Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ತಾಲ್ಲೂಕಿನ ಮುಳವಾಡ ಗ್ರಾಮದ ಸರ್ಕಾರಿ ಹೆಣ್ಣು ಮಕ್ಕಳ ಮಾದರಿ ಪ್ರಾಥಮಿಕ ಶಾಲೆಯಲ್ಲಿ ವಾರ್ಷಿಕ ಸ್ನೇಹ ಸಮ್ಮೇಳನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಸಾನಿಧ್ಯ ಮನಗೂಳಿ ಹಿರೇಮಠದ ಶ್ರೀ ಸಂಗನಬಸವ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಿ ಮಾತನಾಡಿ ಮಕ್ಕಳಿಗೆ ಶಿಕ್ಷಣ ಜೋತೆಗೆ ಉತ್ತಮ ಸಂಸ್ಕಾರ ಕಲಿಸಿದರೆ ಆ ಮಗು ಸಮಾಜದಲ್ಲಿ ತಂದೆತಾಯಿಗಳಿಗೆ ಗುರುಹಿರಿಯರಿಗೆ ಸಮಾಜಕ್ಕೆ ಗ್ರಾಮಕ್ಕೆ ಒಳಿತನ್ನು ಬಯಸುವ ಉತ್ತಮ ಪ್ರಜೆಗಳಾಗಿ ದೇಶ ಕಟ್ಟುವ ಕೆಲಸದಲ್ಲಿ ಮುಂದೆ ಇರುವರು ಇಂತಹ ಮಕ್ಕಳನ್ನು ಈ ಶಾಲೆ ನೀಡಿದೆ ಎಂದು ನನಗೆ ಈ ಶಾಲೆ ಬಗ್ಗೆ ಹೆಮ್ಮೆ ಇದೆ ಎಂದು ಹೇಳಿದರು.ಉಪನ್ಯಾಸಕಿಯಾಗಿ ಕ್ಷೇತ್ರ ಸಂಪನ್ಮೂಲ ವ್ಯಕ್ತಿ ಭಾರತಿ ಸಿದ್ದನಗೌಡ ಪಾಟೀಲ ಮಾತನಾಡಿ ನಾನು ಇದೆ ಶಾಲೆಯ ಹಳೆಯ ವಿದ್ಯಾರ್ಥಿ ಶಾಲೆಯಲ್ಲಿ ಮಹಾನ್ ಸಂತರ ಸತ್ಪುರುಷರ ನಡೆದಾಡಿದ ಭೂಮಿ ಇದಾಗಿದ್ದು ಈ ಶಾಲೆಯ ಹೆಸರು ಉಳಿಯ ಬೇಕಾದರೆ ನಾವು ಯಾವುದಾದರೊಂದು ಹುದ್ದೆಯಲ್ಲಿ ಇದ್ದರೆ ಮಾತ್ರ ನನ್ನ ಶಾಲೆ ಹೆಸರು ಬೆಳಕಿನಂತೆ ಹರಡುತ್ತದೆ ಆದ್ದರಿಂದ ಮಕ್ಕಳೆ ನೀವು ಚೆನ್ನಾಗಿ ಓದಿ…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದ ಎಸ್.ಕೆ.ಎಂ.ಟ್ರಸ್ಟ್ ಬೆಳ್ಳುಬ್ಬಿ ಶಿಕ್ಷಣ ಸಂಸ್ಥೆಯ ವಾರ್ಷಿಕೋತ್ಸವ ನವಚೈತನ್ಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿತ್ತು.ಮುಖ್ಯ ಅತಿಥಿಗಳಾಗಿ ಪಿಎಸ್‌ಐ ಎಮ್.ಬಿ.ಬಿರಾದಾರ ಮಾತನಾಡಿ ಮಗು ಹುಟ್ಟಿನಿಂದ ತನ್ನ ಬೆಳವಣಿಗೆಯಲ್ಲಿ ಪರಿಸರದ ಪರಿಣಾಮವಾಗಿ ಅಲ್ಪ ಮಾನವರಾಗಿ ಬಿಡುತ್ತಿದ್ದಾರೆ, ಆ ಮಗುವಿಗೆ ಉತ್ತಮ ಸಂಸ್ಕಾರ ಮತ್ತು ಶಿಕ್ಷಣ ನೀಡಿದರೆ ವಿಶ್ವಮಾನವನಾಗಿ ಗುರುತಿಸಿಕೊಳ್ಳುವಲ್ಲಿ ಶಿಕ್ಷಕರ ಪಾತ್ರ ಬಹಳ ಪ್ರಾಮುಖ್ಯತೆ ಪಡೆದುಕೊಳ್ಳುತ್ತದೆ ಆದುದರಿಂದ ನಿಜವಾಗಿಯೂ ಶಾಲೆಗಳು ಜೀವಂತ ದೇವಾಲಯಗಳು ಇದ್ದಂತೆ ಎಂದು ತಿಳಿಸಿದರು.