Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ರಕ್ತದಾನದಿಂದ ರಕ್ತದೊತ್ತಡ, ಮಧುಮೇಹದಂತಹ ರೋಗಗಳು ನಿಯಂತ್ರಣಕ್ಕೆ ಬರುವುದರ ಜೊತೆಗೆ ಆತ್ಮತೃಪ್ತಿ ದೊರೆಯುತ್ತದೆ ಎಂದು ರಾಂಪೂರ ಪಿಎ ಗ್ರಾಮದ ಆರೂಢ ಮಠದ ಸಮರ್ಥ ಸದ್ಗುರು ಆರೂಢ ನಿತ್ಯಾನಂದ ಶಿವಯೋಗಿಗಳು ಹೇಳಿದರು.ತಾಲೂಕಿನ ರಾಂಪೂರ ಪಿಎ ಗ್ರಾಮದ ಶ್ರೀ ಸಮರ್ಥ ಸದ್ಗುರು ಆರೂಢ ಸಂಗನಬಸವೇಶ್ವರ ಶಿವಯೋಗಿಗಳ ಜಾತ್ರಾ ಮಹೋತ್ಸವ ನಿಮಿತ್ಯ ಹಮ್ಮಿಕೊಂಡ ಶ್ರೀಮನ್ ನಿಜಗುಣ ಶಿವಯೋಗಿಗಳ ವಿರಚಿತ ಕೈವಲ್ಯ ಪದ್ದತಿ ಪ್ರವಚನ ಕಾರ್ಯಕ್ರಮದಲ್ಲಿ ತಾಲೂಕು ಸಾರ್ವಜನಿಕ ಆಸ್ಪತ್ರೆಯ ಸಹಯೋಗದಲ್ಲಿ ಜರುಗಿದ ರಕ್ತದಾನ ಶಿಬಿರವನ್ನು ಉದ್ದೇಶಿಸಿ ಮಾತನಾಡಿದ ಅವರು, ರಕ್ತದಾನ ಮಾನವನ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ದೇಶದಲ್ಲಿ ಪ್ರತಿವರ್ಷ ೪೧ದಶ ಲಕ್ಷ ಯೂನಿಟ್ ರಕ್ತದ ಕೊರತೆ ಉಂಟಾಗುತ್ತದೆ. ಸಮಯಕ್ಕೆ ಸರಿಯಾಗಿ ರಕ್ತ ದೊರೆಯದೆ ವಿವಿಧ ಕಾಯಿಲೆಗಳಿಂದ ಬಳಲುವ ರೋಗುಗಳು, ಅಪಘಾತದ ಗಾಯಾಳುಗಳು ಮೃತಪಟ್ಟಿದ್ದಾರೆ. ಅಮೂಲ್ಯವಾದ ಜೀವ ಉಳಿಸಲು ಸ್ವಯಂ ಪ್ರೇರಣೆಯಿಂದ ಎಲ್ಲರೂ ರಕ್ತದಾನ ಮಾಡುವುದು ಅತೀ ಅವಶ್ಯಕ ಎಂದರು.ಈ ವೇಳೆ ತಾಲೂಕು ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಮ್ಮೂರ ಸರ್ಕಾರಿ ಶಾಲೆ ಯಾವುದೇ ಖಾಸಗಿ ಶಾಲೆಗಳಿಗಿಂತ ಕಡಿಮೆಯಿಲ್ಲ ಎಂದು ಮಂಗಳೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಎಮ್.ಸಿ ಅಧ್ಯಕ್ಷ ವಿಠ್ಠಲ ರೇವೂರ ಹೇಳಿದರು.ತಾಲೂಕಿನ ಮಂಗಳೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ಹಮ್ಮಿಕೊಂಡ ವಿದ್ಯಾರ್ಥಿಗಳ ಬಿಳ್ಕೋಡುಗೆ, ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಶಾರದೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಮ್ಮೂರ ಸರ್ಕಾರಿ ಶಾಲೆಯನ್ನು ಇಡೀ ತಾಲೂಕಿಗೆ ಮಾದರಿ ಶಾಲೆಯನ್ನಾಗಿ ಮಾಡೋಣ ಇದಕ್ಕೆ ಗ್ರಾಮಸ್ಥರ ಹಾಗೂ ಪಾಲಕರ ಸಹಕಾರ ಅತ್ಯಗತ್ಯ ಎಂದರು.