Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಪಟ್ಟಣದ ಶ್ರೀ ಎ.ಬಿ.ಜತ್ತಿ ಪ್ರೌಢ ಶಾಲೆಯ ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಯಲ್ಲಿ ವೈಷ್ಣವಿ ಮೆಟಗುಡ್ಡ 614 ಅಂಕ ಶೇ. 98.24 (ಪ್ರಥಮ), ತಾರಾಬಾಯಿ ಕಟೆ 594 ಶೇ.95.04 (ದ್ವೀತಿಯ), ಪೂಜಾ ಕಾಳೇಲ 587 ಶೇ.93.92 (ತೃತೀಯ) ಸ್ಥಾನ ಪಡೆದುಕೊಂಡಿದ್ದಾರೆ.2025-26 ನೇ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅತೀ ಹೆಚ್ಚು ಅಂಕಗಳನ್ನು ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ ವಿದ್ಯಾರ್ಥಿಗಳಿಗೆ ಸಂಸ್ಥೆಯ ಅಧ್ಯಕ್ಷರು, ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂ.ಬಿ.ಪಾಟೀಲ, ಉಪಾಧ್ಯಕ್ಷ ಜಿ. ಕೆ. ಪಾಟೀಲ, ಪ್ರಧಾನ ಕಾರ್ಯದರ್ಶಿ ಸುನೀಲಗೌಡ ಪಾಟೀಲ, ಆಡಳಿತಾಧಿಕಾರಿ ಆರ್. ವಿ. ಕುಲಕರ್ಣಿ, ಉಪಪ್ರಾಚಾರ್ಯ ಜೆ.ಎಂ. ಪಾಟೀಲ, ಹಾಗೂ ಎಲ್ಲಾ ಸಿಬ್ಬಂದಿ ವರ್ಗದವರು ಅತ್ಯುನ್ನತ ಶ್ರೇಣಿಯಲ್ಲಿ ತೇರ್ಗಡೆಯಾದ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವರದಿ: ಪರಮೇಶ್ವರ ಎಸ್.ಗದ್ಯಾಳತಿಕೋಟಾ: ಬಡತನ ಕುಟುಂಬ, ಚಿಕ್ಕ ಸಂಸಾರ, ಇರುವ ಒಂದು ಎಕರೆ ತೋಟದಲ್ಲಿ ಕಷ್ಟದ ಜೀವನ ನಡೆಸುತ್ತಾ ಇರುವ ತಾಲ್ಲೂಕಿನ ಕಳ್ಳಕವಟಗಿ ಗ್ರಾಮದ ಬೌರಮ್ಮ ಹಾಗೂ ರಾಮಣ್ಣಾ ಭೀಮಣ್ಣಾ ಗಗನಮಾಲಿ ದಂಪತಿಯ ಪುತ್ರ ಈ ಬಾರಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ 599 ಅಂಕ ಪಡೆದು ಶೆ. 95.84 ಅಂಕ ಪಡೆದು ಗ್ರಾಮದ ಸರ್ಕಾರಿ ಪ್ರೌಢ ಶಾಲೆಗೆ ಪ್ರಥಮ ಸ್ಥಾನ ಪಡೆದುಕೊಂಡು ಗ್ರಾಮದ ಕೀರ್ತಿ ಹೆಚ್ಚಿಸಿದ್ದಾನೆ.