ತಾಯಿಯು ಮಗುವಿನ ಬೆಳವಣಿಗೆ ನಿರ್ಲಕ್ಷ್ಯ ತೋರಬಾರದು ಏಕೆಂದರೆ ಮಗು ಆರು ವರ್ಷ ತಾಯಿ ತಂದೆ ಕಾರ್ಯಗಳನ್ನು ನೋಡಿ ಕಲಿಯುತ್ತದೆ ಆದ್ದರಿಂದ ತಾಯಿ ಮೊದಲ ಗುರು ಇದ್ದಂತೆ ಮಗುವಿಗೆ ಉತ್ತಮ ಸಂಸ್ಕಾರ ನೀಡಿ ಬೆಳೆಸಿದರೆ ಸಮಾಜಕ್ಕೆ ಅದೇ ದೊಡ್ಡ ಕೊಡುಗೆ ಎಂದು ಹೇಳಿದರು.ಉಪನ್ಯಾಸಕರಾಗಿ ನಿರ್ಮಲಾ ಶೀಲವಂತ ಮಾತನಾಡಿ ಮಕ್ಕಳಿಗೆ ಕುಟುಂಬ, ಸಮಾಜ, ಪರಿಸರ ಇವುಗಳ ಬಗ್ಗೆ ಸಂಪೂರ್ಣ ಜ್ಞಾನ ತಾಯಿ ಬಾಲ್ಯದಲ್ಲಿ ನೀಡಿದರೆ ಮಗು ಬಹಳ ಖುಷಿ ಸಂತೋಷ ಸಂಭ್ರಮ ದಿಂದ ಬೆಳೆದು ಉತ್ತಮ ಆರೋಗ್ಯವಂತ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಿಳೆಯರು ಸ್ವಾವಲಂಬಿಯಾಗುವುದು ಸಮಾಜದ ಸಮಗ್ರ ಅಭಿವೃದ್ಧಿಗೆ ಬಹಳ ಮುಖ್ಯ ಎಂದು ಬೆಂಗಳೂರಿನ ನಿವೃತ್ತ ಪ್ರಾಧ್ಯಾಪಕ ಪ್ರೊ. ಐ.ಎಸ್. ವಿದ್ಯಾಸಾಗರ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಬುಧವಾರ ಆಯೋಜಿಸಿದ್ದ ‘ಮಹಿಳೆಯರ ವಿಮೋಚನೆಗೆ ಡಾ. ಬಿ.ಆರ್. ಅಂಬೇಡ್ಕರವರ ಕೊಡುಗೆಗಳು’ ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ಭಾರತವು ವಿವಿಧ ಜನಾಂಗ ಮತ್ತು ಧರ್ಮಗಳಿಂದ ಕೂಡಿದ ರಾಷ್ಟçವಾಗಿದ್ದು, ಇತಿಹಾಸದಲ್ಲಿ ಮಹಿಳೆಯರು ಪಿತೃಪ್ರಧಾನ ವ್ಯವಸ್ಥೆಯಿಂದ ಶೋಷಣೆಗೆ ಒಳಗಾಗಿದ್ದಾರೆ. ಈ ಶೋಷಣೆಯನ್ನು ತೊಡೆದುಹಾಕಲು ಮತ್ತು ಮಹಿಳೆಯರ ಸಬಲಿಕರಣಕ್ಕೆ ಪೂರಕವಾಗಿ ಹಲವು ಮಹಾನುಭಾವರು ಶ್ರಮಿಸಿದ್ದಾರೆ ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸ್ನಾತಕ ಪದವಿ (ಎನ್.ಇ.ಪಿ) ವಿಭಾಗ ವಿಶೇಷಾಧಿಕಾರಿ ಪ್ರೊ. ಸಕ್ಪಾಲ್ ಹೂವಣ್ಣ ಮಾತನಾಡಿ, ವಿದ್ಯಾರ್ಥಿನಿಯರಿಗೆ ಸಾಮಾಜಿಕ ಮಹಿಳಾ ಸ್ಥಾನಮಾನ ಮತ್ತು ಕಾಯ್ದೆ ಕಾನೂನುಗಳ ಕುರಿತು ತಿಳಿಸಿದರು.ಕಾರ್ಯಕ್ರಮದಲ್ಲಿ ಅತಿಥಿ ಉಪನ್ಯಾಸಕ ಜಗದೀಶ ಜಾವೂರು ಪ್ರಾಸ್ತಾವಿಕ ನುಡಿಗಳನ್ನಾಡಿದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜ್ಞಾನ ಕ್ಷೇತ್ರದಲ್ಲಿ ಮಹಿಳೆ ಸಮಾನತೆ ಸಾಧಿಸಲಿ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ನಿಕಾಯದ ಡೀನ್ ಪ್ರೊ. ಕೆ ರಮೇಶ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಬುಧವಾರ ಆಯೋಜಿಸಿದ್ದ ‘ಸ್ಮಾರ್ಟ ಆಪ್ಟಿಕಲ್ ಮಟೆರಿಯಲ್ಸ ಆ್ಯಂಡ್ ಆ್ಯಂಗುಲರ್ ಮೊಮೆಂಟಮ್’ ಎಂಬ ವಿಶೇಷ ಉಪನ್ಯಾಸದಲ್ಲಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ನಿತ್ಯಜೀನದಲ್ಲಿ ವೈಜ್ಞಾನಿಕ ವಿಚಾರಗಳು, ಆಚರಣೆಗಳು ಬಳಕೆಯಲ್ಲಿ ಇರಬೇಕು. ವಿದ್ಯಾರ್ಥಿನಿಯರ ಜೀವನಕ್ರಮವೂ ವೈಜ್ಞಾನಿಕತೆಯಿಂದ ಒಳಗೊಂಡಿರಬೇಕು ಎಂದರು.ಕಾರ್ಯಕ್ರಮದಲ್ಲಿ ಶಿಕ್ಷಣ ನಿಕಾಯದ ಡೀನ್ ಪ್ರೊ. ಸಕ್ಪಾಲ್ ಹೂವಣ್ಣ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅತಿಥಿ ಉಪನ್ಯಾಸಕಿ ವಾಣಿಶ್ರೀ ಕಿರಣಗಿ ಪ್ರಾಸ್ತಾವಿಕ ನುಡಿಗಳನ್ನಾಡಿದರು.ಕಾರ್ಯಕ್ರಮದ ಸಂಯೋಜಕಿ ಡಾ. ಜಿ ಸೌಭಾಗ್ಯ, ಬೋಧಕ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಪ್ರಾದೇಶಿಕ ಸಾರಿಗೆ ಕಚೇರಿ ವಿಜಯಪುರ ವತಿಯಿಂದ ರಸ್ತೆ ಸುರಕ್ಷತಾ ಮಾಸಾಚರಣೆ-೨೫ ಅಂಗವಾಗಿ ಮಾ.೬ ರಂದು ಬೆಳಿಗ್ಗೆ ೯-೩೦ಕ್ಕೆ ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದವರೆಗೆ ಪ್ರೌಢಶಾಲಾ ವಿದ್ಯಾರ್ಥಿಗಳಿಂದ ಕಾಲ್ನಡಿಗೆ ಜಾಥಾ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಬೆಂಗಳೂರಿನ ಗೋಲ್ಡನ್ ಪಾಮ್ ಕ್ಯಾಂಟೀನ್ ಮತ್ತು ಅದರ ಎಕ್ಸಟೆನ್ಸೆನ್ ಕೌಂಟರ್‌ಗಳಲ್ಲಿ ತಾತ್ಕಾಲಿಕ ಖಾಲಿ ಹುದ್ದೆಗಳಿಗಾಗಿ (೧೧ ತಿಂಗಳುಗಳಿಗೆ ಮಾತ್ರ) ನಿವೃತ್ತ ಹಾನರರಿ ಕ್ಯಾಪ್ಟನ್, ಲೆಫ್ಟಿನೆಂಟ್, ಜೆಸಿಓ, ಎನ್‌ಸಿಒ ಮತ್ತು ಅವರ ಅಲಂಬಿತ ಪುರುಷ-ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು gಠಿಛಿsಛಿbiಡಿ.ಛಿo.iಟಿ ಸಂಪರ್ಕಿಸಬಹುದಾಗಿದ್ದು, ಅರ್ಜಿ ಸಲ್ಲಿಸಲು ದಿನಾಂಕ : ೧೦-೦೩-೨೦೨೫ ಕೊನೆಯ ದಿನವಾಗಿದ್ದು, ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಉಪನಿರ್ದೇಶಕರು ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ವಿಜಯಪುರ ಕಚೇರಿ ದೂ: ೦೮೩೫೨-೨೫೦೯೧೩ ಸಂಖ್ಯೆಗೆ ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನ್ನಡ ಪುಸ್ತಕ ಪ್ರಾಧಿಕಾರ ಪ್ರಕಟಿಸಿರುವ ಬಸವಯುಗದ ವಚನ ಮಹಾ ಸಂಪುಟ-೧ ಹಾಗೂ ಬಸವೋತ್ತರ ಯುಗದ ವಚನ ಮಹಾಸಂಪುಟ-೨ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಿರಿಗನ್ನಡ ಪುಸ್ತಕ ಮಾರಾಟ ಮಳಿಗೆಯಲ್ಲಿ ಮಾರಾಟಕ್ಕೆ ಲಭ್ಯವಿದೆ.ಈ ಎರಡು ಸಂಪುಟಗಳು ಸೇರಿ ೬೦೦ ರೂ. ಬೆಲೆ ಇದ್ದು, ಆಸಕ್ತರು ಪುಸ್ತಕಗಳನ್ನು ಖರೀದಿಸಬಹುದಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಭೀಮಾಂತರಂಗ ಆನ್ ಲೈನ್ ಸಾಹಿತ್ಯಿಕ ಮತ್ತು ಸಾಂಸ್ಕೃತಿಕ ಜಗಲಿ ಕೇಂದ್ರ ಇಂಡಿ ವತಿಯಿಂದ ಭೀಮಾಂತರಂಗ ಪ್ರಕಾಶನದಡಿಯಲ್ಲಿ ಪ್ರಕಟಗೊಂಡ ಭೀಮಾಂತರಂಗ ಉಪನ್ಯಾಸ ಮಾಲಿಕೆ-೨ ಕೃತಿ ಲೋಕಾರ್ಪಣೆ ಮಾರ್ಚ್ ೮ ಕ್ಕೆ ಪಟ್ಟಣದ ಕರ್ನಾಟಕ ಬಿಎಡ್ ಕಾಲೇಜಿನಲ್ಲಿ ಬೆಳಿಗ್ಗೆ ೧೦.೩೦ ಕ್ಕೆ ಜರುಗಲಿದೆ.ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಕಾರ್ಯಕ್ರಮ ಉದ್ಘಾಟಿಸಲಿದ್ದು, ನಾಡಿನ ಹಿರಿಯ ಕಾದಂಬರಿಕಾರ ಅಥಣಿಯ ಡಾ. ಬಾಳಾಸಾಹೇಬ ಲೋಕಾಪುರ ಅವರು ಕೃತಿ ಲೋಕಾರ್ಪಣೆ ಮಾಡಲಿದ್ದಾರೆ. ಕರ್ನಾಟಕ ವಿದ್ಯಾವರ್ಧಕ ಸಂಸ್ಥೆ ಇಂಡಿ ಅಧ್ಯಕ್ಷರಾದ ಬಸವರಾಜ ಕುಮಸಗಿ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್.