Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಾರಾಯಣಪೂರ ಜಲಾಶಯದ ಕೃಷ್ಣಾ ನದಿಯಿಂದ ತೆಲಂಗಾಣಕ್ಕೆ ೧.೨ ಟಿಎಂಸಿ ನೀರು ಬಿಡುತ್ತೇವೆಂದು ಹೇಳಿ ಈಗ ೧೦ ಟಿಎಂಸಿ ನೀರು ಬಿಟ್ಟಿರುವ ರಾಜ್ಯ ಸರ್ಕಾರದ ಕ್ರಮವನ್ನು ಸಂಸದ ರಮೇಶ ಜಿಗಜಿಣಗಿ ಖಂಡಿಸಿದ್ದಾರೆ.ಈಗಿನ ಬಿರು ಬೇಸಿಗೆಯ ಸಂದರ್ಭದಲ್ಲಿ ವಿಜಯಪುರ ನಗರ ಸೇರಿದಂತೆ ಜಿಲ್ಲಾದ್ಯಂತ ಕುಡಿಯುವ ನೀರಿನ ಕೊರತೆಯಾದರೆ ಯಾರು ಹೊಣೆ ಎಂದು ಪ್ರಶ್ನಿಸಿದ್ದಾರೆ. ಕೆರೆಗಳಿಗೆ ನೀರು ತುಂಬಿಸಿ ಎಂದು ನಾವೇ ಹೇಳಿದರೆ ಬೇಸಿಗೆಯ ಸಂದರ್ಭವಿದೆ ಜಿಲ್ಲೆಯ ಜನತೆಗೆ ಕುಡಿಯುವ ನೀರಿಗೆ ತೊಂದರೆಯಾಗುತ್ತದೆ ಎಂದು ಹೇಳುತ್ತಿರುವ ರಾಜ್ಯ ಸರ್ಕಾರದ ಈಗ ನೆರೆಯ ತೆಲಂಗಾಣಕ್ಕೆ ೧೦ ಟಿಎಂಸಿ ನೀರು ಬಿಟ್ಟಿರುವ ಔಚಿತ್ಯ ಎನಿತ್ತು ಎಂದು ಎಂದಿದ್ದಾರೆ.ಈಗಲೇ ವಿಜಯಪುರ ನಗರಕ್ಕೆ ೪-೮ ದಿನಗಳಿಗೊಮ್ಮೆ ನೀರು ಪೂರೈಕೆಯಾಗುತ್ತಿದೆ. ಮುಂದಿನ ೭೫ ದಿನಗಳ ಕಾಲ ಬೇಸಿಗೆ ಕಾಲವಾಗಿರುವದರಿಂದ ಜನರಿಗೆ ಉತ್ತರ ಏನು ಹೇಳುತ್ತಿರಿ. ಮುಂದಿನ ದಿನಗಳಲ್ಲಿ ಏನಾದರೂ ಕುಡಿಯುವ ನೀರಿನ ಸಮಸ್ಯೆಯಾದರೆ ರಾಜ್ಯ ಸರ್ಕಾರವೇ ಹೊಣೆಯಾಗುತ್ತದೆ ಎಂದು ಸಂಸದ ರಮೇಶ ಜಿಗಜಿಣಗಿ ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಇಂದು ನಡೆದ ದ್ವೀತಿಯು ಪಿಯುಸಿ ವಾರ್ಷಿಕ ಪರೀಕ್ಷೆ-೧ರ ಜೀವಶಾಸ್ತ್ರ, ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ ಹಾಗೂ ಗಣಕ ವಿಜ್ಞಾನ ಪರೀಕ್ಷೆಗೆ ನೋಂದಾಯಿಸಿಕೊಂಡ ೨೯,೩೭೨ ವಿದ್ಯಾರ್ಥಿಗಳ ಪೈಕಿ ೨೭,೯೭೪ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ, ೧,೩೯೮ ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಬಸವನ ಬಾಗೇವಾಡಿ, ಇಂಡಿ, ಮುದ್ದೇಬಿಹಾಳ, ಸಿಂದಗಿ ಹಾಗೂ ವಿಜಯಪುರ ತಾಲೂಕಿನ ಒಟ್ಟು ೨೯ ಪರೀಕ್ಷಾ ಕೇಂದ್ರಗಳಲ್ಲಿ ಮಾರ್ಚ್ ೨೩ರಂದು ಆದರ್ಶ ವಿದ್ಯಾಲಯಗಳಲ್ಲಿ ೬ನೇ ತರಗತಿಯ ಪ್ರವೇಶ ಪರೀಕ್ಷೆಗಳು ಜರುಗಲಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀ. ಪ್ರದೇಶ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾದಂಡಾಧಿಕಾರಿಗಳಾದ ಟಿ.ಭೂಬಾಲನ್ ಆದೇಶ ಹೊರಡಿಸಿದ್ದಾರೆ.ಬೆಳಿಗ್ಗೆ ೯ ರಿಂದ ಪರೀಕ್ಷೆ ಮುಕ್ತಾಯವಾಗುವರೆಗೆ ಝರಾಕ್ಸ್ ಅಂಗಡಿಗಳು, ಕಂಪ್ಯೂಟರ್ ಸೆಂಟರ್‌ಗಳು, ಇಂಟರನೆಟ್, ಸೈಬರ್ ಕೆಫೆಗಳು ಹಾಗೂ ಕೋಚಿಂಗ್ ಕೇಂದ್ರಗಳು ತೆರೆಯದಂತೆ ಆದೇಶಿಸಿದ್ದಾರೆ.

Read More

ಪರೀಕ್ಷೆಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಾರ್ಚ್ ೨೧ ರಿಂದ ಆರಂಭವಾಗುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ -೧ ಪಾರದರ್ಶಕವಾಗಿ, ಸುಸೂತ್ರವಾಗಿ ಹಾಗೂ ಸಮರ್ಪಕವಾಗಿ ನಡೆಯುವ ನಿಟ್ಟಿನಲ್ಲಿ ಯಾವುದೇ ಲೋಪಕ್ಕೆ ಆಸ್ಪದ ನೀಡದೇ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಪರೀಕ್ಷೆಗೆ ನಿಯೋಜಿತ ಅಧಿಕಾರಿ, ಸಿಬ್ಬಂದಿಗಳಿಗೆ ಸೂಚನೆ ನೀಡಿದರು.ಮಂಗಳವಾರ ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮದಿರದಲ್ಲಿ ನಡೆದ ೨೦೨೪-೨೫ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-೧ರ ಪೂರ್ವ ಸಿದ್ಧತೆ, ಅನುಸರಣೆೆ ಹಾಗೂ ಅನುಷ್ಠಾನದ ಕುರಿತು ಪುನಶ್ಚೇತನ-ತರಬೇತಿ ಕಾರ್ಯಾಗಾರದಲ್ಲಿ ಮಾತನಾಡಿದ ಅವರು, ಪರೀಕ್ಷೆಗೆ ನಿಯೋಜಿತ ವಿವಿಧ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ನಿರ್ವಹಿಸಿಬೇಕಾದ ಕರ್ತವ್ಯ ಹಾಗೂ ಜವಾಬ್ದಾರಿ ಕುರಿತು ಸೂಚನೆಗಳನ್ನು ನೀಡಿದರು. ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ವಾತಾವರಣ ಕಲ್ಪಿಸುವ ನಿಟ್ಟಿನಲ್ಲಿ ಗಾಳಿ, ಬೆಳಕು ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಬೇಕು.ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ನೀಡಿರುವ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಪರೀಕ್ಷೆಯಲ್ಲಿ ವೆಬ್ ಕಾಸ್ಟಿಂಗ್ ಕಡ್ಡಾಯವಾಗಿದ್ದು ಇದಕ್ಕೆ ಪೂರಕವಾಗಿ…

Read More

ಲೇಖನಡಾ.ನಂದಿನಿ ಮುಚ್ಚಂಡಿಬಿ.ಎಲ್.ಡಿ.ಇ ಮೆಡಿಕಲ್ ಕಾಲೇಜ್ವಿಜಯಪುರ ಉದಯರಶ್ಮಿ ದಿನಪತ್ರಿಕೆ ವೃತ್ತಿಜೀವನದ ಮೇಲೆ ಕೇಂದ್ರೀಕೃತವಾಗಿರುವ ಈ ಸ್ಪರ್ಧಾತ್ಮಕ ಯುಗದಲ್ಲಿ, ಬದಲಾದ ಆಹಾರ ಪದ್ಧತಿಗಳು, ಒತ್ತಡದ ಜೀವನಶೈಲಿಯು ಹಾರ್ಮೋನುಗಳ ಅಸಮತೋಲನದಲ್ಲಿ ಬದಲಾವಣೆಗೆ ಕಾರಣವಾಗಿದ್ದು, ಇದು ಬಂಜೆತನದ ಸಂಭವವನ್ನು ಹೆಚ್ಚಿಸಿದೆ ಮತ್ತು ಅಮೂಲ್ಯವಾದ, ಆನಂದದಾಯಕ ಗರ್ಭಧಾರಣೆಯು ಹೊರೆಯಾಗಿದೆ.ಯಾವುದೇ ಮಹಿಳೆಯ ಜೀವನದಲ್ಲಿ ಗರ್ಭಧಾರಣೆಯು ಒಂದು ಪರಿವರ್ತನೆಯ ಪ್ರಯಾಣವಾಗಿದೆ. ಇದು ದೈಹಿಕ ಬದಲಾವಣೆಗಳನ್ನು ಮಾತ್ರವಲ್ಲದೆ ಭಾವನಾತ್ಮಕ ಅಂಶದಲ್ಲಿನ ಬದಲಾವಣೆಗಳನ್ನು ಸಹ ತರುತ್ತದೆ. ಈ ಪ್ರಕ್ರಿಯೆಯನ್ನು ಚೆನ್ನಾಗಿ ನೋಡಿಕೊಳ್ಳದಿದ್ದರೆ, ಅದು ಮಗುವಿನ ಬೆಳವಣಿಗೆ ಮತ್ತು ತಾಯಿಯ ಮಾನಸಿಕ ಮತ್ತು ದೈಹಿಕ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು. ಗರ್ಭ ಸಂಸ್ಕಾರವು ಪ್ರಾಚೀನ ಭಾರತೀಯ ಶ್ರೀಮಂತ ಸಂಪ್ರದಾಯವಾಗಿದ್ದು, ಇದು ಗರ್ಭಿಣಿ ತಾಯಂದಿರ ಮಾನಸಿಕ ಮತ್ತು ಭಾವನಾತ್ಮಕ ಆಹಾರದ ಪರಾಕಾಷ್ಠೆಯಾಗಿದೆ. ಇದು ಗರ್ಭಿಣಿ ತಾಯಿಯ ಗರ್ಭಾವಸ್ಥೆಯಲ್ಲಿ ಸಕಾರಾತ್ಮಕ ಮತ್ತು ಸಂತೋಷದಾಯಕ ಮತ್ತು ಧಾರ್ಮಿಕ ಜೀವನಶೈಲಿಯ ಬಗ್ಗೆ, ಹುಟ್ಟಲಿರುವ ಮಗುವಿನ ದೈಹಿಕ, ಭಾವನಾತ್ಮಕ ಮತ್ತು ಆಧ್ಯಾತ್ಮಿಕ ಬೆಳವಣಿಗೆಯನ್ನು ಸುಧಾರಿಸುವ ಗುರಿಯನ್ನು ಹೊಂದಿದೆ. ಗರ್ಭ ಸಂಸ್ಕಾರ ಎಂದರೆ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದ ತಾಯಿ ಮತ್ತು ಮಗುವಿನ ಆಸ್ಪತ್ರೆಯಲ್ಲಿ ಸೋಮವಾರ ಪುನೀತ ರಾಜಕುಮಾರವರ (ಅಪ್ಪು) ೫೦ನೇ ಜನ್ಮ ದಿನಾಚರಣೆಯ ಪ್ರಯುಕ್ತ ರಾಣಿ ಚೆನ್ನಮ್ಮ ಗಜಾನನ ಯುವಕ ಸಂಘದ ಬೆಂಕಿ ಬಾಯ್ಸ್ ವತಿಯಿಂದ ಗರ್ಭಿಣಿಯರಿಗೆ ಹಾಗೂ ಬಾನಂತಿಯರಿಗೆ ಹಣ್ಣು ಹಂಪಲು ವಿತರಿಸಲಾಯಿತು. ಬೆಂಕಿ ಬಾಯ್ಸ್ ಯುವಕರು ಹಣ್ಣು ಹಂಪಲು ವಿತರಿಸಿ ಹುಟ್ಟುಹಬ್ಬದ ಶುಭಾಶಯಗಳನ್ನು ಕೋರಿದರು.ಈ ವೇಳೆ ತಾಯಿ ಮತ್ತು ಮಕ್ಕಳ ಆಸ್ಪತ್ರೆ ವೈದ್ಯಾಧಿಕಾರಿ ಅರುಣಕುಮಾರ ಗಾಣಿಗೇರ, ರಾಣಿ ಚೆನ್ನಮ್ಮ ಗಜಾನನ ಯುವಕ ಸಂಘದ ಬೆಂಕಿ ಬಾಯ್ಸನ ಯುವಕರಾದ ರಾಜು ಮಂಕಣಿ, ಚಂದ್ರು ಇಂಡಿಕರ, ಸಿದ್ದು ಮೇತ್ರಿ, ಸಂದೀಪ ನೀಲವಾಣಿ, ವಿಶಾಲ ಕೊಟ್ಟಗಿ, ಅಕ್ಷಯ ಸಕ್ರಿ, ಲಿಂಗರಾಜ ಕುಳಗೇರಿ, ಸಂಗು ಮನ್ನಿಕೇರಿ, ಉಮೇಶ ಗಣಿ ಹಾಗೂ ಸೂಶ್ರುಕಿ ಎಸ್.ಬಿ. ಕರಾಂಡೆ, ರಾಜೇಶ ಅಪ್ಪಣ್ಣವರ ಸೇರಿದಂತೆ ಇತರರು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ತಾಲೂಕಿನ ಮಸೂತಿ ಗ್ರಾಮದಲ್ಲಿ ಮಾ.೨೮ ರಿಂದ ಜರುಗಲಿರುವ ವೀರಭದ್ರೇಶ್ವರ ಮತ್ತು ಗ್ರಾಮದೇವತೆಯ ಜಾತ್ರಾ ಮಹೋತ್ಸವದ ನಿಮಿತ್ತವಾಗಿ ಭಾನುವಾರ ಪ್ರವಚನ ಕಾರ್ಯಕ್ರಮವನ್ನು ಆರಂಭಿಸಲಾಯಿತು.ವಿಜಯಪುರ ಜ್ಯಾನಯೋಗಾಶ್ರಮದ ಸಂಗಮೇಶ್ವರ ಮಹಾಸ್ವಾಮಿಗಳು ಸಂಗಮೇಶ್ವರ ಮಹಾಸ್ವಾಮಿಗಳು ಮಾ.೨೮ ರವರೆಗೆ ಆಧ್ಯಾತ್ಮಿಕ ಪ್ರವಚನ ಹೇಳಲಿದ್ದಾರೆ. ಸ್ಥಳೀಯ ಜಗದೀಶ್ವರ ಹಿರೇಮಠದ ಪ್ರಭುಕುಮಾರ ಶಿವಾಚಾರ್ಯ ಮಹಾಸ್ವಾಮಿಗಳು ಸಾನಿಧ್ಯ ವಹಿಸುವರು. ಗದಗ ಜಿಲ್ಲೆ ನೀಲೂರಿನ ಶರಣಕುಮಾರ ಹೂಗಾರ ಸಂಗೀತ ಸೇವೆ, ಧಾರವಾಡದ ಪ್ರಕಾಶ ಹೂಗಾರ ತಬಲಾ ಸೇವೆ ಸಲ್ಲಿಸಲಿದ್ದಾರೆ.ಈ ನಡುವೆ ಮಾ.೨೦ ರಂದು ಕುಂಚನೂರಿನ ಹರಿಪ್ರಿಯ ಗೋಶಾಲೆಯ ಸವಿತಾನಂದ ಮಹಾಸ್ವಾಮಿಗಳು ಸಾವಯವ ಕೃಷಿ ನೇತ್ರಾಮೃತ ಬಿಂದು ಮತ್ತು ಮೊಣಕಾಲು ನೋವಿನ ಬಗ್ಗೆ ಮಾರ್ಗದರ್ಶನ ಮಾಡಲಿದ್ದಾರೆ. ಜತೆಗೆ ಮಾ.