ತಂದೆ ತಾಯಿಯೊಂದಿಗೆ ಪ್ರತಿದಿನ ಕೃಷಿ ಕಾಯಕ ಹಾಗೂ ರಜೆ ದಿನಗಳಲ್ಲಿ ಎಮ್ಮೆ ಕಾಯುವ ಕಾಯಕ ಮಾಡುತ್ತಾ ಶಾಲೆಯಲ್ಲಿ ಶಿಕ್ಷಕರು ಹೇಳಿದ ಪಾಠಗಳನ್ನು ಅಚ್ಚುಕಟ್ಟಾಗಿ ಅಂದಿನ ಅಭ್ಯಾಸ ಅಂದೇ ಮುಗಿಸುತ್ತಿದ್ದನು. ಶೈಕ್ಷಣಿಕ ವರ್ಷದ ಮೊದಲಿನಿಂದಲೇ ಅಭ್ಯಾಸ ಮಾಡುತ್ತಾ ಇದ್ದ ಈತ ಕಠಿಣ ವಿಷಯಗಳನ್ನು ಹಾಗೂ ಅರ್ಥವಾಗದ ವಿಷಯಗಳನ್ನು ಪದೇ ಪದೇ ಓದಿ ಪುನರ್ಮನನ ಮಾಡಿಕೊಂಡು ಸಂಪೂರ್ಣ ವಿಷಯ ಮನಕ್ಕೆ ಮುಟ್ಟುವವರೆಗೂ ತನ್ನ ದೈನಂದಿನ ಅಭ್ಯಾಸ ಮಾಡುತ್ತಾ ಪರೀಕ್ಷಾ ತಯಾರಿ ನಡೆಸುತ್ತಿದ್ದನು.ಕುಟುಂಬಕ್ಕೆ ಒಂದೇ ಕೋಣೆ: ಮಕ್ಕಳು…

Read More

ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆ ವಾರ್ಷಿಕ ವಿಶೇಷ ಶಿಬಿರ ಉದ್ಘಾಟನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಎನ್‌ಎಸ್‌ಎಸ್ ಇದು ಶಿಸ್ತು, ಸಂಯಮ ಮತ್ತು ವ್ಯಕ್ತಿತ್ವ ವಿಕಸನದಂತಹ ವಿವಿಧ ಕೌಶಲ್ಯವನ್ನು ವೃದ್ದಿಸುವಲ್ಲಿ ಸಹಾಯಕ ಎಂದು ಜಿಲ್ಲಾ ಎನ್ ಎಸ್ ಎಸ್ ಸಂಯೋಜಕ ಗಂಗಾಧರ ಕೆ. ಅಗಸರ ಹೇಳಿದರು.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ. ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯ ಹಾಗೂ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಬೆಳಗಾವಿ, ರಾಷ್ಟ್ರೀಯ ಸೇವಾ ಯೋಜನೆ ಘಟಕ ೧ ಮತ್ತು ೨ ರ ಸಹಯೋಗದಲ್ಲಿ ಏ.೨೧ ಜರುಗಿದ ವಾರ್ಷಿಕ ಎನ್ ಎಸ್ ಎಸ್ ವಿಶೇಷ ಶಿಬಿರವನ್ನು ದತ್ತು ಗ್ರಾಮ ಅರಕೇರಿ ಸರ್ಕಾರಿ ಪ್ರೌಢಶಾಲೆಯಲ್ಲಿ ಉದ್ಘಾಟಿಸಿ ಮಾತನಾಡಿದ ಅವರು, ಎನ್ ಎಸ್ ಎಸ್ ಎಂದರೆ ದೇಶ ಸೇವೆ ಅದರಂತೆ ಸೇವೆಯೊಂದಿಗೆ ಶಿಸ್ತು, ಸಂಯಮ ಸ್ವಚ್ಛತೆ ಅಲ್ಲದೆ ವ್ಯಕ್ತಿತ್ವ ವಿಕಸನ, ಜೀವನದ ಮೌಲ್ಯಗಳನ್ನು ಅರ್ಥೈಸಿಕೊಳ್ಳಲು ಇಂತಹ ಶಿಬಿರವು ವಿದ್ಯಾರ್ಥಿಗಳಿಗೆ ಪ್ರಯೋಜನಕಾರಿಯಾಗಿದೆ ಅದ್ದರಿಂದ ಇಂತಹ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದ ಪತ್ರಕರ್ತ ಈರಯ್ಯ ಗಣಕುಮಾರ ಅವರ ಪುತ್ರ ಶ್ರೀಹರ್ಷ ಈರಯ್ಯ ಗಣಕುಮಾರ ಅವರು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿ ಗಮನ ಸೆಳೆದಿದ್ದಾರೆ.