Subscribe to Updates
Get the latest creative news from FooBar about art, design and business.
Author: editor.udayarashmi@gmail.com
ರಾಷ್ಟ್ರೀಯ ಮೀನುಗಾರರ ಸಂಘದ ರಾಜ್ಯಾಧ್ಯಕ್ಷ ಮಂಜುನಾಥ ಸುಣಗಾರ ಆಗ್ರಹ | ಕೇಂದ್ರ ಜಲಶಕ್ತಿ ಇಲಾಖೆ ರಾಜ್ಯ ಖಾತೆ ಸಚಿವ ಡಾ.ರಾಜಭೂಷಣ್ ಚೌಧರಿ ಅವರಿಗೆ ಮನವಿ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಹಿಂದುಳಿದ ವರ್ಗಗಳಲ್ಲಿ ಅದರಲ್ಲೂ ಮೀನುಗಾರರಿಗೆ ಮೀಸಲಾತಿಯಲ್ಲಿ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವ ಕುರಿತು ನಿರಾವರಿ ಇಲಾಖೆಗಳ ವ್ಯಾಪ್ತಿಗೆ ಬರುವ ಕೆರೆಗಳನ್ನು ಸಾಂಪ್ರದಾಯಿಕ ಮೀನುಗಾರರಿಗೆ ಗುತ್ತಿಗೆ ನೀಡುವಂತೆ ರಾಷ್ಟ್ರೀಯ ಮೀನುಗಾರರ ಸಂಘದ ರಾಜ್ಯಾಧ್ಯಕ್ಷ ಮಂಜುನಾಥ ಸುಣಗಾರ ಆಗ್ರಹಿಸಿದರು.ಕೇಂದ್ರದ ಜಲಶಕ್ತಿ ಇಲಾಖೆಯ ರಾಜ್ಯ ಖಾತೆ ಸಚಿವ ಡಾ.ರಾಜಭೂಷಣ್ ಚೌಧರಿ ಅವರನ್ನು ದೆಹಲಿಯ ಅವರ ನಿವಾಸದಲ್ಲಿ ತಮ್ಮ ನೇತೃತ್ವದ ನಿಯೋಗದೊಂದಿಗೆ ಭೇಟಿಯಾಗಿ ಅವರು ಮಾತನಾಡಿದರು.ಇದೇ ವೇಳೆ ಗುತ್ತಿಗೆ ನೀಡುವ ಸಂದರ್ಭದಲ್ಲಿ ಶೇಕಡಾ 75% ಮೀಸಲಾತಿಯನ್ನು ಸಾಂಪ್ರದಾಯಿಕ ಮೀನುಗಾರ ಸಮುದಾಯದವರಿಗೆ ನೀಡಬೇಕೆಂದು ಮನವಿ ಸಲ್ಲಿಸಲಾಯಿತು ಹಾಗೂ ಮೀನುಗಾರಿಕೆಯಲ್ಲಿ e procurement ಅನ್ನು ರದ್ದುಪಡಿಸಿ ನೇರವಾಗಿ ಸಾಂಪ್ರದಾಯಿಕ ಮೀನುಗಾರರಾದ ಗಂಗಾಮತಸ್ಥರು, ಬೆಸ್ತರು, ಕೊಲಿ ಕಬ್ಬಲಿಗ, ಮೊಗವೀರ ಸಮುದಾಯದ ಸಂಘಗಳಿಗೆ ಗುತ್ತಿಗೆ ಹಕ್ಕನ್ನು ನೀಡುವುದು ಮತ್ತು ಅವರುಗಳಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವಂತೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೈಗಾರಿಕೆ, ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ ಅವರು ಜಿಲ್ಲಾ ಪಂಚಾಯಿತಿ ಹಾಗೂ ಗ್ರಾಮೀಣ ಮತ್ತು ಚಿಕ್ಕ ಉದ್ಯಮ ಇಲಾಖೆ ವತಿಯಿಂದ 2024-25 ನೇ ವರ್ಷದಲ್ಲಿ ಮಂಜೂರಾದ ಉಚಿತ ವಿದ್ಯುತ್ ಚಾಲಿತ ಹೊಲಿಗೆ ಯಂತ್ರಗಳನ್ನು ಫಲಿನುಭವಿಗಳಿಗೆ ವಿತರಿಸಿದರು.