Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಲ್ಲಿ ಇತ್ತೀಚೆಗೆ ಬೆಚ್ಚಿ ಬೀಳಿಸಿದ ಸರಗಳ್ಳತನದ ಪ್ರಕರಣ ಬೇಧಿಸಿರುವ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸುವ ಮೂಲಕ ಅಪಹರಿಸಿದ ಬಂಗಾರದ ಆಭರಣಗಳನ್ನು ವಶಕ್ಕೆ ಪಡೆದಿದ್ದಾರೆ.ಇಲ್ಲಿನ ಸ್ಟೇಷನ್ ರಸ್ತೆಯ ದಿವಟಗೇರಿಯಲ್ಲಿ ಕಳೆದ ಶುಕ್ರವಾರ ಸಂಜೆ ಪಾದಚಾರಿ ಮಹಿಳೆ ಮೇಲೆ ಆರೋಪಿಗಳು ದಾಳಿ ನಡೆಸಿ ಚಿನ್ನಾಭರಣ ದೋಚಿದ್ದರು. ಅಲ್ಲದೆ, ಮಹಿಳೆಯನ್ನು ಗಂಭೀರವಾಗಿ ಗಾಯಗೊಳಿಸಿದ್ದರು. ಈ ಕುರಿತು ಗೋಲಗುಂಬಜ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಘಟನೆಗೆ ಸಂಬಂಧಿಸಿದಂತೆ ತನಿಖೆ ಆರಂಭಿಸಿದ ಗೋಲ್ ಗುಂಬಜ್ ಠಾಣೆಯ ಪೊಲೀಸರು, ಆರೋಪಿಗಳಾದ ಆಸೀಫ ಮೈಬೂಬ ಜಮಾದಾರ ಹಾಗೂ ದಿವಟಗೇರಿಯ ನಿವಾಸಿ ರಿಯಾನ ಸಯ್ಯದ ರಿಹಾನ ಅಮಿನ ಸಲಾವುದ್ದಿನ ಮನಿಯಾರ ಎಂಬುವವರನ್ನು ಬಂಧಿಸಿ ಹೆಡೆಮುರಿ ಕಟ್ಟಿ ತಂದಿದ್ದಾರೆ.ಸದರಿ ಆರೋಪಿಗಳಿಂದ ಒಟ್ಟು 44,000 ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಲಕ್ಷ್ಮಣ ನಿಂಬರಗಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ರಾಮನಗೌಡ ಹಟ್ಟಿ ಹಾಗೂ ಡಿಎಸ್‌ಪಿ ಡಾ. ಬಸವರಾಜ ಯಲಿಗಾರ ಮಾರ್ಗದರ್ಶನದಲ್ಲಿ ಸಿಪಿಐ ಸಂಜೀವ ಬಳಿಗಾರ ನೇತೃತ್ವದಲ್ಲಿ ಗೋಲಗುಂಬಜ ಪೊಲೀಸ್ ಠಾಣೆಯ ಪಿಎಸ್‌ಐಗಳಾದ ಎಂ.ಡಿ.…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸುಕ್ಷೇತ್ರ ಶೇಗುಣಸಿಯಲ್ಲಿರುವ ಹರಳಯ್ಯನಗುಂಡದಲ್ಲಿ ಮಹಾಶಿವಶರಣ ಹರಳಯ್ಯ ಹಾಗೂ ಮಾತೋಶ್ರೀ ಕಲ್ಯಾಣಮ್ಮನವರ ಮೂರ್ತಿ ಪ್ರತಿಷ್ಠಾಪನೆ ವೈಭವದಿಂದ ನಡೆಯಿತು.ಸಮಾರಂಭವನ್ನು ಉದ್ಘಾಟಿಸಿದ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಮಾತನಾಡಿ, ಹರಳಯ್ಯ ಸಮಾಜ ಕಾಯಕವನ್ನೇ ನಂಬಿದ ಪ್ರಾಮಾಣಿಕತೆಯನ್ನು ಮೈಗೂಡಿಸಿಕೊಂಡ ಸಮಾಜ, ಆರ್ಥಿಕವಾಗಿ, ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಹಾಗೂ ರಾಜಕೀಯವಾಗಿ ಹಿಂದುಳಿದಿರುವ ಹರಳಯ್ಯ ಸಮಾಜದ ಅಭಿವೃದ್ಧಿಗೆ ಸರ್ಕಾರ ವಿಶೇಷ ಅನುದಾನ ಬಿಡುಗಡೆ ಮಾಡಬೇಕು, ಈ ಎಲ್ಲ ಸಮುದಾಯಗಳಿಗೆ ಹೋರಾಡುವ ಶಕ್ತಿ ಇಲ್ಲ, ಸರ್ಕಾರವೇ ಸ್ವಯಂ ಪ್ರೇರಿತವಾಗಿ ಈ ಸಣ್ಣ ಸಮುದಾಯಗಳ ಧ್ವನಿಯಾಗಬೇಕು, ಈ ಎಲ್ಲ ಸಮಾಜಗಳಿಗೆ ಹೆಚ್ಚಿನ ಮೀಸಲಾತಿ, ವಿವಿಧ ಸ್ವಯಂ ಉದ್ಯೋಗ ಸೌಲಭ್ಯವನ್ನು ಕಲ್ಪಿಸಬೇಕು ಎಂದು ಒತ್ತಾಯಿಸಿದರು.ಶಿವಶರಣ ಹರಳಯ್ಯನವರ ಕಾಯಕನಿಷ್ಠೆ, ಅವರ ಶ್ರೇಷ್ಠ ಸಂದೇಶಗಳು ಪ್ರತಿಯೊಬ್ಬರಿಗೂ ಮಾದರಿ, ಅಣ್ಣ ಬಸವಣ್ಣನವರ ಮಾನವೀಯತೆ, ಡಾ.ಅಂಬೇಡ್ಕರ ಅವರು ಸಾರಿದ ಸಮಾನತೆಯ ಬಲದಿಂದ ಇಂದು ದೇಶ ಸಮೃದ್ಧವಾಗಿದೆ, ಭಾರತೀಯ ಸಂವಿಧಾನ ಫಲವಾಗಿ ಪ್ರತಿಯೊಬ್ಬರು ಘನತೆಯಿಂದ ಬದುಕುವಂತಾಗಿದೆ, ಈ ಎಲ್ಲ ರಾಷ್ಟ್ರಭಕ್ತರ ಆದರ್ಶಗಳನ್ನು ಮೈಗೂಡಿಸಿಕೊಂಡು ಮುನ್ನಡೆಯಬೇಕು ಎಂದು…

