Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಕೆಲ ದಿನಗಳ ಹಿಂದೆ ನಾನು ಆಪರೇಷನ್ ಕ್ಲೀನ್ ಹೋಮ್ ಜಾರಿ ಮಾಡಿದೆ. ಸುಮಾರು ಏಳೆಂಟು ತಾಸುಗಳಲ್ಲಿ ನಾನು, ಸೊಸೆ ಮತ್ತು ಕೆಲಸದಾಕೆ ಇಡೀ ಮನೆಯ ಎಲ್ಲ ಕೋಣೆಗಳ ಜೇಡರ ಬಲೆಗಳನ್ನೆಲ್ಲ ತೆಗೆದು, ಧೂಳು ಹೊಡೆದು, ಕಿಟಕಿ ಬಾಗಿಲುಗಳನ್ನೆಲ್ಲ ಒರೆಸಿ, ಬೆಡ್ ಶೀಟ್ಗಳನ್ನು, ಕಿಟಕಿ ಮತ್ತು ಬಾಗಿಲ ಪರದೆಗಳನ್ನು ವಾಷಿಂಗ್ ಮಷೀನ್ ಗೆ ಹಾಕಿ ಮನೆಯ ಕಸ ಗುಡಿಸಿ ನೆಲ ಒರೆಸಿ ಮುಗಿಸಿದೆವು.ತುಸು ಹೆಚ್ಚು ಸಮಯ ತೆಗೆದುಕೊಳ್ಳುವುದು ಕೇವಲ ಅಡುಗೆಮನೆಯ ಸ್ಟೋರ್ ಮಾತ್ರ. ನನ್ನ ಸ್ನೇಹಿತರಿಗೆ ಆಶ್ಚರ್ಯವಾಗುವುದು ತುಸು ದೊಡ್ಡದೇ ಆದ ನಮ್ಮ ಮನೆಯನ್ನು ಅದು ಹೇಗೆ ಒಂದು ದಿನದಲ್ಲಿ ನೀವು ಇಡೀ ಮನೆ ಕ್ಲೀನ್ ಮಾಡುತ್ತೀರಿ ಅಂತ.ನಿಜ ಅವರು ಹೇಳುವುದು, ಇಷ್ಟೆಲ್ಲಾ ಕೆಲಸಗಳನ್ನು ಒಂದೇ ದಿನದಲ್ಲಿ ಮಾಡಲು ಕಷ್ಟ ಆದರೆ ಅಸಾಧ್ಯವೇನಲ್ಲ. ಮನೆಯಲ್ಲಿ ಅನವಶ್ಯಕ ವಸ್ತುಗಳು ತುಂಬಿದ್ದರೆ ಅವುಗಳನ್ನು ಅಲ್ಲಿ ಇಲ್ಲಿ ಎತ್ತಿಟ್ಟು ಸ್ವಚ್ಛ ಮಾಡುವುದರಲ್ಲಿಯೇ ಬಹಳಷ್ಟು ಸಮಯ ವ್ಯರ್ಥವಾಗುತ್ತದೆ.…
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ತಾಲೂಕಿನ ಕೂಡಗಿ ಉಷ್ಣ ವಿದ್ಯುತ್ ಸ್ಥಾವರದಲ್ಲಿ ಕನ್ನಡಿಗರಿಗೆ ಉದ್ಯೋಗ ಹಾಗೂ ಕೊಲ್ದಾರ ತಾಲೂಕಿನ ಎಲ್ಲ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿನ ಅನ್ಯ ಭಾಷಾ ನಾಮ ಫಲಕಗಳನ್ನು ಕನ್ನಡದಲ್ಲಿ ಅಳವಡಿಸಬೇಕೆಂದು ಆಗ್ರಹಿಸಿ ತಹಸೀಲ್ದಾರ್ ಕಾರ್ಯಾಲಯಕ್ಕೆ ತೆರಳಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ ಶೆಟ್ಟಿ ಬಣ) ಕಾರ್ಯಕರ್ತರು ಎನ್ ಕೆ ನಧಾಪ್ ಅವರಿಗೆ ಮನವಿ ಸಲ್ಲಿಸಿದರುಸರ್ಕಾರ ಕನ್ನಡಿಗರಿಗೆ ಎಲ್ಲ ವಯಲಯದಲ್ಲಿ ಕಡ್ಡಾಯ ಉದ್ಯೋಗ ಮೀಸಲಾತಿಗಾಗಿ ಆದೇಶವನ್ನು ಮಾಡಿದೆ. ಅದರಂತೆ ನಮ್ಮ ಜಿಲ್ಲೆಯ ನಮ್ಮದೇ ತಾಲೂಕಿನ ಎನ್.ಟಿ.ಪಿ.ಸಿ ಉಷ್ಣ ವಿದ್ಯೋತ ಸ್ಥಾವರದಲ್ಲಿ ಶೇ 85% ರಷ್ಟು ಕನ್ನಡಿಗರಿಗೆ ಉದ್ಯೋಗವಕಾಶಗಳನ್ನು ನೀಡಬೇಕೆಂದು ಈಗಾಗಲೇ ನಾವು ಮನವಿ ಸಲ್ಲಿಸಿರುತ್ತೇವೆ. ಈಗ ಮತ್ತೊಮ್ಮೆ ತಮ್ಮಲ್ಲಿ ನಾವು ತಿಳಿಸುವುದೇನೆಂದರೆ, ಎನ್.ಟಿ.ಪಿ.ಸಿ ವಿದ್ಯುತ್ ಸ್ಥಾವರದಲ್ಲಿ ಕನ್ನಡಿಗರಿಗೆ ಕಡ್ಡಾಯವಾಗಿ ಉದ್ಯೋಗ ನೀಡಬೇಕು ಮತ್ತು ಎನ್.ಟಿ.ಪಿ.ಸಿ ಗೆ ಭೂಮಿ ಕಳೆದುಕೊಂಡ ರೈತರಿಗೆ ಹಾಗೂ ಅವರ ಮಕ್ಕಳಿಗೆ ಮೂಲಭೂತ ಸೌಕರ್ಯ ಒದಗಿಸಬೇಕು ಮತ್ತು ಕೊಲ್ದಾರ ತಾಲೂಕಿನ ಎಲ್ಲ ಅಂಗಡಿ ಮುಂಗಟ್ಟುಗಳು, ಢಾಬಾಗಳು ಮತ್ತು ಗ್ರಾಮ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ನ್ಯಾಯವಾದಿಗಳ ಸಂಘದ ವತಿಯಿಂದ ನೂತನವಾಗಿ ವಿಜಯಪುರ ಜಿಲ್ಲಾ ಪ್ರಧಾನ ಮತ್ತು ಸತ್ರ ನ್ಯಾಯಾಧೀಶರಾದ ಡಾ. ಕಸನಪ್ಪಾ ನಾಯಕ ಅವರನ್ನು ಸನ್ಮಾನಿಸಲಾಯಿತು.ಇದೇ ಸಂದರ್ಭದಲ್ಲಿ ಜಿಲ್ಲಾ ಪೋಕ್ಸೊ ಕೋರ್ಟಿನ ನ್ಯಾಯಾಧೀಶರಾದ ರಾಮಾ ನಾಯಕ ಜಿಲ್ಲಾ ವಕೀಲರ ಸಂಘದ ಅಧ್ಯಕ್ಷರಾದ ಡಿ.ಜಿ. ಬಿರಾದಾರ, ಉಪಾಧ್ಯಕ್ಷ ಎಸ್.ಬಿ. ಬಿರಾದಾರ, ಪ್ರಧಾ ಕರ್ಯದರ್ಶಿ ಎಸ್.ಎಸ್. ಚೂರಿ, ಎಂ.ಆಯ್. ಕಾಖಂಡಕಿ, ಯು.ಎ. ಆಲಗೂರ, ವಾಯ.ಬಿ. ಬಡಿಗೇರ, ಬಿ.ಡಿ. ಬಿರಾದಾರ, ವಿ.ಎಚ್. ಗಾಳಪ್ಪಗೋಳ, ಎಂ.ಆರ್. ಹವಾಲ್ದಾರ. ಪಿ.ಕೆ. ಹುಯಿನಗೊಲ, ಎಂ.ಎಚ್. ಇನಾಮದಾರ, ಎಸ್.ಎ. ಆಸಂಗಿ ಇದ್ದರು.
