Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದ ಎಂಪಿಎಸ್ ಶಾಲಾ ಸಭಾಂಗಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ತಾಲೂಕು ಘಟಕದಿಂದ ರಾಜ್ಯ ಮಟ್ಟದ ಕಾರ್ಯಾಗಾರ ಹಾಗೂ ಬೃಹತ್ ಸಮಾವೇಶದ ಪೂರ್ವಭಾವಿ ಸಭೆ ನಡೆಯಿತು. ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ತಾಲೂಕು ಕೆ.ಯು. ಗಿಡ್ಡಪ್ಪಗೋಳ ಮಾತನಾಡಿ1-7-2022 ರಿಂದ 31-7-2024 ರವರಿಗೆ ನಿವೃತ್ತಿ ಹೊಂದಿದ ನೌಕರರಿಗೆ 7ನೇ ವೇತನ ಆಯೋಗದ ಸೌಲಭ್ಯ ಸಿಗದಿದ್ದಕ್ಕೆ ದಿನಾಂಕ 3-4-2025 ರಂದು ಗುರುವಾರ ಫ್ರೀಡಂ ಪಾರ್ಕ್ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ದಿನಾಂಕ 4-4-2025 ರಂದು ಶುಕ್ರವಾರ ಬೆಳಗ್ಗೆ 10 ಗಂಟೆಗೆ ರಾಜ್ಯ ಮಟ್ಟದ ಕಾರ್ಯಾಗಾರ ಮತ್ತು ಬೃಹತ್ ಸಮಾವೇಶವನ್ನು ಬೆಂಗಳೂರಿನ ಪ್ರಿನ್ಸಸ್ ಶ್ರೈನ್ (ಗೇಟ್ ನಂ-9) ಅರಮನೆ ಆವರಣದಲ್ಲಿ ಹಮ್ಮಿಕೊಂಡಿದ್ದು ಉದ್ಘಾಟನೆ ಮುಖ್ಯಮಂತ್ರಿಗಳು ಸಿದ್ದರಾಮಯ್ಯ, ಸ್ಮರಣ ಸಂಚಿಕೆ ಬಿಡುಗಡೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರರವರು, ಅಧ್ಯಕ್ಷತೆ ರಾಜ್ಯಾಧ್ಯಕ್ಷ ಎಸ್.ಎಲ್. ಭೈರಪ್ಪ, ಉಪಸ್ಥಿತಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶ್ರೀ ಜಗಜ್ಯೋತಿ ಬಸವೇಶ್ವರ ಪಬ್ಲಿಕ್ ಶಾಲೆಯ ಆಡಳಿತಾಧಿ ದೀಪಾ ಎಲ್. ಪಾಟೀಲ ರವರು ಎಂ.ಈಡ್. ಪದವಿಯಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯಕ್ಕೆ ಮೂರನೇ ರ್ಯಾಂಕ್ ಪಡೆಯುವ ಮೂಲಕ ಅತ್ಯುತ್ತಮವಾದ ಸಾಧನೆ ಮಾಡಿದ್ದಾರೆ. ಈ ಸಾಧನೆ ಮುಂದಿನ ಎಲ್ಲ ವಿದ್ಯಾರ್ಥಿಗಳಿಗೆ ದಾರಿದೀಪವಾಗಿದೆ.ಅವರಿಗೆ ಸಂಸ್ಥೆಯ ಅಧ್ಯಕ್ಷ ಎಲ್.