Author: editor.udayarashmi@gmail.com

ಯಾವುದೇ ಸಚಿವ ಅಪರಾಧ ಮಾಡಲು ಬೆಂಬಲ ನೀಡುವುದಿಲ್ಲ | ಶಿಷ್ಟಾಚಾರ ಉಲ್ಲಂಘನೆ ಬಗ್ಗೆ ಸಿಎಂ ಆಂತರಿಕ ತನಿಖೆಗೆ ಆದೇಶ | ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಠನೆ ಬೆಂಗಳೂರು: ‘ನಟಿ ರನ್ಯಾ ರಾವ್ ಪ್ರಕರಣದಲ್ಲಿ ಸಚಿವರ ಕೈವಾಡ ಎಂಬುದೆಲ್ಲಾ ಕೇವಲ ಊಹಾಪೋಹ. ಇದು ಬಿಜೆಪಿಯವರ ಪಿತೂರಿಯಷ್ಟೇ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರಾದರೂ ನೋಡಿದ್ದಾರಾ? ಕೇಳಿದ್ದಾರಾ? ಮದುವೆ ಸೇರಿದಂತೆ ಶುಭ ಕಾರ್ಯಕ್ರಮಗಳಿಗೆ ಹೋಗುತ್ತೇವೆ. ಅಲ್ಲಿ ಅನೇಕರು ನಮ್ಮ ಜೊತೆ ಫೋಟೋ ತೆಗೆಸಿಕೊಳ್ಳುತ್ತಾರೆ. ಯಾರೋ ನನ್ನ ಪಕ್ಕ ಬಂದು ನಿಂತುಕೊಂಡ ತಕ್ಷಣ ನನಗೂ ಅವರಿಗೂ ಸಂಬಂಧ ಇದೆ ಎಂದು ಭಾವಿಸಲು ಸಾಧ್ಯವೇ? ಎಂದು ಪ್ರಶ್ನಿಸಿದರು.ನಮ್ಮ ಜೊತೆ ಫೋಟೋ ತೆಗೆಸಿಕೊಂಡವರು ಅಪರಾಧ ಮಾಡಿದರೆ ನಾವು ಅದಕ್ಕೆ ಬೆಂಬಲ ನೀಡಿದ್ದೇವೆ ಎಂದು ಹೇಳಲು ಸಾಧ್ಯವೇ? ಇಂತಹ ಸಚಿವರು ಈ ರೀತಿಯಾಗಿ ಈ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎಂದು ಸ್ಪಷ್ಟವಾಗಿ ಇದ್ದರೆ ನೀವು ಚರ್ಚೆ ಮಾಡಿ. ಯಾವುದೇ ಸಚಿವ ಅಪರಾಧ ಮಾಡಲು ಬೆಂಬಲ ನೀಡುವುದಿಲ್ಲ ಎಂದು…

Read More

ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಸಚಿವರಿಗೆ ಮನವಿ ಉದಯರಶ್ಮಿ ದಿನಪತ್ರಿಕೆ ಚಿಕ್ಕಪಡಸಲಗಿ: ವೃಂದ ಮತ್ತು ನೇಮಕಾತಿ ನಿಯಮಗಳ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಕನಾ೯ಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನೇತೃತ್ವದಲ್ಲಿ ಗುರುವಾರ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಸಚಿವ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಲಾಯಿತು.ಶಿಕ್ಷಣ ಸಚಿವರನ್ನು ಇಂದು ಭೇಟಿ ಮಾಡಿದ ಕನಾ೯ಟಕ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ನಿಯೋಗ ಶಿಕ್ಷಕ ಸಮೂಹ ಎದುರಿಸುತ್ತಿರುವ ಹಲ ಸಮಸ್ಯೆಗಳನ್ನು ಕೂಡಲೇ ಪರಿಹರಿಸುವಂತೆ ವಿನಂತಿಸಿತು.ರಾಜ್ಯಾದ್ಯಂತ ಶಿಕ್ಷಕರ ವೇತನ ಅನುದಾನ ಕೊರತೆಯನ್ನು ನೀಗಿಸಲು ಆಥಿ೯ಕ ಇಲಾಖೆಯೊಂದಿಗೆ ಸಂವಹನ ಸಾಧಿಸಲು ಸಚಿವರಲ್ಲಿ ಕೋರಲಾಯಿತು. ಸಂಘದ ರಾಜ್ಯಾಧ್ಯಕ್ಷ ಕೆ.ನಾಗೇಶ, ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ ನುಗ್ಗಲಿ ನೇತೃತ್ವದಲ್ಲಿ ಸಂಘದ ಪದಾಧಿಕಾರಿಗಳು ಸಚಿವ ಮಧು ಬಂಗಾರಪ್ಪ ಅವರನ್ನು ಭೇಟಿ ಮಾಡಿ ಶಿಕ್ಷಕರ ವಲಯದ ಹತ್ತಾರು ಸಮಸ್ಯೆಗಳನ್ನು ನಿವೇದಿಸಿಕೊಂಡರು.ಈ ಸಂದರ್ಭದಲ್ಲಿ ಗದಗ ಜಿಲ್ಲೆಯ ಸಂಘದ ಅಧ್ಯಕ್ಷ ಹಿರೇಮಠ, ಸದಸ್ಯ ಬಂಡಿ, ಅಫ್ಜಲಪುರ ತಾಲೂಕು ಅಧ್ಯಕ್ಷ ದಫೇದಾರ, ಶಿವಾನಂದ…

Read More

ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಕೂಡಲೇ ಬೂದಿಹಾಳ ಪೀರಾಪೂರ ನೀರಾವರಿ ಯೋಜನೆಯನ್ನು ತ್ವರಿತಗತಿಯಲ್ಲಿ ಪೂರ್ಣಗೊಳಿಸಿ ವಿಜಯಪುರ ಜಿಲ್ಲೆಯ ಸಮಗ್ರ ನೀರಾವರಿಗೊಳಿಸಲು ಮುಂದಾಗಿ, ಇಲ್ಲವಾದರೆ ಉಗ್ರವಾದ ಹೋರಾಟ ಮಾಡಲಾಗುವುದು ಎಂದು ಅಖಂಡ ಕರ್ನಾಟಕ ರೈತಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಹೇಳಿದರು.ಗ್ರಾಮದ ಪ್ರವಾಸಿ ಮಂದಿರದಲ್ಲಿ ಬೂದಿಹಾಳ-ಪೀರಾಪೂರ ನೀರಾವರಿ ಯೋಜನೆಯ ಕ್ರಿಯಾಶೀಲ ಸಮಿತಿ ಹಮ್ಮಿಕೊಂಡ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.ಮುಖಂಡರಾದ ಪ್ರಭುಗೌಡ ಲಿಂಗದಳ್ಳಿ ಮತ್ತು ಕರ್ನಾಟಕ ರಾಜ್ಯ ರೈತಸಂಘ ಹಾಗೂ ಹಸಿರುಸೇನೆ ಜಿಲ್ಲಾಧ್ಯಕ್ಷ ಸಂಗಮೇಶ ಸಗರ ಅವರು ಮಾತನಾಡಿ ಈ ಯೋಜನೆಯು ಶೇಕಡಾ ೯೦ ಪ್ರತಿಶತ ಪೂರ್ಣಗೊಂಡಿದೆ ಎಂದು ಹೇಳಲಾಗುತ್ತಿದ್ದು, ಇನ್ನೂ ಕೇವಲ ೧೦ ಪ್ರತಿಶತ ಬಾಕಿ ಇರುವ ಕಾಮಗಾರಿಯನ್ನು ಕೂಡಲೇ ಪೂರ್ಣಗೊಳಿಸಬೇಕು ಎಂದು ಹೇಳಿದ ಅವರು ಇನ್ನೂ ಈ ಕಾಮಗಾರಿಗೆ ಬಿಡುಗಾವಲಿಗಳ ನಿರ್ಮಾಣಕ್ಕಾಗಿ ಅಂದಾಜು ೧೭೦ ಕೋಟಿ ರೂಪಾಯಿ ಹಣಕಾಸಿನ ಮಂಜೂರಾತಿ ಅವಶ್ಯಕತೆಯಿದ್ದು, ಜಿಲ್ಲಾಧಿಕಾರಿಗಳಿಗೆ ಈ ಕುರಿತು ಈಗಾಗಲೇ ಮನವಿ ಸಲ್ಲಿಸಲಾಗಿದ್ದು, ಈ ಯೋಜನೆ ಪೂರ್ಣವಾದರೆ ಸುಮಾರು ೫೫ ಸಾವಿರ ಹೆಕ್ಟೇರ್ ರೈತರ…

Read More

ಉದಯರಶ್ಮಿ ದಿನಪತ್ರಿಕೆ ಕಲಕೇರಿ: ಅನಾದಿ ಕಾಲದಿಂದಲೂ ಮನುಕುಲವನ್ನು ಉದ್ಧರಿಸಿ ಜಗತ್ತಿಗೆ ಶಾಂತಿ ಸಹಬಾಳ್ವೆ ಸಿದ್ಧಾಂತವನ್ನು ಬೋಧಿಸಿ ಆತ್ಮಜ್ಞಾನದ ಪ್ರಾಮುಖ್ಯತೆಯನ್ನು ಜೀವಾತ್ಮರಿಗೆ ತಿಳಿ ಹೇಳಿದವರು ರೇಣುಕ ಭಗವತ್ಪಾದರಾಗಿದ್ದಾರೆ ಎಂದು ಜಾಲಹಳ್ಳಿ ಬೃಹನ್ಮಠದ ಜಗದಾರಾಧ್ಯ ಜಯಶಾಂತಲಿಂಗ ಶಿವಾಚಾರ್ಯ ಶ್ರೀಗಳು ಹೇಳಿದರು.ಗ್ರಾಮದ ಗುರುಮರುಳಾರಾಧ್ಯರ ಹಿರೇಮಠದಲ್ಲಿ ನಡೆದ ಜಗದ್ಗುರು ರೇಣುಕಾಚಾರ್ಯ ಜಯಂತಿ ಹಾಗೂ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ಸಾನಿಧ್ಯವಹಿಸಿ ಅವರು ಮಾತನಾಡಿದರು.ಪುರಾಣಿಕ ಗದಗ ಚುರ್ಚಿಹಾಳದ ವೇ.ಪಂ.ಪುಟ್ಟರಾಜ ಶಾಸ್ತ್ರಿ ರೇಣುಕಾಚಾರ್ಯರ ಕುರಿತು ಹಲವು ವಿಚಾರಗಳನ್ನು ಹಂಚಿಕೊಂಡರು. ಹಿರೇಮಠದ ಒಡೆಯರಾದ ಸಿದ್ದರಾಮ ಶಿವಾಚಾರ್ಯರು ಅಧ್ಯಕ್ಷತೆ ವಹಿಸಿದ್ದರು. ಗವಾಯಿಗಳು ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು.ಕಾರ್ಯಕ್ರಮದಲ್ಲಿ ಶಿಕ್ಷಣ, ಕೃಷಿ, ಸಂಘಟನೆ, ಸಮಾಜ ಸೇವೆ ವೈದ್ಯಕೀಯ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಶ್ರೀಮಠದ ಪರವಾಗಿ ವಿಶೇಷವಾಗಿ ಸನ್ಮಾನಿಸಿ ಗೌರವಿಸಲಾಯಿತು.ವಿಶೇಷ ಸನ್ಮಾನ ಸ್ವೀಕರಿಸಿದ ಎಸ್.ಬಿ.ಪಿಯು ಕಾಲೇಜಿನ ಪ್ರಾಚಾರ್ಯ ಸಿ.ಎಸ್.ಹಿರೇಮಠ, ಉಪನ್ಯಾಸಕ ಎಸ್.ಎಸ್.ಕಲಶೆಟ್ಟಿ, ಎಸ್.ಬಿ.ವಿಸಡಮ್ ಕರಿಯರ್ ಅಕಾಡೆಮಿ ಅಧ್ಯಕ್ಷ ಶರಣಯ್ಯ ಭಂಡಾರಿಮಠ ಮಾತನಾಡಿದರು.ಕಾರ್ಯಕ್ರಮದಲ್ಲಿ ಸಾವಿರಾರು ಸದ್ಭಕ್ತರು ಪಾಲ್ಗೊಂಡು ಭಕ್ತಿ ಸೇವೆ ಸಲ್ಲಿಸಿದರು,…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬೆಂಬಲ ಬೆಲೆ ಯೋಜನೆಯಡಿ ಎಫ್.