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ೨೦೨೫-೨೬ ನೇ ಸಾಲಿಗೆ ತಾಲೂಕಿನ ಬಿದರಕುಂದಿ ಗ್ರಾಮದ ಆದರ್ಶ ವಿದ್ಯಾಲಯ ಶಾಲೆಗೆ ೬ ನೇ ತರಗತಿಗೆ ಮಾ.೨೩ ರಂದು ಪ್ರವೇಶ ಪರೀಕ್ಷೆ ನಡೆಯಲಿದೆ. ಈಗಾಗಲೇ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಪ್ರವೇಶ ಪತ್ರಗಳು ಈ ತಿತಿತಿ.sಛಿhooಟeಜuಛಿಚಿಣioಟಿ.ಞಚಿಡಿ.ಟಿiಛಿ.iಟಿ oಡಿ ತಿತಿತಿ.viಜಥಿಚಿvಚಿhiಟಿi.ಞಚಿಡಿಟಿಚಿಣಚಿಞಚಿ.gov.iಟಿ ವೆಬ್ ಸೈಟ್ ನಲ್ಲಿ ಲಭ್ಯ ಇರುವುದು. ಪ್ರವೇಶ ಪತ್ರವನ್ನು ಪಡೆದುಕೊಂಡು ಪರೀಕ್ಷೆಗೆ ಹಾಜರಾಗುವಂತೆ ಪ್ರಕಟಣೆ ತಿಳಿಸಿದೆ.
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಕೃಷ್ಣಾ ತೀರದಲ್ಲಿ ನಡೆಯುತ್ತಿರುವ ಅಕ್ರಮ ಮಣ್ಣು ಮಾಫಿಯಾ ತಡೆಯುವಂತೆ ಒತ್ತಾಯಿಸಿ ಪಟ್ಟಣದ ತಹಸೀಲ್ದಾರ ಕಚೇರಿಯ ಆವರಣದಲ್ಲಿ ಒಂದು ದಿನದ ಧರಣಿ ನಡೆಸಲಾಯಿತು.ಈ ವೇಳೆ ಯುವಜನ ಸೇನೆಯ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ಮಾತನಾಡಿ, ಅಕ್ರಮವಾಗಿ ಮಣ್ಣು ಸಾಗಾಟ ನಡೆಸುತ್ತಿರುವವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ತಹಶೀಲ್ದಾರರಿಗೆ ಹೇಳಿದರೆ ಪೊಲೀಸ್ ಇಲಾಖೆಗೆ ತಿಳಿಸುವಂತೆ ಪೊಲೀಸರಿಗೆ ತಿಳಿಸಿದರೆ ತಹಸೀಲ್ದಾರ ಬಂದು ದೂರು ನೀಡಲಿ ಅಂತಾರೆ. ತಾಲೂಕಿನಲ್ಲಿ ಆಡಳಿತ ವ್ಯವಸ್ಥೆ ಇದೆಯೋ ಇಲ್ಲವೋ ಎಂಬ ಬಗ್ಗೆ ನಮಗೆ ಅನುಮಾನ ಮೂಡಿದೆ. ಈ ತಾಲೂಕಿನ ದಂಡಾಧಿಕಾರಿಗಳ ರಿಮೋಟ್ ಬೇರೆಯವರ ಬಳಿ ಇದೆ ಎನಿಸುತ್ತೆ. ಮಣ್ಣು ಮಾಫಿಯಾ ತಡೆಯುವಂತೆ ೧ನೇ ತಾರೀಕಿಗೆ ಮನವಿ ಪತ್ರ ನೀಡಿದರೆ ೧೮ನೇ ತಾರೀಕಿನಂದು ಇದು ನಮ್ಮ ವ್ಯಾಪ್ತಿಗೆ ಒಳಪಡುವದಿಲ್ಲ ಎಂದು ಹಿಂಬರಹ ನೀಡುತ್ತಾರೆ. ನಿನ್ನೆ ಮಣ್ಣು ಹೊಡೆಯಲು