Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಝಳಕಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ೨೦೨೫-೨೬ನೇ ಶೈಕ್ಷಣಿಕ ಸಾಲಿನ ಪದವಿ ಪ್ರಥಮ ವರ್ಷದ ಪ್ರವೇಶಾತಿ ಪ್ರಾರಂಭವಾಗಿವೆ.ಬಿ.ಎ, ಬಿಕಾಂ ಮತ್ತು ಬಿಎಸ್ಸಿ ಪದವಿ ಕೊರ್ಸುಗಳ ಪ್ರವೇಶಾತಿ ಪಡೆಯಬಹುದಾಗಿದೆ. ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಬಿ.ಎ ವಿಭಾಗಕ್ಕೆ ೯೪೮೧೮೮೦೪೧೮, ೯೭೪೩೧೫೨೦೨೫, ೮೦೭೦೬೮೫೫೫೫, ೭೨೫೯೫೯೪೯೪೧, ಬಿ.ಕಾಂ ವಿಭಾಗ ಮೊ.ನಂ ೯೯೪೫೪೮೫೪೧೩, ೮೧೦೫೨೬೯೨೮೭ ಹಾಗೂ ಬಿ.ಎಸ್ಸಿ ವಿಭಾಗದ ಮೊ.ನಂ: ೯೦೩೫೦೬೨೬೨೫ಗೆ ಸಂಪರ್ಕಿಸಬಹುದು ಎಂದು ಝಳಕಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಏಪ್ರಿಲ್ ೩೦ರಂದು ಬಸವ ಜಯಂತಿ ಅಂಗವಾಗಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿರುವ ಕಸಾಯಿಖಾನೆಗಳಲ್ಲಿ ಪ್ರಾಣಿ ವಧೆ ಮಾಡುವುದು ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶ ಹೊರಡಿಸಲಾಗಿದೆ ಎಂದು ಮಹಾನಗರ ಪಾಲಿಕೆ ಪರಿಸರ ವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಜಿಲ್ಲೆಯನ್ನು ಬಾಲ್ಯವಿವಾಹ ಮುಕ್ತ ಜಿಲ್ಲೆಯನ್ನಾಗಿಸಲು ಕಟ್ಟುನಿಟ್ಟಿನ ಕ್ರಮ ವಹಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಏಪ್ರಿಲ್ ೩೦ರ ಅಕ್ಷಯ ತೃತೀಯ ದಿನದಂದು ಜಿಲ್ಲೆಯಲ್ಲಿ ಸಾಮೂಹಿಕ ವಿವಾಹಗಳು ಹಾಗೂ ವೈಯಕ್ತಿಕ ವಿವಾಹಗಳು ಹೆಚ್ಚಾಗಿ ಆಯೋಜನೆಯಾಗುವ ಸಂಭವವಿದ್ದು, ಈ ಸಂದರ್ಭಗಳಲ್ಲಿ ಅಪ್ರಾಪ್ತ ವಯಸ್ಸಿನವರ ವಿವಾಹಗಳು ಜರುಗುವ ಸಾಧ್ಯತೆ ಇರುವುದರಿಂದ, ಬಾಲ್ಯ ವಿವಾಹ ನಿಷೇಧ ಕಾಯ್ದೆ-೨೦೦೬ ಮತ್ತು ಕರ್ನಾಟಕ ತಿದ್ದುಪಡಿ ಕಾಯ್ದೆ-೨೦೧೬ರ ಸೆಕ್ಷನ್ ೧೩(೪)ರಂತೆ ವಿವಾಹಗಳನ್ನು ತಡೆಯುವ ಅಧಿಕಾರವಿರುವುದರಿಂದ ಜಿಲ್ಲಾ, ತಾಲೂಕು, ವಾರ್ಡ ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ ಬಾಲ್ಯ ವಿವಾಹ ನಿಷೇಧಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ಬಾಲ್ಯವಿವಾಹ ನಡೆಯದಂತೆ ನಿಗಾವಹಿಸುವಂತೆ ಅವರು ಸೂಚನೆ ನೀಡಿದ್ದಾರೆ.