Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪ್ರತಿಯೊಬ್ಬರೂ ತಮ್ಮ ಮನೆಯ ಸುತ್ತ, ಮುತ್ತ ಕೊಳಚೆ ನೀರು ನಿಲ್ಲದಂತೆ ಜಾಗೃತಿವಹಿಸುವುದು, ಸೊಳ್ಳೆ ಉತ್ಪತ್ತಿಯಾಗದಂತೆ ನಿಗಾವಹಿಸುವುದು ಹಾಗೂ ಸೊಳ್ಳೆ ಕಡಿತಕ್ಕೆ ಒಳಗಾಗದಂತೆ ರಕ್ಷ ಣೆ ಮಾಡಿಕೊಳ್ಳುವುದರಿಂದ ಮಲೇರಿಯಾ ರೋಗವನ್ನು ತಡೆಗಟ್ಟಬಹುದು ಎಂದು ತಂಗಡಗಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಸಂಗಮೇಶ ದಶವಂತ್ ಹೇಳಿದರು.ಪಟ್ಟಣದ ಹೊರಪೇಟೆ ಗಲ್ಲಿಯಲ್ಲಿರುವ ತಾಲೂಕ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದ್ದ ವಿಶ್ವ ಮಲೇರಿಯಾ ದಿನಾಚರಣೆಯಲ್ಲಿ ಅವರು ಮಾತನಾಡಿದರು.ಹರಿಯದೆ ನಿಂತುಕೊಳ್ಳುವ ಕೊಳಚೆ ನೀರು, ಮನೆಯ ಸುತ್ತಮುತ್ತಲಿನ ಪರಿಸರ ಸ್ವಚ್ಛತೆ ಇಲ್ಲದ ಸ್ಥಳಗಳಲ್ಲಿ ಮಲೇರಿಯಾ ಹರಡುವ ಸೊಳ್ಳೆಗಳು ಉತ್ಪಪತ್ತಿಯಾಗುತ್ತವೆ. ಸೊಳ್ಳೆ ಒಬ್ಬನಿಂದ ಮತ್ತೊಬ್ಬನಿಗೆ ಕಡಿಯುವ ಮೂಲಕ ಸಾಂಕ್ರಾಮಿಕವಾಗಿ ಬರುತ್ತದೆ. ಇಂತಹ ಸಂದರ್ಭದಲ್ಲಿ ವ್ಯಕ್ತಿಗೆ ಚಳಿ-ಜ್ವರ ಬರುವ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಹೀಗಾದಾಗ ಕೂಡಲೇ ಹತ್ತಿರದಲ್ಲಿರುವ ಆಸ್ಪತ್ರೆಗೆ ಭೇಟಿ ನೀಡಿ ರಕ್ಷ ಪರೀಕ್ಷೆ ಮಾಡಿಸಿಕೊಳ್ಳುವುದರ ಜೊತೆಗೆ ಚಿಕಿತ್ಸೆ ಪಡೆಯಬೇಕು ಎಂದು ಸಲಹೆ ನೀಡಿದರು.