ಬಿ. ಪಾಟೀಲ ಅವರು ಸಂಸ್ಥೆಯ ಚೇರಮನ್ ಶ್ರೀಮತಿ ಎಸ್.ಎಲ್. ಪಾಟೀಲ ಹಾಗೂ ಸಂಸ್ಥೆಯ ಕಾರ್ಯದರ್ಶಿಗಳಾದ ಸಂತೋಷರೆಡ್ಡಿ ಎಲ್. ಪಾಟೀಲ ಹಾಗೂ ಎಲ್ಲ ವಿಭಾಗದ ಮುಖ್ಯಸ್ಥರು ಹಾಗೂ ಸಿಬ್ಬಂದಿ ಅಭಿನಂದಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಚಿಕ್ಕಪಡಸಲಗಿ: ಸಮಾಜದಲ್ಲಿಂದು ಅನಾಚಾರ, ಸ್ವೇಚ್ಛಾಚಾರದ ತಾಂಡವ ಹೆಚ್ಚಾಗುತ್ತಿದೆ. ಮುಂಬರುವ ಭವಿಷ್ಯತ್ತಿನ ದಿನಮಾನಗಳಲ್ಲಿ ಈ ಪಿಡುಗು ಊಹೆಗೂ ಮೀರಿ ನಿಲ್ಲಲಿದೆ.ಇದು ಯಾರ ತರ್ಕಕ್ಕೂ ನಿಲುಕದಂತೆ ವ್ಯಾಪಕ ರೂಪ ಪಡೆಯಬಹುದು. ಕಾರಣ ಇಂದಿನ ಯುವ ಕುಸುಮಗಳಿಗೆ ಬಾಲ್ಯಾವಸ್ಥೆಯಲ್ಲಿಯೇ ನೈತಿಕತೆ ಮೌಲ್ಯಗಳ ದಿವ್ಯಾನುಭೂತಿಯ ಅಮೃತ ಸಿಂಚನದ ಸ್ಪರ್ಶ ಲೇಪಿಸಬೇಕು ಎಂದು ವೈದ್ಯೆ ಡಾ.ಗಂಗಾಶ್ರೀ ಚನ್ನು ಅನಂತಪೂರ ಅಭಿಪ್ರಾಯಿಸಿದರು.ಸಮೀಪದ ಗೋಠೆ ಗ್ರಾಮದಲ್ಲಿ ಅಮ್ಮ ನೇತ್ರ ಸಂಸ್ಥೆಯ ಗುರುಬಸವ ಪ್ರಾಥಮಿಕ ಶಾಲೆ ಹಾಗೂ ಕಿಡ್ಸ್ ಹೋಮ್ ವೀಣಾ ಪೂರ್ವ ಪ್ರಾಥಮಿಕ ಶಾಲೆ ವಾಷಿ೯ಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದ ಅವರು, ಪ್ರಾಥಮಿಕ ಶಾಲಾ ಹಂತದಲ್ಲಿಯೇ ಮಕ್ಕಳು ತಮ್ಮ ಶೈಕ್ಷಣಿಕ ಗುಣಮಟ್ಟವನ್ನು ಸುಧಾರಿಸಿಕೊಳ್ಳಲು ಪ್ರಯತ್ನಿಸಬೇಕು ಎಂದರು.ಪ್ರಾಥಮಿಕ ಶಾಲಾ ಹಂತವೇ ಶಿಕ್ಷಣದ ಅಡಿಪಾಯ. ಕಟ್ಟಡ ನಿಮಿ೯ಸುವಾಗ ಅಡಿಪಾಯದ ಪಿಲ್ಲರ್ ಗಟ್ಟಿಯಾಗಿದ್ದರೆ ಮಾತ್ರ ಕಟ್ಟಡಕ್ಕೆನು ತೊಂದರೆ ಇಲ್ಲ. ಹಾಗೆಯೇ ಶೈಕ್ಷಣಿಕ ಗುಣಮಟ್ಟ ಉತ್ತಮವಾಗಿ ಕಾಯ್ದುಕೊಳ್ಳಲು ಪ್ರಾಥಮಿಕ ಹಂತದ ಶಿಕ್ಷಣ ಪ್ರಮುಖ ಪಾತ್ರ ವಹಿಸುತ್ತದೆ. ಆ ಹಿನ್ನೆಲೆಯಲ್ಲಿ ಪ್ರಾಥಮಿಕ ಶಿಕ್ಷಣಕ್ಕೆ ಮೊದಲು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮುಂದಿನ ಪೀಳಿಗೆಗೆ ನೀರಿನ ಅಭಾವ ತಡೆಯಲು ನೀರನ್ನು ಮಿತವಾಗಿ ಬಳಸುವ ಹಾಗೂ ಪುನರ್ ಬಳಕೆ ಮಾಡುವ ಪರಿಪಾಠ ಇಂದಿನ ಮಕ್ಕಳು ರೂಢಿಸಿಕೊಳ್ಳಬೇಕು ಎಂದು ಶಿಕ್ಷಕ ಸಂತೋಷ ಬಂಡೆ ಹೇಳಿದರು.