ಎ.ಕ್ಯೂ ಗುಣಮಟ್ಟದ ಕುಸುಬೆ ಉತ್ಪನ್ನಕ್ಕೆ ಜಿಲ್ಲಾ ಕನಿಷ್ಠ ಬೆಂಬಲ ಬೆಲೆ ಜಿಲ್ಲಾ ಕಾರ್ಯಪಡೆ ಸಮಿತಿ ಪ್ರತಿ ಕ್ವಿಂಟಲ್ ರೂ.೫೯೪೦ ಬೆಂಬಲ ಬೆಲೆ ನಿಗದಿಪಡಿಸಿದೆ ಎಂದು ಜಿಲ್ಲಾಧಿಕಾರಿಗಳು ಹಾಗೂ ಕನಿಷ್ಠ ಬೆಂಬಲ ಬೆಲೆ ಕಾರ್ಯಪಡೆ ಸಮಿತಿ ಅಧ್ಯಕ್ಷರಾದ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.೨೦೨೪-೨೫ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಜಿಲ್ಲೆಯಲ್ಲಿ ೫೨೯ ಹೆಕ್ಟೇರ್ ಕ್ಷೇತ್ರದಲ್ಲಿ ಕುಸುಬೆ ಬಿತ್ತನೆಯಾಗಿದ್ದು, ಅಂದಾಜು ೬೬೦೦ ಕ್ವಿಂಟಲ್ ಇಳುವರಿ ಅಂದಾಜಿಸಲಾಗಿದೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಪ್ರತಿ ಕ್ವಿಂಟಲ್‌ಗೆ ೫೩೦೦ ರಿಂದ ೫೫೦೦ ರೂ. ವರೆಗಿನ ದರದಿಂದ ಮಾರಾಟವಾಗುತ್ತಿದ್ದು, ಬೆಂಬಲ ಬೆಲೆಯಡಿ ಪ್ರತಿ ಕ್ವಿಂಟಾಲ್ ಕುಸುಬೆ ಉತ್ಪನ್ನಕ್ಕೆ ೫೯೪೦ ರೂ. ಬೆಲೆ ನಿಗದಿಪಡಿಸಿ ಖರೀದಿಸಲು ನಿರ್ಧರಿಸಲಾಗಿದೆ.ಬೆಂಬಲ ಬೆಲೆಯಡಿ ಕುಸುಬೆ ಉತ್ಪನ್ನ ಖರೀದಿಗೆ ಜಿಲ್ಲೆಯ ಕೆಓಎಫ್ ಸಂಸ್ಥೆಯ ಎಣ್ಣೆ ಬೀಜ ಬೆಳಗಾರರ ಮಹಾಮಂಡಳಿ ನಿಯಮಿತ ಇವರು ರೈತರ ನೊಂದಣಿ ಕಾರ್ಯದ ಜೊತೆಗೆ ಖರೀದಿ ಪ್ರಕ್ರಿಯೆಯನ್ನು ಪ್ರಾರಂಭಿಸಲು ಸಭೆಯಲ್ಲಿ ನಿರ್ಧರಿಸಲಾಗಿದೆ.ಜಿಲ್ಲೆಯಲ್ಲಿ ವಿಜಯಪುರ-ಬಬಲೇಶ್ವರ ತಾಲೂಕಿನ ಬಬಲೇಶ್ವರ,ಸವನಹಳ್ಳಿ ಹಾಗೂ ತಾಜಪುರ ಎಣ್ಣೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇಂಡಿ ತಾಲ್ಲೂಕಿನ ಲಚ್ಯಾಣ ಗ್ರಾಮದ ವ್ಯಾಪ್ತಿಯಲ್ಲಿ ಕಳೆದ ವರ್ಷ ಏಪ್ರಿಲ್ ೩ರಂದು ಕೊಳವೆ ಬಾವಿಯಲ್ಲಿ ಆಕಸ್ಮಿಕವಾಗಿ ಬಿದ್ದ ಮಗುವಿನ ರಕ್ಷಣಾ ಕಾರ್ಯಾಚರಣೆಗಾಗಿ ಬಳಸಲಾದ ಯಂತ್ರೋಪಕರಣ ಸೇವೆ ನೀಡಿದ ಪಿಡಬ್ಲೂಡಿ ೧ನೇ ದರ್ಜೆಯ ಗುತ್ತಿಗೆದಾರರಾದ ರಾಜಶೇಖರ ಚೋರಗಿ ಅವರಿಗೆ ಯಂತ್ರೋಪಕರಣ ಬಳಕೆ ಬಿಲ್ಲಿನ ಮೊತ್ತ ರೂ. ೪,೩೬,೩೫೭ಗಳನ್ನು ಪಾವತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ತಿಳಿಸಿದ್ದಾರೆ.