Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಿಷಿ ಆನಂದ ಅವರು ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಗಳು ನಡೆದಿರುವ ನಿಮಿತ್ಯ ನಗರದ ಜಿಲ್ಲಾ ಪಂಚಾಯಿತಿಯ ಪರೀಕ್ಷಾ ವೆಬ್ ಕಾಸ್ಟಿಂಗ್ ಕೇಂದ್ರ, ಪಿ.ಡಿ.ಜೆ ಪ್ರೌಢ ಶಾಲೆ, ಬಂಜಾರಾ ಪ್ರೌಢಶಾಲೆ ಮತ್ತು ಶಾಂತಿ ನಿಕೇತನ ಆಂಗ್ಲ ಮಾಧ್ಯಮ ಶಾಲೆ, ಬಿಡಿಎ ಸೊಸೈಟಿ ಬಾಲಕಿಯರ ಶಾಲೆ ಮತ್ತು ಸರ್ಕಾರಿ ಬಾಲಕಿಯರ ಶಾಲೆಗಳ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಜಿಲ್ಲೆಯಲ್ಲಿ ನಡೆಯುತ್ತಿರುವ ೧೩೧ ಪರೀಕ್ಷಾ ಕೇಂದ್ರಗಳ ವೆಬ್ ಕಾಸ್ಟಿಂಗ್ ಜಿಲ್ಲಾ ಪಂಚಾಯಿತಿಯಲ್ಲಿ ಸ್ಥಾಪಿಸಿರುವ ವೀಕ್ಷಣಾ ಕೇಂದ್ರಕ್ಕೆ ಭೇಟಿ ನೀಡಿ, ವೆಬ್ ಕಾಸ್ಟಿಂಗ್ ಕೇಂದ್ರದಲ್ಲಿ ಅಳವಡಿಸಿರುವ ಗಣಕಯಂತ್ರ, ಜಿಲ್ಲೆಯ ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿರುವ ಪರೀಕ್ಷಾ ಕೇಂದ್ರಗಳ ಹಾಗೂ ಇಂಟರ್ನೆಟ್ ವ್ಯವಸ್ಥೆ ಕುರಿತು ವೀಕ್ಷಿಸಿದರು. ತಾಂತ್ರಿಕ ಸಮಸ್ಯೆಗಳು ಉಂಟಾಗದಂತೆ ಕಾರ್ಯನಿರ್ವಹಿಸಬೇಕು. ಹೈ-ಸ್ಪೀಡ್ ಇಂಟರ್ ನೆಟ್ ವ್ಯವಸ್ಥೆ ಇರುವಂತೆ ನೋಡಿಕೊಳ್ಳಬೇಕು. ಪರೀಕ್ಷಾ ಅವಧಿಯಲ್ಲಿ ಯಾವುದೇ ಸಿಸಿಟಿವಿ ಸ್ಥಗಿತಗೊಳ್ಳದಂತೆ ನೋಡಿಕೊಳ್ಳುವುದು, ಒಂದು ವೇಳೆ ಸಿಸಿಟಿವಿ ಸ್ಥಗಿತಗೊಂಡಿದ್ದಲ್ಲಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಇಂಡಿ ತಾಲೂಕಿನ ಹೊಸ ೧೧೦ ಕೆವಿ ಭೈರುಣಗಿ ಲಿಲೋ ಮಾರ್ಗದ ಗೋಪುರ ನಿರ್ಮಾಣ ಹಾಗೂ ತಂತಿ ಎಳೆಯುವ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ೨೨೦ ಕೆವಿ ಇಂಡಿಯಿಂದ ಹೊರಹೋಗುವ ೧೧೦ ಕೆವಿ ಝಳಕಿ ವಿದ್ಯುತ್, ೧೧೦ ಕೆವಿ ಚಡಚಣ, ೧೧೦ ಕೆವಿ ಇಂಚಗೇರಿ, ೧೧೦ ಕೆವಿ ಜಿಗಜೇವಣಿ, ೧೧೦ ಕೆವಿ ಕೆರೂರ, ೩೩ ಕೆವಿ ಹಲಸಂಗಿ, ೩೩ ಕೆವಿ ಹೊರ್ತಿ,೩೩ ಕೆವಿ ನಿವರಗಿ ಈ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಲ್ಲಾ ೧೧ಕೆವಿ ಮಾರ್ಗಗಳಲ್ಲಿ ಹಾಗೂ ಐಪಿಪಿ ಸ್ಥಾವರಗಳಿಗೆ ಮಾ.