ಶನಿವಾರದಂದು ತಾಲೂಕಿನ ನಾಗಠಾಣ ಗ್ರಾಮದ ಶ್ರೀ ಮಲ್ಲಿಕಾರ್ಜುನ ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ‘ವಿಶ್ವ ಜಲ ದಿನಾಚರಣೆ’ ಕಾರ್ಯಕ್ರಮವನ್ನು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡಿದರು.ಮಾನವ, ಪ್ರಾಣಿ, ಪಕ್ಷಿ ಸಂಕುಲದ ಉಳಿವಿಗೆ ನೀರು ಅಮೂಲ್ಯವಾದ ಜೀವಜಲವಾಗಿದೆ. ಆಹಾರ ಉತ್ಪಾದನೆ, ಗಿಡ-ಮರ ಸೇರಿದಂತೆ ಪ್ರತಿಯೊಂದಕ್ಕೂ ನೀರಿನ ಅವಶ್ಯಕತೆ ಇರುವದರಿಂದ ನೀರಿನ ಮಿತ ಬಳಕೆ ನಮ್ಮ ಮೊದಲ ಆದ್ಯತೆಯಾಗಬೇಕು ಎಂದು ಹೇಳಿದರು.ಮುಖ್ಯ ಶಿಕ್ಷಕ ಸುರೇಶಗೌಡ ಬಿರಾದಾರ ಮಾತನಾಡಿ,ನೀರಿನ ಸಂರಕ್ಷಣೆ ಬಗ್ಗೆ ಕೇವಲ ಒಂದು ದಿನ ಮಾತ್ರ ಚಿಂತನೆ ನಡೆಸಿದರೆ ಸಾಲದು. ನೀರನ್ನು ಉಳಿತಾಯ ಮಾಡುವ ಹವ್ಯಾಸ ಎಲ್ಲರ ದೈನಂದಿನ ರೂಢಿಯಾಗಬೇಕು ಎಂದು ಹೇಳಿದರು.ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಶಂಕರ ಹುಣಶ್ಯಾಳ ಮಾತನಾಡಿ, ಮಳೆಯ ಪ್ರಮಾಣ ವರ್ಷದಿಂದ ವರ್ಷಕ್ಕೆ ಕಡಿಮೆಯಾಗುತ್ತಿರುದರಿಂದ ಅಂತರ್ಜಲ ಕೂಡ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಆದಿಜಾಂಬವ ಅಭಿವೃದ್ಧಿ ನಿಗಮದಿಂದ 2022-23ನೇ ವರ್ಷದ ಉದ್ಯಮಶೀಲತೆಅಭಿವೃದ್ಧಿ ಯೋಜನೆ-3(ದ್ವಿಚಕ್ರ ವಾಹನ) ಸರಕಾರಿ ಸಾಂಸ್ಥಿಕ ಕೋಟಾದಡಿ ಆಯ್ಕೆಯಾದ ಫಲಾಪೇಕ್ಷಿಗಳಿಗೆವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಅವರು ದ್ವಿಚಕ್ರ ವಾಹನ ವಿತರಿಸಿದರು.ನಗರದಲ್ಲಿ ಶುಕ್ರವಾರ ಮುಸ್ಸಂಜೆ ನಡೆದ ಕಾರ್ಯಕ್ರಮದಲ್ಲಿ ಬಬಲೇಶ್ವರದ ಆರು ಜನರಿಗೆ ಶಾಸಕರು ದ್ವಿಚಕ್ರವಾಹನ ವಿತರಿಸಿ ಶುಭ ಕೋರಿದರು.