Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ನಾಡಿನಲ್ಲಿ ಹನ್ನೆರಡನೇ ಶತಮಾನದ ಬಸವಾದಿ ಶರಣರ ಸಂದೇಶಗಳನ್ನು ಬಿತ್ತರಿಸುವಲ್ಲಿ ಶರಣ ಸಾಹಿತ್ಯ ಪರಿಷತ್ತು ಮಾಡುತ್ತಿರುವ ಕಾರ್ಯ ಶ್ಲಾಘನೀಯ ಎಂದು ವಿರಕ್ತಮಠದ ಸಿದ್ದಲಿಂಗ ಸ್ವಾಮೀಜಿ ಹೇಳಿದರು.ಪಟ್ಟಣದ ಶಿವಲಿಂಗೇಶ್ವರ ವಿರಕ್ತಮಠದಲ್ಲಿ ತಾಲೂಕು ಶರಣ ಸಾಹಿತ್ಯ ಪರಿಷತ್ತು ಶಿವಾನುಭವ ಸವಿನೆನಪು, ಲಿಂ.ಶಾಂತಾಬಾಯಿ ಮೇಟಿ, ವಿರುಪಾಕ್ಷಪ್ಪ ಆಲಗೂರ, ಲಿಂ.ಷಣ್ಮುಖಪ್ಪ ಶೀಲವಂತ ಸ್ಮರಣಾರ್ಥ ಶನಿವಾರ ಹಮ್ಮಿಕೊಂಡಿದ್ದ ದತ್ತಿ ಸ್ಮರಣೆ ಕಾರ್ಯಕ್ರಮದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಶರಣ ಸಾಹಿತ್ಯ ಪರಿಷತ್ತು ಅಗಲಿದ ಹಿರಿಯರ ಸ್ಮರಣಾರ್ಥವಾಗಿ ದತ್ತಿ ಸ್ಮರಣೆ ಕಾರ್ಯಕ್ರಮ, ವಿವಿಧ ಕಾರ್ಯಕ್ರಮ, ಸಮ್ಮೇಳನ ಸೇರಿದಂತೆ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಮೂಲಕ ಶರಣರ ಸಂದೇಶ ಜನಮಾನಸಕ್ಕೆ ಮುಟ್ಟಿಸುತ್ತಿದೆ ಎಂದರು.ಸಾಂಸ್ಕ್ರತಿಕ ನಾಯಕ ಬಸವೇಶ್ವರರ ಕುರಿತು ಪ್ರವಚನಕಾರ ಬಸಯ್ಯ ಹಿರೇಮಠ ಮಾತನಾಡಿ, ಬಸವೇಶ್ವರರು ಸರ್ವಸಮಾಜದ ಸಮಾನತೆಗಾಗಿ, ಏಕತೆಗಾಗಿ, ಜಾತಿಧರ್ಮವೆನ್ನದೇ ಎಲ್ಲರನ್ನು ಒಂದುಗೂಡಿಸುವದಕ್ಕಾಗಿ ಜನಿಸಿದರು.ಸಮಾಜದ ಉದ್ಧಾರಕ್ಕಾಗಿ ಉದಯಿಸಿದ ಬಸವೇಶ್ವರರು ಹುಟ್ಟಿದಾಗಲೇ ಸಾಂಸ್ಕ್ರತಿಕ ನಾಯಕರೆಂದು ಗುರುತಿಸಿಕೊಂಡಿದ್ದಾರೆ. ಭಾರತ ಸಂಸ್ಕಾರವಂತ ದೇಶವಾಗಿದೆ ಎಂದರು.ಮುದ್ದೇಬಿಹಾಳ ತಾಲೂಕು ಶರಣ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಬಸವರಾಜ ನಾಲತವಾಡ…