ಸೋಮವಾರ ನಗರದಲ್ಲಿರುವ ಗೃಹ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಿಕೋಟಾ ಮತ್ತು ಬಬಲೇಶ್ವರ ತಾಲೂಕುಗಳ ಒಟ್ಟು ೭೬ ವೃತ್ತಿಪರ ಅರ್ಹ ಮಹಿಳಾ ಕುಶಲಕರ್ಮಿಗಳಿಗೆ ಅವರು ವಿದ್ಯುತ್ ಚಾಲಿತ ಹೊಲಿಗೆ ಯಂತ್ರಗಳನ್ನು ವಿತರಿಸಿದರು.ಬಳಿಕ ಮಾತನಾಡಿದ ಸಚಿವರು, ಈ ಯಂತ್ರಗಳನ್ನು ಬಳಸಿಕೊಂಡು ಮಹಿಳೆಯರು ಸ್ವಾಭಿಮಾನಿಯಾಗಿ ಬದುಕು ಕಟ್ಟಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.ಈ ಸಂದರ್ಭದಲ್ಲಿ ಜಿ.ಪಂ.ಹಾಗೂ ಗ್ರಾಮೀಣ ಮತ್ತು ಚಿಕ್ಕ ಉದ್ಯಮ ಇಲಾಖೆ ಉಪನಿರ್ದೇಶಕ ಎಸ್. ಎಂ. ಪಾಟೀಲ ಸೇರಿದಂತೆ ಫಲಾನುಭವಿಗಳು ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪರೀಕ್ಷೆ ಬರೆಯಲು ತೆರಳುವಾಗ ರಸ್ತೆ ಅಪಘಾತದಲ್ಲಿ ಗಾಯಗೊಂಡು ಬಿ.ಎಲ್.ಡಿ.ಇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ 10ನೇ ತರಗತಿ ವಿದ್ಯಾರ್ಥಿನಿಯರನ್ನು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು.ಸೋಮವಾರ ಜಿಲ್ಲೆಯ ಕುಮಟಗಿ ತಾಂಡಾದ 10ನೇ ತರಗತಿಯ ವಿದ್ಯಾರ್ಥಿಗಳಾದ ಐಶ್ವರ್ಯಾ ಚವ್ಹಾಣ, ಪ್ರೀತಿ ಚವ್ಹಾಣ ಮತ್ತು ಪಕ್ಕದ ಮನೆಯ ಶ್ವೇತಾ ರಾಠೋಡ ಕಗ್ಗೋಡ ಪ್ರೌಢಶಾಲಾ ಕೇಂದ್ರಕ್ಕೆ ತೆರಳುವಾಗ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದರು. ಅವರನ್ನು ಚಿಕಿತ್ಸೆಗಾಗಿ ವಿಜಯಪುರ ನಗರದ ಬಿ.ಎಲ್.ಡಿ.ಇ ಆಸ್ಪತ್ರೆಗೆ ದಾಖಲಿಸಲಾಗಿದೆ.ಈ ವಿಷಯ ತಿಳಿದ ತಕ್ಷಣ ಸಚಿವರು ಬಿ.ಎಲ್.ಡಿ.