Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ನಗರ ಶಿಶು ಅಭಿವೃದ್ಧಿ ಯೋಜನೆಯ ವ್ಯಾಪ್ತಿಯಲ್ಲಿ ಬರುವ ಉತ್ನಾಳ ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಖಾಲಿ ಇದ್ದ ೦೧ ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಗೌರವ ಧನ ಆಧಾರದ ಮೇಲೆ ಕಲಬುರಗಿ ಉಚ್ಛನ್ಯಾಯಾಲಯದ ರಿಟ್ ಅಪೀಲ್ ಆದೇಶದನ್ವಯ ಅಂತಿಮವಾಗಿ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿಯನ್ನು ವಿಜಯಪುರ ನಗರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿ ಪ್ರಕಟಿಸಲಾಗಿದೆ ಎಂದು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಸಾಹಿತ್ಯ ಅಕಾಡೆಮಿಯು ಹಾವೇರಿ ಜಿಲ್ಲೆಯ ಗೊಟಗೋಡಿ ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಇವರ ಸಹಯೋಗದಲ್ಲಿ ಗಿರಿಜನ ಉಪಯೋಜನೆಯಡಿ ಕನ್ನಡ ಸಾಹಿತ್ಯ ಮತ್ತು ಸಾಂವಿಧಾನಿಕ ಮೌಲ್ಯಗಳು ಕುರಿತಾಗಿ ೦೩ ದಿನಗಳ ಕಮ್ಮಟವನ್ನು ಏಪ್ರಿಲ್ ೨೧, ೨೨ ಮತ್ತು ೨೩ ರಂದು ಕರ್ನಾಟಕ ಜಾನಪದ ವಿಶ್ವವಿದ್ಯಾಲಯ ಗೊಟಗೋಡಿಯಲ್ಲಿ ನಡೆಸಲು ಉದ್ದೇಶಿಸಿದ್ದು, ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಏಪ್ರಿಲ್ ೦೫ ಕೊನೆಯದಿನವಾಗಿದೆ. ೨೦ ರಿಂದ ೪೫ ವರ್ಷ ವಯಸ್ಸುಳ್ಳ ಪರಿಶಿಷ್ಟ ಪಂಗಡಕ್ಕೆ ಸೇರಿದ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್ಸೈಟ್ http://karnatakasahithyaacademy.org ಮೂಲಕ ವಿವರಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿಯ ರಿಜಿಸ್ಟ್ರಾರ ಕರಿಯಪ್ಪ ಎನ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ವಿಜಯಪುರ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ೨೯ ಕೇಂದ್ರಗಳಲ್ಲಿ ಜರುಗಲಿರುವ ಆದರ್ಶ ವಿದ್ಯಾಲಯಗಳ ೬ನೇ ತರಗತಿಯ ಪ್ರವೇಶ ಪರೀಕ್ಷೆಗಳನ್ನು ಅಚ್ಚುಕಟ್ಟಾಗಿ ಹಾಗೂ ಪಾರದರ್ಶಕವಾಗಿ ನಡೆಸುವಂತೆ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ತಿಳಿಸಿದರು.ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ೨೦೨೫-೨೬ನೇ ಸಾಲಿನ ಆದರ್ಶ ವಿದ್ಯಾಲಯಗಳ ಪ್ರವೇಶ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ, ಜಿಲ್ಲೆಯ ಬಸವನ ಬಾಗೇವಾಡಿ, ಇಂಡಿ, ಮುದ್ದೇಬಿಹಾಳ, ಸಿಂದಗಿ ಹಾಗೂ ವಿಜಯಪುರ ತಾಲೂಕಿನ ಒಟ್ಟು ೨೯ ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ ೨೩ರಂದು ಆದರ್ಶ ವಿದ್ಯಾಲಯಗಳ ೬ನೇ ತರಗತಿಯ ಪ್ರವೇಶ ಪರೀಕ್ಷೆಗಳು ಜರುಗಲಿವೆ. ಪರೀಕ್ಷೆಗೆ ನಿಯೋಜನೆಗೊಂಡ ಸಿಬ್ಬಂದಿಗಳು ಕಡ್ಡಾಯವಾಗಿ ಗುರುತಿನ ಚೀಟಿಯೊಂದಿಗೆ ತಾವು ಕರ್ತವ್ಯ ನಿರ್ವಹಿಸಬೇಕು. ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಕಡ್ಡಾಯವಾಗಿ ತಮ್ಮ ಗುರುತಿನ ಚೀಟಿಯನ್ನು ಆನ್‌ಲೈನ್ ಮುಖಾಂತರ ಪಡೆದುಕೊಂಡು ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕು. ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀ. ಪ್ರದೇಶ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿಲಾಗಿದೆ. ಅಂದು ಬೆಳಿಗ್ಗೆ ೯…

Read More

ವಿಜಯಪುರದ ಪಿ.ಎಸ್.ಕಡೇಮನಿ, ಮೈಸೂರಿನ ಡಾ.ವಿಠ್ಠಲರಡ್ಡಿ ಚುಳಕಿ, ಹಾಸನದ ಬಿ ಎಸ್ ದೇಸಾಯಿ, ತುಮಕೂರಿನ ಕಿಶೋರ್ ಕುಮಾರ್ ಕಲಾಕೃತಿಗಳ ಸಮೂಹ ಚಿತ್ರಕಲಾ ಪ್ರದರ್ಶನ ಉದಯರಶ್ಮಿ ದಿನಪತ್ರಿಕೆ ಮುಂಬಯಿ: ಮಹಾನಗರದ ಜಹಾಂಗೀರ್ ಆರ್ಟ್ ಗ್ಯಾಲರಿಯಲ್ಲಿ ಕರುನಾಡಿನ ಕಲಾವಿದರ ಸಮೂಹ ಚಿತ್ರಕಲಾ ಪ್ರದರ್ಶನ “ಮುಂಬೈನ ಜಹಾಂಗೀರ್ ಆರ್ಟ್ ಗ್ಯಾಲರಿಯಲ್ಲಿ, ಆರ್ಟ್ ಫಾರ್ ಇಂಟಿಗ್ರಿಟಿ” ಎಂಬ ಉದಾತ್ತ ಶಿರೋನಾಮೆಯ ಅಡಿಯಲ್ಲಿ ಕರುನಾಡಿನ ನಾಲ್ವರು ಹಿರಿಯ ಕಲಾವಿದರ ಸಮೂಹ ಚಿತ್ರಕಲಾ ಪ್ರದರ್ಶನವನ್ನು ಮುಂಬಯಿಯ ಖ್ಯಾತ ಕಲಾವಿದ ಮನೋಜ್ ಕುಮಾರ್ ಸಾಕಳೆ ಉದ್ಘಾಟಿಸಿದರು.