Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಬೆಳೆ ವಿಮೆ ಜಮೆಯಾಗದ ಹಿನ್ನೆಲೆಯಲ್ಲಿ ರೈತರು ತಹಶೀಲ್ದಾರ ಕಾರ್ಯಾಲಯಕ್ಕೆ ಆಗಮಿಸಿ ಗ್ರೇಡ್-೨ ತಹಶೀಲ್ದಾರ ಎಸ್.ಎಚ್.ರಾಠೋಡ ಅವರಿಗೆ ಮನವಿ ಸಲ್ಲಿಸಿದರು.ಪಟ್ಟಣದ ತಹಶೀಲ್ದಾರ ಕಾರ್ಯಾಲಯಕ್ಕೆ ಮಂಗಳವಾರ ಆಗಮಿಸಿದ ಬಿ.ಬಿ.ಇಂಗಳಗಿ ಗ್ರಾಮದ ರೈತರು ತಮ್ಮ ಖಾತೆಗಳಿಗೆ ಜಮೆಯಾಗದೇ ಇರುವ ಬೆಳೆ ವಿಮೆಯ ಕುರಿತು ತಮ್ಮ ಅಸಮಾಧಾನ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ರೈತಪ್ರತಿನಿಧಿ ಸಲೀಮ್ ವಠಾರ ಮಾತನಾಡಿ, ೨೦೨೪-೨೫ ನೇ ಸಾಲಿನಲ್ಲಿ ಗ್ರಾಮ ವ್ಯಾಪ್ತಿಯ ಬಹುತೇಕ ರೈತರು ತೊಗರಿ ಬೆಳೆ ಭಿತ್ತನೆ ಮಾಡಿದ್ದರು. ಆದರೆ ನಂತರ ಬಹುತೇಕ ಬೆಳೆ ಮಳೆ ಕೊರತೆ ಹಾಗೂ ಇನ್ನಿತರ ಪ್ರಕೃತಿ ವಿಕೋಪಗಳಿಗೆ ಒಳಗಾಗಿ ಫಸಲು ಬಾರದಂತಾಯಿತು. ಆದರೆ ರೈತರು ತೊಗರಿ ಬೆಳೆಯ ವಿಮೆ ತುಂಬಿದ್ದು, ಈಗ ವಿಮೆ ಪರಿಹಾರದ ಹಣ ಕೆಲವು ರೈತರಿಗೆ ಮಾತ್ರ ಜಮೆ ಆಗಿದೆ. ಇನ್ನೂಳಿದ ರೈತರು ವಿಮೆ ಹಣ ಪಾವತಿಸಿದ್ದರು ಸಹ ಅವರಿಗೆ ಯಾವುದೇ ವಿಮೆ ಪರಿಹಾರ ಬಂದಿರುವುದಿಲ್ಲ. ಇದಕ್ಕೆ ವಿಮೆ ಕಂಪನಿಗಳೇ ನೇರ ಕಾರಣ. ಆದ್ದರಿಂದ ತಹಶೀಲ್ದಾರರು ಈ ಕುರಿತು ಕೂಡಲೇ ಬೆಳೆ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಮಹಿಳಾ ಸಬಲೀಕರಣಕ್ಕೆ ಸರ್ಕಾರ ಜಾರಿಗೊಳಿಸಿದ ಯೋಜನೆಗಳನ್ನು ಸದ್ಭಳಕೆ ಮಾಡಿಕೊಂಡು ಸಶಕ್ತಳಾಗಬೇಕು ಎಂದು ಬಿಎಲ್‌ಡಿಇ ಸಂಸ್ಥೆಯ ಎ.ಬಿ.ಸಾಲಕ್ಕಿ ಪದವಿಪೂರ್ವ ಕಾಲೇಜಿನ ರಾಜ್ಯಶಾಸ್ತ್ರ ಉಪನ್ಯಾಸಕಿ ವಿಜಯಲಕ್ಷ್ಮಿ ಹಿರೇಮಠ ಹೇಳಿದರು.ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸೋಮವಾರ ಜರುಗಿದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿದರು. ಮಹಿಳೆ ಇಂದು ಸುಶಿಕ್ಷಿತಳಾಗಿ, ಸಮರ್ಥಳಾಗುವುದು ಅತ್ಯಂತ ಅಗತ್ಯವಾಗಿದೆ ಎಂದರು.ಪ್ರಾಚಾರ್ಯ ಅಶೋಕ ಹೆಗಡೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.