Read More

ಉದಯರಶ್ಮಿ ದಿನಪತ್ರಿಕೆ ಗೋಲಗೇರಿ: ಗ್ರಾಮದ ಗಾಂಧಿನಗರದ ಅಂಗನವಾಡಿ ಕೇಂದ್ರ ನಂ6 ಮಕ್ಕಳಿಗೆ ಗೋಲಗೇರಿ ಗ್ರಾಮದ ಯುವ ಮುಖಂಡರಾದ ಅಬುಬಕರ ಶಾಬಾದಿ ಅವರು ಉಚಿತ ಸಮವಸ್ತ್ರ ವಿತರಣೆ ಮಾಡಿದರು.ಈ ಸಂದರ್ಭದಲ್ಲಿ ಮಾತನಾಡಿದ ಗೋಲಗೇರಿ ಅಂಗನವಾಡಿ ವಲಯದ ಮೇಲ್ವಿಚಾರಕ ಬಾನುಬಿ ದಿಕ್ಕಸಂಗಿ ಮಾತನಾಡಿ, ಮಕ್ಕಳಿಗೆ ಉಚಿತ ಸಮವಸ್ತ್ರ ನೀಡಿದ ಅಬುಬಕರ ಶಾಬಾದಿ ಅವರ ಕಾರ್ಯ ಶ್ಲಾಘನೀಯವಾದ್ದು ಎಂದು ಹೇಳಿದರು.ಕಾರ್ಯಕ್ರಮದಲ್ಲಿ BDSS ವಿಜಯಪುರ ಜಿಲ್ಲಾ ಕಾರ್ಯಾದ್ಯಕ್ಷ ಶ್ರೀಶೈಲ ಜಾಲವಾದಿ, ಯುವ ಮುಖಂಡ ಮಡಿವಾಳ ನಾಯ್ಕೋಡಿ, ಗ್ರಾಮ ಪಂಚಾಯತಿ ಸದಸ್ಯರಾದ ವಿಶ್ವರಾಧ್ಯ ಮಠ, ಮೈಬೂಬ.ಜೋಗುರ, ಸಾಸಾಬಾಳ ಶಾಲೆಯ SDMC ಅಧ್ಯಕ್ಷರಾದ ಕುತುಬುದ್ದೀನ್ ಕೋರಬು, ರಾಜು ಯಂಕಂಚಿ, ಪೈಗಂಬರ ನದಾಫ ಸೇರಿದಂತೆ ಗೋಲಗೇರಿ ಗ್ರಾಮದ ಅಂಗನವಾಡಿ ಕಾರ್ಯಕರ್ತೆಯರಾದ ಅಪ್ರೀನ್ ಶಾಬಾದಿ, ನಿರ್ಮಲಾ ಕರ್ನಾಳ, ಭಾರತಿ ಕರ್ನಾಳ, ಪುಷ್ಪವತಿ ಕೊಳಕುರ, ಮಲಕಮ್ಮ ಬಜಂತ್ರಿ, ಅಂಗನವಾಡಿ ಸಹಾಯಕಿಯರಾದ ಮಹಾದೇವಿ ಬಜಂತ್ರಿ ಉಪಸ್ಥಿತರಿದ್ದರು

Read More