ಇ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯರನ್ನು ಭೇಟಿಯಾಗಿ ವಿದ್ಯಾರ್ಥಿನಿಯರಿಗೆ ಧೈರ್ಯ ತುಂಬಿ, ಶೀಘ್ರ ಗುಣಮುಖರಾಗುವಂತೆ ಹಾರೈಸಿದರು. ಅಲ್ಲದೇ, ವಿದ್ಯಾರ್ಥಿಗಳು ಸಂಪೂರ್ಣ ಚೇತರಿಸಿಕೊಳ್ಳುವವರೆಗೆ ಅವರಿಗೆ ಉಚಿತ ಚಿಕಿತ್ಸೆ ನೀಡುವಂತೆ ವೈದ್ಯರಿಗೆ ಸೂಚನೆ ನೀಡಿದರು.ಈ ಸಂದರ್ಭದಲ್ಲಿ ಆಸ್ಪತ್ರೆಯ ವೈದ್ಯರು ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ಕೊಲ್ದಾರ: ಪಟ್ಟಣದಿಂದ ಬೆಳಗಾವಿ ಜಿಲ್ಲೆಯ ಯಡೂರ ಶ್ರೀ ವೀರಭದ್ರೇಶ್ವರ ದೇವಸ್ಥಾನದವರೆಗೆ ಯಶಸ್ವಿ 31ನೇ ವರ್ಷದ ಪಾದಯಾತ್ರೆಯನ್ನು ಹಮ್ಮಿಕೊಳ್ಳಲಾಗಿದೆ. ಮಾರ್ಚ್ 25 ರಂದು ಬೆಳಿಗ್ಗೆ 8 ಗಂಟೆಗೆ ಕೊಲ್ದಾರದ ಶ್ರೀಶೈಲ ರೇವಣಪ್ಪ ಮೇಲಗಿರಿ ಇವರ ಮನೆಯಿಂದ ಪಾದಯಾತ್ರೆಯು ಆರಂಭಗೊಂಡು ಮುಂಡಗನೂರು, ಆಸಂಗಿ, ಆಲಕನೂರು ಮಾರ್ಗವಾಗಿ ಮಾರ್ಚ್ 28 ರಂದು ಯಡೂರ ವೀರಭದ್ರೇಶ್ವರ ದೇವಸ್ಥಾನ ತಲುಪಲಿದ್ದಾರೆ ಎಂದು ಈರಣ್ಣ ಔರಸಂಗ, ವ್ಹಿ.ಎಂ. ಶ್ಯಾವಿಗೊಂಡ, ರಾಚಯ್ಯ ಗಣಕುಮಾರ ಸಿ.ಎಂ. ಗಣಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ ಪಾದಯಾತ್ರೆಯಲ್ಲಿ ಪಾಲ್ಗೊಳ್ಳವ ಭಕ್ತರು ಈರಣ್ಣ ಔರಸಂಗ – 9986330925, ವ್ಹಿ.ಎಂ. ಶ್ಯಾವಿಗೊಂಡ 9740630453, ಈರಯ್ಯ ಹಳ್ಳಿ – 7019575172, ಸಿ.ಎಂ. ಗಣಕುಮಾರ 9008692092 ದೂರವಾಣಿಗೆ ಸಂಪರ್ಕಿಸಬೇಕು ಎಂದು ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಸಮಾಜದ ಕಟ್ಟಕಡೆಯ ಮಹಿಳೆಯರಿಗಾಗಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ (ಎನ್.ಆರ್.ಎಲ್.ಎಮ್) ಯೋಜನೆ ಬಹಳ ಸಹಕಾರಿಯಾಗಿದೆ ಎಂದು ವಿಜಯಪುರ ಜಿಲ್ಲಾ ಪಂಚಾಯತಿ ಯೋಜನಾ ನಿರ್ದೇಶಕ ಬಿ.ಎಸ್. ರಾಠೋಡ ಹೇಳಿದರು.ಪಟ್ಟಣದ ಸಂತೆ ಮಾರುಕಟ್ಟೆ ಸ್ಥಳದ ಹತ್ತಿರ ಜಿಲ್ಲಾ ಪಂಚಾಯತಿ ವಿಜಯಪುರ ಹಾಗೂ ತಾಲೂಕ ಪಂಚಾಯತಿ ಕೊಲ್ಹಾರ ಇವರ ಸಹಯೋಗದಲ್ಲಿ ಎನ್.ಆರ್.ಎಲ್.