Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಆಲಮೇಲ: ಜಮ್ಮು-ಕಾಶ್ಮೀರದ ಅನಂತನಾಗ್ ಜಿಲ್ಲೆಯ ಪಹಲ್ಗಾಮ್ ನ ಬೈಸರನ್ ಕಣಿವೆ ಪ್ರದೇಶದಲ್ಲಿ ಉಗ್ರರು ನಡೆಸಿದ ನರಮೇಧವನ್ನು ಖಂಡಿಸಿ ಆಲಮೇಲ ಬ್ಲಾಕ್ ಕಾಂಗ್ರೆಸ್ ವತಿಯಿಂದ ಕ್ಯಾಂಡಲ್ ಮಾರ್ಚ್ ಮೂಲಕ ಶ್ರದ್ಧಾಂಜಲಿ ಸಭೆ ನಡೆಸಲಾಯಿತು.ಈ ವೇಳೆ ಕಾಂಗ್ರೆಸ್ ಮುಖಂಡ ರಮೇಶ ಭಂಟನೂರ ಮಾತನಾಡಿ ಭಾರತವು ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಭೂಲೋಕದ ಸ್ವರ್ಗ ಕಾಶ್ಮೀರ ಕಣಿವೆ ಭಾಗದಲ್ಲಿ ಪದೇ ಪದೇ ಭಯೋತ್ಪಾದಕ ಕೃತ್ಯಗಳು ನಡೆಯುತ್ತಿವೆ. ಇದು ಮತೀಯ ಸಾಮರಸ್ಯ ಕದಡುವ ಹೀನಕೃತ್ಯವಾಗಿದ್ದು , ಸರ್ಕಾರ ಬೇಗನೆ ಉಗ್ರಗಾಮಿಗಳನ್ನು ಬಂಧಿಸಿ ಗಲ್ಲು ಶಿಕ್ಷೆ ವಿಧಿಸಬೇಕು ಎಂದರು.ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಾದೀಕ ಸುಂಬಡ ಮಾತನಾಡಿ, 26 ಜನ ಅಮಾಯಕ ಪ್ರವಾಸಿಗರ ಭೀಕರ ಹತ್ಯೆಯ ನೈತಿಕ ಹೊಣೆಹೊತ್ತು ಕೇಂದ್ರ ಗೃಹ ಸಚಿವರು ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದರು.ಭದ್ರತಾ ವೈಫಲ್ಯವೇ ಈ ಘಟನೆಗೆ ಕಾರಣವಾಗಿದ್ದು, ಭಯೋತ್ಪಾದಕರಿಗೆ ಯಾವುದೇ ಧರ್ಮವಿಲ್ಲ. ಭಯೋತ್ಪಾದನೆಯೇ ಒಂದು ಧರ್ಮವಾಗಿದ್ದು ಇಡೀ ಜಗತ್ತಿಗೆ ಅಂಟಿದ ಪಿಡುಗಾಗಿದೆ ಎಂದು ಬ್ಲಾಕ್ ಡಾಕ್ಟರ್ಸ್ ಸೆಲ್ ಅಧ್ಯಕ್ಷ ಡಾ.ಸಮೀರ ಹಾದಿಮನಿ…
ಚಿಂತನೆ- ಡಾ.ದಾನಮ್ಮ. ಚ. ಝಳಕಿ ಉದಯರಶ್ಮಿ ದಿನಪತ್ರಿಕೆ ವಚನ ವಿಶ್ಲೇಷಣೆ ಅಕ್ಕಿ ಬೇಳೆ ಬೆಲ್ಲ ಉಪ್ಪು ಮೆಣಸು ಅಡಕೆ ಫಲ ರಸ ದ್ರವ್ಯ ಮುಂತಾದದ್ರವ್ಯಕ್ಕೆ ವ್ರತವೊ ? ಮುಟ್ಟುವ ತಟ್ಟುವ ಸೋಂಕುವ ಚಿತ್ತಕ್ಕೆ ವ್ರತವೊ ?ಇವು ಬಾಹ್ಯದಲ್ಲಿ ಮಾಡುವ ಸೌಕರಿಯವಲ್ಲದೆ ವ್ರತಕ್ಕೆ ಸಲ್ಲ.ವ್ರತವಾವುದೆಂದಡೆತನ್ನಯ ಸ್ವಪ್ನದಲ್ಲಿ ತನಗಲ್ಲದುದ ಕಂಡಡೆ,ತಾ ಮುಟ್ಟದುದ ಮುಟ್ಟಿದಡೆ, ತಾ ಕೊಳ್ಳದುದ ಕೊಂಡಡೆ,ಆ ಸೂಕ್ಷ್ಮತನುವಿನಲ್ಲಿ ಆ ತನುವಂ ಬಿಟ್ಟು ನಿಂದುದು ವ್ರತ.