Author: editor.udayarashmi@gmail.com

ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಪರಸ್ಪರ ತಾವು ತಾವೇ ಮಾತಾಡಿಕೊಂಡು ತಮ್ಮೆಲ್ಲ ಸಾಮಾನುಗಳನ್ನು ತಲೆಯ ಮೇಲೆ ಇಟ್ಟುಕೊಂಡು ಕೈ ಕೈ ಹಿಡಿದುಕೊಂಡು ಅವರೆಲ್ಲರೂ ನಿಧಾನವಾಗಿ ನದಿಯನ್ನು ದಾಟಿದರು. ಯಾವುದೇ ತೊಂದರೆ ಇಲ್ಲದೆ ಹರಿಯುವ ನದಿಯನ್ನು ದಾಟಿದ ಅವರು ಸಮಾಧಾನದ ನಿಟ್ಟುಸಿರು ಬಿಡುತ್ತಿರುವಾಗಲೇ ಅವರಲ್ಲೇ ಓರ್ವ ವ್ಯಕ್ತಿ ನಾವು ಒಟ್ಟು ಹತ್ತು ಜನರಿದ್ದೆವು. ಅಪ್ಪಿ ತಪ್ಪಿ ಯಾರಾದರೂ ನದಿಯಲ್ಲಿ ತೇಲಿಕೊಂಡು ಹೋಗಿದ್ದರೆ ಎಣಿಸಿ ನೋಡೋಣ ಎಂದು ಹೇಳಲು ಎಲ್ಲರೂ ಹೌದು ಹಾಗೆಯೇ ಮಾಡೋಣ ಎಂದು ತಲೆಯಾಡಿಸಿದರು.ಇದೀಗ ಮೊದಲು ಹೇಳಿದ ವ್ಯಕ್ತಿ ತನ್ನನ್ನು ಬಿಟ್ಟು ಎಲ್ಲರನ್ನೂ ಎಣಿಸಿದಾಗ ಕೇವಲ ಒಂಬತ್ತು ಜನರಿದ್ದರು.ಅರೆ! ನಾವು ಕೇವಲ 9 ಜನರಿದ್ದೇವೆ… ಹಾಗಾದರೆ ನಮ್ಮಲ್ಲಿ ಒಬ್ಬ ವ್ಯಕ್ತಿ ನದಿಯಲ್ಲಿ ತೇಲಿ ಹೋಗಿರಬಹುದು ಎಂದು ಶಂಕಿಸಿ ಅವರೆಲ್ಲ ದುಃಖದಿಂದ ಜೋರಾಗಿ ಅಳಲಾರಂಭಿಸಿದರು.ಆ ಹಾದಿಯಲ್ಲಿ ಹೋಗುತ್ತಿದ್ದ ಓರ್ವ ವ್ಯಕ್ತಿ ಏನಾಯಿತು ಎಂದು ಕೇಳಲು ನಡೆದ ವಿಷಯವನ್ನು ಅವರೆಲ್ಲರೂ ಹೇಳಿದರು. ಆಗ ಆ ವ್ಯಕ್ತಿ ನೀವು ಒಟ್ಟು…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಶರಣರ ಸತ್ಪುರುಷರ ವಾಣಿ ಆಲಿಸಿದರೆ ಮನುಷ್ಯನ ಜೀವನ ಸಾರ್ಥಕ ಎಂದು ಕಸಪಾ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಹೇಳಿದರು.