Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಗ್ರಾಮದ ತುಂಬೆಲ್ಲಾ ರಂಗೋಲಿಯ ಚಿತ್ತಾರ | ತೆರೆದ ವಾಹನದಲ್ಲಿ ಮೆರವಣಿಗೆ | ಹಳೆಯ ವಿದ್ಯಾರ್ಥಿಗಳಿಂದ ಮಾನವ ಸರಪಳಿ ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಗ್ರಾಮದ ತುಂಬೆಲ್ಲಾ ರಂಗೋಲಿಯ ಚಿತ್ತಾರ, ಹಳೆ ವಿದ್ಯಾರ್ಥಿಗಳಿಂದ ಮಾನವ ಸರಪಳಿ ನಿರ್ಮಿಸಿ, ತಮ್ಮ ನೆಚ್ಚಿನ ವಿಜ್ಞಾನ ಶಿಕ್ಷಕ ರವಿ ಚಿನಗುಂಡೆ ದಂಪತಿಗೆ ತೆರೆದ ಜೀಪಿನಲ್ಲಿ ಕೂಡಿಸಿ ಡೊಳ್ಳುಗಳ ನಿನಾದದ ಮಧ್ಯೆ ಮೆರವಣಿಗೆ.ಇದು ಸಮೀಪದ ಗಣಿ ಸರ್ಕಾರಿ ಪ್ರೌಢಶಾಲೆಯಲ್ಲಿ ವಿಜ್ಞಾನ ಶಿಕ್ಷಕರಾಗಿ ದಶಕಗಳ ಕಾಲ ಸೇವೆ ಸಲ್ಲಿಸಿ ವರ್ಗಾವಣೆಗೊಂಡ ರವಿ ಚಿನಗುಂಡೆ ಅವರ ಬೀಳ್ಕೊಡುಗೆ ಸಮಾರಂಭದ ದೃಶ್ಯ.ಗ್ರಾಮೀಣ ಭಾಗದಲ್ಲಿ, ವಿಜ್ಞಾನ ಕಲಿಕೋಪಕರಣಗಳ ತಯಾರಿಕೆಯ ಕಾರ್ಖಾನೆಯಂತಿದ್ದ, ಹಲವು ವಿಜ್ಞಾನ ಶಿಕ್ಷಕರಿಗೆ ಮಾರ್ಗದರ್ಶಿಯಾಗಿದ್ದ, ವಿಜ್ಞಾನವನ್ನು ಸರಳವಾಗಿ ವೈಜ್ಞಾನಿಕ ಉಪಕರಣಗಳ ಮೂಲಕ ಬೋಧಿಸಿ, ಎಲ್ಲರಿಗೂ ಅರ್ಥವಾಗುವಂತೆ ಮಾಡುತ್ತಿದ್ದ, ವಿಜ್ಞಾನ ಕಲಿಕಾ ಉಪಕರಣಗಳ ತಯಾರಿಕೆಯಲ್ಲಿ ಜಿಲ್ಲೆಯಲ್ಲಿಯೇ ಮುಂಚೂಣಿಯಲ್ಲಿದ್ದ ವಿಜ್ಞಾನ ಶಿಕ್ಷಕ ರವಿ ಚಿನಗುಂಡೆ ಅವರ ಕಾರ್ಯವೈಖರಿಯನ್ನು ಇಡೀ ಗ್ರಾಮವೇ ಕೊಂಡಾಡಿತು.ಹಳೆ ವಿದ್ಯಾರ್ಥಿಗಳು, ಪ್ರಸ್ತುತ ಕಲಿಯುತ್ತಿರುವ ವಿದ್ಯಾರ್ಥಿಗಳು, ಗ್ರಾಮಸ್ಥರು, ತಾಲ್ಲೂಕಿನ ನಾನಾ ಕಡೆಯಿಂದ ಆಗಮಿಸಿದ್ದ ಶಿಕ್ಷಕ ಸಮೂಹವೇ…
ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬಂತೆ, ಮಗು ಹುಟ್ಟಿದಾಗ ಅದರ ಆರೈಕೆಯಿಂದಲೇ ಮಗುವಿನ ಮುಂದಿನ ಆರೋಗ್ಯಕರ ಭವಿಷ್ಯ ನಿರ್ಮಾಣವಾಗುತ್ತದೆ, ಹೀಗಾಗಿ ಮಗುವಿಗೆ ತಾಯಿ ಹಾಲು ಕುಡಿಸುವುದು ಅತಿ ಅಗತ್ಯ ಎಂದು ಶಿವಮೊಗ್ಗದ ವೈದ್ಯೆ ಡಾ ಜ್ಯೋತಿಲಕ್ಷ್ಮಿ ಪಾಟೀಲ ಹೇಳಿದರು.ಇಲ್ಲಿಯ ಸಮುದಾಯ ಭವನದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಹಾಗೂ ಕೆಬಿಜೆಎನ್ ಎಲ್ ಸಹಯೋಗದಲ್ಲಿ ಶುಕ್ರವಾರ ಜರುಗಿದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.ಹೀಗಾಗಿ ಹುಟ್ಟಿದ ಮಗುವಿನ ಆರೈಕೆ ಅತ್ಯಗತ್ಯ. ಕುಟುಂಬದ ಆರೋಗ್ಯ ರಕ್ಷಣೆಗೆ ಆರೋಗ್ಯಕರ ಆಹಾರ ಸೇವಿಸುವುದು ಅಗತ್ಯ, ಅದಕ್ಕಾಗಿ ನೈಸರ್ಗಿಕ ಆಹಾರ, ಸಿರಿಧಾನ್ಯಗಳ ಬಳಕೆ, ಹಣ್ಣುಗಳಿಗೆ ಹೆಚ್ಚು ಒತ್ತು ನೀಡಿದರೆ ಇಡೀ ಕುಟುಂಬದ ಆರೋಗ್ಯವೂ ಸುಧಾರಣೆಯಾಗುತ್ತದೆ ಎಂದರು. ಅದಕ್ಕಾಗಿ ನೈಸರ್ಗಿಕ ವಸ್ತುಗಳ ಬಳಕೆಯಿಂದ ಮಾಡುವ ನಾನಾ ಅಡುಗೆ ತಿಂಡಿಗಳನ್ನು ಪ್ರಸ್ತಾಪಿಸಿದ ಅವರು, ಮಹಿಳೆಯರು ಆರೋಗ್ಯ ಕಾಪಾಡಿಕೊಳ್ಳುವುದು ಅಗತ್ಯ ಎಂದರು. ಮಹಿಳೆಯರಲ್ಲಿ ಕಬ್ಬಿಣಾಂಶ, ಪ್ರೊಟಿನ್ ಹಾಗೂ ವಿಟಮಿನ್ ಡಿ ಕೊರತೆ ಹೆಚ್ಚಾಗಿ ಕಾಣುತ್ತಿದೆ, ಇದರಿಂದ ಮೂಳೆ ಸವೆತ…
ಕಾಲುವೆಗೆ ನೀರು ಹರಿಸುವ ಅವಧಿ ಬದಲಾವಣೆ | ನಾರಾಯಣಪುರಕ್ಕೆ ಮಾ.೨೫ ವರೆಗೆ ನೀರು ಹರಿಸಲು ನಿರ್ಧಾರ ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ವಾರಾಬಂಧಿ, ಬಿಸಿಲಿನ ಪ್ರಖರತೆ ಹೆಚ್ಚಳದ ಕಾರಣ ಕಾಲುವೆಯ ಕೊನೆ ಭಾಗಕ್ಕೆ ನೀರು ತಲುಪುತ್ತಿಲ್ಲ ಎಂಬ ನಾರಾಯಣಪುರ ಭಾಗದ ರೈತರ ಬೇಡಿಕೆಗೆ ಸ್ಪಂದಿಸಿ ನಾರಾಯಣಪುರ ಭಾಗದ ಅಚ್ಚುಕಟ್ಟು ಪ್ರದೇಶಕ್ಕೆ ಮಾ.೨೫ ರವರೆಗೆ ನಿರಂತರ ಕಾಲುವೆ ನೀರು ಹರಿಸಲು ನಿರ್ಧರಿಸಲಾಗಿದೆ.ಕಾಲುವೆಗೆ ನೀರು ಹರಿಸುವ ಅವಧಿಯನ್ನು ಕಡಿತಗೊಳಿಸಲಾಗಿದೆ. ನಾರಾಯಣಪುರ ಭಾಗದ ಸಚಿವರು, ಶಾಸಕರ ಮನವಿಯ ಮೇರೆಗೆ ಯುಕೆಪಿ ನೀರಾವರಿ ಸಲಹಾ ಸಮಿತಿ (ಐಸಿಸಿ) ಅಧ್ಯಕ್ಷ ಆರ್.ಬಿ.