ತಾಲೂಕು ಕ್ಷೆತ್ರ ಆರೋಗ್ಯ ಶಿಕ್ಷ ಣಾಧಿಕಾರಿ ಅನುಸೂಯಾ ತೇರದಾಳ ಮಾತನಾಡಿ, ಮನೆ ಸುತ್ತಲಿನ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಗ್ರಾಪಂ ಜಿಲ್ಲೆಯಲ್ಲಿಯೇ ಅತಿ ಹೆಚ್ಚು ಕೂಲಿ ಕಾರ್ಮಿಕರನ್ನು ಹೊಂದಿರುವ ಗ್ರಾಮ ಪಂಚಾಯತಿ. ಪ್ರತಿ ವರ್ಷವೂ ನರೇಗಾ ಯೋಜನೆಯನ್ನು ಯಶಸ್ವಿಯಾಗಿ ನಡೆಸಿಕೊಂಡು ಬಂದಿದೆ. ಸಾಕಷ್ಟು ಅಭಿವೃದ್ಧಿ ಕೆಲಸವನ್ನು ಮಾಡಿದ ಕೀರ್ತಿ ಅರಟಾಳ ಪಂಚಾಯತಿಗೆ ಸಲ್ಲುತ್ತದೆ ಎಂದು ಬೆಳಗಾವಿ ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ ಹೇಳಿದರು.ಅಥಣಿ ತಾಲೂಕಿನ ಅರಟಾಳ ಗ್ರಾಮದ ಗ್ರಾಪಂಗೆ ಭೇಟಿ ನೀಡಿ, ನೂತನ ಗ್ರಾಮ ಪಂಚಾಯತ ಕಟ್ಟಡ ವಿಕ್ಷಣೆ ಹಾಗೂ ವಿವಿಧ ಕಾಮಗಾರಿಗಳ ಪರಿಶೀಲಿಸಿ ಮಾತನಾಡಿ, ಕಡಿಮೆ ಅವಧಿಯಲ್ಲಿ ಉತ್ತಮವಾಗಿ ನೂತನ ಗ್ರಾಪಂ ಕಟ್ಟಡ ನಿರ್ಮಾಣ ಮಾಡಿ ಉದ್ಘಾಟನೆ ಮಾಡಿದಿರಿ. ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರ ಸಹಕಾರ ಅಧಿಕಾರಿಗಳಿಗೆ ಸಿಕ್ಕರೆ ಸರಕಾರದ ಯೋಜನೆಗಳು ಯಶಸ್ವಿಯಾಗುತ್ತವೆ. ಅರಟಾಳ ಗ್ರಾಪಂ ವ್ಯಾಪ್ತಿಯಲ್ಲಿ ಕೂಲಿಕಾರ್ಮಿಕರು ಹೆಚ್ಚು ಇರುವುದರಿಂದ ಹೆಚ್ಚಿಗೆ ನರೇಗಾ ಕೆಲಸ ಕೊಡಿ. ಬೇಸಿಗೆ ಇರುವುದರಿಂದ ಕುಡಿಯುವ ನೀರಿನ ಸಮಸ್ಯೆಯಾಗದಂತೆ ನೋಡಿಕೊಳ್ಳಿ. ಹಾಗೇನಾದರು ಕುಡಿಯುವ ನೀರಿನ ಸಮಸ್ಯೆ ಉಂಟಾದರೆ ಮೇಲಾಧಿಕಾರಿಗಳ ಗಮನಕ್ಕೆ ತನ್ನಿ ಎಂದರು.ಗ್ರಾಪಂ ಪಿಡಿಒ ಎ. ಜಿ.ಎಡಕೆ ಮಾತನಾಡಿ,…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಾಲೂಕಿನ ನೆರಬೆಂಚಿ ಗ್ರಾಮದ ಎಚ್ಚರೇಶ್ವರ ದೇವಸ್ಥಾನದಲ್ಲಿ ಏ.೨೭ ರಂದು ಬೆಳಿಗ್ಗೆ ೧೦:೩೦ ಕ್ಕೆ ೨೦೮ನೇ ಶಿವಾನುಭವ ಗೋಷ್ಠಿ ಹಾಗೂ ಡಾ.