Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಶ್ರೀಜಗದ್ಗುರು ರೇಣುಕಾಚಾರ್ಯರ ಕುರಿತಾದ ಸಮಗ್ರ ಮಾಹಿತಿಯನ್ನು ಶಾಲಾ ಪಠ್ಯದಲ್ಲಿ ಸೇರಿಸಬೇಕು ಎಂದು ಜಡಿಮಠದ ಜಡಿಸಿದ್ಧೇಶ್ವರಶ್ರೀ ಹೇಳಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯದಲ್ಲಿ ತಾಲ್ಲೂಕು ಆಡಳಿತದ ಅಡಿಯಲ್ಲಿ ಬುಧವಾರ ಜರುಗಿದ ಜಗದ್ಗುರು ರೇಣುಕಾಚಾರ್ಯ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ರೇಣಕಾಚಾರ್ಯರು ಪರಶಿವನ ಪಂಚಬ್ರಹ್ಮ ಮುಖದಿಂದ ಆವಿರ್ಭವಿಸಿದ ಪಂಚಾಚಾರ್ಯರರಲ್ಲಿ ಪ್ರಥಮ ಗಣೇಶ್ವರರಾಗಿದ್ದಾರೆ. ಮಾನವ ಧರ್ಮಕ್ಕೆ ಜಯವಾಗಲಿ, ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂಬ ಮೌಲ್ಯವನ್ನು ಜಗಕ್ಕೆ ಸಾರಿದರು ಎಂದರು.ತಹಶೀಲ್ದಾರ ಪ್ರಕಾಶ ಸಿಂದಗಿ, ತಾಲ್ಲೂಕು ನಿವೃತ್ತ ನೌಕರರ ಸಂಘದ ಅಧ್ಯಕ್ಷ ಸಿ.ಕೆ.ಕುದರಿ, ಜಂಗಮಾಭಿವೃದ್ಧಿ ಸಂಘದ ಅಧ್ಯಕ್ಷ ಸೋಮಶೇಖರ ಹಿರೇಮಠ, ಬಸಯ್ಯ ಮಲ್ಲಿಕಾರ್ಜುನಮಠ ಮಾತನಾಡಿ, ಇಂದು ಸಮಾಜದ ಅಸಮಾನತೆಗಳನ್ನು ಹೋಗಲಾಡಿಸಲು ರೇಣುಕಾಚಾರ್ಯರು ಸೇರಿದಂತೆ ಎಲ್ಲ ಮಹನೀಯರ ಉದಾತ್ತ ವಿಚಾರಗಳನ್ನು ಅರಿಯಬೇಕಾಗಿದೆ ಎಂದರು.ಇದೇ ಸಂದರ್ಭದಲ್ಲಿ ರೇಣುಕರ ಭಾವಚಿತ್ರಕ್ಕೆ ಶಾಸ್ತ್ರೋಕ್ತ ಪೂಜೆ, ಪುಷ್ಪವೃಷ್ಠಿ ನೆರವೇರಿಸಿ ಮಂಗಳಾರತಿಯೊಂದಿಗೆ ಪ್ರಸಾದ ವಿತರಿಸಲಾಯಿತು.ಉಪತಹಶೀಲ್ದಾರ ಸುರೇಶ ಮ್ಯಾಗೇರಿ, ತಾಲ್ಲೂಕು ಕಸಾಪ ಅಧ್ಯಕ್ಷ ಜಿ.ಪಿ.ಬಿರಾದಾರ, ಬಂಡೆಪ್ಪಗೌಡ ಬಿರಾದಾರ(ದಿಂಡವಾರ), ಕೆ.ಎಸ್. ಕೋರಿ, ಗಣೇಶ ಹಿರೇಮಠ, ಗಂಗಾಧರ ಬಬಲೇಶ್ವರ, ಮಹೇಶ…
ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಅಂಗನವಾಡಿ ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಅನಾವರಣಗೊಳಿಸಲು ‘ಬಾಲಮೇಳ’ ಒಂದು ಉತ್ತಮ ವೇದಿಕೆಯಾಗಿದೆ ಎಂದು ಉಪನಿರ್ದೇಶಕ ಕೆ.ಕೆ.ಚವ್ಹಾಣ ತಿಳಿಸಿದರು.ತಾಲ್ಲೂಕಿನ ಕೋರವಾರ ಗ್ರಾಮದ ಎಂಪಿಎಸ್, ಕೆಜಿಎಸ್ ಪ್ರಾಥಮಿಕ ಶಾಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಿಂದಗಿ ಹಾಗೂ ಅಜೀಂ ಪ್ರೇಮ್ಜೀ ಫೌಂಡೇಶನ್ ಸಹಯೋಗದಲ್ಲಿ ಮಂಗಳವಾರ ಜರುಗಿದ ಬಾಲಮೇಳಕ್ಕೆ ಚಾಲನೆ ನೀಡಿ ಮಾತನಾಡಿದರು.ಬಾಲಮೇಳ ಆಯೋಜನೆಯಿಂದ ಮಕ್ಕಳ ಸರ್ವಾಂಗೀಣ ಬೆಳವಣಿಗೆಯಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದರು.ಸಿಡಿಪಿಓ ಎಸ್.ಎನ್.ಹಿರೇಮಠ ಮಾತನಾಡಿ, ಅಂಗನವಾಡಿ ಕೇಂದ್ರಗಳಲ್ಲಿ ಮಕ್ಕಳಿಗೆ ಬೌದ್ಧಿಕ, ಶಾರೀರಕ, ಮಾನಸಿಕ, ಕ್ರಿಯಾತ್ಮಕ ಚಟುವಟಿಕೆಗಳು ಸೇರಿದಂತೆ ನೈತಿಕ ಮೌಲ್ಯಗಳ ಕುರಿತು ತಿಳಿಸಿಕೊಡಲಾಗುವದು. ಆದ್ದರಿಂದ ಎಲ್ಲಾ ಪೋಷಕರು ತಮ್ಮ ಮಕ್ಕಳನ್ನು ಅಂಗನವಾಡಿ ಕೇಂದ್ರಗಳಲ್ಲಿ ದಾಖಲಿಸಲು ತಿಳಿಸಿದರು.ಗ್ರಾಮದ ಎಲ್ಲ ಅಂಗನವಾಡಿ ಮಕ್ಕಳು ಚಿತ್ರಕಲೆ, ಕಿರುನಾಟಕ, ಸಂಗೀತ, ನೃತ್ಯ, ವೇಷಭೂಷಣ ಸೇರಿದಂತೆ ವಿವಿಧ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಉತ್ಸುಕತೆಯಿಂದ ಭಾಗವಹಿಸಿದರು.ಇದೇ ಸಂದರ್ಭದಲ್ಲಿ ಮಕ್ಕಳ ಭಾಷಾ, ದೈಹಿಕ, ಬೌದ್ಧಿಕ, ಕ್ರಿಯಾತ್ಮಕ, ಸಾಮಾಜಿಕ ಹಾಗೂ ಭಾವನಾತ್ಮಕ ಹಂತದ ಬೆಳವಣಿಗೆಯ ಕುರಿತಾದ ಮಾಹಿತಿ ಹಾಗೂ ಪ್ರದರ್ಶನಕ್ಕಾಗಿ…
ಉದಯರಶ್ಮಿ ದಿನಪತ್ರಿಕೆ ಇಂಡಿ: ನೂರು ದೇವಾಲಯ ಕಟ್ಟೊದಕ್ಕಿಂತ ಒಂದು ಶಾಲೆ ಕಟ್ಟೊದು ಸೂಕ್ತ, ಸಮಾಜದೊಳಗೆ ಏನಾದರೂ ಒಳ್ಳೆಯದು ಮಾಡಬೇಕಂದರೆ ಅವಮಾನ, ಅಪಮಾನ, ನಿಂದನೆ ಎಲ್ಲವೂ ಮೆಟ್ಟಿ ನಿಂತಾಗ ಸಾಧಕನಾಗಲು ಸಾಧ್ಯ ಎಂದು ಶಿರಶ್ಯಾಡ ಹಿರೇಮಠದ ಷ.