Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಇಂಡಿ: ಪಟ್ಟಣದ ಶ್ರೀ ಶಾಂತೇಶ್ವರ ದೇವಸ್ಥಾನದಲ್ಲಿ ಬೆಳಗ್ಗೆ ೬ ಗಂಟೆಗೆ ಪೂಜೆ ಸಲ್ಲಿಸಿ ಬಸವೇಶ್ವರ ವೃತ್ತದ ಮೂಲಕ ಎಲ್ಲರೂ ಬಸವರಾಜೇಂದ್ರ ದೇವಸ್ಥಾನದಲ್ಲಿ ಸೇರಿ ಪೂಜೆ ಸಲ್ಲಿಸಿ ನಂತರ ಶ್ರೀ ಶಾಂತೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಕಾಸುಗೌಡ ಬಿರಾದಾರ ಇವರ ಮನೆಯಲ್ಲಿ ಪ್ರಸಾದ ಸೇವಿಸಿ ಶ್ರೀಶೈಲಕ್ಕೆ ಪಾದಯಾತ್ರೆ ಬೆಳೆಸಿದರು.ಇಂಡಿಯಿಂದ ಸಾಲೋಟಗಿ,ಆಲಮೇಲ,ಸಿಂದಗಿ, ಯಂಕಂಚಿ, ಗೋಲಗೇರಿ, ಭೀಮರಾಯನಗುಡಿ, ಶಹಾಪುರ, ಹತ್ತಿಗುಡುರ, ದೇವದುರ್ಗ, ರಾಯಚೂರ, ಆಂಧ್ರದ ಶಾಂತಿನಗರ, ಆಲಮಪೂರ ನಿಂದ ಶ್ರೀಶೈಲಕ್ಕೆ ತೆರಳುವರು.ಸುಮಾರು ೧೨ ದಿವಸ ಪಾದಯಾತ್ರೆಯಲ್ಲಿ ಪಾಲ್ಗೊಳ್ಳುವರು.ಇಂಡಿಯಿಂದ ತಂಡಗಳ ರೂಪದಲ್ಲಿ ತೆರಳುತ್ತಿದ್ದು ತಾಲೂಕಿನ ಅನೇಕ ಗ್ರಾಮಗಳಿಂದಲೂ ಭಕ್ತರು ಪಾದಯಾತ್ರೆಯಲ್ಲಿದ್ದಾರೆ.ಇಂಡಿ ತಾಲೂಕಿನಿಂದ ಅಂದಾಜು ಐದು ಸಾವಿರಕ್ಕೂ ಹೆಚ್ಚು ಭಕ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.ಇಂಡಿಯ ಶಾಂತಪ್ಪ ದೇವರ, ಬಾಬುರಾಯ ಕುಡಿಗನೂರ, ಶಾಂತಯ್ಯ ಸ್ಥಾವರಮಠ, ಪರುತಯ್ಯ ಮಠ, ಸುಭಾಸ ಬಡಿಗೇರ, ದುಂಡಪ್ಪ ದೇವರ, ಭೀಮರಾಯ ಕುಂಬಾರ, ಶಿವಶರಣ ಬಾರಿಕಾಯಿ ಸೇರಿದಂತೆ ಅನೇಕ ಭಕ್ತರು ಪಾಲ್ಗೊಂಡಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಮಾ.೧೮ ರಂದು ಸಂಜೆ ೪ ಗಂಟೆಗೆ ಮುರಗೇಂದ್ರ ಶ್ರೀಗಳ ಹುಟ್ಟು ಹಬ್ಬ ಮತ್ತು ಬಡ ಮಕ್ಕಳ ಉಚಿತ ಪ್ರಸಾದ ನಿಲಯಕ್ಕೆ ಭೂಮಿ ಪೂಜೆ ಕುರಿತು ಬಸವೇಶ್ವರ ವೃತ್ತದಿಂದ ಅನ್ನ ಪ್ರಸಾದ ಮೂಲಕ ಮೆರವಣಿಗೆ ಮುರಗೇಂದ್ರ ಶ್ರೀಗಳ ಕುಟೀರದವರೆಗೆ ನಡೆಯುವದು ಎಂದು ಅಭಿನವ ಮುರಗೇಂದ್ರ ಶ್ರೀಗಳು ಹೇಳಿದರು.ಪಟ್ಟಣದ ಶಾಂತೇಶ್ವರ ಮಂಗಲ ಕಾರ್ಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಈಗಾಗಲೇ ಉಚಿತ ಪ್ರಸಾದ ನಿಲಯಕ್ಕೆ ಸರಕಾರದಿಂದ ೫೦ ಲಕ್ಷ ರೂ ಬಂದಿದೆ ಎಂದರು.ಸಂಜೆ ೬ ಗಂಟೆಗೆ ಧರ್ಮಸಭೆ ಜರುಗಲಿದ್ದು ಗೋಳಸಾರದ ಶ್ರೀಗಳು,ಅರ್ಜುಣಗಿ, ರೋಡಗಿ ಶ್ರೀಗಳು ಸೇರಿದಂತೆ ತಾಲೂಕಿನ ವಿವಿಧ ಮಠಾಧೀಶರು ಭಾಗವಹಿಸುವರು.ಇಂಡಿಯ ಶಾಸಕ ಯಶವಂತರಾಯಗೌಡ ಪಾಟೀಲರು, ಸಂಸದ ರಮೇಶ ಜಿಗಜಿಣಗಿ, ಅಪ್ಪು ಪಟ್ಟಣಶೆಟ್ಟಿ ಸೇರಿದಂತೆ ವಿವಿಧ ಗಣ್ಯರು ಉಪಸ್ಥಿತರಿರುವರು ಎಂದರು.ಕಾಸುಗೌಡ ಬಿರಾದಾರ ಮಾತನಾಡಿ, ಮುರಗೇಂದ್ರ ಶ್ರೀಗಳನ್ನು ರುದ್ರಾಕ್ಷಿಯಿಂದ ತುಲಾಭಾರ ಮಾಡಿ ರುದ್ರಾಕ್ಷಿ ಬಂದ ಭಕ್ತರಿಗೆ ಹಂಚುವ ಕಾರ್ಯಕ್ರಮವಿದೆ ಎಂದರು.ಕಳೆದ ಬಾರಿ ಶ್ರೀ ಗಳ ಹುಟ್ಟು ಹಬ್ಬಕ್ಕೆ ಸಾಮೂಹಿಕ ವಿವಾಹ ಮತ್ತು ಪ್ರತಿವರ್ಷ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಬ್ರಹ್ಮನ ಸೃಷ್ಟಿಯನ್ನೇ ತಲೆಕೆಳಗೆ ಮಾಡುವಂತಹ ಕವಿಯನ್ನು ಎರಡನೇ ಬ್ರಹ್ಮ ಎನ್ನುತ್ತಾರೆ. ಏಕೆಂದರೆ ಕವಿಯಲೊಂದು ಅಪೂರ್ವ ಕಲ್ಪನಾ ಶಕ್ತಿ ಅಡಗಿದೆ ಆದ್ದರಿಂದಲೇ ‘ರವಿ ಕಾಣದನ್ನು ‘ ಎಂದು ಕದಳಿ ವೇದಿಕೆ ಅಧ್ಯಕ್ಷೆ ಕವಿಯತ್ರಿ ಗಂಗಾಬಾಯಿ ಗಲಗಲಿ ಹೇಳಿದರು.ಪಟ್ಟಣದಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಹಕಾರದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡ ಮಹಿಳಾ ಕವಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.