Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಪ್ರತಿಷ್ಠಿತ ಸಿಕ್ಯಾಬ್ ಶಿಕ್ಷಣ ಸಂಸ್ಥೆಯ ಇಂಜಿನಿಯರಿಂಗ್ ಕಾಲೇಜು ಪ್ರಾಧ್ಯಾಪಕಿ ತಬಸುಮ್ ಗುಳೇದಗುಡ್ಡ “ಎಐಎಂಎಲ್ ಅಪ್ರೋಚ್ ಫಾರ್ ಡಿಸಿಶನ್ಸ್ ಇನ್ ಐಓಟಿ ಬೇಸ್ಡ್ ಹೆಲ್ತ್ ಮಾನಿಟರಿಂಗ್ ಸಿಸ್ಟಮ್” ಎಂಬ ವಿಷಯಕ್ಕೆ ಸಂಬಂಧಿಸಿದಂತೆ ಮಂಡಿಸಿದ ಮಹಾಪ್ರಬಂಧಕ್ಕೆ ಬೆಳಗಾವಿಯ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯವು ಪಿಎಚ್ಡಿ ಪದವಿ ಪ್ರದಾನ ಮಾಡಿದೆ.ಡಾ.ನೂರೂಲ್ಲಾ ಷರೀಫ್ ಅವರ ಮಾರ್ಗದರ್ಶನ ಪಡೆದು ಪ್ರಬಂಧವನ್ನು ಮಂಡಿಸಿದ್ದಾರೆ. ತಬಸುಮ್ ಗುಳೇದಗುಡ್ಡ ಅವರು ಸಿಕ್ಯಾಬ್ ಇಂಜಿನಿಯರಿಂಗ್ ಆ್ಯಂಡ್ ಟೆಕ್ನಾಲಜಿ ಕಾಲೇಜಿನಲ್ಲಿ ಇಸಿಇ ವಿಭಾಗದ ಅಧ್ಯಾಪಕರಾಗಿ ಸದ್ಯ ಕಾರ್ಯನಿರ್ವಹಿಸುತ್ತಿದ್ದಾರೆ.ಎಸ್ಐಇಟಿ ಪ್ರಾಂಶುಪಾಲೆ ಡಾ. ಸಯ್ಯದ್ ಅಬ್ಬಾಸ್ ಅಲಿ, ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಡಾ. ಎಸ್ ಎ ಖಾದ್ರಿ, ಸಿಕ್ಯಾಬ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಸ್. ಎ. ಪುಣೇಕರ್ ನಿರ್ದೇಶಕರಾದ ಸಲಾವುದ್ದೀನ್ ಪುಣೇಕರ್, ಕಾರ್ಯದರ್ಶಿ ಎ. ಎಸ್. ಪಾಟೀಲ ಹಾಗೂ ಕಾಲೇಜು ಸಿಬ್ಬಂದಿ ವರ್ಗದವರು ಅಭಿನಂದಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಆಲಮೇಲ: ಪಟ್ಟಣದ ಶ್ರೀ ವಿಶ್ವೇಶ್ವರ ಬಾಲಭಾರತಿ ಅನುದಾನಿತ ಪ್ರಾಥಮಿಕ ಶಾಲೆಯ ಶಿಕ್ಷಕಿ ಸುವರ್ಣ ಸಾರಂಗಮಠ ರವರಿಗೆ ಚೇತನ ಫೌಂಡೇಶನ್ ಧಾರವಾಡ, ಕಾವ್ಯಶ್ರೀ ಚಾರಿಟಬಲ್ ಟ್ರಸ್ಟ ( ರಿ.) ಹಾಗೂ ಕರ್ನಾಟಕ ಸೋಷಿಯಲ್ ಕ್ಲಬ್ ಬೆಂಗಳೂರು ವತಿಯಿಂದ ಹಮ್ಮಿಕೊಂಡಿರುವ ಅಂತರಾಷ್ಟ್ರೀಯ ಮಹಿಳಾ ಸಾಹಿತ್ಯ ಸಮ್ಮೇಳನದಲ್ಲಿ ಅಂತರರಾಷ್ಟ್ರೀಯ ಸಾವಿತ್ರಿಬಾಯಿ ಫುಲೆ ಅತ್ಯುತ್ತಮ ಶಿಕ್ಷಕಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಪ್ರಶಸ್ತಿ ಸಮಾರಂಭವು ರವಿವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಗಾಂಧಿ ಭವನದ ಬಾಪು ಸಭಾಂಗಣ ದಲ್ಲಿ ಜರುಗಲಿದೆ. ಪ್ರಶಸ್ತಿ ಪ್ರಧಾನವನ್ನು ಬಹುಭಾಷಾ ಚಲನಚಿತ್ರ ಹಿನ್ನೆಲೆ ಗಾಯಕಿ ಹಾಗೂ ಸಂಶೋಧಕಿ ಡಾ.ಪ್ರೀಯದರ್ಶಿನಿ ರವರು ಮಾಡಲಿದ್ದಾರೆ ಎಂದು ಮುಖ್ಯ ಶಿಕ್ಷಕ ಲಕ್ಷ್ಮೀಪುತ್ರ ಕಿರನಳ್ಳಿ ತಿಳಿಸಿದ್ದಾರೆ.ಪ್ರಶಸ್ತಿಗೆ ಆಯ್ಕೆ ಆಗಿದಕ್ಕೆ ಸಂಸ್ಥೆಯ ಅಧ್ಯಕ್ಷರು ಎಸ್.ಆಯ್.ಜೋಗೂರ, ಕಾರ್ಯದರ್ಶಿಗಳು ಪ್ರಶಾಂತ ಬಡದಾಳ, ಕೋಶಾಧ್ಯಕ್ಷರು ಅರವಿಂದ ಕುಲಕರ್ಣಿ , ಆಡಳಿತ ಮಂಡಳಿಯ ಸದಸ್ಯರು, ಶಾಲಾ ಶಿಕ್ಷಕವೃಂದ ಹಾಗೂ ಶಿಕ್ಷಕ ಪಂಡಿತ ಅವಜಿ ಹರ್ಷ ವ್ಯಕ್ತ ಪಡಿಸಿದ್ದಾರೆ
ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಪಟ್ಟಣದ ಐತಿಹಾಸಿಕ ಹಿರೇಮಠ ಸಂಸ್ಥಾನಕ್ಕೆ ಮಂಗಳವಾರ ಹಿರಿಯ ಸಂಶೋಧಕ ಸಾಹಿತಿ ಡಿ ಎನ್ ಅಕ್ಕಿ ಭೇಟಿ ನೀಡಿ ಮಾರ್ಚ್ 03 ರಂದು ಜರುಗಿದ ಶ್ರೀಗಳ ಹುಟ್ಟು ಹಬ್ಬ ಸುವರ್ಣ ಸಂಭ್ರಮಕ್ಕೆ ಸಾಕ್ಷಿಯಾಗಿದ್ದು, ಸದ್ಭಕ್ತರ ಸಂತೋಷ ನೂರ್ಮಡಿಯಾಗಿದೆ ಎಂದು ಶುಭಹಾರೈಸಿ, ಶ್ರೀಗಳ ಆಶೀರ್ವಾದ ಪಡೆದು ಪುನೀತರಾದರು.ಇದೇ ವೇಳೆ ಶ್ರೀಮಠದ ಪೀಠಾಧಿಪತಿ ಷ ಬ್ರ ಶ್ರೀ ಚನ್ನಬಸವ ಶಿವಾಚಾರ್ಯರ ಸಾನ್ನಿಧ್ಯದಲ್ಲಿ ಜರುಗುವ ಮಾಸಿಕ ಹುಣ್ಣಿಮೆಯ ಜನ ಕಲ್ಯಾಣ ಶಿವಾನುಭವ ಗೋಷ್ಠಿ ಮತ್ತು ಸಂಗೀತ ಕಾರ್ಯಕ್ರಮ ಜನಮನ ಸೆಳೆದಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.ಪ್ರಮುಖರಾದ ನಿಂಗನಗೌಡ ದೇಸಾಯಿ, ವೀರಣ್ಣ ಕಲಿಕೇರಿ, ರಾಜಶೇಖರ ಮೇತ್ರಿ, ಎಚ್ಚ್ ಎಮ್ ಮಕಂದಾರ, ಸಿದ್ದರಾಮ ಬಿರಾದಾರ, ಕಾಳಪ್ಪ ಬನ್ಸುಡೆ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.
