Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಸಮಾಜದಲ್ಲಿ ಸ್ವಾಸ್ಥ್ಯ ಕಾಪಾಡುವುದು ಎಲ್ಲರ ಕರ್ತವ್ಯ. ಸಂತೋಷ ಹಂಚಿ ಕೊಳ್ಳಲಿಕ್ಕೆ ಶಾಂತಿ ಸಾರಲಿಕ್ಕೆ ಹಬ್ಬಗಳನ್ನು ಆಚರಿಸುತ್ತೇವೆ ಎಂದು ಡಿವೈಎಸ್ಪಿ ಬಲ್ಲಪ್ಪ ನಂದಗಾವಿ ಹೇಳಿದರು. ಪಟ್ಟಣದ ಪೋಲಿಸ್ ಠಾಣೆ ಆವರಣದಲ್ಲಿ ಮಂಗಳವಾರ ಹೋಳಿ ಹಬ್ಬದ ಹಾಗೂ ರಂಜಾನ್ ಹಬ್ಬದ ಶಾಂತಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹೋಳಿ ಹಬ್ಬ ಮತ್ತು ರಂಜಾನ್ ಹಬ್ಬದ ಈ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳ ಪರೀಕ್ಷೆ ಬರೆಯಲು ಹೋಗುವ ಮಕ್ಕಳಿಗೆ ತೊಂದರೆ ಕೊಡಬಾರದು ಮತ್ತು ಪಟ್ಟಣದಲ್ಲಿ ಡಿಜೆ ಸೌಂಡ್ ಹಚ್ಚಿ ಕಿರಿಕಿರಿ ಮಾಡಬಾರದು, ತಂಟೆ ತಕರಾರು ಮಾಡಿ ಸಮಾಜದಲ್ಲಿ ಅಶಾಂತಿ ಉಂಟು ಮಾಡಿದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದರು. ಪಿಎಸ್ಐ ಎಮ್.ಬಿ. ಬಿರಾದಾರ ಮಾತನಾಡಿ ಹಬ್ಬಗಳು ಪರಸ್ಪರ ಬಾಂಧವ್ಯ ಬೆಸೆಯುವ ಕೆಲಸ ಮಾಡುತ್ತವೆ. ಪರಸ್ಪರ ದ್ವೇಷ ಮಾಡದೆ ನಿಮ್ಮ ನಿಮ್ಮ ಹಬ್ಬಗಳನ್ನು ಆಚರಿಸಿ ಖುಷಿಯಿಂದ ಬದುಕಿ ಒಂದು ವೇಳೆ ಯಾರಾದರೂ ಹಬ್ಬಗಳಲ್ಲಿ ತೊಂದರೆ ಕೊಟ್ಟರೆ ಅವರಿಗೆ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳುತ್ತೇವೆ ಎಂದು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಆನ್ಲೈನ್ ಬೆಟ್ಟಿಂಗ್ ಜೂಜು, ಇಸ್ಪೇಟ್ ಹಾಗೂ ಇನ್ನಿತರ ಹಣ ಗಳಿಸುವಂತಹ ಆಮಿಷವನ್ನು ಒಡ್ದುವ ವಿವಿಧ ಮಾದರಿಯ ಆಟದ ಅಪ್ಲಿಕೇಶಷನ್ ಗಳನ್ನು ನಿರ್ಬಂಧಿಸುವಂತೆ ಬಲಿಷ್ಠ ಭಾರತ ನಿರ್ಮಾಣ ಸೇನೆ ಹಾಗೂ ಕರುನಾಡು ಕ್ರಾಂತಿ ಸೇನೆಯ ವತಿಯಿಂದ ದೇಶದ ಪ್ರಧಾನ ಮಂತ್ರಿಗಳಿಗೆ, ರಾಜ್ಯದ ಮುಖ್ಯಮಂತ್ರಿಗಳಿಗೆ ವಿಜಯಪುರ ಜಿಲ್ಲಾಧಿಕಾರಿಗಳ ಮೂಲಕ ಮನವಿ ಸಲ್ಲಿಸಲಾಯಿತು.