ತಾಲೂಕಿನ ಚಟ್ಟರಕಿ ರೇಣುಕಾಚಾರ್ಯ ಮಠದಲ್ಲಿ ಜಗದ್ಗುರು ರೇಣುಕಾಚಾರ್ಯ ಜಯಂತ್ಯುತ್ಸವ ನಿಮಿತ್ಯ ಹಮ್ಮಿಕೊಂಡ ಗೋಲಗೇರಿ ಗೊಲ್ಲಾಳೇಶ್ವರ ಪುರಾಣ ಮಹಾಮಂಗಲೋತ್ಸವ ಹಾಗೂ ಧರ್ಮಸಭೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಶರಣರು ಸಾವಿರಾರು ವರ್ಷಗಳ ಕಾಲ ಬಾಳಿ ಬೆಳಗಿದವರು. ಭಾರತೀಯ ಸಂಸ್ಕೃತಿ ಆಧ್ಯಾತ್ಮಿಕ ಚಿಂತನೆಗಾಗಿ ಬೆಳಗಿ ಬಂದಿದ್ದು, ಇಲ್ಲಿ ಯೋಗಿ ತ್ಯಾಗಿಗಳಾಗಿ ಹೋಗಿದ್ದಾರೆ. ನಮ್ಮ ನೆಮ್ಮದಿಯ ಬದುಕಿಗೆ ಪುರಾನ ಪ್ರವಚನ ಪೂರಕವಾಗಿವೆ. ಗ್ರಾಮೀಣ ಪ್ರದೇಶಗಳಲ್ಲಿ ಜಾತ್ರೆ, ಹಬ್ಬ ಹರಿದಿನಗಳು ಸಾಮರಸ್ಯ ಮೂಡಿಸುತ್ತಿವೆ ಎಂದರು.ಈ ವೇಳೆ ವಿಜಯಪುರದ ಅನುಗ್ರಹ ಕಣ್ಣಿನ ಆಸ್ಪತ್ರೆಯ ಡಾ.ಪ್ರಭುಗೌಡ ಪಾಟೀಲ ಲಿಂಗದಳ್ಳಿ ಹಾಗೂ ಡಾ.ಬಾಬು ರಾಜೇಂದ್ರ ನಾಯಕ ಮಾತನಾಡಿ, ಜೀವನದಲ್ಲಿ ಆರೋಗ್ಯವೇ ಭಾಗ್ಯ. ನಾವುಗಳೆಲ್ಲ ಇಂದು ಹೆಚ್ಚಿನ ಗಮನವನ್ನು ಆರೋಗ್ಯದೆಡೆಗೆ ಹರಿಸಬೇಕು. ನಮ್ಮ ದೈನಂದಿನ ಬದುಕಿನಲ್ಲಿ ಆರೋಗ್ಯದ ಕಾಳಜಿಯ ಜೊತೆಗೆ ಆದ್ಯಾತ್ಮಿಕ ಚಿಂತನೆಗಳನ್ನು ಆಲಿಸಬೇಕು. ಆದ್ಯಾತ್ಮದ ಅರಿವು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಚಟ್ಟರಕಿ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸಮಾಜದಲ್ಲಿ ಸಮಾನತೆಯನ್ನು ಸಾರಿ ಭೇದ ಭಾವವಿಲ್ಲದೇ ಸಮಾನ ಸಮಾಜಕ್ಕಾಗಿ ಹೋರಾಡಿದ ಜಗದ್ಗುರು ರೇಣುಕಾಚಾರ್ಯರು ಎಲ್ಲ ಧರ್ಮಗಳಿಗಿಂತ ಮಾನವ ಧರ್ಮ ಶ್ರೇಷ್ಠವಾದದ್ದು ಎಂದು ಪ್ರತಿಪಾದಿಸಿದ್ದರು ಎಂದು ಸಿ.ಎಂ.ಮನಗೂಳಿ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ಬಿ.ಎನ್.ಪಾಟೀಲ ಹೇಳಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದ ಆವರಣದಲ್ಲಿ ತಾಲೂಕು ಆಡಳಿತ ವತಿಯಿಂದ ಹಮ್ಮಿಕೊಂಡ ಜಗದ್ಗುರು ರೇಣುಕಾಚಾರ್ಯರ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರೇಣುಕಾಚಾರ್ಯರ ತತ್ವಗಳು, ಮನೋಭಾವನೆಗಳು, ಸಂದೇಶಗಳನ್ನು ಅರ್ಥಮಾಡಿಕೊಂಡಾಗ ಮಾತ್ರ ಜಯಂತಿಯ ಆಚರಣೆ ಸಾರ್ಥಕವಾಗುತ್ತದೆ. ಸಮಾಜದಲ್ಲಿದ್ದ ಹಲವಾರು ಕಟ್ಟು ಪಾಡುಗಳ ವಿರುದ್ಧ ಅವರು ಧ್ವನಿ ಎತ್ತಿದ್ದರು. ಜಾತಿ ವ್ಯವಸ್ಥೆ ಪುರುಷ ಸ್ತ್ರೀ ಎಂಬ ಸಮಾಜದ ಭಿನ್ನತೆಯನ್ನು ಹೋಗಲಾಡಿಸಲು ಅಂದಿನ ಕಾಲದಲ್ಲಿ ಹೋರಾಡಿದ್ದರು. ಹಾಗಾಗಿ ನಾವುಗಳು ಸಂಪತ್ತಿನೆಡೆಗೆ ಹೆಚ್ಚಿನ ಗಮನ ಹರಿಸದೆ ಸಂತರ ಮಹಾಂತರ ಜಯಂತಿಗಳನ್ನು ಆಚರಿಸುವುದರ ಜೊತೆಗೆ ಅವರ ತತ್ವಾದರ್ಶಗಳನ್ನು ತಮ್ಮ ಬದುಕಿನಲ್ಲಿ ಅಳವಡಿಸಿಕೊಂಡು ಜೀವನ ಸಾರ್ಥಕ ಪಡಿಸಿಕೊಳ್ಳಬೇಕು ಎಂದರು.ಕಾರ್ಯಕ್ರಮದ ಸಾನಿಧ್ಯ ವಹಿಸಿದ ಡಾ.ಪ್ರಭುಸಾರಂಗದೇವ ಶಿವಾಚಾರ್ಯರು, ಬೋರಗಿ ಪುರದಾಳ ವಿಶ್ವರಾಧ್ಯ ಮಠದ ಮಹಾಲಿಂಗೇಶ್ವರ ಮಹಾಸ್ವಾಮಿಗಳು, ಅದ್ಯಕ್ಷತೆ ವಹಿಸಿದ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ವಿಶೇಷಚೇತನ ಮಕ್ಕಳಲ್ಲಿ ಆತ್ಮ ವಿಶ್ವಾಸ ತುಂಬುವ ಕಾರ್ಯವನ್ನು ಪೋಷಕರು ಮತ್ತು ಶಿಕ್ಷಕರು ಮಾಡಬೇಕು ಎಂದು ತಾಲೂಕ ದೈಹಿಕ ಶಿಕ್ಷಣ ಶಿಕ್ಷಣಾಧಿಕಾರಿ ಎಚ್ ಕೆ ಮಾಳಗೊಂಡ ಹೇಳಿದರು.ಬುಧವಾರದಂದು ತಾಲೂಕಿನ ತಡವಲಗ ಜೋಡಗುಡಿಯಎಲ್ ಪಿ ಎಸ್ ಶಾಲೆಯಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಕ್ಷೇತ್ರ ಸಮನ್ವಯಾಧಿಕಾರಿಗಳ ಕಾರ್ಯಾಲಯ ಮತ್ತು ಸಮನ್ವಯ ಶಿಕ್ಷಣ ಇಲಾಖೆಯ ಸಹಯೋಗದಲ್ಲಿ ಜರುಗಿದ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ವಿಶೇಷಚೇತನ ಮಕ್ಕಳ ಕ್ರೀಡೆ, ಅರಿವು ಹಾಗೂ ಕ್ಷೇತ್ರ ಭೇಟಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ವಿಶೇಷ ಚೇತನರಿಗೆ ಸ್ವತಂತ್ರರಾಗಿ ಬದುಕುವ ಶಕ್ತಿ ತುಂಬಬೇಕು. ಅವರಿಗೆ ಸಹಾನುಭೂತಿ, ಅನುಕಂಪಕ್ಕಿಂತ ಅವಕಾಶ ಕಲ್ಪಿಸಬೇಕು. ಸದಾಕಾಲ ಪೋಷಕರ ಪ್ರೋತ್ಸಾಹ ಆ ಮಕ್ಕಳಿಗೆ ಇರಬೇಕು ಎಂದರು.