ಬ್ರ.ಅಭಿನವ ಮುರಘೇಂದ್ರ ಶಿವಾಚಾರ್ಯರು ಮಂಗಳವಾರ ಹೇಳಿದರು.ತಾಲ್ಲೂಕಿನ ಹಿರೇರೂಗಿ ಗ್ರಾಮದ ಶಾಂತಿ ನಗರದಲ್ಲಿರುವ ಶ್ರೀ ಸಿದ್ದೇಶ್ವರ ಹಿರಿಯ ಪ್ರಾಥಮಿಕ ಶಾಲೆಯ 15 ನೇ ವಾರ್ಷಿಕೋತ್ಸವ ಹಾಗೂ ಬಿಳ್ಕೊಡುವ ಸಮಾರಂಭದಲ್ಲಿ ಆಶೀರ್ವಚನ ನೀಡಿ ಮಾತನಾಡಿದರು.ಸಾಹಿತಿ, ಶಿಕ್ಷಕ ದಶರಥ ಕೋರಿ ಉಪನ್ಯಾಸ ನೀಡಿ ಮಾತನಾಡಿದ ಅವರು, ಇಂದಿನ ಶಾಲಾ ಕಾಲೇಜುಗಳಲ್ಲಿ ಕಲಿಯುತ್ತಿರುವ ಮಕ್ಕಳಿಗೆ ಬರೀ ಓದು, ಓದು,ಓದು ಎನ್ನುವ ಸ್ಪರ್ಧೆಗಿಂತ ಮಕ್ಕಳಿಗೆ ಸ್ವಾವಲಂಬನೆಯಿಂದ ಸಮಾಜದಲ್ಲಿ ಬದುಕಲು ಹಾಗೂ ಜೀವನದಲ್ಲಿ ಬರುವ ಹಲವಾರು ಕಠಿಣ ಸವಾಲುಗಳನ್ನು ಎದುರಿಸುವಲ್ಲಿ ಬೇಕಾದ ಕೌಶಲ್ಯಗಳನ್ನು ಕಲಿಸಬೇಕು ಎಂದರು.ಪ್ರಸ್ತುತ ಭಾರತ ದೇಶದ ಜನಸಂಖ್ಯೆ 1. 40 ಕೋಟಿಗಿಂತ ಮಿತಿಮಿರಿದೆ ಇದರೊಂದಿಗೆ ಸಹಜವಾಗಿ ಕರ್ನಾಟಕದ ಜನಸಂಖ್ಯೆ ಕೂಡಾ ಕೋಟಿ, ಕೋಟಿ ಸಂಖ್ಯೆಯಲ್ಲಿ ಸಾಕಷ್ಟು ಮಿತಿಮಿರಿದೆ ಈ ನಿಟ್ಟಿನಲ್ಲಿ ಭಾರತದ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಹೋಳಿ ಹಬ್ಬಕ್ಕೆ ಸೌಹಾರ್ಧ ಬೆಸೆಯುವ ಶಕ್ತಿ ಇದ್ದು ಎಲ್ಲರೂ ಸಾಮರಸ್ಯದಿಂದ ಹೋಳಿ ಮತ್ತು ರಮಜಾನ ಹಬ್ಬ ಆಚರಿಸಬೇಕು ಎಂದು ಇಂಡಿ ಪಟ್ಟಣ ಸಿ.ಪಿ.ಐ ಪ್ರದೀಪ ಬಿಸೆ ಹೇಳಿದರು.ಪಟ್ಟಣದ ಶಹರ ಪೋಲಿಸ ಠಾಣೆಯಲ್ಲಿ ಹೋಳಿ ಮತ್ತು ರಮಜಾನ ಕುರಿತು ನಡೆದ ಶಾಂತಿ ಸಭೆಯಲ್ಲಿ ಮಾತನಾಡಿದರು.ಜಾತಿ,ಮತ,ಪಂಥ ಎನ್ನದೇ ಎಲ್ಲರೂ ಏಕತೆಯಿಂದ ಹೋಳಿ ಮತ್ತು ರಮಜಾನ ಆಚರಿಸುವ ಪರಂಪರೆ ನಡೆದುಕೊಂಡು ಬಂದಿದ್ದು ಅದನ್ನು ಮುಂದಿನ ಪೀಳಿಗೆಗೆ ಪರಿಚಯಿಸಬೇಕು ಎಂದರು.ಪುರಸಭೆ ಅಧ್ಯಕ್ಷ ಲಿಂಬಾಜಿ ರಾಠೋಡ, ಪುರಸಭೆ ಮಾಜಿ ಅಧ್ಯಕ್ಷ ಯಮನಾಜಿ ಸಾಳುಂಕೆ, ಸದಸ್ಯ ದೇವೆಂದ್ರ ಕುಂಬಾರ, ಕರವೇ ಅಧ್ಯಕ್ಷ ಬಾಳು ಮುಳಜಿ, ಅಯೂಬ ನಾಟಿಕಾರ,ರೈಸ್ ಅಷ್ಟೆಕರ, ಪ್ರಾದ್ಯಾಪಕ ವಿಜು ರಾಠೋಡ ಮಾತನಾಡಿ ಹೋಳಿ ಮತ್ತು ರಮಜಾನ ದೇಶದಲ್ಲಿ ಪ್ರಸಿದ್ಧಿ ಪಡೆದ ಹಬ್ಬಗಳು. ಎಲ್ಲರೂ ಸೇರಿ ಹಬ್ಬ ಆಚರಿಸುವ ಮೂಲಕ ಸಂಸ್ಕೃತಿಯನ್ನು ಉಳಿಸಬೇಕು, ಎಲ್ಲರೂ ಏಕತೆಯಿಂದ ರಂಗಿನಾಟದಲ್ಲಿ ಭಾಗವಹಿಸಬೇಕು, ಯಾವುದೇ ಅಹಿತಕರ ಘಟನೆ ನಡೆಯದಂತೆ ಹಬ್ಬ ಆಚರಿಸಲು ಸಹಕರಿಸಬೇಕು ಎಂದರು.ಚಂದ್ರಶೇಖರ ಹೊಸಮನಿ, ಸಿದ್ದು ಕಟ್ಟಿಮನಿ,…
ಉದಯರಶ್ಮಿ ದಿನಪತ್ರಿಕೆ ಇಂಡಿ: ಜಗದ್ಗುರು ರೇಣುಕಾಚಾರ್ಯರರ ತತ್ವಗಳು ಇಂದು ಸಮಾಜದ ಸಮಾನತೆ ಧಾರ್ಮಿಕ ಸಮರತೆ ಮತ್ತು ಆಧ್ಯಾತ್ಮಿಕ ಪ್ರಗತಿಗೆ ಆಧುನಿಕ ದಾರಿದೀಪದಂತಿವೆ ಎಂದು ಜಂಗಮ ಸಮಾಜದ ಗೌರವಾಧ್ಯಕ್ಚ ನ್ಯಾಯವಾದಿ ಶಾಂತು ನಿಂಬರಗಿಮಠ ಹೇಳಿದರು.ಅವರು ಪಟ್ಟಣದ ಜಗದ್ಗುರು ರೇಣುಕಾಚಾರ್ಯರರ ವೃತದಲ್ಲಿ ರೇಣುಕಾಚಾರ್ಯರರ ಜಯಂತಿ ಕುರಿತು ನಡೆದ ಸಭೆಯಲ್ಲಿ ಮಾತನಾಡಿದರು.ಶ್ರೀ ಶಾಂತೇಶ್ವರ ದೇವಸ್ಥಾನ ಸಮಿತಿ ಅಧ್ಯಕ್ಷ ಕಾಸುಗೌಡ ಬಿರಾದಾರ ಮತ್ತು ಶೀಲವಂತ ಉಮರಾಣಿ ಮಾತನಾಡಿ ರೇಣೂಕಾಚಾರ್ಯರರ ಶ್ವೇತ ತತ್ವ ಶಾಸ್ತçವನ್ನು ಜನ ಸಾಮಾನ್ಯರಿಗೆ ಪರಿಚಯಿಸಿ ಅದನ್ನು ಜೀವನದ ಭಾಗವನ್ನಾಗಿ ಮಾಡಿದ ಮಹಾನ್ ಶರಣ, ಅವರ ಬದುಕು ಮತ್ತು ತತ್ವಗಳು ಕನ್ನಡ ಸಮಾಜಕ್ಕೆ ಮಾತ್ರವಲ್ಲ ವಿಶ್ವಕ್ಕೆ ಪ್ರಾಮುಖ್ಯತೆ ಹೊಂದಿವೆ ಎಂದರು.ಸೋಮು ನಿಂಬರಗಿಮಠ, ಬಸಯ್ಯ ಪತ್ರಿಮಠ, ಎ.ಎಸ್.ಐ ರೋಹಿತ ಹಿರೇಮಠ, ಅಜೀತ ಹಿರೇಮಠ, ಸುಧೀರ ಕರಕಟ್ಟಿ, ಯಮನಾಜಿ ಸಾಳುಂಕೆ, ಸತೀಶ ಕುಂಬಾರ, ಸಂಜುದಾದಾ ಚವ್ಹಾಣ, ವಿಜು ಚವ್ಹಾಣ, ಧರ್ಮರಾಜ ವಾಲಿಕಾರ, ಮಡು ಪ್ರಧಾನಿ, ಉದಯ ಹಿರೇಮಠ, ಶಾಂತಯ್ಯಹಿರೇಮಠ, ಶ್ರೀಶೈಲ ಗಾಳಿಮಠ ಮತ್ತಿತರಿದ್ದರು.ತಾಲೂಕಾ ಆಡಳಿತ ವತಿಯಿಂದ ಮಿನಿ ವಿಧಾನಸೌಧದಲ್ಲೂ…