ಈ ಸಂದರ್ಭದಲ್ಲಿ ಬಲಿಷ್ಠ ಭಾರತ ನಿರ್ಮಾಣ ಸೇನೆ ಸಂಸ್ಥಾಪಕ ಅಧ್ಯಕ್ಷ ಪುನೀತ ಸಜ್ಜನ ಮಾತನಾಡಿ, ಕರ್ನಾಟಕ ರಾಜ್ಯವನ್ನು ಒಳಗೊಂಡು ಇಡೀ ದೇಶದಲ್ಲಿ ಹಲವಾರು ವಿಧದ ರೀತಿಯಲ್ಲಿ ಕ್ರಿಕೆಟ್ ಬೆಟ್ಟಿಂಗ್ ಆಪ್ ಗಳು, ಇಸ್ಪೀಟ್ ಆಟಗಳನ್ನು ಆಡಿಸುವಂತಹ ಆಪ್ ಗಳು ಹಾಗೂ ಇನ್ನಿತರ ಹಲವಾರು ವಿಧದ ಆಟಗಳನ್ನು ಆಡಿಸುವಂತ ಅಪ್ಲಿಕೇಶನ್ ಗಳು ವಿಪರೀತ ಪ್ರಮಾಣದಲ್ಲಿ ಹುಟ್ಟಿಕೊಂಡಿವೆ ಅದೇ ರೀತಿಯಾಗಿ ವಯಸ್ಸಿನ ಮಿತಿ ಇಲ್ಲದೆ ಎಲ್ಲಾ ವರ್ಗದ ಜನರು ಇವುಗಳ ಅಮಿಷಕ್ಕೆ ಒಳಗಾಗಿ, ಇದರಿಂದ ಸಾಕಷ್ಟು ಹಣವನ್ನು ಕಳೆದುಕೊಂಡು ಸಂಕಷ್ಟಕ್ಕೆ ಒಳಗಾಗುತ್ತಿದ್ದಾರೆ ಕೆಲವೊಮ್ಮೆ ಮಾನಸಿಕ ಒತ್ತಡಕ್ಕೊಳಗಾಗಿ ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾರೆ ಎಂದರು.ಕರುನಾಡು ಕ್ರಾಂತಿ…
ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ಮಹಿಳೆಯರು ಎಲ್ಲಾ ರಂಗದಲ್ಲಿ ಸಾಧನೆ ಮಾಡಿದ್ದಾರೆ. ಈ ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಕೊಡುಗೆ ಬಹಳಷ್ಟಿದೆ ಹೀಗಾಗಿ ಎಲ್ಲ ಮಹಿಳೆಯರು ಹಿಂದೆಟು ಹಾಕದೆ ಸ್ವಾವಲಂಬಿಯಾಗಿ ಬದುಕು ಕಟ್ಟಿಕೊಳ್ಳಬೇಕು ಎಂದು ಆಲಮೇಲ ತಾಲೂಕಿನ ನಿರ್ಮಲ ಸಮಾಜ ಸೇವಾ ಸಂಸ್ತೇಯ ನಿರ್ದೇಶಕಿ ಸಿಸ್ಟರ್ ಒಲಿವಾ ಹೇಳಿದರು.ಪಟ್ಟಣದ ದೇಸಾಯಿ ಕಲ್ಲೂರ ರಸ್ತೆಯಲ್ಲಿರುವ ಹೋಲಿ ಕ್ರಾಸ್ ಶಿಕ್ಷಣ ಸಂಸ್ಥೆ ಹಾಗೂ ಸರ್ವೋದಯ ಸಮಾಜ ಸೇವಾ ಸಂಸ್ಥೆ ಸಹಯೋಗದಲ್ಲಿ ನಡೆದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಾ ಜಗತ್ತಿನಲ್ಲಿ ಮಹಿಳೆಯರು ಪುರುಷರಷ್ಟೇ ಎಲ್ಲ ಕ್ಷೇತ್ರಗಳಲ್ಲಿ ಅಮೋಘ ಸಾಧನೆ ಮಾಡಿದ್ದಾಳೆ. ಸಾಧನೆಗೈದ ಮಹಿಳೆಯರನ್ನು ಮಾದರಿಯಾಗಿಟ್ಟುಕೊಂಡು ಎಲ್ಲ ಮಹಿಳೆಯರು ಕೂಡಾ ದೈರ್ಯದಿಂದ ಬಾಳು ಮಾಡಬೇಕು ಎಂದ ಅವರು ಸರಕಾರ ಮತ್ತು ಸಂಘ ಸಂಸ್ಥೆಗಳಿಂದ ಸವಲತ್ತುಗಳು ಸಿಗಲಿವೆ ಅವುಗಳ ಸದುಪಯೋಗ ಕೂಡಾ ಪಡೆದುಕೊಳ್ಳಬೇಕು ಎಂದರು.