Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ “ಮಹಿಳಾ ಸಾಂಸ್ಕೃತಿಕ ಹಬ್ಬ-೨೦೨೫” ಹಮ್ಮಿಕೊಳ್ಳಲಾಗಿದೆ.ಈ ಮಹಿಳಾ ಸಾಂಸ್ಕೃತಿಕ ಹಬ್ಬದ ಅಂಗವಾಗಿ ಮ್ಯಾರಥಾನ್, ಜುಂಬಾ ಮತ್ತು ಯೋಗ ತರಬೇತಿ, ಮಹಿಳಾ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆ ಮತ್ತು ಆಹಾರ ಮೇಳ, ವಿವಿಧ ವಿಷಯಗಳ ಕುರಿತ ಕೌಶಲ ತರಬೇತಿ ಹಾಗೂ ಕಾರ್ಯಾಗಾರ, ರಸಪ್ರಶ್ನೆ ಕಾರ್ಯಕ್ರಮಗಳು, ಭಾಷಣ ಸ್ಪರ್ಧೆ, ಮತ್ತಿತರ ಸ್ಪರ್ಧೆಗಳು, ಶೈಕ್ಷಣಿಕ, ಕ್ರೀಡೆ, ಬಂಜಾರಾ ನೃತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳು, ಕವಿಗೋಷ್ಠಿ, ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ‘ಎಲ್ಲಾ ಹೆಣ್ಣು ಮಕ್ಕಳು ಮತ್ತು ಮಹಿಳೆಯರಿಗಾಗಿ: ಹಕ್ಕುಗಳು, ಸಮಾನತೆ, ಸಬಲೀಕರಣ’ “ಹೆಣ್ಣು ಮಕ್ಕಳ ಅನೈತಿಕ ಸಾಗಾಣಿಕೆ ತಡೆಗಟ್ಟುವಿಕೆ” ಕುರಿತು ವಿಚಾರ-ವಿನಿಮಯ ಮತ್ತು ವಿಶೇಷ ಉಪನ್ಯಾಸ, ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಉದ್ಘಾಟನಾ ಸಮಾರಂಭ:‘ಮಹಿಳಾ ಸಾಂಸ್ಕೃತಿಕ ಹಬ್ಬ-೨೦೨೫’ ಉದ್ಘಾಟನಾ ಸಮಾರಂಭವನ್ನು ಮಾರ್ಚ್ ೬ ರಂದು ಬೆಳಿಗ್ಗೆ ೧೦:೩೦ ಗಂಟೆಗೆ ಮಹಿಳಾ ವಿವಿಯ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಟುಂಬ ಕಲ್ಯಾಣ ಅಧಿಕಾರಿಗಳು, ಸರ್ಕಾರಿ ನರ್ಸಿಂಗ ಕಾಲೇಜ ಹಾಗೂ ವಿವಿಧ ನರ್ಸಿಂಗ್ ಕಾಲೇಜುಗಳ ಸಂಯುಕ್ತಾಶ್ರಯದಲ್ಲಿ ವಿಶ್ವ ಶ್ರವಣ ದಿನಾಚರಣೆಯ ಪ್ರಯುಕ್ತ ಸೋಮವಾರ ಬೆಳಿಗ್ಗೆ ಹಮ್ಮಿಕೊಂಡ ಜನಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕರಾದ ಡಾ.ಚನ್ನಮ್ಮ ಕಟ್ಟಿ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾ.ಸಂಪತ್ತ ಗುಣಾರಿ ಜಂಟಿಯಾಗಿ ಚಾಲನೆ ನೀಡಿದರು.