೨೬ ರಂದು ತಾಳಿಕೋಟಿ ಖಾಸ್ಗತೇಶ್ವರ ವಿರಕ್ತಮಠದ ಸಿದ್ದಲಿಂಗ ದೇವರು, ಮಾ.೨೭ ರಂದು ಮಮದಾಪೂರ ವಿರಕ್ತಮಠದ ಅಭಿನವ ಮುರುಗೇಂದ್ರ ಮಹಾಸ್ವಾಮಿಗಳು, ಮಾ.೨೮ ರಂದು ಯರನಾಳ ಹಿರೇಮಠದ ಶಿವಪ್ರಸಾದ ದೇವರು ಪ್ರವಚನ ನೀಡಲಿದ್ದಾರೆ ಎಂದು ಜಾತ್ರಾ ಸಮಿತಿ ಸದಸ್ಯ ವಿಶ್ವನಾಥ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ಜಾಯವಾಡಗಿಯ ಸರ್ಕಾರಿ ಪ್ರೌಢ ಶಾಲೆಯ ಶಿಕ್ಷಕಿ ಮಲ್ಲಮ್ಮ ಚೌಧರಿ ಅವರಿಗೆ ವೀರರಾಣಿ ಕಿತ್ತೂರ ರಾಣಿ ಚೆನ್ನಮ್ಮ ಪ್ರಶಸ್ತಿ ಲಭಿಸಿದೆ. ಇತ್ತೀಚೆಗೆ ಗದಗ ದಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರ ಸಂಘ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರಧಾನ ಮಾಡಲಾಯಿತು ಎಂದು ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಜೀವನದಲ್ಲಿ ಶಿಕ್ಷಣ ಪಡೆಯುವದು ಮುಖ್ಯವಾಗಿದೆ. ಶಿಕ್ಷಣವಂತರಾದರೆ ಜೀವನವನ್ನು ಸುಗಮವಾಗಿ ಸಾಗಿಸಬಹುದು. ಈ ನಿಟ್ಟಿನಲ್ಲಿ ಪಾಲಕರು ತಮ್ಮ ಮಕ್ಕಳನ್ನು ಶಿಕ್ಷಣವಂತರನ್ನಾಗಿ ಮಾಡಬೇಕೆಂದು ಗೊರವಗುಂಡಗಿ ಪುಣ್ಯಕೋಟಿ ಆಶ್ರಮದ ವರಲಿಂಗೇಶ್ವರ ಸ್ವಾಮೀಜಿ ಹೇಳಿದರು.ತಾಲೂಕಿನ ಇಂಗಳೇಶ್ವರ ಗ್ರಾಮದ ಉಕ್ಕಲಿ ರಸ್ತೆಯಲ್ಲಿರುವ ಎಲ್‌ಟಿ-೨ ತಾಂಡಾದ ಹತ್ತಿರವಿರುವ ಟೋಕರೆ ಕೋಳಿ ಸಮಾಜ ಸಂಸ್ಥೆಯ ಟೋಕರೆ ಕೇಳಿ ಪೂರ್ವ ಪ್ರಾಥಮಿಕ, ಪ್ರಾಥಮಿಕ ಶಾಲೆಯಲ್ಲಿ ಭಾನುವಾರ ಸಂಜೆ ಹಮ್ಮಿಕೊಂಡಿದ್ದ ೩೫ ನೇ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಶಾಲಾ ಸಾಂಸ್ಕ್ರತಿಕ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯು ಅನೇಕ ಸಂತರ-ಮಹಾತ್ಮರಿಗೆ ಜನ್ಮತಾಣವಾಗಿದೆ. ಈಚೆಗೆ ಜಿಲ್ಲೆಯು ಶೈಕ್ಷಣಿಕವಾಗಿ ಅಭಿವೃದ್ಧಿಯಾಗುತ್ತಿದೆ. ಬೇರೆ ಜಿಲ್ಲೆಯವರು ವಿಜಯಪುರ ಜಿಲ್ಲೆಗೆ ವ್ಯಾಸಂಗಕ್ಕೆ ಬರುತ್ತಿರುವದು ಕಾಣಬಹುದಾಗಿದೆ. ಈ ಭಾಗದಲ್ಲಿರುವ ಟೋಕರೆ ಕೋಳಿ ಸಮಾಜ ಸೇವಾ ಸಂಸ್ಥೆಯು ಸಹ ಬಡ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಪೂರ್ವ ಪ್ರಾಥಮಿಕ, ಪ್ರಾಥಮಿಕ ಶಾಲೆಯನ್ನು ನಡೆಸುತ್ತಿರುವದು ಶ್ಲಾಘನೀಯ. ಈಗಾಗಲೇ ಈ ಸಂಸ್ಥೆಯು ಅನುದಾನಕ್ಕೆ ಒಳಪಡಬೇಕಾಗಿತ್ತು. ಮುಂದಿನ ದಿನಗಳಲ್ಲಿ ಸರ್ಕಾರದ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಕೃಷ್ಣಾ ನದಿಯ ಹೂಳು ತುಂಬಿದ ಮಣ್ಣನ್ನು ರೈತನ ಸವಳು-ಜವಳು ಭೂಮಿಗೆ ಮಣ್ಣು ಸಾಗಿಸಲು ಅನುಮತಿ ನೀಡುವಂತೆ ಕೋರಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆಯ ತಾಲೂಕು ಘಟಕದ ವತಿಯಿಂದ ಸೋಮವಾರ ತಹಸೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು.ಪಟ್ಟಣದ ಪ್ರವಾಸಿ ಮಂದಿರದಿಂದ ಬಸವೇಶ್ವರ ವೃತ್ತ, ಸಂಗೊಳ್ಳಿ ರಾಯಣ್ಣ ವೃತ್ತ, ಅಂಬೇಡ್ಕರ್ ವೃತ್ತ, ಕಿತ್ತೂರು ರಾಣಿ ಚನ್ನಮ್ಮ ವೃತ್ತ ಮಾರ್ಗವಾಗಿ ಪ್ರತಿಭಟನಾ ಮೆರವಣಿಗೆಯ ಮೂಲಕ ತಹಸೀಲ್ದಾರ ಕಚೇರಿಯವರೆಗೆ ಆಗಮಿಸಿದರು. ಅಲ್ಲಿ ಬಹಿರಂಗ ಸಭೆ ನಡೆಸಿ ಸಂಘದ ರಾಜ್ಯದ ಪ್ರ.ಕಾರ್ಯದರ್ಶಿ ಸಂಗಣ್ಣ ಬಾಗೇವಾಡಿ, ಜಿಲ್ಲಾ ಪ್ರ.ಕಾರ್ಯದರ್ಶಿ ಗುರುಸಂಗಪ್ಪ ಹಂಡರಗಲ್ಲ, ತಾಲೂಕು ಅಧ್ಯಕ್ಷ ಅಯ್ಯಪ್ಪ ಬಿದರಕುಂದಿ, ಪ್ರ ಕಾರ್ಯದರ್ಶಿ ವಾಯ್.ಎಲ್.ಬಿರಾದಾರ, ಹಾಸ್ಯ ಕಲಾವಿದ ಶ್ರೀಶೈಲ ಹೂಗಾರ ಮತ್ತೀತರರು ಮಾತನಾಡಿ, ನದಿಯಲ್ಲಿನ ಮಣ್ಣು ಸಾಕಷ್ಟು ಫಲವತ್ತಾಗಿರುತ್ತದೆ. ಅದನ್ನು ನಮ್ಮ ಹೊಲಗಳಿಗೆ ಹಾಕಿದಾಗ ಒಳ್ಳೆಯ ಬೆಳೆ ಬರುತ್ತೆ. ಹಾಗಾಗಿ ಮಣ್ಣು ಸಾಗಿಸಲು ಅನುಮತಿ ನೀಡಬೇಕು ಮತ್ತು ತಾಲೂಕಿನ ಬಾಲಾಜಿ ಶುಗರ್ಸನವರು ರೈತರಿಗೆ ೨ ತಿಂಗಳಾದರೂ ರೈತರಿಗೆ…

Read More