Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಂತರರಾಷ್ಟ್ರೀಯ ಮಹಿಳಾ ದಿನವು ಮಹಿಳೆಯರ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಸಾಧನೆಗಳನ್ನು ಆಚರಿಸುವ, ಗೌರವಿಸುವ , ಮುಕ್ತ ಕಂಠದಿಂದ ಶ್ಲಾಘಿಸುವ ಜಾಗತಿಕ ದಿನವಾಗಿದೆ. ಈ ದಿನವು ಲಿಂಗ ಸಮಾನತೆಯನ್ನು ವೇಗಗೊಳಿಸಲು ಕ್ರಮಕ್ಕೆ ಕರೆ ನೀಡುತ್ತದೆ ಎಂದು ನಗರದ “ವಿವಾ ಫಿಟ್ನೆಸ್” ಕೇಂದ್ರದ ಒಡತಿ ವಿಜಯಲಕ್ಷ್ಮಿ ಗಿರಿಗಾಂವಿ ಹೇಳಿದರು.ಭಾನುವಾರ ಸಂಜೆ ನಗರದ ಹೊರವಲಯದ ಭೂತನಾಳ ಕೆರೆ ಉದ್ಯಾನವನದಲ್ಲಿ “ವಿವಾ ಫಿಟ್ನೆಸ್” ಕೇಂದ್ರದಿಂದ ಹಮ್ಮಿಕೊಂಡ ಸಂತೋಷಕೂಟ ಹಾಗೂ “ವಿವಾ ಫಿಟ್ನೆಸ್” ಸಾಧಕಿಯರಿಗೆ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಸರ್ಕಾರ ಹೆಣ್ಣು ಬ್ರೂಣ ಹತ್ಯೆ ನಿಷೇದಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರೂ ಹಣದಾಸೆಗಾಗಿ ಅಲ್ಲಲ್ಲಿ ಇನ್ನೂ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿವೆ ಎಂದು ವಿಜಯಲಕ್ಷ್ಮಿ ಕಳವಳ ವ್ಯಕ್ತಪಡಿಸಿದರು.ಈ ವೇಳೆ ಗೌರವ ಪುರಸ್ಕೃತರ ಪರವಾಗಿ ’ಉದಯರಶ್ಮಿ’ ದಿನಪತ್ರಿಕೆ ಪ್ರಕಾಶಕಿ ಶ್ರೀಮತಿ ಶೈಲಾ ಮಣೂರ ಮಾತನಾಡಿ, ಮಹಿಲೆ ತಾನು ಅಬಲೆಯಲ್ಲ ಸಬಲೆ ಎಂದು ಪ್ರತಿಯೊಂದು ಕ್ಷೇತ್ರದಲ್ಲೂ ಪುರುಷರಿಗೆ ಸಮಾನವಾಗಿ ಸಾಧನೆಗಳನ್ನು ಮಾಡಿ ಪ್ರಖ್ಯಾತರಾಗಿ ಅಪ್ರತಿಮ ಮಹಿಳೆ…

Read More

ಸಂಕಲನಾತ್ಮಕ ಪರೀಕ್ಷೆ: ಬಿಇಒ ಭೇಟಿ ಪರಿಶೀಲನೆ | ಬಿಇಓ ಅಶೋಕ ಬಸಣ್ಣವರ ಅಭಿಮತ ಉದಯರಶ್ಮಿ ದಿನಪತ್ರಿಕೆ ಚಿಕ್ಕಪಡಸಲಗಿ: ಇದು ಸ್ಪಧಾ೯ತ್ಮಕ ಯುಗ. ಮಕ್ಕಳಿಗೆ ವಿದ್ಯಾಭ್ಯಾಸವೇ ಪ್ರಾಮುಖ್ಯವಾಗಬೇಕು. ಓದಾಭ್ಯಾಸಕ್ಕೆ ಸತತ ಆದ್ಯತೆ ನೀಡಲೇ ಬೇಕು. ಶಿಕ್ಷಣದಿಂದ ಮಾತ್ರ ಜೀವನ ಚೈತ್ರ ಅರಳುತ್ತದೆ. ಭವಿಷ್ಯತ್ತಿನ ಜೀವನ ಚಿತ್ರಣ ಬದಲಾಗುತ್ತದೆ. ಆ ಕಾರಣ ಶಾಲಾ ಹಂತದಲ್ಲೇ ವಿದ್ಯಾರ್ಥಿಗಳು ಏಕಾಗ್ರತೆಯಿಂದ ಉತ್ತಮ ಶಿಕ್ಷಣ ಪಡೆಯಲು ಗಟ್ಟಿತನದ ಮನಸ್ಸು ತೋರಬೇಕು ಎಂದು ಜಮಖಂಡಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ ಬಸಣ್ಣವರ ಹೇಳಿದರು.ಸೋಮವಾರ ಚಿಕ್ಕಪಡಸಲಗಿ ಗ್ರಾಮದಲ್ಲಿ ಗದುಗಿನ ಜಗದ್ಗುರು ತೋಂಟದಾರ್ಯ ವಿದ್ಯಾಪೀಠ ಸಂಸ್ಥೆಯ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆಗೆ ಅನಿರೀಕ್ಷಿತ ಭೇಟಿ ನೀಡಿ ಪರೀಕ್ಷಾ ವ್ಯವಸ್ಥೆ ಪರಿಶೀಲಿಸಿದರು. ಮಧ್ಯಾಹ್ನದ ಅವಧಿಯಲ್ಲಿ ನಡೆದ ಪ್ರಸಕ್ತ 2024-25 ನೇ ಸಾಲಿನ 8 ಹಾಗೂ 9 ನೇ ತರಗತಿ ದ್ವೀತಿಯ ಸಂಕಲನಾತ್ಮಕ ಮೌಲ್ಯಾಂಕನ (ಎಸ್.ಎ.2) ಕನ್ನಡ ವಿಷಯದ ಪರೀಕ್ಷೆಯನ್ನು ಖುದ್ದಾಗಿ ಪರೀಕ್ಷಾ ಕೊಠಡಿಗಳಿಗೆ ತೆರಳಿ ಪರಿಶೀಲಿಸಿದರು. ಅಚ್ಚುಕಟ್ಟಾಗಿ ಪರೀಕ್ಷಾ ನಡೆಯುತ್ತಿರುವುದಕ್ಕೆ ಪ್ರಶಂಸೆ ವ್ಯಕ್ತಪಡಿಸಿದರು.ಪರೀಕ್ಷೆಯನ್ನು ಉತ್ಸಾಹದಿಂದ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ತಾಲೂಕಿನ ಕಣಕಾಲ ಗ್ರಾಮದ ದರ್ಗಾದ ಆವರಣದಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ ತಾಲೂಕು ಘಟಕ, ಬಸವನಬಾಗೇವಾಡಿಯ ಪಶು ಆಸ್ಪತ್ರೆ ಸಹಯೋಗದಲ್ಲಿ ಸೋಮವಾರ ಜಾನುವಾರು ಆರೋಗ್ಯ ಶಿಬಿರ ಜರುಗಿತು.ಈ ಸಂದರ್ಭದಲ್ಲಿ ಬಸವನಬಾಗೇವಾಡಿ ಪಶು ಆಸ್ಪತ್ರೆಯ ಸಹಾಯಕ ನಿರ್ದೇಶಕ ಪಿ.ಎಸ್.ಸಂಕ ಮಾತನಾಡಿ, ಇತ್ತೀಚಿನ ದಿನಗಳಲ್ಲಿ ಜಾನುವಾರುಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಇದರಿಂದಾಗಿ ಕೃಷಿಯಲ್ಲಿ ಹಿನ್ನೆಡೆಯಾಗುತ್ತಿದೆ. ರೈತ ಬಾಂಧವರು ಕೃಷಿ ಪೂರಕವಾಗಿ ಆಡು, ಕುರಿ, ಹಸು, ಎಮ್ಮೆಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸಾಕುವದರಿಂದ ಹಾಲಿನ ಉತ್ಪನ್ನ ಪಡೆಯುವ ಜೊತೆಗೆ ಜಾನುವಾರು ತ್ಯಾಜ್ಯಗಳಿಂದ ಗೊಬ್ಬರ ಹತ್ತಾರು ಲಾಭಗಳನ್ನು ಪಡೆದುಕೊಳ್ಳಬಹುದು. ಪಶು ಇಲಾಖೆಯಿಂದ ಸಾಕಷ್ಟು ಕಾರ್ಯಕ್ರಮಗಳಿವೆ. ಈ ಕಾರ್ಯಕ್ರಮಗಳ ಸದುಪಯೋಗ ಪಡೆದುಕೊಳ್ಳಬೇಕೆಂದರು.ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಪ್ರಸನ್ನ ಆರ್‌. ಮಾತನಾಡಿ, ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಅವರು ಹೈನುಗಾರಿಕೆಗೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಗ್ರಾಮದ ರೈತರು, ರೈತ ಮಹಿಳೆಯರು ಧರ್ಮಸ್ಥಳ ಸಂಘಗಳನ್ನು ಕಟ್ಟಿಕೊಂಡು ತಮ್ಮ ತಮ್ಮ ಕುಟುಂಬದ ಆರ್ಥಿಕ ಅಭಿವೃದ್ಧಿಯತ್ತ ಗಮನ ಹರಿಸಬೇಕೆಂದರು.ಪಶು…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಹಿರೇಮಠದಲ್ಲಿ ಮಾ.12 ರಂದು ಆಚರಿಸಲ್ಪಡುವ ಜಗದ್ಗುರು ರೇಣುಕಾಚಾರ್ಯ ಜಯಂತಿಯಂಗವಾಗಿ ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿಯವರ ಸಾನಿಧ್ಯದಲ್ಲಿ ಜಂಗಮ ಸಮಾಜ ಬಾಂಧವರ ಸಭೆ ಈಚೆಗೆ ಜರುಗಿತು.ಸಭೆಯಲ್ಲಿ ಮಾ.12 ರಂದು ಜಗದ್ಗುರು ರೇಣುಕಾಚಾರ್ಯ ಜಯಂತಿದಂದು ಸ್ಥಳೀಯ ಪೂಜ್ಯರ ಸಾನಿಧ್ಯದಲ್ಲಿ ಬೆಳಗ್ಗೆ ಜಗದ್ಗುರು ರೇಣುಕಾಚಾರ್ಯ ಮೂರ್ತಿಗೆ ರುದ್ರಾಭಿಷೇಕ, ಅಷ್ಟೋತ್ತರ ಬಿಲ್ವಾರ್ಚನೆ, ,ಮಹಾಮಂಗಳಾರತಿ ನೆರವೇರಿಸಲು ನಿರ್ಧರಿಸಲಾಯಿತು.ನಂತರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಜಗದ್ಗುರು ರೇಣುಕಾಚಾರ್ಯರ ಭಾವಚಿತ್ರದ ಮೆರವಣಿಗೆ ಜರುಗಿಸಿದ ನಂತರ ಹಿರೇಮಠದಲ್ಲಿ ಕಾರ್ಯಕ್ರಮ ಜರುಗಿಸುವುದು.