ಆರಂಭದಲ್ಲಿ ಉಪನ್ಯಾಸಕಿ ಪ್ರೇಮಕುಮಾರಿ ಸ್ವಾಗತಿಸಿದರು. ಚೈತ್ರಾ ಭಾಸಗಿ, ಸಾವಿತ್ರಿ ಮದಭಾವಿ ಪ್ರಾರ್ಥಿಸಿದರು. ಪುಷ್ಪಾ ಹುಣಶ್ಯಾಳ ಪ್ರಾಸ್ತಾವಿಕವಾಗಿ ಮಾತನಾಡಿದರು. ನಂತರ ಭಾಷಣ, ಮೆಹಂದಿ, ವೇಷಭೂಷಣ, ಬೆಂಕಿರಹಿತ ಅಡುಗೆ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿನೀಯರಿಗೆ ಬಹುಮಾನ ವಿತರಿಸಲಾಯಿತು.ಆಯ್‌ಕ್ಯೂಎಸಿ ಸಂಯೋಜಕ ಅಕ್ರಮ ಪಾಷಾ, ಸಾಂಸ್ಕೃತಿಕ ವಿಭಾಗದ ಸಂಯೋಜಕ ಪಿ.ಎಮ್. ಪರಗೊಂಡ, ಉಪನ್ಯಾಸಕರುಗಳಾದ ಎಸ್.ಬಿ.ಜಾಲವಾದಿ, ಎಮ್.ಎಮ್.ಲಕ್ಷ್ಮೀಶ, ಅವಿನಾಶ ಎಚ್, ವಿಜಯಲಕ್ಷ್ಮಿ ಪಾಟೀಲ ಸೇರಿದಂತೆ ಅತಿಥಿ ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಚೀಟಿ ನಿಧಿ ಕಂಪನಿಗಳು ತಮ್ಮ ಮಾಹಿತಿಯನ್ನು ಈ ಪ್ರಕಟಣೆಯ ಮೂರು ದಿನಗಳೊಳಗೆ ಜಿಲ್ಲೆಯ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿಗೆ ಒದಗಿಸುವಂತೆ ಸಹಕಾರ ಸಂಘಗಳ ಇಲಾಖೆ ಉಪ ನಿಬಂಧಕರಾದ ಶ್ರೀಮತಿ ಎಸ್.ಕೆ.ಭಾಗ್ಯಶ್ರೀ ಅವರು ತಿಳಿಸಿದ್ದಾರೆ.ಜಿಲ್ಲೆಯಲ್ಲಿ ೩೮ ಚೀಟಿ ನಿಧಿ ಕಂಪನಿಗಳಿದ್ದು, ಇವುಗಳಲ್ಲಿ ೧೨ ರಿಂದ ೧೫ ಚೀಟಿ ಕಂಪನಿಗಳು ಕಾರ್ಯನಿರ್ವಹಿಸುತ್ತಿವೆ. ಇವುಗಳ ಪೈಕಿ,ಚೀಟಿ ಅಧಿನಿಯಮ ೧೯೮೨ರ ಪ್ರಕರಣ ೨೦(೧)ರ ಪ್ರಕರಣ ಚೀಟಿ ೪ರಡಿಯಲ್ಲಿ ಸಹಕಾರ ಸಂಘಗಳ ಉಪ ನಿಬಂಧಕರ ಕಾರ್ಯಾಲಯದಿಂದ ಪೂರ್ವಾನುಮತಿ ಪಡೆದು, ಸಧ್ಯ ಇರುವ ಗುಂಪುಗಳ ಮತ್ತು ಅವಧಿ ಪೂರ್ಣಗೊಂಡ ಗುಂಪುಗಳ ಎರಡು ವರ್ಷದ ಮಾಹಿತಿ ಸಲ್ಲಿಸಲು ತಿಳಿಸಲಾಗಿದ್ದು, ಚಾಲ್ತಿಯಲ್ಲಿದ್ದು ಗುಂಪುಗಳನ್ನು ರಚಿಸದೇ ಇರುವ ಚೀಟಿ ಕಂಪನಿಗಳನ್ನು ಕಪ್ಪು ಪಟ್ಟಿಗೆ ಸೇರಿಸಲಾಗುವುದು.ಆದ್ದರಿಂದ, ಸಂಬಂಧಿಸಿದ ಚೀಟಿ ಕಂಪನಿಯ ಪೋರಮನ್ ಗಳು ಆಕ್ಷೇಪಣೆಗಳಿದ್ದರೆ ನೇರವಾಗಿ ಸಹಕಾರ ಸಂಘಗಳ ಉಪ ನಿಬಂಧಕರ ಕಚೇರಿ ಸಂಪರ್ಕಿಸಿ ಸಲ್ಲಿಸುವಂತೆಯೂ, ಯಾವುದೇ ಆಕ್ಷೇಪಣೆ ಬಾರದೇ ಇದ್ದಲ್ಲಿ ಹಾಗೂ ಗುಂಪುಗಳ ರಚಿಸದೇ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧಿಕಾರಿಗಳು ಜಿಲ್ಲೆಯ ತಿಕೋಟಾ ತಹಶಿಲ್ದಾರ ಕಚೇರಿಯಲ್ಲಿ ಮಾರ್ಚ್ ೧೨ ರಂದು ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.