ತಾಲೂಕ ಕನ್ನಡ ಸಾಹಿತ್ಯ ಪರಿಷತ್ತು ಅಧಕ್ಷ ರಾಘವೇಂದ್ರ ಕುಲಕರ್ಣಿ ಮಾತನಾಡಿ, ಕವಿಯಾದವನ್ನು ತನ್ನ ಹೋರಗಣ್ಣಿನಿಂದ ಮತ್ತು ಅಂತರಂಗದ ಕಣ್ಣಿನಿಂದ ಈಡಿ ಲೋಕವನ್ನು ಗ್ರಹಿಸಿ ತಟ್ಟನೆ ಒಂದು ಲೋಕವನ್ನು ಸೃಷ್ಟಿಸುತ್ತಾನೆ. ಇಲ್ಲಿ ಕೇವಲ ಬರೆಯಬೇಕೆಂಬ ಮಾನಸಿಕ ಒತ್ತಡ, ಸಾಮಾಜಿಕ ಪ್ರೇರಣೆ ಮತ್ತು ತನಗಾದ ಅನುಭವವಗಳನ್ನು ತನ್ನ ಅನುಭವ ಬುತ್ತಿಯಲ್ಲಿ ದಾಖಲಿಸುವ ಬಯಕೆ ಕಾವ್ಯ ಸೃಷ್ಟಿಯ ರಚನೆಗೆ ಕಾರಣವಾಗುತದೆಂದು ಹೇಳಿದರು.ಅತಿಥಿಯಾಗಿ ಮಾತನಾಡಿದ ಸತ್ಯಪ್ಪ ಹಡಪದ, ಪ್ರತಿಯೊಬ್ಬರಲ್ಲಿಯೂ ಕವಿತಾ ಶಕ್ತಿ ಅಡಗಿದೆ. ಅದಕ್ಕೊಂದು ಅವಕಾಶದ ಅವಶ್ಯಕತೆಯಿದೆ ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಮುಖ್ಯ…

Read More

ಶ್ರೀ ಯೋಗಿನಾರೇಯಣ ಯತೀಂದ್ರ (ಕೈವಾರ ತಾತಯ್ಯ) ಜಯಂತಿ ಆಚರಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕೈವಾರ ತಾತಯ್ಯನವರು ತಮ್ಮ ಆದ್ಯಾತ್ಮಕತೆಯಿಂದ ಸಮಾಜದ ಕಣ್ಣುಗಳಾಗಿ ಜಗಕ್ಕೆ ಸನ್ಮಾರ್ಗ ತೋರಿದ ಮಹಾನ್ ಯತಿಗಳಾಗಿದ್ದರು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣುರ ಹೇಳಿದರು.ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಶ್ರೀ ಯೋಗಿನಾರೇಯಣ ಯತೀಂದ್ರ (ಕೈವಾರ ತಾತಯ್ಯ) ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿ, ಸತ್ಪುರುಷರ ಭೋದನೆ, ತತ್ವಸಿದ್ಧಾಂತಗಳು ಮಾನವ ಒಳಿತಿಗಾಗಿ ಬಿಟ್ಟು ಹೋದ ಅವರ ಚಿಂತನೆಗಳು ನಮಗೆ ಆದರ್ಶಪ್ರಾಯವಾಗಿವೆ. ಜಿಡ್ಡು ಹಿಡಿದ ಸಮಾಜವನ್ನು ತಿದ್ದಿ ತೀಡಿ ಶುದ್ಧಗೊಳಿಸಿ ಲೋಕ ಕಲ್ಯಾಣಕ್ಕಾಗಿ ತಮ್ಮ ಜೀವನವನ್ನೆ ದಾರೆ ಎರೆದಿರುವರು. ಸಮ ಸಮಾಜವನ್ನು ನಿರ್ಮಿಸಿ ಎಲ್ಲ ಮಾನವ ಕುಲ ಒಂದೇ ಎಂದು ಪ್ರತಿಪಾದಿಸಿದ ಮಹಾನ ದಾರ್ಶನಿಕರಾಗಿದ್ದರು ಅವರು ಹಾಕಿಕೊಟ್ಟ ಮಾರ್ಗದರ್ಶನದಲ್ಲಿ ಇಂದು ನಾವುಗಳು ಸಾಗಬೇಕು ಎಂದು ಅವರು ತಿಳಿಸಿದರು.