Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ರಾಜ್ಯದಲ್ಲಿ ಬೀದರನಿಂದ ಚಾಮರಾಜನಗರ ಜಿಲ್ಲೆಯ ವರೆಗೆ ಎಲ್ಲ ಕಬ್ಬು ಬೆಳೆಗಾರರಿಗೆ ಸಿದ್ಧರಾಮಯ್ಯ ನೇತೃತ್ವದ ನಮ್ಮ ಸರ್ಕಾರ ಐತಿಹಾಸಿಕ ದರ ನೀಡಿದೆ. ಇದರೊಂದಿಗೆ ಕೇಂದ್ರ ಸರ್ಕಾರವೂ ಮಾಡದ ಕೆಲಸವನ್ನು ಕಾಂಗ್ರೆಸ್ ಸರ್ಕಾರ ಮಾಡಿದೆ ಎಂದು ಜವಳಿ, ಕಬ್ಬು ಅಭಿವೃದ್ಧಿ, ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ ಹೇಳಿದರು.ತಾಲೂಕಿನ ಮಲಘಾಣ ಗ್ರಾಮದಲ್ಲಿ ಸರ್ಕಾರಿ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್, ಗ್ರಾಮ ಹಾಗೂ ತಾಂಡಾದಲ್ಲಿ ತಲಾ ಒಂದೊಂದು ಅಂಗನವಾಡಿ ಕಟ್ಟಡ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ನಮ್ಮ ಸರ್ಕಾರದ ನಿರ್ಧಾರದಿಂದ ಕಬ್ಬು ಬೆಳೆಗಾರರಿಗೆ ಪ್ರತಿ ಟನ್ ಕಬ್ಬು ಬೆಳೆಗೆ 200-350 ರೂ. ಹೆಚ್ಚಿನ ದರ ಸಿಕ್ಕಿದೆ ಎಂದರು.ರೈತರು ಹೆಚ್ಚು ಇಳುವರಿ ಪಡೆಯುವ ವೈಜ್ಞಾನಿಕ ಕೃಷಿ ಮಾಡಬೇಕು. ಕೃಷಿಯಲ್ಲಿ ಕಬ್ಬು ಬೆಳೆ ಅಧಿಕ ಉತ್ಪಾದನೆ ನಿಟ್ಟಿನಲ್ಲಿ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಕ್ಕರೆ ಕಾರ್ಖಾನೆ ಮಾಲೀಕರು ಸಮನ್ವಯದಿಂದ ಕಬ್ಬು ಅಭಿವೃದ್ಧಿಗೆ ಆದ್ಯತೆ ನೀಡಬೇಕು ಎಂದು ಸಲಹೆ ನೀಡಿದರು.ಮಲಘಾಣ ಭಾಗದಲ್ಲಿ ನೀರಾವರಿ ಕ್ರಾಂತಿಯಾಗಿ ಬರಡು…
ಬಬಲೇಶ್ವರದಲ್ಲಿ ನಡೆದ ಬಸವಾದಿ ಶರಣರ ಹಿಂದೂ ಸಮಾವೇಶದಲ್ಲಿ ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಗುಡುಗು ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನೇರಿ ಶ್ರೀಗಳು ದೇವರು, ಈ ದೇವರು ಕ್ಷಮೆ ಕೋರಬೇಕು ಎಂದು ಹೇಳಿದವರೇ ಮೊದಲು ಸಮಸ್ತ ಹಿಂದೂ ಸಮಾಜದ ಕ್ಷಮೆಯಾಚಿಸಬೇಕು, ಕನೇರಿ ಶ್ರೀಗಳ ಹಿಂದೂ ದೇವತೆಗಳನ್ನು ಅಪಮಾನ ಮಾಡಿದವರ ವಿರುದ್ದ ಸಹಜ ಭಾಷೆಯಲ್ಲಿ ಉತ್ತರ ನೀಡಿದ್ದಾರೆ ಅಷ್ಟೇ, ಶ್ರೀಗಳ ಜೊತೆ ಇಡೀ ದೇಶವೇ ಇದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್. ಈಶ್ವರಪ್ಪ ಹೇಳಿದರು.ಬಬಲೇಶ್ವರದಲ್ಲಿ ನಡೆದ ಬಸವಾದಿ ಶರಣರ ಹಿಂದೂ ಸಮಾವೇಶದಲ್ಲಿ ಪಾಲ್ಗೊಂಡು ಪ್ರಧಾನ ಭಾಷಣ ಮಂಡಿಸಿದ ಅವರು, ಹಿಂದೂ ಧರ್ಮದ ದೇವಾನು ದೇವತೆಗಳನ್ನು ಹೊಳೆಗೆ ಎಸೆಯಿರಿ ಎಂದರೆ ನಮ್ಮ ರಕ್ತ ಕುದಿಯುವುದಿಲ್ಲವೇ? ಇದೇ ತೆರನಾಗಿ ಪೂಜ್ಯರ ರಕ್ತರ ಕುದಿದಿದೆ, ಅದಕ್ಕಾಗಿ ಸಹಜ ಭಾಷೆಯಲ್ಲಿ ಅವರನ್ನು ಟೀಕಿಸಿದ್ದಾರೆ, ಪೂಜ್ಯರು ಯಾವ ವ್ಯಕ್ತಿಯನ್ನು ಟೀಕಿಸಿಲ್ಲ, ಹಿಂದೂ ಸಿದ್ಧಾಂತವನ್ನು ಟೀಕಿಸಿದವರ ವಿರುದ್ದ ಗುಡುಗಿದ್ದಾರೆ, ಶ್ರೀಗಳನ್ನು ನಿಷೇಧ ಮಾಡುವ ಹಿಂದಿರುವ ವ್ಯಕ್ತಿಗಳು ಇದೇ ಜನ್ಮದಲ್ಲಿ ಪಾಪ ಅನುಭವಿಸುತ್ತಾರೆ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ ಧ್ವನಿ (ಚಂದ್ರಕಾಂತ ಕಾದ್ರೊಳ್ಳಿ ಬಣ) ಸಂಘಟನೆಯ ವಿಜಯಪುರ ಜಿಲ್ಲಾಧ್ಯಕ್ಷರಾಗಿ ತಾಲೂಕಿನ ಬಾಲಚಂದ್ರ ಹುಲ್ಲೂರ ಅವರನ್ನು ಆಯ್ಕೆ ಮಾಡಿ, ಸಂಘಟನೆಯ ರಾಜ್ಯಾಧ್ಯಕ್ಷ ಚಂದ್ರಕಾಂತ ಕಾದ್ರೊಳ್ಳಿ ಆದೇಶಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಸೊಲ್ಲಾಪುರ ರಸ್ತೆಯಲ್ಲಿರುವ ಕೃಷ್ಣಾ ಪ್ಯಾಲೇಸ್ ದಲ್ಲಿ ಸೋಮವಾರ ನಸುಕಿನಜಾವ ಆಕಸ್ಮಿಕ ಬೆಂಕಿ ಹೊತ್ತಿಕೊಂಡು, ಕಟ್ಟಡ ಸುಟ್ಟು ಅಪಾರ ಪ್ರಮಾಣದಲ್ಲಿ ನಷ್ಟ ಉಂಟಾಗಿರುವ ಹಿನ್ನೆಲೆ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ರವರು ಭೇಟಿ ನೀಡಿ ಪ್ಯಾಲೇಸ್ ಮಾಲೀಕರಿಗೆ ಸಾಂತ್ವನ ಹೇಳಿ, ಘಟನೆ ಬಗ್ಗೆ ಮಾಹಿತಿ ಪಡೆದುಕೊಂಡರು.