Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಅಕ್ರಮ ಬಾಂಗ್ಲಾ, ಪಾಕಿಸ್ತಾನ್ ನುಸುಳುಕೋರರು ವಾಸವಾಗಿದ್ದಾರೆಂಬ ಆತಂಕದ, ಕಂಟ್ರಿ ಪಿಸ್ತೂಲ್ಗಳು, ಭೂ ಮಾಫಿಯಾ, ಅಕ್ಕಿ ಮಾಫಿಯಾ ಹಾವಳಿ ಬಗ್ಗೆ ನಗರ ಶಾಸಕರಾದ ಬಸನಗೌಡ ಪಾಟೀಲ ಯತ್ನಾಳ ರವರು ಪ್ರಸ್ತುತ ನಡೆಯುತ್ತಿರುವ ಅಧಿವೇಶನದಲ್ಲಿ ಗಮನಸೆಳೆದು, ಆಂತರಿಕ ಭದ್ರತೆ, ಸುರಕ್ಷತೆ ದೃಷ್ಟಿಯಿಂದ ಮತ್ತು ಅಕ್ರಮ ಚಟುವಟಿಕೆಗಳ ಮೇಲೆ ಹದ್ದಿನ ಕಣ್ಣಿಡಲು ವಿಜಯಪುರ ಜಿಲ್ಲೆಯಲ್ಲಿ ಎನ್.ಐ.ಎ ಕೇಂದ್ರ ಸ್ಥಾಪಿಸುವಂತೆ ಒತ್ತಾಯಿಸಿದರು.ಇತ್ತಿಚ್ಚೀನ ದಿನಗಳಲ್ಲಿ ರಾಜ್ಯದಲ್ಲಿ 25 ಪಾಕಿಸ್ತಾನಿ ವಲಸಿಗರನ್ನು ಪತ್ತೆ ಹಚ್ಚಿ, ಕಾರಾಗೃಹದಲ್ಲಿರಿಸಲಾಗಿದೆ. ಕಳೆದ ಎರಡು ವರ್ಷಗಳಲ್ಲಿ ಬೆಂಗಳೂರು 111, ಶಿವಮೊಗ್ಗ 12, ಹಾಸನ ೩, ಮಂಗಳೂರು 1, ಉಡುಪಿ ಜಿಲ್ಲೆಯಲ್ಲಿ 10 ಸೇರಿ ಒಟ್ಟು 137 ಅಕ್ರಮ ವಲಸಿಗರನ್ನು ಗುರುತಿಸಲಾಗಿದೆ. ಪೈಕಿ 90 ವಲಸಿಗರನ್ನು ಗಡಿಪಾರು ಮಾಡಲಾಗಿದೆ.ವಿಜಯಪುರ ಜಿಲ್ಲೆಯಲ್ಲಿ 2016 ರಲ್ಲಿ 33 ಜನ ಬಾಂಗ್ಲಾ ವಲಸಿಗರು ವಾಸವಾಗಿದ್ದರು. ನ್ಯಾಯಾಲಯದ ಆದೇಶದಂತೆ 2018ರ ಎಪ್ರಿಲ್ 4 ರಂದು ಮತ್ತು 2019ರ ಎಪ್ರಿಲ್ 2 ರಂದು ಎಲ್ಲಾ 33 ಬಾಂಗ್ಲಾದೇಶಿಯರನ್ನು ಅವರ…
ವಿಶ್ವ ಕಿಡ್ನಿ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿದ ಡಾ.ವಿಜಯಕುಮಾರ ಕಲ್ಯಾಣಪ್ಪಗೋಳ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಕಿಡ್ನಿ ಕಸಿ ಸೇರಿದಂತೆ ಮೂತ್ರಪಿಂಡ ಕಾಯಿಲೆಗಳಿಗೆ ಅತ್ಯಾಧುನಿಕ ಸೌಲಭ್ಯಗಳು ಲಭ್ಯವಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ವಿಜಯಕುಮಾರ ಕಲ್ಯಾಣಪ್ಪಗೋಳ ಹೇಳಿದ್ದಾರೆ.