ಎಮ್ ಯೋಜನೆಯಡಿ ಸಂಜೀವಿನಿ ಮಾಸಿಕ ಸಂತೆ ಮೇಳ ಹಾಗೂ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಸಸಿಗೆ ನೀರು ಹಾಕುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಈ ಯೋಜನೆಯಲ್ಲಿ ಮಹಿಳೆಯರಿಗೆ ಉನ್ನತ ತರಬೇತಿಗಳನ್ನು ನೀಡಿ ಸಾಲ ಸೌಲಭ್ಯಗಳನ್ನು ನೀಡಿ ಸ್ವಂತ ಉದ್ಯೋಗ ಮಾಡಲು ಹಾಗೂ ಸ್ವ ಸಹಾಯ ಗುಂಪಿನ ಸದಸ್ಯರುಗಳು ಸೇರಿ ಉದ್ಯಮ ಪ್ರಾರಂಭಿಸಲು ಎಲ್ಲ ರೀತಿಯ ಅನುಕೂಲಗಳನ್ನು ಕಲ್ಪಿಸಿ ಕೊಡಲಾಗುವುದು ಎಲ್ಲ ಮಹಿಳೆಯರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ತಿಳಿಸಿದರು.ತಾಪಂ ಇಓ ಸುನೀಲ ಮದ್ದಿನ ಅಧ್ಯಕ್ಷತೆ ವಹಿಸಿ ಮಾತನಾಡಿ ಮಹಿಳೆಯರು ಸ್ವಾವಲಂಬನೆ ಬದುಕು ರೂಪಿಸಿಕೊಳ್ಳುವುದರಲ್ಲಿ ಹಾಗೂ ಅವರ ಆರ್ಥಿಕ ಜೀವನ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಿಕೋಟಾ ತಾಲೂಕ ಆಡಳಿತದ ವತಿಯಿಂದ ಏಪ್ರಿಲ್ ೫ರಂದು ಡಾ.ಬಾಬು ಜಗಜೀವನರಾಂ ಹಾಗೂ ಏಪ್ರಿಲ್ ೧೪ ರಂದು ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ ಅವರ ಜಯಂತ್ಯೋತ್ಸವ ಕಾರ್ಯಕ್ರಮಗಳನ್ನು ಅರ್ಥಪೂರ್ಣವಾಗಿ ಹಾಗೂ ಅದ್ಧೂರಿಯಾಗಿ ಆಚರಿಸಲು ನಿರ್ಧರಿಸಲಾಯಿತು.ತಿಕೋಟಾ ತಾಲೂಕಿನ ತಹಶೀಲ್ದಾರರಾದ ಸುರೇಶ ಚಾವಲರ ಅವರ ಅಧ್ಯಕ್ಷತೆಯಲ್ಲಿ ಮಾರ್ಚ್ ೨೪ ರಂದು ತಹಶೀಲ್ದಾರ ಅವರ ಕಾರ್ಯಾಲಯದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.ಈ ಮಹನೀಯರ ಜಯಂತಿ ಕಾರ್ಯಕ್ರಮಗಳಿಗೆ ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಸಾರ್ವಜನಿಕರು ಹಾಗೂ ತಾಲೂಕಿನ ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿಗಳು ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಅವರು ಕೋರಿದ್ದಾರೆ.ಸಭೆಯಲ್ಲಿ ತಾಲೂಕಾ ಪಂಚಾಯತಿಯ ಕಾರ್ಯನಿರ್ವಾಹಣಾಧಿಕಾರಿಗಳಾದ ಬಿ.