Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬೆನಕಟ್ಟಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಆಶಿಶ ಝಳಕಿ ಹಾಗೂ ಕೀರ್ತಿ ಗಾಯಕವಾಡ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಜೆಇಇ ಮೇನ್ಸ್ನಲ್ಲಿ ಉತ್ತಮ ಸಾಧನೆ ಮಾಡಿ ಜೆಇಇ ಅಡ್ವಾನ್ಸ್ಗೆ ಅರ್ಹತೆ ಪಡೆದಿದ್ದಾರೆ.ವಿದ್ಯಾರ್ಥಿಗಳ ಸಾಧನೆಗೆ ಕಾಲೇಜು ಕಾರ್ಯದರ್ಶಿ ಹೇಮಲತಾ ಬೆನಕಟ್ಟಿ, ಪ್ರಾಚಾರ್ಯ ಸೂರಜ್ ಉಮದಿ ಸೇರಿದಂತೆ ಎಲ್ಲ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಏ.೨೨ ರಂದು ಬೆಳಿಗ್ಗೆ ೧೧ ಗಂಟೆಗೆ ವಿಶ್ವ ಭೂಮಿ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ.ತಾಲೂಕು ಕಾನೂನು ಸೇವಾ ಸಮಿತಿ, ನ್ಯಾಯವಾದಿಗಳ ಸಂಘ ಹಾಗೂ ಇತರ ಎಲ್ಲ ಸರ್ಕಾರಿ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಈ ಕಾರ್ಯಕ್ರಮವನ್ನು ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷರೂ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ರವೀಂದ್ರಕುಮಾರ ಕಟ್ಟಿಮನಿ ಉದ್ಘಾಟಿಸುವರು. ಸಮಿತಿಯ ಸದಸ್ಯ ಕಾರ್ಯದರ್ಶಿಗಳು ಹಾಗೂ ಸಿವಿಲ್ ನ್ಯಾಯಾಧೀಶರಾದ ಸಂಪತ್ತಕುಮಾರ ಬಳೂಲಗಿಡದ ಉಪಸ್ಥಿತಿಯಲ್ಲಿ ನ್ಯಾಯವಾದಿಗಳ ಸಂಘದ ಅಧ್ಯಕ್ಷ ಶಶಿಕಾಂತ ಮಾಲಗತ್ತಿ ಅಧ್ಯಕ್ಷತೆ ವಹಿಸುವರು. ಅತಿಥಿಗಳಾಗಿ ಹಿ.ಶ್ರೇ ಸಹಾಯಕ ಸರ್ಕಾರಿ ಅಭಿಯೋಜಕ ನಾಗರಾಜ ಪೂಜಾರ, ಅಪರ ಸರ್ಕಾರಿ ವಕೀಲ ಎಚ್.ಎಲ್.ಸರೂರ, ಕಿ.ಶ್ರೇ ಸಹಾಯಕ ಸರ್ಕಾರಿ ಅಭಿಯೋಜಕ ಬಸವರಾಜ ಆಹೇರಿ, ತಹಸೀಲ್ದಾರ ಬಲರಾಮ ಕಟ್ಟಿಮನಿ, ತಾ.ಪಂ ಕಾರ್ಯನಿರ್ವಾಹಕ ಅಧಿಕಾರಿ ನಿಂಗಪ್ಪ ಮಸಳಿ, ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಿವಮೂರ್ತಿ ಕುಂಬಾರ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಎಸ್.ಸಾವಳಗಿ, ಸಿಪಿಐ ಮಹಮ್ಮದ ಫಸಿಯುದ್ಧೀನ ಭಾಗಿಯಾಗಲಿದ್ದು, ವಿಶ್ವ ಭೂಮಿ ದಿನದ ಕುರಿತು ನ್ಯಾಯವಾದಿ…