ಗುರುವಾರ ಆಸ್ಪತ್ರೆಯಲ್ಲಿ ವಿಶ್ವ ಕಿಡ್ನಿ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರ ಉದ್ಘಾಟಿಸಿ ಅವರು ಮಾತನಾಡಿದರು.ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ತಜ್ಞವೈದ್ಯರರ ಸೇವೆ ಲಭ್ಯವಿದ್ದು, ಕಳೆದ ಒಂದೂವರೆ ವರ್ಷದಲ್ಲಿ ಆರು ಜನರಿಗೆ ಮೂತ್ರಪಿಂಡ ಕಸಿ ಮಾಡಲಾಗಿದೆ. ಆಸ್ಪತ್ರೆಯಲ್ಲಿ ಲಭ್ಯವಿರುವ ಸೇವೆಗಳನ್ನು ಮೂತ್ರಪಿಂಡ ಸಂಬಂದಿ ರೋಗಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಅವರು ತಿಳಿಸಿದರು.ಆಸ್ಪತ್ರೆಯ ಮೂತ್ರ ಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಎಸ್. ಬಿ. ಪಾಟೀಲ ಮಾತನಾಡಿ, 40 ವರ್ಷ ಮೇಲ್ಪಟ್ಟ ಜನರು ವರ್ಷಕ್ಕೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬೇಸಿಗೆಯಲ್ಲಿ ಬಿಸಿಲಿನ ತಾಪ ಹೆಚ್ಚಾಗುವುದರಿಂದ ವಿಜಯಪುರ ಜಿಲ್ಲೆಯ ಸರ್ಕಾರಿ ಕಚೇರಿಗಳ ಸಮಯವನ್ನು ಬೆಳಗ್ಗೆ 8 ಗಂಟೆಯಿಂದ ಮಧ್ಯಾಹ್ನ 1:30 ಗಂಟೆಯವರೆಗೆ ಮಾಡಲು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಘಟಕ ವತಿಯಿಂದ ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರಿಗೆ ಗುರುವಾರ ಮನವಿ ಸಲ್ಲಿಸಲಾಯಿತು.ಮನವಿ ಸಲ್ಲಿಸಿ ಮಾತನಾಡಿದ ನೌಕರರ ಸಂಘದ ಜಿಲ್ಲಾಧ್ಯಕ್ಷ ಸುರೇಶ್ ಶೇಡಶಾಳ, ಜಿಲ್ಲೆಯಲ್ಲಿ ಬಿಸಿಲಿನ ತಾಪ ಹೆಚ್ಚಾಗಿರುವುದರಿಂದ ಗ್ರಾಮೀಣ ಭಾಗದಲ್ಲಿ ಮೂಲಭೂತ ಸೌಕರ್ಯಗಳ ಕೊರತೆ ಇರುವುದರಿಂದ ಏಪ್ರಿಲ್ 1 ರಿಂದ ಮೇ 31 ರವರೆಗೆ ಸರ್ಕಾರಿ ಕಚೇರಿಗಳ ಸಮಯವನ್ನು ಬೆಳಗ್ಗೆ 8 ಗಂಟೆಯಿಂದ ಮದ್ಯಾಹ್ನ 1:30 ಗಂಟೆಗೆ ಬದಲಾವಣೆ ಮಾಡಿ ನೌಕರರ ಮತ್ತು ಸಾರ್ವಜನಿಕರ ಆರೋಗ್ಯವನ್ನು ಕಾಪಾಡಬೇಕೆಂದು ತಿಳಿಸಿದರು.