ಆರ್ ಬಿರಾದಾರ, ಪಟ್ಟಣ ಪಂಚಾಯಿತಿಯ ಅಧಿಕಾರಿಗಳಾದ ರಘು ನಡುವಿನಮನಿ ಸೇರಿದಂತೆ ತಾಲೂಕಾ ಮಟ್ಟದ ಅಧಿಕಾರಿಗಳು, ವಿವಿಧ ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಉಪಸ್ಥಿತರಿದ್ದರೆಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಜೆ ಇಂಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಆಲಮೇಲದಲ್ಲಿ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣ ಕಾಮಗಾರಿ ಭೂಮಿಪೂಜೆ ನೆರವೇರಿಸಿದ ಶಾಸಕ ಅಶೋಕ ಮನಗೂಳಿ ಭರವಸೆ ಉದಯರಶ್ಮಿ ದಿನಪತ್ರಿಕೆ ಆಲಮೇಲ: ಪಟ್ಟಣವು ಸುತ್ತ ಮತ್ತಲಿನ ಗ್ರಾಮದವರಿಗೆ ವ್ಯಾಪಾರ ಕೇಂದ್ರವಾಗಬೇಕು ಮತ್ತು ಆಲಮೇಲ ಅಭಿವೃದ್ದಿ ಹೊಂದಿದ ತಾಲೂಕು ಕೇಂದ್ರ ವಾಗಬೇಕು. ಈ ದಿಸೆಯಲ್ಲಿ ಎಲ್ಲ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಬದ್ಧನಾಗಿರುವೆ ಎಂದು ಸಿಂದಗಿ ಶಾಸಕ ಅಶೋಕ ಮನಗೂಳಿ ಹೇಳಿದರು.ಕರ್ನಾಟಕ ರಾಜ್ಯ ಪೊಲೀಸ್ ವಸತಿ ಮತ್ತು ಮೂಲಭೂತ ಸೌಲಭ್ಯ ಅಭಿವೃದ್ದಿ ನಿಗಮ ನಿಯಮಿತ ಉಪವಿಭಾಗದಿಂದ ಆಲಮೇಲ ಪಟ್ಟಣದಲ್ಲಿ ಗ್ರೇಡ್-೪ ಪೊಲೀಸ್ ಠಾಣೆ ಕಟ್ಟಡ ನಿರ್ಮಾಣ ಕಾಮಗಾರಿ ಭೂಮಿ ಪೂಜಾ ಸಮಾರಂಭ ಉದ್ದೇಶಿಸಿ ಅವರು ಮಾತನಾಡಿದರು.ಆಲಮೇಲದಲ್ಲಿ ಪ್ರಜಾಸೌದ ನಿರ್ಮಾಣಕ್ಕೆ ೮ ಕೋಟಿ ರೂ. ಮತ್ತು ಅಗ್ನಿಶಾಮಕ ದಳಕ್ಕೆ ೩.೫ ಕೋಟಿ ರೂ. ಬಾಲಕರ ವಸತಿ ನೀಲಯಕ್ಕೆ ೫ ಕೋಟಿ ರೂ. ಮಂಜುರು ಆಗಿದ್ದು ಆಲಮೇಲ ಪಟ್ಟಣಕ್ಕೆ ನನ್ನ ಮುಂದಿನ ಅಧಿಕಾರ ಅವದಿಯಲ್ಲಿ ಇನ್ನೂ ಹೆಚ್ಚಿನ ಕೆಲಸ ಮಾಡುತ್ತೇನೆ ಎಂದು ಶಾಸಕ ಮನಗೂಳಿ ಹೇಳಿದರು.ಈ ಕಾರ್ಯಕ್ರಮದಲ್ಲಿ ಠಾಣ…
ಹಿರಿಯ ಸಿವ್ಹಿಲ್ ನ್ಯಾಯಧೀಶರ ಹಾಗೂ ಸದಸ್ಯ ಕಾರ್ಯದರ್ಶಿ, ಕಾನೂನು ಸೇವೆಗಳ ಪ್ರಾಧಿಕಾರ ಅರವಿಂದ ಹಾಗರಗಿ ಕರೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯನ್ನು ಕ್ಷಯ ಮುಕ್ತ ಜಿಲ್ಲೆಯನ್ನಾಗಿಸಲು ತಾವೆಲ್ಲರೂ ಕಂಕಣಬದ್ಧರಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಹಿರಿಯ ಸಿವ್ಹಿಲ್ ನ್ಯಾಯಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು, ಕಾನೂನು ಸೇವೆಗಳ ಪ್ರಾಧಿಕಾರ, ಅರವಿಂದ ಹಾಗರಗಿ ಕರೆ ನೀಡಿದರು.