Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಹುಣಶ್ಯಾಳ ಗ್ರಾಮದ ಕ್ರಾಸ್ನಿಂದ ಗುತ್ತಿ ಬಸವಣ್ಣ ಕಾಲುವೆಯವರೆಗಿನ ರಸ್ತೆ ಡಾಂಬರು ಕಾಣದೇ ಸಂಪೂರ್ಣ ಹಾಳಾಗಿದ್ದು ಕೂಡಲೇ ರಸ್ತೆ ನಿರ್ಮಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ.ತಾಲ್ಲೂಕಿನ ಹುಣಶ್ಯಾಳ ಗ್ರಾಮದ ಗ್ರಾಮಸ್ಥರು ಮಂಗಳವಾರ ಪತ್ರಿಕಾ ಹೇಳಿಕೆಯ ಮೂಲಕ ಆಗ್ರಹ ಪಡಿಸಿದ್ದಾರೆ.ಗ್ರಾಮದಿಂದ ಕಾಲುವೆಯವರೆಗಿನ ೫.೫ ಕಿ.ಮೀ ಸಂಪೂರ್ಣ ಹಾಳಾಗಿದೆ. ಇಲ್ಲಿ ಖಾಸಗಿ ವಾಹನ ಅಥವಾ ದ್ವಿಚಕ್ರವಾಹನಗಳ ಮೂಲಕ ಸಂಚರಿಸುವವರ ಪರಿಸ್ಥಿತಿ ಹೇಳತೀರದಾಗಿದೆ. ತಗ್ಗು ದಿನ್ನೆಗಳಿಂದ ಕೂಡಿದ ರಸ್ತೆಯಲ್ಲಿ ವಾಹನಗಳು ಧೂಳ ಎಬ್ಬಿಸುತ್ತಾ, ತೆವಳುತ್ತಾ ನಿಧಾನವಾಗಿ ಚಲಿಸಿದರೆ, ಅದರಲ್ಲಿ ಕುಳಿತವರು ಬೆಳಿಗ್ಗೆ ಶುಭ್ರಬಟ್ಟೆಗಳೊಂದಿಗೆ ಹೊರಟವರು ಧೂಳುಮಯವಾಗಿ ಮರಳುವಂತಾಗಿದೆ. ಇನ್ನೂ ಆನೆಮಡು, ಸಲಾದಹಳ್ಳಿ, ಚಟ್ನಳ್ಳಿ, ಅಸಂತಾಪೂರ ಗ್ರಾಮಗಳಿಂದ ಪಂಚಾಯಿತಿ ನಿತ್ಯ ಅಗತ್ಯ ಕೆಲಸಗಳಿಗೆ ಬರುವವರು ಸಹ ರಸ್ತೆಯನ್ನು ಕಂಡು ಪಂಚಾಯಿತಿಗೆ ಹಿಡಿಶಾಪ ಹಾಕುವುದು ಸಾಮಾನ್ಯವಾಗಿದೆ.ಗ್ರಾಮದಿಂದ ಕಲಬುರಗಿ, ಯಾದಗಿರಿ, ಆಲಗೂರ, ಗೋಲಗೇರಿ, ಮಳ್ಳಿ, ಕೆಂಭಾವಿ, ಯಡ್ರಾಮಿ, ಶಹಾಪೂರಗಳಿಗೆ ಸಂಪರ್ಕ ಕಲ್ಪಿಸುವ ಮುಖ್ಯ ರಸ್ತೆಯೇ ಇದಾಗಿದ್ದು ಇಲ್ಲಿ ನಿತ್ಯ ನೂರಾರು ವಾಹನಗಳು, ದ್ವಿಚಕ್ರ ಸವಾರರು ಪ್ರಯಾಣಿಸುತ್ತಾರೆ. ಇವರ ನಿತ್ಯ ಕೆಲಸಗಳಿಗೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗೊಳಸಂಗಿಯ ಶ್ರೀ ಚನ್ನಮಲ್ಲಪ್ಪ ಚನ್ನವೀರಪ್ಪ ಹೆಬ್ಬಾಳ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ೨೦೨೫-೨೬ನೇ ಶೈಕ್ಷಣಿಕ ಸಾಲಿನ ಪದವಿ ಪ್ರಥಮ ವರ್ಷದ ಪ್ರವೇಶಾವಕಾಶ ಪ್ರಾರಂಭವಾಗಿವೆ.ಬಿ.ಎ ಹಾಗೂ ಬಿಕಾಂ ಪದವಿ ಕೊರ್ಸುಗಳ ಪ್ರವೇಶಾವಕಾಶ ಪಡೆಯಬಹುದಾಗಿದೆ. ಆಸಕ್ತ ವಿದ್ಯಾರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ಪ್ರಾಂಶುಪಾಲರಾದ ಎಸ್.ಎಸ್.ರಾಜಮಾನ್ಯ (ಮೊ:೯೪೪೮೭೦೨೯೫೧), ಪ್ರೊ.ಸಿ.ಎಂ.