ಕಾರ್ಯಕ್ರಮವನ್ನು ಭೀಮಾ ಶಿಕ್ಷಣ ಸಂಸ್ಥೆಯ ನಿರ್ದೇಶಕ, ಅಭಿಯಂತರ ದತ್ತು ಮಾವೂರ ಉದ್ಘಾಟಿಸಿ ಮಾತನಾಡಿದರು. ಈ ವೇಳೆ ಶಾಲೆಯಲ್ಲಿ ಕಲಿತು ಉನ್ನತ ವ್ಯಾಸಂಗದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಮತ್ತು ಮಕ್ಕಳಿಂದ ವಿವಿಧ ಮನೋರಂಜನಾ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.ಕಾರ್ಯಕ್ರಮದ ಸಾನಿಧ್ಯವನ್ನು ಮಲ್ಲಯ್ಯ ಹಿರೇಮಠ, ಮುಖ್ಯ ಅತಿಥಿಗಳಾಗಿ ಸಾಹೇಬಗೌಡ ಪಾಟೀಲ, ಎಸ್.ಬಿ.ಪಾಟೀಲ, ಡಿ.ಪಿ.ಗಣಿಹಾರ, ಗುರಣ್ಣ ಹುಮನಾಬಾದ, ಬಿ.ಬಿ.ಮಾವೂರ, ಶಂಕರ ಕೋರಳ್ಳಿ, ಶಾಂತಪ್ಪ ರೇವೂರ, ನಾಗೇಶ ರೇಷ್ಮಿ, ಸಿದ್ದು ಮಾದರ,…

Read More

Sವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ ಶಾಸಕ ಮನಗೂಳಿ ಗೆ ಟಾಂಗ್ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸಿಂದಗಿ ಮತಕ್ಷೇತ್ರದಲ್ಲಿ ಕೆಲಸ ಮಾಡಿದ್ದು, ಅನುದಾನ ಕೊಟ್ಟಿದ್ದು ಬಿಜೆಪಿ ಸರಕಾರ. ಈಗಿನ ಶಾಸಕರು ಮಾತ್ರ ಕೇವಲ ಪೂಜೆ ಮಾಡಲಿಕ್ಕೆ ಬಂದಿದ್ದಾರೆ. ಹಿಂದಿನ ಮಾಜಿ ಶಾಸಕರ ಪಾತ್ರವೇ ಏನು ಇಲ್ಲ ಎಂಬಂತೆ ಈಗಿನ ಆಡಳಿತ ಪಕ್ಷದ ಶಾಸಕರು ನಡೆದುಕೊಳ್ಳುತ್ತಿದ್ದಾರೆ. ಆದರೆ ನಮ್ಮ ಕಾಮಗಾರಿಗಳಿಗೆ ಈಗಿನ ಶಾಸಕರು ಪೂಜೆ ಮಾಡುತ್ತಿದ್ದಾರೆ ಎಂದು ಪರೋಕ್ಷವಾಗಿ ಶಾಸಕ ಅಶೋಕ ಮನಗೂಳಿ ಅವರಿಗೆ ವಿಧಾನ ಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್.ರವಿಕುಮಾರ ಟಾಂಗ್ ಕೊಟ್ಟಿದ್ದಾರೆ.ಸಿಂದಗಿ ಪಟ್ಟಣದ ಮಾಜಿ ಶಾಸಕ ರಮೇಶ ಭೂಸನೂರ ಅವರ ಸ್ವಗೃಹದಲ್ಲಿ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ವಿಜಯಪುರ, ಕಲಬುರಗಿ ಮತ್ತು ಬಾಗಲಕೋಟ ಸೇರಿದಂತೆ ವಿವಿಧ ಭಾಗಗಳ ರೈತರ ತೊಗರಿ ಬೆಳೆ ಈ ಬಾರಿ ಸಂಪೂರ್ಣ ನಾಶವಾಗಿ ರೈತ ಕಂಗಾಲಾಗಿದ್ದರು, ರಾಜ್ಯ ಸರಕಾರ ಮಾತ್ರ ಪರಿಹಾರ ನೀಡದಿರುವುದು ಖೇದಕರ ಸಂಗತಿ. ರಾಜ್ಯ ಕಾಂಗ್ರೆಸ್…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಭಾರತದ ಉಪಪ್ರಧಾನಮಂತ್ರಿಯಾಗಿದ್ದ ಬಾಬು ಜಗಜೀವನರಾಮ್ ಅವರ ಜಯಂತಿಯನ್ನು ದಿ:೫ ರಂದು ಕಾರ್ಯಾಲಯದಲ್ಲಿ ಆಚರಿಸಲಾಗುತ್ತಿದೆ ಎಂದು ತಹಶೀಲ್ದಾರ ಪ್ರಕಾಶ ಸಿಂದಗಿ ಹೇಳಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಬಾಬು ಜಗಜೀವನರಾಮ್ ಜಯಂತಿ ಅಂಗವಾಗಿ ಈಚೆಗೆ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಜಯಂತಿಯ ರೂಪುರೇಷೆಗಳ ಕುರಿತು ಸಾರ್ವಜನಿಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಬಹುದಾಗಿದೆ ಎಂದರು.ಸಭೆಯಲ್ಲಿ ಭಾಗವಹಿಸಿದ ಸಮುದಾಯದ ಪ್ರಮುಖರು ಕಾರ್ಯಕ್ರಮದ ಯೋಜನೆಯ ಕುರಿತು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.ಉಪತಹಶೀಲ್ದಾರ ಸುರೇಶ ಮ್ಯಾಗೇರಿ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಎಸ್.ಎಸ್. ಬಾಗಲಕೋಟ, ಪಶು ವೈದ್ಯಕೀಯ ಇಲಾಖೆಯ ಆರ್.ಸಿ.ಪಟ್ಟಣದ, ರೇಷ್ಮೆ ಇಲಾಖೆಯ ಬಿ.ಬಿ.ಪಾಟೀಲ, ಕಲ್ಯಾಣರಾವ ಕುಲಕರ್ಣಿ, ಸಂತೋಷ ಬೇವಿನಗಿಡದ, ಸಂಜೀವ ಬಜಂತ್ರಿ, ಹಣಮಂತ ಮ್ಯಾಕೇರಿ, ಪ್ರಭು ಸಂಗಣ್ಣವರ, ರಾಹುಲ ದೊಡಮನಿ, ಎಂ.ಆರ್.ಪಡಗಾನೂರ, ಚಂದ್ರಕಾಂತ ಮಾನೆ, ಆರ್.ಕೆ.ವಾಲಿಕಾರ, ಪುಂಡಲೀಕ ಮಾನೆ ಸೇರಿದಂತೆ ಸಮುದಾಯದ ಪ್ರಮುಖರು ಹಾಗೂ ಸಿಬ್ಬಂದಿ ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ತುಬಚಿ ಬಬಲೇಶ್ವರ ಯೋಜನೆ ಮೂಲಕ ತಿಕೋಟಾ ಭಾಗದ ಜನ ಜಾನುವಾರುಗಳಿಗೆ ಕುಡಿಯುವ ನೀರು ಒದಗಿಸಬೇಕು ಎಂದು ಒತ್ತಾಯಿಸಿ ರೈತರು ಇಂದು ದಿ.24 ಸೋಮವಾರ ತಿಕೋಟಾದಲ್ಲಿ ಪ್ರತಿಭಟನೆ ಮಾಡಲಾಗುವುದು ಎಂದು ರೈತ ಮುಖಂಡರು ಕರೆನೀಡಿದ್ದಾರೆ.ಈ ಮೂಲಕ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ತುಬಚಿ ಬಬಲೇಶ್ವರ ಯೋಜನೆಗೆ ಜಾಕವೆಲ್ ಸ್ಥಳದಲ್ಲಿ ಪದೇ ಪದೇ ಅಡ್ಡಿಪಡಿಸುತ್ತಿರುವ ಕೆಲವು ವ್ಯಕ್ತಿಗಳನ್ನು ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ತಿಕೋಟಾ ತಾಲ್ಲೂಕಿನ ರೈತರ ಪ್ರತಿಭಟನೆ ಹಾಗು ತಹಶೀಲ್ದಾರ ಅವರಿಗೆ ಮನವಿ ನೀಡಲಾಗುವುದು.ಎಲ್ಲ ರೈತರು ತಪ್ಪದೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಜಿ.ಪಂ ಮಾಜಿ ಅಧ್ಯಕ್ಷ ಸೋಮನಾಥ ಬಾಗಲಕೋಟ ಹಾಗೂ ರೈತ ಮುಖಂಡ ಯಾಕುಬ್ ಜತ್ತಿ ತಿಳಿಸಿದ್ದಾರೆ.

