Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಇಂಡಿ: ವಚನಗಳು ಓದುವುದರಿಂದ ಮನುಷ್ಯನಲ್ಲಿ ಬದಲಾವಣೆಯನ್ನು ತರುತ್ತೇವೆ. ಇಂದಿನ ಮಕ್ಕಳಿಗೆ ವಚನಗಳು ದಾರಿ ದೀಪ. ಅಲ್ಲಮ ಪ್ರಭುಗಳು ಅಂದಿನ ಕಾಲದಲ್ಲಿ ದೀನ ದಲಿತ ಶೋಷಿತ ವರ್ಗದವರ ಜನರ ಧ್ವನಿಯಾಗಿದ್ದರು ಎಂದು ಶ್ರೀಮತಿ ಶಾಲಿನಿ ಮಾಣಿಕ್ ಚಂದ್ ದೋಶಿ ಮಹಿಳಾ ಕಾಲೇಜಿನ ಉಪನ್ಯಾಸಕ, ತಾಲೂಕ ಮಕ್ಕಳ ಸಾಹಿತ್ಯ ಸಂಗಮದ ಅಧ್ಯಕ್ಷ‌ ಸದಾನಂದ ಎಸ್ ಈರನಕೇರಿ ಮಾತನಾಡಿದರು.ಪಟ್ಟಣದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ ಘಟಕ, ತಾಲೂಕು ಮಹಿಳಾ ಕದಳಿ ವೇದಿಕೆ‌ , ಮೆಟ್ರಿಕ್ ನಂತರದ ದಿ ದೇವರಾಜ ಅರಸ್ ವಿದ್ಯಾರ್ಥಿನಿಯರ ವಸತಿ ನಿಲಯ ಕಣ್ಣಿ ಬಿಲ್ಡಿಂಗ್ ಇಂಡಿ ಸಹಯೋಗದಲ್ಲಿ ದತ್ತಿ ಉಪನ್ಯಾಸ ಕಾರ್ಯಕ್ರಮದಲ್ಲಿ ಉಪನ್ಯಾಸ ನೀಡಿ ಮಾತನಾಡಿದರು.12ನೇ ಶತಮಾನದ ಬಸವಕಲ್ಯಾಣದಲ್ಲಿರುವ ಅನುಭವ ಮಂಟಪದ ಅಧ್ಯಕ್ಷರಾಗಿದ್ದ ಶರಣರಾದ ಅಲ್ಲಮಪ್ರಭುಗಳ ಕುರಿತು ಮಾತನಾಡುತ್ತ ಅಲ್ಲಮಪ್ರಭುಗಳ ವಚನಗಳು ಸರ್ವಕಾಲಿಕ ಸತ್ಯ. ಅನುಭವ ಮಂಟಪದಲ್ಲಿರುವ ಶರಣ ಶರಣೆಯರ ಜೊತೆಗೂಡಿ ತಮ್ಮ ಅನುಭವದ ಸಾರವನ್ನು ಜನರಿಗೆ ತಿಳಿಸುತ್ತಿದ್ದರು. ಬಸವಣ್ಣನವರು, ಅಕ್ಕಮಹಾದೇವಿಯವರು, ಚನ್ನಬಸವಣ್ಣ ಸಿದ್ದರಾಮಯ್ಯ, ಮಾದರ ಚೆನ್ನಯ್ಯ, ಸಮಗಾರ ಹರಳಯ್ಯ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಸೇವೆಯಿಂದ ನಿವೃತ್ತನಾದರೂ ಕೂಡಾ ಮಕ್ಕಳಿಗೆ ಅಕ್ಷರಾಭ್ಯಾಸ ಮಾಡುವ ಕೆಲಸವನ್ನು ಮಾಡುತ್ತೇನೆ ಸರ್ಕಾರಿ ಶಾಲೆಯ ಮಕ್ಕಳ ಏಳಿಗೆಗಾಗಿ ಫಲಾಪೇಕ್ಷೆ ಬಯಸದೇ ಶ್ರಮಿಸುತ್ತೇನೆ ಎಂದು ನಿವೃತ್ತ ಶಿಕ್ಷಕ ಎಮ್.ಎಚ್. ಖಾದ್ರಿ ಹೇಳಿದರು.ತಾಲ್ಲೂಕಿನ ಪಡಗಾನೂರ ಎಲ್ ಟಿ ಶಾಲೆಯಲ್ಲಿ ಶುಕ್ರವಾರ ಜರುಗಿದ ಬೀಳ್ಕೊಡುವ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದರು. ನಾನು ಸೇವೆ ಸಲ್ಲಿಸಿದ ಎಲ್ಲ ಶಾಲೆಗಳಲ್ಲಿ ಅತ್ಯುತ್ತಮವಾಗಿ ಸೇವೆ ಸಲ್ಲಿಸಿದ ಸಂತೃಪ್ತಿ ನನಗಿದೆ ಎಂದರು.ತಾಲ್ಲೂಕು ಶಿಕ್ಷಕರ ಸಂಘದ ಅಧ್ಯಕ್ಷ ಎ.ಎಚ್.ವಾಲೀಕಾರ ಮಾತನಾಡಿ, ಎಮ್.ಎಚ್.ಖಾದ್ರಿ ಶಿಕ್ಷಕರ ಆದರ್ಶಮಯ ವ್ಯಕ್ತಿತ್ವವು ಎಲ್ಲರಿಗೂ ಮಾದರಿಯಾಗಿದೆ. ಅವರ ನಿವೃತ್ತ ಜೀವನ ಸುಖಕರವಾಗಿರಲಿ ಎಂದು ಶುಭ ಹಾರೈಸಿದರು.ತಾಲ್ಲೂಕು ಕಸಾಪ ಅಧ್ಯಕ್ಷ ಜಿ.ಪಿ.ಬಿರಾದಾರ, ವಿವಿಧ ಸಮುದಾಯಗಳ ಪ್ರಮುಖರಾದ ರಾಜಕುಮಾರ ಸಿಂದಗೇರಿ, ಬಾಳು ರಾಠೋಡ ಶಿಕ್ಷಕರಾದ ನಾಗೇಶ ನಾಗೂರ, ವಾಯ್.ಜಿ. ತಾವರಖೇಡ ಮಾತನಾಡಿದರು.ನಿವೃತ್ತ ಶಿಕ್ಷಕರ ಕುರಿತು ಮಕ್ಕಳು ತಮ್ಮ ಅನಿಸಿಕೆ ಹಂಚಿಕೊಂಡರು.ನಂತರ ದಂಪತಿ ಸಮೇತವಾಗಿ ನಿವೃತ್ತ ಶಿಕ್ಷಕರನ್ನು ಹಾಗೂ ಶಾಲೆಗೆ ಅವರ ಸ್ಥಾನದಲ್ಲಿ ಬಂದಂತ ಜಾನು ಶಿಕ್ಷಕರನ್ನು ಸ್ವಾಗತಿಸಲಾಯಿತು.ಮುಖ್ಯಶಿಕ್ಷಕ ಎಸ್.ಪಿ.ಇಂಗಳೇಶ್ವರ, ಎಸ್‌ಡಿಎಮ್‌ಸಿ…

Read More

ಸ್ಪೀಕರ್ ಹುದ್ದೆಗೆ ಅಗೌರವ ತೋರಿದ ಬಿಜೆಪಿ ಶಾಸಕರು | 6 ತಿಂಗಳು ಅಮಾನತುಗೊಳಿಸಿ ಸ್ಪೀಕರ್ ಯುಟಿ ಖಾದರ್ ಆದೇಶ ಬೆಂಗಳೂರು: ವಿಧಾನಸಭೆಯಲ್ಲಿ ಸ್ಪೀಕರ್ ಹುದ್ದೆಗೆ ಅಗೌರವ ತೋರಿದ ಬಿಜೆಪಿ ಶಾಸಕರನ್ನು ಸ್ಪೀಕರ್ ಯುಟಿ ಖಾದರ್ ಮುಂದಿನ 6 ತಿಂಗಳವರೆಗೂ ಕಲಾಪದಿಂದ ಅಮಾನತು ಮಾಡಿದ್ದಾರೆ.ಬಿಜೆಪಿ ಶಾಸಕರಾದ ಭೈರತಿ ಬಸವರಾಜ, ಡಾ. ಶೈಲೇಂದ್ರ ಬೆಲ್ದಾಳೆ, ಮುನಿರತ್ನ, ಧೀರಜ್ ಮುನಿರತ್ನ, ಬಿಪಿ ಹರೀಶ್, ಡಾ. ಭರತ್ ಶೆಟ್ಟಿ, ಚಂದ್ರು ಲಮಾಣಿ, ಉಮಾನಾಥ ಕೋಟ್ಯಾನ್, ರಾಮಮೂರ್ತಿ, ದೊಡ್ಡನಗೌಡ ಪಾಟೀಲ್, ಡಾ. ಅಶ್ವತ್ಥ್ ನಾರಾಯಣ, ಯಶಪಾಲ್ ಸುವರ್ಣ, ಬಿ. ಸುರೇಶ್ ಗೌಡ, ಶರಣು ಸಲಗರ, ಚನ್ನಬಸಪ್ಪ, ಬಸವರಾಜ ಮತ್ತಿಮೂಡ, ಎಸ್ಆರ್ ವಿಶ್ವನಾಥ್ ಅವರನ್ನು ಮಾರ್ಷಲ್ ಗಳು ಕಲಾಪದಿಂದ ಹೊರಗೆ ತಂದು ಬಿಟ್ಟಿದ್ದಾರೆ.ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿರುವ ಹನಿಟ್ರ್ಯಾಪ್ ಹಾಗೂ ಮುಸ್ಲಿಂ ಮೀಸಲಾತಿ ವಿಚಾರಗಳು ವಿಧಾನಸಭೆ ಕಲಾಪದಲ್ಲಿ ಶುಕ್ರವಾರ ಹೈಡ್ರಾಮಾಕ್ಕೆ ಕಾರಣವಾಯಿತು. ಮುಸ್ಲಿಂ ಮೀಸಲಾತಿ ವಿಧೇಯಕದ ಕುರಿತು ಸರ್ಕಾರ ಚರ್ಚೆಗೆ ಮುಂದಾಯಿತು. ಇದೇ ವೇಳೆ ಬಿಜೆಪಿ ಶಾಸಕರು ತೀವ್ರ ವಿರೋಧ…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ನಮ್ಮ ಶಾಲೆಯ ಮಕ್ಕಳಿಗೆ ಪ್ರೇರಣೆ ಆಗಲು ಕುಮಾರಿ ನಮೃತಾ ಕತ್ತಿ ರವರ ರಚಿಸಿರುವ ‘ನಾನು ಕೈಗೊಂಡ ಕಾಶ್ಮೀರ ಪ್ರವಾಸ ಕಥನ’ ಅತ್ಯಂತ ಮಹತ್ವ ಪಡೆದಿದೆ. ಬೀಳ್ಕೊಡುವ ಸಮಾರಂಭದ ಅಂಗವಾಗಿ “ವಿದ್ಯಾರ್ಥಿಗಳು ಶಿಕ್ಷಕರಾಗಿ ಪಾಠ ಬೋಧನೆ ಮಾಡಿರುವುದು ಮಕ್ಕಳ ಸೃಜನಶೀಲತೆ ಎತ್ತಿ ತೋರಿಸುತ್ತದೆ” ಎಂದು ಸಂಸ್ಥೆಯ ಅಧ್ಯಕ್ಷ ಶ್ರೀಶೈಲ ಜೋಗೂರ ಹೇಳಿದರು.ಮುಖ್ಯ ಅತಿಥಿಗಳಾಗಿ ಉಪನ್ಯಾಸ ನೀಡಿದ ಕುದರತ್ ಅಲಿ ಭೂಸನೂರ, ಈ ಶಾಲೆಯ ಮಕ್ಕಳು ಅದೃಷ್ಟವಂತರು. ಸಂಸ್ಥೆಯು ಮಕ್ಕಳಿಗೆ ಗುಣಮಟ್ಟದ ತಂತ್ರಜ್ಞಾನ ಆಧಾರಿತ ಶಿಕ್ಷಣ ನೀಡಲು ಪ್ರತಿ ತರಗತಿಯಲ್ಲಿ ಡಿಜಿಟಲ್ ಪೆನೆಲ್ ಬೋರ್ಡ್ ಗಳನ್ನು ಅಳವಡಿಸಿ, ಮಕ್ಕಳಿಗೆ ಮೌಲ್ಯಭರಿತ ಶಿಕ್ಷಣ ನೀಡುತ್ತಿದ್ದಾರೆ ಎಂದರು.ಪಟ್ಟಣದ ಶ್ರೀ ವಿಶ್ವೇಶ್ವರ ಬಾಲಭಾರತಿ ಅನುದಾನಿತ ಕನ್ನಡ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿಯ ವಿದ್ಯಾರ್ಥಿಗಳ ಬಿಳ್ಕೊಡುವ ಸಮಾರಂಭ ಕಾರ್ಯಕ್ರಮದಲ್ಲಿ ಭಾಗವಹಿಸಿ ಅವರು ಮಾತನಾಡಿದರು.ಇದೇ ವೇಳೆ ಸಂಸ್ಥೆಯ ವತಿಯಿಂದ ಪಟ್ಟಣದ ಬಾಲಲೇಖಕಿ ಕು.ನಮೃತಾ ಕತ್ತಿ ಅವರಿಗೆ ವಿಶೇಷ ಸನ್ಮಾನ ಮಾಡಲಾಯಿತು.