ಹೊಟೇಲು, ಅಂಗಡಿ ಮಾಲೀಕರು ಅಗ್ನಿ ಸುರಕ್ಷತೆ ಬಗ್ಗೆ ಸೂಕ್ತ ಮುಂಜಾಗ್ರತಾ ಕ್ರಮ ವಹಿಸಿ, ಅಗ್ನಿ ನಂದಿಸುವ ಉಪಕರಣಗಳು, ತುರ್ತು ನಿರ್ಗಮನ ಬಾಗಿಲುಗಳು ಹಾಗೂ ಈ ರೀತಿ ಅವಘಡಗಳು ಆದಾಗ ಆರ್ಥಿಕವಾಗಿ ಹೊರೆಯಾಗದಿರಲು ವಿಮೆ ಮಾಡಿಸಿಕೊಳ್ಳಬೇಕೆಂದು ಸಲಹೆ ನೀಡಿದ್ದಾರೆ.
ಭಕ್ತ ಕನಕದಾಸರ ಜಯಂತೋತ್ಸವ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ರಮೇಶ ಭೂಸನೂರ ಅಭಿಮತ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ದಾಸರ ಕೀರ್ತನೆಗಳು ಸಮಾಜದಲ್ಲಿ ಬದಲಾವಣೆ ಮತ್ತು ಸಾಮಾಜಿಕ ಚಿಂತನೆಯನ್ನು ಮಾಡುವ ದೃಷ್ಟಿಯಿಂದ ಸೃಷ್ಟಿಯಾದವು ಎಂದು ಮಾಜಿ ಶಾಸಕ ರಮೇಶ ಭೂಸನೂರ ಹೇಳಿದರು.ಸಿಂದಗಿ ಪಟ್ಟಣದ ಸಂಗಮೇಶ್ವರ ದೇವಸ್ಥಾನದ ಆವರಣದಲ್ಲಿ ತಾಲೂಕು ಕುರುಬರ ಸಂಘದ ವತಿಯಿಂದ ಹಮ್ಮಿಕೊಂಡ ಭಕ್ತ ಕನಕದಾಸರ ೫೩೮ನೇ ಜಯಂತೋತ್ಸವ ಕಾರ್ಯಕ್ರಮದಲ್ಲಿ ಡೊಳ್ಳು ಬಾರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ದಾಸಶ್ರೇಷ್ಠ ಸಂತಕವಿ ಕನಕದಾಸರು ತಮ್ಮ ಕೀರ್ತನೆಗಳ ಮೂಲಕ ಸಮಾಜದಲ್ಲಿನ ಕಂದಾಚಾರ, ಮೌಢ್ಯವನ್ನು ಹೋಗಲಾಡಿಸಲು ಮುಂದಾಗಿದ್ದರು. ಅಂತಹ ಮಹಾನ್ ವ್ಯಕ್ತಿಯ ಕೀರ್ತನೆಗಳು ಇಡೀ ದೇಶಕ್ಕೆ ಮಾದರಿ. ಒಂದು ಉತ್ತಮ ಕುಟುಂಬದಲ್ಲಿ ಜನಿಸಿದಂತಹ ಕನಕದಾಸರು ಸಮಾಜದಲ್ಲಿರುವ ತಾರತಮ್ಯ ಹಾಗೂ ಮೌಢ್ಯತೆಗಳನ್ನು ತಿಳಿದು, ತಮ್ಮ ಸಿರಿತನವನ್ನು ತ್ಯಜಿಸಿ ಬಡವರಿಗಾಗಿ ಬಂದವರು ಕನಕದಾಸರು ಎಂದರು.ಈ ವೇಳೆ ನಿವೃತ್ತ ಪ್ರಾಧ್ಯಾಪಕ ಡಾ.ಅರವಿಂದ ಮನಗೂಳಿ ಮಾತನಾಡಿ, ಜನರಲ್ಲಿದ್ದಂತಹ ಭೇದದ ಮನೋಭಾವ, ಶ್ರೇಷ್ಠತೆಯ ಮನೋಭಾವವನ್ನು ಹೋಗಲಾಡಿಸಿ ಎಲ್ಲರೂ ಒಂದೇ ಎಂಬುದನ್ನು…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವಿಜಯಪುರ ಕೇಂದ್ರ ಬಸ್ ನಿಲ್ದಾಣ ಮುಂಭಾಗದಲ್ಲಿ ವೀರರಾಣಿ ಕಿತ್ತೂರ ಚನ್ನಮ್ಮನವರ ಮೂರ್ತಿ ಪ್ರತಿಷ್ಠಾಪನೆ ಮಾಡಲಾಗಿದೆ. ಅವರ ಎಡಭಾಗದಲ್ಲಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಮೂರ್ತಿ ಪ್ರತಿಷ್ಠಾಪನೆ ಮಾಡಬೇಕು ಎಂದು ಸಮಾಜ ಮುಖಂಡ ಮಲ್ಲಿಕಾರ್ಜುನ ಸಾವಳಸಂಗ ಒತ್ತಾಯಿಸಿದ್ದಾರೆ.ಸಿಂದಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ತಾಲೂಕು ಕನಕ ಸೇನೆ ಹಾಗೂ ಕುರುಬರ ಸಂಘದ ವತಿಯಿಂದ ಹಮ್ಮಿಕೊಂಡ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ಕಿತ್ತೂರ ರಾಣಿ ಚೆನ್ನಮ್ಮನವರ ಮೂರ್ತಿಯ ಎಡಭಾಗದಲ್ಲಿ ಸಂಗೊಳ್ಳಿ ರಾಯಣ್ಣ ಅವರ ಮೂರ್ತಿಯನ್ನು ಪ್ರತಿಷ್ಠಾಪಿಸಲು ಜಿಲ್ಲೆಯ ಸಚಿವರು ಮತ್ತು ಶಾಸಕರು ಕಾರ್ಯಪ್ರವೃತ್ತರಾಗಬೇಕು. ಕೇವಲ ವೇದಿಕೆ ಸಮಾರಂಭಗಳಲ್ಲಿ ಮತ ಗಳಿಕೆಗಾಗಿ ಮಾತ್ರ ರಾಯಣ್ಣ ಚೆನ್ನಮ್ಮಳ ಪುತ್ರ ಎಂದು ಹೇಳುವುದು ಬೇಡ. ರಾಯಣ್ಣನ ಮೂರ್ತಿಯನ್ನು ಚೆನ್ನಮ್ಮಾ ಜೀ ಅವರ ಮೂರ್ತಿ ಎಡಭಾಗದಲ್ಲಿ ಪ್ರತಿಷ್ಠಾಪನೆ ಮಾಡಿಸುವ ಮುಖೇನ ಸಮಾಜದ ಬಂಧುಗಳಿಗೆ ನ್ಯಾಯ ಒದಗಿಸಿಕೊಡಬೇಕು ಎಂದು ಆಗ್ರಹಿಸಿದ್ದಾರೆ.ಈ ವೇಳೆ ಕನಕ ಸೇನೆಯ ತಾಲೂಕಾಧ್ಯಕ್ಷ ನಿಂಗಣ್ಣ ಬಿರಾದಾರ, ಆಲಮೇಲ ಕುರುಬ ಸಂಘದ ತಾಲೂಕಾಧ್ಯಕ್ಷ ಸಿದ್ದು ಕೆರಿಗೊಂಡ ಮಾತನಾಡಿ, ಜ.೦೯ರಂದು…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮಕ್ಕಳಲ್ಲಿನ ಕಲಿಕಾಭಿರುಚಿಯನ್ನು ದ್ವಿಗುಣಗೊಳಿಸುವಲ್ಲಿ ಕಲಿಕಾ ಹಬ್ಬವು ಬಹಳ ಸಹಕಾರಿ ಎಂದು ಹಿಟ್ಟಿನಹಳ್ಳಿ ಸಮೂಹ ಸಂಪನ್ಮೂಲ ವ್ಯಕ್ತಿ ಕೆ.ಎಸ್.ಬಡದಾಳ ಹೇಳಿದರು.ತಾಲ್ಲೂಕಿನ ಕಡ್ಲೇವಾಡ ಪಿಸಿಎಚ್ ಗ್ರಾಮದ ಸರ್ಕಾರಿ ಮಾದರಿಯ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಜರುಗಿದ ಎಫ್.