ಯಂತ್ರೋಪಕರಣ ಬಳಕೆಯ ಮೊತ್ತವನ್ನು ಗ್ರಾಮ ಪಂಚಾಯತಿಯಿಂದ ಗುತ್ತಿಗೆದಾರರಿಗೆ ಪಾವತಿಸಲಾಗಿದ್ದು, ಈ ಮೊತ್ತ ಹೊರತು ಪಡಿಸಿ ಇನ್ನಿತರೆ ರೀತಿಯ ಯಾವುದೇ ಮೊತ್ತವು ಪಾವತಿಸಲು ಬಾಕಿ ಉಳಿದಿರುವುದಿಲ್ಲ ಹಾಗೂ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಲ್ ಪಾವತಿಸುವ ಯಾವುದೇ ಬೇಡಿಕೆ ಇರುವುದಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿದ ಹಿರಿಯ ಸಿವಿಲ್ ನ್ಯಾಯಾಧೀಶ ರವೀಂದ್ರಕುಮಾರ ಕಟ್ಟಿಮನಿ ಕರೆ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಸಂವಿಧಾನದಲ್ಲಿ ಮಹಿಳೆಯರಿಗೆ ನೀಡಲಾದ ವಿಶೇಷ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಳ್ಳುವ ಮೂಲಕ ಮಹಿಳೆಯರು ಸ್ವಾವಲಂಬಿಗಳಾಗಬೇಕು ಎಂದು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರು ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ ಕರೆ ನೀಡಿದರು.ತಾಲೂಕಿನ ಢವಳಗಿ ಗ್ರಾಮದ ಕಸ್ತೂರಿಬಾ ವಸತಿ ಶಾಲೆಯಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಇಲಾಖೆ ಹಾಗೂ ಇತರ ಎಲ್ಲ ಸರಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಹಿಂದೆ ಮಹಿಳೆಯರಿಗೆ ಮತದಾನದ ಹಕ್ಕು ಸೇರಿದಂತೆ ವಿವಿಧ ಹಕ್ಕುಗಳು ಇರಲಿಲ್ಲ. ಅಡುಗೆ ಮನೆಗೆ ಮಾತ್ರ ಸೀಮಿತ ಎಂಬಂತೆ ನಡೆಸಿಕೊಳ್ಳಲಾಗುತ್ತಿತ್ತು. ಈ ಕಳಂಕವನ್ನು ಹೋಗಲಾಡಿಸಿ ಡಾ.ಬಾಬಾ ಸಾಹೇಬ ಅಂಬೇಡ್ಕರ್ ಅವರು ಸಮಾನತೆಯನ್ನು ಸಾರಿದರು. ಮಹಿಳೆಯರಿಗೆ ವಿಶೇಶ ಸವಲತ್ತುಗಳನ್ನು ಕಲ್ಪಿಸುವ ಮೂಲಕ ಸಮಾಜದಲ್ಲಿ ಮಹಿಳೆಯರಿಗೆ ಸಮಾನತೆಯನ್ನು ತಂದಿದ್ದಾರೆ. ಸರ್ಕಾರ ಮಹಿಳೆಯರಿಗಾಗಿ ಹಲವಾರು…

Read More