೨೩ ರಂದು ಬೆಳಿಗ್ಗೆ ೫ ರಿಂದ ಸಂಜೆ ೫ರವರೆಗೆ ಹಾಗೂ ಮಾ.೨೪ರಂದು ಮಧ್ಯಾಹ್ನ ೧:೩೦ರಿಂದ ಸಂಜೆ ೫ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಇಂಡಿ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ೧೩೧ ಪರೀಕ್ಷಾ ಕೇಂದ್ರಗಳಲ್ಲಿ (ಮಾ.೨೧) ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭಗೊಂಡಿದ್ದು, ಶುಕ್ರವಾರ ಪ್ರಥಮ ಭಾಷೆ ಪರೀಕ್ಷೆ ಜರುಗಿತು. ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ನಗರದ ವಿ.ಬಿ ದರಬಾರ ಶಾಲೆಗೆ ಭೇಟಿ ನೀಡಿ, ಪರಿಶೀಲನೆ ನಡೆಸಿದ ಅವರು, ವಿದ್ಯಾರ್ಥಿಗಳು ಗೊಂದಲ ಮಾಡಿಕೊಳ್ಳದೇ, ಗಲಿಬಿಲಿಗೊಳಗಾಗದೇ ಆತ್ಮವಿಶ್ವಾಸದಿಂದ ಪರೀಕ್ಷೆ ಬರೆಯುವಂತೆ ಆತ್ಮಸ್ಥೈರ್ಯ ತುಂಬಿದರು.ಪರೀಕ್ಷೆಗಳನ್ನು ಅತ್ಯಂತ ಕಟ್ಟುನಿಟ್ಟಾಗಿ ನಿರ್ವಹಿಸಬೇಕು. ಪರೀಕ್ಷೆಗಳು ವಿದ್ಯಾರ್ಥಿಗಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಮಹತ್ವದ ಘಟ್ಟವಾಗಿರುವುದರಿಂದ ಪರೀಕ್ಷಾ ಸಂದರ್ಭದಲ್ಲಿ ಯಾವುದೇ ಸಮಸ್ಯೆಗಳು ಬಾರದಂತೆ ಎಚ್ಚರಿಕೆ ವಹಿಸಬೇಕು. ಯಾವುದೇ ದೂರಿಗೆ ಆಸ್ಪದೆ ನೀಡದೇ ಪರೀಕ್ಷಾ ನಿಯಮಗಳನ್ನುನಸರಿಸಿ, ಪರೀಕ್ಷೆಗೆ ನಿಯೋಜಿಸಿದ ಅಧಿಕಾರಿ, ಸಿಬ್ಬಂದಿ ತಮಗೆ ವಹಿಸಿದ ಪರೀಕ್ಷಾ ಕಾರ್ಯಗಳನ್ನು ಅತ್ಯಂತ ಜವಾಬ್ದಾರಿಯಿಂದ ಹಾಗೂ ಅಚ್ಚುಕಟ್ಟಾಗಿ ನಿರ್ವಹಿಸಬೇಕು.ಎಸ್.ಎಸ್.ಎಲ್.ಸಿ ಪರೀಕ್ಷೆಗೆ ಹಾಜರಾದ ವಿದ್ಯಾರ್ಥಿಗಳ ಹಾಜರಾತಿ, ಪರೀಕ್ಷಾ ಕೇಂದ್ರಗಳ ಕೊಠಡಿಗಳ ಮಾಹಿತಿ, ವಿದ್ಯಾರ್ಥಿಗಳಿಗೆ ಕಲ್ಪಿಸಿರುವ ಆಸನ ವ್ಯವಸ್ಥೆ, ಪರೀಕ್ಷಾ ಕೇಂದ್ರದಲ್ಲಿ ಮೂಲಭೂತ ಸೌಲಭ್ಯ, ಪರೀಕ್ಷಾ ಕೇಂದ್ರದಲ್ಲಿ ಅಳವಡಿಸಿರುವ ಸಿ.ಸಿ.ಟಿ.ವಿ ಮತ್ತು ವೆಬ್‌ಕಾಸ್ಟಿಂಗ್ ಪ್ರಕ್ರಿಯೆಯನ್ನು ಪರಿಶೀಲಿಸಿದರು. ಪರೀಕ್ಷಾ ಕೇಂದ್ರಗಳಿಗೆ ಪೋಲಿಸ್…