ಪ್ರಕಾಶ ನರಗುಂದ ರಚಿತ, ನಿವೃತ್ತ ಶಿಕ್ಷಕ ಎನ್.ಎಸ್.ಪೊಲೇಶಿ ಅವರ ಶಿಕ್ಷಣ ಶಿಲ್ಪಿ ಎಂಬ ಅಭಿನಂದನಾ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.ಸಾನಿಧ್ಯವನ್ನು ಕೂಡಲ ಸಂಗಮದ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯಮೃತ್ಯುಂಜಯ ಮಹಾಸ್ವಾಮಿಗಳು ಮತ್ತು ಇಟಗಿ ಭೂಕೈಲಾಸ ಮೇಲ್ಗದ್ದುಗೆಯ ಗುರುಶಾಂತವೀರ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಲಿದ್ದು, ಮಾಜಿ ಗ್ರಾ.ಪಂ ಅಧ್ಯಕ್ಷ ಸಂಗಯ್ಯ ಹಾಲಗಂಗಾಧರಮಠ ಅಧ್ಯಕ್ಷತೆ ವಹಿಸುವರು. ಎಂ.ಜಿ.ವ್ಹಿ.ಸಿ ಕಾರ್ಯದರ್ಶಿ ಅಶೋಕ ತಡಸದ ಉದ್ಘಾಟಿಸಲಿದ್ದು, ಶರಣಮ್ಮ ಗಿರೇಗೌಡರ ಉಪಸ್ಥಿತಿಯಲ್ಲಿ ಗುರುಲಿಂಗಪ್ಪಗೌಡ ಹಿರೇಗೌಡರ, ಎಸ್.ಎನ್.ಕಂಗಳ ಮುಖ್ಯ ಅತಿಥಿಯಾಗಿ ಭಾಗವಹಿಸುವರು. ಗಂಗಾಯಪೀಠ ಮಹಾಸ್ವಾಮಿಗಳು, ಶಿವಣ್ಣ ಗುಡಗುಂಟಿ, ಬಸನಗೌಡ ಪಾಟೀಲ, ಡಾ.ರಾಜಶೇಖರ ಹತ್ತರಸಂಘ, ಬಿ.ಪಿ.ಪಾಟೀಲ, ಜಿ.ಎಚ್.ಪಾಟೀಲ, ಎಂ.ಎಸ್.ಬಿರಾದಾರ, ಪರಶುರಾಮ ಚೌಡಕೇರ ಅನುಭವಗೋಷ್ಟಿ ನಿರೂಪಿಸಲಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವೃತ್ತಿಧರ್ಮ ಪ್ರತಿಯೊಬ್ಬರ ಅಧ್ಯಕರ್ತವ್ಯವಾಗಿದೆ ಎಂದು ಮಾಜಿ ಇನ್ನರ್ವಿಲ್ ಕ್ಲಬ್ ಅಧ್ಯಕ್ಷ ನಾಗರತ್ನ ಮನಗೂಳಿ ಹೇಳಿದರುಸಿಂದಗಿ ನಗರದ ಓಂ ಶಾಂತಿ ಭವನದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯ ಹಾಗೂ ತಾಲೂಕಾ ಆರೋಗ್ಯ ಇಲಾಖೆ ಇವರ ಸಹಯೋಗದಲ್ಲಿ ನಡೆದ ಆಶಾ ಕಾರ್ಯಕರ್ತೆಯರಿಗಾಗಿ ವೃತ್ತಿ ಕೌಶಲ್ಯ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತನಾಡಿದ ಅವರು ಆಶಾ ಕಾರ್ಯಕರ್ತೆಯರು ಸಮಾಜದ ಭರವಸೆಯ ಬೆಳಕಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆಶಾ ಎಂದರೆ ಆಸೆ,ಹಾರೈಕೆ, ಭರವಸೆಯಲ್ಲಿ ಪ್ರತಿ ವ್ಯಕ್ತಿಯ ಬದುಕಿಗೆ ಮತ್ತು ಸ್ವಾಸ್ತ್ಯ ಸಮಾಜದ ಸರ್ವತೋಮುಖ ಬೆಳವಣಿಗೆಯಲ್ಲಿ ಇವರ ಕಾರ್ಯ ಶ್ಲಾಘನೀಯವಾಗಿದೆ. ಜನಸೇವೆ ಅವಕಾಶ ಸಿಕ್ಕಾಗ ಬಿಡದೆ ಅದನ್ನ ಸದುಪಯೋಗ ಮಾಡಿಕೊಳ್ಳಬೇಕು ಎಂದು ಹೇಳಿದರು.ಅತಿಥಿಯಾಗಿ ಮಾತನಾಡಿದ ತೋಟಗಾರಿಕಾ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕ ಸಚಿನ ಉಟಗಿ ಧರ್ಮ-ದೇವರುಗಳ ಪರಿಕಲ್ಪನೆಯಲ್ಲಿ ಪ್ರಕೃತಿದತ್ತ ತೋಟಗಾರಿಕೆ ಮತ್ತು ಆದ್ಯಾತ್ಮ ಎರಡು ಒಂದೇ, ಆಧ್ಯಾತ್ಮ ಮನವನ್ನು ಅರಳಿಸಿದರೆ ಪ್ರಕೃತಿ ಹೂಗಳನ್ನ ಸಸಿಗಳನ್ನು ಅರಳಿಸುತ್ತದೆ ಹಾಗೆ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯವು ಆಧ್ಯಾತ್ಮದ ಮೂಲಕ ಸ್ವಾಸ್ಥ್ಯ ಸಮಾಜ ನಿರ್ಮಾಣ…

Read More

ಉದಯರಶ್ಮಿ ದಿನಪತ್ರಿಕೆ ಮೋರಟಗಿ: ಅನಾಪೆಲೀಸ್ ಎನ್ನುವ ಹೆಣ್ಣು ಸೊಳ್ಳೆ ಕಚ್ಚುವುದರಿಂದ ಮಲೇರಿಯಾ ರೋಗ ಹರಡುತ್ತದೆ, ಇದು ಒಬ್ಬರಿಂದ ಇನ್ನೊಬ್ಬರಿಗೆ ಸೊಳ್ಳೆ ಕಚ್ಚಿದರೆ ಆ ವ್ಯಕ್ತಿಗೂ ಕೂಡಾ ಮಲೇರಿಯಾ ಹರಡುವ ಎಲ್ಲ ಸಾಧ್ಯತೆಗಳು ಇರುತ್ತದೆ ಹೀಗಾಗಿ ಮಲೇರಿಯಾ ಮುಕ್ತ ರೋಗಕ್ಕೆ ಸ್ವಚ್ಛತೆ ಕಾಪಾಡಿಕೊಳ್ಳಿ ಎಂದು ಹಿರಿಯ ಅರೋಗ್ಯ ನೀರಿಕ್ಷಣ ಅಧಿಕಾರಿ ಎಂ ಆರ್ ಮಾಶ್ಯಾಳ ಸಲಹೆ ನೀಡಿದರು.