Read More

ರಚನೆ- ದೀಪಾ ಪೂಜಾರಿಕುಶಾಲನಗರ ಉದಯರಶ್ಮಿ ದಿನಪತ್ರಿಕೆ ಬಾಲಗಿರಿಗೆ ಬನಗಿರಿಗೆಮರುಳು ಹೋದಹಕ್ಕಿಯಂತೆ,ಬೇಲಿಯಾಚೆ ನೋಡುವಕನಸುಗಳಂತೆ,ಕೈಯಲ್ಲಿ ಹಣ್ಣಿದ್ದರೂಬಳಲುವ ಹಸಿವಿನಂತೆ,ಬದುಕಿ ಬಿಡು ಇದ್ದಂತೆ! ಮುಗಿಯದ ಹಾದಿಯಬೆಟ್ಟದ ಮೇಲೆ,ಸಂಜೆಯ ಬೀಸಣಿಯಲ್ಲಿಚಿಂತೆ ಬಿಟ್ಟು,ಜಲಧಾರೆಯಲಿ ನೀರಿನಹಾಡಂತೆ,ಬದುಕಿ ಬಿಡು ನೀನುಬದುಕು ಇದ್ದಂತೆ! ಕತ್ತಲಿಗೇ ಬೆಳಕಿನಕನಸು ,ಮೌನಕ್ಕೂ ನಗುವಿನಮನಸು,ಗಾಳಿಯೊಂದಿಗೆ ಹಾರುವಗಾಳಿಪಟದಂತೆ,ಬದುಕಿ ಬಿಡು ನೀನುಬದುಕು ಇದ್ದಂತೆ! ನಾಳೆ ಹೇಗಿರಬಹುದುಯಾರು ಬಲ್ಲರು?ನಿನ್ನ ಹೃದಯವಅರಿಯುವವರಾರು?ಹೂ ಅರಳುವ ಸಂತಸಸಂಭ್ರಮದಲ್ಲಿ,ಬದುಕಿ ಬಿಡು ನೀನುಬದುಕು ಇದ್ದಂತೆ!

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ನನ್ನನ್ನು ತಲೆ ತಗ್ಗಿಸಿ ನೋಡು ನಿನ್ನನ್ನು ತಲೆ ಎತ್ತದ ಹಾಗೆ ಮಾಡುವೆ ಎಂದು ಮೊಬೈಲ್ ಹೇಳಿದರೆ ನನ್ನನ್ನು ತಲೆ ತಗ್ಗಿಸಿ ಓದು ನಿನ್ನನ್ನು ಭಾರತವೇ ತಲೆ ಎತ್ತಿ ನೋಡುವಂತೆ ಮಾಡುವೆ ಎಂದು ಪುಸ್ತಕ ಹೇಳುತ್ತದೆ ಎಂದು ಜಮಖಂಡಿ ಓಲೇಮಠದ ಆನಂದ ದೇವರು ನುಡಿದರು.ತಾಲೂಕಿನ ಹುಲ್ಲೂರು ಗ್ರಾಮದ ಎಸ್.ಎನ್.ಡಿ ನ್ಯಾಶನಲ್ ಶಾಲೆಯ ವತಿಯಿಂದ ಲಿಂ.ಡಾ|| ಅಭಿನವ ಕುಮಾರ ಚನ್ನಬಸವ ಮಹಾಸ್ವಾಮಿಗಳ ನುಡಿನಮನ ಮತ್ತು ರಾಜ್ಯ ಮಟ್ಟದ ಚನ್ನಬಸವಶ್ರೀ ಪ್ರಶಸ್ತಿ ಪ್ರಧಾನ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.ಸಧ್ಯದ ಕಾಲ ಘಟ್ಟದಲ್ಲಿ ಯುವಕರು ಗುಟಕಾ ತಿಂದು, ಮಟಕಾ ಆಡಿ, ಮಠಕ್ಕ ಬರಲಾರದಂಗ ಗೊಟಕ್ ಅಂತಾ ಇದಾರೆ. ಎಲ್ಲ ಪಾಲಕರು ನಿಮ್ಮ ಮಕ್ಕಳ ಕೈಯಲ್ಲಿ ಒಳ್ಳೆಯ ಪುಸ್ತಕಗಳನ್ನು ನೀಡಿ. ಆಚಾರ, ವಿಚಾರ ಸಂಸ್ಕೃತಿಗಳನ್ನು ಕಲಿಸಲು ಮುಂದಾಗಬೇಕು ಎಂದರು.