Read More

ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ನಡೆದ ‘ರಾಷ್ಟ್ರೀಯ ಭಾವೈಕ್ಯತಾ ಶಿಬಿರ-೨೦೨೫’ ಉದ್ಘಾಟಿಸಿದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮಾನ ಅವಕಾಶಗಳು ಹಾಗೂ ಸಮಾಜದ ಬೆಂಬಲ ದೊರೆತರೆ, ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲೂ ಯಶಸ್ಸನ್ನು ಸಾಧಿಸಿ, ಭಾರತದ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸಬಹುದು ಎಂದು ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಹೇಳಿದರು.ನಗರದ ಕರ್ನಾಟಕ ರಾಜ್ಯ ಸರ್ಕಾರ ಎನ್‌ಎಸ್‌ಎಸ್ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಎನ್‌ಎಸ್‌ಎಸ್ ಪ್ರಾದೇಶಿಕ ನಿರ್ದೇಶನಾಲಯ, ಬೆಂಗಳೂರು ಭಾರತ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಶುಕ್ರವಾರ ಆಯೋಸಿದ್ದ ‘ರಾಷ್ಟ್ರೀಯ ಭಾವೈಕ್ಯತಾ ಶಿಬಿರ-೨೦೨೫’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಇಂದಿನ ಸಮಾಜದಲ್ಲಿ ಮಹಿಳೆಯರಿಗೆ ರಾಜಕೀಯ ಸೇರಿದಂತೆ ಅನೇಕ ಕ್ಷೇತ್ರಗಳಲ್ಲಿ ಅಪಾರ ಅವಕಾಶಗಳು ಲಭ್ಯವಾಗಿವೆ. ಇಂದಿನ ಮಹಿಳೆಯರು ತಮ್ಮ ಪ್ರತಿಭೆಯಿಂದ ಪ್ರತಿಯೊಂದು ವಲಯದಲ್ಲೂ ಹೊಸ ಇತಿಹಾಸವನ್ನು ಬರೆಯುತ್ತಿದ್ದಾರೆ. ಶಿಕ್ಷಣ, ತಂತ್ರಜ್ಞಾನ, ಉದ್ಯಮಶೀಲತೆ, ವಿಜ್ಞಾನ, ಕಲೆ-ಸಾಹಿತ್ಯ, ಕ್ರೀಡೆ, ಸಾಮಾಜಿಕ ಸೇವೆ ಹಾಗೂ ಆಡಳಿತ ಕ್ಷೇತ್ರಗಳಲ್ಲಿ ಮಹಿಳೆಯರು ತಮ್ಮ ಸಿದ್ಧತೆ ಮತ್ತು…