Read More

ಎಕ್ಸಲಂಟ್ ಪಪೂ ಕಾಲೇಜಿನಲ್ಲಿ ನಡೆದ ಸೇತುಬಂಧ ಕಾರ್ಯಕ್ರಮದಲ್ಲಿ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಕ್ಕಳು ಎಷ್ಟು ಅಂಕಗಳನ್ನು ಪಡೆದರು ಎನ್ನುವುದಕ್ಕಿಂತ ಹೆತ್ತವರಿಗೆ ನೋವಾಗದಂತೆ ಹೇಗೆ ನಡೆದುಕೊಂಡರು ಎನ್ನುವುದು ಬಹು ಮುಖ್ಯವಾಗುತ್ತದೆ. ಒಂದು ಅಂಕ ಕಡಿಮೆ ಬಂದರೆ ಪರವಾಗಿಲ್ಲ, ಮುಂದಿನ ಬಾರಿ ಅದರ ಎರಡರಷ್ಟು ಅಂಕಗಳನ್ನು ಪಡೆದುಕೊಳ್ಳಬಹುದು. ಆದರೆ ಒಂದು ಬಾರಿ ಹೆತ್ತವರಿಗೆ ಸಂಕಟ ನೀಡಿದರೆ ಅದನ್ನು ಹತ್ತು ಜನ್ಮ ಎತ್ತಿದರೂ ತೀರಿಸುವುದಕ್ಕೆ ಸಾಧ್ಯವಿಲ್ಲ. ಹೀಗಾಗಿ ಮಕ್ಕಳು ಮಾಡುವ ಸಾಧನೆ ಹೇಗಿರಬೇಕು ಎಂದರೆ ಸಾಧನೆ ಮಾಡಿದ ಮಕ್ಕಳನ್ನು ನೋಡಿದವರು ಇಂಥ ಮಕ್ಕಳು ನಮ್ಮ ಹೊಟ್ಟೆಯಲ್ಲಿಯೂ ಹುಟ್ಟಬೇಕಿತ್ತು ಎಂದುಕೊಳ್ಳಬೇಕು ಎನ್ನುವ ಹಾಗಿರಬೇಕು ಎಂದು ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು.ನಗರದ ಎಕ್ಸಲಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ೨೦೨೫-೨೬ ನೇ ಸಾಲಿಗೆ ದಾಖಲಾತಿ ಪಡೆದುಕೊಂಡ ಪಿಯುಸಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಬ್ರಿಡ್ಜಕೋರ್ಸ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು; ಇಂದು ಮಕ್ಕಳಿಗೆ ಶಿಕ್ಷಣ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ಸದ್ಯ ಬೆಂಗಳೂರಿನ ಆರ್.ವ್ಹಿ. ಪಿ.ಯು.ಕಾಲೇಜಿನ ವಿದ್ಯಾರ್ಥಿಯಾಗಿರುವ ಸ್ವಯಮ್ ಸಂಗಮೇಶ ಗಡೇದ ಇವನು ಜೆಇಇ ಮುಖ್ಯಪರೀಕ್ಷೆಯಲ್ಲಿ ಶೇ ೯೯.೧೮ ಸಾಧನೆ ಮಾಡುವುದರ ಮೂಲಕ ಜೆಇಇ ಅಡ್ವಾನ್ಸ್ಗೆ ಅರ್ಹತೆ ಪಡೆದಿದ್ದಾನೆ.ವಿದ್ಯಾರ್ಥಿಯ ಸಾಧನೆಗೆ ಕುಟುಂಬ ವರ್ಗದವರು, ಪಟ್ಟಣದ ಜನತೆ ಹರ್ಷ ವ್ಯಕ್ತಪಡಿಸಿದ್ದಾರೆ.