ಕೆರುಟಗಿಯಲ್ಲಿ ಹಳೆಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಶಿಕ್ಷಕರಿಗೆ ಗುರುವಂದನೆ | ಅದ್ಧೂರಿ ಮೆರವಣಿಗೆ | ಪುಷ್ಪವೃಷ್ಟಿ ಉದಯರಶ್ಮಿ ದಿನಪತ್ರಿಕೆ ವಿಶೇಷ ವರದಿ: ರಾಜು ಕೆರುಟಗಿವಿಜಯಪುರ: ಅಲ್ಲಿ ಹಳೆಯ ನೆನಪುಗಳ ಕಲರವ. ತಾವು ಒಂದು ಕಾಲದಲ್ಲಿ ಕಲಿತ ಶಾಲೆ, ಕಲಿಸಿದ ಗುರುವೃಂದ, ಆ ವಾತಾವರಣದಲ್ಲಿ ಶಿಷ್ಯರು ಅಂದು ನಿಜಕ್ಕೂ ಕಳೆದುಹೋಗಿದ್ದರು. ಮೊಗೆದಷ್ಟೂ ಬರುತ್ತಿದ್ದ ನೆನಪುಗಳು ಅವರ ಸಂಭ್ರಮವನ್ನು ಹೆಚ್ಚಿಸುತ್ತಿದ್ದವು. ಅಂದಿನ ಗುರು-ಶಿಷ್ಯರ ಸಾರ್ಥಕ ಮಿಲನ ಕಂಡು ಆ ಪರಿಸರದ ಗಿಡ-ಮರಗಳು ತಲೆದೂಗುತ್ತಿದ್ದವು.ಈ ಎಲ್ಲ ಘಟನೆ ಕಂಡದ್ದುಜಿಲ್ಲೆಯ ಕೆರೂಟಗಿ ಗ್ರಾಮದ ಕನ್ನಡ ಗಂಡು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯಲ್ಲಿ. ಅಲ್ಲಿ ಕಲಿತ ಹಳೆಯ ವಿದ್ಯಾರ್ಥಿಗಳೆಲ್ಲ ಸೇರಿ ತಮಗೆ ವಿದ್ಯಾದಾನ ಮಾಡಿದ ಗುರು ವೃಂದಕ್ಕೆ ಅಭಿನಂದನೆ ಸಲ್ಲಿಸಲು ಅಂದು ಗುರುವಂದನಾ ಕಾರ್ಯಕ್ರಮವನ್ನು ಏರ್ಪಡಿಸಿದ್ದರು.ಕಾರ್ಯಕ್ರಮಕ್ಕೂ ಮುನ್ನ ಗ್ರಾಮದ ಶ್ರೀ ಸಿದ್ದರಾಮೇಶ್ವರ ಮಠದಿಂದ ಶಾಲೆಯವರೆಗೂ ಎಲ್ಲ ಶಿಕ್ಷಕರನ್ನು ಭಾಜ-ಭಜಂತ್ರಿ, ಡೊಳ್ಳುವಾದ್ಯಗಳ ನಿನಾದದಲ್ಲಿ ಮೆರವಣಿಗೆಯೊಂದಿಗೆ ಅದ್ದೂರಿಯಾಗಿ ಸ್ವಾಗತ ಕೋರಲಾಯಿತು.ವೇದಿಕೆಯಲ್ಲಿ ಶಿಷ್ಯರು ತಮ್ಮ ನೆಚ್ಚಿನ ಶಿಕ್ಷಕರೊಂದಿಗಿನ ತಮ್ಮ ವಿದ್ಯಾರ್ಥಿ ಜೀವನದ ಘಟನೆಗಳನ್ನು…