Read More

ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಸಮಾಜದಲ್ಲಿ ಪ್ರತಿಯೊಬ್ಬರೂ ಸಾಮರಸ್ಯದಿಂದ ತಮ್ಮ ಬದುಕನ್ನು ಕಟ್ಟಿಕೊಳ್ಳುವ ಮೂಲಕ ಮಾನವ ಧರ್ಮವನ್ನು ಬೆಳಗಿಸಿ ಮನುಷ್ಯ ಜನ್ಮದ ನಿಜ ಸಾರ್ಥಕತೆಯನ್ನು ಸಾಧಿಸಲು ಮುಂದಾಗಬೇಕು ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ.ವೀರಸೋಮೇಶ್ವರ ಜಗದ್ಗುರುಗಳು ಅಭಿಪ್ರಾಯಪಟ್ಟರು.ಅವರು ಗುರುವಾರ ಕಲಕೇರಿ ಸುಕ್ಷೇತ್ರದ ಶ್ರೀ ಗುರು ಮರುಳಾರಾಧ್ಯ ಸಂಸ್ಥಾನ ಹಿರೇಮಠದಲ್ಲಿ ಲಿಂ.ಬಸವಲಿಂಗ ಮರುಳಸಿದ್ಧ ಶಿವಾಚಾರ್ಯರ ಅಮೃತ ಶಿಲಾಮೂರ್ತಿಯ ಪ್ರಾಣ ಪ್ರತಿಷ್ಠಾಪನೆ ಸಮಾರಂಭದ ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.ಪ್ರತಿಯೊಬ್ಬ ಜೀವಿಯ ಜೀವನದಲ್ಲಿ ಗುರುವಿನ ಕೃಪೆ, ಅಂತ:ಕರಣ ಮತ್ತು ಸತ್ಯದರ್ಶನದ ಮಾರ್ಗ ದೊರೆತಾಗ ಜೀವಾತ್ಮ ಪರಮಾತ್ಮನಾಗಲು ಸಾಧ್ಯವಾಗುತ್ತದೆ ಈ ನಿಟ್ಟಿನಲ್ಲಿ ಸದಾ ಗುರುಗಳ, ಸಂತರ, ಶರಣರ ಸದ್ವಿಚಾರಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ನಡೆಯಬೇಕು ಎಂದು ಹೇಳಿದ ಅವರು ಈಗಿನ ಪಟ್ಟಾಧ್ಯಕ್ಷರಾದ ಸಿದ್ಧರಾಮ ಶಿವಾಚಾರ್ಯ ಸ್ವಾಮಿಗಳು ಹಲವಾರು ವೈಶಿಷ್ಠö್ಯಪೂರ್ಣ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ತಮಗೆ ಸಂತೋಷ ತಂದಿದೆ ಎಂದು ಶುಭ ಹಾರೈಸಿದರು.ಕಲಕೇರಿ ಹಿರೇಮಠದ ಸಿದ್ಧರಾಮ ಶಿವಾಚಾರ್ಯ ಸ್ವಾಮಿಗಳು ಕಾರ್ಯಕ್ರಮದ ಅಧ್ಯಕ್ಷತೆವಹಿಸಿದ್ದರು.ಜಳಕೋಟ ಶಿವಾನಂದ ಶಿವಾಚಾರ್ಯರು, ಸಿದ್ಧರಬೆಟ್ಟದ ವೀರಭದ್ರ ಶಿವಾಚಾರ್ಯರು, ಹಲಕರ್ಟಿ ಅಭಿನವ…

Read More

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ತಾಲ್ಲೂಕಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಜರುಗಿದ ಎಸ್ಎಸ್ಎಲ್ಸಿ ಮೊದಲ ದಿನದ ಪರೀಕ್ಷೆಯೂ ಸುಸೂತ್ರವಾಗಿ ನಡೆದಿದ್ದು, ಹಲವು ಪರೀಕ್ಷಾ ಕೇಂದ್ರಗಳಲ್ಲಿ ಮಕ್ಕಳಿಗೆ ಭಯಮುಕ್ತ ಪರೀಕ್ಷೆ ಎದುರಿಸಲು ಪರೀಕ್ಷಾ ಕೇಂದ್ರದ ವತಿಯಿಂದ ವಿಭಿನ್ನ ರೀತಿಯಲ್ಲಿ ಸ್ವಾಗತವನ್ನು ಕೋರಲಾಯಿತು.ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಮಾಣಿಕೇಶ್ವರಿ ಪ್ರೌಢ ಶಾಲೆಯಲ್ಲಿ ಶುಕ್ರವಾರ ಪ್ರಥಮ ಭಾಷೆ ಕನ್ನಡ ವಿಷಯ ದಿನದಂದು ವಿಧ್ಯಾರ್ಥಿಗಳಿಗೆ ಆರತಿ ಬೆಳಗಿ ಗುಲಾಬಿ ಹೂವು ನೀಡಿ ಸ್ವಾಗತಿಸಲಾಯಿತು.ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕ ಎಸ್.ಎಂ.ಅವಟಿ ಮಾತನಾಡಿ ವಿಧ್ಯಾರ್ಥಿಗಳು ಭಯಮುಕ್ತವಾಗಿ ಪರೀಕ್ಷೆ ಬರೆಯಬೇಕು. ಪರೀಕ್ಷಾ ಕೊಠಡಿಯಲ್ಲಿ ನಕಲು ಮಾಡಲು ಅವಕಾಶವಿಲ್ಲ. ಇಡೀ ಪರೀಕ್ಷಾ ಕೇಂದ್ರ ಹಾಗೂ ಕೊಠಡಿಗಳು ಸಿಸಿ ಕ್ಯಾಮರಾ ನಿಗಾದಲ್ಲಿರುವದು. ಶಾಂತತೆಯಿಂದ ಪ್ರಶ್ನೆ ಪತ್ರಿಕೆಯನ್ನು ಅರ್ಥೈಸಿಕೊಂಡು ಉತ್ತರಗಳನ್ನು ಬರೆದು ನಿಮ್ಮ ಭವಿಷ್ಯ ಉಜ್ವಲಗೊಳಿಸಿಕೊಳ್ಳಬೇಕು ಎಂದು ವಿಧ್ಯಾರ್ಥಿಗಳಿಗೆ ದೈರ್ಯ ತುಂಬಿದರು.ಪ್ರತಿ ವಿಧ್ಯಾರ್ಥಿಗಳಿಗೆ ತಪಾಸಣೆ ಮಾಡಿ ಪರೀಕ್ಷಾ ಕೇಂದ್ರದೊಳಗೆ ಬಿಡಲಾಯಿತು. ಪರೀಕ್ಷಾ ಕೇಂದ್ರದ ಹೊರಗೆ ಸಾರ್ವಜನಿಕರಿಂದ ಯಾವುದೇ ತೊಂದರೆಯಾಗದಂತೆ ಸುಸೂತ್ರವಾಗಿ ಮೊದಲ ದಿನದ ಕನ್ನಡ ಭಾಷಾ ಪರೀಕ್ಷೆ ಯಶಸ್ವಿಯಾಗಿ…

