Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ನಕಲು ಮುಕ್ತ ಪರೀಕ್ಷೆ ನಡೆಸಬೇಕು, ಅಚ್ಚುಕಟ್ಟುತನದಿಂದ ಶಿಸ್ತುಬದ್ದವಾಗಿ ಯಶಸ್ವಿಯಾಗಿ ಸೂಸುತ್ರವಾಗಿ ಪರೀಕ್ಷೆ ನಡೆಸಲಾಗುವದು ಎಂದು ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕ ಎಸ್.ಎಂ.ಅವಟಿ ಹೇಳಿದರು.ತಾಲ್ಲೂಕಿನ ಬಿಜ್ಜರಗಿ ಗ್ರಾಮದ ಮಾಣಿಕೇಶ್ವರಿ ಪ್ರೌಢ ಶಾಲೆಯಲ್ಲಿ ಗುರುವಾರ ಎಸ್ಎಸ್ಎಲ್ಸಿ ಪರೀಕ್ಷಾ ಕೇಂದ್ರದ ಕೊಠಡಿ ಮೇಲ್ವಿಚಾರಕರ ಸಭೆ ಏರ್ಪಡಿಸಿ ಅವರು ಮಾಹಿತಿ ನೀಡಿದರು.ಜಿಲ್ಲಾಧಿಕಾರಿ ಟಿ.ಭೂಬಾಲನ ಅವರ ನಿರ್ದೇಶನದಂತೆ ನಿಷ್ಪಕ್ಷವಾಗಿ ಶಾಂತವಾಗಿ ಕಾಫಿ ಮಾಡದೆ ಮಕ್ಕಳು ಪರೀಕ್ಷೆ ಬರೆಯಬೇಕು. ಮಕ್ಕಳಿಗೆ ಭಯಮುಕ್ತ ಪರೀಕ್ಷೆ ನಡೆಸಬೇಕು. ಇಡೀ ಪರೀಕ್ಷಾ ಕೇಂದ್ರವು ಸಿಸಿ ಕ್ಯಾಮರಾ ನಿಗಾದಲ್ಲಿ ಇರುವದು. ಬಿಇಓ ಕಛೇರಿಯಲ್ಲಿ 40 ಗಣಕಯಂತ್ರ, ಡಿಡಿಪಿಐ ಕಛೇರಿ 40 ಗಣಕಯಂತ್ರ, ಜಿಪಂ ಕಛೇರಿಯಲ್ಲಿ 40 ಗಣಕಯಂತ್ರ ಕಾರ್ಯ ನಿರ್ವಹಿಸುತ್ತಿವೆ. ಇವುಗಳ ನಿಗಾ ವಹಿಸಲು 40 ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿರುತ್ತಾರೆ.ಪರೀಕ್ಷೆ ನಡೆಯುವ ಒಂದು ಗಂಟೆ ಮೊದಲು ಕೊಠಡಿ ಮೇಲ್ವಿಚಾರಕರು ಪರೀಕ್ಷಾ ಕೇಂದ್ರಕ್ಕೆ ಹಾಜರಿರಬೇಕು. ಅರ್ಧ ಗಂಟೆ ಮೊದಲೆ ಮೇಲ್ವಿಚಾರಕರು ಕೊಠಡಿ ಒಳಗೆ ಇರಬೇಕು. ಪ್ರತಿ ಮಗುವಿನ ಹತ್ತಿರ ಚೀಟಿ ಇರದೇ ಇರುವದನ್ನು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಸವನ ಬಾಗೇವಾಡಿ ತಾಲ್ಲೂಕಿನ ಮನಗೂಳಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿ ರೊಚ್ಚು ನೀರು ಸಂಸ್ಕರಣಾ ಘಟಕ (ಎಸ್ ಟಿಪಿ) ನಿರ್ಮಿಸಲು ಮನಗೂಳಿ ಗ್ರಾಮದ ರಿಸನಂ.