ಈ ಕಾರ್ಯಕ್ರಮದ ಉದ್ಘಾಟನೆಗೆ ಸಚಿವ ಶಿವಾನಂದ ಪಾಟೀಲರನ್ನು ಸೇರಿದಂತೆ ಗಣ್ಯರನ್ನು ಆಹ್ವಾನಿಸುವದು. ಜಯಂತಿಯಂಗವಾಗಿ ಜಂಗಮ ವಟುಗಳಿಗೆ ಉಚಿತವಾಗಿ ಅಯ್ಯಾಚಾರ ಮಾಡಲಾಗುವದು. ಆಸಕ್ತರು ಹಿರೇಮಠಕ್ಕೆ ಬಂದು ತಮ್ಮ ಹೆಸರನ್ನು ನೋಂದಾಯಿಸುವ ಕುರಿತು ಚರ್ಚಿಸಲಾಯಿತು.ಸಭೆಯಲ್ಲಿ ಜಂಗಮ ಸಮಾಜದ ತಾಲೂಕಾಧ್ಯಕ್ಷ ರುದ್ರಮುನಿ ಸಾರಂಗಮಠ, ಮುಖಂಡರಾದ ಮುದಕಯ್ಯ ಕಾಳಹಸ್ತೇಶ್ವರಮಠ, ಶಿವಲಿಂಗಯ್ಯ ಹಿರೇಮಠ, ಪಂಚಾಕ್ಷರಿ ಕಾಳಹಸ್ತೇಶ್ವರಮಠ, ಗುರುಸಿದ್ದಯ್ಯ ಹಿರೇಮಠ, ರವಿ ಹಿರೇಮಠ, ರುದ್ರಯ್ಯ ಹಿರೇಮಠ, ಬಸಯ್ಯ ಮಠ, ಶಶಿಕಾಂತ ಸ್ಥಾವರಮಠ, ಸಚೀನ ಹಿರೇಮಠ, ಶ್ರೀಶೈಲ ಕರವೀರಮಠ…

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಬಸವೇಶ್ವರ ಜನ್ಮಸ್ಥಳ ಬಸವನಬಾಗೇವಾಡಿಯಲ್ಲಿ ಇದೇ ಪ್ರಥಮ ಬಾರಿಗೆ ಹೋಳಿ ಹಬ್ಬದಂಗವಾಗಿ ಬಸವೇಶ್ವರ ಸೇವಾ ಸಮಿತಿಯಿಂದ ಹಲಗೆ ಬಾರಿಸುವ ಸ್ಪರ್ಧೆಯನ್ನು ಮಾ.೧೨ ರಂದು ಸಂಜೆ ೪ ಗಂಟೆಗೆ ಸ್ಥಳೀಯ ಹಳೆಸಂತೆ ಕಟ್ಟೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಸವೇಶ್ವರ ಸೇವಾ ಸಮಿತಿ ಅಧ್ಯಕ್ಷ ಈರಣ್ಣ ಪಟ್ಟಣಶೆಟ್ಟಿ, ನಿರ್ದೇಶಕ ಎಂ.ಜಿ.ಆದಿಗೊಂಡ ಹೇಳಿದರು.ಪಟ್ಟಣದ ಬಸವೇಶ್ವರ ದೇವಸ್ಥಾನದಲ್ಲಿ ಸೋಮವಾರ ಸಂಜೆ ಕರೆದ ಸುದ್ದಿಗೋಷ್ಠಿಯಲ್ಲಿ ಜಂಟಿಯಾಗಿ ಮಾತನಾಡಿದ ಅವರು, ಹೋಳಿ ಹಬ್ಬ ಸಮೀಪಿಸುತ್ತಿದ್ದಂತೆ ಪಟ್ಟಣ ಸೇರಿದಂತೆ ಎಲ್ಲೆಡೆ ಹಲಗೆ ವಾದನ ಆರಂಭಗೊಂಡಿದ.ಬಣ್ಣದಾಟದವರೆಗೂ ಹಲಗೆ ಬಾರಿಸುವ ಕಲೆ ಮೆರೆಯಲಿದೆ. ಹಲಗೆ ಬಾರಿಸುವದು ವಿಶಿಷ್ಠ ಕಲೆಯಾಗಿದೆ. ಈ ಕಲೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಇದೇ ಪ್ರಥಮ ಬಾರಿಗೆ ಹಲಗೆ ಬಾರಿಸುವ ಸ್ಪರ್ಧೆಯನ್ನು ಆಯೋಜಿಸಲಾಗುತ್ತಿದೆ. ಪಟ್ಟಣದಲ್ಲಿ ಈಚೆಗೆ ಹೋಳಿ ಹಬ್ಬವು ಕಳೆಗುಂದುತ್ತಿದೆ. ಮುಂದಿನ ಪೀಳಿಗೆಗೆ ಹೋಳಿ ಹಬ್ಬದ ಮೆರಗು ಗೊತ್ತಾಗಬೇಕು. ಎಲ್ಲ ಬಾಂಧವರು ಸೌಹಾರ್ದತೆಯಿಂದ ಹೋಳಿ ಹಬ್ಬವನ್ನು ಆಚರಿಸುವಂತಾಗುವ ಉದ್ದೇಶವು ಸಮಿತಿ ಹೊಂದಿದೆ. ಮಾ.