ಈ ವೇಳೆ ಸಾನಿಧ್ಯವನ್ನು ಈಶ್ವರಿಯ ವಿಶ್ವವಿದ್ಯಾಲಯದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಪಘಾತ ಸಂಭವಿಸಿದ ಕೂಡಲೇ ಸಮೀಪದ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಪಡೆದು ನಂತರ ಸಕಲ ಸೌಲಭ್ಯವಿರುವ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಪಡೆದಾಗ ಮಾತ್ರ ವ್ಯಕ್ತಿಯ ಜೀವ ಉಳಿಸಲು ಸಾಧ್ಯ ಎಂದು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಕಾಲೇಜು, ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ಉಪಪ್ರಾಚಾರ್ಯ ಡಾ. ಎಂ. ಬಿ. ಪಾಟೀಲ ಹೇಳಿದ್ದಾರೆ.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಶ್ರೀ ಸಂಗನಬಸವ ಮಹಾಸ್ವಾಮೀಜಿ ಪಾಲಿಟೆಕ್ನಿಕ್ ನಲ್ಲಿ ಗುರುವಾರ ಶ್ರೀ ಬಿ. ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ವತಿಯಿಂದ ಆಯೋಜಿಸಲಾದ ವಿಶ್ವ ತಲೆಗೆ ಗಾಯ ತಡೆಗಟ್ಟುವ ಜಾಗೃತ ದಿನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ರಸ್ತೆ ಅಪಘಾತಗಳು ಬಹುತೇಕ ತಲೆಗೆ ಗಾಯವಾಗಲು ಪ್ರಮುಖ ಕಾರಣವಾಗಿವೆ. ಹೀಗಾಗಿ ವಾಹನ ಸವಾರರು ಸಂಚಾರಿ ನಿಯಮ ಪಾಲನೆ ಮಾಡಬೇಕು. ದ್ವಿಚಕ್ರ ವಾಹನ ಸವಾರರು ಹೆಲ್ಮೆಟ್ ಧರಿಸಬೇಕು. ವಾಹನ ಚಾಲನೆ ಸಂದರ್ಭದಲ್ಲಿ ಮೊಬೈಲ ಬಳಸಬಾರದು. ಮದ್ಯ ಸೇವಿಸಿ ವಾಹನ ಚಲಾಯಿಸಬಾರದು. ರಸ್ತೆ ಮಧ್ಯೆ ಜಗಳವಾಡುತ್ತ ನಿಲ್ಲಬಾರದು. ಕಾರು…

Read More

ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ವಿದ್ಯಾರ್ಥಿಗಳ ಭದ್ರ ಬುನಾದಿ ಮತ್ತು ಮುಂದಿನ ಭವಿಷ್ಯಕ್ಕಾಗಿ, ಶೈಕ್ಷಣಿಕ ಜೀವನದ ಪ್ರಮುಖ ಘಟ್ಟಗಳಲ್ಲಿ ಒಂದಾದ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆ ಇಂದಿನಿಂದ ಆರಂಭವಾಗಿದ್ದು, ಪಟ್ಟಣದ ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ತೆರಳಿ ಮೊದಲ ದಿನದ ಪ್ರಥಮ ಭಾಷಾ ಪರೀಕ್ಷೆ ಯಶಸ್ವಿಯಾಗಿ ಬರೆದರು.