ಪರವಾನಗಿ ಕೋರಿ ನಡೆದ ಹೋರಾಟದಲ್ಲಿ ಟಿಪ್ಪರ ಮಾಲೀಕರು ಭಾಗಿಯಾಗಿದ್ದರು. ನಾವು ಮಣ್ಣು ಮಾಫಿಯಾ ಅಂತಾ ಹೇಳಿದ್ದು ರೈತರಿಗಲ್ಲ, ಸುಲಗೆಕೋರರಿಗೆ. ಇಲ್ಲಿ ಮಣ್ಣು…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಕೃಷ್ಣಾ ತೀರದಲ್ಲಿ ನಡೆಯುತ್ತಿರುವ ಅಕ್ರಮ ಮಣ್ಣು ಮಾಫಿಯಾ ತಡೆಯುವಂತೆ ಒತ್ತಾಯಿಸಿ ಪಟ್ಟಣದ ತಹಸೀಲ್ದಾರ ಕಚೇರಿಯ ಆವರಣದಲ್ಲಿ ಒಂದು ದಿನದ ಧರಣಿ ನಡೆಸಲಾಯಿತು.ಈ ವೇಳೆ ಯುವಜನ ಸೇನೆಯ ರಾಜ್ಯಾಧ್ಯಕ್ಷ ಶಿವಾನಂದ ವಾಲಿ ಮಾತನಾಡಿ, ಅಕ್ರಮವಾಗಿ ಮಣ್ಣು ಸಾಗಾಟ ನಡೆಸುತ್ತಿರುವವರ ಮೇಲೆ ಸೂಕ್ತ ಕ್ರಮ ಕೈಗೊಳ್ಳಲು ತಹಶೀಲ್ದಾರರಿಗೆ ಹೇಳಿದರೆ ಪೊಲೀಸ್ ಇಲಾಖೆಗೆ ತಿಳಿಸುವಂತೆ ಪೊಲೀಸರಿಗೆ ತಿಳಿಸಿದರೆ ತಹಸೀಲ್ದಾರ ಬಂದು ದೂರು ನೀಡಲಿ ಅಂತಾರೆ. ತಾಲೂಕಿನಲ್ಲಿ ಆಡಳಿತ ವ್ಯವಸ್ಥೆ ಇದೆಯೋ ಇಲ್ಲವೋ ಎಂಬ ಬಗ್ಗೆ ನಮಗೆ ಅನುಮಾನ ಮೂಡಿದೆ. ಈ ತಾಲೂಕಿನ ದಂಡಾಧಿಕಾರಿಗಳ ರಿಮೋಟ್ ಬೇರೆಯವರ ಬಳಿ ಇದೆ ಎನಿಸುತ್ತೆ. ಮಣ್ಣು ಮಾಫಿಯಾ ತಡೆಯುವಂತೆ ೧ನೇ ತಾರೀಕಿಗೆ ಮನವಿ ಪತ್ರ ನೀಡಿದರೆ ೧೮ನೇ ತಾರೀಕಿನಂದು ಇದು ನಮ್ಮ ವ್ಯಾಪ್ತಿಗೆ ಒಳಪಡುವದಿಲ್ಲ ಎಂದು ಹಿಂಬರಹ ನೀಡುತ್ತಾರೆ. ನಿನ್ನೆ ಮಣ್ಣು ಹೊಡೆಯಲು ಪರವಾನಗಿ ಕೋರಿ ನಡೆದ ಹೋರಾಟದಲ್ಲಿ ಟಿಪ್ಪರ ಮಾಲೀಕರು ಭಾಗಿಯಾಗಿದ್ದರು. ನಾವು ಮಣ್ಣು ಮಾಫಿಯಾ ಅಂತಾ ಹೇಳಿದ್ದು ರೈತರಿಗಲ್ಲ, ಸುಲಗೆಕೋರರಿಗೆ. ಇಲ್ಲಿ ಮಣ್ಣು…
ಫೇವಾರ್ಡ್ ವಿಜಯಪುರದಿಂದ ವಿಶ್ವ ಎನ್ಜಿಓ, ಮಹಿಳಾ ದಿನಾಚರಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸರ್ಕಾರ ಸುಸ್ಥಿರ ಭವಿಷ್ಯ ಹಾಗೂ ಅಭಿವೃದ್ಧಿ ಸಾಧಿಸುವಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಪಾತ್ರ ಮಹತ್ತರವಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ರಾಮಣ್ಣ ಅಥಣಿ ಅಭಿಮತ ವ್ಯಕ್ತಪಡಿಸಿದರು.