ಫಾದರ್ ರೋಶನ್ ಡಿಸೋಜ ಅವರು ಮಾತನಾಡುತ್ತಾ ಮಹಿಳೆಯರು ಯಾವುದರಲ್ಲೂ ಕಡಿಮೆಯಿಲ್ಲವೆಂದು ಎಲ್ಲ ರಂಗದಲ್ಲೂ ಸಾಧನೆ ಮಾಡಿ ತೋರಿಸಿದ್ದಾರೆ. ಮಹಿಳು ಸರಕಾರದ ಮಟ್ಟದ ಸೌಕರ್ಯಗಳು ಪಡೆಯುವ…
ಅಫಜಲಪುರ ಪುರಸಭೆಗೆ ಅಧ್ಯಕ್ಷರಾಗಿ ಸುಹಾಸಿನಿ, ಉಪಾಧ್ಯಕ್ಷರಾಗಿ ಶಿವಕುಮಾರ ಆಯ್ಕೆ ಉದಯರಶ್ಮಿ ದಿನಪತ್ರಿಕೆ ಅಫಜಲಪುರ: ಇಲ್ಲಿನ ಪುರಸಭೆ ಅಧ್ಯಕ್ಷತೆ, ಉಪಾಧ್ಯಕ್ಷ ಚುನಾವಣೆಯಲ್ಲಿ ಲೋಕಸಭೆ ಸದಸ್ಯರು ಹಾಗೂ ಶಾಸಕ ಮತ ಒಳಗೊಂಡು ಒಟ್ಟು ೨೫ ಮತಗಳಲ್ಲಿ ಶಾಸಕರ ಮತ ಸೇರಿ ಒಟ್ಟು ೨೪ ಮತ ಚಲಾಯಿಸಿದ್ದು ಕಾಂಗ್ರೆಸ್ನ ಸುಹಾಸಿನಿ ವಿರೇಶ್ ಖೇಳಗಿ ೧೯ ಮತಗಳು ಪಡೆಯುವ ಮೂಲಕ ಅಧ್ಯಕ್ಷೆಯಾದರೆ ಶಿವಕುಮಾರ ಪದಕಿ ಅವಿರೋಧವಾಗಿ ಉಪಾಧ್ಯಕ್ಷರಾಗಿ ಆಯ್ಕೆಯಾದರೆಂದು ಚುನಾವಣಾಧಿಕಾರಿ ಸಂಜೀವಕುಮಾರ ದಾಸರ್ ಘೋಷಣೆ ಮಾಡಿದರು.ಪುರಸಭೆ ಅಧ್ಯಕ್ಷತೆಗೆ ಬಿಸಿಬಿ ಮಹಿಳೆಗೆ ಮೀಸಲಾಗಿದ್ದ ಸ್ಥಾನಕ್ಕೆ ಬಿಜೆಪಿ ಪಕ್ಷದಿಂದ ಅಧ್ಯಕ್ಷ ಸ್ಥಾನಕ್ಕೆ ಶಿಲ್ಪಾ ಮಳೇಂದ್ರ ಡಾಂಗೆ ನಾಮಪತ್ರ ಸಲ್ಲಿಸಿ ೫ ಮತಗಳು ಪಡೆದರು. ಕಾಂಗ್ರೆಸ್ ಪಕ್ಷದ ಸುಹಾಸಿನಿ ವಿರೇಶ್ ಖೇಳಗಿ ಅವರು ನಾಮಪತ್ರ ಸಲ್ಲಿಸಿ ೧೯ ಮತಗಳು ಪಡೆಯುವ ಮೂಲಕ ಅಧ್ಯಕ್ಷರಾಗಿ ಆಯ್ಕೆಯಾದರು. ಇನ್ನೂ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ನ ಶಿವಕುಮಾರ ಪದಕಿ ಅವರು ಅವಿರೋಧವಾಗಿ ಆಯ್ಕೆಯಾದರು.ಚುನಾವಣೆಯಲ್ಲಿ ಶಾಸಕ ಎಂ.ವೈ.ಪಾಟೀಲ ಅವರು ಕೂಡಾ ಮತ ಚಲಾಯಿಸಿದರು. ಫಲಿತಾಂಶ ಘೋಷಣೆಯಾಗುತ್ತಿದಂತೆ ಕಾಂಗ್ರೆಸ್ ಕಾರ್ಯಕರ್ತರು…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಮಾ.೧೩ ರಂದು ರಾತ್ರಿ ಪಟ್ಟಣದಲ್ಲಿ ಕಾಮದಹನ ಕಾರ್ಯಕ್ರಮ ಜರುಗಲಿದೆ ಎಂದು ವೀರಶೈವ ಲಿಂಗಾಯತ ಸಮಾಜದ ಅಧ್ಯಕ್ಷ ಪ್ರಭುರಾಜ ಕಲಬುರ್ಗಿ ಹೇಳಿದರು.ಈ ಕುರಿತು ಪತ್ರಿಕೆಯೊಂದಿಗೆ ಮಾತನಾಡಿದ ಅವರು ಅಂದು ಹುಬ್ಬಾ ನಕ್ಷತ್ರವಿದ್ದು ಅದೇ ದಿನ ಬೆಳಿಗ್ಗೆ ೧೦:೩೦ ರಿಂದ ಹುಣ್ಣಿಮೆ ಪ್ರಾರಂಭವಾಗುವದು. ಹಾಗಾಗಿ ಅಂದೇ ರಾತ್ರಿ ಕಾಮದಹನ ಕಾರ್ಯಕ್ರಮ ಫೆ೧೪ ಮತ್ತು ೧೫ ರಂತೆ ಎರಡು ದಿನಗಳ ಕಾಲ ಬಣ್ಣದಾಟ ನಡೆಯಲಿದೆ. ಯಾವುದೇ ಗೊಂದಲ ಗಲಾಟೆಗಳನ್ನು ಸೃಷ್ಟಿಸಿಕೊಳ್ಳದೇ ಶಾಂತಿಯುತವಾಗಿ ಹಬ್ಬವನ್ನು ಆಚರಿಸುವಂತೆ ಸಲಹೆ ನೀಡಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಈಗ ಪರೀಕ್ಷಾ ಸಮಯ ಇರುವುದರಿಂದ ಮಕ್ಕಳಿಗೆ ಬಣ್ಣ ಹಾಕದಂತೆ ನೋಡಿಕೊಳ್ಳಬೇಕು. ಮತ್ತು ಹೋಳಿ ಮತ್ತು ರಮಜಾನ್ ಹಬ್ಬದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳಾಗದಂತೆ ನೋಡಿಕೊಳ್ಳಬೇಕು ಎಂದು ಸಿಪಿಆಯ್ ನಾನಾಗೌಡ ಪೊಲೀಸ್ಪಾಟೀಲ ಹೇಳಿದರು.ಸಿಂದಗಿ ಪಟ್ಟಣದ ಪೊಲೀಸ್ ಠಾಣೆಯ ಆವರಣದಲ್ಲಿ ರಮಜಾನ ಹಾಗೂ ಹೋಳಿ ಹಬ್ಬದ ನಿಮಿತ್ಯ ಪೊಲೀಸ್ ಇಲಾಖೆಯ ವತಿಯಿಂದ ಹಮ್ಮಿಕೊಂಡ ಶಾಂತಿ ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದರು.ಇಲಾಖೆಯೂ ಅಹಿತಕರ ನಡೆಯದಂತೆ ನಿಗಾವಹಿಸಲಾಗುತ್ತದೆ. ಯಾವುದೇ ಅಹಿತಕರ ಘಟನೆಗಳು ನಡೆಯಲಿಲ್ಲ ಎಂದರೆ ಹಮ್ಮಿಕೊಂಡ ಶಾಂತಿ ಸಭೆಗೆ ಒಂದು ಅರ್ಥ ಬರುತ್ತದೆ. ಇಲ್ಲಿಯವರೆಗೂ ನಗರದಲ್ಲಿ ಕಳೆದ ಹತ್ತು ವರ್ಷಗಳಿಂದ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆದಿಲ್ಲ. ಇನ್ನು ಮುಂದೆಯೂ ಆಗುವುದಿಲ್ಲ ಎಂಬ ಭರವಸೆ ನಮಗಿದೆ. ಸಾರ್ವಜನಿಕರು ಬಣ್ಣವಾಡುವ ಸಂದರ್ಭದಲ್ಲಿ ಯಾವುದೇ ಧಾರ್ಮಿಕತೆಗೆ ದಕ್ಕೆ ಬಾರದ ಹಾಗೆ ನೋಡಿಕೊಳ್ಳಬೇಕು ಎಂದರು.