ಅಕ್ಷರ ದಾಸೋಹದ ಸಹಾಯಕ ನಿರ್ದೇಶಕ ಎಂ.ಎಂ.ಬೆಳಗಲ್ಲ ಮಾತನಾಡಿ ಮಕ್ಕಳ ಕೈಯಲ್ಲಿ ಮೊಬೈಲ್ ನೀಡುವದರಿಂದ ಅವರ ವಿದ್ಯಾಭ್ಯಾಸದ ಮೇಲೆ ಕೆಟ್ಟ ಪರಿಣಾಮ ಬೀರುತ್ತಿದೆ.…

Read More

ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷರಾದ ಹಂಸರಾಜ ಆಹೀರ್ ಅವರನ್ನು ಭೇಟಿಯಾಗಿ ಹಿಂದುಳಿದ ವರ್ಗಗಳಲ್ಲಿ ಅದರಲ್ಲೂ ಮೀನುಗಾರರಿಗೆ ಮೀಸಲಾತಿಯಲ್ಲಿ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವ ಕುರಿತು ರಾಷ್ಟ್ರೀಯ ಮೀನುಗಾರರ ಸಂಘದ ರಾಜ್ಯಾಧ್ಯಕ್ಷ ಮಂಜುನಾಥ ಸುಣಗಾರ ನೇತೃತ್ವದ ನಿಯೋಗ ಇತ್ತೀಚೆಗೆ ಮನವಿ ಸಲ್ಲಿಸಿತು.ಮೀನುಗಾರಿಕೆಯಲ್ಲಿ ಸಾಂಪ್ರದಾಯಿಕ ಮೀನುಗಾರರಾದ ಗಂಗಾಮತಸ್ಥರು, ಬೆಸ್ತರು, ಕೊಲಿ ಕಬ್ಬಲಿಗ, ಮೊಗವೀರ ಸಮುದಾಯ ದವರಿಗೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವಂತೆ ಹಾಗೂ ಪ್ರವರ್ಗ 1 ರಲ್ಲಿ ಇರುವ ಈ ಸಮುದಾಯದ ಮಕ್ಕಳಿಗೆ ಶಿಕ್ಷಣ ಹಾಗೂ ಉದ್ಯೋಗದಲ್ಲಿ ಹೆಚ್ಚಿನ ಮೀಸಲಾತಿ ನೀಡುವ ಕುರಿತು ಹಾಗೂ ಮೀಸಲಾತಿಯಲ್ಲಿ ಆದಾಯಮಿತಿಯನ್ನು ರದ್ದು ಪಡಿಸಬೇಕೆಂದು ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ರಾಷ್ಟ್ರೀಯ ಮೀನುಗಾರರ ಸಂಘದ ರಾಜ್ಯಾಧ್ಯಕ್ಷರಾದ ಮಂಜುನಾಥ ಸುಣಗಾರ, ಖಜಾಂಚಿ ಅಶೋಕ ಸಹಾನಿ, ಅಸಂಘಟಿತ ಕಾರ್ಮಿಕರ ವಿಭಾಗದ ರಾಜ್ಯ ಪ್ರಧಾನ ಕಾರ್ಯದರ್ಶಿ ಸಂತೋಷ ಕುಮಾರ್ ಅವರ ನಿಯೋಗ ಭೇಟಿ ನೀಡಿ ಮನವಿ ಸಲ್ಲಿಸಿದರು.