ಎಲ್.ಎನ್.ಕಲಿಕಾ ಹಬ್ಬ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.ಮಕ್ಕಳು ಸೃಜನಾತ್ಮಕ ಚಿಂತನೆ ಹಾಗೂ ವಿಮರ್ಶಾತ್ಮಕ ಚಿಂತನೆಯನ್ನು ಬೆಳೆಸಿಕೊಂಡು ಆತ್ಮವಿಶ್ವಾಸದಿಂದ ಕಲಿಯಲು ಇಂಥ ಕಾರ್ಯಕ್ರಮಗಳು ಸಹಕಾರಿಯಾಗಿವೆ ಎಂದರು.ತಾಲ್ಲೂಕು ಶಿಕ್ಷಕರ ಸಂಘದ ಕೋಶಾಧ್ಯಕ್ಷ ಎಸ್.ವಿ.ಕೋಟೀನ ಮಾತನಾಡಿ, ಮಕ್ಕಳ ಸರ್ವಾಂಗೀಣ ಪ್ರಗತಿಗೆ ಪೂರಕವಾಗಿ ಮಕ್ಕಳಿಗೆ ಸೃಜನಾತ್ಮಕ ಚಟುವಟಿಕೆಗಳನ್ನು ಆಯೋಜಿಸುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದರು.ಎಸ್.ಡಿ.ಎಮ್.ಸಿ.ಅಧ್ಯಕ್ಷ ವಿಠ್ಠಲ.ದೇಗಿನಾಳ ಅಧ್ಯಕ್ಷತೆ ವಹಿಸಿದ್ದರು. ಇದೇ ಸಂದರ್ಭದಲ್ಲಿ ಶಾರದಾಮಾತೆಯ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯತು.ಮುಖ್ಯಶಿಕ್ಷಕ ಅಶೋಕ ತಳಕೇರಿ, ಕ್ಲಸ್ಟರಿನ ವಿವಿಧ ಶಾಲೆಗಳ ಮುಖ್ಯಶಿಕ್ಷಕರಾದ ಡಿ.ಸಿ. ಲಮಾಣಿ, ಮಹಾದೇವ ಹುಲ್ಲೂರ, ಶ್ರೀಶೈಲ ಕುದುರಿ, ಬಿ.ಬಿ.ಮಾದರ, ಅರ್ಜುನ ಕರ್ಜಗಿ, ಜಿ.ಬಿ.ಶಿವಣಗಿ, ಆಶಾ ರಾಠೋಡ, ದಯಾನಂದ ಪೊಲೇಶಿ, ರಮೇಶ ನಾಯಕ, ನಂದ್ಯಾಳ ಬಿ.ಬಿ. ಭರಮಣ್ಣ, ಸುನೀತಾ ಕೋರವಾರ, ಎಸ್.ಡಿ.ಬೇನೂರ, ಎಮ್.ಎಮ್.ಕಂಬಾರ, ಎ.ವಿ.ನಿಂಬರಗಿಮಠ, ಎಮ್.ಎಸ್.ಅವಟಿ,…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಉತಾರೆ ಮತ್ತು ಮತದಾರರ ಪಟ್ಟಿ ಪರಿಶೀಲಿಸುವಂತೆ ಒತ್ತಾಯಿಸಿ ಪಟ್ಟಣದ ಇಂದಿರಾನಗರದ ನಿವಾಸಿಗಳು ಮುಖಂಡ ಬಸವರಾಜ ಕೊಳೂರ ನೇತೃತ್ವದಲ್ಲಿ ಇಲ್ಲಿನ ತಹಸೀಲ್ದಾರ ಕಚೇರಿಯ ಆವರಣದಲ್ಲಿ ಆರಂಭಿಸಿದ ಧರಣಿ ಸತ್ಯಾಗ್ರಹ ಮೂರು ದಿನಗಳನ್ನು ಪೂರ್ಣಗೊಳಿಸಿ ನಾಲ್ಕನೇ ದಿನಕ್ಕೆ ಕಾಲಿಸಿರಿಸಿದೆ.