ಗ್ರಾಮದ ಸಮುದಾಯ ಅರೋಗ್ಯ ಕೇಂದ್ರದಲ್ಲಿ ವಿಶ್ವ ಮಲೇರಿಯಾ ದಿನದ ಅಂಗವಾಗಿ ಹಮ್ಮಿಕೊಂಡ ಮಲೇರಿಯಾ ವಿರೋಧಿ ಮಸಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಈ ರೋಗ ನಿಯಂತ್ರಣಕ್ಕಾಗಿ ಪ್ರತಿಯೊಬ್ಬ ಸಾರ್ವಜನಿಕರು ತಮ್ಮ ಮನೆಯ ಅಕ್ಕಪಕ್ಕದಲ್ಲಿ ಗಡಸು ನೀರು ನಿಲ್ಲದಂತೆ ನಿಗಾ ವಹಿಸಬೇಕು ಮನೆಯಲ್ಲಿ ಸೊಳ್ಳೆ ಬತ್ತಿ ಪರದಿ ಉಪಯೋಗಿಸಬೇಕು ಕಿಟಗಿ ಬಾಗಿಲಿಗೆ ಸೊಳ್ಳೆ ಜಾಲರಿ ಅಳವಡಿಸಬೇಕು ಬೆಳಿಗ್ಗೆ ಮತ್ತು ಸಾಯಂಕಾಲ ಬೇವಿನ ಸೋಪ್ಪೆಯಿಂದ ಹೋಗೆ ಹಾಕಿದರೆ ಸೊಳ್ಳೆಗಳು ಮನಯೊಳಗಡೆ ಪ್ರವೇಶ ಮಾಡಲು ಅವಕಾಶ ಇರುವುದಿಲ್ಲ ಎಂದರು.ಮುನ್ನೆಚ್ಚರಿಕೆ ಕ್ರಮ: ಶೀಘ್ರ ಚಳಿ ಮತ್ತು ಆಗಾಗ ಜ್ವರ ಬರುವುದು ಹಾಗೂ ತೆಲೆ ನೋವು,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಾಲೂಕಿನ ಕತ್ನಳ್ಳಿ ಗ್ರಾಮದಲ್ಲಿ ಶನಿವಾರ 7 ನೇ ಸುತ್ತಿನ ಕಾಲುಬಾಯಿ ಜ್ವರ ಮತ್ತು ಚರ್ಮ ಗಂಟು ರೋಗ, ಲಸಿಕಾ ಕಾರ್ಯಕ್ರಮದ ಅಭಿಯಾನಕ್ಕೆ ಚಾಲನೆ ನೀಡಲಾಯಿತು.ವಿಜಯಪುರ ವಿಭಾಗಾಧಿಕಾರಿಗಳಾದ ಗುರುನಾಥ ದಡ್ಡೆ ಅವರು ಗ್ರಾಮದ ಗಣ್ಯರ ಸಮ್ಮುಖದಲ್ಲಿ, ಅಭಿಯಾನ ಕಾರ್ಯಕ್ರಮವನ್ನು ಉದ್ಘಾಟಿಸಿದರು.ಲಸಿಕಾ ಕಾರ್ಯಕ್ರಮದ ಪ್ರಯೋಜನಗಳ ಕುರಿತು ಡಾ.ಬಸವರಾಜ್ ಕನಮಡಿ ಗ್ರಾಮಸ್ಥರಿಗೆ ವಿವರಿಸಿದರು.ಈ ವೇಳೆ ಡಾ.ಸುಜಾತ ಪಾಟೀಲ್, ಡಾ.ಬಂಡಿ, LDO ಮನಗುಳಿ, ಹಿರಿಯ ಪಶುವೈದ್ಯಕೀಯ ಪರೀಕ್ಷಕ ಜುಮ್ಮನಾಳ, ಗಂಗನಲ್ಲಿ, ಸೂರ್ಯವಂಶಿ ಮತ್ತು ಸಿಬ್ಬಂದಿ ಉಪಸ್ಥಿತರಿದ್ದರು.