ಕನ್ನಡನಾಡು ನಡೆಗೆ ಅನುಪಮ ಸೇವೆ ಸಲ್ಲಿಸಿದ ಮತ್ತು ಸಾಂಸ್ಕೃತಿಕ ಲೋಕಕ್ಕೆ ವಿಶಿಷ್ಟ ಕೊಡುಗೆಯನ್ನು ನೀಡಿದ ಮಹನೀಯರನ್ನು ಸ್ಮರಿಸುವ ಮೂಲಕ ಅವರಿಗೆ ಗೌರವ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ದೈಹಿಕ ಸದೃಡತೆಯೊಂದಿಗೆ ವಿವಿಧ ಕ್ರೀಡಾ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಸಿಬ್ಬಂದಿ ಜೀವನೋತ್ಸಾಹ ಕಂಡುಕೊಳ್ಳಬೇಕು ಎಂದು ಇಂಡಿ ವಿಭಾಗಾಧಿಕಾರಿ ವಿನಯಕುಮಾರ ಪಾಟೀಲ ಹೇಳಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ಗುರುವಾರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್, ತಾಲ್ಲೂಕು ಅಭಿವೃದ್ಧಿ ಸಮಿತಿ ಹಾಗೂ ತಾಲ್ಲೂಕು ನಿವೃತ್ತ ನೌಕರರ ಸಂಘದ ಸಂಯುಕ್ತ ಆಶ್ರಯದಲ್ಲಿ ಜರುಗಿದ ಕಂದಾಯ ದಿನಾಚರಣೆ ೨೦೨೫ರ ಪ್ರಯುಕ್ತ ಆಯೋಜಿಸಿದ್ದ ಜಿಲ್ಲಾ ಮಟ್ಟದ ಕ್ರೀಡಾಕೂಟದಲ್ಲಿ ವಿಜೇತರಾದ ಕ್ರೀಡಾಪಟುಗಳ ಅಭಿನಂದನಾ ಸಮಾರಂಭದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರದ ಸೇವೆಯಲ್ಲಿನ ಒತ್ತಡಗಳ ನಡುವೆಯೂ ನಾವು ವಿವಿಧ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬೇಕು. ಮುಖ್ಯವಾಗಿ ಕ್ರೀಡೆಗಳಲ್ಲಿ ತೊಡಗಿಸಿಕೊಂಡಾಗ ನಮ್ಮಲ್ಲಿ ಕಾಣುವ ಬದಲಾವಣೆ, ಉತ್ಸಾಹಗಳು ಹೊಸ ಚೈತನ್ಯಕ್ಕೆ ಕಾರಣವಾಗಬಲ್ಲದು ಎಂದರು.ತಹಶೀಲ್ದಾರ ಪ್ರಕಾಶ ಸಿಂದಗಿ, ತಾಲ್ಲೂಕು ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಡಾ.ಆರ್.ಆರ್.ನಾಯಿಕ್, ತಾಲ್ಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಕೆ.ಕುದರಿ, ತಾಲ್ಲೂಕು ಕಸಾಪ ಅಧ್ಯಕ್ಷ ಜಿ.ಪಿ. ಬಿರಾದಾರ, ಪಟ್ಟಣ ಪಂಚಾಯಿತಿ ನಾಮ ನಿರ್ದೇಶನ ಸದಸ್ಯ ರಾಜು ಮೆಟಗಾರ ಮಾತನಾಡಿದರು.ಜಿಲ್ಲಾ ಮಟ್ಟದ ಕ್ರೀಡಾಕೂಟದ ೧೦೦,…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದಾದ್ಯಂತ ಹೋಳಿ ಹಬ್ಬದ ಪ್ರಯುಕ್ತ ಸಾಂಪ್ರದಾಯಿಕ ಕಾಮದಹನ ಹಾಗೂ ಬಣ್ಣದಾಟ ಜರುಗಿದವು.ಹೋಳಿ ಹಬ್ಬದ ಅಂಗವಾಗಿ ಗುರುವಾರ ಸಾಂಪ್ರದಾಯಿಕ ಕಾಮದಾಹನದ ಅಂಗವಾಗಿ ವಿವಿಧ ಬಡಾವಣೆ, ಓಣಿಗಳಲ್ಲಿ ಕಾಮದಹನದ ಸ್ಥಳವನ್ನು ರಂಗೋಲಿಯ ಮೂಲಕ ಚಿತ್ತಾರ ಮೂಡಿಸಿ ಅಲಂಕರಣಗೊಳಿಸಲಾಗಿತ್ತು. ರಾತ್ರಿಯಾಗುತ್ತಿದ್ದಂತೆಯೇ ಪೂಜೆ ಸಲ್ಲಿಸಿ ನಂತರ ವಿವಿಧ ಮನೆಗಳಿಂದ ಬಂದ ನೈವಿಧ್ಯವನ್ನು ಕಟ್ಟಿಗೆಯ ರಾಶಿಯಡಿ ಇಟ್ಟು ನಂತರ ದಹನ ಮಾಡಲಾಯಿತು.ಶುಕ್ರವಾರ ಬೆಳಿಗ್ಗೆ ಮಹಿಳೆಯರು ಕಾಮದಹನದ ಬೆಂಕಿಯನ್ನು ಮನೆಮನೆಗೆ ಕೊಂಡೊಯ್ದು ಸಂಪ್ರದಾಯ ಪಾಲನೆ ಮಾಡಿದರು. ಇನ್ನೂ ಕೆಲವರು ಕಡಲೆ ಹಾಗೂ ಗೆಣಸುಗಳನ್ನು ತಂದು ಕಾಮದಹನದ ಬೆಂಕಿಯಲ್ಲಿ ಸುಟ್ಟು ಮಕ್ಕಳಿಗೆ ಹಂಚಿದರು.ಮಕ್ಕಳು ಶುಕ್ರವಾರ ಬೆಳಗಾಗುತ್ತಿದ್ದಂತೆಯೇ ಪಿಚಕಾರಿ, ಬಾಟಲಿಗಳ ಮೂಲಕ ಬಣ್ಣದಾಟ ಆರಂಭಿಸಿದರು. ಮನೆ ಹಾಗೂ ಓಣಿಗಳಲ್ಲಿ ಹಲಿಗೆ ಬಡಿಯುತ್ತಾ ಬಣ್ಣದ ರಂಗಿನೊಂದಿಗೆ ಓಡಾಡುತ್ತಾ, ಓರಗೆಯವರಿಗೆ ಬಣ್ಣ ಬಳಿಯುವ ದೃಶ್ಯಗಳು ಕಂಡು ಬಂದವು. ಯುವಕರು ಮಾತ್ರ ತಮ್ಮ ಆಪ್ತರು ಹಾಗೂ ಸ್ನೇಹಿತರಿಗೆ ಬಣ್ಣ ಬಳಿದು ಸಂಭ್ರಮಿಸುವುದರ ಜೊತೆಗೆ ಮೋಬೈಲ್‌ಗಳಲ್ಲಿ ಸೆಲ್ಪಿ ಹಾಗೂ ಫೋಟೋ ತೆಗೆಯುವುದರಲ್ಲಿ ನಿರತರಾಗಿದ್ದರು. ಕೆಲವು…