ಶಿಕ್ಷಣ ಸಂಯೋಜಕ ಆನಂದ ಹುಣಸಗಿ ಮಾತನಾಡಿ,ವಿಶೇಷ ಚೇತನ ಮಕ್ಕಳಲ್ಲಿ ಅದ್ವಿತೀಯ ಪ್ರತಿಭೆ ಇರುತ್ತದೆ. ಪೋಷಕರು ಅಂಗವಿಕಲತೆಯನ್ನು ಶಾಪ ಎಂದು ಪರಿಗಣಸದೇ ಅದೊಂದು ವರ ಎಂದು ತಿಳಿದು, ಅವರ ವಿಶೇಷತೆಗಳನ್ನು ಗುರುತಿಸಿ ಅವರಿಗೆ ಪ್ರೋತ್ಸಾಹ ನೀಡಬೇಕು ಎಂದು ಹೇಳಿದರು.ಬಿಆರ್ಪಿ ಅಧಿಕಾರಿ ಎ ಜಿ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ರಾಜ್ಯ ಸರ್ಕಾರದ ಬಜೆಟ್‌ನಲ್ಲಿ ವಿಕಲಚೇತನರನ್ನು ಕಡೆಗಣಿಸಲಾಗಿರುವದನ್ನು ಖಂಡಿಸಿ ಕರ್ನಾಟಕ ಅಂಗವಿಕಲರ ರಾಜ್ಯ ಒಕ್ಕೂಟದಿಂದ ಬಸವೇಶ್ವರ ಜನ್ಮಸ್ಥಳ ಬಸವನಬಾಗೇವಾಡಿಯಿಂದ ಬೆಂಗಳೂರವರೆಗೂ ಬೈಕ್ ರ್‍ಯಾಲಿ ಹಮ್ಮಿಕೊಂಡಿದೆ. ಮಾ.೧೯ರಂದು ಬಸವನಬಾಗೇವಾಡಿಯಿಂದ ಬೈಕ್ ರ್‍ಯಾಲಿ ಆರಂಭವಾಗಲಿದೆ. ಬೆಂಗಳೂರಿಗೆ ತಲುಪಿದ ನಂತರ ಬೆಂಗಳೂರಿನ ಪ್ರೀಡಂ ಪಾರ್ಕಿನಲ್ಲಿ ಧರಣಿ ಸತ್ಯಾಗ್ರಹ ಆರಂಭಿಸಲಾಗುವದು ಎಂದು ವಿಕಲಚೇತನ ಒಕ್ಕೂಟದ ಪ್ರಮುಖ ಮಲ್ಲಿಕಾರ್ಜುನ ಬಿರಾದಾರ ಹೇಳಿದರು.ಪಟ್ಟಣದ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಕಲಚೇತನರಿಗೆ ಏಕರೂಪ ಮಾಶಾಸನ ನೀಡಬೇಕು. ವಿಕಲಚೇತನರಿಗೆ ಬ್ಯಾಕ್‌ಲಾಗ್ ಹುದ್ದೆಗಳಲ್ಲಿ ನೇಮಕಾತಿ ಮಾಡಿಕೊಳ್ಳಬೇಕು. ವಿಕಲಚೇತನರ ಮಕ್ಕಳಿಗೆ ಉಚಿತ ಶಿಕ್ಷಣ ನೀಡಬೇಕು. ವಿಕಲಚೇತನರಿಗೆ ಪ್ರತ್ಯೇಕ ನಿಗಮ ಸ್ಥಾಪಿಸಬೇಕು. ಅಂಗವಿಕಲಕರು ಎಸ್‌ಸಿ., ಎಸ್‌ಟಿಗೆ ಸಮಾನರು ಎಂದು ಸರ್ವೋಚ್ಛ ನ್ಯಾಯಾಲಯ ನೀಡಿರುವ ತೀರ್ಪನ್ನು ಜಾರಿಗೆ ತರಬೇಕು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಮ್ಮ ಪ್ರತಿಭಟನೆ ನಡೆಯಲಿದೆ ಎಂದರು. ಸುದ್ದಿಗೋಷ್ಠಿಯಲ್ಲಿ ಒಕ್ಕೂಟದ ಪದಾಧಿಕಾರಿಗಳಾದ ನಾಗು ಕರಭಂಟನಾಳ, ಬಸವರಾಜ ಶಂಕ್ರೆಪ್ಪಗೋಳ, ನಾಗೇಶ ಗಬ್ಬೂರ, ಸುರೇಶ ಪವಾರ, ಪ್ರಕಾಶ ಸುಂಕದ, ರಾಜು ಹಾರಿವಾಳ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ದೇಶದ ರೈತ ಬಾಂಧವರ ಬದುಕನ್ನು ಹಸನಗೊಳಿಸುವ ನಿಟ್ಟಿನಲ್ಲಿ ಹೋರಾಟ ಮಾಡಲು ರೈತ ಸಂಘಟನೆಗಳು ಇರಬೇಕೆ ಹೊರತು ಕಚೇರಿಗಳಿಗೆ ತೆರಳಿ ಅಧಿಕಾರಿಗಳಿಂದ ಹಣ ವಸೂಲಿ ಮಾಡುವದಕ್ಕಲ್ಲ. ಇಂದು ಕೆಲ ಸಂಘಟನೆಗಳು ಉಪಜೀವನ ಮಾಡುವದಕ್ಕಾಗಿ ಹುಟ್ಟಿಕೊಳ್ಳುತ್ತಿರುವದು ವಿಷಾದಕರ ಸಂಗತಿ. ಇದರಿಂದಾಗಿ ಸಂಘಟನೆಗಳಿಗೆ ಬೆಲೆ ಸಿಗದಂತಾಗಿದೆ ಎಂದು ಅಖಂಡ ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹೇಳಿದರು.ತಾಲೂಕಿನ ಕಾನ್ನಾಳ ಗ್ರಾಮದ ಮಾರುತಿ ದೇವಸ್ಥಾನದ ಆವರಣದಲ್ಲಿ ಬುಧವಾರ ಅಖಂಡ ಕರ್ನಾಟಕ ರೈತ ಸಂಘದ ಗ್ರಾಮ ಘಟಕ ಉದ್ಘಾಟನೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ದೇಶಕ್ಕೆ ಅನ್ನ ನೀಡುವ ಅನ್ನದಾತರ ಪರಿಸ್ಥಿತಿ ಬಿಗಡಾಯಿಸಿದೆ. ಅನ್ನದಾತರ ನೆರವಿಗೆ ಇಂದಿನ ಸರ್ಕಾರಗಳು ನೆರವಿಗೆ ಬರುತ್ತಿಲ್ಲ. ಈ ನಿಟ್ಟಿನಲ್ಲಿ ರೈತ ಬಾಂಧವರು ಒಂದಾಗುವ ಅಗತ್ಯವಿದೆ. ರೈತರು ಒಂದಾದರೆ ತಮ್ಮ ಸಮಸ್ಯೆಗಳನ್ನು ಪರಿಹರಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.ರೈತರು ಸಾಲದಿಂದ ಮುಕ್ತರಾಗಬೇಕು. ರೈತರ ಆತ್ಮಹತ್ಯೆಗಳು ನಿಲ್ಲುವಂತಾಗಬೇಕು. ರೈತರ ಬೆಳೆಗಳಿಗೆ ಸೂಕ್ತ ಬೆಲೆ ಸಿಗುವಂತಾಗಬೇಕು. ವಿಜಯಪುರ-ಬಾಗಲಕೋಟ ಅವಳಿ ಜಿಲ್ಲೆಗೆ ನೀರು…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಇಂದು ಜನಪದ ಕಲೆಗಳು ನಶಿಸಿ ಹೋಗುತ್ತಿರುವ ಕಾಲಘಟ್ಟದಲ್ಲಿ ಹಲಗೆ ಬಾರಿಸುವ ಸ್ಪರ್ಧೆಯನ್ನು ಹಮ್ಮಿಕೊಳ್ಳುವ ಮೂಲಕ ಯುವಜನಾಂಗಕ್ಕೆ ಜನಪದ ಕಲೆಯ ಕುರಿತು ಜಾಗೃತಿ ಮೂಡಿಸುವ ಕಾರ್ಯ ಶ್ಲಾಘನೀಯ ಎಂದು ತಹಸೀಲ್ದಾರ ವೈ.