ಕರ್ನಾಟಕ ನಗರ ಮತ್ತು ಗ್ರಾಮಾಭ್ಯುದಯ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟ, ವಿಜಯಪುರ ಜಿಲ್ಲಾ ಘಟಕದಿಂದ ಸೋಮವಾರ ನಗರದ ಗಾಂಧಿಭವನದಲ್ಲಿ ಏರ್ಪಡಿಸಲಾಗಿದ್ದ ವಿಶ್ವ ಸ್ವಯಂ ಸೇವಾ ಸಂಸ್ಥೆಗಳ ದಿನಾಚರಣೆ ಹಾಗೂ ವಿಶ್ವ ಮಹಿಳಾ ದಿನಾಚರಣೆ ಸಮಾರಂಭವನ್ನು ಜಿ.ಪಂ ಸಿಎಓ ರಾಮಣ್ಣ ಅಥಣಿ ಅವರು ಉದ್ಘಾಟಿಸಿ ಮಾತನಾಡಿದರು. ಸ್ವಯಂ ಸೇವಾ ಸಂಸ್ಥೆಗಳು ಸರ್ಕಾರದ ವಿವಿಧ ಜನಪರ, ಮಹಿಳಾ ಸಬಲೀಕರಣ ಯೋಜನೆಗಳನ್ನು ಸಮುದಾಯದ ತಳಮಟ್ಟಕ್ಕೆ ತಲುಪಿಸುವಲ್ಲಿ ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿವೆ ಎಂದು ಹೇಳಿ ಎನ್ಜಿಓ ಅಧಿಕಾರಿಗಳಿಗೆ, ಸಿಬ್ಬಂದಿಗೆ ಅತ್ಯುತ್ತಮ ಕಾರ್ಯನಿರ್ವಹಿಸುವಲ್ಲಿ ಅತ್ಯಮೂಲ್ಯ ಸಲಹೆಗಳನ್ನು ನೀಡಿದರು. ನಬಾರ್ಡ್ ಎಜಿಎಂ ವಿಕಾಸ ರಾಠೋಡ ಮಾತನಾಡಿ, ಜಿಲ್ಲೆಯ ಸರ್ವಾಗೀಂಣ ಅಭಿವೃದ್ಧಿ ಎಲ್ಲರೂ ಕೈಜೋಡಿಸಬೇಕು. ಜನಪರ ಕಾರ್ಯಕ್ರಮಗಳ ಕುರಿತು ಸರಿಯಾದ ಪ್ರಸ್ತಾವನೆಗಳು…
ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ನಿತ್ಯ ಪ್ರವಚನ ಆಲಿಸುವುದರಿಂದ ಮನಸ್ಸು ಶುದ್ಧಿ ಆಗುವುದರ ಜತೆಗೆ ಮನದ ಕಲ್ಮಶ ತೊಲಗಿ ಪರಿಶುದ್ಧ ಜೀವನ ನಡೆಸಲು ಸಾಧ್ಯವಾಗುತ್ತದೆ ಎಂದು ಬೀದರ ಚಿದಂಬರಾಶ್ರಮದ ಶ್ರೀ ಸಿದ್ದಾರೂಢ ಮಠದ ಡಾ.ಶಿವಕುಮಾರ ಮಹಾಸ್ವಾಮಿಗಳು ಹೇಳಿದರು.ಪಟ್ಟಣ ಸಮೀಪದ ನಗನೂರ ಗ್ರಾಮದ ಶ್ರೀ ಶಾಂತ ಸ್ವರೂಪ ಸಿದ್ದಾಶ್ರಮ ಶ್ರೀ ಸಿದ್ದಾರೂಢ ಮಠದಲ್ಲಿ ಆಯೋಜಿಸಿದ್ದ ಪ್ರವಚನ ಮಹಾಮಹೋತ್ಸವ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಅವರು, ಪ್ರತಿಯೊಬ್ಬ ಮನುಷ್ಯನಲ್ಲಿರುವ ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನದ ಬೆಳಕನ್ನು ನೀಡುವ ಶಕ್ತಿ ಸದ್ಗುರು ಸಿದ್ದಾರೂಢರಿಗಿದೆ ಎಂದರು.