ಶ್ರೀ ಸಂಗಮೇಶ್ವರ ವಿದ್ಯಾವರ್ಧಕ ಸಂಘದ ಶ್ರೀ ಸಂಗಮೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಯಾಗಿರುವ ಶ್ರೀಹರ್ಷ ಅವರು ಒಟ್ಟು 565 ಅಂಕಗಳನ್ನು ಪಡೆದು ಶೇಕಡಾ 90.40 ಫಲಿತಾಂಶದೊಂದಿಗೆ ಶಾಲೆಗೆ ಪ್ರಥಮ ಸ್ಥಾನ ಗಳಿಸಿದ್ದಾರೆ.ವಿಶೇಷವಾಗಿ ಸಮಾಜ ವಿಜ್ಞಾನ ಮತ್ತು ಹಿಂದಿ ವಿಷಯಗಳಲ್ಲಿ 100ಕ್ಕೆ 100 ಅಂಕಗಳನ್ನು ಗಳಿಸಿರುವುದು ಅವರ ಸಾಧನೆಯನ್ನು ಇನ್ನಷ್ಟು ಮೆರಗು ನೀಡಿದೆ.ಈ ಸಾಧನೆಗೆ ಪಟ್ಟಣದ ನಾಗರಿಕರು, ಶಾಲೆಯ ಆಡಳಿತ ಮಂಡಳಿ, ಶಿಕ್ಷಕರು ಹಾಗೂ ಪತ್ರಕರ್ತರು ಹರ್ಷ ವ್ಯಕ್ತಪಡಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಅಥಣಿ: ತಾಲ್ಲೂಕಿನ ಬಳ್ಳಿಗೇರಿ ಗ್ರಾಮದ ಹೊರವಲಯದಲ್ಲಿರುವ ಲಾಡ್ಜ್ ಒಂದರ ಮೇಲೆ ಅಥಣಿ ಪೊಲೀಸರು ಅನಿರೀಕ್ಷಿತ ದಾಳಿ ನಡೆಸಿ, ವೇಶ್ಯಾವಾಟಿಕೆ ದಂಧೆಯನ್ನು ಪತ್ತೆಹಚ್ಚಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಲಾಡ್ಜ್ ಮಾಲೀಕ ಸೇರಿದಂತೆ ಇಬ್ಬರನ್ನು ಬಂಧಿಸಲಾಗಿದ್ದು, ಓರ್ವ ಮಹಿಳೆಯನ್ನು ರಕ್ಷಿಸಲಾಗಿದೆ.ಬಳ್ಳಿಗೇರಿ ಗ್ರಾಮದ ವ್ಯಾಪ್ತಿಯಲ್ಲಿರುವ ಪ್ರಶಾಂತ ಹೋಟೆಲ್ ಮತ್ತು ಲಾಡ್ಜ್’ ನಲ್ಲಿ ಅಕ್ರಮವಾಗಿ ವೇಶ್ಯಾವಾಟಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಪೊಲೀಸರಿಗೆ ಲಭಿಸಿತ್ತು. ಈ ಹಿನ್ನೆಲೆಯಲ್ಲಿ ದಿನಾಂಕ 24-04-2026ರಂದು ಅಥಣಿ ಪೊಲೀಸ್ ವೃತ್ತ ನಿರೀಕ್ಷಕರಾದ ಸಂತೋಷ್ ಡಿ. ಹಳ್ಳೂರ ಅವರ ನೇತೃತ್ವದ ತಂಡವು ಪಂಚರೊಂದಿಗೆ ಲಾಡ್ಜ್ ಮೇಲೆ ದಾಳಿ ನಡೆಸಿತು.ದಾಳಿಯ ವೇಳೆ ಒಬ್ಬ ಮಹಿಳೆಯನ್ನು ಈ ಜಾಲದಿಂದ ರಕ್ಷಿಸಲಾಗಿದ್ದು, ದಂಧೆ ನಡೆಸುತ್ತಿದ್ದ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.