ಸ್ಥೂಲತನುವಿನಲ್ಲಿ ಸರ್ವರ ನಿಂದೆಗೊಡಲಾಗದೆ,ಮಾಡಿಕೊಂಡ ನೇಮಕ್ಕೆ ಕೇಡುಬಂದಲ್ಲಿಆ ಅಂಗಕ್ಕೆ ಓಸರಿಸದೆ ನಿಂದುದು ಆಚಾರ.ಇಂತೀ ಅಂತರಂಗದಲ್ಲಿ ವ್ರತ, ಬಹಿರಂಗದಲ್ಲಿ ಆಚಾರ,ಇಂತೀ ಉಭಯ ಸಿದ್ಭವಾಗಿ ನಡೆವುದೆ ವ್ರತ ಆಚಾರzಇಂತಿವನರಿದು ಮರೆದಲ್ಲಿ, ತಾ ಮಾಡಿಕೊಂಡ ಕುತ್ತಕ್ಕೆ ಹಾಡಿ ಮದ್ದನರೆದಂತೆ,ಜಗಕ್ಕೆ ಭಕ್ತನಾಗಿ ಆತ್ಮಂಗೆ ಅನುಸರಣೆಯಾದಲ್ಲಿ ಆಚಾರವೆ ಪ್ರಾಣವಾದರಾಮೇಶ್ವರಲಿಂಗಕ್ಕೆ ಸಲ್ಲದ ನೇಮ.ಸಮಗ್ರ ವಚನ ಸಂಪುಟ: 5 ವಚನದ ಸಂಖ್ಯೆ: ೪೩೬ ದೇವರು ಮತ್ತು ಭಕ್ತ ಇವರ ನಡುವೆ ನಡೆವ ಭೋಗ ಸ್ಥಿತಿಯ ಕುರಿತು ಅಕ್ಕಮ್ಮ ಈ ವಚನದಲ್ಲಿ ವಿವರಣೆಯನ್ನು ಕೊಡುತ್ತಾರೆ. ದೇವರಿಗೂ ಜಾತಿಯನ್ನು ಅಂಟಿಸಿ, ಜಾತಿ ದೇವರನ್ನಾಗಿ…
ಲೇಖನ – ಜಯಶ್ರೀ.ಜೆ.ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ನನ್ನ ಮನಸ್ಥಿತಿ (ಮೂಡ್)ಯಾವಾಗ ಹೇಗೆ ಇರುತ್ತೆ ಅಂತ ನನಗೇ ಗೊತ್ತಿರುವುದಿಲ್ಲ. ಒಮ್ಮೊಮ್ಮೆ ನವೋಲ್ಲಾಸದಿಂದ ಇರುವ ನಾನು ಒಮ್ಮಿಂದೊಮ್ಮೆಲೇ ಎಷ್ಟು ಮಾಡಿದರೂ ಅಷ್ಟೇ ನನ್ನಿಂದ ಏನೂ ಸಾಧಿಸಲು ಸಾಧ್ಯವಿಲ್ಲ ಎಂದು ಕೈ ಚೆಲ್ಲಿ ಕುಳಿತು ಬಿಡುತ್ತೇನೆ. ನನಗೆ ಇದೇಕೆ ಹೀಗಾಗುತ್ತಿದೆ? ಏನನ್ನೇ ಆಗಲಿ ನಿರಂತರವಾಗಿ ಮಾಡುವ ಅಭ್ಯಾಸ ನನ್ನಲ್ಲಿ ಏಕೆ ಬರುತ್ತಿಲ್ಲ? ಇಂದೇಕೋ ನನ್ನ ಮೂಡ್ ಸರಿಯಿಲ್ಲ. ನನಗೆ ಯಾವ ಕೆಲಸವನ್ನೂ ಮಾಡಲಾಗುತ್ತಿಲ್ಲ. ಎನ್ನುವ ಮಾತುಗಳನ್ನು ಮೇಲಿಂದ ಮೇಲೆ ಹೇಳುತ್ತಿರುತ್ತೇವೆ. ಮನಸ್ಥಿತಿಯನ್ನು ಚೆನ್ನಾಗಿ ಇಟ್ಟುಕೊಳ್ಳಲು ಮಾಡಬೇಕಾದದ್ದಾರೂ ಏನು? ಎಂಬ ಪ್ರಶ್ನೆ ತಲೆಯನ್ನು ಹೊಕ್ಕು ಜೀವ ತಿನ್ನುತ್ತವೆ. ಸರಿಯಾದ ಉತ್ತರ ಮಾತ್ರ ದೊರೆಯುವುದಿಲ್ಲ. ಸದಾ ಮನಸ್ಸು ಗೊಂದಲದ ಗೂಡಾಗಿ ಬಿಡುತ್ತದೆ. ನಾನಂದುಕೊಂಡಂತೆ ಕೆಲಸ ನಿರ್ವಹಿಸಲು, ಇತರರೊಂದಿಗೆ ಚೆನ್ನಾಗಿ ನಡೆದುಕೊಳ್ಳಬೇಕೆಂದರೆ ಎನು ಮಾಡಬೇಕೆಂದು ಹೊಳೆಯುತ್ತಿಲ್ಲ. ಎನ್ನುವ ಗೊಂದಲ ನಮ್ಮಲ್ಲಿ ಬಹುತೇಕ ಜನರಿಗೆ ಇರುತ್ತದೆ. ಮನಸ್ಸಿನ ಶಾಂತಿಗೆ ಯಾವುದೂ ಭಂಗ ತರುವುದಿಲ್ಲ ಎನ್ನುವ ಗಟ್ಟಿ ನಿಲುವು ಹೊಂದಬೇಕಾದರೆ…
ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಸರ್ಕಾರದ ನೀತಿ ಮತ್ತು ಯೋಜನೆಗಳನ್ನು ಅಂತರ್ಜಾಲ ಬಳಸುವ ಜನರಿಗೆ ಡಿಜಿಟಲ್ ಜಾಹೀರಾತುಗಳ ಮೂಲಕ ತಲುಪಿಸಲು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕರ್ನಾಟಕ ಡಿಜಿಟಲ್ ಜಾಹೀರಾತು ಮಾರ್ಗಸೂಚಿ – 2024 ಅನ್ನು ಜಾರಿಗೆ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.ಕರ್ನಾಟಕ ಸರ್ಕಾರವು ಡಿಜಿಟಲ್ ಜಾಹೀರಾತಿಗಾಗಿ ಡಿಜಿಟಲ್ ಜಾಹೀರಾತು ಏಜೆನ್ಸಿ ಮತ್ತು ಡಿಜಿಟಲ್ ಮಾಧ್ಯಮಗಳನ್ನು ಎಂಪ್ಯಾನಲ್ಮೆಂಟ್ ಮಾಡಿಕೊಳ್ಳುತ್ತಿದೆ. ದೇಶದಲ್ಲಿಯೇ ಮೊದಲ ಬಾರಿಗೆ ಡಿಜಿಟಲ್ ಏಜೆನ್ಸಿ ಮತ್ತು ಮಾಧ್ಯಮಗಳನ್ನು ನೊಂದಾಯಿಸಿಕೊಳ್ಳಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕೆಲವು ವರ್ಷಗಳಿಂದ ಮಾಧ್ಯಮದ ವ್ಯಾಪ್ತಿ ಮತ್ತು ಸ್ವರೂಪ ಬದಲಾಗಿದೆ. ಅಂತರ್ಜಾಲ, ಖಾಸಗಿ ಕಂಪ್ಯೂಟರ್, ಸ್ಮಾರ್ಟ್ ಟಿವಿ ಹಾಗೂ ಸ್ಮಾರ್ಟ್ ಫೋನ್, ಸಾಮಾಜಿಕ ಜಾಲತಾಣಗಳ ಬಳಕೆ ಹೆಚ್ಚಾಗಿದೆ. ಸಾಂಪ್ರದಾಯಿಕ ಜಾಹೀರಾತುಗಳಿಗಿಂತ ಡಿಜಿಟಲ್ ಜಾಹೀರಾತು ಹೆಚ್ಚು ಪ್ರಭಾವಶಾಲಿಯಾಗಿದೆ. ಜೊತೆಗೆ, ಹೆಚ್ಚು ವ್ಯಾಪ್ತಿ ಮತ್ತು ನಿರ್ದಿಷ್ಟ ಜನರನ್ನು ತಲುಪುತ್ತಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಕಾರ್ಯಕ್ರಮಗಳು ಮತ್ತು ನೀತಿಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಹಾಗೂ ಮಾಹಿತಿ,…