ಎಸ್.ಸೋಮನಕಟ್ಟಿ ಹೇಳಿದರು.ಪಟ್ಟಣದ ಹಳೆಸಂತೆಕಟ್ಟೆ ಆವರಣದಲ್ಲಿ ಬಸವೇಶ್ವರ ಸೇವಾ ಸಮಿತಿಯು ಬುಧವಾರ ಸಂಜೆ ಹೋಳಿ ಹಬ್ಬದಂಗವಾಗಿ ಪ್ರಥಮ ಬಾರಿಗೆ ಹಮ್ಮಿಕೊಂಡಿದ್ದ ಹಲಗೆ ಬಾರಿಸುವ ಸ್ಪರ್ಧೆಯನ್ನು ಹಲಗೆ ಬಾರಿಸುವ ಮೂಲಕ ಉದ್ಘಾಟಿಸಿ ಮಾತನಾಡಿದ ಅವರು, ಏಕತೆ, ಸಮತೆ ಕಾಪಾಡಲು ಇಂತಹ ಹಬ್ಬಗಳು ಸ್ಪೂರ್ತಿ. ಹಲಗಿ ಹಬ್ಬ ಏಕತೆಯ ಹಬ್ಬವಾಗಿದೆ. ಈ ಹಬ್ಬದಲ್ಲಿ ಎಲ್ಲ ವರ್ಗದ ಜನರು ಸೇರಿಕೊಳ್ಳುವದರಿಂದ ಇದೊಂದು ಸಂಭ್ರಮದ ಹಬ್ಬವಾಗಿದೆ. ಹೋಳಿ ಹಬ್ಬದಂದು ನಡೆಯುವ ಕಾಮದಹನ ಮಾಡುವದು ಮನುಷ್ಯನಲ್ಲಿರುವ ಕೆಟ್ಟ ಗುಣಗಳನ್ನು ಸುಟ್ಟು ಹಾಕುವ ಸಂಕೇತವಾಗಿದೆ ಎಂದರು.ಡಿವೈಎಸ್ಪಿ ಬಲ್ಲಪ್ಪ ನಂದಗಾಂವಿ ಮಾತನಾಡಿ, ಹಲಗೆ ಬಾರಿಸುವದು ಪಾರಂಪರಿಕ ಕಲೆಯಾಗಿದೆ. ಇಂತಹ ಕಲೆಯನ್ನು ಸಂರಕ್ಷಿಸುವದು ತುಂಬಾ ಅಗತ್ಯವಿದೆ. ಈ ನಿಟ್ಟಿನಲ್ಲಿ ಇಂತಹ ಕಾರ್ಯಕ್ರಮಗಳು ಪೂರಕವಾಗುತ್ತವೆ. ಇಂದು ಡಿಜೆ ಸಂಸ್ಕ್ರತಿ ಹೆಚ್ಚಾಗುತ್ತಿರುವದು ವಿಷಾದನೀಯ.…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಜೀವನದ ಸಂಪತ್ತುಗಳಲ್ಲಿ ಶಿಕ್ಷಣ ಸಂಪತ್ತು ಅಮೂಲ್ಯವಾಗಿದೆ. ಉಳಿದ ಸಂಪತ್ತು ಕದಿಯಬಹುದು. ಶಿಕ್ಷಣ ಸಂಪತ್ತನ್ನು ಯಾರಿಂದಲೂ ಕದಿಯಲು ಸಾಧ್ಯವಿಲ್ಲ. ಇಂತಹ ಸಂಪತ್ತು ನಮ್ಮದಾಗಿಸಿಕೊಳ್ಳಬೇಕೆಂದು ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ, ವಿಜಯಪುರದ ಅನುಗ್ರಹ ಕಣ್ಣಿನ ಆಸ್ಪತ್ರೆಯ ಡಾ.ಪ್ರಭುಗೌಡ ಲಿಂಗದಳ್ಳಿ ಹೇಳಿದರು.