ಮೂರನೇ ದಿನದ ಹೋರಾಟದಲ್ಲಿ ಧರಣಿಯ ನೇತೃತ್ವ ವಹಿಸಿದ ಬಸವರಾಜ ಕೊಳೂರ, ಪುರಸಭೆ ಮಾಜಿ ಸದಸ್ಯ ರಾಜು ಪಾತ್ರೋಟ, ಬಡಾವಣೆಯ ನಿವಾಸಿಗಳಾದ ನಾರಾಯಣ ಮಿರಜಕರ, ಅಂಬರೀಶ ಉಪಲದಿನ್ನಿ, ರಿಯಾಜ ಉಣ್ಣಿಭಾವಿ ಮತ್ತೀತರರು ಮಾತನಾಡಿ ಧರಣಿ ಮೂರನೇ ದಿನದ ಅಂತ್ಯ ಕಂಡರು ಅಧಿಕಾರಿಗಳು ನಮಗೆ ಉತಾರೆ ಕೊಡಿಸುವ ಪ್ರಯತ್ನ ಮಾಡುತ್ತಿಲ್ಲ. ಧರಣಿ ಸ್ಥಳಕ್ಕೆ ಭೇಟಿ ಕೂಡ ನೀಡಿಲ್ಲ. ಹಾಗಾಗಿ ನಾಳೆಯಿಂದ ನಾವು ಹೋರಾಟವನ್ನು ಉಗ್ರವಾಗಿಸುತ್ತಿದ್ದೇವೆ. ನಾಳೆ ಇಡೀ ದಿನ ತಮಟೆ ಬಾರಿಸುವ ಮೂಲಕ ನಮ್ಮ ಹೋರಾಟವನ್ನು ಉಗ್ರವಾಗಿಸುತ್ತೇವೆ. ಆಗಲೂ ಅಧಿಕಾರಿಗಳು ಭೇಟಿ ನೀಡದಿದ್ದರೆ ಅರೆ ಬೆತ್ತಲೆ ಚಳುವಳಿ ಪ್ರಾರಂಭಿಸುತ್ತೇವೆ ಎಂದು ತಮ್ಮ ಆಕ್ರೋಶವನ್ನು ಹೊರಹಾಕಿದರು.ಧರಣಿಗೆ ಅಮರೇಶ ಉಪಲದಿನ್ನಿ, ವಿಷ್ಣು ಗಂಗಾಪುರ್, ಬಾಬು ಬಳಗಾನೂರ, ಮಂಜುನಾಥ್…
ಉದಯರಶ್ಮಿ ದಿನಪತ್ರಿಕೆ ಇಂಡಿ: ಕುವೆಂಪು ಸಾಹಿತ್ಯವು ವಿಶ್ವಮಾನವ ಸಂದೇಶ ಪ್ರಕೃತಿ ಪ್ರೇಮ ವೈಚಾರಿಕತೆ ಸಾಮಾಜಿಕ ಸಮಾನತೆ ಶಿಕ್ಷಣದ ಮಹತ್ವ ಮತ್ತು ಮಾನವೀಯ ಮೌಲ್ಯಗಳನ್ನು ಇಂದಿನ ಪೀಳಿಗೆಗೆ ತಿಳಿಸುತ್ತದೆ ಎಂದು ಸರಕಾರಿ ನೌಕರರ ಸಂಘದ ತಾಲೂಕಾ ಅಧ್ಯಕ್ಷ ಬಸವರಾಜ ರಾಹೂರ ಹೇಳಿದರು.ನಗರದ ಆಡಳಿತಸೌಧದಲ್ಲಿ ತಾಲೂಕಾ ಆಡಳಿತ ವತಿಯಿಂದ ನಡೆದ ರಾಷ್ಟ್ರಕವಿ ಕುವೆಂಪು ಜನ್ಮ ದಿನದಂದು ವಿಶ್ವಮಾನವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಜಾತಿ ಮತ ಪಂಥಗಳ ಬೇದಬಾವಗಳನ್ನು ತಿರಸ್ಕರಿಸಿ ನವೋದಯ ಸಮಾನತೆ ಸಾರುವ ಮನುಷ್ಯಜಾತಿ ತಾನೊಂದು ವಲಂ ಎಂಬ ತತ್ವವನ್ನು ಎತ್ತಿಹಿಡಿದ ಕುವೆಂಪುರವರ ಸಾಹಿತ್ಯ ವು ಇಂದಿಗೂ ಪ್ರಸ್ತುತವಾಗಿದ್ದು ಯುವ ಪಿಳಿಗೆಗೆ ಮಾರ್ಗದರ್ಶನ ನೀಡುತ್ತಿದೆ ಎಂದರು.