ಲೋಕಾಯುಕ್ತ ಲೋಕಾಯುಕ್ತ ಪೊಲೀಸ್ ಅಧೀಕ್ಷಕರು (ಮೊ:೯೩೬೪೦೬೨೫೨೮), ಪೊಲೀಸ್ ಉಪಾಧೀಕ್ಷಕರ (ಮೊ:೯೩೬೪೦೬೨೫೫೭), ಪೊಲೀಸ್ ಇನ್‌ಸ್ಪೆಕ್ಟರ್-೧ (ಮೊ:೯೩೬೪೦೬೨೬೪೦), ಪೊಲೀಸ್ ಇನ್‌ಸ್ಪೆಕ್ಟರ್-೨ (ಮೊ:೯೩೬೪೦೬೨೬೩೯) ಇವರು ಅಂದು ಬೆಳಿಗ್ಗೆ ೧೧ ಗಂಟೆಯಿಂದ ಸಾರ್ವಜನಿಕ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.ಅಹವಾಲು ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಭರ್ತಿ ಮಾಡಿದ ಮತ್ತು ನೋಟರಿಯಿಂದ ಅಫಿಡವಿಟ್ ಮಾಡಿಸಿದ ಅರ್ಜಿಗಳನ್ನು ಸ್ವೀಕರಿಸಲಾಗುವುದು. ಸರ್ಕಾರಿ ಕಚೇರಿಗಳಲ್ಲಿ ಅಧಿಕೃತವಾಗಿ ಕೆಲಸಗಳನ್ನು ಮಾಡಿಕೊಡುವಲ್ಲಿ ವಿಳಂಬ ಹಾಗೂ ಲಂಚದ ಬೇಡಿಕೆ ಇನ್ನಿತರೆ ತೊಂದರೆ ನೀಡುತ್ತಿರುವ ಅಧಿಕಾರಿ-ಸಿಬ್ಬಂದಿಗಳ ವಿರುದ್ದ ಸಾರ್ವಜನಿಕರು ದೂರುಗಳನ್ನು ನೀಡಬಹುದಾಗಿದೆ. ಸ್ಥಳದಲ್ಲಿ ಪರಿಹಾರ ಕಂಡುಕೊಳ್ಳಬಹುದಾದ ದೂರುಗಳನ್ನು ಅಲ್ಲಿನ ಸ್ಥಳೀಯ ಅಧಿಕಾರಿಗಳ ಸಹಯೋಗದಲ್ಲಿ ಇತ್ಯರ್ಥಪಡಿಸಲು ಪ್ರಯತ್ನಿಸಲಾಗುವುದು ಹಾಗೂ ಸರಕಾರಿ ಅಧಿಕಾರಿಗಳು ಅಕ್ರಮ ಆಸ್ತಿ ಸಂಪಾದನೆ, ಸರಕಾರಿ ಹಣದ ದುರುಪಯೋಗ, ಕಳಪೆ ಕಾಮಗಾರಿ ಹಾಗೂ ಇತರೆ ಯಾವುದೇ ರೀತಿಯ ದೂರುಗಳಿಗಾಗಿ ಕಚೇರಿ ದೂರವಾಣಿ: ೦೮೩೫೨-೨೫೫೩೩೩, ೨೫೭೭೮೬, ೨೯೫೦೭೪ ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ ಎಂದು ಲೋಕಾಯುಕ್ತ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ ಪ್ರತಿ ವರ್ಷದಂತೆ ಈ ವರ್ಷವೂ ಸಹ ಜಿಲ್ಲೆಯಾದ್ಯಂತ ಮಾ.೧೩, ೧೪ ರಂದು ಕಾಮದಹನ ಹಾಗೂ ಮಾ.೧೫ರಂದು ಧೂಳವಾಡ (ಬಣ್ಣ) ಮತ್ತು ಮಾ.೧೯ ರಂದು ರಂಗಪಂಚಮಿ ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ವಿಶೇಷ ದಂಡಾಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.