Read More

ಲೇಖನ- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕುದ.ಕ ಜಿಲ್ಲೆ-೫೭೪೧೯೮ದೂ:೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ಮಳೆಗಾಲದಲ್ಲಿ ತನ್ನ ಬಾಯಿಯಿಂದ ಸುರಿಸುವ ಲೋಳೆಯ ಮೇಲೆ ತೆವಳಿಕೊಂಡು ಸಾಗುವ ಹುಳುವು ಎಲ್ಲೆಡೆ ಕಂಡುಬರುತ್ತದೆ. ಅತ್ಯಂತ ನಿಧಾನವಾಗಿ ಚಲಿಸುವ ಈ ಹುಳುವೇ ಬಸವನಹುಳು.ಬಸವನ ಹುಳುವು ‘ಚಿಪ್ಪಿನ ಮೃದ್ವಂಗಿ’ ಜಾತಿಗೆ ಸೇರಿದ್ದು, ತನ್ನ ಬೆನ್ನಿನ ಮೇಲೆ ಸುರುಳಿಯ ಆಕಾರದ ಚಿಪ್ಪನ್ನು ಹೊಂದಿರುತ್ತದೆ. ಬಸವನ ಹುಳುಗಳಲ್ಲಿ ಹಲವು ವಿಧಗಳಿದ್ದು, ಕೆಲವು ಕೇವಲ ಭೂಮಿಯಲ್ಲಿ ವಾಸಿಸಿದರೆ, ಕೆಲವು ಸಮುದ್ರದಲ್ಲಿ ಮತ್ತು ಕೆಲವು ಸಿಹಿನೀರಿನಲ್ಲಿ ವಾಸಿಸುತ್ತವೆ. ಬಸವನ ಹುಳು ಕೆಲವು ಸಣ್ಣ ಜೀವಿಗಳನ್ನು, ಗಿಡಗಳನ್ನು, ಎಲೆಗಳನ್ನು ತಿನ್ನುತ್ತವೆ. ಒಣಹವೆಯಲ್ಲಿ ಈ ಹುಳುಗಳು ತಮ್ಮ ಚಿಪ್ಪುಗಳನ್ನು ಮುಚ್ಚುವ ಮೂಲಕ ತಮ್ಮನ್ನು ತೇವವಾಗಿ ಇಟ್ಟುಕೊಳ್ಳುತ್ತವೆ. ಗೊಂಡೆ ಹುಳುಗಳು ಹಾಗೂ ಬಸವನ ಹುಳುಗಳಲ್ಲಿ ಇರುವ ಒಂದೇ ವ್ಯತ್ಯಾಸವೆಂದರೆ ಗೊಂಡೆ ಹುಳುಗಳಿಗೆ ಯಾವುದೇ ಚಿಪ್ಪುಗಳು ಇರುವುದಿಲ್ಲ. ಬಸವನ ಹುಳುಗಳಿಗೆ ಬಲವಾದ ಹಲ್ಲುಗಳಿರುತ್ತವೆ. ನೀರಿನಲ್ಲಿ ಬದುಕುವ ಬಸವನ ಹುಳುವಿನ (ಟimಠಿeಣ) ಹಲ್ಲು ಜಗತ್ತಿನ ಎಲ್ಲಕ್ಕಿಂತ ಹೆಚ್ಚು ಗಟ್ಟಿಯಾದ…