Read More

ಉದಯರಶ್ಮಿ ದಿನಪತ್ರಿಕೆ ಚಿಕ್ಕಪಡಸಲಗಿ: ಜಮಖಂಡಿ ತಾಲ್ಲೂಕಿನ ಚಿಕ್ಕಪಡಸಲಗಿ ಗ್ರಾಮದಲ್ಲಿ ನಡೆದ ಶ್ರೀ ಗುರು ಚಕ್ರವರ್ತಿ ಸದಾಶಿವ ಹಾಗೂ ಜಗನ್ಮಾತೆ ಶ್ರೀ ಚಂದ್ರಗಿರಿ ದೇವಿಯ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ ನಿವೃತ್ತ ಶಿಕ್ಷಕರಿಗೆ ಸನ್ಮಾನಿಸಿ ಗೌರವಿಸಲಾಯಿತು.ನಿವೃತ ಶಿಕ್ಷಕರಾದ ಜಮಖಂಡಿ ಡಿ.ಬಿ.ಇ.ಪ್ರೌಢಶಾಲೆಯ ಮಲ್ಲು ಪಟ್ಟಣಶೆಟ್ಟಿ ಹಾಗೂ ಚಿಕ್ಕಪಡಸಲಗಿ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆಯ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕ ಬಸವರಾಜ ಅನಂತಪೂರ ಅವರನ್ನು ಜಾತ್ರಾ ಕಮೀಟಿ ವತಿಯಿಂದ ಶಾಲು ಹೊದಿಸಿ ಭಿನ್ನವತ್ತಳೆ ಗುರು ಕಾಣಿಕೆ ನೀಡಿ ಸನ್ಮಾನಿಸಿ ಗೌರವಿಸಿದರು.ಈ ವೇಳೆ ಗ್ರಾಮದ ಹಿರಿಯರಾದ ಸಿದ್ರಾಮ ಗಂಗಪ್ಪ ಕಲ್ಯಾಣಿ ಸೇರಿದಂತೆ ಕಮೀಟಿ ಸದಸ್ಯರು, ಗ್ರಾಮದ ಗುರು,ಹಿರಿಯರು ಉಪಸ್ಥಿತರಿದ್ದರು.

Read More

ಉದಯರಶ್ಮಿ ದಿನಪತ್ರಿಕೆ ಆಲಮಟ್ಟಿ: ಕರ್ನಾಟಕ ಹಾಗೂ ಮಹಾರಾಷ್ಟ್ರದ ಅಸಂಖ್ಯಾತ ಭಕ್ತರ ತಾಣ ಚಂದ್ರಗಿರಿ ಚಂದ್ರಮ್ಮಾ ದೇವಿ ಜಾತ್ರೆ ಇದೇ ಮಾ.೬ ರಿಂದ ಆರಂಭಗೊಳ್ಳಲಿದ್ದು, ಜಾತ್ರೆಗೆ ದೂರದಿಂದ ಬರುವ ಭಕ್ತಾದಿಗಳ ದಂಡು ಆರಂಭಗೊAಡಿದ್ದು, ದೇವಸ್ಥಾನ ಸುತ್ತಮುತ್ತ ಭಕ್ತರ ಕಲರವ ಹೆಚ್ಚಾಗಿದೆ.ಕೃಷ್ಣಾ ನದಿ ಹಿನ್ನೀರಿನಲ್ಲಿ ಮುಳುಗಡೆ ಹೊಂದಿದ ಪ್ರಥಮ ಗ್ರಾಮ ಚಂದ್ರಗಿರಿ. ಇಲ್ಲಿಯ ಧರ್ಮರ ಮಠ ಹಲವು ಭಕ್ತರ ಆಶ್ರಯ ತಾಣ. ದೇವತೆಗಳ ಅವತಾರಗಳಲ್ಲಿ ಒಂದಾಗಿರುವ ಚಂದ್ರಮ್ಮಾ ದೇವಿ ಸಹಸ್ರಾರು ಭಕ್ತರ ಆರಾಧ್ಯ ದೈವ.ವಿಜಯಪುರ, ಬಾಗಲಕೋಟೆ ಜಿಲ್ಲೆಯ ನಾನಾ ಕಡೆಯಿರುವ ವಿವಿಧ ಚಂದ್ರಮ್ಮ ದೇವಿಯ ದೇವಸ್ಥಾನಗಳಿಗೆ ಮೂಲ ಇಲ್ಲಿಯ ಚಂದ್ರಗಿರಿ. ಚಂದ್ರಗಿರಿಯ ಚಂದ್ರಮ್ಮಾ ದೇವಿ ದೇವಸ್ಥಾನ, ಮಠ ಕೃಷಾ ನದಿ ಹಿನ್ನೀರಿನಲ್ಲಿ ಮುಳುಗಡೆಯಾಗಿದ್ದರಿಂದ ಆಲಮಟ್ಟಿ ನೌಕರರ ವಸಾಹತು ಬಳಿ ಕೃಷಾ ನದಿ ತೀರದಲ್ಲಿ ಸ್ಥಳಾಂತರಿಸಿ ಮಠ, ದೇವಸ್ಥಾನ ಕಟ್ಟಲಾಗಿದೆ. ಅಲ್ಲಿ ಇದೇ ೬ ರಿಂದ ಮೂರು ದಿನಗಳ ಕಾಲ ಜಾತ್ರೆ ಸಂಭ್ರಮದಿಂದ ಜರುಗಲಿದೆ. ನಿತ್ಯ ಬೆಳಿಗ್ಗೆ ದೀಡ ನಮಸ್ಕಾರ ಹಾಕುವವರ ಸಂಖ್ಯೆಯೂ ಅಪಾರ. ಮಾ.೬…

Read More

ಬಿ ಎಲ್ ಡಿ ಇ‌ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ ಸಿ ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಶಿಬಿರ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಬಿ ಎಲ್ ಡಿ ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ ಸಿ ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ,ಮಹಾವಿದ್ಯಾಲಯದ ಕೆರಿಯರ್ ಗೈಡೆನ್ಸ್ ಮತ್ತು ಪ್ಲೇಸ್ಮೆಂಟ್ ಸೆಲ್ ವಿಭಾಗದ ಮತ್ತು ಎಸ್ ಬಿ ವಿಸ್ಡಮ್ ಕರಿಯರ್ ಅಕಾಡೆಮಿಯ ಸಂಯುಕ್ತಾಶ್ರಯದಲ್ಲಿ ಬಿ ಎ,ಬಿಎಸ್ಸಿ, ಬಿಸಿಎ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ 15 ದಿನಗಳ ಶಿಬಿರವನ್ನು ಉದ್ಘಾಟಿಸಲಾಯಿತು.ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು ಇಂದಿನ ಯುವ ಜನಾಂಗ ಮೊಬೈಲ್ ಫೋಬಿಯಾಗೆ ಒಳಗಾಗಿದೆ. ಸಮಾಜಿಕ ಜಾಲತಾಣಗಳು, ಮೊಬೈಲ್, ಯುವ ಜನಾಂಗವನ್ನು ಕಟ್ಟಿ ಹಾಕಿದೆ. ಅದು ವಿದ್ಯಾರ್ಥಿಗಳನ್ನು ತನ್ನ ಹಿಡಿತದಲ್ಲಿಟ್ಟುಕೊಂಡಿದೆ. ವಿದ್ಯಾರ್ಥಿಗಳು ಅಂತರ್ಜಾಲವನ್ನು ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಯಲ್ಲಿ ಸಾಮಾಜಿಕ ಮಾಧ್ಯಮ, ಆನ್ಲೈನ್ ಕಲಿಕಾ ಸಾಧನಗಳನ್ನು ಸದುಪಯೋಗಪಡಿಸಿಕೊಳ್ಳಬೇಕೆಂದು ಹೇಳಿದರು. ವಿದ್ಯಾರ್ಥಿಗಳು ತಮ್ಮ ಪದವಿಯಲ್ಲಿಯೇ ಸ್ಪರ್ಧಾತ್ಮಕ ಮನೋಭಾವ ಮತ್ತು ಪರೀಕ್ಷೆಗಳ…