ಈ ಜಾಥಾವು ನಗರದ ಶ್ರೀ ಸಿದ್ದೇಶ್ವರ ದೇವಸ್ಥಾನದಿಂದ ಆರಂಭಗೊಂಡು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಾರ್ಯಾಲಯದವರೆಗೆ ಬಂದು ಸಮಾರೋಪಗೊಂಡಿತು.ಕಾರ್ಯಕ್ರಮದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಪರ ನಿರ್ದೇಶಕರಾದ ಡಾ.ಚನ್ನಮ್ಮ ಕಟ್ಟಿ ಮಾತನಾಡಿ, ಇಂದಿನ ದಿನಮಾನಗಳಲ್ಲಿ ಹೆಚ್ಚುತ್ತಿರುವ ಶಬ್ದಮಾಲಿನ್ಯದಿಂದ ಶ್ರವಣದೋಷ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ರೇಡಿಯೋ, ಟಿ.ವಿ, ಮೊಬೈಲ್ ಶಬ್ದ ಸೇರಿದಂತೆ ಹೆಡ್ ಸೆಟ್‌ಗಳ ಅಧಿಕ ಬಳಕೆಯಿಂದಾಗಿ ಕಿವಿಯ ಒಳಭಾಗದ ನರಕೋಶಗಳು ದುರ್ಬಲಗೊಂಡು…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿದ್ಯುನ್ಮಾನ ಮತ್ತು ಮುದ್ರಣ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬAಧಿತ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಯೋಜನೆಗೆ ಅರ್ಹ ಪತ್ರಕರ್ತರಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ಮುಖ್ಯಮಂತ್ರಿಗಳು ೨೦೨೪-೨೫ ನೇ ಸಾಲಿನ ಆಯವ್ಯಯದಲ್ಲಿ ಈ ಯೋಜನೆ ಘೋಷಿಸಿದ್ದರು.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ವಿದ್ಯುನ್ಮಾನ ಅಥವಾ ಮುದ್ರಣ ಮಾಧ್ಯಮಗಳಲ್ಲಿ ಪೂರ್ಣಾವಧಿಗೆ ನೇಮಕಗೊಂಡು ೪ ವರ್ಷಗಳ ಸೇವಾನುಭವ ಹೊಂದಿರುವ ಪತ್ರಕರ್ತರು ಅರ್ಜಿ ಸಲ್ಲಿಸಬಹುದು. ನೇಮಕಾತಿ ಆದೇಶ/ವೇತನ ಪತ್ರ/ಬ್ಯಾಂಕ್ ಸ್ಟೇಟ್‌ಮೆಂಟ್ ಗಳಲ್ಲಿ ಯಾವುದಾದರೂ ದಾಖಲೆಗಳನ್ನು ಸೇವಾನುಭವಕ್ಕಾಗಿ ಒದಗಿಸಬೇಕು.ಜಿಲ್ಲಾ ವ್ಯಾಪ್ತಿಯಲ್ಲಿ ಸಂಚರಿಸುವ ಕರ್ನಾಟಕ ಸಾರಿಗೆ ಸಂಸ್ಥೆ ಬಸ್ಸುಗಳಲ್ಲಿ ಜಿಲ್ಲಾ ವ್ಯಾಪ್ತಿಗೆ ಉಚಿತವಾಗಿ ಸಂಚರಿಸಬಹುದು.