ಈ ವೇಳೆ ಮಾತನಾಡಿದ ಅವರು, ಕರುನಾಡಿನ ನಾಲ್ವರು ಹಿರಿಯ ಕಲಾವಿದರು ರಚಿಸಿದ ಕಲಾಕೃತಿಗಳ ಕುರಿತು ಸದಭಿಪ್ರಾಯ ವ್ಯಕ್ತಪಡಿಸಿದರು.ಕರ್ನಾಟಕದ ಎಲ್ಲ ಹಿರಿಯ ಕಲಾವಿದರ ಕಲಾಕೃತಿಗಳು ಅಂತರಾಷ್ಟ್ರೀಯ ಮಟ್ಟದಲ್ಲಿ ರಚನೆಯಾಗಿವೆ ಎಂದ ಅವರು ಕಲಾವಿದರಾದ ಮೈಸೂರಿನ ಡಾ. ವಿಠ್ಠಲರಡ್ಡಿ ಚುಳಕಿ, ಹಾಸನದ ಬಿ ಎಸ್ ದೇಸಾಯಿ, ವಿಜಯಪುರದ ಪಿ.ಎಸ್.ಕಡೇಮನಿ, ತುಮಕೂರಿನ ಕಿಶೋರ್ ಕುಮಾರ್ ಅವರ ಕೃತಿಗಳ ಕುರಿತು ಶ್ಲಾಘಿಸಿದರು.ಮುಖ್ಯ ಅತಿಥಿಗಳಾಗಿ ಖ್ಯಾತ ಯುವಕಲಾವಿದ, ಕನ್ನಡಿಗರ ಹಾಗೂ ಮರಾಠಿಗರ ಹೃದಯ ಬೆಸೆದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಾಲ್ಲೂಕಿನ ಕಗ್ಗೋಡ ಆದರ್ಶ ವಿದ್ಯಾಲಯದ (ಆರ್.ಎಂ.ಎಸ್.ಎ) ಶಾಲೆಯ 6ನೇ ತರಗತಿ ಪ್ರವೇಶ ಪರೀಕ್ಷೆ ಮಾರ್ಚ್ 23ರಂದು ನಡೆಯಲಿದ್ದು ಈಗಾಗಲೇ ಅರ್ಜಿ ಸಲ್ಲಿಸಿದ ವಿದ್ಯಾರ್ಥಿಗಳು ಆನ್ಲೈನ್ ನಲ್ಲಿ ಪ್ರವೇಶ ಪತ್ರ ಡೌನ್ಲೋಡ್ ಮಾಡಿಕೊಂಡು ಪರೀಕ್ಷೆಗೆ ಹಾಜರಾಗುವದು.www.School education.kar. nic.in ಅಥವಾ www.Vidyavahini.Karnataka.gov.in ನಲ್ಲಿ ಪ್ರವೇಶ ಪತ್ರ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಆದರ್ಶ ವಿದ್ಯಾಲಯದ ಮುಖ್ಯೋಪಾಧ್ಯಾಯನಿ ಶ್ರೀಮತಿ ಶಿಕ್ಷಕ ಎಫ್. ಬಿ. ಹತ್ತರಕಿಹಾಳ ( 9902716236) ಪರೀಕ್ಷೆ ನೋಡಲ್ ಪ್ರಭು ಬಿರಾದಾರ( 9880832448) ಅವರನ್ನು ಸಂಪರ್ಕಿಸಬಹುದು.