೩೫೬ರಲ್ಲಿ ೩ ಎಕರೆ ಜಮೀನವನ್ನು ಮಂಜೂರಿಸಲು ಉದ್ದೇಶಿಸಲಾಗಿದ್ದು, ಈ ಕುರಿತು ಆಕ್ಷೇಪಣೆ ಇದಲ್ಲಿ ಈ ಅದಿಸೂಚನೆಯ ಮೂವತ್ತು ದಿನಗಳಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಆಕ್ಷೇಪಣೆ ಸಲ್ಲಿಸಬಹುದು ಎಂದು ಜಿಲ್ಲಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೪-೨೫ನೇ ಸಾಲಿನಲ್ಲಿ ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ವಿದ್ಯಾರ್ಥಿಗಳು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ನೀಡಲಾಗುತ್ತಿರುವ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ ೩೧ರವರೆಗೆ ವಿಸ್ತರಿಸಲಾಗಿದೆ.https://ssp.postmatric.karnataka.gov.inಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್https://dom.karnataka.gov.in ಹಾಗೂ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿಗಳ ಕಚೇರಿ,ಮೌಲಾನಾ ಆಝಾದ ಭವನ,ಜಿಲ್ಲಾ ವಿಜ್ಞಾನ ಚಟುವಟಿಕೆ ಕೇಂದ್ರದ ಹತ್ತಿರ,ಜಿಲ್ಲಾ ಪಂಚಾಯತಿ ರಸ್ತೆ, ಕನಕದಾಸ ಬಡಾವಣೆಯಲ್ಲಿರುವ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಬುಧವಾರ ನಗರದ ವಿವಿಧೆಡೆ ದಿಢೀರ ಭೇಟಿ ನೀಡಿ ಪರಿಶೀಲನೆ ನಡೆಸಿದರು. ನಗರದಲ್ಲಿರುವ ಐತಿಹಾಸಿಕ ಬಾವಡಿಗಳನ್ನು ಪುನರುಜ್ಜೀವನಗೊಳಿಸುವ ನಿಟ್ಟಿನಲ್ಲಿ ವಾರ್ಡ ನಂಬರ್ ೨೦ರಲ್ಲಿ ಬರುವ ಬಡಿ ಬಾವಡಿಯ ಸ್ವಚ್ಛತೆ ಹಾಗೂ ಕಲುಷಿತ ನೀರು ಸೇರದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು.ಈ ಬಾವಿಯ ನೀರನ್ನು ಉದ್ಯಾನವನ ಹಾಗೂ ದಿನಬಳಕೆಗೆ ಉಪಯೋಗಿಸಿಕೊಳ್ಳಲು ಅನುಕೂಲ ಮಾಡಿಕೊಡಬೇಕೆಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ವಾರ್ಡ್ ೨೨ರಲ್ಲಿ ಬರುವ ಜಿಲ್ಲಾ ಪಂಚಾಯತ ಕಛೇರಿ ಎದುರುಗಡೆ ಇರುವ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳ ಕಚೇರಿ, ತಹಶೀಲ್ದಾರ ಕಛೇರಿಯ ಹಿಂಭಾಗದಲ್ಲಿರುವ ಹಾಗೂ ಬಾಲ ಭವನ ಆವರಣದಲ್ಲಿರುವ ಮೂರು ತೆರೆದ ಬಾವಿಗಳನ್ನು ಪರಿಶೀಲಿಸಿದ ಅವರು, ಬಾವಿಯಲ್ಲಿರುವ ಹೂಳನ್ನು ತೆರವುಗೊಳಿಸಿ, ಸ್ವಚ್ಛಗೊಳಿಸಬೇಕು. ನೀರನ್ನು ಉದ್ಯಾನವನ ಮತ್ತು ಕುಡಿಯಲು ಹೊರತುಪಡಿಸಿ, ದಿನಬಳಕೆಗೆ ಉಪಯೋಗಿಸಲು ಕ್ರಮ ವಹಿಸುವಂತೆ ಮಹಾನಗರ ಪಾಲಿಕೆ ಆಯುಕ್ತರಿಗೆ ಸೂಚನೆ ನೀಡಿದರು.ನಗರದ ಝೋನ-೨೧ರ ವಾರ್ಡ್ ನಂ.೨೦ರಲ್ಲಿ ಬರುವ ಬಡಿ ಬಾವಡಿ ಹತ್ತಿರದಲ್ಲಿರುವ ಸಾರ್ವಜನಿಕರಿಗೆ ಕುಡಿಯುವ ನೀರು ಸರಬರಾಜು ಮಾಡುತ್ತಿರುವುದನ್ನು ಪರಿಶೀಲಿಸಿದ ಅವರು…