ವಿಜಯಪುರ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂಬರ್ ೦೧ ರಿಂದ ೧೮ರವರೆಗೆ ಮಹಾನಗರ ಪಾಲಿಕೆಯ ವಲಯ ಆಯುಕ್ತರಾದ ಕೆ.ಎ.ಲೈನ್ ಅವರನ್ನು, ವಿಜಯಪುರ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಬರುವ ವಾರ್ಡ್ ನಂಬರ್ ೧೯ ರಿಂದ ೩೫ರವರೆಗೆ ಮಹಾನಗರ ಪಾಲಿಕೆಯ ಎಸ್ಟೇಟ್ ಆಪೀಸರ್ ಮಹಾವೀರ ಬೋರಣ್ಣವರ ಅವರನ್ನು ವಿಶೇಷ ದಂಡಾಧಿಕಾರಿಗಳಾಗಿ ನೇಮಕ ಮಾಡಿ ಆದೇಶಿಸಲಾಗಿದೆ.ಉಪ ವಿಭಾಗೀಯ ದಂಡಾಧಿಕಾರಿಗಳು, ಎಲ್ಲ ತಾಲೂಕಿನ ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಪೊಲೀಸ್ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ, ಮುಂಜಾಗ್ರತಾ ಕ್ರಮ ಕೈಗೊಳ್ಳಲು ಆದೇಶದಲ್ಲಿ ಸೂಚಿಸಲಾಗಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಾದ್ಯಂತ ಆಚರಿಸಲಾಗುವ ಹೋಳಿ ಹಬ್ಬದ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ಜರುಗದಂತೆ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಅಬಕಾರಿ ಅಧಿನಿಯಮ ೧೯೬೫ರ ಕಲಂ ೨೧ರನ್ವಯ ಮಾ೧೩ ರ ಬೆಳಿಗ್ಗೆ ೬ ಗಂಟೆಯಿಂದ ಮಾ.೧೫ರ ಮಧ್ಯರಾತ್ರಿ ೧೨ ಗಂಟೆವರೆಗೆ ಹಾಗೂ ಮಾ.೧೯ರ ಬೆಳಿಗ್ಗೆ ೬ ಗಂಟೆಯಿಂದ ಮಧ್ಯರಾತ್ರಿ ೧೨ ಗಂಟೆವರೆಗೆ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಶ್ವ ಮೂತ್ರಪಿಂಡ (ಕಿಡ್ನಿ) ದಿನಾಚರಣೆ ಅಂಗವಾಗಿ ಮಾರ್ಚ್ 13ರಂದು ಗುರುವಾರ ನಗರದ ಬಿ.ಎಲ್.ಡಿ.ಇ ಡೀಮ್ಡ್ ವಿಶ್ವವಿದ್ಯಾಲಯದ ಶ್ರೀ ಬಿ. ಎಂ. ಪಾಟೀಲ ಸೂಪರ್ ಸ್ಪೇಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ ಆಯೋಜಿಸಲಾಗಿದೆ.ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವಿಜಯಕುಮಾರ ಕಲ್ಯಾಣಪ್ಪಗೋಳ, ಆಸ್ಪತ್ರೆಯ ಮೂತ್ರ ಜನಕಾಂಗ ಶಾಸ್ತ್ರ ಚಿಕಿತ್ಸೆ ವಿಭಾಗ ಮತ್ತು ಮೂತ್ರಪಿಂಡ ಚಿಕಿತ್ಸೆ ವಿಭಾಗದ ವತಿಯಿಂದ ಈ ಶಿಬಿರ ಆಯೋಜಿಸಲಾಗಿದ್ದು, ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಈ ಶಿಬಿರ ನಡೆಯಲಿದೆ ಎಂದು ತಿಳಿಸಿದ್ದಾರೆ.