Read More

ಜಮಖಂಡಿಯಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಭರವಸೆ ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನ ನಿರ್ಮಾಣಕ್ಕೆ ಮುಜರಾಯಿ ಇಲಾಖೆಯಿಂದ 50ಲಕ್ಷ ರೂ. ಅನುದಾನ ನೀಡಲಾಗುವದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಹೇಳಿದರು.ನಗರದ ಹೊರವಲಯದ ಕುಂಚನೂರ ಆರ್‌ಸಿಯಲ್ಲಿನ ಹೇಮರಡ್ಡಿ ಮಲ್ಲಮ್ಮ ಸಮುದಾಯ ಭವನದ ಆವರಣದಲ್ಲಿ ವೇಮ ವಿಕಾಸ ವೇದಿಕೆಯ ಆಶ್ರಯದಲ್ಲಿ ನಡೆದ ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮ ದೇವಸ್ಥಾನ ನಿರ್ಮಾಣಕ್ಕೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.ಮಹಾಸಾದ್ವಿ ಹೇಮರಡ್ಡಿ ಮಲ್ಲಮ್ಮ ಸಮುದಾಯ ಭವನ ಎಲ್ಲ ಸಮುದಾಯಗಳಿಗೂ ಅನುಕೂಲ ವಾಗುತ್ತಿದೆ ಅದರ ಹಾಗೆ ದೇವಸ್ಥಾನ ಎಲ್ಲ ಸಮುದಾಯಕ್ಕೂ ಅನುಕೂಲವಾಗಬೇಕು ಎಂದರು.ಶಾಸಕ ನಾಡೋಜ ಜಗದೀಶ ಗುಡಗುಂಟಿ ಮಾತನಾಡಿ, ವೈಯಕ್ತಿಕವಾಗಿ ರೂ.2 ಲಕ್ಷ ಹಾಗೂ ಶಾಸಕರ ನಿಧಿಯಿಂದ ರೂ.5 ಲಕ್ಷ ಅನುದಾನ ನೀಡುಲಾಗುವದು ಎಂದು ಹೇಳಿದರು. ಹೇಮರಡ್ಡಿ ಮಲ್ಲಮ್ಮ ಸಮುದಾಯ ಭವನದಲ್ಲಿ ನಡೆಯುವ ವಿವಾಹಗಳ ನೂತನ ದಂಪತಿಗೆ ನಮಸ್ಕರಿಸಲು ದೇವಾಲಯ ಅತ್ಯವಶ್ಯಕವಾಗಿತ್ತು. ಈಗ ಹೇಮರಡ್ಡಿ ಮಲ್ಲಮ್ಮನವರ ದೇವಸ್ಥಾನ ನಿರ್ಮಿಸುತ್ತಿರುವುದು ಒಳ್ಳೆಯ ಸಂಗತಿ…