೧೪ ರಂದು ಹೋಳಿ ಹಬ್ಬದ ಬಣ್ಣದಾಟ ನಡೆಯಲಿದೆ.…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಎಸ್‌ಎಸ್‌ಎಲ್‌ಸಿ ಮಕ್ಕಳು ಪರೀಕ್ಷೆಯನ್ನು ಉತ್ತಮವಾಗಿ ಬರೆಯುವುದರ ಮೂಲಕ ಉತ್ತಮ ಫಲಿತಾಂಶ ಪಡೆಯುವಂತಾಗಲಿ ಎಂದು ಶಿಕ್ಷಣ ಸಂಯೋಜಕ ಎಸ್.ಎಮ್. ಕಪನಿಂಬರಗಿ ಹೇಳಿದರು.ಪಟ್ಟಣದ ಚೈತನ್ಯ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಶನಿವಾರ ಜರುಗಿದ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ ಹಾಗೂ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳ ಶುಭಹಾರೈಕೆ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು.ಮಕ್ಕಳು ತಮ್ಮ ಜೀವನದುದ್ದಕ್ಕೂ ನಕಲು ಮುಕ್ತ ಪರೀಕ್ಷೆ ಬರೆಯಬೇಕು. ಅದಕ್ಕಾಗಿ ಶಿಕ್ಷಕರು ಹಾಗೂ ಪಾಲಕರು ಅವರಲ್ಲಿ ಆತ್ಮಸ್ಥೈರ್ಯ ತುಂಬುವ ಕಾರ್ಯ ಮಾಡಬೇಕು ಎಂದರು.ಸಂಸ್ಥೆಯ ಕಾರ್ಯದರ್ಶಿ ಜಿ.ಕೆ.ಕುಲಕರ್ಣಿ ಪ್ರಾಸ್ತಾವಿಕವಾಗಿ ಮಾತನಾಡಿ, ಸಂಸ್ಥೆಯು ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸುವ ಮೂಲಕ ಬಡಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಗುರಿ ಹೊಂದಿದೆ. ಆದ್ದರಿಂದ ಮಕ್ಕಳು ತರಗತಿಗಳಿಗೆ ಗೈರಾಗದಂತೆ ನೋಡಿಕೊಳ್ಳುವ ಮೂಲಕ ಪಾಲಕರು ತಮ್ಮ ಜವಾಬ್ದಾರಿ ನಿರ್ವಹಿಸಬೇಕು ಎಂದರು.ಅಧ್ಯಕ್ಷತೆ ವಹಿಸಿದ್ದ ಜಿ.ಎಸ್.ಬೇವನೂರ ಮಾತನಾಡಿ, ಶಿಕ್ಷಕರು ಹಾಗೂ ಪಾಲಕರು ಮಕ್ಕಳಿಗೆ ವಿದ್ಯೆಯ ಜೊತೆಗೆ ಸಂಸ್ಕಾರ ನೀಡಬೇಕು ಎಂದರು. ಶಿಕ್ಷಕ ಜಿ.ಎಸ್.ಘತಾಟೆ ಮಾತನಾಡಿದರು.ನಂತರ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಲಾಯಿತು.…