Read More

ಕಾರ್ಖಾನೆ ಹಿತರಕ್ಷಣೆ ಕುರಿತು ರೈತರೊಂದಿಗೆ ನಡೆದ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಭರವಸೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಈ ಭಾಗದ ಅಸ್ಮಿತೆಯಾಗಿರುವ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಉಳಿಸಲು ಶಕ್ತಿಮೀರಿ ಪ್ರಯತ್ನ ಮಾಡುತ್ತಿದ್ದು, ಒಂದು ವಾರದಲ್ಲಿ ಮುಖ್ಯಮಂತ್ರಿಗಳ ಭೇಟಿಗೆ ದಿನಾಂಕ ನಿಗದಿ ಪಡಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ. ಬಿ. ಪಾಟೀಲ ಹೇಳಿದ್ದಾರೆ.ಸೋಮವಾರ ನಗರದಲ್ಲಿರುವ ಸಚಿವರ ಗೃಹ ಕಚೇರಿಯಲ್ಲಿ ಕಾರ್ಖಾನೆ ಹಿತರಕ್ಷಣೆ ಕುರಿತು ರೈತರೊಂದಿಗೆ ನಡೆದ ಸಭೆಯಲ್ಲಿ ಅವರು ಮಾತನಾಡಿದರು.ಸಕ್ಕರೆ ಕಾರ್ಖಾನೆ ಉಳಿವಿಗೆ ಎನ್.ಸಿ.ಡಿ.ಸಿ ಯೋಜನೆಯಡಿ ಸಾಲ ಒದಗಿಸುವಂತೆ ನಾನು ಈಗಾಗಲೇ ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದು, ಹಣಕಾಸು ಇಲಾಖೆ ಅಧಿಕಾರಿಗಳೊಂದಿಗೆ ಸತತ ಸಂಪರ್ಕದಲ್ಲಿದ್ದೇನೆ. ಆದ್ಯತೆಯ ಆಧಾರದ ಮೇಲೆ ಕಾರ್ಖಾನೆಯ ಮನವಿಯನ್ನು ಪರಿಗಣಿಸಿ ನೆರವು ನೀಡುವಂತೆ ಕೋರಿದ್ದೇನೆ. ಇನ್ನು ಮುಂದೆ ಸಚಿವರಾದ ಎಚ್. ಕೆ. ಪಾಟೀಲ, ಶಿವಾನಂದ ಪಾಟೀಲ, ಶಾಸಕ ಜೆ. ಟಿ. ಪಾಟೀಲ ಮತ್ತು ನಾನಾ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ (ಅ)ಪರಿಚಿತ ಓದುಗರ ಐದನೆಯ ಭೇಟಿ ಕಾರ್ಯಕ್ರಮ ರವಿವಾರ ಜರುಗಿತು.ಕಾರ್ಯಕ್ರಮದಲ್ಲಿ ವಿಶೇಷ ಆಹ್ವಾನಿತರಾಗಿ ಬಂದಿದ್ದ ಪ್ರೊ ಸಿದ್ದು ಸಾವಳಸಂಗ ಅವರು ಮಾತನಾಡುತ್ತಾ, ‘ಇಂದಿನ ಯುವಕರು ಬದುಕನ್ನು ಹಾಗೂ ಸಾಹಿತ್ಯವನ್ನು ಕಟ್ಟುವ ಗುರುತರ ಜವಾಬ್ದಾರಿಯನ್ನು ನಿರ್ವಹಿಸಬೇಕಾಗಿದೆ. ಸಾಹಿತ್ಯ ಆಸಕ್ತಿ ಕಡಿಮೆಯಾಗುತ್ತಿರುವ ಇಂದಿನ ದಿನದಲ್ಲಿ ಕನ್ನಡ ಸಾಹಿತ್ಯದ ಗ್ರಂಥಗಳನ್ನು ಓದುವವರ ಸಂಖ್ಯೆಯನ್ನು ವೃದ್ಧಿಸಬೇಕಾಗಿದೆ’ ಎಂದು ಅವರು ಹೇಳಿದರು.ವಿಜಯಪುರದ ಬಾರಾಕಮಾನಿನಲ್ಲಿ ನಡೆದ (ಅ)ಪರಿಚಿತ ಓದುಗರ ಐದನೆಯ ಭೇಟಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಮುಂಜಾನೆ ೧೦.೦೦ ಗಂಟೆಗೆ ಆಗಮಿಸಿದ ಸಾಹಿತ್ಯಸಕ್ತರು ಬಾರಾಕಮಾನ ಉದ್ಯಾನವನದಲ್ಲಿ ಅಲ್ಲಲ್ಲಿ ಕುಳಿತು ತಾವು ತಂದಿರುವ ಪುಸ್ತಕಗಳನ್ನು ಓದಿದರು. ಮಧ್ಯಾಹ್ನ ೧೨ ಗಂಟೆಗೆ ಕಾರ್ಯಕ್ರಮವನ್ನು ಪ್ರಾರಂಭ ಮಾಡಲಾಯಿತು. ಏಪ್ರಿಲ್ ೨೩ ರಂದು ‘ವಿಶ್ವ ಪುಸ್ತಕ ದಿನ’ದ ಪ್ರಯುಕ್ತ ‘ಉತ್ತಮ ಓದುಗ ಸ್ಪರ್ಧೆ’ ಆಯೋಜನೆ ಮಾಡಲಾಗಿತ್ತು. ಬಂದಿರುವಂತ ಸಾಹಿತ್ಯ ಆಸಕ್ತರು ತಾವು ಓದಿದ ಪುಸ್ತಕಗಳ ಕುರಿತು ಪರಿಚಯ ಹಾಗೂ ವಿಮರ್ಶೆ ಮಾಡಿದರು. ಆರು ಜನ ಈ ಚಟುವಟಿಕೆಯಲ್ಲಿ ತುಂಬ ಆಸಕ್ತಿಯಿಂದ ಭಾಗವಹಿಸಿದ್ದರು. ಭಾಗವಹಿಸಿದ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪ್ರತಿಯೊಬ್ಬರೂ ಲಿಂಗಪೂಜೆ, ದಾಸೋಹದ ಮಹತ್ವ ತಿಳಿದುಕೊಳ್ಳಬೇಕು. ಜೀವನದಲ್ಲಿ ಪುರಾಣ ಪ್ರವಚನಗಳಿಂದ ಮನಸ್ಸಿಗೆ ನೆಮ್ಮದಿ ಸಿಗುತ್ತದೆ ಎಂದು ಇಂಗಳೇಶ್ವರ ವಚನ ಶಿಲಾ ಮಂಟಪದ ಚನ್ನಬಸವ ಸ್ವಾಮೀಜಿ ಹೇಳಿದರು.ಪಟ್ಟಣದ ವಿರಕ್ತಮಠದಲ್ಲಿ ಬಸವಜಯಂತಿ ಅಂಗವಾಗಿ ಶನಿವಾರ ಸಂಜೆ ಮಠದ ವತಿಯಿಂದ ಹನ್ನೊಂದು ದಿನಗಳ ಕಾಲ ಹಮ್ಮಿಕೊಂಡಿರುವ ವಚನ ದರ್ಶನ ಪ್ರವಚನ ಪ್ರಾರಂಭೋತ್ಸವ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಇಲ್ಲಿನ ಮಠದಲ್ಲಿ ನಿರಂತರವಾಗಿ ದಾಸೋಹ ನಡೆಯುವಂತಾಗಬೇಕು.ಬಸವಣ್ಣನವರ ಜನ್ಮಸ್ಥಳ ಬಸವನವಾಗೇವಾಡಿಯಲ್ಲಿ ಬಸವ ಜಯಂತಿಯನ್ನು ಅದ್ಧೂರಿಯಾಗಿ ಆಚರಿಸಬೇಕು ಎಂದು ಹೇಳಿದರು.ಇಂದು ಮಕ್ಕಳಲ್ಲಿ ಸಂಸ್ಕಾರ ಕಡಿಮೆಯಾಗುತ್ತಿದೆ. ಪಾಲಕರು ಮಕ್ಕಳ ಕೈಗೆ ಮೊಬೈಲ್ ಕೊಡದೇ ಉತ್ತಮ ಸಂಸ್ಕಾರ ಕೊಡುವ ಅಗತ್ಯತೆ ಇದೆ ಎಂದು ಹೇಳಿದರು.