ನಾಯಕ (ಮೊ:೭೦೧೯೬೭೦೪೯೮), ಪ್ರೊ.ಎಸ್ ಅರ್ ಕುಂಬಾರ (ಮೊ:೯೪೮೧೩೪೮೨೧೬), ಪ್ರೊ.ಮೊಹಮ್ಮದ ಯೂನುಸ್ (ಮೊ:೭೦೧೯೩೨೪೮೧೦), ಪ್ರೊ.ಶ್ರೀಶೈಲ ಬಬಲಾದ (ಮೊ:೮೭೨೨೫೯೫೪೫೩) ಇವರನ್ನು ಸಂಪರ್ಕಿಸುವಂತೆ ಕಾಲೇಜಿನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯ ಸಿಂದಗಿ ಶಿಸು ಅಭಿವೃದ್ದಿ ಯೋಜನೆ ವ್ಯಾಪ್ತಿಯ ಸಿಂದಗಿ, ಆಲಮೇಲ, ದೇವರಹಿಪ್ಪರಗಿ ಮತ್ತು ತಾಳಿಕೋಟೆ ತಾಲೂಕಿನಲ್ಲಿರುವ ೪ ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗೆ ಆಯ್ಕೆಯಾದ ತಾತ್ಕಾಲಿಕವಾಗಿ ಆಯ್ಕೆ ಪಟ್ಟಿಯನ್ನು ಶಿಶು ಅಭಿವೃದ್ದಿ ಯೋಜನಾ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ.ಪ್ರಕಟಿತ ತಾತ್ಕಾಲಿಕ ಆಯ್ಕೆ ಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ, ದಿನಾಂಕ : ೦೨-೦೫-೨೦೨೫ರೊಳಗಾಗಿ ಸೂಕ್ತ ದಾಖಲಾತಿಗಳೊಂದಿಗೆ ಆಕ್ಷೇಪಣೆಗಳನ್ನು ಸಂಬಂಧಪಟ್ಟ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ಸಿಂದಗಿ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ರಾಜ್ಯ ಪೊಲೀಸ್ ಇಲಾಖೆಯಿಂದ ಸೈಬರ್ ಅಪರಾಧಗಳ ತಡೆಗೆ ಸೂಕ್ತ ಕ್ರಮ | ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕ ಅಲೋಕ್ ಮೋಹನ್ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಸ್ತುತ ದೇಶದಲ್ಲಿ ಹೆಚ್ಚುತ್ತಿರುವ ಆನ್ಲೈನ್ ಹಣಕಾಸು ವಂಚನೆಗಳನ್ನು ತಡೆಯಲು ರಾಜ್ಯದಲ್ಲಿ ಸೈಬರ್ ಅಪರಾಧ ಸಹಾಯವಾಣಿ-೧೯೩೦ ಜೊತೆಗೆ ವೆಬ್ ಬಾಟ್ ಉನ್ನತೀಕರಣ ಮಾಡಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಮತ್ತು ಪೊಲೀಸ್ ಮಹಾ ನಿರೀಕ್ಷಕರಾದ ಅಲೋಕ್ ಮೋಹನ್ ತಿಳಿಸಿದರು.ಮಂಗಳವಾರ ನಗರದ ಮಹಾತ್ಮಗಾಂಧಿ ರಸ್ತೆಯಲ್ಲಿರುವ ಎಡಿಜಿಪಿ ಸಿಎಲ್&ಎಮ್ ಕಾರ್ನರ್ ಹೌಸ್ ಕಚೇರಿಯಲ್ಲಿ ಉನ್ನತೀಕರಿಸಲಾದ ಸೈಬರ್ ಅಪರಾಧ ಸಹಾಯವಾಣಿ-೧೯೩೦ ವೆಬ್ ಬಾಟ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಕರ್ನಾಟಕ ರಾಜ್ಯದಲ್ಲಿ ೧೯೩೦ ಸಹಾಯವಾಣಿಯಲ್ಲಿ ಸ್ವೀಕರಿಸಿದ ಕರೆಗಳ ಸಂಖ್ಯೆ ೨೦೨೨ ರಲ್ಲಿ ೧.