Subscribe to Updates
Get the latest creative news from FooBar about art, design and business.
Author: editor.udayarashmi@gmail.com
೩ ದಿನದೊಳಗೆ ಜಂಟಿ ಸಮೀಕ್ಷೆ ನಡೆಸಿ ವರದಿ ಸಲ್ಲಿಸಲು ವಿಜಯಪುರ ಜಿಲ್ಲಾಧಿಕಾರಿ ಡಾ.ಆನಂದ ಕೆ. ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇತ್ತೀಚಿಗೆ ಬೀಸಿದ ಬಿರುಗಾಳಿ ಹಾಗೂ ಆಲಿಕಲ್ಲು ಮಳೆಯಿಂದಾಗಿ ಕೃಷಿ, ತೋಟಗಾರಿಕಾ ಬೆಳೆ ಹಾನಿಗೆ ಸಂಬಂಧಿಸಿದಂತೆ ಜಂಟಿ ಸಮೀಕ್ಷೆ ಕೈಗೊಂಡು ಮೂರು ದಿನದೊಳಗಾಗಿ ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿಗಳಾದ ಡಾ. ಆನಂದ ಕೆ. ಅವರು ಅಧಿಕಾರಿಗಳಿಗೆ ಸೂಚಿಸಿದರು.ಕೃಷಿ, ತೋಟಗಾರಿಕೆ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಹಾಗೂ ಬೆಳೆ ವಿಮಾ ಕಂಪನಿಯ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು. ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳ ತಂಡ ರಚಿಸಿ ಹಾನಿಗೊಳಗಾದ ಕ್ಷೇತ್ರಗಳಿಗೆ ಭೇಟಿ ನೀಡಿ ನಿಖರವಾದ ಸಮೀಕ್ಷೆ ಕೈಗೊಂಡು ೩ ದಿನಗೊಳಗಾಗಿ ಜಂಟಿ ಸಮೀಕ್ಷೆ ನಡೆಸಿ ವರದಿಯನ್ನು ನೀಡಬೇಕು ಎಂದು ಸೂಚಿಸಿದರು.ಇತ್ತೀಚಿನ ದಿನಗಳಲ್ಲಿ ಬಿದ್ದ ಮಳೆ, ಗಾಳಿ ಹಾಗೂ ಆಲಿಕಲ್ಲು ಮಳೆಯಿಂದಾಗಿ ಕೃಷಿ ಬೆಳೆ ಹಾನಿಗೊಳಗಾದ ರೈತರು ಬೆಳೆ ವಿಮೆ ಮಾಡಿಸಿದ್ದರೆ ಅಂತಹ ರೈತರು ಮುಂದಿನ…