Read More

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಪಟ್ಟಣದ ಬಸವೇಶ್ವರ ಸರ್ಕಲ್, ಅಂಬೇಡ್ಕರ್ ವೃತ್ತ ಸೇರಿದಂತೆ ತಾಲ್ಲೂಕಿನ ಎಲ್ಲ ಗ್ರಾಮಗಳಲ್ಲಿ ಶುಕ್ರವಾರ ಯುವಕ, ಯುವತಿಯರು ಹಾಗೂ ಚಿಣ್ಣರು ಬೆಳಗ್ಗೆಯಿಂದಲೇ ಹೋಳಿ ನಿಮಿತ್ಯ ಬಣ್ಣ ಎರಚಾಡುವ ಮೂಲಕ ಸಂಭ್ರಮಿಸಿದರು.ಗ್ರಾಮೀಣ ಪ್ರದೇಶಗಳಲ್ಲಿ ಯುವಕರು ತಮ್ಮ ಪ್ರೀತಿ ಪಾತ್ರದವರ ಮನೆ ಮುಂದೆ ಗೆಳೆಯ ಗೆಳತಿಯರೊಂದಿಗೆ ಸಾಗಿ ಹಲಗೆ ಬಡಿಯುತ್ತಾ ನೃತ್ಯ ಮಾಡುವ ಮೂಲಕ ಬಣ್ಣ ಹಚ್ಚಿದರು. ಯುವಕರು ತಂಡೋಪತಂಡವಾಗಿ ಗ್ರಾಮೀಣ ಪ್ರದೇಶದ ತೋಟದ ಮನೆಗಳಿಗೂ ತೆರಳಿ ದ್ರಾಕ್ಷಿ ಪಡ ಹಾಗೂ ಒಣದ್ರಾಕ್ಷಿ ಸೆಡ್ ನಲ್ಲಿ ಕೆಲಸ ಮಾಡುತ್ತಿದ್ದ ರೈತರಿಗೂ ಸಹ ಬಣ್ಣ ಲೇಪಿಸಿ ಖುಷಿಪಟ್ಟರು.ತಾಂಡಾ ಮಹಿಳೆಯರ ಸಂಭ್ರಮ: ತಾಲ್ಲೂಕಿನ ಎಲ್ಲ ಲಂಬಾಣಿ ತಾಂಡಾ ಮಹಿಳೆಯರಿಗೆ ಈ ಹಬ್ಬ ಖುಷಿಯೋ ಖುಷಿ. ಏಕೆಂದರೆ ಬೆಳಗ್ಗೆಯಿಂದಲೇ ಮಹಿಳೆಯರು ಬಕೇಟ್ ಗಳಲ್ಲಿ ಬಣ್ಣ , ನೀರು ತುಂಬಿಕೊಂಡು ಬಣ್ಣ ಎರಚಾಡಿ ಲಂಬಾಣಿ ಹಾಡುಗಳನ್ನು ಹಾಡುತ್ತಾ ವಿಭಿನ್ನ ನೃತ್ಯ ಮಾಡುತ್ತಾ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮಹಿಳೆಯರ ದಂಡು ಸಾಗಿತು.ನಾಮಕರಣ ಕಾರ್ಯ: ಸಂಜೆಯವರೆಗೂ ತಾಂಡಾದಲ್ಲಿ ಬಣ್ಣದ ಹಬ್ಬ…

Read More

ವಿಜಯಪುರ ಪೊಲೀಸರಿಂದ ಕಂಟ್ರಿ ಪಿಸ್ತೂಲ್ ಹಾವಳಿಗೆ ಕಡಿವಾಣ | ಜಿಲ್ಲಾ ಪೊಲೀಸ್ ಅಧೀಕ್ಷಕ ಲಕ್ಷ್ಮಣ ನಿಂಬರಗಿ ಮಾಹಿತಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಎಪಿಎಮ್‌ಸಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿಮೂವರು ಆರೋಪಿತರಿಂದ ಒಟ್ಟು 05 ಕಂಟ್ರಿ ಪಿಸ್ತೂಲ್ ಹಾಗೂ 06 ಸಜೀವ ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ವಿಜಯಪುರ ಜಿಲ್ಲೆ ಪೊಲೀಸ್ ಅಧೀಕ್ಷಕರಾದ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.ಶುಕ್ರವಾರ ಈ ಕುರಿತು ಮಾಹಿತಿ ನೀಡಿದ ಅವರು, ಆರೋಪಿತರನ್ನು ದಸ್ತಗೀರ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ ಎಂದು ತಿಳಿಸಿದರು.ಮಾ.೬ರಂದು ಲಕ್ಷ್ಮಣ ನಿಂಬರಗಿ, ಪೊಲೀಸ್ ಅಧೀಕ್ಷಕರು, ವಿಜಯಪುರ ಹಾಗೂ ಹೆಚ್ಚುವರಿ ಪೊಲೀಸ್ ಅಧೀಕ್ಷಕರುಗಳಾದ ಶಂಕರ ಮಾರಿಹಾಳ ಮತ್ತು ರಾಮನಗೌಡ ಹಟ್ಟಿ ಹಾಗೂ ಡಿಎಸ್‌ಪಿ ಬಸವರಾಜ ಯಲಿಗಾರ ರವರ ಮಾರ್ಗದರ್ಶನದಲ್ಲಿ ಮಲ್ಲಯ್ಯ ಮಠಪತಿ, ಸಿಪಿಐ ಗೋಲಗುಂಬಜ್ ವೃತ್ತ ರವರ ನೇತೃತ್ವದಲ್ಲಿ ಶ್ರೀಮತಿ ಜ್ಯೋತಿ ಖೋತ, ಪಿಎಸ್‌ಐ ಎಪಿಎಮ್‌ಸಿ ಪೊಲೀಸ್ ಠಾಣೆ ಹಾಗೂ ಸಿಬ್ಬಂದಿ ಜನರು ಖಚಿತ ಮಾಹಿತಿಯನ್ನು ಆಧರಿಸಿ, ವಿಜಯಪುರದ ಇಂಡಸ್ಟ್ರೀಯಲ್ ಏರಿಯಾ, ಕೆ.ಐ.ಎ.ಡಿ.ಬಿ ಹತ್ತಿರ ಆರೋಪಿತನಾದ ನಯೀಮ ಸಿರಾಜ್ ಶಾಮಣ್ಣವರ…

Read More

ವಿಧಾನ ಪರಿಷತ್ ವಿರೋಧ ಪಕ್ಷದ ಮಾಜಿ ನಾಯಕ ಎಸ್ ಆರ್ ಪಾಟೀಲ ಒಡೆತನದ ಕಾರ್ಖಾನೆ ಉದಯರಶ್ಮಿ ದಿನಪತ್ರಿಕೆ ವರದಿ: ಈರಯ್ಯ ಗಣಕುಮಾರಕೊಲ್ಹಾರ: ರಾಜ್ಯದ ಪ್ರತಿಷ್ಠಿತ ವಿಧಾನ ಪರಿಷತ್ತಿನ ಮಾಜಿ ವಿರೋಧ ಪಕ್ಷದ ನಾಯಕರು ಹಾಗೂ ಬಾಪೂಜಿ ಶಿಕ್ಷಣ ಸಂಸ್ಥೆ, ಬಾಪೂಜಿ ಸೌಹಾರ್ದ ಸಹಕಾರಿ ಬ್ಯಾಂಕ್ ಹಾಗೂ ಬೀಳಗಿ ಪಟ್ಟಣ ಸಹಕಾರಿ ಬ್ಯಾಂಕ್ ಅಧ್ಯಕ್ಷರು ಹಾಗೂ ವಿವಿಧ ಜವಾಬ್ದಾರಿಗಳನ್ನು ನಿರ್ವಹಿಸಿದ ಎಸ್ ಆರ್ ಪಾಟೀಲ್ ಒಡೆತನದ ಬೀಳಗಿ ಶುಗರ್ ಮಿಲ್ ಲಿಮಿಟೆಡ್ ಬಾಡಗಂಡಿ ಸಕ್ಕರೆ ಕಾರ್ಖಾನೆಯ ವಿಷಯುಕ್ತ ನೀರು ಪಕ್ಕದ ನದಿ ಕೃಷ್ಣೆಯ ಒಡಲನ್ನು ಸೇರಿ ಲಕ್ಷಾಂತರ ಜಲಜೀವ ರಾಶಿ ಮತ್ತು ಜಾನುವಾರುಗಳು ಸೇರಿದಂತೆ ಲಕ್ಷಾಂತರ ಜನರ ಆರೋಗ್ಯದ ಮೇಲೆ ಮತ್ತು ಅಕ್ಕಪಕ್ಕದ ರೈತರ ಜಮೀನುಗಳಲ್ಲಿ ಬೆಳೆಯುವ ಬೆಳೆಗಳ ಮೇಲೆ ಪರಿಣಾಮ ಬೀರುತ್ತಿದೆ. ಈಗಾಗಲೇ ಸಾರ್ವಜನಿಕರು ತಹಶೀಲ್ದಾರರಿಗೆ ದೂರು ಸಲ್ಲಿಸಿರುತ್ತಾರೆ.ಪಕ್ಕದ ಬಾಗಲಕೋಟ ಜಿಲ್ಲೆಯ ಬೀಳಗಿ ತಾಲೂಕಿನ ಬಾಡಗಂಡಿ ಮತ್ತು ರೋಳ್ಳಿ ಗ್ರಾಮಗಳ ಮಧ್ಯೆ ಬರುವ ಎಸ್ ಆರ್ ಪಾಟೀಲರ ಒಡೆತನದ ಬೀಳಗಿ ಶುಗರ್…

Read More

ಲೇಖನಡಾ.ಶಶಿಕಾಂತ ಪಟ್ಚಣರಾಮದುರ್ಗಮೊ:9552002338 ಉದಯರಶ್ಮಿ ದಿನಪತ್ರಿಕೆ 12 ನೇ ಶತಮಾನದಲ್ಲಿ ಕಲ್ಯಾಣವು ಅನೇಕ ಶರಣರ ಸಾಧಕರ ಕೇಂದ್ರಯಾಗಿತ್ತು . ಹಲವು ವೃತ್ತಿಯ ಜನರು ಕಲ್ಯಾಣಕ್ಕೆ ಬಂದು ತಮ್ಮ ಕಾಯಕ ನಡೆಸಿಕೊಂಡು ಸಮತೆ ಶಾಂತಿ ಪ್ರೀತಿಯ ಸಹ ಬಾಳ್ವೆ ನಡೆಸಿದರು. ವರ್ಗ ವರ್ಣ ವಿರುದ್ಧ ಸಮರ ಸಾರಿದ ಶರಣರು ಜಗತ್ತಿನ ಸಮತೆಯ ಶಿಲ್ಪಿಗಳು. ಇಂತಹ ಒಂದು ಅಪೂರ್ವ ಚಳುವಳಿಯಲ್ಲಿ ಒಬ್ಬ ಬಸವ ಪ್ರೇಮಿ ದಿಟ್ಟ ಶರಣ ಬಹುರೂಪಿ ಚೌಡಯ್ಯ ಬಹುರೂಪಿಯ ಕಾಯಕದ ಶ್ರೇಷ್ಠ ಕಲಾವಿದ ಅತ್ಯಂತ ಸುಂದರ ಅನುಭಾವದಿಂದ ಶರಣರ ಮನವ ಗೆದ್ದ ಧೀಮಂತ ಶರಣನು.ಶರಣ ಬಹುರೂಪಿ ಚೌಡಯ್ಯ . ಇವನ ಹುಟ್ಟೂರು ರೇಕಳಿಕೆ ಬಾಲ್ಯದಿಂದಲೇ ಆಧ್ಯಾತ್ಮಿಕ ಮಾರ್ಗಕ್ಕೆ ಮನ ಸೋತು ವೇಷ ಭೂಷಣ ಬಹು ಪಾತ್ರಾಭಿನಯದ ಮೂಲಕ ಜನರನ್ನು ರಂಜಿಸುವ ಜೊತೆಗೆ ಅವರ ಆಪ್ತ ಮಾರ್ಗ ದರ್ಶಕನಾಗಿದ್ದನು. ಕಲ್ಯಾಣದ ಶರಣರಲ್ಲಿ ಬಹು ಮುಖ್ಯ ಪಾತ್ರ ವಹಿಸಿದ ಶರಣ ಬಹುರೂಪಿ ಚೌಡಯ್ಯ “ರೇಕಣ್ಣ ಪ್ರಿಯ ನಾಗಿನಾಥ “ಎಂಬ ಅಂಕಿತದೊಂದಿಗೆ 66 ವಚನಗಳನ್ನು ರಚಿಸಿದ್ದಾನೆ .…

Read More