೩೦ ಲಕ್ಷ ಇದ್ದು, ನಂತರ ೨೦೨೪ ರಲ್ಲಿ ೮.೨೬ ಲಕ್ಷಕ್ಕೆ ಮತ್ತು ೨೦೨೫ ರ ಮೊದಲ ತ್ರೈಮಾಸಿಕದಲ್ಲಿ (ಜನವರಿ-ಮಾರ್ಚ್) ೪.೩೪ ಲಕ್ಷಕ್ಕೆ ಏರಿಕೆಯಾಗಿದೆ ಎಂದು ಹೇಳಿದರು.ಪ್ರಸ್ತುತ ರಾಜ್ಯದಲ್ಲಿ ಸಾರ್ವಜನಿಕರು ಪ್ರತಿನಿತ್ಯ…
ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಮುಖ್ಯ ಪಶು ವೈದ್ಯಾಧಿಕಾರಿ (ಆಡಳಿತ) ಡಾ.ಬಸವರಾಜ ಕನಮಡಿ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ವಿಜಯಪುರ ತಾಲ್ಲೂಕಿನ ವತಿಯಿಂದ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ೭ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವು ಏ.೨೬ ರಿಂದ ಜೂನ್ ೦೪ ರವರೆಗೆ ನಡೆಯಲಿದೆ ಎಂದು ಪಶುಪಾಲನಾ ಮತ್ತು ಪಶುವೈದ್ಯ ಸೇವಾ ಇಲಾಖೆ ಮುಖ್ಯ ಪಶು ವೈದ್ಯಾಧಿಕಾರಿಗಳಾದ (ಆಡಳಿತ) ಡಾ.ಬಸವರಾಜ ಕನಮಡಿ ತಿಳಿಸಿದ್ದಾರೆ.ಕಾಲುಬಾಯಿ ಲಸಿಕೆ ಕಾರ್ಯಕ್ರಮದೊಂದಿಗೆ ಚರ್ಮಗಂಟು ರೋಗದ ವಿರುದ್ದ ಲಸಿಕೆಯನ್ನು ಉಚಿತವಾಗಿ ಹಾಕಲಾಗುತ್ತಿದ್ದು, ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು. ವಿಜಯಪುರ ತಾಲ್ಲೂಕಿನಲ್ಲಿ ದನಗಳು-೧೦೦೬೯, ಎಮ್ಮೆಗಳು-೧೩೧೭೦ ಒಟ್ಟು ೨೩೨೩೯ ವಾಸ್ತವ ಜಾನುವಾರುಗಳಿದ್ದು, ಲಸಿಕೆದಾರರು-೧ ಮತ್ತು ಲಸಿಕೆದಾರರು-೨ ಒಟ್ಟು ೫೦ ಜನ ಲಸಿಕೆದಾರರಿದ್ದು, ಮೇಲ್ವಿಚಾರಕರಾಗಿ ೪ ಜನ ಪಶುವೈದ್ಯಾಧಿಕಾರಿಗಳಿದ್ದಾರೆ.ವಿಜಯಪುರ ಉಪವಿಭಾಗಾಧಿಕಾರಿಗಳಾದ ಗುರುನಾಥ್ ದಡ್ಡೆ ಹಾಗೂ ತಾಲ್ಲೂಕು ಉಸ್ತುವಾರಿ ಸಮಿತಿ ಅಧ್ಯಕ್ಷರಾದ ತಹಶೀಲ್ದಾರ ಪ್ರಶಾಂತ ಚನಗೊಂಡ ಅವರು ಏ.೨೨ ರಂದು ಲಸಿಕಾ ಅಭಿಯಾನದ ಕರಪತ್ರ…
ವಿಶ್ವ ಭೂ ದಿನ ಕಾರ್ಯಕ್ರಮದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಅರವಿಂದ ಎಸ್ ಹಾಗರಗಿ ಸಲಹೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಭೂಮಿಯು ಸಕಲ ಜೀವಜಂತುಗಳಿಗೆ ಆಶ್ರಯ ತಾಣವಾಗಿದೆ. ಇದನ್ನು ಸಂರಕ್ಷಿಸಿ ಮುಂದಿನ ಪೀಳಿಗೆಗೆ ಬಳುವಳಿಯಾಗಿ ನೀಡುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿ ಅರವಿಂದ ಎಸ್ ಹಾಗರಗಿ ಹೇಳಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಸಹಾಯಕ ನಿರ್ದೇಶಕರ ಕಛೇರಿ ವಿಭಾಗೀಯ ಗುಣ ನಿಯಂತ್ರಣ ತರಬೇತಿ ಕೇಂದ್ರದಲ್ಲಿ ಮಂಗಳವಾರ ಜರುಗಿದ ವಿಶ್ವ ಭೂದಿನ ಆಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಮಾಲಿನ್ಯದಿಂದ ಪರಿಸರ ನಾಶವಾಗಿ ಭೂಮಿಯನ್ನು ವಿನಾಶದ ಅಂಚಿನತ್ತ ಕೊಂಡೊಯುತ್ತದೆ. ಅದನ್ನು ನಾವು ಕಾಪಾಡಬೇಕು ಎಂದು ಅವರು ಹೇಳಿದರು.ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಜಿಲ್ಲಾ ಪರಿಸರ ಅಧಿಕಾರಿಗಳಾದ ವಿವೇಕ ಗುನಗ ಮಾತನಾಡಿ ಮಾನವ ಅಗತ್ಯತೆಯ ಮಿತಿಯನ್ನು ಕಂಡುಕೊಂಡಾಗ ಪ್ರಕೃತಿ ಸಂರಕ್ಷಣೆ ಮಾಡಲು ಸಾಧ್ಯ ಎಂದರು.ವಕೀಲರ ಸಂಘದ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಇವರ ಸಹಯೋಗದಲ್ಲಿ ಏಪ್ರಿಲ್ ೨೪ರಂದು ನಗರದ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ವರನಟ ಡಾ.ರಾಜ್ಕುಮಾರ್ ಅವರ ೯೭ನೇ ಜನ್ಮದಿನಾಚರಣೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಬೆಳಿಗ್ಗೆ ೧೦;೩೦ ಗಂಟೆಗೆ ನಡೆಯುವ ಕಾರ್ಯಕ್ರಮವನ್ನು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಉದ್ಘಾಟಿಸಲಿದ್ದಾರೆ. ವಿಜಯಪುರ ನಗರದ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ಅವರು ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಎಸ್.ಪಾಟೀಲ, ವಿಧಾನ ಪರಿಷತ್ತಿನ ವಿರೋಧ ಪಕ್ಷದ ಮುಖ್ಯ ಸಚೇತಕರಾದ ರವಿಕುಮಾರ ಎನ್, ಪರಿಷತ್ತಿನ ಶಾಸಕರಾದ ಸರ್ಕಾರದ ನವದೆಹಲಿ ವಿಶೇಷ ಪ್ರತಿನಿಧಿ-೨ ಪ್ರಕಾಶ ಹುಕ್ಕೇರಿ, ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರಾದ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ, ಸಂಸದರಾದ ರಮೇಶ ಜಿಗಜಿಣಗಿ ಹಾಗೂ ಡಾ.ಸುಧಾ ಮೂರ್ತಿ, ಶಾಸಕರಾದ ಯಶವಂತರಾಯಗೌಡ ವಿ.