ಮನದ ಮಾಲಿನ್ಯ ಕಳೆಯಲು ಜ್ಞಾನದ ಶಕ್ತಿ ಅವಶ್ಯವಾಗಿದೆ. ಈಗಿನ ಸಮಾಜದಲ್ಲಿ ದ್ವೇಷದ ವಾತಾವರಣದಿಂದ ಮಾನವೀಯ ಮೌಲ್ಯಗಳ ಕೊರತೆ ಉಂಟಾಗುತ್ತಿದೆ. ವಿಜ್ಞಾನ ಎಷ್ಟೇ ಮುಂದುವರೆದರೂ ಕೂಡ ಅಂತರಾತ್ಮದ ಶುದ್ಧಿ ಸಾಧ್ಯವಾಗುತ್ತಿಲ್ಲ ಇದಕ್ಕೆ ಪ್ರವಚನವೇ ದಿವ್ಯ ಔಷಧಿಯಾಗಿದೆ ಎಂದವರು ಸಿದ್ದಾರೂಢ ಸ್ವಾಮಿಗಳು ತಮ್ಮ ಆಚಾರ, ವಿಚಾರ ಮತ್ತು ನಡೆ ನುಡಿಗಳಿಂದ ಭಕ್ತರಿಗೆ ಸಾಕ್ಷಾತ್ ಶಿವನ ಸ್ವರೂಪವೇ ಆಗಿದ್ದರು ಎಂದು ಹೇಳಿದರು.ಕಲಬುರಗಿ ಸಿದ್ದಾರೂಢ ಮಠದ ಮಾತೋಶ್ರೀ ಲಕ್ಷ್ಮೀದೇವಿ ತಾಯಿಯವರು…
ಕಾಂಗ್ರೆಸ್ ಶಾಸಕ ರಾಜು ಕಾಗೆ, ಬಿಜೆಪಿ ಶಾಸಕ ಬಸವರಾಜ ಮತ್ತಿಮೋಡ್ ಗೆ ಅವಮಾನ |ಪ್ರಕರಣ ಹಕ್ಕುಬಾಧ್ಯತಾ ಸಮಿತಿಗೆ ವರ್ಗಾಯಿಸಿದ ಸ್ಪೀಕರ್ ಯು.ಟಿ.ಖಾದರ್ ಬೆಂಗಳೂರು: ಕಾಂಗ್ರೆಸ್ ಶಾಸಕ ರಾಜು ಕಾಗೆ ಹಾಗೂ ಬಿಜೆಪಿ ಶಾಸಕ ಬಸವರಾಜ ಮತ್ತಿಮೋಡ್ ಅವರಿಗೆ ಹಿರಿಯ ಅಧಿಕಾರಿಗಳಿಂದ ಅಪಮಾನವಾಗಿರುವ ವಿಚಾರವನ್ನು ಹಕ್ಕುಬಾಧ್ಯತಾ ಸಮಿತಿಗೆ ವರ್ಗಾಯಿಸುವುದಾಗಿ ವಿಧಾನಸಭೆ ಸ್ಪೀಕರ್ ಯು. ಟಿ ಖಾದರ್ ಅವರು ಮಂಗಳವಾರ ತಿಳಿಸಿದ್ದಾರೆ.ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದರ್ ಕುಮಾರ್ ಕಟಾರಿಯಾ ವಿರುದ್ಧ ರಾಜು ಕಾಗೆ ಮತ್ತು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಮಹೇಶ್ ಮೇಘಣ್ಣವರ್ ವಿರುದ್ಧ ಮತ್ತಿಮೋಡ್ ಅವರು ಸಲ್ಲಿಸಿದ್ದ ಹಕ್ಕುಚ್ಯುತಿ ನೋಟಿಸ್ ಅನ್ನು ಉಲ್ಲೇಖಿಸಿದ ಖಾದರ್, ಶಾಸಕರ ಘನತೆಯನ್ನು ಎತ್ತಿಹಿಡಿಯುವ ಅಗತ್ಯವನ್ನು ಒತ್ತಿ ಹೇಳಿದರು.”