ಮೂತ್ರಪಿಂಡ ಕಾಯಿಲೆಯಿಂದ ನರಳುವವರು, ಸಕ್ಕರೆ ಮತ್ತು ರಕ್ತದೊತ್ತಡ ಸಮಸ್ಯೆ ಎದುರಿಸುತ್ತಿರುವವರು, ಮೂತ್ರ ವಿಸರ್ಜನೆ ಸಮಸ್ಯೆ ಹಾಗೂ ಮೂತ್ರಪಿಂಡದ ಸ್ಟೋನ್(ಹರಳು) ಗಳಿಂದ ಬಳಲುತ್ತಿರುವವವರು ಈ ಶಿಬಿರದಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ. ಈ ಶಿಬಿರದಲ್ಲಿ ವೈದ್ಯರ ಸಂದರ್ಶನ, ಸಕ್ಕರೆ ಕಾಯಿಲೆ ಪರೀಕ್ಷೆ(GRBS), ಸಿರಮ ಕ್ರಿಯಾಟಿನಿನ್ ಪರೀಕ್ಷೆ, ಮೂತ್ರ ಪರೀಕ್ಷೆ ಉಚಿತವಾಗಿವೆ. ಅಲ್ಲದೇ, ಉದರ ಸ್ಕಾನಿಂಗ್(USG), ಎಕ್ಸ್ ರೆ(X-Ray), ಸಿಬಿಸಿ(CBC)…

Read More

ಲೇಖನ- ಡಾ.ಶಶಿಕಾಂತ ಪಟ್ಟಣರಾಮದುರ್ಗ ಉದಯರಶ್ಮಿ ದಿನಪತ್ರಿಕೆ ಬೊಂತಾದೇವಿ ಒಬ್ಬ ಅಪ್ರತಿಮ ಶರಣೆ , ವಸ್ತು ನಿಷ್ಠ ಅಭಿವ್ಯಕ್ತಿಗೆ ಹೆಸರಾದವಳು. ಗುರು ಲಿಂಗ ಜಂಗಮ ತತ್ವವನ್ನು ಒಪ್ಪಿಕೊಂಡು ಸಮಸಮಾಜಕ್ಕೆ ಕಂಕಣಬದ್ಧವಾಗಿ ದುಡಿದಳು.ಲೋಕದ ಕಣ್ಣಿಗೆ ಕಾಣದಿದ್ದರೂ ತನ್ನ ಅಸಾಮಾನ್ಯ ಗುಪ್ತ ಭಕ್ತಿಯಿಂದ ಮರುಳಶಂಕರ ದೇವರಿಗೆ, ನಿಷ್ಠೆಯಿಂದ ನೀಲಾಂಬಿಕೆಗೆ, ವಿರಕ್ತಿಗೆ ಅಕ್ಕಮಹಾದೇವಿಗೆ, ಜಾತೀಯತೆಯ ವಿಡಂಬನೆಯಲ್ಲಿ ಪ್ರಭುದೇವರಿಗೆ, ಶ್ರದ್ದೆಗೆ ಕೊಟ್ಟಣದ ಸೋಮವ್ವೆಗೆ ಸಮವೆನಿಸಿ, ಎಲ್ಲ ಶರಣರ ಮೆಚ್ಚುಗೆಗೆ ಪಾತ್ರಳಾದವಳೇ ಬೊಂತಾದೇವಿ. ಬೊಂತಾದೇವಿ ಕಾಶ್ಮೀರದ ಪಾಂಡವ್ಯಪುರದ ಅರಸು ಕುಮಾರಿಯಾಗಿದ್ದು, ಶ್ರೇಷ್ಠ ಶರಣ, ಕಾಯಕ ಕಲಿ ಎಂದೇ ಹೆಸರುವಾಸಿಯಾದ ಮೊಳಿಗೆ ಮಾರಯ್ಯನ ಸಹೋದರಿ. ಮೂಲನಾಮವಾದ ನಿಜದೇವಿ ಯಿಂದ ಬೊಂತಾದೇವಿಯಾಗಿ ನಾಮಾಂಕಿತಗೊಂಡು ಗುಪ್ತಭಕ್ತಿಗೆ ಹೆಸರು ವಾಸಿಯಾದಳು.“ಬಿಡಾಡಿ” ಎಂಬ ಅಚ್ಚಗನ್ನಡ ಅಂಕಿತದಿಂದ ಅನೇಕ ವಚನಗಳನ್ನು ಬರೆದ ಬೊಂತಾದೇವಿಯ ಮೊದಲಿನ ಹೆಸರು ‘ನಿಜದೇವಿ’. ಚಿಕ್ಕಂದಿನಲ್ಲಿಯೇ ಶಿವಭಕ್ತಿಯಲ್ಲಿ ನಿಷ್ಠೆ ನೆಲೆಗೊಂಡು ವೈರಾಗ್ಯ ತಾಳಿ, ಕಲ್ಯಾಣಕ್ಕೆ ಬಂದು ನೆಲೆಸುತ್ತಾಳೆ. ಈಕೆಯ ವೀರವೈರಾಗ್ಯ, ಗುಪ್ತಭಕ್ತಿಯನ್ನು ಕಾವ್ಯ, ಪುರಾಣಗಳು ಬಣ್ಣಿಸುತ್ತವೆ. ಕಾಶ್ಮೀರದಿಂದ ಕಲ್ಯಾಣಕ್ಕೆ ಬಂದ ನಂತರ ಅವರು ಕೌದಿಯನ್ನೇ ಹೊದೆಯುತ್ತಿದ್ದುದರಿಂದ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿದ ವಿಶಿಷ್ಠ ಸಾಧನೆಗಾಗಿ ಖ್ಯಾತ ನೇತ್ರತಜ್ಞ ಡಾ. ಪ್ರಭುಗೌಡ ಲಿಂಗದಳ್ಳಿ(ಚಬನೂರ) ಅವರಿಗೆ ಜನನಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಯಾದಗಿರಿ ನಗರದಲ್ಲಿ ಸೋಮವಾರ ಜರುಗಿದ ನಗೆಹಬ್ಬ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿ ನೀಡಲಾಯಿತು.ಹತ್ತಿಗೂಡುರ ಮಾತ್ರೋಶ್ರೀ ಬಸಮ್ಮ ಶರಬಣ್ಣ ಮಹಾಮನಿ ಸೇವಾ ಟ್ರಸ್ಟ್ ವತಿಯಿಂದ ನೀಡುವ ಸೇವಾ ಶ್ರೇಷ್ಠ ಪ್ರಶಸ್ತಿಯನ್ನು ಸುಮಾರು ೩೦ ವರ್ಷಗಳಿಂದ ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿದ ಡಾ.ಪ್ರಭುಗೌಡ ಅವರ ಸೇವೆಯನ್ನು ಗುರುತಿಸಿ, ವಿಶೇಷವಾಗಿ ಅಂಧರ ಬಾಳಿಗೆ ಬೆಳಕಾಗಿ ಕಾರ್ಯ ನಿರ್ವಹಿಸಿ ಉಚಿತ ತಪಾಸಣೆ, ಶಸ್ತ್ರಚಿಕಿತ್ಸೆ ಮೂಲಕ ವಿಜಯಪುರ ಜಿಲ್ಲೆಯಲ್ಲಿ ಮನೆ ಮಾತಾಗಿರುವ ಇವರ ಅನನ್ಯ ಸೇವೆ ಗುರುತಿಸಿ ಈ ಪ್ರಶಸ್ತಿ ನೀಡಿ ಗೌರವಿಸಿದೆ.ಪ್ರಶಸ್ತಿ ಪ್ರಧಾನ ಸಂದರ್ಭದಲ್ಲಿ ಹಿರಿಯ ಚಿತ್ರನಟ ಮುಖ್ಯಮಂತ್ರಿ ಚಂದ್ರು, ಆನಂದ ಮಾಮನಿ, ದತ್ತಾತ್ರೇಯ ಹೊಸಮಠ, ಸಂಗಮೇಶ ಪಾಟೀಲ ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಪಟ್ಟಣದ ಹೊಸನಗರದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದೈಹಿಕ ಶಿಕ್ಷಕ ಶಿವಶರಣ ಪೂಜಾರಿ ಇವರು ವಿಜಯಪುರದಲ್ಲಿ ನಡೆದ ಜಿಲ್ಲಾ ಮಟ್ಟದ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಕಾಲೇಜುಗಳ ದೈಹಿಕ ಶಿಕ್ಷಕರುಗಳ ಕ್ರೀಡಾಕೂಟದ ಚಕ್ರ ಎಸೆತ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಉದ್ದಜಿಗಿತದಲ್ಲಿ ದ್ವಿತೀಯ ಸ್ಥಾನ ಪಡೆದು ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Read More