ಎಕ್ಸಲೆಂಟ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಇಟ್ಟಂಗಿಹಾಳ ರಸ್ತೆ ವಿಜಯಪುರ, ವೇದ ಅಕಾಡೆಮಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಇಟ್ಟಂಗಿಹಾಳ ರಸ್ತೆ, ನೊಬೆಲ್ ವಿಜನ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಇಟ್ಟಂಗಿಹಾಳ್ ರಸ್ತೆ, ತುಂಗಳ ಆಂಗ್ಲ ಮಾಧ್ಯಮ ಪ್ರೌಢಶಾಲೆ ಇಟ್ಟಂಗಿಹಾಳ್ ರಸ್ತೆ ಹಾಗೂ ಸರಸ್ವತಿ ಆಂಗ್ಲ ಮಾಧ್ಯಮ ಪ್ರೌಢಶಾಲೆ ಬರಟಗಿ ರಸ್ತೆ ವಿಜಯಪುರ ಈ ಆರು ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲ್ಲಿದೆ ಎಂದು ಗ್ರಾಮೀಣವಲಯದ ಬಿಇಓ ಶ್ರೀಮತಿ ಪ್ರಮೋದಿನಿ…

Read More

21 ಪರೀಕ್ಷಾ ಕೇಂದ್ರಗಳು, ಪರೀಕ್ಷೆ ಬರೆಯುವ 7217 ವಿಧ್ಯಾರ್ಥಿಗಳು ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಬರುವ ಮಾರ್ಚ್ 21 ರಿಂದ ಆರಂಭವಾಗುವ ಎಸ್ಎಸ್ಎಲ್ಸಿ ಪರೀಕ್ಷೆಗಳನ್ನು ನಕಲು ಮುಕ್ತ ಪರೀಕ್ಷೆಯಾಗಿ ನಡೆಸಲು ವಿಜಯಪುರ ಗ್ರಾಮೀಣವಲಯ, ತಿಕೋಟಾ ಹಾಗೂ ಬಬಲೇಶ್ವರ ತಾಲ್ಲೂಕಿನ 21 ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ ಎಂದು ಬಿಇಓ ಪ್ರಮೋದಿನಿ ಬಳೋಲಮಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ವಿಜಯಪುರ ಗ್ರಾಮೀಣವಲಯ ವ್ಯಾಪ್ತಿಯ 21 ಕೇಂದ್ರಗಳಲ್ಲಿ 7217 ವಿಧ್ಯಾರ್ಥಿಗಳು ಪರೀಕ್ಷೆ ಬರೆಯಲು ಸಜ್ಜಾಗಿದ್ದಾರೆ. ಪರೀಕ್ಷಾ ಕೇಂದ್ರ ಹಾಗೂ ಎಲ್ಲ ಕೊಠಡಿಗಳು ವೇಬಕಾಸ್ಟಿಂಗ್ ವ್ಯಾಪ್ತಿಗೆ ಒಳಪಟ್ಟಿದ್ದು ಸಿಸಿ ಕ್ಯಾಮರಾ ನಿಗಾ ವಹಿಸಲಿವೆ. ನಕಲು ತಡೆಗೆ ವೆಬ್ ಕಾಸ್ಟಿಂಗ್ ವೀಕ್ಷಣೆಯನ್ನು ಜಿಲ್ಲಾ ಪಂಚಾಯತಿ ಕಛೇರಿ, ಡಿಡಿಪಿಐ ಕಛೇರಿ, ಬಿಇಓ ಕಛೇರಿಗಲ್ಲಿ ಅಧಿಕಾರಿ ವರ್ಗ ವೀಕ್ಷಣೆ ಮಾಡುತ್ತಿರುತ್ತಾರೆ.ಪರೀಕ್ಷಾ ಕೇಂದ್ರದ ಎರಡು ನೂರೂ ಮೀಟರ್ ಸುತ್ತಲೂ ನಿಷೇಧಾಜ್ಞೆ ಜಾರಿ ಮಾಡಿ ಪೋಲಿಸ್ ಬಂದೋಬಸ್ತ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷೆಗಳು ಅಚ್ಚುಕಟ್ಟಾಗಿ ನಡೆಯುವಾಗ ನಕಲಿಗೆ ಸಹಕರಿಸುವವರ ಮೇಲೆ ಕಾನೂನು ಕ್ರಮ ಕೈಗೊಂಡು ಎಪ್ಐಆರ್ ದಾಖಲಿಸಲಾಗುವದು.