ಪ್ರವಚನಕಾರ ಬಳೂಟಗಿಯ ಶಿವಕುಮಾರ ಸ್ವಾಮೀಜಿ ಮಾತನಾಡಿ, 12ನೇ ಶತಮಾನದಲ್ಲಿ ಬಸವಣ್ಣನವರು ಮೇಲು ಕೀಳು ಹೋಗಲಾಡಿಸಲು ಶ್ರಮಿಸಿದರು. ಶರಣರು ಸಂಸ್ಕಾರವಂತರಾಗಿ ಅದ್ಬುತವಾದ ಅನುಭವ ಮಂಟಪ ಕಟ್ಟಿದರು. ಇಲ್ಲಿನ ಸಿದ್ಧಲಿಂಗ ಶ್ರೀಗಳು ಮಕ್ಕಳಿಗೆ ಸಂಸ್ಕಾರ ಶಿಬಿರ ಆರಂಭಿಸುವ ಮೂಲಕ ಮಕ್ಕಳಲ್ಲಿ ನೈತಿಕ, ಆಧ್ಯಾತ್ಮಿಕ ಮೌಲ್ಯ ತಿಳಿಸುವ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ಮನಗೂಳಿ ಪಟ್ಟಣದ ಪಟ್ಟೀಕಂಥಿ ಹಿರೇಮಠದ ಗುರು ಮಹಾಂತೇಶ್ವರ ಸ್ವಾಮೀಜಿಯವರ ಪುಣ್ಯಸ್ಮರಣೆಯ ಅಮೃತ ಮಹೋತ್ಸವ , ತಪೋಭೂಷಣ ಶ್ರೀಗುರು ಸಂಗನಬಸವ ಶಿವಾಚಾರ್ಯ ಸ್ವಾಮೀಜಿಯವರ ೨೪ನೇ ಸಂಸ್ಮರಣೋತ್ಸವಯಂಗವಾಗಿ ಗ್ರಂಥ ಬಿಡುಗಡೆ, ಪಂಚಾಕ್ಷರಿಜಪಯಜ್ಞ, ಮೂರ್ತಿ ಪ್ರತಿಷ್ಠಾಪನೆ, ತುಲಾಭಾರ, ಸಿಲಿಕಾನ್ ಮೂರ್ತಿಗಳ ಶುಭಾಗಮನ, ಗುರುಮಹಾಂತೇಶ್ವರ ಪ್ರಶಸ್ತಿ ಪ್ರದಾನ ಸಮಾರಂಭ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಮಾ. ೩೦ ರಿಂದ ಏ.೨೭ ರವೆರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಮನಗೂಳಿ ಪಟ್ಟೀಕಂಥಿ ಹಿರೇಮಠ, ಬೆಂಗಳೂರಿನ ವಿಭೂತಿಪುರ ಮಠದ ಡಾ.ಮಹಾಂತಲಿಂಗ ಶಿವಾಚಾರ್ಯ ಸ್ವಾಮೀಜಿ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈಗಾಗಲೇ ಮಾ.೩೦ ರಿಂದ ಶ್ರೀಮಠದಲ್ಲಿ ಕಾರ್ಯಕ್ರಮಗಳು ಆರಂಭವಾಗಿವೆ. ಏ.೨೧ ರಂದು ಸಂಜೆ ೭ ಗಂಟೆಗೆ ೭೫ ಜನ ಮನಗೂಳಿ ಪಟ್ಟಣ ಪಂಚಾಯಿತಿಯ ಪೌರಕಾರ್ಮಿಕರಿಗೆ ಗುರುರಕ್ಷೆ ಕಾರ್ಯಕ್ರಮ, ಏ.೨೨ ರಂದು ಸಂಜೆ ೭ ಗಂಟೆಗೆ ೭೫ ಜನ ಕಲಾವಿದರಿಗೆ ಗುರುರಕ್ಷೆ ಕಾರ್ಯಕ್ರಮ ಜರುಗಲಿದೆ. ಏ.೨೩ ರಂದು ಬೆಳಗ್ಗೆ ೬ ಗಂಟೆಗೆ ಜಗದ್ಗುರು ರೇಣುಕಾಚಾರ್ಯ ಮೂರ್ತಿ, ಶ್ರೀಗುರು ಸಂಗನಬಸವ…

Read More