ಬಂಧಿತ ಆರೋಪಿಗಳು: ಸರದಾರ ಭಗವಂತ ಕಾಂಬಳೆ (ಲಾಡ್ಜ್ ಮಾಲೀಕ, ಸಾ|| ಬಳ್ಳಿಗೇರಿ), ಪ್ರವೀಣ ಬಸವರಾಜ ಮಲ್ದಾರಿ (ಸಾ|| ಚಡಚಣ, ಹಾಲಿ ವಾಸ ಅಥಣಿ)ಈ ಯಶಸ್ವಿ ಕಾರ್ಯಾಚರಣೆಯಲ್ಲಿ ಅಥಣಿ ವೃತ್ತ ನಿರೀಕ್ಷಕ ಸಂತೋಷ್ ಹಳ್ಳೂರ ಅವರೊಂದಿಗೆ ಪ್ರೊಬೇಷನರಿ ಪಿಎಸ್‌ಐ ಆರತಿ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲೂಕಿನ ಲೋಣಿ (ಬಿಕೆ) ಗ್ರಾಮದಲ್ಲಿರುವ ಶ್ರೀ ಸಿದ್ದೇಶ್ವರ ಪ್ರೌಢಶಾಲೆಯ ವಿದ್ಯಾರ್ಥಿಗಳು 2026ರ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರಲ್ಲಿ ಗಮನಾರ್ಹ ಸಾಧನೆ ಮಾಡಿ ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.ಈ ಪರೀಕ್ಷೆಯಲ್ಲಿ ಸಾವಿತ್ರಿ ಸಿ. ಪಾಟೀಲ 98.40% ಅಂಕಗಳನ್ನು ಪಡೆದು ಪ್ರಥಮ ಸ್ಥಾನ ಗಳಿಸಿದ್ದಾರೆ. ಲಕ್ಷ್ಮಿ ಆರ್. ಖೈನೂರ್ 97.3% ಅಂಕಗಳೊಂದಿಗೆ ದ್ವಿತೀಯ ಸ್ಥಾನ, ವೀಣಾ ಸಿ. ಮಾಳಬಾಗಿ 97.2% ಅಂಕಗಳೊಂದಿಗೆ ತೃತೀಯ ಸ್ಥಾನ ಪಡೆದು ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ಶಾಲೆಯ ಒಟ್ಟು ಫಲಿತಾಂಶವೂ ಶ್ಲಾಘನೀಯವಾಗಿದ್ದು, 13 ವಿದ್ಯಾರ್ಥಿಗಳು ಅಗ್ರಶ್ರೇಣಿಯಲ್ಲಿ, 57 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ, 30 ವಿದ್ಯಾರ್ಥಿಗಳು ದ್ವಿತೀಯ ಶ್ರೇಣಿಯಲ್ಲಿ ಹಾಗೂ 18 ವಿದ್ಯಾರ್ಥಿಗಳು ತೃತೀಯ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷರು, ಆಡಳಿತ ಮಂಡಳಿ, ಆಡಳಿತಾಧಿಕಾರಿಗಳು, ಮುಖ್ಯೋಪಾಧ್ಯಾಯರು, ಶಿಕ್ಷಕರು ಹಾಗೂ ಸರ್ವ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿದ್ದಾರೆ. ವಿದ್ಯಾರ್ಥಿಗಳ ಪರಿಶ್ರಮ, ಶಿಕ್ಷಕರ ಮಾರ್ಗದರ್ಶನ ಮತ್ತು ಪಾಲಕರ ಸಹಕಾರದಿಂದ ಈ ಯಶಸ್ಸು ಸಾಧ್ಯವಾಗಿದೆ ಎಂದು ತಿಳಿಸಿದ್ದಾರೆ.ಮುಂದಿನ ದಿನಗಳಲ್ಲಿ ಸಹ ವಿದ್ಯಾರ್ಥಿಗಳು ಇದೇ ರೀತಿಯಲ್ಲಿ ಉತ್ತಮ ಸಾಧನೆ…

Read More