ಬಿಎಲ್ಡಿಇ ಸಂಸ್ಥೆಯಲ್ಲಿ ದೇಶದಲ್ಲಿಯೇ ಪ್ರಥಮವಾದ ಜಿರಿಯಾಟ್ರಿಕ್ ಫಾರ್ಮಾಸ್ಯೂಟಿಕಲ್ ಕೇರ್ ಪ್ರ್ಯಾಕ್ಟೀಸ್ ಕೋರ್ಸ್ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಡಿ.ಫಾರ್ಮಾ ಕೋರ್ಸು ಮುಗಿಸಿರುವ ವಿದ್ಯಾರ್ಥಿಗಳಿಗಾಗಿ ಹಿರಿಯ ನಾಗರಿಕರ ವೃದ್ದಾಪ್ಯ ಕಾಯಿಲೆಗಳಗೆ ಔಷಧೋಪಚಾರ ಮತ್ತು ಆರೈಕೆ ಕುರಿತು ತರಬೇತಿ ನೀಡುವ ಹಾಗೂ ದೇಶದಲ್ಲಿಯೇ ಪ್ರಥಮವಾದ ಜಿರಿಯಾಟ್ರಿಕ್ ಫಾರ್ಮಾಸ್ಯೂಟಿಕಲ್ ಕೇರ್ ಪ್ರ್ಯಾಕ್ಟೀಸ್(Geriatric Pharmaceutical Care Practice – GPCP) ಕೋರ್ಸನ್ನು ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಎಸ್.ಎಂ.ಔಷಧ ವಿಜ್ಞಾನ ಮಹಾವಿದ್ಯಾಲಯ ಮತ್ತು ಸಂಶೋಧನೆ ಕೇಂದ್ರದಲ್ಲಿ ಪ್ರಾರಂಭಿಸಲಾಗಿದೆ.ಕಾಲೇಜಿನಲ್ಲಿ ಸೋಮವಾರ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ರಾಷ್ಟ್ರೀಯ ಸಾಮಾಜಿಕ ರಕ್ಷಣಾ ಸಂಸ್ಥೆ, ಸಮಾಜ ನ್ಯಾಯ ಮತ್ತು ಸಬಲೀಕರಣ ಇಲಾಖೆಯ ಹಿರಿಯ ನಾಗರಿಕರ ವಿಭಾಗ, ಎನ್. ಸಿ. ಡಿ. ಎ. ಪಿ ಮತ್ತು ಪಿಎಂಯು ಉಪನಿರ್ದೇಶಕ ಮತ್ತು ಮುಖ್ಯಸ್ಥ ಡಾ. ಎಚ್. ಸಿ. ಶ್ರೀಧರ ಚನ್ನಕೇಶವ ರಂಗಾ ರೆಡ್ಡಿ ವರ್ಚ್ಯೂವಲ್ ಆಗಿ ಉದ್ಘಾಟಿಸಿದರು. ಇತ್ತ ನಗರದಲ್ಲಿ ಫಾರ್ಮಸಿ ಕಾಲೇಜಿನ ನಿರ್ದೇಶಕ ಡಾ. ಆರ್. ಬಿ. ಕೊಟ್ನಾಳ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಸಂಸ್ಥೆಯ ಎ.ವಿಎಸ್ ಆಯುರ್ವೇದ ಮಹಾವಿದ್ಯಾಲಯ ಕಾಯಚಿಕಿತ್ಸೆ ವಿಭಾಗದ ವತಿಯಿಂದ ಏಪ್ರಿಲ್ 26 ರಂದು ಶನಿವಾರ ಉಚಿತ ತಪಾಸಣೆ ಮತ್ತು ಚಿಕಿತ್ಸಾ ಶಿಬಿರ(BMD Camp) ನಡೆಯಲಿದೆ.ಈ ಶಿಬಿರದಲ್ಲಿ ಕೀಲುಗಳಲ್ಲಿ ನೋವು, ಕೈ-ಕಾಲು ನೋವು, ಬೆನ್ನು ನೋವು, ಮೂಳೆಗಳಲ್ಲಿ ಕ್ಯಾಲ್ಸಿಯಂ ಕೊರತೆ(ಆಸ್ಟಿಯೊಪೊರೊಸಿಸ್) ಲಕ್ಷಣಗಳು ಇರುವವರಿಗೆ ಮೂಳೆಗಳ ಸಾಂದ್ರತೆ ಮಾಪನ ಯಂತ್ರದಿಂದ(BMD Test) ಉಚಿತ ತಪಾಸಣೆ ಮಾಡಲಾಗುವುದು.35 ರಿಂದ 65 ವರ್ಷದೊಳಗಿನ ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 