Read More

ವಿಜಯಪುರ ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘದಿಂದ ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಜಿಲ್ಲಾ ನೂತನ ಛಾಯಾಗ್ರಾಹಕರ ಸಂಘ ಹಾಗೂ ಕರ್ನಾಟಕ ಛಾಯಾಚಿತ್ರಗ್ರಾಹಕರ ಸಂಘ ಬೆಂಗಳೂರಿನ ಸಹಯೋಗದಲ್ಲಿ ಅಂತರ ರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಛಾಯಾಗ್ರಹಣದ ಕ್ಷೇತ್ರದಲ್ಲಿರುವ ಮಹಿಳಾ ಸಾಧಕಿಯರಿಗೆ ಗೌರವ ಸನ್ಮಾನ ಹಾಗೂ ಏಪ್ರೀಲ್ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯುವ ೨೦೨೫ರ ೧೧ನೇ ಡಿಜಿ ಇಮೇಜ್ ವಸ್ತು ಪ್ರದರ್ಶನದ ಭಿತ್ತಿಪತ್ರ ಅನಾವರಣ ಕಾರ್ಯಕ್ರಮ ಈಚೆಗೆ ಉದ್ಘಾಟಿಸಲಾಯಿತು.ನಗರದ ಸರಕಾರಿ ಆರ್ಟ್ ಗ್ಯಾಲರಿಯಲ್ಲಿ ನಡೆದ ಈ ಕಾರ್ಯಕ್ರಮ ಉದ್ಘಾಟಿಸಿದ ಜಿಲ್ಲಾ ಕಾರ್ಮಿಕ ಅಧಿಕಾರಿ ಉಮಾಶ್ರಿ ಕೋಳಿ ಮಾತನಾಡಿ, ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿಯೂ ಸ್ವಾವಲಂಭಿಯಾಗಿ ಬದುಕು ರೂಪಿಸಿಕೊಳ್ಳಬೇಕು. ಇವತ್ತು ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ತಮ್ಮ ವಿಶಿಷ್ಠವಾದ ಛಾಪು ಮೂಡಿಸುತ್ತ ಯಶಸ್ವಿಯಾಗಿ ಜೀವನ ಸಾಗಿಸುತಿದ್ದಾರೆ. ಛಾಯಾಗ್ರಹಣ ಕ್ಷೇತ್ರದಲ್ಲೂ ಮದುವೇ ಮನೆ ಸಹಿತ ವನ್ಯ ಜೀವಿ ಹವ್ಯಾಸಿ ಛಾಯಾಗ್ರಹಣ, ಡಿಸೈನಿಂಗ್, ವಿಡಿಯೊ ಎಡಿಟಿಂಗ್ ಮಾಡುವ ಎಷ್ಟೋ ಮಹಿಳೆಯರು ನಮ್ಮ ನಾಡಿನಲ್ಲಿದ್ದಾರೆ. ಅವರಿಗೆ ಸರಿಯಾದ ಅವಕಾಶ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಗದಗ ನಗರದ ಜಗದ್ಗುರು ತೊಂಟದಾರ್ಯ ಮಠದ ಸಭಾಮಂಟಪದಲ್ಲಿ ಕರ್ನಾಟಕ ರಾಜ್ಯ ಮಹಿಳಾ ನೌಕರರ ಸಂಘ ರಾಜ್ಯ ಘಟಕ ಹಮ್ಮಿಕೊಂಡ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಾಧಕ ಮಹಿಳೆಯರಿಗೆ ಕೊಡಮಾಡುವ ವೀರರಾಣಿ ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಯನ್ನು ತಾಲೂಕಿನ ಕೂಡಗಿ ಕರ್ನಾಟಕ ಪಬ್ಲಿಕ್ ಸರ್ಕಾರಿ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆಯ ಸಹಶಿಕ್ಷಕಿ, ಯುವ ಸಾಹಿತಿ, ಮಕ್ಕಳ ನೆಚ್ಚಿನ ಪ್ರಶಸ್ತಿ ಪುರಸ್ಕೃತ ಪ್ರತಿಭಾ ತೊರವಿ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಲಾಯಿತು.ಈ ಸಂದರ್ಭದಲ್ಲಿ ಪ್ರಜಾಪಿತ ಬ್ರಹ್ಮಕುಮಾರಿ ಆಶ್ರಮದ ಜಯಂತಿ ಅಕ್ಕ, ರಾಜ್ಯ ಮಹಿಳಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷೆ ಲತಾ ಬಿರಾದಾರ, ಗದಗ ಪಿಎಸ್ಆಯ್ ಜಿ.ಟಿ. ಜಕ್ಕಲಿ, ಅರಣ್ಯಾಧಿಕಾರಿ ಸ್ನೇಹಾ, ಹಿರಿಯ ಸಾಹಿತಿ ಶಂಕರ ಬೈಚಬಾಳ, ಸಿದ್ದರಾಮ ಬಿರಾದಾರ, ಕಮಲಾ ಮುರಾಳ ಉಪಸ್ಥಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬಿ. ಎಲ್.ಡಿ. ಇ (ಡೀಮ್ಡ್) ವಿಶ್ವವಿದ್ಯಾಲಯ ಕುಲಾಧಿಪತಿಯಾಗಿ ಬಸನಗೌಡ ಎಂ ಪಾಟೀಲ ಸೋಮವಾರ ಅಧಿಕಾರ ವಹಿಸಿಕೊಂಡರು.ಮಾತೃ ಸಂಸ್ಥೆಯಾದ ಬಿ.ಎಲ್. ಡಿ. ಇ ಸಂಸ್ಥೆ 5 ವರ್ಷಗಳ ಅವಧಿಯ ಈ ಹುದ್ದೆಗೆ ಫೆಬ್ರುವರಿ 25 ರಂದು ಬಸನಗೌಡ ಎಂ ಪಾಟೀಲ ಹೆಸರನ್ನು ನಾಮನಿರ್ದೇಶನಗೊಳಿಸಿತ್ತು.32 ವರ್ಷದ ಬಸನಗೌಡ ಎಂ ಪಾಟೀಲ, ಕೈಗಾರಿಕೆ ಸಚಿವ ಎಂ ಬಿ ಪಾಟೀಲ ಅವರ ಪುತ್ರನಾಗಿದ್ದು, ಅಮೇರಿಕಾದ ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದಿಂದ ಪದವಿ ಹಾಗೂ ಜಿನಿವಾ ಸ್ಕೂಲ್ ಆಫ್ ಡಿಪ್ಲೊಮೆಸಿ ಇಂದ ಡಿಪ್ಲೋಮಾ ಇನ್ ಇಂಟರ್ ನ್ಯಾಶನಲ್ ರಿಲೇಶನ್ಶಿಪ್ ಪೂರ್ಣಗೊಳಿಸಿದ್ದಾರೆ.ಈ ಹಿಂದೆ ಇವರು ಬಿ.ಎಲ್.