Read More

ಸೂಕ್ತ ಕ್ರಮ ಕೈಗೊಳ್ಳುವಂತೆ ವಿಧಾನ ಪರಿಷತ್ ಶಾಸಕ ಸುನೀಲಗೌಡ ಪಾಟೀಲರಿಂದ ಮುಖ್ಯಮಂತ್ರಿಗೆ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕುರಿಗಾಹಿಗಳ ಮೇಲಾಗುತ್ತಿರುವ ದೌರ್ಜನ್ಯ ತಡೆಗಟ್ಟಲು ಮತ್ತು ಸಂತ್ರಸ್ತ ಕುಟುಂಬಗಳಿಗೆ ಪರಿಹಾರ ಒದಗಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ವಿಧಾನ ಪರಿಷತ ಶಾಸಕ ಸುನೀಲಗೌಡ ಪಾಟೀಲ ಅವರು ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಅವರಿಗೆ ಮನವಿ ಮಾಡಿದ್ದಾರೆ.ರಾಜ್ಯದಲ್ಲಿ ಅದರಲ್ಲೂ ಉತ್ತರ ಕರ್ನಾಟಕದಲ್ಲಿ ಕುರಿಗಾಯಿಗಳ ಸಂಖ್ಯೆ ಹೆಚ್ಚಾಗಿದೆ. ಈ ಕುರಿಗಾಯಿಗಳು ತಮ್ಮ‌ ಕುರಿಗಳನ್ನು ಮೇಯಿಸಲು‌ ಕುರಿ ಹಿಂಡಿಗಳೊಂದಿಗೆ ಊರಿಂದೂರಿಗೆ ಸಂಸಾರ ಸಮೇತ ಅಲೆದಾಡುತ್ತಾರೆ. ಇತ್ತೀಚಿನ ದಿನಗಳಲ್ಲಿ ಕುರಿಗಳ ಬೆಲೆ ಹೆಚ್ಚಾಗಿದ್ದು ಕಳ್ಳರಿಗೆ ವರದಾನವಾಗಿದೆ. ಇಂಥ‌ ಸಮಯದಲ್ಲಿ ಗ್ರಾಮೀಣ ಭಾಗದಲ್ಲಿ ವಾಸ್ತವ್ಯ ಹೂಡಿರುವ ಸಂದರ್ಭದಲ್ಲಿ ಕುರಿಗಳ್ಳರ ಹಾವಳಿ ಹೆಚ್ಚಾಗಿದೆ.ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಉಗಲವಾಟ ಗ್ರಾಮದ ಕುರಿಗಾಯಿ ಯುವಕ ಶರಣಪ್ಪ ಬಸಪ್ಪ ಜಮ್ಮನಗಟ್ಟಿ ಇತ್ತೀಚೆಗೆ ಕುರಿಗಳ ಹಿಂಡಿನೊಂದಿಗೆ ವಾಸ್ತವ್ಯ ಮಾಡಿದ್ದಾಗ ಕಳ್ಳತನಕ್ಕೆ ಬಂದಿದ್ದ ಮೂರು ಜನ ಕುರಿಗಳ್ಳರನ್ನು ತಡೆಯಲು ಹೋದಾಗ ಅವನನ್ನು ಕೊಲೆ ಮಾಡಿ‌ ಕುರಿಗಳನ್ನು ಕದ್ದುಕೊಂಡು ಹೋಗಿದ್ದಾರೆ. ಇಂಥ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಮಾ ೨೩ ರಂದು ಬೆಳಿಗ್ಗೆ ೧೦:೩೦ಕ್ಕೆ ಪಟ್ಟಣದ ಟಾಪ್ ಇನ್ ಟೌನ್ ಹಾಲ್ ನಲ್ಲಿ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ತಾಲೂಕು