7975160825 ಮತ್ತು 9513397413 ಸಂಪರ್ಕಿಸುವಂತೆ ಕಾಲೇಜಿನ ಪ್ರಾಚಾರ್ಯ ಡಾ. ಸಂಜಯ ಕಡ್ಲಿಮಟ್ಟಿ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಮ್ಮು ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಭಯೋತ್ಪಾದಕರ ದಾಳಿಯನ್ನು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ತೀವ್ರವಾಗಿ ಖಂಡಿಸಿದೆ.ಪಹಲ್ಗಾಮನಲ್ಲಿ ನಡೆದ ನರಮೇಧ ಖಂಡಿಸಿ ಬುಧವಾರ ನಗರದಲ್ಲಿ ಎಬಿವಿಪಿ ಸಭೆ ನಡೆಸಿ, ಉಗ್ರರನ್ನು ಕೂಡಲೇ ಬಂಧಿಸಲು ಆಗ್ರಹಿಸಿ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಮಲ್ಲಿಕಾರ್ಜುನ ಮಾಳಿ, ನಗರ ಸಹ ಕಾರ್ಯದರ್ಶಿ ಅಭಿಷೇಕ ಬಡಿಗೇರ ಹಾಗೂ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯೆ ಸುರೇಖಾ ಕುಲಕರ್ಣಿ ಮಾತನಾಡಿ, ಜಮ್ಮು ಕಾಶ್ಮೀರದ ಪಹಲ್ಗಾಮನಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ಹೇಡಿತನದ ಗುಂಡಿನ ದಾಳಿ ಕೃತ್ಯವನ್ನು ಎಬಿವಿಪಿ ತೀವ್ರವಾಗಿ ಖಂಡಿಸುತ್ತದೆ. ಜಮ್ಮು ಮತ್ತು ಕಾಶ್ಮೀರ ಭಾರತದ ಅವಿಭಾಜ್ಯ ಅಂಗವೆಂಬುದು ಸಾರ್ವಕಾಲಿಕ ಸತ್ಯ, ಅಲ್ಲಿನ ಪ್ರತ್ಯೇಕವಾದದ ಮನಸ್ಥಿತಿಯನ್ನು ಬದಲಾಯಿಸಲು ಹಾಗೂ ಜನ-ಜೀವನ ಸ್ಥಿತಿಗತಿಗಳನ್ನು ಸ್ಥಿರಗೊಳಿಸಿ ಶಾಂತಿಯುತ ಕಾಶ್ಮೀರವೆಂಬುದನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರ ಈಗಾಗಲೇ ಸಾಕಷ್ಟು ಕ್ರಮಗಳನ್ನು ತೆಗೆದುಕೊಂಡಿದೆ ಎಂದರು.ಈ ಸಂದರ್ಭದಲ್ಲಿ ಸಂದೀಪ ಅರಳಗುಂಡಿ, ಚೇತನ ಕೋರವಾರ, ಪವಿತ್ರಾ, ಸಹನಾ, ಐಶ್ವರ್ಯ, ನೇಸರ ಬಜಂತ್ರಿ, ಸಂಜೀವ, ಕಾರ್ತಿಕ, ಪೂಜನ್ನ,…