ಉದಯರಶ್ಮಿ ದಿನಪತ್ರಿಕೆ ಇಂಡಿ: ಮಹಿಳೆಯರಿಗೆ ಸಾಕಷ್ಟು ಸವಾಲುಗಳಿರುತ್ತವೆ. ಕೃಷಿಯಲ್ಲಿ ಇಂದು ಪುರುಷರಷ್ಟೇ ಮಹಿಳೆಯೂ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದು, ಕುಟುಂಬ ನಿರ್ವಹಣೆ ಜೊತೆಗೆ ಕೃಷಿಯ ಕೆಲಸಗಳಲ್ಲೂ ಎದುರಾಗುವ ಸವಾಲುಗಳನ್ನು ಸಮರ್ಥವಾಗಿ ಎದುರಿಸಬೇಕು ಎಂದು ಕೆವಿಕೆ ಮುಖ್ಯಸ್ಥ ಡಾ. ಶಿವಶಂಕರಮೂರ್ತಿ ಹೇಳಿದರು.ಪಟ್ಟಣದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ಇಲಾಖೆ, ಆತ್ಮಾ ಇಂಡಿ ಇವರ ಸಹಯೋಗದೊಂದಿಗೆ “ಅಂತರಾಷ್ಟ್ರೀಯ ಮಹಿಳಾ ದಿನ”ಹಾಗೂ ಕಿಸಾನ ಗೋಷ್ಠಿ ಕಾರ್ಯಕ್ರಮದಲ್ಲಿ ಮಾತನಾಡಿದರು.ಉಪ ಯೋಜನಾ ನಿರ್ದೆಶಕರು ಆತ್ಮಾ ಎಸ್. ಕೆ. ಬಿರಾದಾರ ಮಾತನಾಡಿ ಮಹಿಳೆಯರು ತಮ್ಮ ಹಕ್ಕುಗಳನ್ನು ಸಂರಕ್ಷಿಸುವುದರ ಜತೆಗೆ ಕರ್ತವ್ಯದ ಜಾಗೃತಿ ಪಡೆಯುವದು ಕೂಡ ಅವಶ್ಯಕ ಕೃಷಿ ಕ್ಷೇತ್ರದಲ್ಲಿ ಮಹಿಳೆ ಪುರುಷನಷ್ಟೆ ಮುಖ್ಯ ಪಾತ್ರ ವಹಿಸಬಲ್ಲಳು ಎಂಬುದು ಎಲ್ಲರಲ್ಲೂ ಮೂಡಿ ಬರಬೇಕಾಗಿದೆ ಎಂದರು.ಡಾ.ಪ್ರೇಮ ಚಂದ್ ಯು. ಅಧ್ಯಕ್ಷರು ಕೃಷಿಕ ಸಮಾಜದ ಶ್ರೀಮತಿ ದಾನಮ್ಮಗೌಡತಿ, ನಿವೃತ್ತಪ್ರಧಾನ ವ್ಯವಸ್ಥಾಪಕರು, ಎಸ್.ಬಿ.ಐ. ಬ್ಯಾಂಕ್, ಮುಕುಂದ್ ಕಾಂಬಳೆ, ಅಧ್ಯಕ್ಷರು, ಶ್ರೀ ಸತ್ಯ ಸಾಯಿ ಸೇವಾ ಸಮಿತಿ, ಇಂಡಿ ಶ್ರೀಮತಿ ಗಂಗಾಬಾಯಿ ಗಲಗಲಿಮಾತನಾಡಿದರು.ಮಹಿಳಾ ಸಾಧಕರಾದ ಅಧ್ಯಕ್ಷರು, ಶ್ರೀ…
ಮುಖ್ಯಮಂತ್ರಿಗಳಿಗೆ ಮಾಧ್ಯಮ ಲೋಕದ ನೂತನ ಪುಸ್ತಕ ಅರ್ಪಿಸಿದ ಕೆರುಡಬ್ಲೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಅಮೃತ ಸ್ವಾತಂತ್ರ್ಯೋತ್ಸವ ಸಂದರ್ಭದಲ್ಲಿ ಮಾಧ್ಯಮದ ಹಿರಿಯ ಪತ್ರಕರ್ತರ ಮನೆಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವೇ ಭೇಟಿ ನೀಡಿ ಕುಟುಂಬಸ್ಥರ ಸಮ್ಮುಖದಲ್ಲಿ ಹಿರಿಯರನ್ನು ಗೌರವಿಸಿರುವುದು ಅಭಿನಂದನಾರ್ಹವಾದದ್ದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರತಿಕ್ರಿಯಿಸಿದರು.