ಘಟಕದ ಪದಗ್ರಹಣ ಹಾಗೂ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಂಡಿದ್ದು ಪಟ್ಟಣದ ಎಲ್ಲ ನಾಗರಿಕರು ಆಗಮಿಸುವಂತೆ ಮಹಾಸಭಾದ ತಾಲೂಕು ಅಧ್ಯಕ್ಷ ವೆಂಕನಗೌಡ ಪಾಟೀಲ ವಿನಂತಿಸಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಈ ಕುರಿತು ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು ಸಮಾರಂಭವನ್ನು ರಾಜ್ಯ ಸಾಬೂನು ಮತ್ತು ಮಾರ್ಜಕ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಸಿ.ಎಸ್.ನಾಡಗೌಡ ಅಪ್ಪಾಜಿ ಉದ್ಘಾಟಿಸಲಿದ್ದು, ಮಹಾಸಭಾದ ರಾಷ್ಟ್ರೀಯ ಉಪಾಧ್ಯಕ್ಷ ಸಿದ್ರಾಮಪ್ಪ ಉಪ್ಪಿನ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯತಿಥಿಗಳಾಗಿ ವಿಶ್ರಾಂತ ಪೊಲೀಸ್ ಮಹಾ ನಿರ್ದೇಶಕರು ಹಾಗೂ ಮಹಾಸಭಾದ ರಾಜ್ಯಾಧ್ಯಕ್ಷ ಶಂಕರ ಬಿದರಿ, ಅತಿಥಿಗಳಾಗಿ ಮಹಾಸಭಾದ ಜಿಲ್ಲಾಧ್ಯಕ್ಷ ವಿ.ಸಿ.ನಾಗಠಾಣ, ಜಿಲ್ಲಾ ಉಸ್ತುವಾರಿ ರಾಜಶೇಖರ ಸೀರಿ, ಬಾಪುಗೌಡ ಪಾಟೀಲ, ಮಲ್ಲನಗೌಡ ಬಿರಾದಾರ ಆಗಮಿಸಲಿದ್ದಾರೆ. ಸಮಾರಂಭದಲ್ಲಿ ಅವಿಭಕ್ತ ಕುಟುಂಬದ ಬಸವಂತ್ರಾಯ ಗೋಳಿ, ಆದರ್ಶ ರೈತ ಶರಣಪ್ಪ ಗೂಳಿ, ಕ್ರಿಯಾಶೀಲ ಶಿಕ್ಷಕ ಬಸವರಾಜ ಲಮಾಣಿ, ದೇಶ…

Read More

ಲೇಖನ- ಮಲಿಕ್ ಎಲ್ ಜಮಾದಾರಉಪನ್ಯಾಸಕರುವಿಜಯಪುರಮೊ:9743129744 ಉದಯರಶ್ಮಿ ದಿನಪತ್ರಿಕೆ ಈ ಒಂದು ಕಥಾ ಸಂಕಲನದಲ್ಲಿ ವಿಶೇಷವಾಗಿ ಆನಂದ ಸಾಯುವುದಿಲ್ಲ ಎಂಬುದು ಅತ್ಯಂತ ಮನಮುಟ್ಟುವಂತಿದೆ ಮತ್ತು ಸರ್ಮಿಳಾ ಎಂಬ ಯುವತಿಯ ಮೇಲಿನ ಅನ್ಯಾಯವು ಯಾವ ರೀತಿ ಬಲಿ ತೆಗೆದುಕೊಳ್ಳುವುದನ್ನು ಅತ್ಯಂತ ಭಾವನಾತ್ಮಕವಾಗಿ ಲೇಖಕರು ಬಿಚ್ಚಿಟ್ಟಿದ್ದಾರೆ.. ಪ್ರತಿಯೊಬ್ಬರು ಓದಲೇ ಬೇಕಾದಂತಹ ಒಂದು ಅತ್ಯದ್ಭುತ ಕಥಾ ಸಂಕಲನವು ಪ್ರತಿಯೊಬ್ಬರಿಗೂ ಖಂಡಿತವಾಗಿಯೂ ಸ್ಪೂರ್ತಿಯಾಗಬಲ್ಲದು. ಡಾ.ಎಸ್.ಟಿ ಮೇರವಾಡೆ ಗುರುಗಳು ಇಂತಹ ಇನ್ನು ಹಲವಾರು ಪುಸ್ತಕಗಳು ರಚನೆ ಮತ್ತು ಕನ್ನಡಕ್ಕೆ ಅನುವಾದ ಮಾಡಿ ಸಾಹಿತ್ಯಾಸಕ್ತರ ಜ್ಞಾನ ದಾಹ ಮತ್ತು ಮನ ತಣಿಸುವಲ್ಲಿ ಕಾರ್ಯಪ್ರವೃತ್ತರಾಗಲಿ ಎಂದು ಆಶಿಸುವೆ.