ಈ ಸಂದರ್ಭದಲ್ಲಿ ನೌಕರರ ಸಂಘದ ಕೋಶ್ಯಾಧ್ಯಕ್ಷ ಸಯ್ಯದ ಜುಬೇರ್ ಎಸ್. ಕೆರೂರ್, ಜಿಲ್ಲಾ ಪ್ರದಾನ ಕಾರ್ಯದರ್ಶಿ ಶಿವರಾಜ್ ಬಿರಾದಾರ, ರಾಜ್ಯ ಪರಿಷತ್ ಸದಸ್ಯ ವಿಜಯಕುಮಾರ್ ಹತ್ತಿ. ಗೌರವಾಧ್ಯಕ್ಷ ವಿಶ್ವನಾಥ ಬೆಳ್ಳನವರ, ಕಾರ್ಯಾಧ್ಯಕ್ಷ ಪ್ರಕಾಶ್ ಗೊಂಗಡಿ, ಹಿರಿಯ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ದೊರೆತಾಗ ಅವರಲ್ಲಿಯ ವಿಶೇಷ ಕೌಶಲ್ಯಗಳು ಹೊರಬರಲು ಸಾಧ್ಯ ಎಂದು ಸಿಡಿಪಿಓ ಎಸ್.ಎನ್.ಹಿರೇಮಠ ಹೇಳಿದರು.ತಾಲ್ಲೂಕಿನ ಜಾಲವಾದ ಗ್ರಾಮದಲ್ಲಿ ಸೋಮವಾರ ಜರುಗಿದ ಅಂಗನವಾಡಿ ಮಕ್ಕಳ ವಾರ್ಷಿಕ ಸ್ನೇಹ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದರು.ಮಕ್ಕಳು ಶಿಕ್ಷಣವಂತರಾದಾಗ ಅವರಿಂದ ಸಾಧನೆ ಸುಲಭವಾಗುತ್ತದೆ. ಇಂದು ಅಂಗನವಾಡಿಯಲ್ಲಿ ಶಿಕ್ಷಕಿಯರು ನೀಡುವ ಶಿಕ್ಷಣ ಮುಂದಿನ ಶಿಕ್ಷಣಕ್ಕೆ ಅಡಿಪಾಯವಾಗಿದೆ ಮತ್ತು ವಾರ್ಷಿಕ ಸ್ನೇಹ ಸಮ್ಮೇಳನದಂತಹ ಕಾರ್ಯಕ್ರಮಗಳಿಗೆ ಎಲ್ಲರೂ ಸಹಕಾರ ನೀಡಬೇಕೆಂದು ತಿಳಿಸಿದರು.ಯೋಜನಾ ನಿರ್ದೇಶಕ ವಾಸುದೇವ ತೋಳಬಂದಿ ಮಾತನಾಡಿ, ಅಂಗನವಾಡಿಗಳಲ್ಲಿ ಮಕ್ಕಳಿಗೆ ವಿಶೇಷವಾದ ಕಲಿಕೆ ಆಗುತ್ತಿದೆ. ಇದು ಮುಂದಿನ ಸುಭದ್ರ, ಸದೃಢ ಸಮಾಜಕ್ಕೆ ಅಡಿಪಾಯವಾಗಿದೆ ಮಕ್ಕಳು ವಿವಿಧ ರೀತಿಯ ಮನರಂಜನೆಯ ಕಾರ್ಯಕ್ರಮಗಳನ್ನು ಮಾಡಿರುವುದು ಸಂತಸ ಎಂದರು.ಉಜ್ವಲ ಸಂಸ್ಥೆಯ ನಿರ್ದೇಶಕಿ ಸುನಂದಾ ತೋಳಬಂದಿ ಮಾತನಾಡಿ, ಯೋಜನೆಯಡಿ ತರಬೇತಿ ಪಡೆದು ಅದನ್ನು ಸಕ್ರಿಯವಾಗಿ ಅಂಗನವಾಡಿಗಳಲ್ಲಿ ಅನುಷ್ಠಾನಗೊಳಿಸುತ್ತಿರುವುದು ಸಂತಸದ ಸುದ್ದಿ. ಇದೇ ರೀತಿಯಾಗಿ ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಬದಲಾವಣೆಯ ಪಥದಲ್ಲಿ ಮಕ್ಕಳಿಗೆ ಶಾಲಾಪೂರ್ವ ಶಿಕ್ಷಣ ಅನುಷ್ಠಾನಗೊಳಿಸಬೇಕು ಎಂದರು. ಇದೇ ಸಂದರ್ಭದಲ್ಲಿ ವಿವಿಧ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಹುಣಶ್ಯಾಳ ಸರ್ಕಾರಿ ಕನ್ನಡ ಗಂಡು ಮಕ್ಕಳ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳು ಕುಡಿಯುವ ನೀರಿಲ್ಲದೆ ಪರದಾಡುವಂತಾಗಿದ್ದು, ಕೂಡಲೇ ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಒದಗಿಸಬೇಕೆಂದು ಪಾಲಕರು, ಶಿಕ್ಷಕರು ಸ್ಥಳೀಯ ಆಡಳಿತಕ್ಕೆ ಆಗ್ರಹಿಸಿದ್ದಾರೆ.ತಾಲ್ಲೂಕಿನ ಹುಣಶ್ಯಾಳ ಗ್ರಾಮದಲ್ಲಿ ಬುಧವಾರ ಮನವಿ ಸಲ್ಲಿಸಿದ ಶಿಕ್ಷಕರು ಹಾಗೂ ಪಾಲಕರು ಶಾಲೆಯಲ್ಲಿನ ೨೮೦ ಮಕ್ಕಳಿಗೆ ಬಿಸಿಯೂಟ ತಯಾರಿಸಲು, ಊಟದ ನಂತರ ಕುಡಿಯಲು ನೀರು ಇಲ್ಲದೆ ಪರದಾಡುವಂತಾಗಿದೆ. ಮಕ್ಕಳು ಪಕ್ಕದ ಮನೆಗಳು, ಹೊಟೇಲ್ಗಳಿಗೆ ಹೋಗಿ ನೀರು ಕೇಳಿ ಕುಡಿಯುವಂತಾಗಿದೆ. ಬಿಸಿಯೂಟ ತಯಾರಿಸಲು ನೀರನ್ನು ಹೊತ್ತು ತರುವಂತಾಗಿದೆ. ಈಗ ಬೇಸಿಗೆ ಆರಂಭಗೊಡಿರುವುದರಿಂದ ಮಕ್ಕಳು ಕುಡಿಯುವ ನೀರಿನ ಸಲುವಾಗಿ ಅಲೆದಾಡುತ್ತಿದ್ದು, ದಿನನಿತ್ಯ ಮಕ್ಕಳು ಊಟ ಮಾಡಿ ತಟ್ಟೆ ತೊಳೆಯಲು ಸಂಕಷ್ಠ ಅನುಭವಿಸುವಂತಾಗಿದೆ. ಕುಡಿಯುವ ನೀರಿನ ಬಗ್ಗೆ ಈಗಾಗಲೇ ಕಳೆದ ತಿಂಗಳು ಗ್ರಾಮ ಪಂಚಾಯಿತಿಗೆ ಮನವಿ ಸಲ್ಲಿಸಿದರೂ ಕೂಡಾ ಯಾವುದೇ ಪ್ರಯೋಜನವಾಗಿಲ್ಲ.ಶಾಲೆಯ ಆವರಣದಲ್ಲಿನ ಬೊರೆವೆಲ್ನಿಂದ ಈವರೆಗೆ ಅಲ್ಪ ಸ್ವಲ್ಪ ನೀರು ಬರುತ್ತಿದ್ದು, ಇಲ್ಲಿವರೆಗೂ ಮಕ್ಕಳಿಗೆ ಕುಡಿಯಲು ಹಾಗೂ ಅಡುಗೆ ತಯಾರಿಸಲು…
ಅಕ್ಕನ ಮನೆ ಪ್ರತಿಷ್ಠಾನ – ಸಂಸ್ಕೃತಿ ಸಂಗಮ ಕಾರ್ಯಕ್ರಮ ಪುಣೆಯ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಹಾಗೂ ಚಿಂತಕ ಡಾ.ಶಶಿಕಾಂತ ಪಟ್ಟಣ ಅಬಿಮತ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಒಂದು ಅದ್ಭುತವಾದ ಅವಿರಳ ಮಹಿಳಾ ವಚನಕಾರ್ತಿಯರ ಕೃತಿಯನ್ನು ಲೇಖಕಿ ಹೇಮಲತಾ ಅವರುಸಮಾಜಕ್ಕೆ ಅರ್ಪಿಸಿದ್ದಾರೆ ಎಂದು ಪುಣೆಯ ಬಸವ ತಿಳುವಳಿಕೆ ಮತ್ತು ಸಂಶೋಧನಾ ಕೇಂದ್ರದ ಅಧ್ಯಕ್ಷ ಹಾಗೂ ಚಿಂತಕ ಡಾ.ಶಶಿಕಾಂತ ಪಟ್ಟಣ ಶ್ಲಾಘಿದರು.ಬೆಂಗಳೂರಿನ ಕನ್ನಡ ಭವನದ ನಯನ ಸಭಾಂಗಣದಲ್ಲಿ ಇತ್ತೀಚಿಗೆ ಸಿ. ಸಿ. ಹೇಮಲತಾ -ಅಧ್ಯಕ್ಷರು -ಅಕ್ಕನ ಮನೆ ಪ್ರತಿಷ್ಠಾನ ಇವರಿಂದ ಅಕ್ಕನ ಮನೆ ಪ್ರತಿಷ್ಠಾನ ಸಂಸ್ಕೃತಿ ಸಂಗಮ – ವಿವೇಕದಿಂದ ವಿಕಾಸದೆಡೆಗೆ ಎನ್ನುವ ವೈಚಾರಿಕ ನೆಲೆ ಗಟ್ಟಿನಲ್ಲಿ ನಡೆದ ಕಾರ್ಯಕ್ರಮ, ಸಿ. ಸಿ. ಹೇಮಲತಾ ಅವರು ಬರೆದ “ವಚನಕಾರ್ತಿಯರ ಕ್ರಾಂತಿಯ ಹೆಗ್ಗುರುತು “ಕೃತಿ ಲೋಕಾರ್ಪಣೆ ಮತ್ತು “ಅಕ್ಕ ರಾಜ್ಯ ಪ್ರಶಸ್ತಿ ” ಪ್ರಧಾನ ಸಮಾರಂಭದಲ್ಲಿ ಅವರು ಹೇಮಲತಾ ಅವರ ಕೃತಿಯ ಕುರಿತು ಮಾತನಾಡಿದರು.ಬಸವಣ್ಣನವರಿಗೆ ಅಕ್ಕನಾಗಮ್ಮ ನಿಜವಾದ ಕ್ರಾಂತಿಯ ನೆಲೆ -…
ಲೇಖನ- ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ನಾವು ಸಂಪಾದಿಸಿದ ಆಸ್ತಿ, ಅಂತಸ್ತು, ಸಂಪತ್ತು, ಒಡವೆ, ವಸ್ತç, ಇವೆಲ್ಲಕ್ಕೂ ಮಿಗಿಲಾದುದು ನಾವು ಸಂಪಾದಿಸಿದ ಅನುಭವ. ಬದುಕಿನಲ್ಲಿ ಎಲ್ಲಕ್ಕಿಂತ ದೊಡ್ಡದು ಅನುಭವ. ಅನುಭವದಿಂದ ಪಾಠ ಕಲಿಯಬೇಕು. ಎಂಬೆಲ್ಲ ಮಾತುಗಳು ಮೇಲಿಂದ ಮೇಲೆ ಕಿವಿಗೆ ಬೀಳುತ್ತಲೇ ಇರುತ್ತವೆ. ಏನೇ ಹೇಳಿ ಯಾವ ಶಾಲೆ, ಕಾಲೇಜು, ವಿಶ್ವವಿದ್ಯಾಲಯ ಕಲಿಸದ ಪಾಠವನ್ನು ಅನುಭವದ ಬದುಕು ಮನುಷ್ಯನಿಗೆ ಕಲಿಸುತ್ತದೆ. ಇನ್ನೊಂದು ವಿಶಿಷ್ಟ ವಿಷಯವೆಂದರೆ, ಯುವಜನರು ಹೇಳುವ ಮಾತು ‘ಅನುಭವವಿದ್ದವರಿಗೆ ಮಾತ್ರ ಕೆಲಸ ನೀಡಲಾಗುವುದು.’ ಯಾರೂ ಉದ್ಯೋಗ ನೀಡದಿದ್ದರೆ ಕೆಲಸದ ಅನುಭವ ಆಗುವುದಾದರೂ ಹೇಗೆ? ಎಂಬ ಪ್ರಶ್ನೆ ಹೌದು, ಅವರ ಮಾತು ಸಹ ನಿಜವಲ್ಲವೇ? ಕೆಲವು ಚಟುವಟಿಕೆಗಳಲ್ಲಿ ನೇರವಾಗಿ ಭಾಗವಹಿಸುವಿಕೆಯಿಂದ ಉಂಟಾಗುವ ಜ್ಞಾನ ಅಥವಾ ಕೌಶಲ್ಯದ ಸಂಗ್ರಹಣೆಯನ್ನು ಅನುಭವವೆಂದು ಕಲೆಯಲಾಗುತ್ತದೆ. ಅನುಭವವು ಬೇರೆ ಬೇರೆ ಪ್ರಕಾರಗಳಲ್ಲಿ ದೊರೆಯುತ್ತದೆ. ಓದು, ಬರಹ, ಇಲ್ಲವೇ ಒಂದು ಕಾರ್ಯದಲ್ಲಿ ಒಳಗೊಳ್ಳುವಿಕೆಯ ಮೂಲಕ ಗಳಿಸಿದ ವಿಷಯದ ಜ್ಞಾನ. ಕೆಲವೊಂದು ಕಾರ್ಯಗಳನ್ನು ನಾವೇ ಸ್ವತಃ ಮಾಡುವ…
ಕುಡಿಯುವ ನೀರಿನ ಸಮಸ್ಯೆಯಾಗದಂತೆ ಯೋಜನೆ ರೂಪಿಸಿಕೊಂಡು ಕಾರ್ಯನಿರ್ವಹಿಸಲು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬರುವ ಬೇಸಿಗೆಯಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ ನೀರಿನ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲು ಈಗಿನಿಂದಲೇ ಯೋಜನೆಯೊಂದನ್ನು ರೂಪಿಸಿಕೊಂಡು ಕಾರ್ಯನಿರ್ವಹಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದರು.ಜಿಲ್ಲೆಯ ವಿವಿಧ ತಾಲೂಕಾ ತಹಶೀಲ್ದಾರ, ತಾಲೂಕಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಜಿಲ್ಲಾಧಿಕಾರಿಗಳ ಕಚೇರಿಯ ಕೆಸ್ವಾನ್ ಸಭಾಂಗಣದಲ್ಲಿ ಬುಧವಾರ (ಮಾ.