Read More

ಚಿಂತನೆ- ನಾಗರಾಜ ಮತ್ತಿಹಳ್ಳಮುಖ್ಯ ಉಪಾಧ್ಯಾಯರುಸರ್ಕಾರಿ ಪ್ರೌಢಶಾಲೆಕೊಟ್ಟೂರು ಉದಯರಶ್ಮಿ ದಿನಪತ್ರಿಕೆ ಹೆಸರು: ಚೆನ್ನಬಸವಣ್ಣಕಾಲ : ಕ್ರಿ.ಶ.ಹನ್ನೆರಡನೆಯ ಶತಮಾನದೊರೆತಿರುವ ವಚನಗಳು: 1776ವಚನಗಳ ಅಂಕಿತನಾಮ: ಕೂಡಲಚೆನ್ನಸಂಗಯ್ಯ / ಕೂಡಲಚೆನ್ನಸಂಗಮದೇವ ನಿಷ್ಠೆಯುಳ್ಳಾತಂಗೆ ನಿತ್ಯ ನೇಮದ ಹಂಗೇಕೆಸತ್ಯವುಳ್ಳಾತಂಗೆ ತತ್ವ ವಿಚಾರದ ಹಂಗೇಕೆಅರಿವುಳ್ಳಾತಂಗೆ ಅಗ್ಘವಣಿಯ ಹಂಗೇಕೆಮನಶುದ್ಧವುಳ್ಳವಂಗೆ ಮಂತ್ರದ ಹಂಗೇಕೆಭಾವಶುದ್ಧವುಳ್ಳವಂಗೆ ಹೂವಿನ ಹಂಗೇಕೆಕೂಡಲಚೆನ್ನಸಂಗಯ್ಯಾನಿಮ್ಮನರಿದಾತಂಗೆ ನಿಮ್ಮ ಹಂಗೇಕೆ ವಚನ ವಿಶ್ಲೇಷಣೆ ಒಳ್ಳೆಯ ನಡೆನುಡಿಯುಳ್ಳ ವ್ಯಕ್ತಿಗೆ ದೇವರನ್ನು ಪೂಜಿಸುವ ಇಲ್ಲವೇ ದೇವರ ಇರುವಿಕೆಯ ಬಗೆಗಿನ ಸಂಗತಿಗಳನ್ನು ಮನನ ಮಾಡಿಕೊಳ್ಳುವ ಅಗತ್ಯವಿಲ್ಲ ಎಂಬುದನ್ನು ಈ ವಚನದಲ್ಲಿ ಹೇಳಲಾಗಿದೆ. “ಒಳ್ಳೆಯ ನಡೆನುಡಿ“ ಎಂದರೆ ಜೀವನದಲ್ಲಿ ವ್ಯಕ್ತಿಯು ತನಗೆ ಒಳಿತನ್ನು ಬಯಸುವಂತೆಯೇ, ಸಹಮಾನವರಿಗೆ ಮತ್ತು ಸಮಾಜಕ್ಕೆ ಒಳಿತನ್ನುಂಟುಮಾಡುವಂತಹ ನಡೆನುಡಿಗಳನ್ನು ಹೊಂದಿರುವುದು.ನಿಷ್ಠೆಯುಳ್ಳಾತಂಗೆ ನಿತ್ಯನೇಮದ ಹಂಗೇಕೆ=ಜೀವನದ ವ್ಯವಹಾರಗಳಲ್ಲಿ ಸಹಮಾನವರ ಒಲವು ನಲಿವು ನಂಬಿಕೆಗೆ ಪಾತ್ರನಾಗಿ ಪ್ರಾಮಾಣಿಕತನದ ನಡೆನುಡಿಗಳಿಂದ ಬಾಳುತ್ತಿರುವ ವ್ಯಕ್ತಿಗೆ ಯಾವುದೇ ಬಗೆಯ ಜಪ ತಪ ಪೂಜೆಗಳ ಮೂಲಕ ದೇವರನ್ನು ಪೂಜಿಸಬೇಕಾದ ಅಗತ್ಯವಿಲ್ಲ;ಸತ್ಯವುಳ್ಳಾತಂಗೆ ತತ್ವವಿಚಾರದ ಹಂಗೇಕೆ=ದಿನನಿತ್ಯದ ಜೀವನದಲ್ಲಿ ಕೆಟ್ಟದ್ದನ್ನು/ಸುಳ್ಳನ್ನು/ಕಪಟತನದ ನಡೆನುಡಿಗಳನ್ನು ಬಿಟ್ಟು, ತನ್ನ ವ್ಯಕ್ತಿತ್ವದ ಇತಿಮಿತಿಗಳನ್ನು ಚೆನ್ನಾಗಿ ಅರಿತುಕೊಂಡು ಒಳ್ಳೆಯತನದಿಂದ ಬಾಳುತ್ತಿರುವ…