ಹಿರಿಯ ಪತ್ರಕರ್ತ ಬಸವರಾಜ ನಂದಿಹಾಳ ಸೇರಿದಂತೆ ವಿವಿಧ ಕ್ಷೇತ್ರದ ಮಹನೀಯರಿಗೆ ರಾಜ್ಯಮಟ್ಟದ ನಂದಿಸಿರಿ ಪ್ರಶಸ್ತಿ ಪ್ರದಾನ ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಇಂದಿನ ಆಧುನಿಕ ಜಗತ್ತಿನಲ್ಲಿ ಎಲ್ಲ ಸೌಕರ್ಯಗಳಿದ್ದರೂ ಜನರಲ್ಲಿ ನೆಮ್ಮದಿ ಕಾಣುತ್ತಿಲ್ಲ. ಜೀವನದಲ್ಲಿ ಆಧ್ಯಾತ್ಮಿಕತೆಯಿಂದ ಮಾತ್ರ ನೆಮ್ಮದಿ ಕಾಣಲು ಸಾಧ್ಯ ಎಂದು ದೇವರಹಿಪ್ಪರಗಿ ಶಾಸಕ ಭೀಮನಗೌಡ(ರಾಜುಗೌಡ) ಪಾಟೀಲ ಅಭಿಪ್ರಾಯ ಪಟ್ಟರು.ತಾಲೂಕಿನ ಶರಣಕ್ಷೇತ್ರ ವಡವಡಗಿಯ ನಂದಿಮಠದ ಗುರುವೀರಸಿದ್ಧ ಶಿವಯೋಗಿಗಳ ೭೫ನೇ ಜಾತ್ರಾಮಹೋತ್ಸವ ಹಾಗೂ ಲಿಂ.ಮಲ್ಲಿಕಾರ್ಜುನ ಸ್ವಾಮೀಜಿಗಳ ತೃತೀಯ ಪುಣ್ಯಾರಾಧನೆಯಂಗವಾಗಿ ಶನಿವಾರ ಸಂಜೆ ಹಮ್ಮಿಕೊಂಡಿದ್ದ ಶಿವಾನುಭವ ಚಿಂತನ ಹಾಗೂ ರಾಜ್ಯಮಟ್ಟದ ನಂದಿಸಿರಿ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಪಾಶ್ಚಾತ್ಯದೇಶಗಳಲ್ಲಿ ಮಠ-ಮಾನ್ಯಗಳನ್ನು ನಾವು ಕಾಣುವುದಿಲ್ಲ. ಭಾರತ ದೇಶದಲ್ಲಿ ಮಾತ್ರ ಮಠ-ಮಾನ್ಯಗಳನ್ನು ಕಾಣುತ್ತೇವೆ. ಮಠ-ಮಾನ್ಯಗಳು ಆಧ್ಯಾತ್ಮ ಶಿಕ್ಷಣ ಜನರಿಗೆ ಮುಟ್ಟಿಸುವ ಕಾರ್ಯ ಮಾಡುವದರಿಂದ ನೆಮ್ಮದಿ ಸಿಗುತ್ತಿದೆ. ಅನೇಕ ಮಠಗಳಿಂದ ಜನರ ಸಮಸ್ಯೆಗಳಿಗೆ ಪರಿಹಾರ ಸಹ ಸಿಗುವದನ್ನು ಕಾಣುತ್ತೇವೆ. ಇಲ್ಲಿನ ನಂದಿಮಠವು ಭಕ್ತರಿಗೆ ಸಾಕಷ್ಟು ಜನರ ಸಮಸ್ಯೆಗಳಿಗೆ ಪರಿಹಾರ ನೀಡುವ ಮೂಲಕ ಈ ಭಾಗದಲ್ಲಿ ಶ್ರೀಮಠವು…

Read More

ಉದಯರಶ್ಮಿ ದಿನಗಳು ವಿಜಯಪುರ: ಇತ್ತೀಚೆಗೆ ಮಂಗಳೂರು ನಗರದಲ್ಲಿ ಆಯೋಜಿಸಿದ್ದ ಕಥಾ ಬಿಂದು ಸಂಭ್ರಮ ಹಾಗೂ ಕಟಿಲ್ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಆಯೋಜಿಸಿದ ಧಾರ್ಮಿಕ ಹಾಗೂ ಸಂಸ್ಕೃತಿಕ ಕಾರ್ಯಕ್ರಮದಲ್ಲಿ ನಮ್ಮ ವಿಜಯಪುರದ ನಾಟ್ಯ ಕಲಾ ಅಕಾಡೆಮಿಯ ಮಕ್ಕಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಎಂದು ಅಕಾಡೆಮಿಯ ಗುರುಗಳು ವಿದುಶಿ ಲಕ್ಷ್ಮೀ ತೇರದಾಳಮಠ ಹರ್ಷ ವ್ಯಕ್ತಪಡಿಸಿದ್ದಾರೆ.

Read More