ಉದಯರಶ್ಮಿ ದಿನಪತ್ರಿಕೆ ಆಲಮೇಲ: ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ಶಿಕ್ಷಣ ನಿಧಿ ಸಲಹಾ ಸಮಿತಿಯ ಸದಸ್ಯರಾಗಿ ಅಲಮೇಲದ ಶಿವಕುಮಾರ ಗುಂದಗಿ ನೇಮಗೊಂಡಿದ್ದಾರೆ.ಇತ್ತೀಚಿಗೆ ಕರ್ನಾಟಕ ರಾಜ್ಯ ಸಹಕಾರ ಪಟ್ಟಣ ಬ್ಯಾಂಕುಗಳ ಮಹಾಮಂಡಳದ ಪ್ರಥಮ ನಿರ್ದೇಶಕ ಮಂಡಳಿ ಸಭೆಯಲ್ಲಿ ನಿರ್ದೇಶಕ ಮಂಡಳಿಯು ಶಿಕ್ಷಣ ನಿಧಿ ಸಲಹಾ ಸಮಿತಿಗೆ ಸದಸ್ಯರುಗಳನ್ನು ನೇಮಕ ಮಾಡುವ ಕುರಿತು ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಿ. ಮಹಾಮಂಡಳದ ಶಿಕ್ಷಣ ನಿಧಿ ಸಲಹಾ ಸಮಿತಿಯ ಸದಸ್ಯರನ್ನಾಗಿ ವಿಜಯಪುರ ಜಿಲ್ಲೆಯ ಅಲಮೇಲ ಪಟ್ಟಣದ ಅಲಮೇಲ ಅರ್ಬನ್ ಕೋ ಆಪರೇಟಿವ್ ಬ್ಯಾಂಕಿನ ಅಧ್ಯಕ್ಷ ಶಿವಕುಮಾರ ಗುರುಬಸಪ್ಪ ಗುಂದಗಿ ಅವರನ್ನು ನೇಮಕ ಮಾಡಲಾಯಿತು. ಸೋಮವಾರ ಅಲಮೇಲ ಅರ್ಬನ್ ಕೋ ಆಪರೇಟಿವ್ ಬ್ಯಾಂಕಿನ ಆಡಳಿತ ಮಂಡಳಿ ನಿರ್ದೇಶಕರು ಹಾಗೂ ಸಿಬ್ಬಂದಿ ಶಿವಕುಮಾರ್ ಗುಂದಗಿ ಅವರಿಗೆ ಸನ್ಮಾನಿಸಿ ಅಭಿನಂದಿಸಿದರು.
ವಿಜಯಪುರ ಜಿಲ್ಲಾ ಪಂಚಾಯತಿ ಉಪಕಾರ್ಯದರ್ಶಿ ಪ್ರಕಾಶ ವಡ್ಡರ ಅಧಿಕಾರಿಗಳಿಗೆ ಕಿವಿಮಾತು ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಪಂಚಾಯತಿಯ ಉಪಕಾರ್ಯದರ್ಶಿ ಪ್ರಕಾಶ ವಡ್ಡರ ಸೋಮವಾರ ತಿಕೋಟಾ ತಾಲೂಕಿನ ತೊರವಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದರು. ಆರಂಭದಲ್ಲಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿ, ಸಿಬ್ಬಂದಿಗಳಿಗೆ ಕರ ವಸೂಲಾತಿ, ಮನರೇಗಾ ಕೂಲಿಕಾರರ ಇಕೆವೈಸಿ ಸೇರಿದಂತೆ ಇತರೆ ವಿಷಯಗಳಲ್ಲಿ ಗ್ರಾಮ ಪಂಚಾಯತಿಯ ಎಲ್ಲಾ ಸಿಬ್ಬಂದಿಗಳಿಗೆ ಕೆಲಸ ಹಂಚಿಕೆ ಮಾಡಿ ಶೀಘ್ರಗತಿಯಲ್ಲಿ ಪ್ರಗತಿ ಸಾಧಿಸಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದರು.ಪರಿಶಿಷ್ಟ ಜಾತಿಯ ಜನರಿಗಾಗಿ ಮೀಸಲಿಟ್ಟ ಸ್ಮಶಾನ ಜಾಗದ ಒತ್ತುವರಿ ತೆರವುಗೊಳಿಸಿ ಗ್ರಾಮ ಪಂಚಾಯತಿಯಿಂದ ತಂತಿ ಬೇಲಿ ಅಳವಡಿಸಿರುವದನ್ನು ಪರಿಶೀಲನೆ ಮಾಡಿದರು.