ತಿಮ್ಮಾಪುರ ಅಧ್ಯಕ್ಷತೆಯಲ್ಲಿ ಗುರುವಾರ ಸಂಜೆ ಜರುಗಿದ ಕೃಷ್ಣಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿ, ಕೃಷಿ ಅಧಿಕಾರಿ, ಕೆಬಿಜೆಎನ್ ಎಲ್ ಅಧಿಕಾರಿಗಳ ವಿಡಿಯೋ ಸಂವಾದ ಸಭೆಯಲ್ಲಿ ನಿರ್ಣಯಿಸಲಾಗಿದೆ. ವಿಡಿಯೋ ಸಂವಾದದಲ್ಲಿ ಕೃಷಿ ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಮಾ.೨೨ ರಂದು ಕಾಲುವೆಗೆ ನೀರು ಹರಿಸುವುದು ಬಂದ್ ಮಾಡದೇ ನಿರಂತರ ನೀರು ಹರಿಸಿದರೆ ಸ್ವಲ್ಪ ಪ್ರಮಾಣದ ಬೆಳೆಗಳನ್ನು ಸಂರಕ್ಷಿತಬಹುದು ಎಂದು ಅಭಿಪಾಯ…
ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಆಲಮಟ್ಟಿ ಜಲಾಶಯಕ್ಕೆ ಹತ್ತಿಕೊಂಡಿರುವ ಗ್ಯಾಲರಿ ಬಳಿ ಶುಕ್ರವಾರ ನಸುಕಿನ ಜಾವ ಕಂಡಿದ್ದ ೫ ಅಡಿ ಉದ್ದದ ಮೊಸಳೆಯನ್ನು ಪ್ರಾದೇಶಿಕ ಅರಣ್ಯ ಇಲಾಖೆಯ ಮೊಸಳೆ ರಕ್ಷಕರು ಹಿಡಿದು ಕೃಷ್ಣಾ ನದಿಗೆ ಬಿಟ್ಟರು.ಶುಕ್ರವಾರ ನಸುಕಿನ ಜಾವ ಕೆಎಸ್ ಐಎಸ್ ಎಫ್ ಪೊಲೀಸರು ಗಸ್ತು ತಿರುಗುವಾಗ ಮೊಸಳೆ ಕಂಡಿದೆ. ಅದು ಸಮೀಪದ ಉದ್ಯಾನದೊಳಗೆ ಪ್ರವೇಶಿಸಬಾರದು ಎಂಬ ಉದ್ದೇಶದಿಂದ ಅದರ ಚಲನವಲನದ ಮೇಲೆ ಪೊಲೀಸರು ನಿಗಾ ಇಟ್ಟಿದ್ದರು.ನಂತರ ೧೧ ಗಂಟೆ ಸುಮಾರು ಆಗಮಿಸಿದ ಪ್ರಾದೇಶಿಕ ಅರಣ್ಯ ಇಲಾಖೆಯ ಅಧಿಕಾರಿಗಳು , ಅರಣ್ಯ ದಿನಗೂಲಿ ಕಾರ್ಮಿಕರು, ಪೊಲೀಸರು ಸೇರಿ ಮೊಸಳೆ ಸೆರೆ ಹಿಡಿದರು.ಅದನ್ನು ನಂತರ ಬೇನಾಳ ಬಳಿ ಇರುವ ಕೃಷ್ಣೆಯ ಹಿನ್ನೀರಿಗೆ ಒಯ್ದು ಮೊಸಳೆಯನ್ನು ಸುರಕ್ಷಿತವಾಗಿ ನದಿಗೆ ಬಿಟ್ಟರು.ಉಪವಲಯ ಅರಣ್ಯಾಧಿಕಾರಿ ಶ್ರೀಕಾಂತ ಘೋರ್ಪಡೆ, ಪೊಲೀಸ್ ಇನ್ಸಪೆಕ್ಟರ್ ಶಿವಲಿಂಗ ಕುರೆನ್ನವರ, ಅಹ್ಮದ್ ಸಂಗಾಪುರ, ವಿಠ್ಠಲ ಜಾಧವ, ಮೊಸಳೆ ರಕ್ಷಕ ನಾಗೇಶ ಮೋಪಗಾರ, ವಿರೂಪಾಕ್ಷಿ ಮಾದರ ಸೇರಿ ಕೆಎಸ್ ಐಎಸ್ ಎಫ್ ಪೊಲೀಸರು ಕಾರ್ಯಾಚರಣೆಯಲ್ಲಿ ತೊಡಗಿದ್ದರು.