ಪಾಟೀಲ, ಹಣಮಂತ ಆರ್ ನಿರಾಣಿ, ಸುನೀಲಗೌಡ ಬಿ.ಪಾಟೀಲ, ಪಿ.ಎಚ್.ಪೂಜಾರ, ವಿಠ್ಠಲ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಯ ಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ ದಿ.ಮುತ್ತಪ್ಪ ರೈ ಅವರ ಮಗ ರಿಕ್ಕಿ ರೈ ಇವರ ಮೇಲೆ ನಡೆದಿರುವ ದಾಳಿಯ ಕುರಿತು ಸೂಕ್ತ ತನಿಖೆ ಹಾಗೂ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಹಾಗೂ ರಿಕ್ಕಿ ರೈ ಕುಟುಂಬಕ್ಕೆ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಜಯ ಕರ್ನಾಟಕ ಸಂಘಟನೆ ವತಿಯಿಂದ ರಾಜ್ಯದ ಗೃಹ ಸಚಿವರಿಗೆ ಜಿಲ್ಲಾಧಿಕಾರಿಗಳ ಮುಖಾಂತರ ಮನವಿ ಸಲ್ಲಿಸಲಾಯಿತು.ಈ ಸಮಯದಲ್ಲಿ ಜಯ ಕರ್ನಾಟಕ ಸಂಘಟನೆಯ ವಿಜಯಪುರ ಜಿಲ್ಲಾಧ್ಯಕ್ಷ ಸಂಗಮೇಶ ಸಿದ್ದನಗೌಡ ದಾಶ್ಯಾಳ ಮಾತನಾಡಿ, ಎಲ್ಲ ಜನರಿಗೆ ನ್ಯಾಯ ಒದಗಿಸುವಲ್ಲಿ ಸಂಘಟನೆಯು ತನ್ನನ್ನು ತಾನು ತೊಡಗಿಸಿಕೊಂಡಿದೆ. ಇಂತಹ ಸಂಘಟನೆಯ ಸಂಸ್ಥಾಪಕರ ಮಗನ ಮೇಲೆ ಯಾರೋ ಕಿಡಿಗೇಡಿಗಳು ಗುಂಡಿನ ದಾಳಿ ಮಾಡಿದ್ದು, ಸದ್ಯ ಇವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರ ಮೇಲೆ ಹಲ್ಲೆ ಮಾಡಿರುವ ದುಷ್ಟರನ್ನು ಶೀಘ್ರದಲ್ಲಿ ಸರಕಾರವ ಸೂಕ್ತ ತನಿಖೆ ಕೈಗೊಂಡು ಇವರ ಮೇಲೆ ಕಾನೂನು ಕ್ರಮ ಜರುಗಿಸಬೇಕು. ಹಾಗೂ ಈ ದಾಳಿಯಿಂದ ಬೆಚ್ಚಿಬಿದ್ದಿರುವ ಇವರ ಕುಟುಂಬಕ್ಕೆ ಸೂಕ್ತ ಪೊಲೀಸ್…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ತಾಲೂಕಿನ ಜಂಬಗಿ ಗ್ರಾಮದ ಬಳಿ ಲಿಂಗದಕಟ್ಟಿ ಜಮೀನಿನಲ್ಲಿ ಕಟ್ಟಿರುವ ಜರಸಿ ಆಕಳ ಮೇಲೆ ತಡರಾತ್ರಿಯಲ್ಲಿ ಯಾವುದೋ ಕಾಡು ಪ್ರಾಣಿ ದಾಳಿ ಮಾಡಿ ತಿಂದು ಸಾಯಿಸಿದ್ದು. ಪಕ್ಕದ ಗ್ರಾಮಗಳಲ್ಲಿ ಚಿರತೆಯ ಹಾವಳಿ ಇರುವ ಕಾರಣ ಚಿರತೆ ತಿಂದು ಹಾಕಿತೆಂದು ಗ್ರಾಮಸ್ಥ ಶ್ರೀಶೈಲ ಸಿದ್ದಪ್ಪ ನ್ಯಾಮಗೌಡ ತಿಳಿಸಿದ್ದಾರೆ.