ಮೊದಲ ದಿನದ ಭಾಷಾ ವಿಷಯ ಪರೀಕ್ಷೆ ಸುಸೂತ್ರವಾಗಿ ನಡೆಯಿತು. ಕನ್ನಡ ಮಾಧ್ಯಮದ ಬಹುತೇಕರಿಗೆ ಕನ್ನಡ ಪರೀಕ್ಷೆ. ಉರ್ದು ಮಾಧ್ಯಮದ ವಿದ್ಯಾರ್ಥಿಗಳಿಗೆ ಉರ್ದು ಪರೀಕ್ಷೆ ಉಳಿದಂತೆ ಆಯಾ ಮಾಧ್ಯಮಗಳ ವಿಷಯದ ಪರೀಕ್ಷೆ ನಡೆಯಿತು. ವಿದ್ಯಾರ್ಥಿಗಳು ಸುಸೂತ್ರವಾಗಿ ಬರೆಯಲು ಬೇಕಾದ ಎಲ್ಲಾ ಭದ್ರತಾ ಕ್ರಮಗಳನ್ನು ಶಿಕ್ಷಣ ಇಲಾಖೆ ಕೈಗೊಂಡಿದ್ದು.ಎಲ್ಲಾ ಕೇಂದ್ರಗಳಲ್ಲಿ ಹೊರ ಭಾಗದಲ್ಲಿ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ ಸಹಿತವಾಗಿ ಕೊಠಡಿ ಮಾಹಿತಿ ಸೂಚನೆ ಫಲಕಗಳಲ್ಲಿ ಲಭ್ಯವಿದ್ದವು. ಕೊಠಡಿಯ ಒಳಗಿನ ಡೆಸ್ಕ್ ಗಳಲ್ಲಿ ವಿದ್ಯಾರ್ಥಿಗಳ ನೋಂದಣಿ ಸಂಖ್ಯೆ ಬರೆಯಲಾಗಿತ್ತು.ಪರೀಕ್ಷಾ ಕೇಂದ್ರದ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಯಲ್ಲಿತ್ತು. ಪ್ರತಿಯೊಂದು ಕೊಠಡಿಗಳಿಗೆ ಸಿಸಿ ಕ್ಯಾಮೆರಾ ಅಳವಡಿಸಲಾಗಿತ್ತು. ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶುದ್ಧ…

Read More

ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಪಟ್ಟಣದ ಮಹಾ ದಾಸೋಹಿ ಶರಣಬಸವೇಶ್ವರರ 59 ನೇ ಜಾತ್ರೋತ್ಸವ, 25 ನೇ ಮಹಾ ರಥೋತ್ಸವದ ಅಂಗವಾಗಿ ಬುಧವಾರ ಸಾಯಂಕಾಲ ಸದ್ಭಕ್ತರು ರಥೋತ್ಸವವನ್ನು ಎಳೆಯುವ ಮೂಲಕ ಭಕ್ತಿ ಪರಾಕಾಷ್ಠೆ ಮೆರೆದರು. ಭಗವಂತ ನೀಡಿದ ಶಕ್ತಿ, ಸಾಮರ್ಥ್ಯ‌ಗಳನ್ನು ಮಾನವ ಜನಾಂಗದ ಉದ್ಧಾರಕ್ಕಾಗಿ ಬಳಸಿಕೊಂಡು”ಪರೋಪಕಾರಃ ಪುಣ್ಯಾಯ ಪಾಪಾಯ ಪರಪೀಡನಮ್‌” ಎಂಬ ಮಾತಿನಂತೆ ಜನೋಪಕಾರ ಮಾಡಿ ಜೀವನದಲ್ಲಿ ಸಾರ್ಥಕತೆ ಮೆರೆದ ಕೋಟಿಗೊಬ್ಬ ಶರಣ, ಭಕ್ತರ ಆರಾಧ್ಯ ದೈವ ದಾಸೋಹ ಮೂರ್ತಿ ಶ್ರೀ ಶರಣಬಸವೇಶ್ವರರ ಜಾತ್ರಾ ಮಹೋತ್ಸವ ಸಾವಿರಾರು ಭಕ್ತ ಸಮೂಹದ ಮಧ್ಯೆ ಸಡಗರ ಸಂಭ್ರಮದಿಂದ ಜರುಗಿತು.