ತಹಸೀಲ್ದಾರರಿಂದ ಪಡೆದ ವಾಸಸ್ಥಳ ಪ್ರಮಾಣ ಪತ್ರ ಒದಗಿಸಬೇಕು.ರಾಜ್ಯ ಮಟ್ಟದ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸುವ ವರದಿಗಾರರಿಗೆ ಪ್ರತಿ ತಾಲ್ಲೂಕಿಗೆ ಸಂಪಾದಕರು ಸೂಚಿಸುವ ಒಬ್ಬರಿಗೆ,ಜಿಲ್ಲಾ ಮಟ್ಟದ ಪತ್ರಿಕೆಗಳು ತಮ್ಮ ಜಿಲ್ಲಾ ವ್ಯಾಪ್ತಿಯಲ್ಲಿ ಒಬ್ಬರಿಗೆ,ಆರು ಪುಟಗಳಲ್ಲಿ ಪ್ರಕಟವಾಗುವ ಪ್ರಾದೇಶಿಕ ಪತ್ರಿಕೆಗಳು ಓರ್ವ ವರದಿಗಾರರು ಹಾಗೂ ಓರ್ವ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಮಂಡಳಿ ಜಿಲ್ಲಾ ಪಂಚಾಯತಿ ವಿಜಯಪುರ ಹಾಗೂ ಗ್ರಾಮ ಪಂಚಾಯತ ಸಾರವಾಡ ಇವರ ಸಂಯುಕ್ತಾಶ್ರಯದಲ್ಲಿ ಕಣಮುಚನಾಳದ ಸರ್ಕಾರಿ ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಕಾರ್ಯಕ್ರಮವನ್ನು ಆಚರಣೆ ಮಾಡಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆಯ ವಹಿಸಿ ಮಾತನಾಡಿದ ಪ್ರೌಡಶಾಲೆಯ ಮುಖ್ಯೋಪಾದ್ಯಾಯರಾದ ಆರ್.ವಿ.ಹೊಸುರ ಅವರು, ಎಲೆಕ್ಟ್ರಾನಿಕ್ ಮಾಹಿತಿ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಮಹತ್ತರವಾದ ಬದಲಾವಣೆಯನ್ನು ಮಾಡಿದೆ. ಮಕ್ಕಳು ಇಂತಹ ಹೊಸ ಆವಿಸ್ಕಾರಗಳ ಬಗ್ಗೆ, ತಂತ್ರಜ್ಞಾನದ ಬದಲಾವಣೆಗಳ ವಿಷಯಗಳ ಕುರಿತು ಅರಿತುಕೊಳ್ಳಬೇಕು ಎಂದು ಹೇಳಿದರು.ಜಿಲ್ಲಾ ಪಂಚಾಯತಿಯ ಎನ್ ಆರ್ ಡಿ ಎಮ್ ಎಸ್ ಕೇಂದ್ರದ ಯೋಜನಾ ಸಂಯೋಜಕರ ಅಧಿಕಾರಿಗಳಾದ ವಿದ್ಯಾಧರ ಇವರು ಮಾತನಾಡಿ, ಭೌತಶಾಸ್ತ್ರಜ್ಞ ಸರ್ ಸಿ.ವಿ. ರಾಮನ್ ಅವರು ರಾಮನ್ ಪರಿಣಾಮದ ಆವಿಷ್ಕಾರವನ್ನು ಸ್ಮರಣೆಯ ನಿಮಿತ್ಯ ಇಂದು ರಾಷ್ಟ್ರೀಯ ವಿಜ್ಞಾನ ದಿನ ಆಚರಣೆ ಮಾಡಲಾಗುತ್ತಿದೆ, ಗ್ರಾಮೀಣ ಮಟ್ಟದ ವಿದ್ಯಾರ್ಥಿಗಳಿಗೆ ವಿಜ್ಞಾನ ವಿಷಯದಲ್ಲಿ ಆಸಕ್ತಿ ಮತ್ತು ಪ್ರಸ್ತುತ ತಂತ್ರಜ್ಞಾನವು ಹೇಗೆ ಬದಲಾವಣೆ ಹೊಂದುತ್ತಿದೆ, ಎಂಬುದನ್ನ ವಿಜ್ಞಾನ ತಂತ್ರಜ್ಞಾನ ಮಂಡಳಿಯು ಅರಿವು ಮೂಡಿಸಲಾಗುತ್ತಿದೆ.