ರಸ್ತೆ ಅಗಲೀಕರಣದಲ್ಲಿ ಮನೆ ಕಳೆದುಕೊಂಡ ಜನರಿಗಾಗಿ ಕಾಯ್ದಿರಿಸಿದ ನಿವೇಶನ ಸ್ಥಳಕ್ಕೆ ಭೇಟಿ ಸದರಿ ಸ್ಥಳದಲ್ಲಿ ಯಾವದೇ ರೀತಿಯ ಒತ್ತುವರಿಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ತಿಳಿಸಿದರು.ನಂತರ ಗ್ರಾಮದ ವಿವಿಧ ಬಡಾವಣೆಗಳಿಗೆ ಭೇಟಿ ನೀಡಿ, ಗ್ರಾಮದ ಜನರು ಯಾವದೇ ಕಾರಣಕ್ಕೂ ಮೂಲಭೂತ ಸೌಕರ್ಯಗಳಿಂದ ವಂಚಿರಾಗಬಾರದು…
ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ರಂಜಾನ್ ಹಬ್ಬದ ಹಿನ್ನಲೆಯಲ್ಲಿ ಮರುದಿನವಾದ ಭಾನುವಾರ ಆಲಮಟ್ಟಿಯ ಎಲ್ಲಉದ್ಯಾನಗಳು ಪ್ರವಾಸಿಗರಿಂದ ಭರ್ತಿಯಾಗಿದ್ದವು.ಎಲ್ಲಿ ನೋಡಿದರು ಜನ ಸಾಗರವಿತ್ತು.ಆಲಮಟ್ಟಿಯ ವಿಶಾಲವಾದ ರಾಕ್ ಉದ್ಯಾನ, ಕೃಷ್ಣ, ಲವಕುಶ ಹಾಗೂ ಮೊಘಲ್ ಸೇರಿದಂತೆ ಬಹುತೇಕ ಉದ್ಯಾನಗಳಲ್ಲಿ ಹೆಚ್ಚಿನ ಪ್ರವಾಸಿಗರು ಕಂಡು ಬಂದರು.ಹಬ್ಬದ ಮರುದಿನ ಹೆಚ್ಚು:ಪ್ರತಿ ಬಾರಿಯೂ ಹಬ್ಬದ ಮರುದಿನ ಈ ರೀತಿಯ ಪ್ರವಾಸಿಗರ ಸಂಖ್ಯೆ ಅಧಿಕಗೊಳ್ಳುವುದು ಸಾಮಾನ್ಯ ಎನ್ನುತ್ತಾರೆ ಉದ್ಯಾನದಲ್ಲಿ ಕೆಲಸ ನಿರ್ವಹಿಸುವ ಅರಣ್ಯ ಇಲಾಖೆ ಸಿಬ್ಬಂದಿ. ಅದಕ್ಕಾಗಿ ಸಾಕಷ್ಟು ಸಂಖ್ಯೆಯ ಕೆಎಸ್ಐಎಸ್ಎಫ್ ಸಿಬ್ಬಂದಿ, ಅರಣ್ಯ ಇಲಾಖೆಯ ಸಿಬ್ಬಂದಿಗಳು, ದಿನಗೂಲಿಗಳು, ಪೊಲೀಸ್ ಸಹಕಾರದೊಂದಿಗೆ ಕಾರ್ಯನಿರ್ವಹಿಸಿದವು. ಪ್ರತಿ ವರ್ಷವೂ ಸಾಕಷ್ಟು ಸಂಖ್ಯೆಯ ಪ್ರವಾಸಿಗರ ಸಂಖ್ಯೆಯ ಆಗಮನದ ಹಿನ್ನಲೆಯಲ್ಲಿ ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಲಾಗಿತ್ತು.ಕೆಬಿಜೆಎನ್ಎಲ್ ಕಾರ್ಯನಿರ್ವಾಹಕ ಎಂಜಿನಿಯರ್ ತಾರಾಸಿಂಗ್ ದೊಡಮನಿ ನೇತೃತ್ವದಲ್ಲಿ ಸಭೆ ನಡೆಸಿ ಕೆಬಿಜೆಎನ್ಎಲ್ ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು.ಕೂಗಾಟ, ನಲಿದಾಟ, ವಿವಿದೆಡೆ ಆಟ, ಮನೋರಂಜನೆಯಲ್ಲಿ ಮುಳುಗಿದ್ದ ದೃಶ್ಯ ಎಲ್ಲೆಡೆ ಕಂಡು ಬಂತು. ವಾಟರ್ ಅಮ್ಯೂಸ್ ಮೆಂಟ್ ಪಾರ್ಕ್ , ಬೋಟಿಂಗ್ ಪ್ರವಾಸಿಗರಿಂದ ತುಂಬಿ ತುಳುಕಿತ್ತು.ಹೆಚ್ಚುವರಿ ಪೊಲೀಸ್ ಸಿಬ್ಬಂದಿ:ಪ್ರತಿ…
ಲೇಖನ- ಸಂತೋಷ್ ರಾವ್ ಪೆರ್ಮುಡಪೆರ್ಮುಡ ಮನೆಪಟ್ರಮೆ ಗ್ರಾಮ ಮತ್ತು ಅಂಚೆಬೆಳ್ತಂಗಡಿ ತಾಲೂಕುದ.ಕ ಜಿಲ್ಲೆ-೫೭೪೧೯೮ದೂ:೯೭೪೨೮೮೪೧೬೦ ಉದಯರಶ್ಮಿ ದಿನಪತ್ರಿಕೆ ಎಲ್ಲಾ ವ್ಯವಸ್ಥೆಗಳು ಮತ್ತು ತಯಾರಿಗಳು ಅತ್ಯಂತ ಅಚ್ಚುಕಟ್ಟಾಗಿ ಇರುವಾಗ ಸಾಧನೆಯನ್ನು ಮಾಡಲು ಅವಕಶವೇ ಸಿಗುವುದಿಲ್ಲ, ಅವಕಾಶಗಳು ವಿಫುಲವಾಗಿ ದೊರೆತಾಗ ಕೆಲಸ ಮಾಡಲು ಆಸಕ್ತಿ ಇರುವುದಿಲ್ಲ ಅಥವಾ ಯಾವುದೇ ರೀತಿಯ ಪೂರ್ವ ತಯಾರಿಯಿಲ್ಲದೆ ಸಾಧನೆ ಮಾಡಲು ಸಾಧ್ಯವಾಗುವುದಿಲ್ಲ ಎನ್ನುವುದಕ್ಕೆ ಹಳ್ಳಿಯಲ್ಲಿ ಚಂದದ ಗಾದೆಯೊಂದು ಹೆಚ್ಚು ಪ್ರಚಲಿತದಲ್ಲಿದೆ. ಅದು ಈ ರೀತಿಯಿದೆ, ‘ಕೋರೆಹಲ್ಲು ಮೂಡುವಾಗ ಮಣ್ಣಿರುವುದಿಲ್ಲ, ಮಣ್ಣಿರುವಾಗ ಕೋರೆಹಲ್ಲು ಮೂಡುವುದಿಲ್ಲ’ ಎಂದು. ಈ ಗಾದೆಯು ಕಾಡುಹಂದಿಯು ತನ್ನ ದುರಾದೃಷ್ಟವನ್ನು ಶಪಿಸುವ ರೀತಿಯನ್ನು ಉಲ್ಲೇಖಿಸುತ್ತದೆ. ಕಾಡು ಹಂದಿಗಳಿಗೆ ಬಿರು ಬೇಸಗೆಯ ಸಮಯದಲ್ಲಿ ಹಾಗೂ ಭೂಮಿಯು ಒಣಗಿ ಭಣಗುಡುತ್ತಿರುವ ಸಂದರ್ಭದಲ್ಲಿ ಗಟ್ಟಿಯಾದ ಕೋರೆಹಲ್ಲು ಮೂಡುತ್ತದೆ. ಈ ಅವಧಿಯಲ್ಲಿ ಅವುಗಳಿಗೆ ಕೋರೆಹಲ್ಲಿದ್ದರೂ ಗಟ್ಟಿಯಾಗಿರುವ ಹಾಗೂ ಒಣಗಿದ ಮಣ್ಣನ್ನು ಅಗೆಯಲು ಸಾಧ್ಯವಾಗುವುದಿಲ್ಲ. ಆದರೆ ಮಳೆಗಾಲದಲ್ಲಿ ಮಳೆ ಬಿದ್ದು ಮಣ್ಣು ಹದವಾಗಿರುವಾಗ ಅದೇ ಕಾಡು ಹಂದಿಗಳ ಕೋರೆಹಲ್ಲುಗಳು ಉದುರಿ ಬೀಳುವುದರಿಂದ (ಕಾಡು ಹಂದಿಗಳಿಗೆ ಸಾಮಾನ್ಯವಾಗಿ…