೧೨)ರಂದು ವಿಡಿಯೋ ಸಂವಾದದ ಮೂಲಕ ಸಭೆ ನಡೆಸಿದ ಅವರು, ಕಳೆದ ವರ್ಷಕ್ಕೆ ಹೋಲಿಸಿದ್ದಲ್ಲಿ ಪ್ರಸ್ತುತ ಜಿಲ್ಲೆಯಲ್ಲಿ ಅಂತಹ ಯಾವುದೇ ಸಮಸ್ಯೆ ಎದುರಾಗುವುದಿಲ್ಲ. ಈಗಿರುವ ನೀರನ್ನು ಬಳಕೆ ಮಾಡಿಕೊಂಡಲ್ಲಿ ಏಪ್ರಿಲ್ ಅಂತ್ಯದವರೆಗೆ ಯಾವುದೇ ಸಮಸ್ಯೆಯಾಗುವುದಿಲ್ಲ. ಆದ್ಯಾಗ್ಯೂ ಮುಂದಿನ ಜುಲೈ ಅಂತ್ಯದವರಗೆ ಜಿಲ್ಲೆಗೆ ಬೇಕಾಗುವ ನೀರಿನ ಅವಶ್ಯಕತೆಗನುಸಾರವಾಗಿ ಎಲ್ಲ ಅಗತ್ಯ ಸಿದ್ಧತೆಗಳನ್ನು ಮಾಡಿಟ್ಟುಕೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಅವರು ಸೂಚನೆ ನೀಡಿದರು.ಕೆರೆಗಳಲ್ಲಿ ನೀರು ತುಂಬಿಸಲು ಪ್ರತಿ ೪೫ ದಿನಗಳಿಗೆ ೨.೫ ಟಿಎಂಸಿ ಅವಶ್ಯಕತೆ ಇದ್ದು, ಈಗಿರುವ ನೀರನ್ನು ಸದ್ಭಳಕೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಶ್ರೀ ಜಗದ್ಗುರು ರೇಣುಕಾಚಾರ್ಯ ಅವರು ತಮ್ಮ ತತ್ವ ಸಿದ್ಧಾಂತಗಳ ಮೂಲಕ ಸಮಾಜದ ಓರೆಕೋರೆಗಳನ್ನು ಹೋಗಲಾಡಿಸಲು ತಮ್ಮ ಮೂಲಕ ತತ್ವಸಿದ್ದಾಂತಗಳ ಮೂಲಕ ಸಂದೇಶ ಸಾರಿ ಇಡೀ ಸಮಾಜಕ್ಕೆ ಬೆಳಕಾದವರು ಎಂದು ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರು ಹೇಳಿದರು.ನಗರದ ಶ್ರೀ ಕಂದಗಲ್ ಶ್ರೀ ಹನುಮಂತರಾಯ ರಂಗಮಂದಿರದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಬುಧವಾರ ನಡೆದ ಶ್ರೀ ಜಗದ್ಗುರು ರೇಣುಕಾಚಾರ್ಯ ಜಯಂತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಜಗದ್ಗುರು ರೇಣುಕಾಚಾರ್ಯರು ತಮ್ಮ ತತ್ವ, ಸಿದ್ದಾಂತಗಳಿಂದ ಈ ಜಗತ್ತಿಗೆ ಶಾಂತಿ ಹಾಗೂ ಸಹಬಾಳ್ವೆಯ ಸಂದೇಶ ಸಾರಿದ್ದಾರೆ ಎಂದರು.ಮಹಾದೇವಯ್ಯ ಶಾಸ್ತ್ರೀಯವರು ಉಪನ್ಯಾಸ ನೀಡಿದರು.ಶ್ರೀಮತಿ ಮಾಳವಿಕಾ ಜೋಶಿ ಸುಗಮ ಸಂಗೀತ ನಡೆಸಿಕೊಟ್ಟರು.ಕಾರ್ಯಕ್ರಮದಲ್ಲಿ ಮಹಾನಗರ ಪಾಲಿಕೆಯ ಉಪ ಆಯುಕ್ತ ವೈ.ಎ.