…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ಇಂದು ನಡೆದ ದ್ವೀತಿಯು ಪಿಯುಸಿ ವಾರ್ಷಿಕ ಪರೀಕ್ಷೆ-೧ರ ಗಣಿತ, ಶಿಕ್ಷಣಶಾಸ್ತç, ಲಾಜಿಕ್ ಹಾಗೂ ವ್ಯವಹಾರ ಅಧ್ಯಯನ ಪರೀಕ್ಷೆಗೆ ೨೫೪೯೭ ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದರು. ಈ ಪೈಕಿ ೨೪೪೯೯ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ೯೯೮ ಅಭ್ಯರ್ಥಿಗಳು ಪರೀಕ್ಷೆಗೆ ಗೈರ ಹಾಜರಾಗಿದ್ದು, ಯಾವುದೇ ಡಿಬಾರ್ ಆಗಿರುವುದಿಲ್ಲ ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಲ್ಲಿ ಕಲಿಯುತ್ತಿರುವ ಮಕ್ಕಳು ಕಣ್ಣಿನ ತೊಂದರೆಗೆ ಒಳಗಾಗಿ ಕಲಿಕೆಯಲ್ಲಿ ಹಿಂದುಳಿಯಬಾರದು ಎಂದು ವಿಜಯಪುರ ಗ್ರಾಮೀಣ ವಲಯದ ಸಮನ್ವಯ ಶಿಕ್ಷಣದ ಸಂಪನ್ಮೂಲ ವ್ಯಕ್ತಿ (ಬಿಐಈಆರ್ಟಿ) ಎಸ್.ಬಿ.ಬಿರಾದಾರ ಹೇಳಿದರು.ತಾಲ್ಲೂಕಿನ ಘೋಣಸಗಿ, ಕಳ್ಳಕವಟಗಿ ಹಾಗೂ ಅಳಗಿನಾಳ ಗ್ರಾಮಗಳ ಶಾಲೆಗಳಲ್ಲಿ ಬೆಂಗಳೂರಿನ ಶಂಕರ ಕಣ್ಣಿನ ಆಸ್ಪತ್ರೆ ಹಾಗೂ ಟೈಟನ್ ಕಂಪನಿ‌ ಸಹಯೋಗದೊಂದಿಗೆ 500 ಕ್ಕೂ ಹೆಚ್ಚು ಶಾಲಾ ವಿಧ್ಯಾರ್ಥಿಗಳಿಗೆ “ನನ್ನ ಕಣ್ಣು” ಎಂಬ ಕಾರ್ಯಕ್ರಮದ ಮೂಲಕ ಉಚಿತ ನೇತ್ರ ಚಿಕಿತ್ಸೆ ತಪಾಸಣೆ ನೆರವೇರಿಸಿ ಅವರು ಮಾತನಾಡಿದರು.ಉಚಿತವಾಗಿ ಮಕ್ಕಳಿಗೆ ನೇತ್ರ ತಪಾಸಣೆ ಮಾಡಿ, ಉಚಿತವಾಗಿ ಕನ್ನಡಕವನ್ನು ನೀಡಿ ಹೆಚ್ಚಿನ ಚಿಕಿತ್ಸೆಯ ಅಗತ್ಯವಿದ್ದಾಗ ಬೆಂಗಳೂರಿನ ಆಸ್ಪತ್ರೆಗೆ ಕರೆಸಿಕೊಂಡು ಚಿಕಿತ್ಸೆ ನೀಡುತ್ತಾರೆ. ತಂಗಲು ವಸತಿ ವ್ಯವಸ್ಥೆ ಸಹ ಮಾಡಿ ಸಾರಿಗೆ ವೆಚ್ಚವಾಗಿ ₹ 1 ಸಾವಿರ ಮಕ್ಕಳಿಗೆ ನೀಡುತ್ತಾರೆ. ಬಡ ಮಕ್ಕಳ ನೇತ್ರ ಚಿಕಿತ್ಸೆ ಮಾಡುತ್ತಿರುವ ಇವರ ಕಾರ್ಯ ಶ್ಲಾಘನೀಯವಾಗಿದೆ ಎಂದರು.