ವಿಜಯಪುರದಲ್ಲಿ ಸ್ಥಳೀಯ ದಿನಪತ್ರಿಕೆಗಳ ಸಂಪಾದಕರಿಂದ ಸಚಿವದ್ವಯರಾದ ಎಂ.ಬಿ.ಪಾಟೀಲ ಮತ್ತು ಶಿವಾನಂದ ಪಾಟೀಲ ಅವರಿಗೆ ಮನವಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯ ಸರ್ಕಾರವು ಜಾರಿಗೆ ತರಲು ಉದ್ದೇಶಿಸಿರುವ ಕರ್ನಾಟಕ ಜಾಹೀರಾತು ನೀತಿ–೨೦೨೬ನ್ನು ಸ್ಥಗಿತಗೊಳಿಸಿ ರಾಜ್ಯದ ಜಿಲ್ಲಾ ಹಾಗೂ ಪ್ರಾದೇಶಿಕ ಪತ್ರಿಕೆಗಳ ಅಭಿವೃದ್ದಿಗೆ ಪೂರಕ ನೀತಿಯನ್ನು ಅಳವಡಿಸಿ ಅನುಷ್ಠಾನಕ್ಕೆ ತರಬೇಕೆಂದು ಸಚಿವರಾದ ಡಾ. ಎಂ.ಬಿ.ಪಾಟೀಲ ಹಾಗೂ ಶಿವಾನಂದ ಪಾಟೀಲ ಅವರಲ್ಲಿ ಜಿಲ್ಲಾ ಪತ್ರಿಕೆಗಳ ಸಂಪಾದಕರು ಮನವಿ ಸಲ್ಲಿಸಿದರು.ಜಿಲ್ಲಾ ಹಾಗೂ ಪ್ರಾದೇಶಿಕ ಪತ್ರಿಕೆಗಳು ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾಗಿವೆ. ಆದರೆ ಹೊಸ ಜಾಹೀರಾತು ನೀತಿಯಲ್ಲಿ ಈ ಪತ್ರಿಕೆಗಳ ಹಿತಾಸಕ್ತಿಯನ್ನು ಸಂಪೂರ್ಣ ವಾಗಿ ನಿರ್ಲಕ್ಷಿಸಲಾಗಿದೆ ಎಂದು ಆರೋಪಿಸಿದರು. ವಿಶೇಷವಾಗಿ, ಈ ನೀತಿಯನ್ನು ರೂಪಿಸುವ ವೇಳೆ ಯಾವುದೇ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ಸಮಾಲೋಚನೆ ನಡೆಸದೆ ಏಕಪಕ್ಷೀಯವಾಗಿ ತಯಾರಿಸಿರುವುದು ವಿಷಾದನೀಯವಾಗಿದೆ ಎಂದು ತಿಳಿಸಿದರು.ಬೃಹತ್ ಮತ್ತು ಮದ್ಯಮ ಕೈಗಾರಿಕಾ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ|| ಎಂ.ಬಿ.ಪಾಟೀಲ ಹಾಗೂ ಸಕ್ಕರೆ, ಜವಳಿ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲರನ್ನು ಅವರ ನಿವಾಸದಲ್ಲಿ ಭೇಟಿಯಾಗಿ…