ನಾರಾಯಣಕರ, ಜಿಲ್ಲಾ ಪಂಚಾಯತಿಯ ಯೋಜನಾ, ಅಂದಾಜು ಮತ್ತು ಮೌಲ್ಯಮಾಪನ ಅಧಿಕಾರಿ ಎ.ಬಿ.ಅಲ್ಲಾಪುರ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಂತೋಷ ಭೋವಿ, ಡಿವೈಎಸ್ಪಿ ಡಿ.ಎಸ್.ಧನಗರ ಸೇರಿದಂತೆ ಸಂಜೀವ ಹಿರೇಮಠ, ಎಸ್.ಎಸ್.ಹಿರೇಮಠ,…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಬಿ.ಬಿ.ಇಂಗಳಗಿ ಗ್ರಾಮದಲ್ಲಿ ತಲೆದೋರಿರುವ ನೀರಿನ ಸಮಸ್ಯೆ ಇತ್ಯರ್ಥ ಪಡಿಸಿ, ನಿಯಮಿತವಾಗಿ ನೀರು ಪೂರೈಸುವಂತೆ ಆಗ್ರಹಿಸಿ ಗ್ರಾಮಸ್ಥರು ತಾಲ್ಲೂಕು ಪಂಚಾಯಿತಿ ಇಓ ಭಾರತಿ ಚೆಲುವಯ್ಯ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ತಾಲ್ಲೂಕು ಪಂಚಾಯಿತಿಗೆ ಮಂಗಳವಾರ ಆಗಮಿಸಿದ ಗ್ರಾಮಸ್ಥರು ತಾವು ಎದುರಿಸುತ್ತಿರುವ ನೀರಿನ ತಾಪತ್ರಯದ ಕುರಿತು ಮಾಹಿತಿ ನೀಡಿದರು.ಈ ಸಂದರ್ಭದಲ್ಲಿ ಲಾಲಸಾಬ್ ವಠಾರ ಮಾತನಾಡಿ, ಕೊಂಡಗೂಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಿ.ಬಿ.ಇಂಗಳಗಿ ಗ್ರಾಮದಲ್ಲಿ ಪ್ರತಿ ವರ್ಷ ಬೇಸಿಗೆ ಬರುತ್ತಿದ್ದಂತೆಯೇ ನೀರಿನ ಸಮಸ್ಯೆ ತಲೆದೋರುವುದು ಸಾಮಾನ್ಯವಾಗಿದೆ. ಈಗ ಗ್ರಾಮದಲ್ಲಿ ೮ ರಿಂದ ೧೦ ದಿನಗಳಿಗೊಮ್ಮೆ ನೀರು ಸರಬರಾಜು ಆಗುತ್ತಿದ್ದು, ನೀರಿಗಾಗಿ ಪರದಾಡುವಂತಾಗಿದೆ. ಈಗ ಬೇಸಿಗೆ ಆರಂಭಗೊಳ್ಳುತ್ತಿದ್ದು ಮನೆಯಲ್ಲಿನ ಎಲ್ಲರಿಗೂ ಹಾಗೂ ದನಕರುಗಳಿಗೂ ನೀರು ಪೂರೈಸುವುದು ಸವಾಲಿನ ಕೆಲಸವೇ ಆಗಿದೆ. ಆದ್ದರಿಂದ ಕೂಡಲೇ ಬೊರವೆಲ್ ಮಂಜೂರು ಮಾಡಿ ಅಥವಾ ಇನ್ನಾವುದೇ ಕ್ರಮಗಳಿಂದ ನೀರಿನ ಸಮಸ್ಯೆ ಹೋಗಲಾಡಿಸಿ ಪುಣ್ಯ ಕಟ್ಟಿಕೊಳ್ಳಿ ಎಂದು ಆಗ್ರಹಿಸಿ ಮನವಿ ಸಲ್ಲಿಸಿದರು.ಗ್ರಾಮ ಪಂಚಾಯಿತಿ ಸದಸ್ಯ ಸಲೀಮ್ ವಠಾರ, ಮಡಿವಾಳಯ್ಯ ಹಿರೇಮಠ, ಚಂದಪ್ಪ…