ವಿಜಯಪುರ ಗ್ರಾಮೀಣವಲಯದ ಶಾಲೆಗಳಲ್ಲಿ ಇಲ್ಲಿಯವರೆಗೆ 145 ಶಾಲೆಗಳಲ್ಲಿ 16556 ಮಕ್ಕಳ ನೇತ್ರ…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ಇಲ್ಲಿನ ಆರೂಢ ಸಂಗನಬಸವೇಶ್ವರಮಠದಲ್ಲಿ ಪಂಡಿತ ಪುಟ್ಟರಾಜ ಗವಾಯಿಗಳ 111ನೇ ಜಯಂತೋತ್ಸವ ಆಚರಿಸಲಾಯಿತು .ಸುತ್ತಲಿನ ಗ್ರಾಮಗಳ ಭಜನಾ ಮಂಡಳಿಮತ್ತು ಸಂಗೀತ ಶಿಕ್ಷಕರಿಗೆ ವಿಶೇಷ ಸತ್ಕಾರಮಾಡಲಾಯಿತು ಪಾವನ ಸಾನಿಧ್ಯ ಷಭ್ರ ಸಂಗನಬಸವಶಿವಾಚಾರ್ಯರು ವಹಿಸಿದ್ದರು.ಶ್ರೀಮಠದ ಒಡೆಯರಾದ ಬಸವಲಿಂಗ ಶರಣರು ಪ್ರೀತಿಯ ಸತ್ಕಾರ ನೀಡಿ ಇಂದು ನಮ್ಮ ಮಠದಿಂದ ಪ್ರೀತಿಯ ಸತ್ಕಾರ ಪಡೆದ 12 ಜನ ಭಜನಾ ಮಂಡಳಿಯವರು ಸಮಾಜದ ಪ್ರತಿಯೊಬ್ಬರ ಅಂಧಕಾರ ಹೊರದೂಡಿ ಆಧ್ಯಾತ್ಮ ವಿಚಾರದಲ್ಲಿ ಹಾಡಿನ ಮೂಲಕ ಸಮಾಜದ ಕಣ್ಣುತೆರೆಸಿದ ಕಡಕೋಳ ಮಡಿವಾಳಪ್ಪ ಮತ್ತು ಸಂತ ಶಿಶುನಾಳ ಶರೀಫ ಇವರ ಸ್ವರೂಪ ಪಂಡಿತ ಪುಟ್ಟರಾಜ ಗವಾಯಿಗಳು ಇವರ ಸ್ವರೂಪದಲ್ಲಿ ಈ ಪುಣ್ಯಜೀವಿಗಳನ್ನು ಸತ್ಕರಿಸುವುದು ಶ್ರೀಮಠಕ್ಕೆ ಹೆಮ್ಮೆ ತರುವ ವಿಷಯವಾಗಿದೆ ಎಂದರು ಕಲ್ಲಾಲಿಂಗ ಶರಣರು ಮತ್ತು ಸಂಗೀತ ಕಲಾವಿದರಾದ ಸದಾಶಿವ ಬಿರಾದಾರ ಮಲ್ಲಿಕಾರ್ಜುನ ಉಪ್ಪಿನ ಶಿವರಾಜ ಪತ್ತಾರ ವಿಶ್ವರ್ಯಾ ಕೊಳಾರಿ ಇವರಿಂದ ಸಂಗೀತ ಕಾರ್ಯಕ್ರಮ ನೆರವೇರಿತು.ಸಾನಿಧ್ಯ ವಹಿಸಿದ್ದ ಸಂಗನಬಸವ ಶಿವಾಚಾರ್ಯರು ಮಾತನಾಡಿದರು. ಮಲ್ಲಿಕಾರ್ಜುನ ಕೊಳಾರಿ ನಿಂಗನಗೌಡ ಪಾಟೀಲ ಸಂತು ಬಿರಾದಾರ ಬಸು…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ನುಡಿದಂತೆ ನಡೆದಿದೆ. ರಾಜ್ಯದ ಜನತೆ ಬದುಕು ಕಟ್ಟಿಕೊಳ್ಳಲಿ ಎಂಬ ಉದ್ದೇಶದಿಂದ ಪಂಚ ಗ್ಯಾರಂಟಿಗಳನ್ನು ಜಾರಿಗೆ ತಂದು ಸ್ವಾವಲಂಬಿ ಬದುಕು ಕಟ್ಟಿಕೊಳ್ಳುಲು ಸಹಕಾರಿಯಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಶ್ರೀಶೈಲ ಕವಲಗಿ ಹೇಳಿದರು.