…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಸರ್ಕಾರ ಎನ್‌ಎಸ್‌ಎಸ್ ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಎನ್‌ಎಸ್‌ಎಸ್ ಪ್ರಾದೇಶಿಕ ನಿರ್ದೇಶನಾಲಯ, ಬೆಂಗಳೂರು ಭಾರತ ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಸಹಯೋಗದಲ್ಲಿ ಇದೇ. ಮಾ ೨೧ ರಿಂದ ೨೭ ರವರೆಗೆ ‘ರಾಷ್ಟ್ರೀಯ ಐಕ್ಯತಾ ಶಿಬಿರ-೨೦೨೫’ ಕಾರ್ಯಕ್ರಮವನ್ನು ಮಹಿಳಾ ವಿವಿಯ ಕನ್ನಡ ಸಭಾಭವನದಲ್ಲಿ ಆಯೋಜಿಸಲಾಗಿದೆ.ಉದ್ಘಾಟನಾ ಸಮಾರಂಭ:ಇದೇ ದಿ. ೨೧ ರಂದು ನಡೆಯಲಿರುವ ಉದ್ಘಾಟನಾ ಕಾರ್ಯಕ್ರಮವನ್ನು ವಿಜಯಪುರ ಜಿಲ್ಲಾಧಿಕಾರಿ ಟಿ.ಭೂಬಾಲನ್ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ.ಶಾಂತಾದೇವಿ ಟಿ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ಎನ್‌ಎಸ್‌ಎಸ್ ಸಲಹಾ ಸಮಿತಿಯ ಸದಸ್ಯ ಡಾ. ಜಾವಿದ್ ಜಮಾದಾರ ಹಾಗೂ ವಿವಿಯ ಕುಲಸಚಿವ ಶಂಕರಗೌಡ ಸೋಮನಾಳ ಭಾಗವಹಿಸಲಿದ್ದು, ಬೆಂಗಳೂರಿನ ಎನ್‌ಎಸ್‌ಎಸ್ ಪ್ರಾದೇಶಿಕ ನಿರ್ದೇಶಕ ಡಿ.ಕಾರ್ತಿಗ್ವಾನ್, ಕರ್ನಾಟಕ ರಾಜ್ಯ ಸರ್ಕಾರ ಎನ್‌ಎಸ್‌ಎಸ್ ಅಧಿಕಾರಿ ಡಾ. ಪ್ರತಾಪ್ ಲಿಂಗಯ್ಯ, ಮಹಿಳಾ ವಿವಿಯ ಮೌಲ್ಯಮಾಪನ ಕುಲಸಚಿವ ಪ್ರೊ.ಎಚ್.ಎಮ್.ಚಂದ್ರಶೇಖರ ಉಪಸ್ಥಿತರಿರಲಿದ್ದಾರೆ.ಈ ಏಳು ದಿನಗಳ ಕಾಲ ನಡೆಯಲಿರುವ…

Read More

ಪದವಿ ಪ್ರದಾನ (Graduation Day) ಕಾರ್ಯಕ್ರಮದಲ್ಲಿ ಅಕ್ಕ ಮಹಾದೇವಿ ವಿವಿ ಕುಲಪತಿ ಡಾ.ಶಾಂತಾದೇವಿ ಟಿ. ಅಬಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದೇಶದ ಅಭಿವೃದ್ಧಿಯಲ್ಲಿ ಆರ್ಥಿಕ, ಆರೋಗ್ಯ, ಶಿಕ್ಷಣ ಮತ್ತು ಸಂಶೋಧನೆ ಕ್ಷೇತ್ರಗಳು ಪ್ರಮುಖವಾಗಿದ್ದು ಇವುಗಳಲ್ಲಿ ಫಾರ್ಮಸಿ ಮತ್ತು ಮೆಡಿಕೇಶನ್ ಮುಖ್ಯ ಪಾತ್ರ ವಹಿಸುತ್ತವೆ ಎಂದು ರಾಜ್ಯ ಅಕ್ಕ ಮಹಾದೇವಿ ವಿಶ್ವವಿದ್ಯಾಲಯದ ಕುಲಪತಿ ಡಾ. ಶಾಂತಾದೇವಿ ಟಿ. ಹೇಳಿದ್ದಾರೆ.ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಎಸ್.ಎಂ ಔಷಧ ವಿಜ್ಞಾನ ಮಹಾವಿದ್ಯಾಲಯ ಮತ್ತು ಸಂಶೋಧನ ಕೇಂದ್ರದಲ್ಲಿ ಮಂಗಳವಾರ ನಡೆದ ಪದವಿ ಪ್ರದಾನ (Graduation Day) ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಆರೋಗ್ಯ ರಕ್ಷಣೆಯಲ್ಲಿ ವೈದ್ಯರ ಜೊತೆ ಫಾರ್ಮಸಿಸ್ಟ್ರೂ ಸಮಾನ ಸೇವೆ ಸಲ್ಲಿಸುತ್ತಾರೆ. ಆದ್ದರಿಂದ ಫಾರ್ಮಸಿ ವಿದ್ಯಾರ್ಥಿಗಳು ಕೂಡ ಹೊಸ ಸಂಶೋಧನೆಗಳು ಮತ್ತು ತಂತ್ರಜ್ಞಾನವನ್ನು ಬಳಸಿಕೊಂಡು ಜನರ ಆರೋಗ್ಯದ ಗುಣಮಟ್ಟವನ್ನು ಸುಧಾರಿಸಲು ಶ್ರಮಿಸಬೇಕು ಎಂದು ಅವರು ಹೇಳಿದರು.ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ಫಾರ್ಮಸಿ ವಿಭಾಗದ ಅಧ್ಯಯನ ಮಂಡಳಿ ಅಧ್ಯಕ್ಷ ಮತ್ತು ಮಂಗಳೂರಿನ ಪಿ. ಎ. ಔಷಧ ವಿಜ್ಞಾನ ಮಹಾವಿದ್ಯಾಲಯ ಪ್ರಾಂಶುಪಾಲ ಡಾ.…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೇವಲ ಮುಸ್ಲಿಂರ ಬಗ್ಗೆ ತೆಗಳುವುದನ್ನೇ ಕೆಲಸ ಮಾಡಿಕೊಂಡಿರುವ ವಿಜಯಪುರ ನಗರ ಶಾಸಕರು ಒಂದು ದಿನವಾದರೂ ಮದರಸಾ ಹೋಗಿ ಅಲ್ಲಿನ ವ್ಯವಸ್ಥೆಯನ್ನು ನೋಡಿದ್ದಾರೆಯೇ? ಅವರು ಒಂದು ರೀತಿ ಅನಕ್ಷರಸ್ಥರಂತೆ ವರ್ತನೆ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಜಿಲ್ಲಾಧ್ಯಕ್ಷ ಶಕೀಲ್ ಬಾಗಮಾರೆ ದೂರಿದ್ದಾರೆ.ಈ ಕುರಿತು ಬುಧವಾರ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮದರಸಾದಲ್ಲಿ ಧಾರ್ಮಿಕ ಶಿಕ್ಷಣ, ವಿಜ್ಞಾನ ಎಲ್ಲವನ್ನೂ ಬೋಧಿಸಲಾಗುತ್ತಿದೆ, ಅಲ್ಲಿ ಹೋಗಿ ವ್ಯವಸ್ಥೆಯನ್ನು ಕಣ್ಣಾರೆ ಕಾಣಲಿ, ಅವರ ಒಬ್ಬ ಕಾರ್ಯಕರ್ತನಾದರೂ ಮದರಸಾಗಳಿಗೆ ಭೇಟಿ ನೀಡುವ ಕಾರ್ಯ ಮಾಡಿದ್ದಾರೆಯೇ? ಎಂದು ಶಕೀಲ್ ಪ್ರಶ್ನಿಸಿದ್ದಾರೆ.ಕೇವಲ ಹಿಂದೂ-ಮುಸ್ಲಿಂ ಜಗಳ ಹಚ್ಚುವುದು ಅವರ ಕಾಯಕವಾಗಬಿಟ್ಟಿದೆ. ಹಿಂದೂ-ಮುಸ್ಲಿಂ ಸಹೋದರರಂತೆ ಬದುಕುತ್ತಿದ್ದಾರೆ, ವಿನಾಕಾರಣ ಸಹೋದರರ ನಡುವೆ ಸಾಸಕ ಯತ್ನಾಳ ವಿಷ ಹಿಂಡುವ ಕಾರ್ಯ ಮಾಡುತ್ತಿದ್ದಾರೆ. ವಿನಾಕಾರಣ ಹಿಂದೂ ಮುಗ್ಧ ಯುವಕರನ್ನು ದಿಕ್ಕು ತಪ್ಪಿಸುವ ಕಾರ್ಯ ಮಾಡುತ್ತಿದ್ದಾರೆ, ಈ ಜಗಳ ಹಚ್ಚಿ ತಮ್ಮ ಕುರ್ಚಿ ಭದ್ರ ಮಾಡಿಕೊಳ್ಳುವುದೇ ಬಿಜೆಪಿ ನಾಯಕರ ಕೆಲಸವಾಗಿದೆ. ವೈಯುಕ್ತಿಕ ಸ್ವಾರ್ಥಕ್ಕಾಗಿ ಹಿಂದೂ ಯುವಕರ…

Read More

ಲೇಖನ- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕುದ.ಕ ಜಿಲ್ಲೆ-೫೭೪೧೯೮ದೂ: ೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ‘ಕಾಳಿಂಗ’ ಎಂಬ ಹೆಸರೇ ಒಂದು ರೀತಿ ಮನುಷ್ಯನಲ್ಲಿ ಭಯವನ್ನು ಮೂಡಿಸುತ್ತದೆ. ಏಕೆಂದರೆ ಕಾಳಿಂಗ ಎನ್ನುವುದನ್ನು ಬಹುವಾಗಿ ಬಳಸುವುದು ಕಾಳಿಂಗಸರ್ಪವನ್ನು ಉಲ್ಲೇಖಿಸಲು. ಅತ್ಯಂತ ವಿಷಕಾರಿಯಾದ ಈ ಹಾವು ಅಳಿವಿನ ಅಂಚಿನಲ್ಲಿದೆ. ಕಾಳಿಂಗ ಸರ್ಪದ ಜೀವ ಸಂಕುಲದ ಹೆಸರು ‘ಒಫಿಯೊಫಗಸ್ ಹನ್ನಾ’, ಇದರ ಅರ್ಥ ‘ಹಾವು ಭಕ್ಷಕ’ ಎಂದು. ಯಾವುದೇ ರೀತಿಯ ಹಾವನ್ನು ಅಥವಾ ತನ್ನದೇ ಗುಂಪಿನ ಸಣ್ಣ ಹಾವುಗಳು, ನಾಗರಹಾವುಗಳನ್ನು ತಿಂದು ಜೀವಿಸುವ ಈ ಸಂಕುಲದ ಕಾಳಿಂಗ ಸರ್ಪವು ವಿಶ್ವದ ಅತ್ಯಂತ ಉದ್ದದ ಹಾಗೂ ಅತ್ಯಂತ ವಿಷಕಾರಿ ಹಾವುಗಳ ಪೈಕಿ ಒಂದು. ಸುಂದರ ಮೈಕಟ್ಟನ್ನು ಹೊಂದಿರುವ ಈ ಹಾವು ಕಪ್ಪು ಬಣ್ಣವಿದ್ದು, ನೋಡಲು ಅತ್ಯಂತ ಆಕರ್ಷಕವಾಗಿ ಇರುತ್ತದೆ.ಸುಮಾರು ೫.೫ಮೀ ಯಾ ೧೮ ಅಡಿ ಉದ್ದ ಬೆಳೆಯುವ ಈ ಹಾವು ಏಷ್ಯಾದ ಹಲವು ಭಾಗಗಳಲ್ಲಿ ಮತ್ತು ಭಾರತದ ಕೆಲ ಪ್ರದೇಶಗಳಲ್ಲಿ ಮಾತ್ರ ಹೆಚ್ಚಾಗಿ ಕಾಣಸಿಗುತ್ತದೆ. ದಟ್ಟ…

Read More