ಮೊಸಳೆ ನಸುಕಿನ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಯೋಗಾ ಕ್ರೀಡೆಗೆ ಅತ್ಯುನ್ನತವಾದ ಕೊಡುಗೆಯನ್ನು ನೀಡಿರುವಂತಹ ಕ್ರೀಡಾಪಟುಗಳಿಗೆ ಅಥವಾ ಯೋಗ ಸಂಸ್ಥೆಗಳಿ ಪ್ರಧಾನಮಂತ್ರಿಗಳು ರಾಷ್ಟಿçÃಯ ಮಟ್ಟ ಅತವಾ ಅಂತರರಾಷ್ಟಿçÃಯ ಮಟ್ಟದ ಅತ್ಯುನ್ನತ ಯೋಗ ಪ್ರಶಸ್ತಿಯನ್ನು ಘೋಷಿಸಿರುತ್ತಾರೆ. Prime Minister’s Award for yoga for೨೦೨೫ ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿಯನ್ನು https://innovateindia.mygov.in/pm-yoga-awards-೨೦೨೫ ವೆಬ್ಸೈಟ್ನಲ್ಲಿ ದಿನಾಂಕ : ೩೧-೦೩-೨೦೨೫ರೊಳಗೆ ಸಲ್ಲಿಸಬೇಕು.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಗ್ನಿಪಥ ಯೋಜನೆಯಡಿ ೨೦೨೫-೨೬ನೇ ಸಾಲಿನ ಅಗ್ನಿವೀರ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸುವ ಆಸಕ್ತ್ತ ಯುವಕರ ಸಹಾಯಕ್ಕಾಗಿ ಮಾ.೨೪,೨೫ ರಂದು ಇಬ್ಬರು ಸೇನಾ ಸಿಬ್ಬಂದಿಗಳು ವಿಜಯಪುರ ಜಿಲ್ಲೆಯ ಸೈನಿಕ ಕಲ್ಯಾಣ ಮತ್ತು ಪುನರವಸತಿ ಇಲಾಖೆಗೆ ಭೇಟಿ ನೀಡಲಿದ್ದಾರೆ.ಆಸಕ್ತರು ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ವಿಜಯಪುರ ದೂ: ೦೮೩೫೨-೨೫೦೯೧೩ ಸಂಖ್ಯೆಗೆ ಸಂಪರ್ಕಿಸುವಂತೆ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ವತಿಯಿಂದ ಬೋಧಕ-ಬೋಧಕೇತರ ಹುದ್ದೆಗಳ ನೇಮಕಾತಿಗಾಗಿ ನಗರದ ಬಸವನಬಾಗೇವಾಡಿ ರಸ್ತೆಯಲ್ಲಿರುವ ಶಾಂತಿನಗರದ ಶ್ರೀ ರಾಮಕೃಷ್ಣ ವಿದ್ಯಾ ಸ್ಕೂಲ್ನಲ್ಲಿ ಮಾ.೨೬ ರಂದು ಬೆಳಿಗ್ಗೆ ೧೦ ರಿಂದ ೪ ಗಂಟೆಯವರೆಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ.ಬೋಧಕ ಹುದ್ದೆಗಳಿಗಾಗಿ ಬಿಎ, ಎಂಎಬಿಇಡಿ, ಬಿಎಸ್ಸಿ, ಎಂಎಸ್ಸಿಬಿಇಡಿ, ಎಂಪಿಇಡಿ ಹಾಗೂ ಯಾವುದೇ ಪದವಿ ವಿದ್ಯಾರ್ಹತೆಯುಳ್ಳ ಹಾಗೂ ಬೋಧಕೇತರ ಹುದ್ದೆಗಳಾದ ವಾರ್ಡನ್, ಸೂಪರ್ವೈಸರ್ ಮತ್ತು ಕ್ಲರ್ಕ್ಗೆ ಪದವಿ ವಿದ್ಯಾರ್ಹತೆಯುಳ್ಳ ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದಾಗಿದೆ.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಮೊ: ೯೪೪೮೧೧೪೩೮೫, ೯೯೪೫೦೦೦೭೯೩ ಸಂಖ್ಯೆಗೆ ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯ ಸರ್ಕಾರದ ಯುವನಿಧಿ ಯೋಜನೆಯಡಿ ನೊಂದಾಯಿಸಿಕೊಂಡು ಯೋಜನೆಯ ಲಾಭ ಪಡೆಯುತ್ತಿರುವ ಅರ್ಹ ಯುವ ನಿಧಿ ಫಲಾನುಭವಿಗಳು ನಿರುದ್ಯೋಗದ ಬಗ್ಗೆ ಪ್ರತಿ ತಿಂಗಳ ಬದಲಾಗಿ ಇನ್ನೂ ಮುಂದೆ ಪ್ರತಿ ಮೂರು ತಿಂಗಳಿಗೊಮ್ಮೆ ಸ್ವಯಂ ಘೋಷಣೆ ಸಲ್ಲಿಸಲು ಅಕವಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾ ಉದ್ಯೋಗಾಧಿಕಾರಿಗಳು ತಿಳಿಸಿದ್ದಾರೆ.ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ : ೧೮೦೦೫೯೯೭೧೫೪ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂ: ೦೮೩೫೨-೨೫೦೩೮೩ ಸಂಪರ್ಕಿಸುವಂತೆ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ದಿ ಖಾತೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಮಾ.೨೩ ಹಾಗೂ ೨೪ ರಂದು ವಿಜಯಪುರ ಜಿಲ್ಲಾ ಪ್ರವಾಸ ಕೈಗೊಂಡು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.ಮಾ.೨೩ರಂದು ಬೆಳಿಗ್ಗೆ ೧೧ ಗಂಟೆಗೆ ತಿಕೋಟಾ ವಾಡೆ ಆವರಣದಲ್ಲಿ ಹಮ್ಮಿಕೊಂಡ ತಿಕೋಟಾ ತಾಲೂಕಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ. ಸಂಜೆ ೬-೨೦ಕ್ಕೆ ನಗರದ ಕಿತ್ತೂರ ರಾಣಿ ಚೆನ್ನಮ್ಮ ಮಾರುಕಟ್ಟೆಯಲ್ಲಿ ಏರ್ಪಡಿಸಿರುವ ಇಫ್ತಿಹಾರ ಕೂಟದಲ್ಲಿ ಭಾಗವಹಿಸಲಿದ್ದಾರೆ. ರಾತ್ರಿ ೭.೧೫ಕ್ಕೆ ಕಣಮುಚನಾಳದಲ್ಲಿ ಜಾತ್ರಾ ಮಹೋತ್ಸವದಲ್ಲಿ ಭಾಗವಹಿಸಿ ವಿಜಯಪುರದಲ್ಲಿ ವಾಸ್ತವ್ಯ ಮಾಡಲಿದ್ದಾರೆ.ಮಾ.