ಉದಯರಶ್ಮಿ ದಿನಪತ್ರಿಕೆ ಚಡಚಣ: ರೇವತಗಾಂವ ಗ್ರಾಮದಲ್ಲಿ ಪವಿತ್ರ ರಂಜಾನ್ ಹಬ್ಬವನ್ನು ಮುಸ್ಲೀಮ್ ಬಾಂಧವರೊಂದಿಗೆ ಆಚರಣೆ ಮಾಡಿ ಮಾತನಾಡಿದ ಕಾಂಗ್ರೆಸ್ ಚಡಚಣ ತಾಲೂಕು ಘಟಕದ ಅಧ್ಯಕ್ಷ ಆರ್.ಡಿ. ಹಕ್ಕೆ ಅವರು, ರಂಜಾನ್ ಎಂದರೆ ಕೇವಲ ಹಬ್ಬವಲ್ಲ, ಅದು ಜೀವನಕ್ಕೆ ಮಾರ್ಗದರ್ಶಕವಾದ ಪಾಠವಾಗಿದೆ ಎಂದರು.ಸುಳ್ಳು, ಕೋಪ, ಅಸೂಯೆ ಮತ್ತು ದ್ವೇಷದಿಂದ ದೂರವಿರುವುದೇ ನಿಜವಾದ ರಂಜಾನ್ ಆಚರಣೆಯ ಸಂದೇಶವಾಗಿದೆ, ಪ್ರೀತಿ, ಸಹನೆ ಮತ್ತು ಸತ್ಯದ ಮಾರ್ಗದಲ್ಲಿ ನಡೆಯುವುದೇ ನಿಜವಾದ ಉಪವಾಸದ ಅರ್ಥವಾಗಿದೆ, ರಂಜಾನ್ ತಿಂಗಳು ಕೇವಲ ಮುಸ್ಲಿಮರಿಗೆ ಮಾತ್ರವಲ್ಲ, ಸಂಪೂರ್ಣ ಮಾನವಕುಲಕ್ಕೆ ಶಾಂತಿ, ಸಹೋದರತ್ವ ಮತ್ತು ಮಾನವೀಯತೆಯ ಸಂದೇಶವನ್ನು ನೀಡುತ್ತದೆ ಎಂದು ಹೇಳಿದರು.ಗ್ರಾಮದ ಈದ್ಗಾ ಮೈದಾನದಲ್ಲಿ ಮುಸ್ಲಿಂ ಬಾಂಧವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ನಂತರ ಚಾಂದಸಾಹೇಬ ನದಾಫ ಅವರ ಮನೆಯಲ್ಲಿ ಸಿಹಿ ಪದಾರ್ಥಗಳನ್ನು ಸ್ವೀಕರಿಸಿದರು.ಗ್ರಾಮದ ಮುಸ್ಲಿಮ್ ಬಾಂಧವರು ತಮ್ಮ ತಮ್ಮ ಮನೆಗಳಲ್ಲಿ ಸುರುಕುಂಬ ಸೇರಿದಂತೆ ಅನೇಕ ಸಿಹಿ ಪದಾರ್ಥಗಳನ್ನು ಮಾಡಿದ್ದು ಹಿಂದು-ಮುಸ್ಲಿಮ್ ಎಲ್ಲರಿಗೂ ಸಿಹಿ ಪದಾರ್ಥಗಳನ್ನು ಉಣಬಡಿಸಿ ಸಂತೋಷಪಟ್ಟರು.ಈ ಸಂದರ್ಭದಲ್ಲಿ ರಜಾಕ ನದಾಫ್, ಮಹಾದೇವ ಬಿರಾದಾರ,…
ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ ನಡಹಳ್ಳಿ ಅವರ ಆಕ್ರೋಶದ ಉತ್ತರ ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತಾಳಿಕೋಟೆ ತಾಲೂಕು ಅಂತಾ ಘೋಷಣೆ ಆಗಿದ್ದು ಬಿಜೆಪಿ ಸರ್ಕಾರದಲ್ಲಿ. ಆದರೆ ಮತಕ್ಷೇತ್ರದ ಶಾಸಕರು ತಮ್ಮ ಸರ್ಕಾರದಲ್ಲಿ ಆಗಿದ್ದು ಅಂತಾ ಹಸಿ ಸುಳ್ಳು ಹೇಳುತ್ತಿದ್ದಾರೆ. ಸುಳ್ಳು ಹೇಳೋದರಲ್ಲಿ ನಂ ೧ ಯಾರು ಅಂದರೆ ಅಪ್ಪಾಜಿ ನಾಡಗೌಡರು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ, ಮಾಜಿ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.