ತಾಲೂಕಿನ ಹೂವಿನಹಿಪ್ಪರಗಿಯ ಆಶೀರ್ವಾದ ಶಿಕ್ಷಣ ಸಂಸ್ಥೆಯ ಆಶೀರ್ವಾದ ಪಬ್ಲಿಕ್ ಸ್ಕೂಲ್, ಪರಿವರ್ತನ ವಿದ್ಯಾಮಂದಿರದ ಅಭಿವ್ಯಕ್ತಿ-ಸಂಭ್ರಮ ೨೦೨೪-೨೫ಯಂಗವಾಗಿ ಬುಧವಾರ ಸಂಜೆ ಹಮ್ಮಿಕೊಂಡಿದ್ದ ಶಾಲಾ ವಾರ್ಷಿಕೋತ್ಸವ ಹಾಗೂ ಸನ್ಮಾನ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಮಕ್ಕಳ ಸರ್ವಾಂಗೀಣ ಬೆಳವಣಿಗೆಯಲ್ಲಿ ಶಿಕ್ಷಕರ, ಪಾಲಕರ ಪಾತ್ರವಿದೆ. ಮಕ್ಕಳು ಶಾಲೆಯಿಂದ ಮನೆಗೆ ಬಂದಾಗ ಪಾಲಕರು ಮಕ್ಕಳಿಗೆ ಸಮಯ ಕೊಡುವದನ್ನು ಮರೆಯಬಾರದು. ಪಾಲಕರು ಮಕ್ಕಳ ಕಡೆಗೆ ಗಮನ ಹರಿಸದೇ ಹೋದರೆ ಅವರು ದಾರಿ ತಪ್ಪುವ ಸಾಧ್ಯತೆಯಿದೆ. ಮಕ್ಕಳು ಯಾವ ಕ್ಷೇತ್ರದ ಬಗ್ಗೆ ಆಸಕ್ತಿ ಹೊಂದುತ್ತಾರೋ ಅವರಿಗೆ ಆ ಕ್ಷೇತ್ರದಲ್ಲಿ ಪ್ರೋತ್ಸಾಹ ನೀಡುವಂತಾಗಬೇಕು ಎಂದರು.ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ಸದಸ್ಯ ಡಿ.ಬಿ.ವಡವಡಗಿ ಮಾತನಾಡಿ, ಶಿಕ್ಷಣ ಎನ್ನುವದು ತಪಸ್ಸು ಇದ್ದ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಪ್ರಸ್ತುತ ಸಮಾಜದಲ್ಲಿ ಮಹಿಳೆಯರಿಗೆ ಇರಬೇಕಾದ ಕಾನೂನಿನ ಅರಿವು ಮೂಡಿಸುವ ಕಾರ್ಯಗಾರಗಳು ಹೆಚ್ಚು ಹೆಚ್ಚು ನೆಡೆಯಬೇಕು ಎಂದು ವಕೀಲೆ ಡಿ.ವಾಯ್‌.ಮೇಡೆಗಾರ ಹೇಳಿದ್ದರು.ಅವರು ಪಟ್ಟಣದ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಮಹಿಳಾ ದಿನಾಚಾರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ, ಮಹಿಳಾ ಸಬಲೀಕರಣ ಕುರಿತು ಉಪನ್ಯಾಸ ನೀಡಿದ್ದರು.ಲೈಂಗಿಕ ದೌರ್ಜನ್ಯ ಮತ್ತು ಮಹಿಳಾ ಶೋಷಣೆ ಇವುಗಳ ಕುರಿತು ಪ್ರಸ್ತುತ ಭಾರತೀಯ ದಂಡ ಸಂಹಿತೆಯಲ್ಲಿ ಹೂಸ ಕಾನೂನುಗಳ ಬಗ್ಗೆ ಪ್ರಸ್ತಾಪಿಸಿದರು. ಅಧ್ಯಕ್ಷತೆ ವಹಿಸಿ ಕಾಲೇಜಿನ ಪ್ರಾಚಾರ್ಯ, ಪ್ರೂ.ಆರ್‌ ಎಚ್‌ ರಮೇಶ ಮಾತನಾಡಿ “ಮಹಿಳಾ ದಿನಾಚಾರಣೆ ದೇಶದ ಶ್ರೇಷ್ಠ ಮಹಿಳೆಯರನ್ನು ಸ್ಮರಿಸಿಕೂಂಡು ಅವರ ವಿಚಾರಗಳನ್ನು ವಿದ್ಯಾರ್ಥಿಗಳು ಜೀವನದಲ್ಲಿ ಅಳವಡಿಸಿಕೂಳ್ಳಬೇಕು ಎಂದರು.