ಹಿರಿಯ ಪತ್ರಕರ್ತರುಗಳ ಮನೆಗೆ ಭೇಟಿ ನೀಡಿ ಕೆಯುಡಬ್ಲೂಜೆ ಗೌರವ ನೀಡಿದ್ದಲ್ಲದೆ, ಅವರ ಅನುಭವ ಮತ್ತು ಅಭಿಪ್ರಾಯಗಳನ್ನು ದಾಖಲೀಕರಣ ಮಾಡಿರುವ ವಿಷಯವನ್ನು ವಿಧಾನಸೌಧದಲ್ಲಿ ಮುಖ್ಯಮಂತ್ರಿಗಳ ಗಮನಕ್ಕೆ ತಂದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರು, ಈ ಬಗ್ಗೆ ಪುಸ್ತಕವನ್ನು ಹೊರತಂದಿರುವುದಾಗಿ ಅವರಿಗೆ ‘ ಮಾಧ್ಯಮ ಲೋಕದ ಅಮೃತ ಬೀಜ’ ಪುಸ್ತಕದ ಪ್ರತಿಯನ್ನು ನೀಡಿದರು.ಪುಸ್ತಕದಲ್ಲಿದ್ದ ಮೊದಲ ಹೆಸರುಗಳು ಕಲ್ಲೆ ಶಿವೋತ್ತಮರಾವ್ ಮತ್ತು ಟಿಜೆಎಸ್ ಜಾರ್ಜ್ ಅವರದು. ಇದನ್ನು ನೋಡಿದ ಸಿಎಂ, ಇವರಿಗೆಲ್ಲ ತೊಂಬತ್ತು ವರ್ಷ ದಾಟಿರಬೇಕಲ್ವಾ? ಈಗ ಹೇಗಿದ್ದಾರೆ? ಎಂದು ಕುತೂಹಲದಿಂದ ಕೇಳಿ ತಿಳಿದುಕೊಂಡರು. ಆ ಕಾಲಘಟ್ಟದ ಹಿರಿಯರುಗಳ ಅನುಭವ…
ರಾಜ್ಯಪಾಲರಿಗೆ ಬಿಜೆಪಿ-ಜೆಡಿಎಸ್ ಶಾಸಕರ ದೂರು | ಅನುಷ್ಠಾನ ಸಮಿತಿ ಅಸಂವಿಧಾನಿಕ | ರಾಜಕೀಯ ಆಧಾರದ ಮೇಲೆ ರಚನೆ | ರಾಜ್ಯದ ಬೊಕ್ಕಸಕ್ಕೆ ಅನಗತ್ಯ ಹೊರೆ ಬೆಂಗಳೂರು: ಕಾಂಗ್ರೆಸ್ ಕಾರ್ಯಕರ್ತರು ಮತ್ತು ನಾಯಕರು ಮುಖ್ಯಸ್ಥರಾಗಿರುವ ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ರಾಜ್ಯ, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅನುಷ್ಠಾನ ಸಮಿತಿ ಅಸಂವಿಧಾನಿಕವಾಗಿದ್ದು, ಅವುಗಳನ್ನು ರದ್ದುಗೊಳಿಸಬೇಕು ಎಂದು ಪ್ರತಿಪಕ್ಷಗಳಾದ ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಬುಧವಾರ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ಸಲ್ಲಿಸಿದರು.ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಒಳಗೊಂಡಿರುವ ಈ ಸಮಿತಿಗಳನ್ನು ಸಂಪೂರ್ಣವಾಗಿ ರಾಜಕೀಯ ಆಧಾರದ ಮೇಲೆ ರಚನೆ “ಅಸಂವಿಧಾನಿಕ” ಮಾತ್ರವಲ್ಲದೇ, ರಾಜ್ಯದ ಬೊಕ್ಕಸಕ್ಕೆ ಅನಗತ್ಯ ಹೊರೆಯಾಗಿದೆ ಎಂದು ಹೇಳಿದರು.ಈ ವಿಚಾರವಾಗಿ ವಿಧಾನಸೌಧದ ಹೊರಗೆ ಪ್ರತಿಭಟನೆ ನಡೆಸಿದ ಬಿಜೆಪಿ, ಜೆಡಿಎಸ್ ಶಾಸಕರು ಎರಡನೇ ದಿನವೂ ವಿಧಾನಸೌಧದ ಕಲಾಪಕ್ಕೆ ಅಡ್ಡಿಪಡಿಸಿದರು. ನಂತರ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಜೆಡಿಎಸ್ ನಾಯಕ ಸಿ.ಬಿ.ಸುರೇಶ್ ಬಾಬು ಮತ್ತಿತರರ ನೇತೃತ್ವದಲ್ಲಿ…
ವಿಜಯಪುರದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಶಕೀಲ್ ಬಾಗಮಾರೆ ನೇತೃತ್ವದ ನಿಯೋಗದಿಂದ ಜಿಲ್ಲಾಧಿಕಾರಿಗಳ ಭೇಟಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮಾಜದಲ್ಲಿ ಶಾಂತಿ ಕದಡುವ ರೀತಿಯಲ್ಲಿ ಭಾಷಣ, ಹೇಳಿಕೆ ನೀಡುವವರ ಮೇಲೆ ಸ್ವಯಂ ಪ್ರೇರಿತ ದೂರು ದಾಖಲಿಸುವುದು ಸೇರಿದಂತೆ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವಿಜಯಪುರ ಜಿಲ್ಲಾಧ್ಯಕ್ಷ ಶಕೀಲ್ ಬಾಗಮಾರೆ ನೇತೃತ್ವದ ನಿಯೋಗ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಲಿಖಿತ ಮನವಿ ಸಲ್ಲಿಸಿತು.ಈ ವಿಷಯದ ಕುರಿತು ವಿವರಣೆ ನೀಡಿದ ಶಕೀಲ್ ಬಾಗಮಾರೆ, ಸಮಾಜದಲ್ಲಿ ಶಾಂತಿ ಬಹುಮುಖ್ಯ, ಆದರೆ ಇತ್ತೀಚಿನ ದಿನಗಳಲ್ಲಿ ಕೆಲವೇ ಕೆಲವು ವ್ಯಕ್ತಿಗಳು ಶಾಂತಿ ಹಾಗೂ ಸಹೋದರತೆಗೆ ಭಂಗ ತರುವ ಕೆಲಸ ಮಾಡುತ್ತಿದ್ದಾರೆ, ತಮ್ಮ ಸ್ವಾರ್ಥಕ್ಕಾಗಿ ದ್ವೇಷ ಬಿತ್ತುತ್ತಿರುವುದು ಆಘಾತಕಾರಿ ಸಂಗತಿ. ವಿಜಯಪುರ ಶರಣರ, ಸೂಫಿಗಳ ಪವಿತ್ರ ತಪೋಭೂಮಿ, ಶ್ರೀ ಸಿದ್ದೇಶ್ವರ ಸ್ವಾಮೀಜಿಗಳು ನಡೆದಾಡಿದ ಪಾವನ ಭೂಮಿ. ಇಂತಹ ಪವಿತ್ರ ಭೂಮಿಯಲ್ಲಿ ಶಾಂತಿ ಕದಡುವ ನಿಟ್ಟಿನಲ್ಲಿ ಕೆಲವು ಶಕ್ತಿಗಳು ಪ್ರಯತ್ನಿಸುತ್ತಿವೆ,ಧರ್ಮಗಳ ನಡುವೆ ವಿಭಜನೆ ಮೂಡಿಸಲು ಮತ್ತು ಸಮಾಜದಲ್ಲಿ ದ್ವೇಷ ಸೃಷ್ಟಿಸಲು…
ಕೋಲಾರ ಪಟ್ಟಣ ಪಂಚಾಯಿತಿ 2025-26ನೇ ಸಾಲಿನ ಸಾಮಾನ್ಯ ಸಭೆ ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದ ನಿವಾಸಿಗಳು ಕಳೆದ ಸುಮಾರು 30 ವರ್ಷಗಳ ಹಿಂದೆ ಮನೆ ಕಟ್ಟಿಕೊಂಡಿದ್ದಾರೆ. ಈಗ ಇ ಸ್ವತ್ತು ಉತಾರಿಗೆ ಕಟ್ಟಡ ಪರವಾನಿಗೆ ಕೇಳುತ್ತಿರುವುದು ಸಮಂಜಸವಲ್ಲ. ಮುಳುಗಡೆ ಗ್ರಾಮವಾಗಿರುವುದರಿಂದ ನಿರಾಶ್ರಿತರನ್ನು ಪರಿಗಣಿಸಿ ಅವರಿಗೆ ಇ ಸ್ವತ್ತು ಉತಾರಿಗೆ ಅವಕಾಶ ಮಾಡಿ ಕೊಡಬೇಕು ಎಂದು 7ನೇ ವಾರ್ಡ ಸದಸ್ಯ ವಿಜಯಮಹಾಂತೇಶ ಗಿಡ್ಡಪ್ಪಗೋಳ ಹೇಳಿದರು.ಪಟ್ಟಣ ಪಂಚಾಯಿತಿ ಸಭಾ ಭವನದಲ್ಲಿ ಪಪಂ ಅಧ್ಯಕ್ಷ ಸಿ.ಎಸ್. ಗಿಡ್ಡಪ್ಪಗೋಳ ನೆತೃತ್ವದಲ್ಲಿ 2025-26ನೇ ಸಾಲಿನ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು ಮೇಲಾಧಿಕಾರಿಗಳೊಂದಿಗೆ ಚರ್ಚಿಸಿ ಸಂತ್ರಸ್ತರಿಗೆ ಅನುಕೂಲ ಮಾಡಿಕೊಡಬೇಕೆಂದು ಮನವಿ ಮಾಡಿದರು.ತೌಸಿಪ ಗಿರಗಾವಿ ಮಾತನಾಡಿ ಜಾನುವಾರು ಸಂತೆಯಲಿ ದನಕರುಗಳಿಗೆ ನೀರಿನ ಪೈಪ್ಲೈನ್ ವ್ಯವಸ್ಥೆ ಇದ್ದರು ಸಿಬ್ಬಂದಿಗಳು ಸರಿಯಾದ ಸಮಯಕ್ಕೆ ಅಲ್ಲಿ ನೀರು ಬಿಡುವುದಿಲ್ಲ, ಕೆಲ ವಾರ್ಡಿನಲ್ಲಿ ವಿದ್ಯುತ್ ಕಂಬಗಳಲ್ಲಿ ಬಲ್ಬ್ ಗಳು ಹತ್ತುವುದಿಲ್ಲ. ಸಮಸ್ಯೆ ಕುರಿತು ಪೋನ್ ಮಾಡಿದರೆ ಪೋನ್ ಎತ್ತುವುದಿಲ್ಲ ಎಂದರು.ಪಟ್ಟಣ ಪಂಚಾಯಿತಿಗೆ ಸಮಯಕ್ಕೆ ಸರಿಯಾಗಿ ಪಂಚಾಯಿತಿ ಸಿಬ್ಬಂದಿಗಳು ಕೆಲಸಕ್ಕೆ…