ಕಾಗೆ ಮತ್ತು ಮತ್ತಿಮೋಡ್ ಅವರಿಗೆ ಏನಾಯಿತು ಎಂಬುದನ್ನು ಅವರು ವಿವರವಾಗಿ ವಿವರಿಸಿದ್ದಾರೆ ಮತ್ತು ಅದನ್ನು ಲಿಖಿತವಾಗಿಯೂ ನೀಡಿದ್ದಾರೆ. ಕಟಾರಿಯಾ ತಮ್ಮನ್ನು ಅವಮಾನಿಸಿದ್ದಾರೆ ಎಂದು ಕಾಗೆ ಆರೋಪಿಸಿದ್ದಾರೆ. ಅಲ್ಲದೆ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿಯೊಬ್ಬರು ತಮ್ಮನ್ನು ಕೆಟ್ಟದಾಗಿ ನಡೆಸಿಕೊಂಡಿದ್ದಾರೆ ಎಂದು ಮತ್ತಿಮೋಡ್ ಅವರು…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಕರ್ನಾಟಕ ಅಂಗವಿಕಲರ ರಾಜ್ಯ ಒಕ್ಕೂಟ ವಿಕಲಚೇತನ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಮನವಿ ಸಲ್ಲಿಸಲು ಬಸವ ಜನ್ಮ ಸ್ಥಳ ಬಸವನಬಾಗೇವಾಡಿಯಿಂದ ರಾಜ್ಯದ ವಿಧಾನಸೌಧದವರೆಗೂ ವಿಕಲಚೇತನರ ಬೈಕ್ ರ್ಯಾಲಿ ಮೂಲಕ ಹಮ್ಮಿಕೊಂಡಿರುವ ವಿಧಾನಸೌಧ ಚಲೋ ಚಳುವಳಿ ಮಂಗಳವಾರ ಆರಂಭಗೊಂಡಿತು.ಬೈಕ್ ರ್ಯಾಲಿ ಆರಂಭಿಸುವ ಮುನ್ನ ಪಟ್ಟಣದ ಆರಾಧ್ಯದೈವ ಮೂಲನಂದೀಶ್ವರ(ಬಸವೇಶ್ವರ) ದೇವರಿಗೆ ವಿಕಲಚೇತನರು ವಿಶೇಷ ಪೂಜೆ ಸಲ್ಲಿಸಿದರು. ತಮ್ಮ ಬೇಡಿಕೆಗಳನ್ನು ಸರ್ಕಾರ ಈಡೇರಿಸುವಂತೆ ಘೋಷಣೆ ಕೂಗಿದರು.ನಂತರ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಅಶೋಕ ಹಾರಿವಾಳ ಬೈಕ್ ರ್ಯಾಲಿಗೆ ಚಾಲನೆ ನೀಡಿ ಮಾತನಾಡಿದ ಅವರು, ವಿಕಲಚೇತನರಿಗೆ ಸರ್ಕಾರ ಎಲ್ಲ ರಂಗಗಳಲ್ಲಿ ಅವಕಾಶ ನೀಡುವಂತಾಗಬೇಕು. ಇದರಿಂದಾಗಿ ಅವರು ಜೀವನ ಸುಗಮವಾಗಿ ಸಾಗಿಸಲು ಸಾಧ್ಯ. ವಿಕಲಚೇತನರ ಬೇಡಿಕೆಗಳು ನ್ಯಾಯಯುತವಾಗಿವೆ. ಇವರ ಬೇಡಿಕೆಗಳನ್ನು ಈಡೇರಿಸಲು ಇಂತಹ ಬಿರು ಬಿಸಿಲಿನಲ್ಲಿಯೂ ಬಸವೇಶ್ವರ ಜನ್ಮಸ್ಥಳ ಬಸವನಬಾಗೇವಾಡಿಯಿಂದ ರಾಜ್ಯದ ರಾಜಧಾನಿ ಬೆಂಗಳೂರುವರೆಗೂ ಬೈಕ್ ಮೂಲಕ ತೆರಳುತ್ತಿದ್ದಾರೆ. ಇವರು ಹೋಗುವ ಮಾರ್ಗದಲ್ಲಿ ನಮ್ಮ ಕರವೇ ಕಾರ್ಯಕರ್ತರು ಸಹಾಯ-ಸಹಕಾರ ನೀಡುವಂತೆ…