Read More

ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಪದವಿ ತರಗತಿಯ ಮೊದಲ ದಿನ. ಪ್ರೊಫೆಸರ್ ಒಬ್ಬರು ತರಗತಿಯನ್ನು ಪ್ರವೇಶಿಸಿ ಇಂಟ್ರೊಡಕ್ಷನ್ ಟು ಲಾ ಎಂಬ ವಿಷಯದ ಕುರಿತು ಮಕ್ಕಳಿಗೆ ಬೋಧನೆ ಮಾಡಲು ಬಂದರು. ನೇರವಾಗಿ ತರಗತಿಯನ್ನು ಪ್ರವೇಶಿಸಿದ ಅವರು ಮುಂದಿನ ಸಾಲಿನಲ್ಲಿ ಕುಳಿತ ಓರ್ವ ವಿದ್ಯಾರ್ಥಿಯನ್ನು ಉದ್ದೇಶಿಸಿ ನಿನ್ನ ಹೆಸರೇನು ಎಂದು ಕೇಳಿದರು ವಿದ್ಯಾರ್ಥಿ ತನ್ನ ಹೆಸರನ್ನು ಹೇಳಿದ. ಕೂಡಲೇ ಆ ವಿದ್ಯಾರ್ಥಿಗೆ ತನ್ನ ತರಗತಿಯಿಂದ ಹೊರಗೆ ಹೋಗಲು ಪ್ರೊಫೆಸರ್ ಆದೇಶಿಸಿದರು.ವಿದ್ಯಾರ್ಥಿಗೆ ತುಸು ಗಲಿಬಿಲಿಯಾಯಿತು.. ಅಂತೆಯೇ ಉಳಿದ ವಿದ್ಯಾರ್ಥಿಗಳು ಪರಸ್ಪರ ಒಬ್ಬರ ಮುಖ ಒಬ್ಬರು ನೋಡಿಕೊಂಡರು. ಎಲ್ಲರ ಮುಖದಲ್ಲೂ ಒಂದು ರೀತಿಯ ದಿಗಿಲು.ಸರ್ ಎಂದು ಆ ವಿದ್ಯಾರ್ಥಿ ಪ್ರೊಫೆಸರರನ್ನು ಕರೆಯಲು ಕೂಡಲೇ ನನ್ನ ತರಗತಿಯನ್ನು ಬಿಟ್ಟು ಹೊರಟು ಹೋಗು ಹೊರಗೆ ನಿಂತುಕೋ, ಇನ್ನೆಂದು ನನ್ನ ತರಗತಿಯನ್ನು ಪ್ರವೇಶಿಸುವ ಪ್ರಯತ್ನ ಮಾಡಬೇಡ ಎಂದು ಜೋರಾಗಿ ಕೂಗಿದರು.ಗಾಬರಿ ಮತ್ತು ಆತಂಕದಿಂದ ಕೂಡಿದ ವಿದ್ಯಾರ್ಥಿ ತನ್ನೆಲ್ಲ ಪರಿಕರಗಳನ್ನು ಜೋಡಿಸಿಕೊಂಡು ಕೂಡಲೇ ತರಗತಿಯಿಂದ ಹೊರಗೆ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ತಾಲ್ಲೂಕಿನ ಹುಲ್ಯಾಳ ಗುರುದೇವಾಶ್ರಮದ ಶ್ರೀಗುರುದೇವ ಸತ್ಸಂಗ ಬಳಗದ ಆಶ್ರಯದಲ್ಲಿ ಪ್ರತಿ ತಿಂಗಳ 4ನೇ ಭಾನುವಾರ ಹಮ್ಮಿಕೊಳ್ಳುವ ‘ಶ್ರೀಗುರುದೇವ ಸತ್ಸಂಗ’ ಮಾಸಿಕ ಕಾರ್ಯಕ್ರಮ ಇಂದು ಸಂಜೆ 6.00 ಗಂಟೆಗೆ ಜರುಗಲಿದೆ ಎಂದು ಹರ್ಷಾನಂದ ಮಹಾಸ್ವಾಮಿಗಳು ತಿಳಿಸಿದ್ದಾರೆ.