Read More

ಲೇಖನ – ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ಸಮಯ ನೋಡಲು ಸಮಯವಿಲ್ಲ. ಯಾವುದಕ್ಕೂ ಪುರುಸೊತ್ತಿಲ್ಲ. ದಿನದ ೨೪ ಗಂಟೆ ಸಾಲುತ್ತಿಲ್ಲ. ಕುಟುಂಬ, ಮನರಂಜನೆ,ವಿಶ್ರಾಂತಿ, ನೆಮ್ಮದಿಯಂತೂ ಕನಸಿನ ಮಾತಾಗಿದೆ ಅನ್ನೋ ಮಾತುಗಳು ದಿನಾಲು ಕಿವಿಗೆ ಬೀಳುತ್ತಲೇ ಇರುತ್ತವೆ. ಸಮಯ ಮತ್ತು ಸಮುದ್ರದ ಅಲೆ ಯಾರಿಗಾಗಿಯೂ ಕಾಯುವುದಿಲ್ಲ ಎನ್ನುವ ಮಾತನ್ನು ನಾವೆಲ್ಲ ಕೇಳಿದ್ದೇವೆ. ಹಾಗೆ ನೋಡಿದರೆ ಸಮಯ ನಿರ್ವಹಣೆಯೇ ಜೀವನ ಅನ್ನುವಷ್ಟು ಸಮಯ ಮಹತ್ವದ್ದಾಗಿದೆ. ಒಮ್ಮೆ ಕಳೆದು ಹೋದರೆ ಮರಳಿ ಪಡೆಯಲಾಗದಂತಹ ಸಂಪತ್ತು. ಅದಕ್ಕೆ ಸಮನಾದುದು ಯಾವುದು ಇಲ್ಲ. ಜಗತ್ತಿನ ಅತಿ ಶ್ರೀಮಂತ ವ್ಯಕ್ತಿ ಏನೆಲ್ಲವನ್ನೂ ಕೊಳ್ಳಬಹುದು ಆದರೆ ಸಮಯವನ್ನು ಕೊಳ್ಳಲಾರ. ಯಾರ ಕೈಗೂ ಸಿಗದೇ ಓಡುವ ವಸ್ತು ಎಂದರೆ ಸಮಯ. ಅದರ ನಿರ್ವಹಣೆ ಗೊತ್ತಿರುವವನು ಅಸಾಧ್ಯವಾಗಿರುವುದನ್ನು ಸಾಧ್ಯವಾಗಿಸಬಲ್ಲ. ಜೀವನದ ಎಲ್ಲ ಕ್ಷೇತ್ರಗಳಲ್ಲಿ ಉತ್ತಮವಾಗಿ ಕಾರ್ಯ ನಿರ್ವಹಿಸಲು ಸಮಯದ ಮೌಲ್ಯವನ್ನು ಅರ್ಥ ಮಾಡಿಕೊಳ್ಳಬೇಕು. ಸಮಯ ನಿರ್ವಹಣೆ ಎಂದರೆ..?ಸರಿಯಾದ ಚಟುವಟಿಕೆಗಳಿಗೆ ಸರಿಯಾದ ಸಮಯವನ್ನು ನಿಗದಿಪಡಿಸುವುದು. ಸೀಮಿತ ಸಮಯದಲ್ಲಿ ನೀವು ಹೊಂದಿರುವ ಸಮಯದ ಲಾಭವನ್ನು…