ಅನುವಾದಕರುಡಾ.ಎಸ್.ಟಿ ಮೇರವಾಡೆಪ್ರಾಚಾರ್ಯರು, ಚಾಣಕ್ಯ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ವಿಜಯಪುರ – ಮಲಿಕ್ ಎಲ್ ಜಮಾದಾರಉಪನ್ಯಾಸಕರುವಿಜಯಪುರಮೊ:9743129744

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಸಾರಿಗೆ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿದ ಘಟನೆ ತಾಲೂಕಿನ ಗೆದ್ದಲಮರಿ ಬಳಿ ನಡೆದಿದೆ.ಬಾಗಲಕೋಟೆ ಡಿಪೋ ನ ಬಸ್ ಇದಾಗಿದ್ದು ಬಸ್ಸಿನಲ್ಲಿ ೫-೬ ಜನ ಮಾತ್ರ ಪ್ರಯಾಣಿಕರಿದ್ದು ಕೆಲವರಿಗೆ ಚಿಕ್ಕ ಪುಟ್ಟ ಗಾಯಗಳಾಗಿದ್ದು ಅದೃಷ್ಟವಶಾತ್ ಯಾರಿಗೂ ಪ್ರಾಣಾಪಾಯಗಳಾಗಿಲ್ಲ. ರಸ್ತೆಯ ಮಧ್ಯೆ ದಿಢೀರನೆ ವೃದ್ಧೆಯೊಬ್ಬಳು ಬಂದಾಗ ಆಕೆಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಈ ಅನಾಹುತ ಸಂಭವಿಸಿದೆ ಎಂದು ಕೆಎಸ್‌ಆರ್‌ಟಿಸಿ ತಾಲೂಕು ಘಟಕದ ವ್ಯವಸ್ಥಾಪಕ ಎ.ಎಚ್.ಮದಭಾವಿ ತಿಳಿಸಿದ್ದಾರೆ.ಘಟನಾ ಸ್ಥಳಕ್ಕೆ ಪಿಎಸ್‌ಐ ಸಂಜಯ ತಿಪರೆಡ್ಡಿ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಅಕ್ರಮವಾಗಿ ಮಣ್ಣು ಸಾಗಿಸುತ್ತಿದ್ದ ೭ ಜನರ ಮೇಲೆ ಇಲ್ಲಿನ ಪಿಎಸ್‌ಐ ಸಂಜಯ ತಿಪರೆಡ್ಡಿ ಪ್ರಕರಣ ದಾಖಲಿಸಿದ್ದಾರೆ.ತಾಲೂಕಿನ ಅಮರಗೋಳ ಗ್ರಾಮದ ಕೃಷ್ಣಾ ನದಿಯಲ್ಲಿನ ಕಪ್ಪು ಮಣ್ಣನ್ನು ಯಾವುದೇ ಅನುಮತಿ ಅಥವಾ ರಾಯಲ್ಟಿ ಇಲ್ಲದೇ ಕಳುವಿನಿಂದ ಅಕ್ರಮವಾಗಿ ತುಂಬುತ್ತಿರುವಾಗ ಸಿಕ್ಕಿದ್ದು ತಾಲೂಕಿನ ಢವಳಗಿ ಗ್ರಾಮದ ರಮೇಶ ಬೀರಗೊಂಡ, ಅರಸನಾಳ ಗ್ರಾಮದ ಮಹೇಶ ಮೂಲಿಮನಿ ಮತ್ತು ಮಲ್ಲೇಶ ಕೇಸಾಪೂರ, ಬಾಗಲಕೋಟೆಯ ಇಳಕಲ್ಲ ತಾಲೂಕಿನ ಶಿವನಗುತ್ತಿ ಗ್ರಾಮದ ಮಹಾಂತೇಶ ಮೆಣಸಗೇರಿ, ಮರಟಗೇರಿ ಗ್ರಾಮದ ರೇಣುಕಾ ಯರಜೇರಿ ಮತ್ತು ಹಣಮಂತ ಯರಜೇರಿ, ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಕಕ್ಕೇರಾ ಗ್ರಾಮದ ಮಾಳಿಂಗರಾಯ ಐದುಬಾವಿ ಇವರ ಮೇಲೆ ಪ್ರಕರಣ ದಾಖಲಾಗಿದ್ದು ೧ ಹಿಟಾಚಿ, ೩ಟಿಪ್ಪರ್ ಗಳನ್ನು ಯಶಕ್ಕೆ ಪಡೆಯಲಾಗಿದೆ. ದೂರು ನೀಡಿದ್ದರೂ ಕ್ರಮವಿಲ್ಲ ಅಕ್ರಮ ಮಣ್ಣು ಸಾಗಾಣಿಕೆ ತಡೆಯುವಂತೆ ಒತ್ತಾಯಿಸಿ ಇಲ್ಲಿನ ತಹಸೀಲ್ದಾರ ಕಚೇರಿಯ ಆವರಣದಲ್ಲಿ ಮಾ೧೮ ರಂದು ಯುವಜನ ಸೇನೆಯ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ಮತ್ತು ಹೋರಾಟಗಾರ ಸಂಗಯ್ಯ ಸಾರಂಗಮಠ ತಮ್ಮ ಬೆಂಬಲಿಗರೊಂದಿಗೆ ಒಂದು…

Read More

ಪ್ರಸ್ತಾವಿತ ಮಸೂದೆ ಅಸಂವಿಧಾನಿಕ | ಮಸೂದೆಗೆ ಸಹಿ ಹಾಕದಂತೆ ರಾಜ್ಯಪಾಲರಿಗೆ ಬಿಜೆಪಿ ಮನವಿ ಬೆಂಗಳೂರು: ಬಿಜೆಪಿ ನಾಯಕರ ನಿಯೋಗವು ಬುಧವಾರ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ, “ಗ್ರೇಟರ್ ಬೆಂಗಳೂರು ಮಸೂದೆಗೆ ಅಂಕಿತ ಹಾಕಬೇಡಿ” ಎಂದು ಮನವಿ ಮಾಡಿದೆ.ಪ್ರಸ್ತಾವಿತ ಮಸೂದೆಯು “ಅಸಂವಿಧಾನಿಕ”ವಾಗಿದ್ದು, ನಗರ ಆಡಳಿತದ ಪ್ರಜಾಪ್ರಭುತ್ವ ರಚನೆಯನ್ನು ರಕ್ಷಿಸಲು, ಬೆಂಗಳೂರಿನ ಸಾಂಸ್ಕೃತಿಕ ಗುರುತನ್ನು ಕಾಪಾಡಿಕೊಳ್ಳಲು ಮತ್ತು ದಕ್ಷ ನಗರ ಆಡಳಿತವನ್ನು ಖಚಿತಪಡಿಸಿಕೊಳ್ಳಲು ರಾಜ್ಯಪಾಲರು, ಗ್ರೇಟರ್ ಬೆಂಗಳೂರು ಮಸೂದೆ ತಿರಸ್ಕರಿಸಬೇಕು ಎಂದು ಬಿಜೆಪಿ ಕೇಳಿಕೊಂಡಿದೆ.ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯನ್ನು ಏಳು ಮಹಾನಗರ ಪಾಲಿಕೆಗಳಾಗಿ ವಿಭಜಿಸುವ ಗ್ರೇಟರ್ ಬೆಂಗಳೂರು ಮಸೂದೆಯನ್ನು ಇತ್ತೀಚೆಗೆ ರಾಜ್ಯ ವಿಧಾನಮಂಡಲದ ಎರಡೂ ಸದನಗಳಲ್ಲಿ ಅಂಗೀಕರಿಸಿಲಾಗಿದೆ.ವಿಧಾನಮಂಡಲದ ಎರಡೂ ಸದನಗಳಲ್ಲಿ ಮಸೂದೆ ಅಂಗೀಕಾರವಾಗಿದ್ದು, ಈಗ ಅದನ್ನು ರಾಜ್ಯಪಾಲರ ಒಪ್ಪಿಗೆಗಾಗಿ ಕಳುಹಿಸಲಾಗುತ್ತಿದೆ.ರಾಜ್ಯಪಾಲರ ಭೇಟಿ ಬಳಿಕ ಮಾತನಾಡಿದ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು, ನಿಯಮಾನುಸಾರವಿಲ್ಲದೆ ಅಂಗೀಕರಿಸಿರುವ ಗ್ರೇಟರ್ ಬೆಂಗಳೂರು ಮಸೂದೆ ಪರಿಷ್ಕರಿಸುವಂತೆ ಮನವಿ ಮಾಡಿದ್ದೇವೆ. ಬೆಂಗಳೂರನ್ನು ಒಡೆಯಬಾರದು. ಈ ವಿಚಾರವನ್ನ ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಟ್ಟಿದ್ದೇವೆ.…

Read More