Read More

ಉದಯರಶ್ಮಿ ದಿನಪತ್ರಿಕೆ ಇಂಡಿ: ಓರ್ವ ಮಹಿಳೆ ನಮ್ಮ ದೇಶದಲ್ಲಿ ಪ್ರಧಾನಿಯಾಗಿ ಆಡಳಿತ ಮಾಡುವ ಮೂಲಕ ಮಹಿಳಾ ಸಾಮರ್ಥ್ಯ ಬಗ್ಗೆ ಎಲ್ಲರಿಗೂ ಗೊತ್ತಿದೆ. ಅದರಂತೆ ವಿಧ್ಯಾರ್ಥಿಗಳು ತಮ್ಮ ಗುರಿಯತ್ತ ಸಾಗಬೇಕಾದರೆ ಶಿಸ್ತು ಬಹಳ ಮುಖ್ಯ, ಶಿಸ್ತನ್ನು ಮೈಗೂಡಿಸಿಕೊಂಡು ಚೆನ್ನಾಗಿ ಓದಿ ವಿದ್ಯಾವಂತರಾಗಿ ಪ್ರಧಾನಿ ಇಂದಿರಾಗಾಂಧಿ ಹಾಗೂ ಐಐಎಸ್, ಐಪಿಎಸ್ ಅಂತಹ ದೊಡ್ಡ ದೊಡ್ಡ ಸ್ಥಾನಗಳನ್ನು ಅಲಂಕರಿಸಬೇಕು ಎಂದು ಜಿಲ್ಲಾ ಪಂಚಾಯತ ಮಾಜಿ ಅಧ್ಯಕ್ಷ ಶಿವಯೋಗೆಪ್ಪ ನೆದಲಗಿ ಹೇಳಿದರು.ಸೋಮವಾರ ತಾಲ್ಲೂಕಿನ ಸಾಲೋಟಗಿ ಗ್ರಾಮದಲ್ಲಿ ಸರಕಾರಿ ಗಂಡು ಮತ್ತು ಹೆಣ್ಣು ಮಕ್ಕಳು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಡಾ. ನಾಗರಾಜ ಗೌರಬಿದರನೂರ ರಾಷ್ಟ್ರೀಯ ಸಾಕ್ಷರತಾ ಮಿಷನ್ ಸಂಯೋಜಕರು, ಭಾರತ ಸರಕಾರ ಯೋಜನೆ ಅಡಿಯಲ್ಲಿ ಶಾಲಾ ಮಕ್ಕಳಿಗೆ ಉಚಿತ ಬ್ಯಾಗ್ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.ಜೀವನದಲ್ಲಿ ಎಲ್ಲರೂ ಕಷ್ಟಪಟ್ಟು ಓದಿ ಮುಂದೆ ಬರಬೇಕು. ನೀವು ದೇಶದ ಉತ್ತಮ ಪ್ರಜೆಯಾಗಿ ದೇಶಕ್ಕೆ ನಿಮ್ಮದೇ ಆದ ಕೊಡುಗೆ ನೀಡಬೇಕು ಎಂದು ಹೇಳಿದರು. ಒಟ್ಟು ತಾಲ್ಲೂಕಿಗೆ 7 ಸಾವಿರ ಬ್ಯಾಗ ಬಂದಿದ್ದು, ಅದರಲ್ಲಿ ಸಾಲೋಟಗಿ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಇಂದು ನಡೆದ ದ್ವೀತಿಯು ಪಿಯುಸಿ ವಾರ್ಷಿಕ ಪರೀಕ್ಷೆ-೧ರ ತಮಿಳು, ತೆಲಗು, ಮಲಯಾಳಂ, ಮರಾಠಿ ಹಾಗೂ ಫ್ರೆಂಚ್ ಭಾಷಾ ಪರೀಕ್ಷೆಗೆ ನೊಂದಾಯಿಸಿಕೊಂಡ ೧೨೯೮ ವಿದ್ಯಾರ್ಥಿಗಳ ಪೈಕಿ ೧೨೧೫ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿ, ೮೩ ಅಭ್ಯರ್ಥಿಗಳು ಪರೀಕ್ಷೆಗೆ ಗೈರ ಹಾಜರಾಗಿದ್ದರು. ಇಂದು ನಡೆದ ಪರೀಕ್ಷೆಯಲ್ಲಿ ಯಾವುದೇ ಡಿಬಾರ್ ಆಗಿರುವುದಿಲ್ಲ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ೧೧೦/೧೧ ಕೆವಿ ಕೆರೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಕಾಮಗಾರಿ ಕೈಗೆತ್ತಿಕೊಂಡಿರುವುದರಿಂದ ಈ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಎಲ್ಲಾ ೧೧ ಕೆ.ವ್ಹಿ ವಿದ್ಯುತ್ ಮಾರ್ಗಗಳಲ್ಲಿ ಮಾರ್ಚ್ ೬ರ ಮಧ್ಯಾಹ್ನ ೨ ಗಂಟೆಯಿಂದ ಸಂಜೆ ೬ರವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಆದ್ದರಿಂದ, ಗ್ರಾಹಕರು ಸಹಕರಿಸುವಂತೆ ಇಂಡಿ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ಡ್ರಗ್ ಫ್ರೀ ಕರ್ನಾಟಕ, ಫಿಟ್‌ನೆಸ್ ಫಾರ್ ಆಲ್ ಹಾಗೂ ನಮ್ಮ ಪೊಲೀಸ್ ನಮ್ಮ ಹೆಮ್ಮೆಥೀಮ್‌ನ ಅಡಿಯಲ್ಲಿ ಆಯೋಜನೆ | ಎಸ್ಪಿ ಲಕ್ಷ್ಮಣ ನಿಂಬರಗಿ ಮಾಹಿತಿ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾ ಪೊಲೀಸ್ ವತಿಯಿಂದ ಮಾ.09ರಂದು “ಡ್ರಗ್ ಫ್ರೀ ಕರ್ನಾಟಕ” “ಫಿಟ್‌ನೆಸ್ ಫಾರ್ ಆಲ್” ಹಾಗೂ “ನಮ್ಮ ಪೊಲೀಸ್ ನಮ್ಮ ಹೆಮ್ಮೆ” ಥೀಮ್‌ನ ಅಡಿಯಲ್ಲಿ ಕರ್ನಾಟಕ ಪೊಲೀಸ್ ರನ್-2025 ಮ್ಯಾರಾಥಾನ್ ಓಟವನ್ನು (5 KM) ಆಯೋಜಿಸಲಾಗಿದೆ ಎಂದು ವಿಜಯಪುರ ಜಿಲ್ಲೆ ಪೊಲೀಸ್ ಅಧೀಕ್ಷಕರಾದ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.ಈ ಕುರಿತು ಮಂಗಳವಾರ ಪ್ರಕಟಣೆಯಲ್ಲಿ ತಿಳಿಸಿದ ಅವರು, ಮಾ.09ರಂದು ಬೆಳಗ್ಗೆ 06.30 ಗಂಟೆಗೆ ಮ್ಯಾರಾಥಾನ್ ಓಟವು ಗೋಲಗುಂಬಜ್ ನಿಂದ ಆರಂಭವಾಗಿ, ಜಿಲ್ಲಾ ಕ್ರೀಡಾಂಗಣ, ಬಸವೇಶ್ವರ ವೃತ್ತ, ಗಾಂಧಿಚೌಕ, ಶಿವಾಜಿ ವೃತ್ತ, ವಾಟರ್ ಟ್ಯಾಂಕ್, ಸೋಲಾಪೂರ ರಸ್ತೆ ಮಾರ್ಗವಾಗಿ ಜಿಲ್ಲಾ ಪೊಲೀಸ್ ಕವಾಯತು ಮೈದಾನಕ್ಕೆ ಬಂದು ಮುಕ್ತಾಯಗೊಳ್ಳಲಿದೆ ಎಂದರು.ಮ್ಯಾರಾಥಾನ್‌ನಲ್ಲಿ ಭಾಗವಹಿಸಿ, ವಿವಿಧ ವಿಭಾಗಗಳಲ್ಲಿ ಪ್ರಥಮ, ದ್ವಿತೀಯ ಹಾಗೂ ತೃತೀಯ ಸ್ಥಾನ ಪಡೆಯುವ ವಿಜೇತರಿಗೆ ಪ್ರಮಾಣ ಪತ್ರ ಹಾಗೂ…

Read More

ಉದಯರಶ್ಮಿ ದಿನಪತ್ರಿಕೆ ನಿಡಗುಂದಿ: ಎಸ್.ವ್ಹಿ.ಪಾಟೀಲ್ ಮೆಮೊರಿಯಲ್ ಐಟಿಐ ನಿಡಗುಂದಿ ಹಾಗೂ ಟೊಯೋಟೊ ಕಿರ್ಲ್ಲೋಸ್ಕರ್ ಮೋಟರ್ಸ್ ಲಿಮಿಟೆಡ್ ಬಿಡದಿ ಇವರ ಮಾರ್ಗದರ್ಶನದಲ್ಲಿ ಹಾಗೂ ಪೊಲೀಸ್ ಇಲಾಖೆ ನಿಡಗುಂದಿ ಇವರ ಸಹಯೋಗದೊಂದಿಗೆ ರಸ್ತೆ ಸುರಕ್ಷತಾ ಸಂಚಾರದ ಬಗ್ಗೆ ಅರಿವು ಮೂಡಿಸುವ ಬಗ್ಗೆ ಐಟಿಐ ತರಬೇತಿದಾರರು ಹಾಗೂ ಪೊಲೀಸ್ ಇಲಾಖೆಯ ಜೊತೆಗೆ ಜಾಥಾ ಹಾಗೂ ಸುರಕ್ಷತೆಯ ಬಗ್ಗೆ ಕರಪತ್ರಗಳನ್ನು ಹಂಚಲಾಯಿತು.ಈ ಕಾರ್ಯಗಾರದಲ್ಲಿ ನಿಡಗುಂದಿ ಪೊಲೀಸ್ ಇಲಾಖೆಯ ಸಿಪಿಐ ಅಶೋಕ್ ಚವಾಣ್ ಹಾಗೂ ಸಂಸ್ಥೆಯ ಅಧ್ಯಕ್ಷರಾದ ಸತೀಶಗೌಡ ಪಾಟೀಲ ಇವರು ತರಬೇತುದಾರರಿಗೆ ರಸ್ತೆ ಸುರಕ್ಷತೆಯ ಅರಿವಿನ ಅಗತ್ಯ ಕುರಿತು ವಿವರಿಸಿದರು.ಶಕುಂತಲಾ ಮೇಡಂ ನಿರೂಪಣೆ ಮಾಡಿದರು.ಈ ಸಂದರ್ಭದಲ್ಲಿ ರಸ್ತೆ ಸುರಕ್ಷತೆಯ ಬಗ್ಗೆ ವಿಡಿಯೋಗಳನ್ನು ಪ್ರದರ್ಶಿಸಲಾಯಿತು.