ಆಲಗೂರ, ಹಿರಿಯ ಸಾಹಿತಿ ಡಿ.ಎನ್.ಅಕ್ಕಿ ಮುಖ್ಯ ಅತಿಥಿಗಳಾಗಿ ಆಗಮಿಸುವರು. ಕೃತಿಯ ಸಂಪಾದಕ ಮಂಡಳಿ ರಾಘವೇಂದ್ರ.ಕುಲಕರ್ಣಿ, ಸಿ.ಎಂ.ಬಂಡಗರ, ಗೀತಯೋಗಿ, ವೈ.ಜಿ.ಬಿರಾದಾರ, ಸಂತೋಷ ಬಂಡೆ ಉಪಸ್ಥಿತರಿರುವರು.ಜಗಲಿ ಕೇಂದ್ರದ ಸದಸ್ಯರಾದ ಶ್ರೀಧರ ಹಿಪ್ಪರಗಿ, ಬಸವರಾಜ ಕಿರಣಗಿ, ವೀರಣ್ಣ ದಸ್ತರಡ್ಡಿ, ಬಿ.ಸಿ.ಭಗವಂತಗೌಡರ, ಎಸ್.ಕೆ.ಮಾವಿನಮರ, ಮಾಧ್ಯಮ ಸಲಹೆಗಾರರಾದ ಉಮೇಶ ಕೊಳೇಕರ, ಖಾಜು ಶಿಂಗೆಗೋಳ ಭಾಗವಹಿಸುವರು.ಈ ಕೃತಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ತಾಲೂಕಿನ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಜ್ಞಾನ ಮತ್ತು ಕಲಾ ವಸ್ತು ಪ್ರದರ್ಶನದಿಂದ ಮಕ್ಕಳಲ್ಲಿ ಹುದುಗಿರುವ ಪ್ರತಿಭೆ, ಸೃಜನಾತ್ಮಕತೆ, ವೈಜ್ಞಾನಿಕ ಮನೋಭಾವ, ಕೌಶಲ ಅಭಿವೃದ್ಧಿ ಹೊರಹೊಮ್ಮುತ್ತದೆ. ಅಲ್ಲದೇ ಇಂತಹ ವಿಜ್ಞಾನಕ್ಕೆ ಸಂಬಂಧಿಸಿದ ನೂತನ ಮಾದರಿಗಳನ್ನು ಮಕ್ಕಳು ಮಾಡುವುದರಿಂದ ವೈಜ್ಞಾನಿಕ ಕ್ಷೇತ್ರದಲ್ಲಿ ಅಭಿವೃದ್ಧಿ ಸಾಧಿಸುವಲ್ಲಿ ಯಾವುದೇ ಸಂದೇಹವಿಲ್ಲ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಟಿ.ಎಸ್ ಆಲಗೂರ ಹೇಳಿದರು.ತಾಲೂಕಿನ ಹಿರೇಬೇವನೂರ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡ ರಾಷ್ಟ್ರೀಯ ವಿಜ್ಞಾನ ದಿನದ ಪ್ರಯುಕ್ತ ವಿಜ್ಞಾನ ವಸ್ತು ಪ್ರದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ವಿಜ್ಞಾನ ಮತ್ತು ವಸ್ತು ಪ್ರದರ್ಶನದಿಂದ ಬೆಳೆಯುವ ಸಿರಿ ಮೊಳಕೆಯಲ್ಲಿ ಎಂಬ ಗಾದೆ ಮಾತಿನಂತೆ ಮಕ್ಕಳಲ್ಲಿನ ನೈಜತೆ, ಕ್ರಿಯಾತ್ಮಕ ಚಟುವಟಿಕೆ, ಹಾಗೂ ಮಕ್ಕಳ ಸುಪ್ತವಾದ ಪ್ರತಿಭೆ ಅರಳುತ್ತದೆ ಅಲ್ಲದೆ ಸಹಜವಾಗಿ ವೀಕ್ಷಣೆ ಕಲೆ ಬೆಳೆಯುತ್ತದೆ ಎಂದರು.ವೇದಮೂರ್ತಿ ದಯಾನಂದ ಹಿರೇಮಠ ಆಶಿರ್ವಚನ ನೀಡಿದರು.ಕಾರ್ಯಕ್ರಮದಲ್ಲಿ ಶಾಲೆಯ ಎಸ್‌ಡಿಎಮ್‌ಸಿ ಅಧ್ಯಕ್ಷ ರಾಜಣ್ಣ ಪಾತಾಳೆ, ಹಿರೇಬೇನೂರದ ಗ್ರಾಮದ ಸಂಪನ್ಮೂಲ ವ್ಯಕ್ತಿಗಳಾದ ರಮೇಶ ಬಗಲುರ, ಬಿಆರ್‌ಸಿ ರಂಗರಾಜ್ ಕುಲಕರ್ಣಿ, ಅಶೋಕ್ ರಾಠೋಡ, ಎಚ್‌ಪಿಎಸ್ ಶಾಲೆಯ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮಹಿಳಾ ಸಬಲೀಕರಣಕ್ಕೆ ಕೇವಲ ಪ್ರಮಾಣಪತ್ರವಷ್ಟೇ ಸಾಕಾಗದು, ವೈಜ್ಞಾನಿಕ ಜ್ಞಾನ ಮತ್ತು ತಂತ್ರಜ್ಞಾನ ಪ್ರಭಾವವೂ ಅವಶ್ಯಕ ಎಂದು ಮಹಿಳಾ ವಿವಿಯ ಹಂಗಾಮಿ ಕುಲಪತಿ ಪ್ರೊ. ಶಾಂತಾದೇವಿ ಟಿ ಹೇಳಿದರು.ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಅಂಗವಾಗಿ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ ಹಾಗೂ ದೈಹಿಕ ಶಿಕ್ಷಣ ಅಧ್ಯಯನ ಮತ್ತು ಕ್ರೀಡಾ ವಿಜ್ಞಾನ ವಿಭಾಗ ಹಾಗೂ ಕ್ರೀಡಾ ನಿರ್ದೇಶನಾಲಯ ಇವರ ಸಂಯುಕ್ತಾಶ್ರಯದಲ್ಲಿ ಮಹಿಳಾ ಸಾಂಸ್ಕೃತಿಕ ಹಬ್ಬದ-೨೦೨೫ ಪ್ರಯುಕ್ತ ಬುಧವಾರ ಬೆಳಿಗ್ಗೆ ಹಮ್ಮಿಕೊಂಡಿದ್ದ ಮ್ಯಾರಥಾನ್‌ಗೆ ಚಾಲನೆ ನೀಡಿ ಮಾತನಾಡಿದರು.ಈ ಮ್ಯಾರಥಾನ್ ನಾಲ್ಕು ದಿಕ್ಕಿನಿಂದ ಆಯೋಜಿಸುವ ಉದ್ದೇಶವೆಂದರೆ ನಮ್ಮ ಮಹಿಳಾ ವಿಶ್ವವಿದ್ಯಾಲಯದ ಅಸ್ತಿತ್ವವನ್ನು ತಲುಪಿಸುವುದಾಗಿದೆ. ಮಹಿಳೆಯರ ಹಕ್ಕುಗಳಿಗೆ ಇನ್ನೂ ಮಹಿಳೆಯರೇ ಹೋರಾಡಬೇಕಾಗಿದೆ. ಎಷ್ಟೇ ಶಿಕ್ಷಣ ಪಡೆದರೂ ಮಹಿಳೆಯರ ಮೇಲೆ ದೌರ್ಜನ್ಯ ಕಡಿಮೆಯಾಗಿಲ್ಲ. ಮಹಿಳೆಯರು ವಿಶ್ವದ ಮುಂಚೂಣಿಯಲ್ಲಿ ತಲುಪಲು ಅವರಿಗೆ ಸಮಾನ ಅವಕಾಶಗಳನ್ನು ನೀಡಬೇಕಾಗಿದೆ ಎಂದರು.ಇದೇ ಸಂದರ್ಭದಲ್ಲಿ ಮಹಿಳಾ ವಿವಿಯ ಸಿಂಡಿಕೇಟ್ ಸದಸ್ಯೆ ಮಲ್ಲಮ್ಮಾ ಯಾಳವಾರ ಮ್ಯಾರಥಾನ್‌ನಲ್ಲಿ ಮಾತನಾಡಿ, ವಿಜಯಪುರದ ಎಲ್ಲಾ ನಾಗರಿಕರಿಗೆ ಮಹಿಳೆಯರ ಹಕ್ಕುಗಳು ಮತ್ತು ಅವರ…

Read More