ತಡರಾತ್ರಿಯಲ್ಲಿ ಯಾವುದೋ ಕಾಡುಪ್ರಾಣಿ ಬಂದು ಆಕಳ ಮೇಲೆ ದಾಳಿ ಮಾಡಿದ್ದು. ಆಕಳ ಮೈಮೇಲೆ ಗಾಯಗಳು ಕಾಣಿಸಿ ಕೊಂಡಿರುವ ಹಿನ್ನಲೆಯಲ್ಲಿ ಚಿರತೆಯು ದಾಳಿ ಮಾಡಲಾಗಿದೆಂದು ಗ್ರಾಮಸ್ಥರು ಹೇಳುವ ಮಾತು. ಚಿರತೆಯ ಓಡಾಟದ ದೃಶ್ಯಾವಳಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದನ್ನು ಕಂಡು ಗ್ರಾಮಸ್ಥರು ಭಯಬೀತಗೊಂಡಿದ್ದಾರೆ. ಕುಂಚನೂರ ಗ್ರಾಮದ ಅರಣ್ಯ ಪ್ರದೇಶದಲ್ಲಿ ಚಿರತೆ ಸೆರೆ ಹಿಡಿಯಲು ಅರಣ್ಯ ಇಲಾಖೆ ಅಧಿಕಾರಿಗಳು ಸಿಸಿಟಿವಿ ಕ್ಯಾಮರಾ ಹಾಗೂ ಬೋನ್ ಅಳವಡಿಸಲಾಗಿದೆ ಎಂದು ಆರ್ಎಫ್ಓ ಕಿರಣ ರೆಡ್ಡಿ ತಿಳಿಸಿದ್ದಾರೆ.ಇತ್ತೀಚಿಗೆ ಕುಂಚನೂರ ಗ್ರಾಮದಲ್ಲಿ ರೈತರೊಬ್ಬರಿಗೆ ರಾತ್ರಿ ಚಿರತೆ ಕಾಣಿಸಿಕೊಂಡಿದ್ದು, ಅವರು ಅರಣ್ಯ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದರು. ಚಿರತೆ ಹೆಜ್ಜೆ ಗುರುತುಗಳನ್ನು ಪತ್ತೆಹಚ್ಚಿ ಬೋನ್ ಅಳವಡಿಸಿಲಾಗಿದೆ…
ಬಿ.ಎಲ್.ಡಿ.ಇ ಡೀಮ್ಡ್ ವಿವಿ ವತಿಯಿಂದ ಸಚಿವ ಎಂ. ಬಿ. ಪಾಟೀಲ ಚೆಕ್ ವಿತರಣೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ; ಬಿ. ಎಲ್. ಡಿ. ಇ ಸಂಸ್ಥೆ ಅಧ್ಯಕ್ಷ ಮತ್ತು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಅವರು ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯ ವತಿಯಿಂದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಸಂಶೋಧನೆ ವಿದ್ಯಾರ್ಥಿನಿಯರ ಹಾಸ್ಟೇಲ್ ನಿರ್ಮಾಣಕ್ಕೆ ರೂ. 50 ಲಕ್ಷ ವಿಶೇಷ ಅನುದಾನ ನೀಡಿದ್ದಾರೆ.ಮಂಗಳವಾರ ಡೀಮ್ಡ್ ವಿಶ್ವವಿದ್ಯಾಲಯದಲ್ಲಿ ಮಹಿಳಾ ವಿವಿಯ ಕುಲಪತಿ ಪ್ರೊ. ಶಾಂತಾದೇವಿ ಟಿ. ಅವರಿಗೆ ಸಚಿವರು ವಿಶೇಷ ಅನುದಾನದ ಚೆಕ್ ನ್ನು ವಿತರಿಸಿದರು.ಇತ್ತೀಚೆಗೆ ಮಹಿಳಾ ವಿವಿಯಲ್ಲಿ ನಡೆದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದ ಸಚಿವರಿಗೆ ಕುಲಪತಿಗಳು ವಿದ್ಯಾರ್ಥಿನಿಯರಿಗೆ ಮೂಲಸೌಕರ್ಯ ಒದಗಿಸಲು ಅನುದಾನದ ಕೊರತೆ ಇದೆ ಎಂದು ಗಮನ ಸೆಳೆದಿದ್ದರು. ಅಂದು ನೀಡಿದ ಭರವಸೆಯಂತೆ ಸಚಿವರು ಇಂದು ಅನುದಾನದ ಚೆಕ್ ವಿತರಿಸಿದರು.ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಗುಣಮಟ್ಟದ ಕಾಮಗಾರಿ ಕೈಗೊಳ್ಳುವಂತೆ ಸೂಚನೆ ನೀಡಿದರು. ಅಲ್ಲದೇ,…