ಲೇಖನ – ಜಯಶ್ರೀ.ಜೆ. ಅಬ್ಬಿಗೇರಿಇಂಗ್ಲೀಷ್ ಉಪನ್ಯಾಸಕರುಬೆಳಗಾವಿಮೊ: ೯೪೪೯೨೩೪೧೪೨ ಉದಯರಶ್ಮಿ ದಿನಪತ್ರಿಕೆ ನಾನಿಂದು ಇರುವ ಸ್ಥಿತಿಗೆ ಏನು ಕಾರಣ? ಎಂಬುದಕ್ಕೆ ಉತ್ತರ ಹುಡುಕಲು ಪ್ರಯತ್ನಿಸಿದರೆ ನನ್ನ ಬದುಕಿನಲ್ಲಿ ನಿನ್ನೆ ಮೊನ್ನೆ ಅಷ್ಟೇ ಅಲ್ಲ ಈ ಹಿಂದೆ ನಡೆದ ಘಟನೆಗಳು ಎನ್ನುವುದು ಮೊದಲ ಉತ್ತರವಾಗಿ ಸಿಗುತ್ತದೆ. ಜೀವನ ಹೀಗೆಯೇ ರೂಪುಗೊಳ್ಳುತ್ತದೆಯೋ ಇಲ್ಲವೋ ಅಂತ ಹೇಳುವುದು ಒಂದು ರೀತಿಯ ಕ್ಲೀಷೆ ಬದುಕಿನಲ್ಲಿ ಸಂಭವಿಸುವುದೆಲ್ಲ ಯಾವುದೇ ಕಾರಣದಿಂದ ಘಟಿಸಿರುತ್ತದೆ. ಈ ಮಾತನ್ನು ಪುಷ್ಟೀಕರಿಸುವಂತೆ ಅರಿಸ್ಟಾಟಲ್ ಹೀಗೆ ಹೇಳಿದ್ದಾನೆ. ‘ಗೊತ್ತು ಗುರಿಯಿಲ್ಲದೇ ಯಾವುದೇ ಘಟನೆ ನಡೆಯುವುದಿಲ್ಲ. ಏನೇ ನಡೆಯಲಿ ಕಾರಣ ಮತ್ತು ಪರಿಣಾಮ ಪ್ರಕ್ರಿಯೆಯಲ್ಲಿ ಒಂದಕ್ಕೊಂದು ಸಂಬಂಧ ಇದ್ದೇ ಇರುತ್ತದೆ. ನಮಗೆ ಕಾರಣಗಳು ತಿಳಿಯದಿದ್ದರೂ ಕೂಡ ಅದು ಅಸ್ತಿತ್ವದಲ್ಲಿ ಇದ್ದೇ ಇರುತ್ತದೆ.’ ಪರಿಣಾಮವನ್ನು ಬದಲಾಯಿಸಬೇಕೆಂದರೆ ಕಾರಣಗಳನ್ನು ಬದಲಾಯಿಸಬೇಕು.ಏನೂ ಇಲ್ಲಬದುಕನ್ನು ಬದಲಿಸಬೇಕೆಂದರೆ ಎಲ್ಲವೂ ನಮ್ಮ ನಿಯಂತ್ರಣದಲ್ಲಿಲ್ಲ ಅನ್ನೋದು ನಿರಾಶಾವಾದಿಗಳ ಅಂಬೋಣ. ಹೌದು, ನಾವು ಎಲ್ಲವನ್ನೂ ನಿಯಂತ್ರಿಸಲು ಸಾಧ್ಯವಿಲ್ಲ. ಹಲವಾರು ಸಂಗತಿಗಳು ನಮ್ಮ ನಿಯಂತ್ರಣದ ಮೇರೆ ಮೀರಿವೆ. ಆದರೆ ನಮ್ಮ ಕೈಯಲ್ಲಿರುವ…
ಜನರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ | ಕಾರ್ಖಾನೆ ಸ್ಥಾಪನೆಯ ಎಲ್ಲ ಸಿದ್ದತೆಗಳನ್ನು ತಕ್ಷಣವೇ ನಿಲ್ಲಿಸುವಂತೆ ಸಿಎಂ ಸಿದ್ದರಾಮಯ್ಯ ಸೂಚನೆ ಉದಯರಶ್ಮಿ ದಿನಪತ್ರಿಕೆ ಬೆಂಗಳೂರು: ಜನರಿಂದ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆ ಬಲ್ಡೋಟಾ ಸ್ಟೀಲ್ ಮತ್ತು ಪವರ್ ಲಿಮಿಟೆಡ್ (ಬಿಎಸ್ಪಿಎಲ್) ಕಾರ್ಖಾನೆ ಸ್ಥಾಪನೆಯ ಎಲ್ಲಾ ಸಿದ್ದತೆಗಳನ್ನು ತಕ್ಷಣವೇ ನಿಲ್ಲಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕೊಪ್ಪಳ ಜಿಲ್ಲಾಧಿಕಾರಿ ನಲಿನ್ ಅತುಲ್ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಎಲ್ ಅರಸಿದ್ದಿ ಅವರಿಗೆ ಮಂಗಳವಾರ (ಮಾ.4) ಸೂಚಿಸಿದ್ದಾರೆ.ಬಿಎಸ್ಪಿಎಲ್ ಕಂಪನಿಯು 1.50 ಕೋಟಿ ಟನ್ ಉತ್ಪಾದನಾ ಸಾಮರ್ಥ್ಯದ ಇಂಟಿಗ್ರೇಟೆಡ್ ಉಕ್ಕಿನ ಕಾರ್ಖಾನೆಯನ್ನು ಕೊಪ್ಪಳ ಜಿಲ್ಲಾ ಕೇಂದ್ರದ ಸಮೀಪದಲ್ಲಿಯೇ ಸ್ಥಾಪನೆ ಮಾಡಲು ಮುಂದಾಗಿರುವುದು ಜನರ ತೀವ್ರ ವಿರೋಧಕ್ಕೆ ಕಾರಣವಾಗಿದೆ.ಈ ಸಂಬಂಧ ಇತ್ತೀಚೆಗೆ ಕೊಪ್ಪಳ ತಾಲೂಕು ಪರಿಸರ ಹಿತರಕ್ಷಣಾ ವೇದಿಕೆ ಕರೆ ನೀಡಿದ್ದ ಜಿಲ್ಲಾ ಬಂದ್ ಯಶಸ್ವಿಯಾಗಿತ್ತು. ಗವಿಮಠದ ಅಭಿನವ ಗವಿಸಿದ್ದೇಶ್ವರ ಸ್ವಾಮಿ, ರೈತರು, ಹೋರಾಟಗಾರರು ಮತ್ತು ಜನ ಸಾಮಾನ್ಯರು ಕಾರ್ಖಾನೆ ವಿರೋಧಿಸಿ…
ಆಲಮಟ್ಟಿಯಲ್ಲಿ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರ ಅಣುಕು ಶೃದ್ಧಾಂಜಲಿ ಪಿಂಡ ಪ್ರಧಾನ ಕಾರ್ಯಕ್ರಮ ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಲಾಲ್ಬಹದ್ದೂರ್ ಶಾಸ್ತ್ರೀ ಜಲಾಶಯದಿಂದ ತೆಲಂಗಾಣ ರಾಜ್ಯದ ರಂಗಾರೆಡ್ಡಿ ಜಿಲ್ಲೆಯ ಜುರಾಲಾ ಆಣೆಕಟ್ಟಿಗೆ ನೀರು ಹರಿಸಿದ್ದನ್ನು ಖಂಡಿಸಿ ವಿಜಯಪುರದಲ್ಲಿ ಮುಖ್ಯಮಂತ್ರಿ ಹಾಗೂ ಜಲಸಂಪನ್ಮೂಲ ಸಚಿವರ ಪ್ರತಿಕೃತಿ ಧಹಿಸಿ ಪ್ರತಿಭಟನೆ ನಡೆಸಲಾಗಿತ್ತು.