ಮುಧೋಳ ವೈದ್ಯರು, ಸಾಹಿತಿಗಳಾದ ಡಾ.ಶಿವಾನಂದ ಕುಬಸದ ‘ಆಧುನಿಕ ಸಮಾಜದಲ್ಲಿ ಶರಣರ ಪ್ರಸ್ತುತತೆ’ ಎಂಬ ವಿಷಯ ಕುರಿತು ಅನುಭಾವ ಹಂಚಿಕೊಳ್ಳಲಿದ್ದಾರೆ. ಶ್ರೀಗುರುದೇವ ಸಂಗೀತ ಬಳಗದಿಂದ ಸಂಗೀತ ಸೇವೆ ನಡೆಯಲಿದೆ. ಆಲಬಾಳ ಗ್ರಾಮದ ಸಂಗಣ್ಣ ತೇಲಿ ಅವರು ಮಹಾಪ್ರಸಾದದ ದಾಸೋಹ ಸೇವೆ ನೆರವೇರಿಸಲಿದ್ದಾರೆ. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಸಿಂದಗಿ ಪಟ್ಟಣದ ಕಾಂಗ್ರೆಸ್ ಪಕ್ಷದ ಯುವ ಮುಖಂಡ, ಕೆಪಿಸಿಸಿ ಅಲ್ಪಸಂಖ್ಯಾತರ ರಾಜ್ಯ ಕಾರ್ಯದರ್ಶಿ ಮಹಮ್ಮದ್ ಪಟೇಲ್ ಬಿರಾದಾರ ಕಾಯಕಶ್ರೀ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು, ಶ್ರೀ ಗುರು ಪಂಚಾಕ್ಷರಿ ಪುಟ್ಟರಾಜ ಸಂಗೀತ ಶಾಲೆ, ಹಾಗೂ ಗೀತಾ ಸಂಗೀತ ಅಕಾಡೆಮಿ (ರಿ) ಟ್ರಸ್ಟ್, ಖಾದ್ರಿಯಾ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ, ಶಿವಮೊಗ್ಗ ಈ ಸಂಸ್ಥೆಗಳ ಸಹಯೋಗದಲ್ಲಿ ಇದೇ ಮೇ 27 ರಂದು ಭಾನುವಾರ ಬೆಂಗಳೂರಿನ ಕನ್ನಡ ಸಾಹಿತ್ಯ ಪರಿಷತ್ತಿನ ಅಕ್ಕಮಹಾದೇವಿ ಸಭಾಂಗಣದಲ್ಲಿ ನಡೆಯಲಿರುವ ಕಲಾ ಸಂಭ್ರಮ ಹಾಗೂ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಹಮ್ಮದ್ ಪಟೇಲ್ ರವರ ಸಾಮಾಜಿಕ ಸೇವೆಯನ್ನು ಗುರುತಿಸಿ ಈ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಗಾಯಕ ಆರ್.ಯತೀಶ್ ಕುಮಾರ್, ಬರಹಗಾರ ಡಾ.ಮಹಾಂತೇಶ ಬಿರಾದಾರ, ಚಿತ್ರ ನಟ, ಡಾ.ಸಂಗಮೇಶ ಉಪಾಸೆ, ವಾಣಿಜ್ಯ ತೆರಿಗೆಗಳ ಉಪ ಆಯುಕ್ತೆ ಸವಿತಾ ಆರ್.ಇನಾಮದಾರ, ಡಿವೈಎಸ್ಪಿ ಕು.ಉಮಾರಾಣಿ ಎಸ್ ಸೇರಿದಂತೆ ಇತರರು ವೇದಿಕೆ ಹಂಚಿಕೊಳ್ಳಲಿದ್ದಾರೆ ಎಂದು ಸಂಗೀತ…

Read More