Read More

ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ ತಾಯಿ ಭುವನೇಶ್ವರಿಗೆ ನಮಿಸುತ್ತಾ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕೇಂದ್ರ ಸಮನ್ವಯ ಕನ್ನಡ ಸಂಘ ಬಾಗಲಕೋಟೆ ವಿಭಾಗದ ಜಮಖಂಡಿ ಘಟಕದ ನೂತನ ಪದಾಧಿಕಾರಿಗಳ ಆಯ್ಕೆ ಹಾಗೂ ಕ್ರಿಸ್ಮಸ್ ಅಂಗವಾಗಿ ಯೇಸುಕ್ರಿಸ್ತನ ಜನ್ಮದಿನಾಚರಣೆ ಸಮಾರಂಭವನ್ನು ಜಮಖಂಡಿಯಲ್ಲಿ ಭವ್ಯವಾಗಿ ಹಮ್ಮಿಕೊಳ್ಳಲಾಯಿತು.ಕಾರ್ಯಕ್ರಮಕ್ಕೆ ಬಿ.ವ್ಹಿ. ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದು, ಮುಖ್ಯ ಅತಿಥಿಗಳಾಗಿ ಅಶೋಕ ಬಜಂತ್ರಿ, ತಿರುಪತಿ ಪತ್ತಾರ, ಸಿ.ವ್ಹಿ. ಶಿಕ್ಕೇರಿ, ಕೇಂದ್ರ ಸಮನ್ವಯ ಕನ್ನಡ ಸಂಘ ಬೆಂಗಳೂರು ರಾಜ್ಯ ಕಾರ್ಯದರ್ಶಿ ಪ್ರಭು ಬಿದರಿ, ಬಾಗಲಕೋಟೆ ವಿಭಾಗದ ಅಧ್ಯಕ್ಷ ಸಿ.ಕೆ. ನಾಡದಾಳ, ಕಾರ್ಯಾಧ್ಯಕ್ಷ ಪ್ರಕಾಶ ಆಸಂಗಿ, ಪ್ರಚಾರ ಸಮಿತಿ ಅಧ್ಯಕ್ಷ ಆರ್.ಟಿ. ವಜ್ರಮಟ್ಟಿ, ಖಜಾಂಚಿ ಸುಭಾಷ್ ಸುರಗೊಂಡ ಹಾಗೂ ಕಾರ್ಮಿಕ ಮುಖಂಡರು ಕುಂದೇನಾಯಕ, ಶರಣು, ಬಡ್ಡಿ, ಮುಧೋಳ ಹಾಜರಿದ್ದರು.ಜಮಖಂಡಿ ಘಟಕದ ಚಾಲಕರು, ನಿರ್ವಾಹಕರು ಹಾಗೂ ಆಡಳಿತ ಸಿಬ್ಬಂದಿಗಳು ಸಮಾರಂಭದಲ್ಲಿ ಸಕ್ರಿಯವಾಗಿ ಪಾಲ್ಗೊಂಡು ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆಯನ್ನು ಯಶಸ್ವಿಗೊಳಿಸಿದರು.ರಾಜ್ಯ ಕಾರ್ಯದರ್ಶಿ ಪ್ರಭು ಬಿದರಿ ಅವರು, “ಜಮಖಂಡಿ ಘಟಕದ…