ಸಾರ್ವಜನಿಕರು ಸಹ ಬಾಲ್ಯವಿವಾಹ ತಡೆಗಟ್ಟಲು ಸಹಕರಿಸಬೇಕು. ಬಾಲ್ಯವಿವಾಹ ನಡೆಯುವ ಮಾಹಿತಿ ದೊರೆತಲ್ಲಿ ಮಕ್ಕಳ ಸಹಾಯವಾಣಿ ಸಂಖ್ಯೆ ೧೦೯೮ ಅಥವಾ ೧೧೨ಗೆ ಕರೆ ಮಾಡಿ ದೂರು ನೀಡಿದರೆ ಮಾಹಿತಿ ನೀಡಿದವರ ಹೆಸರನ್ನು ಗೌಪ್ಯವಾಗಿಟ್ಟು ಬಾಲ್ಯ ವಿವಾಹ ತಡೆಗಟ್ಟಲು ಕ್ರಮ ವಹಿಸಲಾಗುವುದು ತಿಳಿಸಿದ್ದಾರೆ ಎಂದು ಜಿಲ್ಲಾ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ಕಾರ್ಯಕಾರಿ ನಿರ್ದೇಶಕರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಜ್ವಲ್‌ಕುಮಾರ ಘೋಷ್ ಅವರು ಏ.೩೦ ಹಾಗೂ ಮೇ.೧ ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಏ.೩೦ರಂದು ಮಧ್ಯಾಹ್ನ ೩-೪೫ಕ್ಕೆ ಕಲ್ಬುರ್ಗಿಯಿಂದ ವಿಜಯಪುರಕ್ಕೆ ಆಗಮಿಸಿ, ಸಂಜೆ ೪ ರಿಂದ ೬ ಗಂಟೆಯವರೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಅಂದು ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ.ಮೇ.೦೧ ರಂದು ಬೆಳಿಗ್ಗೆ ೧೦ ಗಂಟೆಗೆ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನಾ ಸಭೆ ಹಾಗೂ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಮಧ್ಯಾಹ್ನ ೨-೩೦ಕ್ಕೆ ಹುಬ್ಬಳ್ಳಿ ಮಾರ್ಗವಾಗಿ ಬೆಂಗಳೂರಿಗೆ ಮರು ಪ್ರಯಾಣ ಬೆಳೆಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

Read More

ಅಗತ್ಯ ಸಿದ್ಧತೆಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮುಖ್ಯಮಂತ್ರಿಗಳ ತಾತ್ಕಾಲಿಕ ಪ್ರವಾಸದಂತೆ ಮೇ ತಿಂಗಳ ಕೊನೆಯ ವಾರದಲ್ಲಿ ಮುಖ್ಯಮಂತ್ರಿಗಳು ಜಿಲ್ಲೆಗೆ ಭೇಟಿ ನೀಡಲಿದ್ದು ಮುಖ್ಯಮಂತ್ರಿಗಳ ಪ್ರವಾಸದ ಹಿನ್ನಲೆಯಲ್ಲಿ ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಮುಖ್ಯಮಂತ್ರಿಗಳು ಜಿಲ್ಲೆಗೆ ಆಗಮಿಸುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಕೈಗೊಂಡಿರುವ ವಿವಿಧ ಕಾಮಗಾರಿಗಳು, ವಿವಿಧ ಕಟ್ಟಡಗಳ ಉದ್ಘಾಟನೆ, ಸೇರಿದಂತೆ ದೀರ್ಘಾವಧಿ ಬಾಕಿ ಪ್ರಸ್ತಾವನೆಗಳ ಮಾಹಿತಿ ಸಲ್ಲಿಸುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಲೋಕೋಪಯೋಗಿ, ಪ್ರವಾಸೋದ್ಯಮ, ಆರೋಗ್ಯ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಹೆಸ್ಕಾಂ ಇಲಾಖೆ ಸೇರಿದಂತೆ ವಿವಿಧ ಇಲಾಖೆಯಡಿ ನಡೆಯುತ್ತಿರುವ ಕಾಮಗಾರಿಗಳು, ಪ್ರಗತಿಯಲ್ಲಿರುವ ಹಾಗೂ ಪೂರ್ಣಗೊಂಡ ಕಾಮಗಾರಿಗಳ ಮಾಹಿತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.೨೦೨೪ ಹಾಗೂ ೨೦೨೫ನೇ ಸಾಲಿನ…

Read More

ವಿಜಯಪುರದಲ್ಲಿ ಸಾಮಾಜಿಕ ಅಧಿಕಾರಿತ ಶಿವಿರ್ ಕಾರ್ಯಕ್ರಮ ಉದ್ಘಾಟಿಸಿದ ಸಂಸದ ರಮೇಶ ಜಿಗಜೀಣಗಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಶೇಷ ಚೇತನರು ಕೂಡ ಸಾಮಾನ್ಯರಂತೆ ಬದುಕುವ ಬಯಕೆಯಿರುತ್ತದೆ ಎಂಬುದನ್ನು ಸಮಾಜದ ಇತರರು ಅರಿತು ಅವರ ಬೆಳವಣಿಗೆಗೆ ಸಹಕರಿಸಬೇಕು. ಈ ನಿಟ್ಟಿನಲ್ಲಿ ಸರ್ಕಾರ ವಿಶೇಷಚೇತನರ ಸಬಲೀಕರಣಕ್ಕಾಗಿ ಉಚಿತವಾಗಿ ಸಾಧನ ಸಲಕರಣೆಯನ್ನು ನೀಡಲಾಗುತ್ತಿದೆ ಎಂದು ಸಂಸದರಾದ ರಮೇಶ ಜಿಗಜೀಣಗಿ ಹೇಳಿದರು.ಮಂಗಳವಾರ ನಗರದ ಕಂದಗಲ್ ಶ್ರೀ ಹನುಮಂತರಾಯ್ ರಂಗ ಮಂದಿರದಲ್ಲಿ ಮಂಗಳವಾರ ಭಾರತ ಸರ್ಕಾರ, ಸಾಮಾಜಿಕ ನ್ಯಾಯ ಹಾಗೂ ಸಬಲೀಕರಣ ಇಲಾಖೆ, ಅಲಿಂಕೋ, ಜಿಲ್ಲಾಡಳಿತ, ಜಿಲ್ಲಾಪಂಚಾಯತಗಳ ಸಂಯುಕ್ತಾಶ್ರಯದಲ್ಲಿ ವಿಶೇಷಚೇತನ ಹಾಗೂ ಹಿರಿಯ ನಾಗರಿಕರಿಗೆ ಉಚಿತ ಸಾಧನ ಸಲಕರಣೆಗಳ ವಿತರಿಸುವ ಭಾರತ ಸರ್ಕಾರದ ಅಡಿಪ್ ಯೋಜನೆ ಹಾಗೂ ರಾಷ್ಟ್ರೀಯ ವಯೋಶ್ರೀ ಯೋಜನೆಯಡಿ ಸಾಮಾಜಿಕ ಅಧಿಕಾರಿತ ಶಿವಿರ್ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ವಿಶೇಷಚೇತನರಿಗಾಗಿ ಸಾಧನ ಸಲಕರಣೆಗಳನ್ನು ವಿತರಿಸಲಾಗುತ್ತಿದ್ದು ತಾವುಗಳು ಮಾತ್ರ ಸಮರ್ಪಕವಾಗಿ ಉಪಯೋಗಿಸುವಂತಾಗಬೇಕು ಅಧಿಕಾರಿಗಳು ಕೂಡ ಅರ್ಹತೆ ಹೊಂದಿದವರಿಗೆ ಮಾತ್ರ ಸಾಧನ ಸಲಕರಣಗಳು ದೊರೆಯುವಂತೆ ಕ್ರಮ ವಹಿಸಬೇಕು ಯೋಜನೆಗಳ ಫಲಾನುಭವಿಗಳು ಸಾಧನ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಗ್ರಂಥಾಲಯದಲ್ಲಿ ಗೌರವಧನ ಆಧಾರದ ಮೇಲೆ ಅತಿಥಿ ಸಹಾಯಕ ಗ್ರಂಥಪಾಲಕರು (ಉuesಣ ಂssisಣಚಿಟಿಣ ಐibಡಿಚಿಡಿiಚಿಟಿ) (ತಾತ್ಕಾಲಿಕ) ಹಾಗೂ ಅತಿಥಿ ಗ್ರಂಥಾಲಯ ಸಹಾಯಕರು (ಐibಡಿಚಿಡಿಥಿ ಂssisಣಚಿಟಿಣ) (ತಾತ್ಕಾಲಿಕ) ಹುದ್ದೆಗೆ ಇದೇ ೨೯ ರಂದು ಬೆಳಿಗ್ಗೆ ೧೧:೩೦ ಗಂಟೆಗೆ ನೇರ ಸಂದರ್ಶನ ಏರ್ಪಡಿಸಲಾಗಿತ್ತು, ಕಾರಣಾಂತರದಿಂದ ಸದರಿ ಸಂದರ್ಶನವನ್ನು ಮುಂದೂಡಲಾಗಿತ್ತು, ಸದರಿ ನೇರ ಸಂದರ್ಶವನ್ನು ಇದೇ ಮೇ ದಿ. ೦೨ ರಂದು ಬೆಳಿಗ್ಗೆ ೧೧:೦೦ ಗಂಟೆಗೆ ವಿವಿಯ ಆಡಳಿತ ಭವನದ ಸಿಂಡಿಕೇಟ್ ಸಭಾ ಭವನದಲ್ಲಿ ಅರ್ಹ ಅಭ್ಯರ್ಥಿಗಳಿಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ.ಆಸಕ್ತಿಯುಳ್ಳ ಅರ್ಹ ಅಭ್ಯರ್ಥಿಗಳು ಮೂಲ ದಾಖಲಾತಿಗಳೊಂದಿಗೆ ಹಾಜರಿರಬೇಕು. ಹೆಚ್ಚಿನ ಮಾಹಿತಿಗಾಗಿ ತಿತಿತಿ.ಞsತಿu.ಚಿಛಿ.iಟಿನ್ನು ಸಂಪರ್ಕಿಸಬಹುದು ಎಂದು ಕುಲಸಚಿವ ಶಂಕರಗೌಡ ಸೋಮನಾಳ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಇಂದು (ಏ.೩೦ ಬುಧವಾರ) ಪ್ರಜಾಪ್ರಭುತ್ವೀಯ ಮೌಲ್ಯಗಳನ್ನು ಹೊಂದಿದ ಸಮಾನತೆಯ ಹರಿಕಾರ ವಿಶ್ವಗುರು ಬಸವಣ್ಣನವರ ಜಯಂತಿ ಪ್ರಯುಕ್ತ ಈ ವಿಶೇಷ ಲೇಖನ ಲೇಖನ- ವಿವೇಕಾನಂದ ಎಚ್. ಕೆ.ಬೆಂಗಳೂರುಮೊ: 9844013068 ಉದಯರಶ್ಮಿ ದಿನಪತ್ರಿಕೆ ಕರ್ನಾಟಕ ಸರ್ಕಾರ ಬಸವಣ್ಣನವರನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿ ವರ್ಷಕ್ಕೂ ಸ್ವಲ್ಪ ಹೆಚ್ಚು ಕಾಲವಾಯಿತು. ಆ ಘೋಷಣೆಯಿಂದ ಏನಾದರೂ ಬದಲಾವಣೆ ಕರ್ನಾಟಕದ ಜನಮಾನಸದಲ್ಲಿ ಉಂಟಾಗಿದೆಯೇ ಎಂಬುದನ್ನು ವಿಮರ್ಶಿಸಿಕೊಳ್ಳಬೇಕಾದ ಸಮಯ..