Read More

ಲೇಖನ- ವೀಣಾ ಹೇಮಂತ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಶಾಲೆಯೊಂದರಲ್ಲಿ ಶಿಕ್ಷಕಿ ಆಗಿರುವ ಓರ್ವ ಹೆಣ್ಣು ಮಗಳುತನ್ನ ಗಂಡನ ಮನೆಯಲ್ಲಿ ಕಿರುಕುಳ ಅನುಭವಿಸಲಾಗದೆ ತನ್ನ ತವರಿನವರಿಗೆ ಗಂಡನಿಗೆ ಪ್ರತ್ಯೇಕವಾಗಿ ಪತ್ರ ಬರೆದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆಕೆ ಪತ್ರದಲ್ಲಿ ತನ್ನ ಗಂಡನಿಗೆ ಅಡುಗೆ ಮಾಡುತ್ತಿದ್ದೇನೆ ಊಟ ಮಾಡಿ ಎಂದು ಬರೆದಿದ್ದು, ತನ್ನ ಪಾಲಕರಿಗೆ ಬರೆದ ಪತ್ರದಲ್ಲಿ ನನ್ನ ಗಂಡನ ಮನೆಯವರಿಗೆ ನನ್ನ ದುಡಿಮೆಯ ಮೇಲೆ ಆಸೆ ಇದೆಯೇ ಹೊರತು ನನ್ನ ಬೇಕು ಬೇಡಗಳಲ್ಲ. ನಾನೊಂದು ದುಡಿಯುವ ಯಂತ್ರದಂತೆ ಅವರು ನನ್ನನ್ನು ಭಾವಿಸಿದ್ದಾರೆ ಎಂದು ದೂರಿರುವ ಆಕೆ, ನನ್ನ ಮಗ ಅವರ ಅಪ್ಪನಂತೆ ಆಗುವುದು ಬೇಡ, ಆತನನ್ನು ನೀವೇ ಸಾಕಿ ಸಲಹೆ ಎಂದು ಹೇಳಿದ್ದಾಳೆ.ಬಹುತೇಕ ಜಗತ್ತಿನ ಬಹಳಷ್ಟು ಸ್ತ್ರೀಯರು ಈ ರೀತಿಯ ಕೌಟುಂಬಿಕ ದೌರ್ಜನ್ಯವನ್ನು ಅನುಭವಿಸುತ್ತಿದ್ದಾರೆ ಎಂಬುದು ಎಷ್ಟು ನಿಜವೋ ದೀಪದ ಕೆಳಗೆ ಕತ್ತಲೆ ಇರುತ್ತದೆ ಎಂಬುದು ಕೂಡ ಅಷ್ಟೇ ನಿಜ. ಸಾಯುವ ಮುನ್ನ ಪಾಲಕರಿಗೆ ತನ್ನ ಗಂಡನ ಮನೆಯವರ ನಡಾವಳಿಯ ಬಗ್ಗೆ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದ ಎಂಪಿಎಸ್ ಶಾಲಾ ಸಭಾಂಗಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ತಾಲೂಕು ಘಟಕದಿಂದ ರಾಜ್ಯ ಮಟ್ಟದ ಕಾರ್ಯಾಗಾರ ಹಾಗೂ ಬೃಹತ್ ಸಮಾವೇಶದ ಪೂರ್ವಭಾವಿ ಸಭೆ ನಡೆಯಿತು. ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ತಾಲೂಕು ಕೆ.ಯು. ಗಿಡ್ಡಪ್ಪಗೋಳ ಮಾತನಾಡಿ1-7-2022 ರಿಂದ 31-7-2024 ರವರಿಗೆ ನಿವೃತ್ತಿ ಹೊಂದಿದ ನೌಕರರಿಗೆ 7ನೇ ವೇತನ ಆಯೋಗದ ಸೌಲಭ್ಯ ಸಿಗದಿದ್ದಕ್ಕೆ ದಿನಾಂಕ 3-4-2025 ರಂದು ಗುರುವಾರ ಫ್ರೀಡಂ ಪಾರ್ಕ್ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ದಿನಾಂಕ 4-4-2025 ರಂದು ಶುಕ್ರವಾರ ಬೆಳಗ್ಗೆ 10 ಗಂಟೆಗೆ ರಾಜ್ಯ ಮಟ್ಟದ ಕಾರ್ಯಾಗಾರ ಮತ್ತು ಬೃಹತ್ ಸಮಾವೇಶವನ್ನು ಬೆಂಗಳೂರಿನ ಪ್ರಿನ್ಸಸ್ ಶ್ರೈನ್ (ಗೇಟ್ ನಂ-9) ಅರಮನೆ ಆವರಣದಲ್ಲಿ ಹಮ್ಮಿಕೊಂಡಿದ್ದು ಉದ್ಘಾಟನೆ ಮುಖ್ಯಮಂತ್ರಿಗಳು ಸಿದ್ದರಾಮಯ್ಯ, ಸ್ಮರಣ ಸಂಚಿಕೆ ಬಿಡುಗಡೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರರವರು, ಅಧ್ಯಕ್ಷತೆ ರಾಜ್ಯಾಧ್ಯಕ್ಷ ಎಸ್.ಎಲ್. ಭೈರಪ್ಪ, ಉಪಸ್ಥಿತಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ…

Read More