Read More

ಲೇಖನ- ಡಾ.ಮಲ್ಲಿಕಾರ್ಜುನ ಎಸ್ ಆಲಮೇಲಯಡ್ರಾಮಿಕಲಬುರ್ಗಿ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ನಮ್ಮ ಭಾರತೀಯ ಪರಂಪರೆಯ ನೂತನ ವರುಷ, ಹರುಷದ ಯುಗಾದಿಯಾದರು. ನಾವೆಲ್ಲ ಒಗ್ಗಿಕೊಂಡಿರುವ ಮತ್ತು, ಅತಿ ಆಡಂಬರದಿ ಸ್ವಾಗತಿಸುವ. ಗ್ರೆಗೋರಿಯನ್ ಕ್ಯಾಲೆಂಡರ್ ಪ್ರಪಂಚದಲ್ಲಿ ಅತಿ ಹೆಚ್ಚಾಗಿ ಉಪಯೋಗಿಸಲ್ಪಡುವ ಕ್ಯಾಲೆಂಡರ್ (ಪಂಚಾಂಗ). ಅಲೋಸಿಯಸ್ ಲಿಲಿಯಸ್ ಎಂಬ ವೈದ್ಯನಿಂದ ಪ್ರಸ್ತಾಪಿಸಲ್ಪಟ್ಟ ಈ ಕ್ಯಾಲೆಂಡರ್, ಫೆಬ್ರುವರಿ 24, 1582ರಂದು( ಇಶ್ವಿ ಒಂದೆಯಾದರು,ದಿನಾಂಕ, 4-10-1582 ಅನ್ನೋ ಅನ್ನೋ ವಾದ ಕೂಡಾ ಇದೆ ) ಪೋಪ್ ಹದಿಮೂರನೆ ಗ್ರೆಗೊರಿಯ ಆದೇಶದ ಮೇರೆಗೆ ಜಾರಿಗೆ ಬಂದಿತು. ಅಲ್ಲಿಯವರೆಗೆ ಪಾಶ್ಚಿಮಾತ್ಯ ದೇಶಗಳಲ್ಲಿ ಉಪಯೋಗಿಸಲ್ಪಡುತ್ತಿದ್ದ ಜುಲಿಯನ್ ಕ್ಯಾಲೆಂಡರ್ನ ಲೆಕ್ಕದಲ್ಲಿ ವರ್ಷದ ಉದ್ದವು ಹೆಚ್ಚಾಗಿತ್ತು,ಇದು ಪ್ರತಿ ವರ್ಷ ೩೬೫ ದಿನಗಳ ೬ ಗಂಟೆಗಳ ಉದ್ದ ಇತ್ತು. ಆದರೆ ಲೆಕ್ಕಾಚಾರಗಳು ಒಂದು ವರ್ಷದ ನಿಜವಾದ ಸರಾಸರಿ ಉದ್ದ ಸ್ವಲ್ಪ ಕಡಿಮೆ (365 ದಿನ, 5 ಗಂಟೆ 49 ನಿಮಿಷ) ಎಂದು ತೋರಿಸಿದರು, ಆದಕಾರಣಗ್ರೆಗೋರಿಯನ್ ಕ್ಯಾಲೆಂಡರನ್ನು ವಿಶ್ವದ ನಮ್ಮ ದೇಶವು ಸೇರಿಕೊಂಡು ಬಹುತೇಕ ದೇಶಗಳು, ಒಪ್ಪಿ, ಅಪ್ಪಿಕೊಂಡು ಜನೇವರಿ…