ಪಟ್ಟಣದ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಸುಳ್ಳು ಹೇಳೋಕೂ ಇತಿ ಮಿತಿ ಇರಬೇಕು. ಹಿಂದೆ ನಾನು ಇವರ ಮನೆಗೆ ಹೋಗಿ ಬಾಗಿ ನಮಸ್ಕಾರ ಮಾಡಿದ್ದೀನಂತೆ. ಅಪ್ಪಾಜಿ ನಾಡಗೌಡರ ಮನೆಗೆ ನಾನು ನನ್ನ ಚಪ್ಪಲಿ ಕೂಡ ಬಿಟ್ಟಿಲ್ಲ. ಅವರ ಮನೆ ಮಾತ್ರ ಅಲ್ಲ ಜಿಲ್ಲೆಯ ಯಾವ ಕಾಂಗ್ರೆಸ್ ನಾಯಕನ ಮನೆಗೂ ನಾನು ಹೋಗಿ ರಾಜಕಾರಣ ಮಾಡಿಲ್ಲ. ಅಪ್ಪಾಜಿ ನಾಡಗೌಡರೆ ನಿಮ್ಮ ಮನೆಗೆ ನಾನು ಬರೋದಾ ಥೂ..! ನಾಚಿಕೆ ಆಗೋಲ್ವಾ ನಿಮಗೆ ಸುಳ್ಳು…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣ ಸೇರಿದಂತೆ ತಾಲೂಕಿನಲ್ಲಿ ಶನಿವಾರ ಮುಸ್ಲಿಂ ಬಾಂಧವರು ಈದ್ಉಲ್ ಫಿತ್ರ ಹಬ್ಬವನ್ನು(ರಂಜಾನ್) ಸಡಗರ, ಸಂಭ್ರಮದಿಂದ ಆಚರಿಸಿದರು. ಮಕ್ಕಳು, ಯುವಕರು, ಹಿರಿಯರು ಸೇರಿದಂತೆ ಎಲ್ಲರೂ ಹೊಸ ಬಟ್ಟೆ ತೊಟ್ಟು ಬೆಳಗ್ಗೆ ಆಯಾ ಗ್ರಾಮಗಳಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿದರು. ನಂತರ ಪರಸ್ಪರ ಹಬ್ಬದ ಶುಭಾಶಯ ವಿನಿಮಯ ಮಾಡಿಕೊಂಡರು.ಪಟ್ಟಣದ ಮಸಬಿನಾಳ ರಸ್ತೆಯಲ್ಲಿರುವ ಈದ್ಗಾ ಮೈದಾನಕ್ಕೆ ತೆರಳಿ ಸಾಮೂಹಿಕ ಪ್ರಾರ್ಥನೆಯಲ್ಲಿ ಭಾಗವಹಿಸಿ ಪ್ರಾರ್ಥನೆ ಸಲ್ಲಿಸಿದರು. ನಂತರ ಮುಸ್ಲಿಂ ಬಾಂಧವರು ಪರಸ್ಪರ ಶುಭಾಶಯ ವಿನಿಮಯ ಮಾಡಿಕೊಂಡರು.ಈದುಲ್ ಫಿತರ್ ಮೂವತ್ತು ದಿನದ ಉಪವಾಸ ಮಾಡಿ ಅಲ್ಲಾಹನ ನಾಮದಿಂದ ಜಕಾತ್ ಫೀತರಾ ನೀಡಿ ಜಗತ್ತಿನಲ್ಲಿ ಸುಖ ಶಾಂತಿ ನೆಮ್ಮದಿ ನೀಡಲಿ ಎಂದು ಅಲ್ಲಾಹನಿಗೆ ಪ್ರಾರ್ಥನೆಯನ್ನು ಮಾಡಲಾಯಿತು.ಈದ್ಗಾ ಮೈದಾನದಲ್ಲಿ ಜರುಗಿದ ಸಾಮೂಹಿಕ ಪ್ರಾರ್ಥನೆಯಲ್ಲಿ ಹಾಫೀಜ್ ಅಬ್ದುಲ್ ರೆಹಮಾನ್ ಶಿವಣಗಿ ಮಾತನಾಡಿ, ಒಂದು ತಿಂಗಳ ಕಾಲ ಮುಸ್ಲಿಂ ಬಾಂಧವರು ರಂಜಾನ ಹಬ್ಬದಂಗವಾಗಿ ಉಪವಾಸ ವೃತ್ತ ಇದ್ದು. ಜಕಾತ್ ಚಿತ್ರಾ ನೀಡಿ ಹಬ್ಬವನ್ನು ಸಂಭ್ರಮದಿಂದ…
