಯೋಜನೆ ಸಂಯೋಜನಾಧಿಕಾರಿ ಪ್ರೊ.ಪಿ.ಎಸ್. ದೇವರ ಸ್ವಾಗತಿಸಿದರು. ಪ್ರೊ.ಕಿರಣ ರೇವಣಕರ ಮೊದಲಾದವರು ಉಪಸ್ಥಿತರಿದ್ದರು.ಎನ್ ಎಸ್ ಎಸ್ ಸಂಯೋಜನಾಧಿಕಾರಿ ಪ್ರೊ.ಪಿ.ಎಸ್. ದೇವರ ಸ್ವಾಗತಿಸಿದರು. ಪ್ರೊ.ಕಿರಣ ರೇವಣಕರ ವಂದಿಸಿದರು. ಕು.ಶಿವರಾಜ ನರಳೆ…