ಯಾಳವಾರ ಗ್ರಾಪಂ ವ್ಯಾಪ್ತಿಯ ನಾಗರಾಳ ಡೋಣ ಪುನರ್ವಸತಿ ಕೇಂದ್ರದಲ್ಲಿ ನಿರ್ಮಿಸುತ್ತಿರುವ ಕುಡಿಯುವ ನೀರಿನ ಟ್ಯಾಂಕ್ ಮೊದಲ ಪುಟ ದೇವರಹಿಪ್ಪರಗಿ: ನಾಗರಾಳ ಡೋಣ ಪುನರ್ವಸತಿ ಕೇಂದ್ರದಲ್ಲಿ ನಿರ್ಮಿಸುತ್ತಿರುವ ಕುಡಿಯುವ ನೀರಿನ ಟ್ಯಾಂಕ್ ಸ್ಥಳವನ್ನು ಬದಲಾಯಿಸಲು ಆಗ್ರಹಿಸಿ ಜಯ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ಪಿಡಿಓ ಮಲ್ಲಿನಾಥ ಮಸಳಿ ಅವರಿಗೆ ಮನವಿ ಸಲ್ಲಿಸಿದರು.ತಾಲ್ಲೂಕಿನ ಯಾಳವಾರ ಗ್ರಾಮ ಪಂಚಾಯಿತಿಗೆ ಬುಧವಾರ ತೆರಳಿದ ಜಯ ಕರ್ನಾಟಕ ಸಂಘಟನೆಯ ಪದಾಧಿಕಾರಿಗಳು ಟ್ಯಾಂಕ್ ನಿರ್ಮಾಣದ ಕುರಿತು ಗಮನ ಸೆಳೆದರು.ಈ ಸಂದರ್ಭದಲ್ಲಿ ಸಂಘಟನೆಯ ಜಿಲ್ಲಾ ವಕ್ತಾರ ಚನ್ನಪ್ಪಗೌಡ ಬಿರಾದಾರ ಮಾತನಾಡಿ, ಪಂಚಾಯಿತಿ ವ್ಯಾಪ್ತಿಯ ನಾಗರಾಳಡೋಣ ಪುನರ್ವಸತಿ ಕೇಂದ್ರದಲ್ಲಿ ನೀರಿನ ಟ್ಯಾಂಕ್ ನಿರ್ಮಿಸಲಾಗುತ್ತಿದೆ. ಈ ಸ್ಥಳದಲ್ಲಿ ಟ್ಯಾಂಕ್ ನಿರ್ಮಿಸುವುದರಿಂದ ಸುತ್ತಮುತ್ತಲಿನ ಮನೆಗಳು ಮತ್ತು ಸಾರ್ವಜನಿಕರಿಗೆ ಓಡಾಡಲು ತೊಂದರೆಯಾಗುತ್ತದೆ. ಜೊತೆಗೆ ಟ್ಯಾಂಕ್ ತುಂಬಿ ಹೊರಹೋಗುವ ಹೆಚ್ಚಾದ ನೀರಿನಿಂದ ಸ್ಥಳೀಯ ಪ್ರದೇಶ ರಾಡಿಮಯವಾಗಲಿದೆ. ಅಲ್ಲದೇ ಸುತ್ತಲಿನ ಜಮೀನುಗಳಲ್ಲಿ ನೀರು ನಿಂತು ಬೆಳೆಹಾನಿ ಆಗುವ ಸಾಧ್ಯತೆಗಳಿವೆ. ಆದ್ದರಿಂದ ಗ್ರಾಮಸ್ಥರು ಈ ಕುರಿತು ಮನವಿ ಮಾಡಿದ್ದು, ಕೂಡಲೇ ಟ್ಯಾಂಕ್ ನಿರ್ಮಾಣದ…
ದೇವರಹಿಪ್ಪರಗಿ ತಾಲ್ಲೂಕಿನ ಕೋರವಾರ ಹಾಗೂ ವರ್ಕಾನಳ್ಳಿ ಗ್ರಾಮದ ರೈತರಿಗೆ ಬೆಳೆವಿಮೆ ವಿತರಣೆಯಲ್ಲಿ ಮೋಸ ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಕೋರವಾರ ಹಾಗೂ ವರ್ಕಾನಳ್ಳಿ ಗ್ರಾಮಗಳ ರೈತರಿಗೆ ಬೆಳೆವಿಮೆ ವಿತರಣೆಯಲ್ಲಿ ಮೋಸ ಮಾಡಿದ ತಪ್ಪಿತಸ್ಥರಿಗೆ ಶಿಕ್ಷೆಗೆ ಗುರಿಪಡಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಪದಾಧಿಕಾರಿಗಳು ಉಪತಹಶೀಲ್ದಾರ ಸುರೇಶ ಮ್ಯಾಗೇರಿ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ತಹಶೀಲ್ದಾರ ಕಚೇರಿಗೆ ಬುಧವಾರ ಆಗಮಿಸಿದ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ತಾಲ್ಲೂಕು ಪದಾಧಿಕಾರಿಗಳು ವಿಮೆಯ ಮೋಸದ ಕುರಿತು ಗಮನ ಸೆಳೆದರು.