ವಿಜಯಪುರದಲ್ಲಿ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದಿಂದ ಬಸವ ಜಯಂತಿ ಕಾರ್ಯಕ್ರಮ | ಪ್ರಶಸ್ತಿ ಪ್ರದಾನ | ಕೊಡಗು ವಿಶ್ವವಿದ್ಯಾಲಯದ ಕುಲಪತಿ ಡಾ.ಅಶೋಕ ಆಲೂರ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಹುದೇವೋಪಾಸನೆಯಿಂದ ಏಕದೇವೋಪಾಸನೆಯೆಡೆಗೆ, ಮಂದಿರದಿಂದ ಅನುಭವ ಮಂಟಪದೆಡೆಗೆ, ಜಾತಿಯಿಂದ ನೀತಿಯೆಡೆಗೆ, ಕರ್ಮ ಸಿದ್ಧಾಂತದಿಂದ ಕಾಯಕ ಸಿದ್ಧಾಂತದೆಡೆಗೆ, ಮೂಢನಂಬಿಕೆಯಿಂದ ವೈಚಾರಿಕತೆಯೆಡೆಗೆ ಹಾಗೂ ಲಿಂಗ ಭೇದವಿಲ್ಲದ ಸಮಸಮಾಜದೆಡೆಗೆ ಕರೆದೊಯ್ದ ಮತ್ತು ಇಂತಹ ಉನ್ನತ ಚಿಂತನೆಗಳನ್ನು ನಾಡಿಗೆ ನೀಡಿದ ಏಕೈಕ ವ್ಯಕ್ತಿತ್ವ ಬಸವಣ್ಣನವರದು ಎಂದು ಕೊಡಗು ವಿಶ್ವವಿದ್ಯಾಲಯದ ಕುಲಪತಿ ಡಾ.ಅಶೋಕ ಆಲೂರ ಹೇಳಿದರು. ನಗರದಲ್ಲಿ ಶನಿವಾರ ಪುಣೆಯ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ವಿಜಯಪುರ ಜಿಲ್ಲಾ ಘಟಕ ಆಯೋಜಿಸಿದ ಬಸವ ಜಯಂತಿ ಕಾರ್ಯಕ್ರಮ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.ಅಹಿಂಸೆಯ ಪರಾಕಾಷ್ಠೆ ಬೋಧಿಸಿದ ಬಸವ ಧರ್ಮ ಇದು ಜಗದ ಧರ್ಮ. ಅರಿವು, ಆಚಾರ ಮತ್ತು ಅನುಭಾವ ಇವು ಅದರ ಉತ್ತುಂಗದ ತತ್ವಗಳು. ಅನುಭವ ಮಂಟಪದಲ್ಲಿ ವಿಶ್ವದಲ್ಲೇ ಮೊದಲು ಪ್ರಜಾಪ್ರಭುತ್ವದ ಚಿಂತನೆಗಳು…

Read More

ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಎಸ್ಎಸ್ಎಲ್ಸಿ ಮತ್ತು ಪಿಯುಸಿಪರೀಕ್ಷೆಯಲ್ಲಿ ಶೇ. 90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲ್ಯೂಜೆ ) ಅರ್ಜಿ ಆಹ್ವಾನಿಸಿದೆ.ವಿದ್ಯಾರ್ಥಿಯ ಅಂಕ ಪಟ್ಟಿಯ ನಕಲನ್ನು ಶಾಲಾ/ ಕಾಲೇಜಿನ ಮುಖ್ಯಸ್ಥರಿಂದ ದೃಢೀಕರಿಸಿರಬೇಕು. ಸಂಘದ ಸದಸ್ಯರ ಆಧಾರ್ ಮತ್ತು ವಿದ್ಯಾರ್ಥಿಯ ಆಧಾರ್ ಜೆರಾಕ್ಸ್ ಮತ್ತು ಸಂಘದ ಐಡಿ ಕಾರ್ಡ್ (ಕಡ್ಡಾಯ) ಜೆರಾಕ್ಸ್ ಹಾಗೂ ವಿದ್ಯಾರ್ಥಿಯ ಭಾವಚಿತ್ರ ಸಹಿತ ಅರ್ಜಿ ಸಲ್ಲಿಸಬೇಕು. (ವಿದ್ಯಾರ್ಥಿ ಭಾವಚಿತ್ರ ಹಿಂಬದಿ ತಪ್ಪದೇ ಅವರ ಹೆಸರು ಬರೆಯಿರಿ)ಶೇ.90ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು ಸಂಘವು ನಿಗಧಿಪಡಿಸಿರುವ ನಮೂನೆಯಲ್ಲಿ ಜಿಲ್ಲಾ ಸಂಘದ ದೃಢೀಕರಣದೊಂದಿಗೆ 10-5-2026 ರೊಳಗಾಗಿಅಧ್ಯಕ್ಷರು/ಪ್ರಧಾನ ಕಾರ್ಯದರ್ಶಿ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ, 3ನೇ ಮಹಡಿ, ಕಂದಾಯ ಭವನ, ಕೆಜಿ ರಸ್ತೆ, ಬೆಂಗಳೂರು-09 ಇಲ್ಲಿಗೆ ತಲಪುವಂತೆ ಕಳುಹಿಸಬೇಕು.ಅರ್ಜಿ ಮತ್ತು ಇತರೆ ಮಾಹಿತಿಗಾಗಿ ಆಯಾ ಜಿಲ್ಲಾ ಸಂಘವನ್ನು ಸಂಪರ್ಕಿಸಿ ಪಡೆಯಬಹುದು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಿ. ಎಲ್. ಡಿ‌ಇ‌ ಸಂಸ್ಥೆಯ ಎ.‌ ಎಸ್. ಪಾಟೀಲ ಕಾಮರ್ಸ್ ಕಾಲೇಜಿನಲ್ಲಿ ನಡೆದ ಬಿ.‌ ಎಲ್. ಡಿ. ಇ. ಎ ಕ್ರಿಕೆಟ್ ಕಪ್-2026 ಅಂತರ ಪದವಿ ಮಹಾವಿದ್ಯಾಲಯ ಪಂದ್ಯಾವಳಿಯನ್ನು ಬಿ.ಎಲ್.ಡಿ. ಇ ಸಂಸ್ಥೆಯ ಎ. ವಿ. ಎಸ್. ಆಯುರ್ವೇದ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನ‌ ಕೇಂದ್ರ ತಂಡ ಗೆದ್ದುಕೊಂಡಿದೆ.ಏಪ್ರಿಲ್ 17 ರಿಂದ ಏಪ್ರಿಲ್ 26ರ ವರೆಗೆ ಏಳು ದಿನಗಳ ಕಾಲ ನಡೆದ ಈ ಕ್ರೀಡಾಕೂಟದಲ್ಲಿ ಒಟ್ಟು 14 ನಾನಾ ಕಾಲೇಜುಗಳ ತಂಡಗಳು ಭಾಗವಹಿಸಿದ್ದವು.ಫೈನಲ್ ಪಂದ್ಯದಲ್ಲಿ ಆಯುರ್ವೇದ ಕಾಲೇಜು ತಂಡ ಎಸ್. ಬಿ. ಆರ್ಟ್ಸ್ ಮತ್ತು ಮತ್ತು ಕೆ. ಸಿ. ಪಿ ಸಾಯಿನ್ಸ್ ಕಾಲೇಜು ತಂಡವನ್ನು 36 ರನ್ ಗಳಿಂದ ಸೋಲಿಸಿತು. ಅಲ್ಲದೇ, ಟ್ರೋಫಿಯ ಜೊತೆಗೆ ರೂ. 51,000 ನಗದು ಬಹುಮಾನ ಪಡೆದುಕೊಂಡಿತು.ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಮತ್ತು ಕೋಚ್ ಈರಪ್ಪ ಇಕ್ಕಳಕಿ ಮಾರ್ಗದರ್ಶನದಲ್ಲಿ ತಂಡವು ಸಾಧಿಸಿರುವುದಕ್ಕೆ ಕಾಲೇಜಿನ ಪ್ರಾಚಾರ್ಯ ಡಾ. ಅಶೋಕ ಪಾಟೀಲ,‌ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.…

Read More