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಪ್ರತಿಯೊಬ್ಬರ ಸಹಕಾರದಿಂದ ಪ್ರಥಮವಾಗಿ ಜರುಗುವ ತಾಲ್ಲೂಕ ಸಾಹಿತ್ಯ ಸಮ್ಮೇಳನ ಯಶಸ್ವಿಯಾಗಬೇಕು ಎಂದು ತಾಲ್ಲೂಕ ಘಟಕದ ಅಧ್ಯಕ್ಷ ಸಿದ್ರಾಮಯ್ಯ ಲಕ್ಕುಂಡಿಮಠ ಹೇಳಿದರು.ಪಟ್ಟಣದ ವಿರಕ್ತಮಠದಲ್ಲಿ ಬುಧವಾರ ಸಂಜೆ ನಡೆದ ತಾಲ್ಲೂಕ ಮಟ್ಟದ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು ಶಿಸ್ತುಬದ್ದವಾಗಿ, ಅಚ್ಚುಕಟ್ಟಾಗಿ ಬೇರೆ ತಾಲ್ಲೂಕಗಳಿಗಿಂತ ವಿಶಿಷ್ಟವಾಗಿ ಮಾದರಿಯಾಗಿ ಜರುಗುವ ನಿಟ್ಟಿನಲ್ಲಿ ಕಾರ್ಯಗತವಾಗಬೇಕು ಎಂದರು.ಕಸಾಪ ಜಿಲ್ಲಾಧ್ಯಕ್ಷ ಹಾಸಿಂಪೀರ ವಾಲಿಕಾರ ಮಾತನಾಡಿ, 14 ತಾಲ್ಲೂಕ, 5 ಜಿಲ್ಲಾ ಸಮ್ಮೇಳನಗಳನ್ನು ಇಲ್ಲಿಯವರೆಗೆ ಆಯೋಜನೆ ಮಾಡಲಾಗಿದೆ. ಸಾಹಿತ್ಯಸಕ್ತರ ಮೂಲಕ ಸಮ್ಮೇಳನ ಯಶಸ್ಸು ಮಾಡಬೇಕಾಗಿದೆ. ಗೋಷ್ಟಿ ಏರ್ಪಾಟ, ತಾಲ್ಲೂಕಿನ ಪ್ರತಿ ಗ್ರಾಮಕ್ಕೆ ಭೇಟಿ ನೀಡಿ ಅವರ ಸಹಕಾರ ಪಡೆದುಕೊಂಡು ಯಶಸ್ಸು ಮಾಡೋಣ ಎಂದರು.ಗ್ರೇಡ್ 2 ತಹಶಿಲ್ದಾರ ಎಸ್.ಎಚ್.ಅರಕೇರಿ ಮಾತನಾಡಿ ತಾಲ್ಲೂಕ ಆಡಳಿತದಿಂದ ಸಂಪೂರ್ಣ ಸಹಕಾರ, ಶಿಸ್ತುಬದ್ದವಾಗಿ ಕೈಜೋಡಿಸಿ ಯಶಸ್ಸಿಗೆ ಪಣ ತೊಡುತ್ತೇವೆ ಎಂದರು.ಸಾಮಾಜಿಕ ಬದ್ದತೆಯಿಂದ ಕಾರ್ಯ ನಿರ್ವಹಿಸಬೇಕು. ಕಡಿಮೆ ಅವಧಿಯಲ್ಲಿ ಸಮ್ಮೇಳನದ ಯಶಸ್ಸು ಮಾಡಬೇಕಾಗಿದೆ. ವಿವಿಧ ಸಮಿತಿಗಳನ್ನು ಮಾಡಬೇಕು. ಮಾದರಿಯಾಗುವ ಸಮ್ಮೇಳನ ಆಗಬೇಕು. ಹಣಕಾಸಿನ ಪಾರದರ್ಶಕತೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಯುಗಾದಿ ಹಬ್ಬದ ಅಂಗವಾಗಿ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ವಿಜಯಪುರ ವಿಭಾಗದಿಂದ ಯಾತ್ರಾರ್ಥಿಗಳಿಗೆ ಉತ್ತಮ ಸಾರಿಗೆ ಸೌಲಭ್ಯ ಕಲ್ಪಿಸಲು ಮಾರ್ಚ್೨೨ ರಿಂದ ಏಪ್ರಿಲ್ ೦೧ರ ವರೆಗೆ ಶ್ರೀಶೈಲದಲ್ಲಿ ಜರಗುವ ಶ್ರೀಮಲ್ಲಿಕಾರ್ಜುನ ಜಾತ್ರೆಗೆ ವಿಶೇಷ ಸಾರಿಗೆ ವ್ಯವಸ್ಥೆ ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ವಿಜಯಪುರ, ಇಂಡಿ, ಸಿಂದಗಿ, ಮುದ್ದೇಬಿಹಾಳ, ತಾಳಿಕೋಟಿ ಹಾಗೂ ಬಸವನ ಬಾಗೇವಾಡಿ ಘಟಕ ಕೇಂದ್ರ ಸ್ಥಾನಗಳಿಂದ ವಿಶೇಷ ಸಾರಿಗೆಗಳ ಕಾರ್ಯಾಚರಣೆ ಮಾಡಲಾಗುವದು. ಪ್ರಯಾಣಿಕರಿಗೆ ವಿಜಯಪುರ ಕೇಂದ್ರ ಬಸ್ ನಿಲ್ದಾಣ ಹಾಗೂ ಎಲ್ಲ ಘಟಕಗಳ ನಿಲ್ದಾಣಗಳಲ್ಲಿ ಮುಂಗಡ ಟಿಕೇಟ್ ಕಾಯ್ದಿರಿಸುವ ವ್ಯವಸ್ಥೆ ಕಲ್ಪಿಸಲಾಗಿದೆ. ಒಂದೇ ಗುಂಪಿನಿಂದ ಪ್ರಯಾಣಿಸಲು ಕನಿಷ್ಠ ೪೫ ರಿಂದ ೫೫ ಜನ ಪ್ರಯಾಣಿಕರು ಲಭ್ಯವಾದಲ್ಲಿ ದಾರಿ ಮಧ್ಯೆ ಬರುವ ಯಾತ್ರಾ ಸ್ಥಳಗಳ ದರ್ಶನ ಮಾಡಿಸಲಾಗುದು. ಉಚಿತ ಅನ್ನಸಂತರ್ಪಣೆ ಕೇಂದ್ರಗಳಲ್ಲಿ ಊಟಕ್ಕಾಗಿ ಕಾಲಾವಕಾಶ ಕೊಡಲಾಗುವುದು. ಘಟಕ ಕೇಂದ್ರ ಸ್ಥಾನದಿಂದ ಹೆಚ್ಚುವರಿ ಬಸ್‌ಗಳಲ್ಲದೇ ಪ್ರಯಾಣಿಕರು ಇಚ್ಛಿಸಿದಲ್ಲಿ ಅವರ ಸ್ವಗ್ರಾಮಗಳಿಂದ ನೇರವಾಗಿ ಶ್ರೀಶೈಲಕ್ಕೆ ಸಾರಿಗೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೨೦೨೩-೨೪ನೇ ಸಾಲಿನ ಮೆಟ್ರಿಕ್ ನಂತರದ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ, ಅಲೆಮಾರಿ ಹಾಗೂ ಅರೆ ಅಲೆಮಾರಿ ವಿದ್ಯಾರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನೀಡಲಾಗುತ್ತಿರುವ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಸ್ನಾತಕೋತರ ಪದವಿ, ವೃತ್ತಿಪರ ಪದವಿ ಮತ್ತು ವೃತ್ತಿಪರ ಸ್ನಾತಕೋತ್ತರ ಪದವಿಗಳ ಕೋರ್ಸ್ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಮೆಟ್ರಿಕ್ ನಂತರದ ಶುಲ್ಕ ಮರುಪಾವತಿ ಸೌಲಭ್ಯಕ್ಕಾಗಿ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವ ಅವಧಿಯನ್ನು ಮಾರ್ಚ್ ೩೦ರವರೆಗೆ ವಿಸ್ತರಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಇಲಾಖಾ ಸಹಾಯವಾಣಿ ಸಂಖ್ಯೆ: ೮೦೫೦೭೭೦೦೦೫ ಅಥವಾhttps://bcwd.karnataka.gov.in ಗೆ ಭೇಟಿ ನೀಡಬಹುದೆಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More