ಈ ಸಂದರ್ಭದಲ್ಲಿ ತಾಲ್ಲೂಕು ಅಧ್ಯಕ್ಷ ಆಯ್.ಎಸ್.ಕುಳೇಕುಮಟಗಿ ಮಾತನಾಡಿ, ಕೋರವಾರ ವ್ಯಾಪ್ತಿಯಲ್ಲಿ ೧೨೦೦ರಿಂದ ೧೫೦೦ ರಷ್ಟು ರೈತರು ಬೆಳೆ ವಿಮೆ ತುಂಬಿದ್ದು, ಇವರ ಪೈಕಿ ಕೇವಲ ೬೨ ರೈತರಿಗೆ ಮಾತ್ರ ವಿಮೆ ಬಿಡುಗಡೆಯ ಮಾಹಿತಿಯಿದೆ. ಇದರಲ್ಲಿ ೨೦ ಜನ ರೈತರ ಖಾತೆಗೆ ಹಣ ಜಮೆಯಾಗದೇ ಕೇವಲ ಶಿವರಾಜ ಸಂಗಪ್ಪ ಅಮರಖೇಡ ಎಂಬುವವರ ಒಬ್ಬರ ಖಾತೆಗೆ ಹಣ ಜಮೆ ಮಾಡಲಾಗಿದೆ. ಇದರಿಂದ…
ವಕ್ಫ್ ನೆಪದಲ್ಲಿ ನಡೆವ ಹೋರಾಟದ ಸಮಯದಲ್ಲಿ ಹಿಂದೂಗಳ ಆಸ್ತಿಗಳಿಗೆ ಹಾನಿಯಾದರೆ, ಕರೆ ನೀಡಿದ ಮುಖಂಡರು & ಹೋರಾಟಗಾರರ ಮೇಲೆ ಕಾನೂನು ಕ್ರಮ ಜರುಗಿಸಲು ಒತ್ತಾಯಿಸಿ ಶಾಸಕ ಯತ್ನಾಳ ಪತ್ರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದಲ್ಲಿ ನನ್ನ ವಿರುದ್ಧ ಅಥವಾ ವಕ್ಫ್ ನೆಪದಲ್ಲಿ ನಡೆಯುವ ಹೋರಾಟದ ಸಮಯದಲ್ಲಿ ಆಕಸ್ಮಾತ ಹಿಂದೂಗಳ ಆಸ್ತಿ-ಪಾಸ್ತಿಗಳಿಗೆ ಹಾನಿಯಾದರೆ, ಹೋರಾಟಕ್ಕೆ ಕರೆ ನೀಡಿದ ಮುಖಂಡರುಗಳು ಹಾಗೂ ಹೋರಾಟಗಾರರ ಮೇಲೆ ಕಾನೂನು ಕ್ರಮ ಜರುಗಿಸುವವಂತೆ ಒತ್ತಾಯಿಸಿ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು ಗೃಹ ಸಚಿವರು, ಪೊಲೀಸ್ ಮಹಾನಿರ್ದೇಶಕರು, ಐಜಿಪಿ ಉತ್ತರ ವಲಯ ಬೆಳಗಾವಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳಿಗೆ ಮಂಗಳವಾರ ಪತ್ರ ಬರೆದಿದ್ದಾರೆ.ಇದೇ ಬರುವ 28-4-2025 ರಂದು ಕೆಲವು ಅಲ್ಪಸಂಖ್ಯಾತ ಮುಸ್ಲಿಂ ಮುಖಂಡರು ನನ್ನ ವಿರುದ್ಧ ವಿಜಯಪುರ ನಗರದಲ್ಲಿ ಹೋರಾಟಕ್ಕೆ ಕರೆ ನೀಡಿದ್ದು, ಅಲ್ಲದೆ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧವಾಗಿಯೂ ಹೋರಾಟಕ್ಕೆ ಸಜ್ಜಾಗಿರುವುದು ತಿಳಿದುಬಂದಿದೆ. ಈ ಹೋರಾಟದಲ್ಲಿ ಭಾಗವಹಿಸಿದವರಿಂದ, ನಗರದಲ್ಲಿ ಯಾವುದೇ ಅಹಿತಕರ ಘಟನೆಗಳಾಗಲಿ ಅಥವಾ ಹಿಂದೂಗಳ…