ಸಂತೋಷ ಹೊಟಕರ ಮಾತನಾಡಿ, ಕುವೆಂಪು ಸಾಹಿತ್ಯ ಮಕ್ಕಳಿಗೆ ಜಾತಿ ಧರ್ಮದ ಕಟ್ಟು ಪಾಡುಗಳಿಲ್ಲದೆ ಮುಕ್ತ ಮನೋಭಾವ ಪ್ರಕೃತಿಯೊಂದಿಗೆ ಬೆರೆಯುವ ಸಹಜತೆ ಮತ್ತು ವೈಜ್ಞಾನಿಕ ದೃಷ್ಟಿಕೋನವನ್ನು ಕಲಿಸುತ್ತದೆ. ಇದರಿಂದ ಮಕ್ಕಳು ಸ್ವತಂತ್ರ ಸಮತಾವಾದಿ ಪ್ರಜೆಗಳಾಗಿ ಬೆಳೆಯಲು ಸಾದ್ಯ ಎಂದರು.ಆರ್.ಬಿ.ಮುಗಿ ಎಚ್.ಎಸ್ ಗುನ್ನಾಪುರ ಮಾತನಾಡಿದರು.ಪ್ರಶಾಂತ ಕಾಳೆ, ಸಿ.ಸಿ ಕರಕಟ್ಟಿ ವೀಣಾ ಕೋಳುರಗಿ, ಭೂವನೇಶ್ವರಿ…
ಉದಯರಶ್ಮಿ ದಿನಪತ್ರಿಕೆ ಜಮಖಂಡಿ: ನಗರದ ಡಿ.ದೇವರಾಜ ಅರಸು ಹಿಂದುಳಿವ ವರ್ಗಗಳ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯಕ್ಕೆ ಶಾಸಕ ನಾಡೋಜ ಜಗದೀಶ ಗುಡಗುಂಟಿ ದಿಢೀರ ಭೇಟಿ ನೀಡಿ ಅಲ್ಲಿನ ಅವ್ಯವಸ್ಥೆ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದರು.ಗೋದಿ ಹಿಟ್ಟಿನಲ್ಲಿ, ಅಕ್ಕಿಯಲ್ಲಿನ ಹುಳು ನೋಡಿ ಎಂತಾವ ಆಹಾರ ಪದಾರ್ಥ ಬಳಸ್ತಿರಿ ಇದಕ್ಕೆ ಹೆಂಗ್ರಿ ನೀವು ಇಲ್ಲಿ ಕಾರ್ಯನಿರ್ವಹಿಸುತ್ತಿರಿ ಮಕ್ಕಳಿಗೆ ಒಳ್ಳೆ ಆಹಾರ ಪದಾರ್ಥ ಇಟ್ಟುಕೊಳ್ಳುವದಕ್ಕೆ ಆಗಲ್ವಾ, ಇದರ ಬಗ್ಗೆ ಮೇಲಾಧಿಕಾರಿಗಳಿಗೆ ಗಮನಕ್ಕೆ ತಂದಿದ್ದಿರಾ ಹೇಗೆ ಎಂದು ಮೇಲ್ವಿಚಾರಕರನ್ನು ಪ್ರಶ್ನಿಸಿದರು.ಸರ್ಕಾರ ದಿಂದ ನಡೆಯುವ ವಸತಿ ನಿಲಯಗಳ ವ್ಯವಸ್ಥೆ ಸುಧಾರಿಸಬೇಕು ನಿಲಯದಲ್ಲಿ ಇರುವ ಮಕ್ಕಳಿಗೆ ಆರೋಗ್ಯ ತಪಾಸಣೆ ನಡೆದಿಲ್ಲ, ತಿಂಗಳಿಗೊಮ್ಮೆ ವಿತರಿಸಲಾಗುವ ಸ್ಯಾನಿಟರಿ ಪ್ಯಾಡ್ಗಳನ್ನು ಬಿಸಾಕಲು ಪ್ರತ್ಯೇಕ ಡಸ್ಟ್ರಿನ್ಗಳಿಲ್ಲ, ತಿಂಗಳಿಗೊಮ್ಮೆ ಪಡಿತರ ವಿತರಿಸಲಾಗುತ್ತಿದ್ದು ಆಹಾರ ಧಾನ್ಯಗಳಲ್ಲಿ ಹುಳ ಬಿದ್ದಿವೆ.ಒಂದು ರೂಮ್ನಲ್ಲಿ ಆರು ಜನ ವಿದ್ಯಾರ್ಥಿನಿಯರು ಇರುತ್ತಾರೆ ನಾಲ್ವರಿಗೆ ಮಾತ್ರ ಮಲಗುವ ವ್ಯವಸ್ಥೆ ಇದೆ. ಇನ್ನಿಬ್ಬರು ವಿದ್ಯಾರ್ಥಿನಿಯರು ನೆಲದ ಮೇಲೆ ಮಲುಗುವ ಅನಿವಾರ್ಯತೆ ಇದೆ. ಮಕ್ಕಳಿಗೆ ಯೋಗ, ವ್ಯಾಯಾಮ,…