Read More

ವಿಜಯಪುರದಲ್ಲಿ ಖ್ಯಾತ ಚಿತ್ರನಟ ಡಾ.ಸಂಗಮೇಶ ಉಪಾಸೆ ಸುದ್ದಿಗೋಷ್ಟಿ | ಜನರ ಮನದಲ್ಲಿ ಅಚ್ಚಳಿಯದೇ ಉಳಿದ ಸಿಲ್ಲಿಲಲ್ಲಿ ಗೋವಿಂದ ಪಾತ್ರ ವಿಜಯಪುರ: ಹಾಸ್ಯ, ಅನಾಥ ಮಕ್ಕಳ ರಕ್ಷಣೆಯ ಸಂದೇಶದ ಸಾರವನ್ನು ಹೊಂದಿರುವ ಗಲಿಬಿಲಿ ಗೋವಿಂದ ಚಿತ್ರೀಕರಣ ಆರಂಭವಾಗಿದ್ದು,ಇಂಚಗೇರಿ ಮಠದಲ್ಲಿ ಚಿತ್ರದ ಮುಹೂರ್ತ ನಡೆದಿದೆ ಎಂದು ಖ್ಯಾತ ಕಲಾವಿದ, ಹಿರಿಯ ಕೆಎಎಸ್ ಅಧಿಕಾರಿ ಡಾ.ಸಂಗಮೇಶ ಉಪಾಸೆ ವಿವರಿಸಿದರು.ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ವಿವರಣೆ ನೀಡಿದ ಅವರು, ಹಾಸ್ಯ, ಅನಾಥಮಕ್ಕಳ ರಕ್ಷಣೆಯ ಸಂದೇಶ, ವೈಜ್ಞಾನಿಕ-ವೈಚಾರಿಕೆ ಹೀಗೆ ಹಲವು ಆಯಾಮಗಳಲ್ಲಿ ಹೊರ ಬರುತ್ತಿರುವ ಚಿತ್ರವಾಗಿದ್ದು, ಸಿಲ್ಲಿಲಲ್ಲಿ ಗೋವಿಂದ ಪಾತ್ರ ಅತ್ಯಂತ ಜನಪ್ರಿಯವಾಗಿದೆ, ಎಲ್ಲೇ ಹೋದರೂ ಸಹ ನನ್ನನ್ನು ಗೋವಿಂದ ಎಂದೇ ಕರೆಯುತ್ತಿದ್ದಾರೆ, ಅನೇಕ ಪಾತ್ರಗಳನ್ನು ಮಾಡಿದ್ದರೂ ಸಹ ಇಂದಿಗೂ ಗೋವಿಂದ ಪಾತ್ರವೇ ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿದಿದೆ, ಹೀಗಾಗಿ ಅದನ್ನೇ ಚಿತ್ರದ ಇಡೀ ಆಕರ್ಷಣೆಯ ಕೇಂದ್ರಬಿಂದುವಾಗಿ ಮಾಡಿಕೊಳ್ಳಲಾಗಿದೆ ಎಂದರು.ಕಲಾ ಸೇವೆ ಮಾಡುತ್ತಾ ಬದುಕು ಕಟ್ಟಿಕೊಂಡವನು ನಾನು, ನಂತರ ಕೆಎಎಸ್ ಅಧಿಕಾರಿಯಾಗಿ ಬದುಕಿನ ಪಯಣ ಸಾಗಿಸಿದ್ದೇನೆ, ಜೀವನ ಏನೂ ಎಂಬುದು…

Read More

ವಿಜಯಪುರದಲ್ಲಿ ಹಿಂದೂ ಹೋರಾಟಗಾರ ರಾಘವ ಅಣ್ಣಿಗೇರಿ ಆಗ್ರಹ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದೇಶದಲ್ಲಿ ಜನಸಂಖ್ಯಾ ನಿಯಂತ್ರಣ ಕಾಯ್ದೆಯನ್ನು ಹಾಗೂ ಏಕ ರೂಪ ನಾಗರಿಕ ಸಂಹಿತೆಯನ್ನು ಜಾರಿಗೊಳಿಸುವಂತೆ ಒತ್ತಾಯಿಸಿ ಪ್ರಧಾನಮಂತ್ರಿ ಹಾಗೂ ಕೇಂದ್ರ ಗೃಹ ಸಚಿವರಿಗೆ ಪತ್ರ ಬರೆದಿದ್ದೇನೆ, ಉತ್ತರಾಖಂಡ, ಗುಜರಾತ್ ಈಗಾಗಲೇ ಏಕರೂಪ ನಾಗರಿಕ ಸಂಹಿತೆ ಜಾರಿಗೊಳಿಸಿದ್ದು, ಕರ್ನಾಟಕ ಮುಖ್ಯಮಂತ್ರಿಗಳು ಏಕೆ ಏಕರೂಪದ ನಾಗರಿಕ ಸಂಹಿತೆ ಜಾರಿಗೊಳಿಸುತ್ತಿಲ್ಲ ಎಂದು ಹಿಂದೂ ಹೋರಾಟಗಾರ ರಾಘವ ಅಣ್ಣಿಗೇರಿ ಪ್ರಶ್ನಿಸಿದರು.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಭಾರತ ರಕ್ಷಣೆ ಸುಲಭದ ಮಾತಲ್ಲ, ೨೦೨೫ ರ ಚೈನಾವನ್ನು ಹಿಂದಿಕ್ಕಿ ಭಾರತ ಜನಸಂಖ್ಯೆಯಲ್ಲಿ ಅಗ್ರಸ್ಥಾನ ಪಡೆದಿದೆ, ೧೪೬ ಕೋಟಿಗೂ ಜನಸಂಖ್ಯೆ ಮಿಕ್ಕಿದೆ, ಇದನ್ನು ನಿಯಂತ್ರಿಸುವುದು ಹೇಗೆ? ಈ ಜನಸಂಖ್ಯೆಯನ್ನು ನಿಯಂತ್ರಿಸದೇ ಹೋದರೆ ಭಯೋತ್ಪಾದನೆ ನಿಯಂತ್ರಣ ಕಷ್ಟ ಸಾಧ್ಯವಾಗಲಿದೆ.ಹಿಂದೂ-ಮುಸ್ಲಿಂರು ಎಲ್ಲರೂ ರಾಷ್ಟ್ರಭಕ್ತರು, ನಮ್ಮಲ್ಲಿ ದ್ವೇಷ ಬಿತ್ತುವವರ ವಿರುದ್ಧ ನನ್ನ ಸಮರ. ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿಗಳು ವಿಶೇಷ ಸಚಿವ ಸಂಪುಟ ಸಭೆ ಕರೆದು ಈ ಜನಸಂಖ್ಯೆ ನಿಯಂತ್ರಣ ಕಾಯ್ದೆ ಹಾಗೂ ಏಕರೂಪದ ನಾಗರಿಕ ಸಂಹಿತೆ…

Read More

ಉದಯರಶ್ಮಿ ದಿನಪತ್ರಿಕೆ ದಾವಣಗೆರೆಯಲ್ಲಿ ನಡೆದ ವಿಶ್ವ ದರ್ಶನ ಪತ್ರಿಕೆ ಹಾಗೂ ರಾಷ್ಟ್ರೀಯ ಐಕಾನ್ ಅವಾರ್ಡ್ ಪ್ರಶಸ್ತಿ ಸಮಾರಂಭದಲ್ಲಿ ಜಿಲ್ಲೆಯ ಕೊಲ್ಹಾರ ತಾಲೂಕಿನ ಹಳ್ಳದ ಗೆಣ್ಣೂರು ಗ್ರಾಮದ ಇರ್ಫಾನ್ ಶ ಬೀಳಗಿ ಅವರಿಗೆ “ರಾಷ್ಟ್ರೀಯ ಮಾಧ್ಯಮ ಕಾಯಕ ಸೇವಾ ರತ್ನ” ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ವಿಶ್ವ ದರ್ಶನ ಫೌಂಡೇಶನ್ ಅಧ್ಯಕ್ಷರು ಹಾಗೂ ವಿಶ್ವ ದರ್ಶನ್ ಪತ್ರಿಕೆಯ ಸಂಪಾದಕ ಎಸ್ ಎಸ್ ಪಾಟೀಲ್,ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಧ್ವನಿ ಸಂಘದ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ್ ಬಂಗ್ಲೆ, ಮಠಾಧೀಶರು, ಸೂಫಿ-ಸಂತರು ಇದ್ದರು.

Read More