ಪಟ್ಟಣದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಹಮ್ಮಿಕೊಂಡ ಸರಕಾರದ ಪಂಚ ಗ್ಯಾರಂಟಿ ಯೋಜನೆಗಳ ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸರಕಾರ ಅನುಷ್ಠಾನಗೊಳಿಸಿದ ಗ್ಯಾರಂಟಿ ಯೋಜನೆಗಳನ್ನು ಸಕಾಲದಲ್ಲಿ ಜನರಿಗೆ ತಲುಪುವಲ್ಲಿ ಅಧಿಕಾರಿಗಳು ಕಾರ್ಯನಿರ್ವಹಿಸಬೇಕು ಎಂದು ಸೂಚಿಸಿದರು.ಈ ವೇಳೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶಂಭುಲಿಂಗ ಹಿರೇಮಠ ಮಾತನಾಡಿ, ಇಲಾಖೆಯಿಂದ ೨೭೨ ಪ್ರಕರಣಗಳು ಪೂರ್ಣಗೊಳಿಸಲಾಗಿದೆ. ೯ಪ್ರಕರಣ ಬಾಕಿಯಿವೆ. ಅವುಗಳನ್ನು ಈ ವಾರದಲ್ಲಿ ಪೂರ್ಣಗೊಳಿಸಲಾಗುವುದು ಎಂದರು. ಐಟಿ, ಜಿಎಸ್‌ಟಿ, ಹೊ ರೇಷನ್ ಕಾರ್ಡ್, ಆಧಾರ ಲಿಂಕ್ ಇಲ್ಲದೇ ಇರುವ ಒಟ್ಟು ೯ಅರ್ಜಿಗಳು ಬಾಕಿ ಉಳಿದಿವೆ. ಗೃಹಲಕ್ಷ್ಮೀಯಿಂದ ಬಂದ ಹಣದಿಂದ ಮಹಿಳೆಯರು ಹೂವಿನ…

Read More

ಸಿಂದಗಿ ಊರಿನ ಹಿರಿಯ ಮಠದ ಲಿಂಗೈಕ್ಯ ಮ.ಘ.ಚ. ಶ್ರೀ ಶಾಂತವೀರ ಪಟ್ಟಾಧ್ಯಕ್ಷರ ೪೫ನೆಯ ಪುಣ್ಯ ಸ್ಮರಣೋತ್ಸವ ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸದ್ಗುರುವನ್ನು ಸ್ಮರಿಸುವುದು ಭಾರತೀಯ ಸಂಸ್ಕೃತಿಯ ಸಂಕೇತ. ಜಗತ್ತಿನಲ್ಲಿ ಗುರುವಿಗೆ ಇರುವಷ್ಟು ಹೆಚ್ಚು ಮಹತ್ವ ಬೇರೆ ಯಾರಿಗೂ ಸಿಗುವುದಿಲ್ಲ ಎಂದು ಸಿಂದಗಿ ಭೀಮಾಶಂಕರ ಮಠದ ಪೂಜ್ಯಶ್ರೀ ದತ್ತಪ್ಪಯ್ಯ ಸ್ವಾಮಿಗಳು ಹೇಳಿದರು.ಸಿಂದಗಿ ಪಟ್ಟಣದ ಊರಿನ ಹಿರಿಯ ಮಠದ ಲಿಂಗೈಕ್ಯ ಮ.ಘ.ಚ. ಶ್ರೀ ಶಾಂತವೀರ ಪಟ್ಟಾಧ್ಯಕ್ಷರ ೪೫ನೆಯ ಪುಣ್ಯ ಸ್ಮರಣೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಸಿಂದಗಿಯ ಶ್ರೀ ಶಾಂತವೀರ ಪಟ್ಟಾಧ್ಯಕ್ಷರ ಬದುಕು ಒಂದು ಇತಿಹಾಸ. ನಾಡಿನ ಮೂಲೆ ಮೂಲೆಯಲ್ಲಿ ಶ್ರೀ ಕುಮಾರೇಶ್ವರ ಪೂಜ್ಯರ ಹೆಸರಿನ ಮೇಲೆ ಅನೇಕ ಸಾಂಸ್ಕೃತಿಕ ಪಾಠ ಶಾಲೆಗಳನ್ನು ಪ್ರಾರಂಭಿಸಿ ಸಮಾಜಕ್ಕೆ ಮಾದರಿಯಾದಂತವರು. ಸನಾತನ ಸಂಸ್ಕೃತಿಯನ್ನು ಉಳಿಸಿ ಬೆಳೆಸಿದಂತ ಸಾಧಕರಲ್ಲಿ ಸಿಂದಗಿ ಶ್ರೀಗಳು ಒಬ್ಬರು. ಬಿದ್ದಿದ್ದು ತಪ್ಪಲ್ಲ ಬಿದ್ದಲ್ಲೇ ಬೀಳುವದು ತಪ್ಪು ಎಂಬ ಅವರ ದಿವ್ಯ ವಾಣಿ ಬದುಕನ್ನು ಕಟ್ಟಿಕೊಡುತ್ತದೆ ಎಂದರು.ಈ ವೇಳೆ ಅಧ್ಯಕ್ಷತೆ ವಹಿಸಿದ ಶ್ರೀಮಠದ ಪೀಠಾಧ್ಯಕ್ಷರಾದ ಶಿವಾನಂದ ಶಿವಾಚಾರ್ಯರು ಮಾತನಾಡಿ,…

Read More

ಉದಯರಶ್ಮಿ ದಿನಪತ್ರಿಕೆ ಕೆಂಭಾವಿ: ಬರ್ತಡೇ ಎಂದರೆ ಕೇಕ್, ಕ್ಯಾಂಡಲ್, ಶಾಲು, ಹಾರ, ತುರಾಯಿ, ಸನ್ಮಾನ, ಬೀರ್, ಬಾರ್, ಮೋಜು, ಮಸ್ತಿಗೆ ಮಾರು ಹೋಗುವ ಇಂದಿನ ದಿನಮಾನಗಳಲ್ಲಿ, ಬ್ಲಾಕ್ ಕಾಂಗ್ರೆಸ್ ವತಿಯಿಂದ ಜನನಾಯಕನ ಜನ್ಮದಿನಾಚರಣೆಯನ್ನು ವಿಭಿನ್ನ ಹಾಗೂ ವಿಶಿಷ್ಟ ರೀತಿಯಲ್ಲಿ ಆಚರಿಸಲಾಯಿತು.ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಸೋಮವಾರ ಬೆಳಗ್ಗೆ ಆಸ್ಪತ್ರೆಗೆ ಭೇಟಿ ನೀಡಿ ತಮ್ಮ ನೆಚ್ಚಿನ ನಾಯಕ, ಅಭಿವೃದ್ಧಿ ಹರಿಕಾರ, ಕರ್ನಾಟಕ ಸರ್ಕಾರದ ಸಣ್ಣ ಕೈಗಾರಿಕೆ ಹಾಗೂ ಸಾರ್ವಜನಿಕ ಉದ್ದಿಮೆಗಳು ಮತ್ತು ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವರು, ಮತಕ್ಷೇತ್ರದ ಜನಪ್ರಿಯ ಶಾಸಕರು ಶರಣಬಸಪ್ಪಗೌಡ ದರ್ಶನಪುರವರ ಮಾರ್ಚ್, 03 ಕ್ಕೆ, 64 ವಸಂತಗಳನ್ನು ಪೂರೈಸಿ 65‌ ನೇ ವರ್ಷಕ್ಕೆ ಪಾದಾರ್ಪಣೆ ಮಾಡಿದ ಸುಸಂದರ್ಭದಲ್ಲಿ ಅತ್ಯಂತ ಅರ್ಥಪೂರ್ಣವಾಗಿ ಅಶಕ್ತರಿಗೆ, ಆರ್ಥಿಕ ದುರ್ಬಲರಿಗೆ, ರೋಗಿಗಳಿಗೆ ಹಣ್ಣು, ಹಂಪಲು, ಬ್ರೆಡ್ ಹಾಲು, ವಿತರಣೆ ಮಾಡಿ ಆಚರಿಸಿದ ಹುಟ್ಟು ಹಬ್ಬ ಜನಮನ್ನಣೆಗೆ ಪಾತ್ರವಾಯಿತು.ಇದೇ ವೇಳೆ ಪ್ರಮುಖರಾದ ಪಿಎಲ್ ಡಿ ಬ್ಯಾಂಕ್ ನಿರ್ದೇಶಕ ವಾಮನರಾವ್ ದೇಶಪಾಂಡೆ, ಮುಖಂಡ ಮಹಿಪಾಲರೆಡ್ಡಿ ಡಿಗ್ಗಾವಿ, ಯುವನಾಯಕ…

Read More