ಪ್ರೊ.ರವಿಕುಮಾರ ಅರಳಿ ಪ್ರಾಸ್ತಾವಿಕವಾಗಿ ಮಾತನಾಡಿದರು, ವೇದಿಕೆಯಲ್ಲಿ ಪ್ರೂ.ತಿಪ್ಪಣ್ಣ ವಗ್ಧಾಳ,ಪ್ರೂ.ರಾಜಲಕ್ಷ್ಮಿ, ಉಪಸ್ಥಿತರಿದ್ದರು,ಕುಮಾರಿ ತೇಜಸ್ವನಿ ಯಳಮೇಲಿ ಪ್ರಾರ್ಥಿಸಿದರು, ಪ್ರೊ.ಸಂಗಮೇಶ ಹಿರೇಮಠ ವಂದಿಸಿದರು, ಪ್ರೂ.ಸುರೇಖಾ ರಾಠೋಡ್‌ ನಿರೂಪಿಸಿದರು.

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಹಕ್ಕಿ ಜ್ವರ ಪಕ್ಷಿಗಳಿಗೆ ಹರಡುವ ಕಾಯಿಲೆಯಾಗಿದ್ದು ಮನುಷ್ಯರಿಂದ ಮನುಷ್ಯರಿಗೆ ಸಾಂಕ್ರಾಮಿಕವಾಗಿ ಹರಡುವದಿಲ್ಲ, ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ ಎಂದು ಕಂದಾಯ ಉಪವಿಭಾಗಾಧಿಕಾರಿ ವಿನಯ ಪಾಟೀಲ ಹೇಳಿದರು.ಪಟ್ಟಣದ ಮಿನಿ ವಿಧಾನಸೌಧದಲ್ಲಿನ ಕಂದಾಯ ಉಪವಿಬಾಗಾಧಿಕಾರಿಗಳ ಸಭಾಭವನದಲ್ಲಿ ನಡೆದ ಹಕ್ಕಿಜ್ವರ ಕುರಿತು ಪ್ರಚಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಹಿರಿಯ ಪಶು ವೈದ್ಯಾಧಿಕಾರಿ ಡಾ. ರಾಜಕುಮಾರ ಅಡಕಿ ಮಾತನಾಡಿ, ತಾಲೂಕಿನಲ್ಲಿ ಒಟ್ಟು ಹತ್ತು ಸಾವಿರ ಕೋಳಿಗಳು ಇವೆ. ಸಾವಿರ ಕೋಳಿಯ ೪ ಫಾರಂ ಗಳಿವೆ. ೫೦೦ ಕೋಳಿಯ ೧೦ , ನೂರು ಕೋಳಿಯ ೪೦, ಐವತ್ತು ಕೋಳಿಯ ೩೦ ಹೀಗೆ ಫಾರಂಗಳಿವೆ.ಮರಣ ಹೊಂದಿದ ಕೋಳಿಗಳ ವೈಜ್ಞಾನಿಕವಾಗಿ ವಿಲೇವಾರಿ ಮಾಡಲಾಗುತ್ತಿದೆ. ಕೋಳಿ ಶೀತ ಜ್ವರವೆಂದು ಕಂಡಿರುವ ಕೋಳಿ ಸಾಕಣೆ ಕೇಂದ್ರವನ್ನು ನಿರ್ಭಂದಿತ ಪ್ರದೇಶವೆಂದು ಘೋಷಿಸಿ ವಾಹನಗಳ ಮತ್ತು ಸಾರ್ವಜನಿಕರ ಪ್ರವೇಶ ನಿಷೇಧಿಸಲು ಕ್ರಮ ವಹಿಸಲಾಗಿದೆ. ಕೋಳಿ ಫಾರಂ ಒಂದು ಕಿಮಿ ರಸಾಯನಿಕ ದ್ರಾವಣ ಸಿಂಪಡಿಸಲಾಗಿದೆ ಎಂದರು.ತಾಲೂಕಾ ಹಕ್ಕಿ ಜ್ವರದ ನೋಡಲ್ ಅಧಿಕಾರಿ ಡಾ. ಪ್ರಕಾಶ ಮಿರ್ಜಿ…

Read More