ಈ ಸಂದರ್ಭದಲ್ಲಿ ನಿಗಮದ ಜಿಲ್ಲಾ ವ್ಯವಸ್ಥಾಪಕ ಬಿ. ಜೆ. ಇಂಡಿ, ತಾಲೂಕು ಅಭಿವೃದ್ಧಿ ಅಧಿಕಾರಿ ಪದ್ಮಜಾ ಪಾಟೀಲ, ಸಚಿವ ಎಂ. ಬಿ. ಪಾಟೀಲ ಅವರ ಆಪ್ತ ಸಹಾಯಕ ಡಿ. ಎನ್. ಭೋಸಲೆ, ತಿಕೋಟಾ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಿದ್ದು ಗೌಡನವರ, ಮುಖಂಡರಾದ ಪರಸು ಪಡಗಾರ, ವಿಶ್ವಾಸ ಕಾಂಬಳೆ, ಸಿದಗೊಂಡ ರುದ್ರಗೌಡರ, ಸಿದ್ದು ಮಾದರ, ದಾನಪ್ಪ ಹೊಸಮನಿ, ಚಂದ್ರಶೇಖರ ದೊಡಮನಿ, ಜಕ್ಕಪ್ಪ ಹಲಗಿ, ಯಲ್ಲಪ್ಪ ದೊಡಮನಿ, ಶಾಂತಪ್ಪ ಹಲಗಿ ಮುಂತಾದವರು ಉಪಸ್ಥಿತರಿದ್ದರು.
ಉದಯರಶ್ಮಿ ದಿನಪತ್ರಿಕೆ ಇಂಡಿ: ಮಹಿಳೆಯರು ಆರ್ಥಿಕವಾಗಿ ಸಬಲರಾಗಲು ಸದಾ ಕ್ರೀಯಾಶೀಲರಾಗಿ ಉದ್ಯಮಶೀಲತೆಯನ್ನು ಮೈಗೂಡಿಸಿಕೊಳ್ಳಬೇಕು ಎಂದು ವಿಜಯಪುರದ ಮಹಿಳಾ ಮತ್ತು ಶಿಶುಅಭಿವೃದ್ದಿ ಯೋಜನಾಧಿಕಾರಿ ರೇಷ್ಮಾ ವಿ. ಚವ್ಹಾಣ ಹೇಳಿದರು.ಅವರು ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಶನಿವಾರ ಸಮಾಜಶಾಸ್ತ್ರ ವಿಭಾಗ ಏರ್ಪಡಿಸಿದ್ದ “ಮಹಿಳೆಯರಲ್ಲಿ ಆಹಾರ ಮತ್ತು ಪೋಷಣೆಯ ಮಹತ್ವ” ಎಂಬ ವಿಷಯದ ಕುರಿತು ಮಾತನಾಡಿದರು.ಯುವತಿ ಮತ್ತು ಮಹಿಳೆಯರ ಆರೋಗ್ಯಕ್ಕೆ ಪೋಷಕ ಆಹಾರದ ಮಹತ್ವವನ್ನು ವಿವರಿಸಿದರು. ಅವರು ಸಮತೋಲನ ಆಹಾರದ ಅಗತ್ಯತೆ ಮತ್ತು ಪೌಷ್ಠಿಕ ಅಂಶಗಳ ಪ್ರಾಮುಖ್ಯತೆಯನ್ನು ವಿವರಿಸಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಆರ್.ಎಚ್. ರಮೇಶ ವಹಿಸಿದ್ದರು. ಅಕ್ಕಮಹಾದೇವಿ ವಿವಿ ಸಿಂಡಿಕೇಟ್ ಸದಸ್ಯ ಪ್ರೊ. ಎಸ್.ಜೆ.ಮಾಡ್ಯಾಳ, ಪ್ರೊ. ರವಿಕುಮಾರ ಅರಳಿ, ಪ್ರೊ. ಸಂಗಮೇಶ ಹಿರೇಮಠ, ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.