ಇದರ ಅಂಗವಾಗಿ ಅಣುಕು ಶೃದಾಂಜಲಿ ಪಿಂಡ ಪ್ರಧಾನ ಕಾರ್ಯಕ್ರಮವನ್ನು ಆಲಮಟ್ಟಿಯ ಕೃಷ್ಣಾ ನದಿ ತೀರದ ಹಿನ್ನೀರಿನಲ್ಲಿ ಶೃಧಾಂಜಲಿ ಹಾಗೂ ಪಿಂಡ ಪ್ರಧಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು ಪ್ರಾರಂಭದಲ್ಲಿ ಸಂಪ್ರದಾಯದಂತೆ ನೀರಲ್ಲಿ ಮುಳಗಿ ನಂತರ ಕ್ರೀಯಾ ಕರ್ಮಗಳನ್ನು ಮಾಡಿ ಬಾವಚಿತ್ರಕ್ಕೆ ದೀಪ ಬೆಳಗಿಸಿ ಅನ್ನದಿಂದ ತಯಾರಿಸಿದ ಪಿಂಡವನ್ನು ಇರಿಸಿ ಅದರ ಮೇಲೆ ಕರಿ ಎಳ್ಳು ಹಾಕಿ ದರ್ಬೆ ಇಟ್ಟು ಪಿಂಡ ಅರ್ಪಣೆ ಮಾಡಿ ಪೂಜೆ ಸಲ್ಲಿಸಿ ಪಿಂಡದೊಂದಿಗೆ ಅವರ ಭಾವ ಚಿತ್ರಗಳನ್ನು ಕೃಷ್ಣಾ ನದಿಯಲ್ಲಿ ತೇಲಿ ಬಿಡಲಾಯಿತು.ನಂತರ ಅಖಂಡ ಕರ್ನಾಟಕ ರೈತ ಸಂಘದ ಪದಾಧಿಕಾರಿಗಳು ನದಿಯಲ್ಲಿಯೆ ಇಳಿದು ಪ್ರತಿಭಟನೆ ಮಾಡಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.ಈ…
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವಕ್ಫ್ ಜಿಲ್ಲಾಧಿಕಾರಿಗಳು ನಮ್ಮ ಮನವಿಯನ್ನು ಸ್ವೀಕರಿಸಿ ಒಂದುವಾರ ಗತಿಸಿದರು ಹೋರಾಟಗಾರರಿಗೆ ಅಧಿಕಾರಿಗಳು ಹಿಂಬರಹ ನೀಡದೆ ಗೌಪ್ಯ ನಿಲುವು ಕಾಯ್ದುಕೊಂಡಿರುವುದು ಅನುಮಾನಕ್ಕೆ ದಾರಿಮಾಡಿಕೊಡುತ್ತಿದೆ ಎಂದು ಡಾ.ದಸ್ತಗೀರ ಮುಲ್ಲಾ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಪಟ್ಟಣದಲ್ಲಿ ವಕ್ಫ್ ಆಸ್ತಿ ಸಂರಕ್ಷಣಾ ಸಮಿತಿ ಹಮ್ಮಿಕೊಂಡ ಖಬರಸ್ಥಾನ ಉಳಿಸಿ ಎಂಬ ಹೋರಾಟದಲ್ಲಿ ೧೬ನೆಯ ದಿನಕ್ಕೆ ಕಾಲಿಟ್ಟ ಹೋರಾಟಗಾರರು ರಂಜಾನ್ ಉಪವಾಸ ಮೂಲಕ ಧರಣಿ ಮುಂದುವರಿಸಿ ಸ್ಥಳದಲ್ಲಯೇ ಉಪವಾಸ ಬಿಟ್ಟು ಮಾತನಾಡಿದ ಅವರು, ಅಧಿಕಾರಿಗಳ ಗೌಪ್ಯ ನಿಲುವು ಹೋರಾಟಗಾರರಿಗೆ ಸಂಶಯಕ್ಕೆ ಎಡೆ ಮಾಡಿಕೊಟ್ಟಿದೆ. ಹಾಗಾಗಿ ಹೋರಾಟಗಾರರು ಬಿರು ಬಿಸಿಲಿನಲ್ಲಿ ರಂಜಾನ್ ಉಪವಾಸವನ್ನು ಮಾಡುತ್ತಾ ಧರಣಿಯ ಸ್ಥಳವನ್ನು ಇಪ್ತಿಯಾರ (ಉಪವಾಸ)ವನ್ನು ಬಿಟ್ಟು ಅಧಿಕಾರಿಗಳ ವಿರುದ್ಧ ಧಿಕ್ಕಾರ ಕೂಗಿದರು.ಈ ವೇಳೆ ರಜಾಕ್ ಸಿಂದಗಿಕರ, ತಾಲಿಬ್ ಗುಂದಗಿ, ಫಿರೋಜ್ ನಿಂಬರಗಿ, ಬಶೀರ್ ಕದಣಿ, ಲತೀಫ್ ತಾಂಬೊಲಿ, ಗೌಸ್ಯಾ ಬಮ್ಮನಜೋಗಿ, ಸಲೀಮ ಜುಮನಾಳ, ಮೈಬೂಬ. ವಾಲಿಕಾರ ಸೇರಿದಂತೆ ಕಾರ್ಯಕರ್ತರು ಇದ್ದರು.
ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಗರಕ್ಕೆ ಖಾಸಗಿ ಕಾರ್ಯಕ್ರಮದ ನಿಮತ್ಯ ಆಗಮಿಸಿದ್ದ, ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಸಾರ್ವಜನಿಕ ಆಸ್ಪತ್ರೆ, ಸರಕಾರಿ ಪ್ರಥಮ ದರ್ಜೆ ಕಾಲೇಜು ಸೇರಿದಂತೆ ವಿವಿದೆಡೆ ಭೇಟಿ ನೀಡಿ ಪರಿಶೀಲಿಸಿದರು.ಪಟ್ಟಣದ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ಭೇಟಿ ನೀಡಿ ಸಾರ್ವಜನಿಕ ಅಹವಾಲು ಸ್ವೀಕರಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇಲ್ಲಿನ ಅವಸ್ಥೆಯನ್ನು ಕಂಡು ನನಗೆ ದಂಗು ಬಡೆದಂತಾಗಿದೆ. ಆಸ್ಪತ್ರೆ ಅಕ್ಷರಶ: ಅವ್ಯವಸ್ಥೆಯ ಆಗರವಾಗಿದೆ. ಮಹಿಳೆಯರಿಗೆ ಯಾವುದೇ ಮೂಲಭೂತ ಸೌಕರ್ಯಗಳಿಲ್ಲ. ಬಾಣಂತಿಯರಿಗೆ ಶೌಚಾಲಯದ ವ್ಯವಸ್ಥೆಯಿಲ್ಲ. ಶೌಚಕ್ಕಾಗಿ ಮಹಿಳಾ ರೋಗಿಗಳು ಆಸ್ಪತ್ರೆಯಿಂದ ಹೊರಗೆ ಸುಮಾರ ೩೦೦-೪೦೦ಮೀ ದಷ್ಟು ಹೊರ ಹೋಗಬೇಕಾಗುತ್ತದೆ. ಬಾಣಂತಿಯರು ಅಂತಹ ಅವಸ್ಥೆಯಲ್ಲಿ ಅಷ್ಟೊಂದು ದೂರ ಕ್ರಮಿಸಿ ಹೋಗುವುದು ಒಬ್ಬ ಬಾಣಂತಿಯಿಂದ ಸಾಧ್ಯವೇ? ಎಂಬುದನ್ನು ಉಹಿಸಿಕೊಳ್ಳಲೂ ಕಷ್ಟ ಸಾಧ್ಯವಾಗುವಂತಹ ಪರಿಸ್ಥಿತಿ ಇದೆ. ಆಸ್ಪತ್ರೆಗೆ ಬಂದ ಹೊರ ರೋಗಿಗಳನ್ನು ದನಗಳಂತ ಒಂದೆಡೆ ಕೂಡಿ ಹಾಕಲಾಗುತ್ತದೆ. ಕುಳಿತುಕೊಂಡ ರೋಗಿಗಳನ್ನು ಕಸಗುಡಿಸುವ ಕರ್ಮಚಾರಿಗಳು ಕಸಬರಿಗೆಯಿಂದಲೆ ತಳ್ಳಿ ದಾರಿಮಾಡಿಕೊಂಡು ಹೋಗುತ್ತಾರೆ. ಇದೆಲ್ಲವನ್ನು ಗಮನಿಸಿದರೆ ಇಲ್ಲಿ ಮಾನವೀಯತೆ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಪಟ್ಟಣದ ಐತಿಹಾಸಿಕ ಮೂಲನಂದೀಶ್ವರ (ಬಸವೇಶ್ವರ) ದೇವಸ್ಥಾನದ ಉದ್ಯಾನವನದಲ್ಲಿ ಜೋಡೆತ್ತು ರೈತ ಬಾಂಧವರು ಕೃಷಿ ತಜ್ಞ ಡಾ.ಬಸವರಾಜ ಬಿರಾದಾರ ನೇತೃತ್ವದಲ್ಲಿ ನಡೆಸುತ್ತಿರುವ ನಂದಿ ಸತ್ಯಾಗ್ರಹಕ್ಕೆ ಮಂಗಳವಾರ ಸ್ಥಳೀಯ ವಿವೇಕ ಬಿಗ್ರೇಡ್ ಸಂಘಟನೆಯು ಬೆಂಬಲ ಪತ್ರ ನೀಡುವ ಮೂಲಕ ಬೆಂಬಲ ವ್ಯಕ್ತಪಡಿಸಿತು.ಈ ಸಂದರ್ಭದಲ್ಲಿ ವಿವೇಕ ಬಿಗ್ರೇಡ್ ಸಂಘಟನೆಯ ಮುಖ್ಯಸ್ಥ ವಿನುತ ಕಲ್ಲೂರ ಮಾತನಾಡಿ, ರಾಜ್ಯದಲ್ಲಿ ಸದ್ಗುರು ಅವರು ಆರಂಭಿಸಿದ್ದ ಜನಪರ ಅಭಿಯಾನಗಳಾದ ಕಾವೇರಿ ಕೂಗು, ಮಣ್ಣು ಉಳಿಸಿ ಅಭಿಯಾನಗಳಲ್ಲಿ ನಾವೆಲ್ಲರೂ ಭಾಗವಹಿಸುವ ಮೂಲಕ ಅವುಗಳಿಗೆ ಬೆಂಬಲ ವ್ಯಕ್ತಪಡಿಸಲಾಗಿತ್ತು. ಮಣ್ಣು, ನೀರು ಉಳಿಯಬೇಕಾದರೆ ನಂದಿ ಸಂತತಿ ಉಳಿಯಬೇಕೆಂಬ ಸತ್ಯದ ಅರಿವು ನಂದಿ ಸತ್ಯಾಗ್ರಹದಿಂದ ಜನ ಜಾಗೃತಿಯಾಗುತ್ತಿದೆ. ಸಮಾಜದ ಭವಿಷ್ಯ ಜೋಡೆತ್ತಿನ ಕೃಷಿಕರ ಮೇಲೆ ನಿಂತಿರುವದರಿಂದಾಗಿ ಜೋಡೆತ್ತಿನ ಕೃಷಿಕರಿಗೆ ಸರ್ಕಾರ ಪ್ರತಿ ತಿಂಗಳು ರೂ. ೧೧ ಸಾವಿರ ಪ್ರೋತ್ಸಾಹ ಧನ ನೀಡುವ ಯೋಜನೆ ಜಾರಿಗೆ ತರುವ ಅಗತ್ಯವಿದೆ. ಈ ಕುರಿತು ಸರ್ಕಾರ ಮಂಡಿಸುವ ಬಜೆಟ್ನಲ್ಲಿ ಹಣ ಮೀಸಲಿಡುವ ಅಗತ್ಯವಿದೆ. ಜೋಡೆತ್ತಿನ ಕೃಷಿಕರ ಬೇಡಿಕೆಗಳಿಗೆ…
ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ವಿದ್ಯಾರ್ಥಿಗಳ ಶೈಕ್ಷಣಿಕ ಜೀವನ ಪೂರ್ಣಗೊಳ್ಳಬೇಕಾದರೆ ವಿದ್ಯಾರ್ಥಿಗಳು ತಮ್ಮ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಿಗೂ ಮಹತ್ವ ನೀಡಬೇಕಾದ ಅಗತ್ಯವಿದೆ. ಆಗ ಮಾತ್ರ ಸದೃಢವಾದ ಶರೀರದಲ್ಲಿ ಸದೃಢವಾದ ಮನಸ್ಸನ್ನು ಹೊಂದಲು ಸಾಧ್ಯ ಎಂದು ಪ್ರಾಚಾರ್ಯ ಡಾ.ಎ.ವ್ಹಿ.ಸೂರ್ಯವಂಶಿ ಹೇಳಿದರು.ಪಟ್ಟಣದ ಬಿಎಲ್ಡಿಇ ಸಂಸ್ಥೆಯ ಬಸವೇಶ್ವರ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ವಿಜಯಪುರದ ನೆಹರು ಯುವ ಕೇಂದ್ರ, ಕ್ರೀಡಾ ಸಚಿವಾಲಯ, ಅಲ್ಪಾತ ಯುಥ್ ವೆಲ್ಪೇರ ಸೊಸೈಟಿ ಸಹಯೋಗದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ೨೦೨೪-೨೫ ರ ತಾಲೂಕು ಮಟ್ಟದ ಕ್ರೀಡಾಕೂಟದ ಬಹುಮಾನ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವವನ್ನು ಬೆಳೆಸಿಕೊಂಡು ನಿರಂತರವಾಗಿ ಶ್ರದ್ಧೆಯಿಂದ ಮುಂದುವರೆದರೆ ವಿಶ್ವಮಟ್ಟದ ಕ್ರೀಡಾಪಟುವಾಗುವ ಮೂಲಕ ದೇಶದ ಗೌರವವನ್ನು ಕಾಪಾಡಲು ಸಾಧ್ಯವಿದೆ ಎಂದರು.ಕಾರ್ಯಕ್ರಮದಲ್ಲಿ ಕನ್ನಡ ವಿಭಾಗದ ಮುಖ್ಯಸ್ಥ ಡಾ.ಬಿ.ಎಂ.ಸಾಲವಾಡಗಿ, ಐಕ್ಯೂಎಸಿಯ ಮುಖ್ಯಸ್ಥ ಪ್ರೊ.ದಿಲೀಪಕುಮಾರ, ಎನ್.ವೈ.ವ್ಹಿ ಮುಖ್ಯಸ್ಥ ಎಸ್.ಕೆ.ಜಾಲವಾದಿ, ಎಲ್.ಎಸ್.ಜಮಖಂಡಿ, ಸಿ.ಪಿ.ಧಡೇಕರ, ಡಾ.ಎಸ್.ಬಿ.ಜನಗೊಂಡ, ಎಂ.ಕೆ.ಯಾಧವ, ಪಿ.ಎಸ್.ನಾಟೀಕಾರ,ಆರ್.ಎಂ.ಮುಜಾವರ, ಜಯರಾಮರೆಡ್ಡಿ ಇದ್ದರು. ಡಾ. ವೈ.ಬಿ.ನಾಯಕ ನಿರೂಪಿಸಿದರು. ಕ್ರೀಡಾಕೂಟದಲ್ಲಿ ಚೆಸ್, ಕೇರಂ, ಖೋಖೋ, ಕಬಡ್ಡಿ, ೧೦೦…