ಈ ಬಸವ ಜಯಂತಿ ಬಸವಣ್ಣನವರನ್ನು ವಿಜೃಂಭಿಸುವುದು, ಆರಾಧಿಸುವುದು, ಭಕ್ತಿ ಪೂರ್ವಕವಾಗಿ ಪೂಜಿಸುವುದು, ಅತಿಮಾನುಷ ವ್ಯಕ್ತಿಯಂತೆ ಭಾವಿಸುವುದು, ಪವಾಡ ಪುರುಷರಂತೆ ಹರಕೆ ಹೊರುವುದು, ಸಂಘಟನಾತ್ಮಕವಾಗಿ ಒಗ್ಗೂಡಲು ಅವರ ಹೆಸರನ್ನು ಉಪಯೋಗಿಸಿಕೊಳ್ಳುವುದು, ರಾಜಕೀಯ ಕಾರಣಗಳಿಗಾಗಿ ಬಳಸಿಕೊಳ್ಳುವುದು, ಪ್ರತಿಮೆಗಳನ್ನು ಸ್ಥಾಪಿಸುವುದು, ಅಧ್ಯಯನ ಪೀಠಗಳನ್ನು ಸೃಷ್ಟಿ ಮಾಡುವುದು, ದೊಡ್ಡ ದೊಡ್ಡ ಸಂಶೋಧನಾತ್ಮಕ ಪ್ರಬಂಧಗಳನ್ನು ಮಂಡಿಸುವುದು, ರಸ್ತೆ, ವಿಶ್ವವಿದ್ಯಾಲಯ, ಸಾರಿಗೆ ನಿಲ್ದಾಣಗಳು ಮುಂತಾದುವುಗಳಿಗೆ ಹೆಸರಿಡುವುದು ಇವೆಲ್ಲವುಗಳನ್ನು ಹೊರತುಪಡಿಸಿ ಸಮ ಸಮಾಜದ, ಮಾನವೀಯ ಸಮಾಜದ, ನಾಗರೀಕ ಸಮಾಜದ ನಿರ್ಮಾಣದ ಹಾದಿಯಲ್ಲಿ ಏನಾದರೂ ಪ್ರಯತ್ನಗಳು ಸಾಗುತ್ತಿದೆಯೇ ಎಂಬುದನ್ನು ನೋಡಬೇಕಿದೆ..ಬಸವಣ್ಣನವರು ಸಾಮಾನ್ಯ…

Read More

ಚಿಂತನೆ- ಶರಣಮ್ಮ ಗೊರೆಬಾಳಪ್ರಾಚಾರ್ಯರುವಿದ್ಯಾರಣ್ಯ ಪಪೂ ಮಹಾವಿದ್ಯಾಲಯಧಾರವಾಡ ಉದಯರಶ್ಮಿ ದಿನಪತ್ರಿಕೆ ಬಸವಯುಗದ ಶ್ರೇಷ್ಠ ಶಿವಶರಣ, ಕಾಯಕಯೋಗಿ, ಕಟುವಾದರೂ ದಿಟವನ್ನೇ ನುಡಿಯುವ ಕೆಚ್ಚೆದೆಯ ವಚನಕಾರ ಅಂಬಿಗರ ಚೌಡಯ್ಯ.ಕಾಲ: 12ನೇ ಶತಮಾನಊರು: ಹಾವೇರಿ ಜಿಲ್ಲೆಯ ರಾಣೆಬೆನ್ನೂರು ತಾಲೂಕಿನ ಚೌಡದಾನಪುರವೃತ್ತಿ: ದೋಣಿ ನಡೆಸುವುದುದೊರಕಿದ ವಚನಗಳು: 278ವಿಶೇಷತೆ: ತನ್ನ ಹೆಸರನ್ನೇ ಅಂಕಿತನಾಮವನ್ನಾಗಿ ಇಟ್ಟುಕೊಂಡು ವಚನ ರಚಿಸಿದ್ದು,ಆಳವಾದ ಅನುಭವ, ಕಾಯಕನಿಷ್ಠೆಯನ್ನು ಹೊಂದಿದ ಚೌಡಯ್ಯನವರ ವಚನಗಳಲ್ಲಿ ಸಾಮಾಜಿಕ ಪ್ರಜ್ಞೆ ಎದ್ದು ಕಾಣುತ್ತದೆ. ತನ್ನ ವಚನಗಳ ಮೂಲಕ ಸಮಾಜದ ಓರೆ ಕೋರೆಗಳನ್ನು ತಿದ್ದಿದವನು, ಮನುಷ್ಯ ದೇವರನ್ನು ಹುಡುಕಿಕೊಂಡು ಎಲ್ಲಿಗೂ ಹೋಗಬೇಕಿಲ್ಲ ತನ್ನಲ್ಲಿಯೇ ದೇವರನ್ನು ಕಂಡುಕೊಳ್ಳಬಹುದು ಎಂಬ ವಿಶಿಷ್ಟ ತತ್ವವನ್ನು ಸಾರಿದವನು. ತನ್ನ ಅರಿವೇ ತನಗೆ ಗುರು ಎಂಬ ಅಂಶ ಅವರ ಸಾಕಷ್ಟು ವಚನಗಳಲ್ಲಿ ಕಂಡು ಬರುತ್ತದೆ, ಅಂಬಿಗರ ಚೌಡಯ್ಯ ದೋಣಿಯನ್ನು ನಡೆಸುವ ಕಾಯಕವನ್ನು ನಿಷ್ಠೆಯಿಂದ ಮಾಡುತ್ತಿದ್ದನು, ದೋಣಿಯಲ್ಲಿ ಜನರನ್ನು ಕೂರಿಸಿಕೊಂಡು ನದಿ ದಾಟಿಸುವ ಕಾಯಕ ಮಾಡುತ್ತಿದ್ದನು, ಮಾನವ ಜನ್ಮವನ್ನು ಸಾರ್ಥಕ ಪಡಿಸಿಕೊಳ್ಳುವ ಮಾರ್ಗಗಳನ್ನು ತೋರಿಸುವ ಅಂಬಿಗ ಆಗಿದ್ದನು, ಚೌಡಯ್ಯನವರಿಗೆ ತಮ್ಮ ವೃತ್ತಿಯಿಂದ ಹಣ…

Read More

ಲೇಖನ- ಶೈಲಜಾ ಆಲಗೂರಉಪನ್ಯಾಸಕರುಶಿವಣಗಿವಿಜಯಪುರ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ “ಜ್ಞಾನದ ಬಲದಿಂದ ಅಜ್ಞಾನದ ಕೇಡುಜ್ಯೋತಿಯ ಬಲದಿಂದ ತಮಂಧದ ಕೇಡುಸತ್ಯದ ಬಲದಿಂದ ಅಸತ್ಯದ ಕೇಡುಪರುಷದ ಬಲದಿಂದ ಅವಲೋಹದ ಕೇಡುಕೂಡಲಸಂಗನ ಶರಣುಭಾವದಿಂದಎನ್ನ ಭವದ ಕೇಡು ನೋಡಯ್ಯ ” ಜಗತ್ತು ಅಂಧಕಾರದಲ್ಲಿ ಮುಳುಗಿದ್ದಾಗ ಸಮಾಜವನ್ನು ಮುನ್ನಡೆಸಲು, ಬೆಳಕಿನೆಡೆಗೆ ತೆಗೆದುಕೊಂಡು ಹೋಗಲು ಮಹಾಪುರುಷರು ಹುಟ್ಟುತ್ತಾರೆಂಬುದಕ್ಕೆ ಬುದ್ಧನಿಂದ ಬಸವ ಮತ್ತು ಅಂಬೇಡ್ಕರ್ ಇವರು ಜನ್ಮ ತಾಳಿದ್ದು ಇದಕ್ಕೆ ನಿದರ್ಶನ. ಹನ್ನೆರಡನೇ ಶತಮಾನದ ಮಧ್ಯಭಾಗದಲ್ಲಿ ಇಡೀ ದೇಶ ಅಸಮಾನತೆ,ಅಂಧಶ್ರದ್ಧೆಯಲ್ಲಿ ಮುಳುಗಿ ಹೋಗಿತ್ತು ಅಂತಹ ಕಾಲಘಟ್ಟದಲ್ಲಿ ಶ್ರೀಸಾಮಾನ್ಯರ ಪರವಾಗಿ ಧ್ವನಿ ಎತ್ತಿ ಜಾತೀಯತೆ, ಅಸ್ಪೃಶ್ಯತೆ, ಸಾಮಾಜಿಕ ಅಸಮಾನತೆಯ ವಿರುದ್ಧ ಸಿಡಿದೆದ್ದ ಬಸವಣ್ಣನವರು ಕಾಲ ಕಾಲದಿಂದ ನಡೆದು ಬಂದ ತೊಡರುಗಳಿಗೆ ಅಂಜದೆ, ಅಳುಕದೆ ಬಂಡಾಯವೆದ್ದರು. ಪುರೋಹಿತಶಾಹಿಯನ್ನು ಧಿಕ್ಕರಿಸಿ ಕಂದಾಚಾರದ ವಿರುದ್ಧ ತಿರುಗಿಬಿದ್ದರು. ಸಮಾಜದ ಎಲ್ಲ ಜನರ ಒಳಿತಿಗಾಗಿ ಹೋರಾಟ ಶುರು ಮಾಡಿದರು. ಬಸವಣ್ಣನವರು ಇಂದಿಗೂ ನಮ್ಮೊಡನೆ ಜೀವಂತವಾಗಿರುವುದು ಅವರಲ್ಲಿದ್ದ ವೈಚಾರಿಕ ಅಂಶಗಳಿಂದ. ಇವರು ಜಾತಿ, ಮತ, ಉದ್ಯೋಗ, ವಯಸ್ಸು ಯಾವುದೂ ಅಡ್ಡಿಯಾಗದಂತಹ ನೈತಿಕ ಜೀವನವನ್ನು…

Read More