Read More

ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಮಾನ್ಯತೆ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಪತ್ರಕರ್ತರಿಗೆ ಮಾಧ್ಯಮ ಕಿಟ್ ನೀಡಲು ಇದ್ದ ಸಮಸ್ಯೆಯನ್ನು ಬಗೆಹರಿಸುವಂತೆಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅವರನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು ನೇತೃತ್ವದ ನಿಯೋಗ ಮನವಿ ಮಾಡಿತು.ಸುದ್ದಿವಾಹಿನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಪತ್ರಕರ್ತರು ನಿಗದಿತ ದಾಖಲೆಗಳ ಸಹಿತ ನವೆಂಬರ್‌ನಲ್ಲಿ ಅರ್ಜಿ ಸಲ್ಲಿಸಿದ್ದರು. ಮಾಧ್ಯಮ ಕಿಟ್ ವಿತರಣೆ ಸಂದರ್ಭದಲ್ಲಿ ಕೆಲವರು ಅನಗತ್ಯ ಗೊಂದಲ ಮೂಡಿಸಿದ್ದರು. ಈ ವಿಚಾರವನ್ನುಪ್ರಭಾಕರ್ ಅವರಿಗೆ ವಿವರಿಸಲಾಯಿತು.ಪತ್ರಕರ್ತರ ಮನವಿಯನ್ನು ಪರಿಗಣಿಸಿದ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರುಕೂಡಲೇ ಕಾರ್ಯೋನ್ಮುಖರಾಗಿ ವಾರ್ತಾ ಇಲಾಖೆಯ ಆಯುಕ್ತರ ಜೊತೆಗೆ ಮಾತನಾಡಿ ತಾಂತ್ರಿಕವಾಗಿ ಇದ್ದ ಅಡಚಣೆಯನ್ನು ಬಗೆಹರಿಸಿದರು.ಪರಿಣಾಮವಾಗಿ ಸಮಸ್ಯೆ ಬಗೆಹರಿಸಲುಪ್ರಯತ್ನಿಸಿದ ಕೆ.ವಿ.ಪ್ರಭಾಕರ್ ಅವರಿಗೆ ಕೆಯುಡಬ್ಲ್ಯೂಜೆ ಧನ್ಯವಾದ ತಿಳಿಸಿತು.

Read More

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಇತರೆ ನಾಯಕರನ್ನು ಭೇಟಿ ಮಾಡಿದ ಡಿಸಿಎಂ ಡಿಕೆ.ಶಿವಕುಮಾರ್ ಮಾಹಿತಿ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆ ನಡೆಸಲು ಹೈಕಮಾಂಡ್ ಸೂಚನೆ ನೀಡಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಬುಧವಾರ ಹೇಳಿದರು.ನವದೆಹಲಿ ಭೇಟಿ ನೀಡಿರುವ ಡಿಕೆ.ಶಿವಕುಮಾರ್ ಅವರು, ಈ ವೇಳೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹಾಗೂ ಇತರೆ ನಾಯಕರನ್ನು ಭೇಟಿ ಮಾಡಿ ಕೆಪಿಸಿಸಿ ಕಚೇರಿಯ ಶಂಕುಸ್ಥಾಪನಾ ಸಮಾರಂಭಕ್ಕೆ ಆಹ್ವಾನಿಸಿದರು.ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ನೂತನ ಕಾಂಗ್ರೆಸ್ ಭವನದ ಭೂಮಿ ಪೂಜೆಗೆ ಸಮಯ ನೀಡಿ ಎಂದು ಹೇಳಿದ್ದೇನೆ. 100 ಕಾಂಗ್ರೆಸ್ ಕಚೇರಿಗಳನ್ನು ಕಟ್ಟಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅವರು ಸಮಯ ನೀಡಿದಾಗ ಭೂಮಿಪೂಜೆ ನಡೆಸಲಾಗುವುದು ಎಂದು ಹೇಳಿದರು.ಹೈಕಮಾಂಡ್’ಗೆ ರಾಜ್ಯದ ರಾಜಕೀಯ ಬೆಳವಣಿಗೆಗಳ ಬಗ್ಗೆ ತಿಳಿದಿದೆ. ಪ್ರತಿಯೊಬ್ಬ ಜಿಲ್ಲಾ…

Read More