ಈ ವೇಳೆ ಸಾರ್ವಜನಿಕರಾದ ಶೇಖರಗೌಡ ಹರನಾಳ, ರಾಕೇಶ ಕಾಂಬಳೆ, ರಜತ ತಾಂಬೆ ಮಾತನಾಡಿ, ಪರೀಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ವಿದ್ಯಾರ್ಥಿಗಳಿಗೆ ಯಾವುದೇ ರೀತಿಯ ತೊಂದರೆ ಉಂಟಾಗದಂತೆ…
ವಿಜಯಪುರದಲ್ಲಿ ಕೆಯುಡಬ್ಲುಜೆ ವತಿಯಿಂದ ಸಾಧಕರಿಗೆ ಅಭಿನಂದನಾ ಸಮಾರಂಭ | ಕಾನಿಪ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪತ್ರಕರ್ತರು ತಮ್ಮ ಕರ್ತವ್ಯ ಅರಿತು ಜವಾಬ್ಧಾರಿಯುತವಾಗಿ ಕೆಲಸ ಮಾಡಬೇಕು. ಕೆಲ ಪತ್ರಕರ್ತರಿಂದ ಇಡೀ ಪತ್ರಕರ್ತರ ಸಮೂಹಕ್ಕೆ ಕಪ್ಪು ಚುಕ್ಕೆ ತಗಲುತ್ತಿದೆ. ಇದನ್ನು ನಿವಾರಿಸಲು ಪತ್ರಕರ್ತರ ಸಂಘಟನೆಗಳ ಕೆಲಸ ಮಾಡಬೇಕು ಎಂದು ಬೆಳಗಾವಿಯ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಸಿಂಡಿಕೇಟ್ ಸದಸ್ಯ, ಹಿರಿಯ ಪತ್ರಕರ್ತ ರಫೀ ಭಂಡಾರಿ ಹೇಳಿದರು.ಇಲ್ಲಿನ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಸೋಮವಾರ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಕೆಯುಡಬ್ಲುಜೆ ವತಿಯಿಂದ ಏರ್ಪಡಿಸಿದ್ದ ಸಾಧಕರಿಗೆ ಅಭಿನಂದನಾ ಸಮಾರಂಭ, ಕಾನಿಪ ಸಂಘದ ಸರ್ವ ಸದಸ್ಯರ ಸಾಮಾನ್ಯ ಸಭೆ ಉದ್ಘಾಟಿಸಿ ಅವರು ಮಾತನಾಡಿದರು.ಕಾರ್ಯನಿತರ ಪತ್ರಕರ್ತರು ಕ್ರಿಯಾಶೀಲರಾಗಬೇಕು. ವೃತ್ತಿ ಮೌಲ್ಯ ಕಾಪಾಡಲು ಮುಂದಾಗಬೇಕು. ಪತ್ರಕರ್ತರಲ್ಲದವರೂ ಪತ್ರಕರ್ತರೆಂದು ಹೇಳಿಕೊಳ್ಳುತ್ತಿರುವುದು, ಇವರಿಗೆ ಕೆಲವರು ಪ್ರೋತ್ಸಾಹ ನೀಡುವುದು ನಿಲ್ಲಬೇಕು. ಎಲ್ಲರೂ ಒಗ್ಗಟ್ಟಿನಿಂದ ಇದ್ದರೆ ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸುಧಾರಣೆ ತರುವುದು ಸಾಧ್ಯ ಎಂದರು.ಹಿರಿಯ ಪತ್ರಕರ್ತರಾದ ಸುಶೀಲೇಂದ್ರ ನಾಯಕ, ಐಎಫ್ಡಬ್ಲುಜೆ ರಾಷ್ಟ್ರೀಯ…