ಈ ಕಾರ್ಯಕ್ರಮವು ಮಹಿಳೆಯರ ಆಹಾರ ಹಾಗೂ ಆರೋಗ್ಯ ಜಾಗೃತಿಗೆ ಪ್ರಮುಖ ವೇದಿಕೆಯಾಗಿದ್ದು,ಎಲ್ಲರಲ್ಲಿಯೂ ಪೋಷಣೆಯ ಕುರಿತು ಜಾಗೃತಿ ಮೂಡಿಸುವಲ್ಲಿ ಯಶಸ್ವಿಯಾಯಿತು.ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥೆ ನೀಲಾಬಾಯಿ ಆರ್. ಸ್ವಾಗತಿಸಿದರು, ಕು.ಐಶ್ವರ್ಯ ನಾದ ವಂದಿಸಿದರು, ಪ್ರೊ.ಸುನಂದಾ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು.
ಉದಯರಶ್ಮಿ ದಿನಪತ್ರಿಕೆ ಆಲಮೇಲ: ಪಟ್ಟಣದ ವಿಶ್ವೇಶ್ವರ ಬಾಲಭಾರತಿ ಶಾಲೆಯ ಮುಖ್ಯ ಶಿಕ್ಷಕ ಲಕ್ಷ್ಮೀಪುತ್ರ ಕಿರನಳ್ಳಿ ರವರು ಶೈಕ್ಷಣಿಕ, ಸಂಘಟನೆ ಹಾಗೂ ಸಾಮಾಜಿಕ ಸೇವೆಯನ್ನು ಪರಿಗಣಿಸಿ ವರ್ಷದ ಕರ್ನಾಟಕ ರತ್ನ ಪುನಿತ್ ರಾಜಕುಮಾರ ಸ್ಪೂರ್ತಿ ಪ್ರಶಸ್ತಿಗೆ ಆಯ್ಕೆ ಆಗಿದ್ದಾರೆ.ಪ್ರಶಸ್ತಿ ಸಮಾರಂಭವು ಕರ್ನಾಟಕ ಸೋಶಿಯಲ್ ಕ್ಲಬ್ ಧಾರವಾಡ ಹಾಗೂ ವಿಶ್ವಾಸ ಫೌಂಡೇಶನ್ ಹುಬ್ಬಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಭಾನುವಾರ ದಂದು ರಂಗಾಯಣ ಸಭಾ ಭವನ ಧಾರವಾಡದಲ್ಲಿ ಜರುಗಲಿದೆ.ಪ್ರಶಸ್ತಿಗೆ ಆಯ್ಕೆ ಆಗಿದಕ್ಕೆ ಸಂಸ್ಥೆಯ ಅಧ್ಯಕ್ಷರು ಎಸ್.ಆಯ್.ಜೋಗೂರ, ಆಡಳಿತ ಮಂಡಳಿಯ ಸದಸ್ಯರು,ಶಿಕ್ಷಕರಾದ ಚಂದ್ರಕಾಂತ ದೇವರಮನಿ, ಪ್ರಶಾಂತ ಗಡದೆ,ಸುವರ್ಣ ಸಾರಂಗಮಠ, ಲಕ್ಷ್ಮೀಬಾಯಿ ಹಳೇಮನಿ,ಸೀತಾ ಆರೇಶಂಕರ,ಸರುಬಾಯಿ ಗಡದೆ,ಸುನಿತಾ ಗುಂಡದ,ವೀಣಾ ಗುಡಿಮಠ ಮುಂತಾದವರು ಹರ್ಷ ವ್ಯಕ್ತ ಪಡಿಸಿದ್ದಾರೆ
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದ ಎಂಪಿಎಸ್ ಶಾಲಾ ಸಭಾಂಗಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘ ತಾಲೂಕು ಘಟಕದಿಂದ ರಾಜ್ಯ ಮಟ್ಟದ ಕಾರ್ಯಾಗಾರ ಹಾಗೂ ಬೃಹತ್ ಸಮಾವೇಶದ ಪೂರ್ವಭಾವಿ ಸಭೆ ನಡೆಯಿತು. ಕರ್ನಾಟಕ ರಾಜ್ಯ ಸರ್ಕಾರಿ ನಿವೃತ್ತ ನೌಕರರ ಸಂಘದ ಅಧ್ಯಕ್ಷ ತಾಲೂಕು ಕೆ.