೨೪ರಂದು ಬೆಳಿಗ್ಗೆ ೧೦ ಗಂಟೆಗೆ ಮದಗುಣಕಿ ಗ್ರಾಮದಲ್ಲಿ ೪ ಕೋಟಿ ರೂ. ಅನುದಾನದಲ್ಲಿ ಶೇಗುಣಸಿ-ಮದಗುಣಕಿ ರಸ್ತೆ ಕಾಮಗಾರಿಗೆ ಭೂಮಿ ಪೂಜೆ ಹಾಗೂ ಸಿ.ಎಸ್.ಆರ್. ೬೦ ಲಕ್ಷ ರೂ. ಅನುದಾನದಕಲ್ಲಿ ಶಾಲಾ ಕಟ್ಟಡದ ೫ ಕೊಠಗಿಳ ನವೀಕರಣಕ್ಕೆ ಮದಗುಣಕಿ ಸರಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಭೂಮಿ ಪೂಜೆ ನೆರವೇರಿಸಲಿದ್ದಾರೆ. ಬೆಳಿಗ್ಗೆ ೧೧ ಗಂಟೆಗೆ ಬೆಳ್ಳುಬ್ಬಿಯಲ್ಲಿ ಡಾ.ಬಿ.ಆರ್.ಅಂಬೇಡ್ಕರ್…
ಸಾರ್ವಜನಿಕರು ಜಮೀನು-ಆಸ್ತಿ ಖರೀದಿಸುವಾಗ ಎಚ್ಚರಿಕೆ ವಹಿಸಿ | ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ತಿಕೋಟಾ ತಾಲೂಕಿನ ಇಟ್ಟಂಗಿಹಾಳ ಗ್ರಾಮದ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ಅಂದಾಜು ೨೦ ಕೋಟಿ ರೂ. ಮೌಲ್ಯದ ಸರ್ಕಾರಿ ಜಮೀನನ್ನು ಒತ್ತುವರಿ ತೆರವುಗೊಳಿಸಿ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.ಇಟ್ಟಂಗಿಹಾಳ ಗ್ರಾಮದ ವ್ಯಾಪ್ತಿಯ ಅಂದಾಜು ೨೦ ಕೋಟಿ ರೂ. ಮೌಲ್ಯದ ಸರ್ಕಾರಿ ಜಮೀನನ್ನು ಕೆಲವರು ಅತಿಕ್ರಮಣ ಮಾಡಿಕೊಂಡು ಸದರಿ ಸರ್ಕಾರಿ ಜಮೀನನ್ನು ಮೋಸ ಮಾಡಿ ಮಾರಾಟ ಮಾಡುತ್ತಿರುವ ಬಗ್ಗೆ ತಿಳಿದು ಬಂದ ಹಿನ್ನಲೆಯಲ್ಲಿ ಮಾ.೨೨ರಂದು ವಿಜಯಪುರ ಉಪವಿಭಾಗಾಧಿಕಾರಿಗಳು, ತಿಕೋಟಾ ತಹಶೀಲ್ದಾರರನ್ನೊಳಗೊಂಡು ಕಂದಾಯ ಇಲಾಖೆ, ಪೊಲೀಸ್ ಇಲಾಖೆಯೊಂದಿಗೆ ಅತಿಕ್ರಮಣ ಕಾರ್ಯಾಚರಣೆ ಕೈಗೊಂಡು ಒತ್ತುವರಿಯಾದ ಜಾಗವನ್ನು ತೆರವುಗೊಳಿಸಿ ಸರ್ಕಾರಿ ಜಾಗವನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.ಸರ್ಕಾರಿ ಜಮೀನನ್ನು ಯಾರೂ ಅತಿಕ್ರಮಣ ಮಾಡಬಾರದು. ಸಾರ್ವಜನಿಕರು ಸಹ ಜಮೀನು-ಆಸ್ತಿ ಖರೀದಿಸುವಾಗ ಎಚ್ಚರಿಕೆ ವಹಿಸಬೇಕು. ಯಾರಾದರೂ ಮೋಸ ಹೋದಲ್ಲಿ ದೂರು ಸಲ್ಲಿಸಬೇಕು. ಜಮೀನು ಒತ್ತುವರಿ ಮಾಡಿಕೊಂಡಿರುವವರ ಮೇಲೆ ಕಾನೂನು ರಿತ್ಯ ಕ್ರಿಮಿನಲ್…