ಬೇಡಿಕೆ ಈಡೇರದಿದ್ದರೆ, ಅಮರಣ ಉಪವಾಸ ಸತ್ಯಾಗ್ರಹ ಆರಂಭಿಸುವ ಎಚ್ಚರಿಕೆ ನೀಡಿದ ಮಾಜಿ ಸಚಿವ ಬೆಳ್ಳುಬ್ಬಿ ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬಿಜೆಪಿ ಕಾರ್ಯಕರ್ತರು, ರೈತರು ಸೇರಿ ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ನೇತೃತ್ವದಲ್ಲಿ ಮಂಗಳವಾರ ಆಲಮಟ್ಟಿಯಲ್ಲಿ ಪ್ರತಿಭಟನೆ ನಡೆಯಿತು.ಇಲ್ಲಿಯ ಚಂದ್ರಮ್ಮಾ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಅಲ್ಲಿಂದ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯವರೆಗೆ ನೂರಾರು ಕಾರ್ಯಕರ್ತರು ಪ್ರತಿಭಟನಾ ಮೆರವಣಿಗೆ ನಡೆಸಿದರು.ಮಾಜಿ ಸಚಿವ ಎಸ್.ಕೆ. ಬೆಳ್ಳುಬ್ಬಿ ಮಾತನಾಡಿ, ಯುಕೆಪಿಯ ಆಲಮಟ್ಟಿ ಭಾಗದ ರೈತರು ನೀರಾವರಿಯಿಲ್ಲದೇ ಅನುಭವಿಸುತ್ತಿರುವ ಸ್ಥಿತಿಯನ್ನು ಬಿಚ್ಚಿಟ್ಟರು. ಒಂದು ವೇಳೆ ಬೇಡಿಕೆ ಈಡೇರದಿದ್ದರೆ, ಅಮರಣ ಉಪವಾಸ ಸತ್ಯಾಗ್ರಹ ಆರಂಭಿಸುವ ಎಚ್ಚರಿಕೆಯನ್ನು ಅವರು ನೀಡಿದರು.ಆಲಮಟ್ಟಿ ಜಲಾಶಯದಿಂದ ಈಗಾಗಲೆ ಸುಮಾರು 10 ಟಿ.ಎಮ್.ಸಿ. ನೀರನ್ನು ತೆಲಂಗಾಣ ರಾಜ್ಯಕ್ಕೆ ಬಿಟ್ಟಿರುವುದು ಈ ಭಾಗದ ಸಂತ್ರಸ್ತರಿಗೆ ಮಾಡಿದ ಅನ್ಯಾಯವಾಗಿರುತ್ತದೆ. ಇನ್ನೂ ಮುಂದೆ ಜಲಾಶಯದಿಂದ ನೀರನ್ನು ಬಿಡುವುದು ನಿಲ್ಲಸಿ, ಈ ಜಲಾಶಯದ ಸಂತ್ರಸ್ತರ ಜಮೀನುಗಳಿಗೆ ಜೂನ್ 15ರ ವರೆಗೆ ಮುಳವಾಡ ಏತ ನೀರಾವರಿ ಮೂಲಕ ನೀರನ್ನು ಬಿಡಬೇಕು…
ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣ | ವಿಜಯೇಂದ್ರಗೆ ದುಬೈ ನಂಟಿದೆ ಎಂದ ಶಾಸಕ ಯತ್ನಾಳ ಹೇಳಿಕೆ ಉಲ್ಲೇಖ | ಸಿಬಿಐ ಮೂಲಕ ಬಿಜೆಪಿ ತನಿಖೆ ಹಳ್ಳ ಹಿಡಿಸುವ ಸಾಧ್ಯತೆ | ಪ್ರಿಯಾಂಕ್ ಖರ್ಗೆ ತಿರುಗೇಟು ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರಿಗೆ ದುಬೈ ನಂಟಿದೆ ಎಂದು ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳುತ್ತಿದ್ದಾರೆ. ಹೀಗಾಗಿ ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ವಿಜಯೇಂದ್ರ ಕೈವಾಡ ಇದೆಯೇ ಎಂಬ ದಿಕ್ಕಿನಲ್ಲೂ ತನಿಖೆ ನಡೆಯಬೇಕು ಎಂದು ಸಚಿವ ಪ್ರಿಯಾಂಕ್ ಖರ್ಗೆ ಅವರು ಮಂಗಳವಾರ ಹೇಳಿದ್ದಾರೆ.ರನ್ಯಾ ರಾವ್ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಇಬ್ಬರ ಸಚಿವರು ಶಾಮೀಲಾಗಿದ್ದರೆ ಎಂದು ಬಿವೈ ವಿಜಯೇಂದ್ರ ಆರೋಪಿಸಿದ್ದು, ಮಂಗಳವಾರ ಈ ಬಗ್ಗೆ ಪ್ರತಿಕ್ರಿಯಿಸಿದ ಪ್ರಿಯಾಂಕ್ ಖರ್ಗೆ ಅವರು, ಆ ಸಚಿವರ ಹೆಸರು ಹೇಳಲಿ. ಗಾಳಿಯಲ್ಲಿ ಗುಂಡು ಹಾರಿಸುವುದು ಬೇಡ ಎಂದು ತಿರುಗೇಟು ನೀಡಿದ್ದಾರೆ.ಸಿಬಿಐ ಮತ್ತು ಡಿಆರ್ಐ ಎರಡೂ ಕೇಂದ್ರ ಸರ್ಕಾರದ ಅಧೀನದಲ್ಲಿರುವ ಸಂಸ್ಥೆಗಳು, ತನಿಖೆ ಮಾಡಿಸಲಿ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತಾಲ್ಲೂಕಿನ ಕನ್ನಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಮುಂಬೈ ಮೂಲದ ತುಳಸಿದಾಸ ಮತ್ತು ವೃಜದಾಸ ಚಾರಿಟೇಬಲ್ ಟ್ರಸ್ಟ ವತಿಯಿಂದ ದೇಣಿಗೆ ನೀಡಿದ ಆಪ್ಟಿಕಲ್ ಟಚ್ ಬೊರ್ಡನ ಉದ್ಘಾಟನೆ ಕಾರ್ಯಕ್ರಮ ನೇರವೆರಿತು.ಗುಣಕಿ ಸಿ.ಆರ್.ಪಿ ಆಯ್.ಎಸ್ ಬಂಡೆ ಮಾತನಾಡಿ ಮಕ್ಕಳ ಗುಣಾತ್ಮಕ ಕಲಿಕೆಗೆ ಇಂತಹ ತಂತ್ರಜ್ಞಾನದ ಬಳಕೆ ಮಾಡುವ ಮೂಲಕ ಪರಿಣಾಮಕಾರಿ ಕಲಿಕೆಯನ್ನುಂಟು ಮಾಡಬಹುದಾಗಿದೆ ಎಂದು ಹೇಳಿದರು.ಈ ಸಂದರ್ಭದಲ್ಲಿ ಸ್ಥಳೀಯ ಶಾಲೆಯ ಎಸ್ಡಿಎಂಸಿ ಅದ್ಯಕ್ಷ ಬಾಬು ಕುಮಟಗಿ, ಕೆ.ಡಿ.ಬಿರಾದಾರ, ಕಾಂತುಗೌಡ ಬಿರಾದಾರ, ಎನ್.ಆರ್ ಹೊನ್ನುಟಗಿ, ಬಿ.ವಿ.ತಾಳಿಕೋಟಿ ಇದ್ದರು.