ಯು. ಗಿಡ್ಡಪ್ಪಗೋಳ ಮಾತನಾಡಿ1-7-2022 ರಿಂದ 31-7-2024 ರವರಿಗೆ ನಿವೃತ್ತಿ ಹೊಂದಿದ ನೌಕರರಿಗೆ 7ನೇ ವೇತನ ಆಯೋಗದ ಸೌಲಭ್ಯ ಸಿಗದಿದ್ದಕ್ಕೆ ದಿನಾಂಕ 3-4-2025 ರಂದು ಗುರುವಾರ ಫ್ರೀಡಂ ಪಾರ್ಕ್ ಬೆಂಗಳೂರಿನಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ದಿನಾಂಕ 4-4-2025 ರಂದು ಶುಕ್ರವಾರ ಬೆಳಗ್ಗೆ 10 ಗಂಟೆಗೆ ರಾಜ್ಯ ಮಟ್ಟದ ಕಾರ್ಯಾಗಾರ ಮತ್ತು ಬೃಹತ್ ಸಮಾವೇಶವನ್ನು ಬೆಂಗಳೂರಿನ ಪ್ರಿನ್ಸಸ್ ಶ್ರೈನ್ (ಗೇಟ್ ನಂ-9) ಅರಮನೆ ಆವರಣದಲ್ಲಿ ಹಮ್ಮಿಕೊಂಡಿದ್ದು ಉದ್ಘಾಟನೆ ಮುಖ್ಯಮಂತ್ರಿಗಳು ಸಿದ್ದರಾಮಯ್ಯ, ಸ್ಮರಣ ಸಂಚಿಕೆ ಬಿಡುಗಡೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರರವರು, ಅಧ್ಯಕ್ಷತೆ ರಾಜ್ಯಾಧ್ಯಕ್ಷ ಎಸ್.ಎಲ್. ಭೈರಪ್ಪ, ಉಪಸ್ಥಿತಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ನೀರು ಪ್ರತಿ ಜೀವಿಯ ಜೀವ ಜಲ ಈ ನೀರನ್ನು ನಾವುಗಳು ಮಿತವಾಗಿ ಬಳಸಿ, ಸಂರಕ್ಷಣೆ ಮಾಡಿ ಮುಂದಿನ ಪೀಳಿಗೆಗೆ ಉಳಿಸಬೇಕು ಮತ್ತು ಹಸಿರು ಬೆಳೆಸುವಲ್ಲಿ ನಾವು ಶ್ರದ್ದೆಯಿಂದ ಕಾರ್ಯ ಮಾಡಿದರೆ ಮಳೆಯಾಗಿ ಜೀವ ಸಂಕುಲ ಉಳಿಯಲು ಸಾಧ್ಯ ಎಂದು ಕಾರ್ಯನಿರ್ವಾಹಕ ನಿರ್ದೇಶಕ ಬಿದ್ಯಾನಂದ ಝಾ ಹೇಳಿದರು.ತಾಲೂಕಿನ ಕೂಡಗಿ ಎನ್ ಟಿಪಿಸಿ ಯಲ್ಲಿ ವಿಶ್ವ ಜಲ ದಿನಾಚರಣೆ ಅಂಗವಾಗಿ ನೀರು ಉಳಿಸಿ ಜೀವಸಂಕುಲ ಉಳಿಸಿ ಎಂಬ ವಿನೂತನ ಅಭಿಯಾನದಲ್ಲಿ ಮಾತನಾಡಿದರು.ಎನ್ ಟಿಪಿಸಿ ಜಿಎಂ ಸಂತೋಷ್ ತಿವಾರಿ ಮಾತನಾಡಿ ಪರಿಸರ ಸಂರಕ್ಷಣೆ ನಮ್ಮ ಆದ್ಯ ಕರ್ತವ್ಯವಾಗಿದೆ. ಏಕೆಂದರೆ ಉಸಿರಾಡಲು ಶುದ್ಧ ಗಾಳಿ ನೀರು ಆಹಾರ ಸಿಗಬೇಕಾದರೆ ನಾವು ನಮ್ಮ ಸುತ್ತಲಿನ ಪ್ರದೇಶದಲ್ಲಿ ಹೆಚ್ಚು ಗಿಡಗಳನ್ನು ನೆಟ್ಟು ಬೆಳೆಸಬೇಕು ಎಂದು ಹೇಳಿದರು.