ಬನಶಂಕರಿ ಕೋ-ಆಪರೇಟಿವ್ ಸೊಸೈಟಿ ಉದ್ಘಾಟಿಸಿದ ಸಚಿವ ಶಿವಾನಂದ ಪಾಟೀಲ ಅಭಿಮತ ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಜನರ ಆರ್ಥಿಕ ಸಬಲೀಕರಣದಲ್ಲಿ ಸಹಕಾರ ರಂಗದ ಪಾತ್ರವು ಇದೆ. ಈ ನಿಟ್ಟಿನಲ್ಲಿ ಸಹಕಾರ ಸಂಘಗಳು ಜನರಿಗೆ ಪ್ರಾಮಾಣಿಕವಾದ ಸೇವೆ ಒದಗಿಸಬೇಕೆಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ, ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.ಪಟ್ಟಣದ ವಿಜಯಪುರ ರಸ್ತೆಯಲ್ಲಿರುವ ಚಿಕ್ಕೊಂಡ ಕಾಂಪ್ಲೇಕ್ಸನಲ್ಲಿ ನೂತನವಾಗಿ ಆರಂಭವಾದ ಬನಶಂಕರಿ ಕೋ-ಆಪರೇಟಿವ್ ಸೊಸೈಟಿಯನ್ನು ಗುರುವಾರ ಉದ್ಘಾಟಿಸಿ ಮಾತನಾಡಿದ ಅವರು, ನೂತನವಾಗಿ ಆರಂಭವಾದ ಈ ಸೊಸೈಟಿಯು ಜನರಿಗೆ ಉತ್ತಮ ಸೇವೆ ಸಲ್ಲಿಸುವಂತಾಗಲಿ. ಜನರು ಪಡೆದ ಸಾಲವನ್ನು ಸಕಾಲಿಕವಾಗಿ ಮರುಪಾವತಿ ಮಾಡುವ ಮೂಲಕ ಸಹಕಾರಿ ಸಂಘಗಳಿಗೆ ಸಹಕಾರ ನೀಡಬೇಕು. ಸೊಸೈಟಿಯ ಆಡಳಿತ ಮಂಡಳಿಯುವರು ಜನರ ಉಳಿತಾಯ, ಸಾಲ ಸೌಲಭ್ಯ, ಸ್ವಾವಲಂಬನೆಗಾಗಿ ಉತ್ತಮ ವೇದಿಕೆಯನ್ನು ಒದಗಿಸುವವಂತಾಗಲೆಂದು ಶುಭ ಹಾರೈಸಿದರು.ಸಾನ್ನಿಧ್ಯವನ್ನು ಸ್ಥಳೀಯ ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ, ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ, ಮನಗೂಳಿ ಹಿರೇಮಠದ ಅಭಿನವ ಸಂಗನಬಸವ ಶಿವಾಚಾರ್ಯ ಸ್ವಾಮೀಜಿ, ಪಂಚಾಕ್ಷರಿ ಕಾಳಹಸ್ತೇಶ್ವರಮಠ, ಶಿವಾನಂದ ಈರಕಾರ…