ನಗರದ ಕಂದಗಲ್ಲ ಶ್ರೀ ಹನಮಂತರಾಯ ರಂಗಮಂದಿರದಲ್ಲಿ ಸೋಮವಾರ ವಿಶ್ವ ಕ್ಷಯರೋಗ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಭಾರತದಲ್ಲಿ ವಿಸ್ತಾರವಾಗುತ್ತಿರುವ ಅನೇಕ ರೋಗಗಳಲ್ಲಿ ಈ ಕ್ಷಯ ರೋಗ ಒಂದು. ಇದರ ನಿರ್ಮೂಲನೆಗೆ ತಿಳುವಳಿಕೆ ಅತ್ಯಗತ್ಯವಾಗಿದೆ. ಕ್ಷಯಮುಕ್ತ ಗ್ರಾಮ ಪಂಚಾಯತ್ಗಳಂತೆಯೇ ಕ್ಷಯ ಮುಕ್ತ ಜಿಲ್ಲೆಯನ್ನಾಗಿಸಲು ಪ್ರತಿಯೊಬ್ಬರು ಕೈ ಜೋಡಿಸಬೇಕು ಎಂದು ಹೇಳಿದರು.ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಸಂಪತ್ ಗುಣಾರಿ, ಜಿಲ್ಲಾ ಆಸ್ಪತ್ರೆಯ ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ ಮಾತನಾಡಿದರು.ಇದೇ ಸಂದರ್ಭದಲ್ಲಿ ಜಿಲ್ಲೆಯ ಒಟ್ಟು ೭೯ ಗ್ರಾಮ ಪಂಚಾಯತಿಗಳು ಕ್ಷಯ ಮುಕ್ತ ಗ್ರಾಮ ಪಂಚಾಯತಿಯಾಗಿ ಆಯ್ಕೆಯಾಗಿದ್ದು, ಗ್ರಾಮ…
ವಿಜಯಪುರದಲ್ಲಿ ವಿಶ್ವ ಕ್ಷಯರೋಗ ದಿನ ಆಚರಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗ್ರಾಮ ಪಂಚಾಯತಿ, ಅಂಗನವಾಡಿ ಕಾರ್ಯಕರ್ತೆಯರು, ವಿವಿಧ ಸಂಘ ಸಂಸ್ಥೆಗಳು ಕ್ಷಯ ರೋಗವನ್ನು ನಿಯಂತ್ರಿಸಲು ಆರೋಗ್ಯ ಇಲಾಖೆ ಯೊಂದಿಗೆ ಕೈಜೋಡಿಸಬೇಕು ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕ್ಷಯರೋಗ ವಿಭಾಗ ಹಾಗೂ ಜಿಲ್ಲಾ ಸರ್ಕಾರೇತರ ಸೇವಾ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಸೋಮವಾರ ನಗರದ ಅಂಬೇಡ್ಕರ್ ವೃತ್ತದಿಂದ ಹಮ್ಮಿಕೊಂಡ ವಿಶ್ವ ಕ್ಷಯರೋಗ ದಿನಾಚರಣೆ ಜಾಥಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು, ಈ ರೋಗವು ಒಬ್ಬ ವ್ಯಕ್ತಿಯಿಂದ ಇನ್ನೊಬ್ಬ ವ್ಯಕ್ತಿಗೆ ಸುಲಭವಾಗಿ ಹರಡುತ್ತದೆ. ಪ್ರತಿ ವರ್ಷ ನಮ್ಮ ದೇಶದಲ್ಲಿ ಕ್ಷಯ ರೋಗದಿಂದ ಅನೇಕ ಜನರು ಜೀವ ಕಳೆದುಕೊಳ್ಳುತ್ತಿದ್ದಾರೆ. ಈ ರೋಗ ಮೈಕೋಬ್ಯಾಕ್ಟೀರಿಯಂ ಟ್ಯುಬರ್ಕುಲೋಸಿಸ್ ಎಂಬ ರೋಗದಿಂದ ಬರುತ್ತದೆ. ಇದು ವಾಸಿಯಾಗುವಂತಹ ರೋಗವಾಗಿದ್ದು, ಸೂಕ್ತ ಸಮಯದಲ್ಲಿ ಚಿಕಿತ್ಸೆ ಪಡೆಯಬೇಕು ಸಾರ್ವಜನಿಕರಲ್ಲಿ ಈ ರೋಗದ ಕುರಿತು ಅರಿವು ಮೂಡಿಸುವ ಕಾರ್ಯವಾಗಬೇಕು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏಪ್ರಿಲ್ ೭ ರಿಂದ ೯ರವರೆಗೆ ನಗರದ ಡಾ.ಬಿ.ಆರ್.ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.ಪುರುಷರ ವಿಭಾಗದಲ್ಲಿ ೪೫ ವರ್ಷ ಮೇಲ್ಪಟ್ಟ ಹಾಗೂ ಒಳಗಿನವರಿಗೆ ಫುಟಬಾಲ್, ವಾಲಿಬಾಲ್, ಹಾಕಿ, ಕಬಡ್ಡಿ, ಟೇಬಲ ಟೆನ್ನಿಸ್ (ಸಿಂಗಲ್ಸ್-ಡಬಲ್ಸ್) ಟೆನ್ನಿಸ್, ಶೆಟಲ್ ಬ್ಯಾಡ್ಮಿಂಟನ್, ಬಾಲ್ ಬ್ಯಾಡ್ಮಿಂಟನ್, ಕೇರಂ, ಕ್ರಿಕೆಟ್, ಬಾಸ್ಕೆಟ್ಬಾಲ್, ಚೆಸ್, ಆಟೋಟಗಳು, ಈಜು, ಭಾರ ಎತ್ತುವ ಸ್ಪರ್ಧೆ ಏರ್ಪಡಿಸಲಾಗಿದೆ.ಮಹಿಳಾ ವಿಭಾಗದಲ್ಲಿ ೪೦ ವರ್ಷ ಮೇಲ್ಪಟ್ಟ ಹಾಗೂ ಒಳಗಿನವರಿಗೆ ಬ್ಯಾಡ್ಮಿಂಟನ್ (ಸಿಂಗಲ್ಸ್-ಡಬಲ್ಸ್), ಟೆನ್ನಿಸ್ (ಸಿಂಗಲ್ಸ್-ಡಬಲ್ಸ್), ಕೇರಂ (ಸಿಂಗಲ್ಸ್-ಡಬಲ್ಸ್), ಟೆನಿಕ್ವಾಯಿಟ್ (ಸಿಂಗಲ್ಸ್-ಡಬಲ್ಸ್), ಥ್ರೋಬಾಲ್, ಈಜು, ಆಟೋಟ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.ಸಾಂಸ್ಕೃತಿಕ ಕಾರ್ಯಕ್ರಮಗಳಾದ ಕರ್ನಾಟಕ ಶಾಸ್ತ್ರೀಯ ಸಂಗೀತ, ಕರ್ನಾಟಕ ಲಘು ಶಾಸ್ತ್ರೀಯ ಸಂಗೀತ, ಪಾಶ್ಚಾತ್ಯ ಗಾಯನ, ಜಾನಪದ ಗೀತೆ, ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ, ಹಿಂದೂಸ್ತಾನಿ ಲಘು ಶಾಸ್ತ್ರೀಯ ಸಂಗೀತ, ಕರ್ನಾಟಕ ಕ್ಲಾಸಿಕಲ್, ನೃತ್ಯ, ಕಥಕ್, ಭರತನಾಟ್ಯ, ಮಣಿಪುರಿ, ಕುಚುಪುಡಿ, ಓಡಿಸ್ಸಿ, ಕಥಕಳಿ, ಕಿರುನಾಟಕ ಸ್ಪರ್ಧೆಗಳನ್ನು ಪುರುಷ ಮತ್ತು…