ಅಭಿಯಾನದಲ್ಲಿ ನೀರಿನ ಸಂರಕ್ಷಣೆ, ಮಿತವ್ಯಯ ಬಳಕೆ ಗುರಿಯನ್ನು ಹೊಂದಿರುವ ಜಾಗೃತಿ ಅಭಿಯಾನದಲ್ಲಿ ಭಿತ್ತಿಪತ್ರಗಳು ರಾರಾಜಿಸುತ್ತಿವೆ ಜೋತೆಗೆ ಜಲ ಸಂರಕ್ಷಣೆ ಜಾಗೃತಿ ಮೂಡಿಸುವ ಪ್ರತಿಜ್ಞಾ ವಿಧಿಯನ್ನು ಎಲ್ಲಾ ನೌಕರರು ಪಡೆದುಕೊಂಡರು.ಈ ಸಂದರ್ಭದಲ್ಲಿ…
ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಕೀಲ್ ಬಾಗಮಾರೆ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ ಮೂಲಕ ಆಗ್ರಹ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಲ್ಪಸಂಖ್ಯಾತ ಬಾಹುಳ್ಯವುಳ್ಳ ವಾರ್ಡ್ಗಳಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳು ಕುಂಠಿತಗೊಂಡಿದ್ದು, ಕೂಡಲೇ ಆದ್ಯತೆ ಮೇರೆಗೆ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಕೀಲ್ ಬಾಗಮಾರೆ ಮಹಾನಗರ ಪಾಲಿಕೆ ಆಯುಕ್ತ ವಿಜಯಕುಮಾರ ಮೆಕ್ಕಳಕಿ ಅವರನ್ನು ಶನಿವಾರ ಭೇಟಿ ಮಾಡಿ ಲಿಖಿತ ಮನವಿ ಸಲ್ಲಿಸಿದರು.ಈ ಸಮಸ್ಯೆಯ ಬಗ್ಗೆ ವಿವರಣೆ ನೀಡಿದ ಶಕೀಲ್ ಬಾಗಮಾರೆ, ಅಲ್ಪಸಂಖ್ಯಾತ ಬಾಹುಳ್ಯವಿರುವ ವಾರ್ಡ್ಗಳಲ್ಲಿ ರಸ್ತೆ ಕಾಮಗಾರಿಗಳು ಮರೀಚಿಕೆಯಾಗಿವೆ, ಕಾಮಗಾರಿ ಆರಂಭವಾದರೂ ಅದು ಪೂರ್ಣವಾಗಿಲ್ಲ, ಇನ್ನೂ ಕೆಲವೆಡೆ ಕಾಮಗಾರಿಯೇ ಆರಂಭವಾಗಿಲ್ಲ, ಇದರಿಂದಾಗಿ ಸಾರ್ವಜನಿಕರು ನಿತ್ಯ ತೊಂದರೆ ಎದುರಿಸುವಂತಾಗಿದೆ ಎಂದರು.ಅತಾವುಲ್ಲಾ ಸರ್ಕಲ್ನಿಂದ ಜಾಮೀಯಾ ಮಸೀದಿ ರಸ್ತೆ ಕಾಮಗಾರಿ ಅನೇಕ ತಿಂಗಳುಗಳಿಂದ ಸ್ಥಗಿತಗೊಂಡಿದೆ, ದಿನನಿತ್ಯ ಈ ರಸ್ತೆ ಅವಲಂಬಿಸಿ ಸಾವಿರಾರು ಪ್ರಯಾಣಿಕರು ತೊಂದರೆ ಎದುರಿಸುವಂತಾಗಿದೆ, ಬಡ ಆಟೋ ಚಾಲಕರು ಈ ಭಾಗಕ್ಕೆ ಆಟೋ ಓಡಿಸಿದರೆ ಅವರ ಆಟೋಗಳು ಸಹ…