Read More

ವಿಜಯಪುರ ಪ್ರಧಾನ ಜಿಲ್ಲಾ ನ್ಯಾಯಾಧೀಶರಿಗೆ ಹೃದಯ ಸ್ಪರ್ಶಿ ಬೀಳ್ಕೊಡುಗೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರವು ಪ್ರೀತಿ, ವಿಶ್ಚಾಸ, ನಂಬಿಕೆ ವಾತ್ಸಲ್ಯದ ಭೂಮಿಯಾಗಿದೆ. ಇಲ್ಲಿಯ ಜನರ ನಡೆ ನುಡಿ ಗಮನಿಸಿದ್ದೇನೆ, ಇಲ್ಲಿಯ ವಕೀಲರ ವೈಖರಿ ಶಿಸ್ತುಬದ್ದವಾಗಿದೆ, ವಿಜಯಪುರದಲ್ಲಿ ಬಸವಣ್ಣ, ಸಿದ್ದೇಶ್ವರ ಶ್ರೀಗಳು ಜನಿಸಿದ ನಾಡಲ್ಲಿ ಸೇವೆ ಸಲ್ಲಿಸಿದ್ದು ನನ್ನ ಪುಣ್ಯ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರನ್ಯಾಯಧೀಶರಾಗಿ ಸೇವೆ ಸಲ್ಲಿಸಿ ವಿಜಯಪುರದಲ್ಲಿ ನಿವೃತ್ತಿಯಾದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಶಿವಾಜಿ ಅನಂತ ನಲವೆಡೆ ಹೇಳಿದರು.ಅವರಿಗೆ ಇಲ್ಲಿನ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ,ಪೆನಾಲ್ ವಕೀಲರು, ಮದ್ಯಸ್ಥಗಾರರು ಇವರುಗಳ ಸಂಯುಕ್ತಾಶ್ರಯದಲ್ಲಿ ನ್ಯಾಯಾಂಗ ಅಧಿಕಾರಿಗಳ ಸಭಾಭವನದಲ್ಲಿ ಏರ್ಪಡಿಸಿದ್ದ ಬೀಳ್ಕೊಡುಗೆ ಸಮಾರಂಭದಲ್ಲಿ ಬೀಳ್ಕೊಡುಗೆ ಸನ್ಮಾನ ಸ್ವೀಕರಿಸಿ ಮಾತನಾಡುತ್ತಿದ್ದರು.ಎಲ್ಲರೂ ಸಹಕಾರ ನೀಡಿದ್ದರಿಂದ ಉತ್ತಮ ಸೇವೆ ಸಾಧ್ಯವಾಗಿದೆ ಎಂದು ವಿವರಿಸಿದ ನಲವೆಡೆ ಅವರು, ವಿಜಯಪುರ ಪವಿತ್ರ ಭೂಮಿಯಲ್ಲಿ ನಿವೃತ್ತಿ ಹೊಂದಿರುವುದರ ಬಗ್ಗೆ ಹೆಮ್ಮೆಯ ವಿಚಾರ ಎಂದು ನುಡಿದರುಸಮಾರಂಭದ ಅಧ್ಯಕ್ಷತೆವಹಿಸಿದ್ದ ಪ್ರಭಾರಿ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ರಾಮಾ ನಾಯಕ…

Read More