ಬೆಳಿಗ್ಗೆಯಿಂದ ಭಕ್ತರೆಲ್ಲರೂ ಸೇರಿ ಬಣ್ಣ ಬಣ್ಣದ ಪುಷ್ಪಗಳಿಂದ ಅಪ್ಪನ ತೇರು ಶೃಂಗೇರಿ ಸವಾಲಾಗಿತ್ತು, ಹಲವು ಧಾರ್ಮಿಕ ಪೂಜಾ ವಿಧಿ ವಿಧಾನಗಳು ಸಂಪ್ರದಾಯದಂತೆ ನೆರವೇರಿಸಿ, ರಥದೋಳ ಶರಣಬಸವೇಶ್ವರರ ಮೂರ್ತಿ ಕೂಡಿಸಿ, ಕಳಸಾರೋಹಣವಾಗುತ್ತಿದ್ದಂತೆ, ಭಕ್ತಜನರ ಹರ್ಷೋದ್ಗಾರ, ಜಯಘೋಷ, ಮುಗಿಲು ಮುಟ್ಟಿತ್ತು ತಂಡೋಪತಂಡವಾಗಿ ಬಂದ ಭಕ್ತರು ತೇರಿಗೆ ಉತ್ತತ್ತಿ, ಬಾಳೆಹಣ್ಣು, ಹಾರಿಸಿ ಭಕ್ತಿ ಭಾವ ಸಮರ್ಪಿಸಿದರು, ಮಕ್ಕಳು, ಮಹಿಳೆಯರು, ವೃದ್ದರು, ಸೇರಿದಂತೆ…

Read More

ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಸ್ಪರ್ಧಾತ್ಮ ಪರೀಕ್ಷೆಗಳ ಶಿಬಿರದ ಸಮಾರೋಪ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿದ್ಯಾರ್ಥಿಗಳು ಸ್ಪರ್ಧಾತ್ಮಕ ಮನೋಭಾವ ಬೆಳೆಸಿಕೊಳ್ಳಬೇಕು ದೈನಂದಿನ ದಿನ ಪತ್ರಿಕೆ ಓದು ಹಾಗು ಆಧುನಿಕ ತಂತ್ರಜ್ಞಾನವನ್ನು ಮತ್ತು ಸಮಾಜದಲ್ಲಿನ ಇತ್ತೀಚಿನ ಪ್ರವೃತ್ತಿಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಮುಂದಾಗಬೇಕು ಎಂದು ಹಿರಿಯ ಪತ್ರಕರ್ತ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮತ್ತು ರಾಣಿ ಚನ್ನಮ್ಮ ವಿವಿ ಸಿಂಡಿಕೇಟ್ ಸದಸ್ಯ ರಫೀ ಭಂಡಾರಿ ಹೇಳಿದರು.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದ Àಐಕ್ಯೂಎಸಿ, ಮಹಾವಿದ್ಯಾಲಯದ ಕೆರಿಯರ್‌ಗೈಡೆನ್ಸ್, ಪ್ಲೇಸ್ಮೆಂಟ್ ಸೆಲ್ ವಿಭಾಗದ ಮತ್ತು ಎಸ್ ಬಿ ವಿಸ್ಡಮ್‌ಕರಿಯರ್ ಅಕಾಡೆಮಿಯ ಸಂಯುಕ್ತಾಶ್ರಯದಲ್ಲಿ ಬಿಎ,ಬಿಎಸ್ಸಿ, ಬಿಸಿಎ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮ ಪರೀಕ್ಷೆಗಳ ೧೫ ದಿನಗಳ ಶಿಬಿರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು,ವಿದ್ಯಾರ್ಥಿಗಳು ಮೊಬೈಲ್ ಗೀಳಿಗೆ ತುತ್ತಾಗಿ ದುಶ್ಚಟಕ್ಕೆ ದಾಸರಾಗುತ್ತಿದ್ದಾರೆ. ಮೊಬೈಲ್ ಶೈಕ್ಷಣಿಕ ಚಟುವಟಿಕೆಗಳಿಗೆ ಬಳಸಿಕೊಂಡು ಭವ್ಯ ಭವಿಷ್ಯ ನಿರ್ಮಿಸಿಕೊಳ್ಳಬೇಕು ಎಂದು ಹೇಳಿದರು.ವಿದ್ಯಾರ್ಥಿಗಳು ನಿರಂತರವಾಗಿ ದಿನಪತ್ರಿಕೆಗಳನ್ನು ಓದುವ ಹವ್ಯಾಸ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗುಲಬರ್ಗಾ ವಿಶ್ವವಿದ್ಯಾಲಯ ಕಲಬುರಗಿ ಕನ್ನಡ ಅಧ್ಯಯನ ಸಂಸ್ಥೆಯ ರಾಷ್ಟ್ರೀಯ ಶಿಕ್ಷಣ ನೀತಿ ಸಿಬಿಸಿಎಸ್ ಮಾದರಿಯ ಸ್ನಾತಕ ತರಗತಿಗಳ ಸೆಮಿಸ್ಟರ್ ಪದ್ಧತಿಯ ಪಠ್ಯಕ್ರಮ ಬಿ.ಎಸ್.ಸಿ ಪದವಿಗೆ ಕಥೆಗಾರ ಶಂಕರ ಬೈಚಬಾಳ ಅವರ “ಮಸಬಿನಾಳದ ಪಶುವಾದಿಗಳು” ಕಥೆ ಪಠ್ಯವಾಗಿ ಆಯ್ಕೆಯಾಗಿದೆ . ಬರಗೂರ ರಾಮಚಂದ್ರಪ್ಪ ಅವರ ‘ಅವ್ವ’ , ಗೀತಾ ನಾಗಭೂಷಣ ಅವರ ‘ಬುದ್ಧ ಗಂಟೆಯ ಸದ್ದು’, ಸಂಗಮನಾಥ ಲೋಕಾಪುರ ಅವರ ‘ಪರಿವರ್ತನೆ’, ಮುಂತಾದ ಕಥೆಗಳು ಸಹ ಈ ಪಠ್ಯದಲ್ಲಿ ಸೇರಿವೆ.ಜಿಲ್ಲೆಯ ಮಸಬಿನಾಳ ಗ್ರಾಮದ ಆಕಳೊಂದು ಸತ್ತವರ ಅಂತ್ಯಸಂಸ್ಕಾರಕ್ಕೆ ಹೋಗಿ ಜನರೊಂದಿಗೆ ಅಂತ್ಯಕ್ರೀಯೆಯಲ್ಲಿ ಭಾಗವಹಿಸಿ ವಿಶಿಷ್ಟ ಸಂದೇಶ ನೀಡುವ ದೇವರ ಆಕಳಿನ (ಕಪಲಿ) ಸುತ್ತ ಹೆಣೆದ ಚಿತ್ರಣದಲ್ಲಿ ಪಶುವಾದಿಗಳ ಪ್ರಾದೇಶಿಕ ಸೊಗಡಿನ ಜನಪದೀಯ ಭಾಷೆ ಕಥೆಯಲ್ಲಿ ಹೆಪ್ಪುಗಟ್ಟಿದೆ . ಈಗಾಗಲೇ ಐವತ್ತಕ್ಕೂ ಹೆಚ್ಚು ಕೃತಿಗಳನ್ನು ರಚಿಸಿ ಹಲವಾರು ಪ್ರಶಸ್ತಿ ಪುರಸ್ಕೃತರಾದ ಖ್ಯಾತ ಸಾಹಿತಿ ಶಂಕರ ಬೈಚಬಾಳ ಅವರ ಕಾದಂಬರಿ ‘ಭಾರತ ಸಿಂಹಾಸನ ರಶ್ಮಿ’ ಬೇರೆ ಬೇರೆ ಭಾಷೆಗಳಿಗೆ ತರ್ಜುಮೆಗೊಂಡಿದೆ. ಮೂಲತಃ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಶುಕ್ರವಾರ ಜರುಗಿದ ಎಸ್.ಎಸ್.ಎಲ್.ಸಿ ಭಾಷಾ ಪರೀಕ್ಷೆಗೆ ೪೧,೨೭೬ ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ ೪೦,೧೮೭ ವಿದ್ಯಾರ್ಥಿಗಳು ಹಾಜರಾಗಿದ್ದು, ೧,೦೮೯ ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More