ಡಿ. ಇ ಸಂಸ್ಥೆ ಆಡಳಿತ ಮಂಡಳಿ ಹಾಗೂ ಬಿ ಎಲ್ ಡಿ ಇ ಡೀಮ್ಡ್ ವಿಶ್ವವಿದ್ಯಾಲಯ ಆಡಳಿತ ಮಂಡಳಿಯ ಸದಸ್ಯರಾಗಿ ಅನುಭವ ಹೊಂದಿದ್ದಾರೆ.ಈ ಸಂದರ್ಭದಲ್ಲಿ ಸಮಕುಲಾಧಿಪತಿ ಡಾ. ವೈ. ಎಂ.ಜಯರಾಜ, ಕುಲಪತಿ ಡಾ. ಆರ್ ಎಸ್ ಮುಧೋಳ, ರಿಜಿಸ್ಟ್ರಾರ್ ಡಾ. ರಾಘವೇಂದ್ರ ಕುಲಕರ್ಣಿ, ವೈದ್ಯಕೀಯ ಕಾಲೇಜು ಪ್ರಾಚಾರ್ಯ ಡಾ. ಅರವಿಂದ ಪಾಟೀಲ, ಕಾನೂನು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅಂತರರಾಷ್ಟ್ರೀಯ ಮಹಿಳಾ ದಿನವು ಮಹಿಳೆಯರ ಸಾಮಾಜಿಕ, ಆರ್ಥಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಸಾಧನೆಗಳನ್ನು ಆಚರಿಸುವ, ಗೌರವಿಸುವ , ಮುಕ್ತ ಕಂಠದಿಂದ ಶ್ಲಾಘಿಸುವ ಜಾಗತಿಕ ದಿನವಾಗಿದೆ. ಈ ದಿನವು ಲಿಂಗ ಸಮಾನತೆಯನ್ನು ವೇಗಗೊಳಿಸಲು ಕ್ರಮಕ್ಕೆ ಕರೆ ನೀಡುತ್ತದೆ ಎಂದು ನಗರದ “ವಿವಾ ಫಿಟ್ನೆಸ್” ಕೇಂದ್ರದ ಒಡತಿ ವಿಜಯಲಕ್ಷ್ಮಿ ಗಿರಿಗಾಂವಿ ಹೇಳಿದರು.ಭಾನುವಾರ ಸಂಜೆ ನಗರದ ಹೊರವಲಯದ ಭೂತನಾಳ ಕೆರೆ ಉದ್ಯಾನವನದಲ್ಲಿ “ವಿವಾ ಫಿಟ್ನೆಸ್” ಕೇಂದ್ರದಿಂದ ಹಮ್ಮಿಕೊಂಡ ಸಂತೋಷಕೂಟ ಹಾಗೂ “ವಿವಾ ಫಿಟ್ನೆಸ್” ಸಾಧಕಿಯರಿಗೆ ಪುರಸ್ಕಾರ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಸರ್ಕಾರ ಹೆಣ್ಣು ಬ್ರೂಣ ಹತ್ಯೆ ನಿಷೇದಿಸಿ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದ್ದರೂ ಹಣದಾಸೆಗಾಗಿ ಅಲ್ಲಲ್ಲಿ ಇನ್ನೂ ಇಂತಹ ಪ್ರಕರಣಗಳು ಬೆಳಕಿಗೆ ಬರುತ್ತಿವೆ ಎಂದು ವಿಜಯಲಕ್ಷ್ಮಿ ಕಳವಳ ವ್ಯಕ್ತಪಡಿಸಿದರು.ಈ ವೇಳೆ ಗೌರವ ಪುರಸ್ಕೃತರ ಪರವಾಗಿ ’ಉದಯರಶ್ಮಿ’ ದಿನಪತ್ರಿಕೆ ಪ್ರಕಾಶಕಿ ಶ್ರೀಮತಿ ಶೈಲಾ ಮಣೂರ ಮಾತನಾಡಿ, ಮಹಿಲೆ ತಾನು ಅಬಲೆಯಲ್ಲ ಸಬಲೆ ಎಂದು ಪ್ರತಿಯೊಂದು ಕ್ಷೇತ್ರದಲ್ಲೂ ಪುರುಷರಿಗೆ ಸಮಾನವಾಗಿ ಸಾಧನೆಗಳನ್ನು ಮಾಡಿ ಪ್ರಖ್ಯಾತರಾಗಿ ಅಪ್ರತಿಮ ಮಹಿಳೆ…

Read More