Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲೆಯಲ್ಲಿ ೦೫ ರಿಂದ ೧೭ ವರ್ಷದ ಒಟ್ಟು ೬೮,೦೦೦ ಮಕ್ಕಳ ಕಡ್ಡಾಯ ಬಯೋಮೆಟ್ರಿಕ್ ಅಪ್ಡೇಟ್ ಬಾಕಿ ಇದ್ದು, ಈ ಮಕ್ಕಳ ಬಯೋಮೆಟ್ರಿಕ್ ಅನ್ನು ಸೆ. ೩೦ರೊಳಗೆ ಉಚಿತವಾಗಿ ಮಾಡಿಸಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳಾದ ಡಾ. ಔದ್ರಾಮ ಅವರು ತಿಳಿಸಿದ್ದಾರೆ.ಜಿಲ್ಲೆಯ ಎಲ್ಲ ಆಧಾರ್ ಕೇಂದ್ರಗಳಲ್ಲಿ ಸೆ. ೩೦ ರವರೆಗೆ ಉಚಿತವಾಗಿ ಅವಕಾಶ ಕಲ್ಪಿಸಲಾಗಿರುತ್ತದೆ. ಪೋಷಕರು ತಮ್ಮ ಮಕ್ಕಳ ಆಧಾರ್ ಕಾರ್ಡ್ ಹಾಗೂ ಸಂಬಂಧಿಸಿದ ದಾಖಲೆಗಳೊಂದಿಗೆ ತಮ್ಮ ಹತ್ತಿರದ ಆಧಾರ್ ಕೇಂದ್ರಗಳಿಗೆ ಭೇಟಿ ನೀಡಿ ನವೀಕರಿಸಿಕೊಳ್ಳಬಹುದಾಗಿದೆ ಎಂದವರು ತಿಳಿಸಿದ್ದಾರೆ.ಕಾಲೋಚಿತಗೊಳಿಸುವುದರಿಂದ (ಅಪ್ಡೇಟ್) ಮಾಡುವುದರಿಂದ ಮಕ್ಕಳ ಶಾಲೆಯ ದಾಖಲಾತಿ, ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳು, ಸರ್ಕಾರದ ವಿವಿಧ ಯೋಜನೆಗಳು, ವಿದ್ಯಾರ್ಥಿ ವೇತನ, ತರಬೇತಿಗಳು ಸೇರಿದಂತೆ ಇತ್ಯಾದಿ ಯೋಜನೆಗಳ ಲಾಭ ಪಡೆಯಲು ಅನುಕೂಲವಾಗಲಿದೆ ಎಂದು ಅಪರ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.ಹಾಗಾಗಿ ಜಿಲ್ಲೆಯ ಎಲ್ಲ ಪೋಷಕರು ೫ ರಿಂದ ೧೭ ವಯೋಮಿತಿಯ ಮಕ್ಕಳ ಆಧಾರ್ ಸಂಖ್ಯೆಗೆ ಕಡ್ಡಾಯ ಬಯೋಮೆಟ್ರಿಕ್ ಅಪ್ ಡೇಟ್ ಪ್ರಕ್ರಿಯೆ ಯನ್ನು ಜವಾಬ್ದಾರಿಯಿಂದ ನಿರ್ವಹಿಸಿ ತಮ್ಮ…

Read More

ವಿಜಯಪುರದಲ್ಲಿ ಶ್ರೀ ಭಗೀರಥ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅಭಿಮತ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕಠಿಣ ಪರಿಶ್ರಮ ಹಾಗೂ ಛಲ ಹೊಂದಿ ಸಾಧನೆಯಡೆಗೆ ಸಾಗಿ ಸಾಧಕರಾಗಬೇಕು. ಭಗೀರಥ ಪ್ರಯತ್ನ ಮೈಗೂಡಿಸಿಕೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಡಾ.ಔದ್ರಾಮ ಅವರು ಅಭಿಪ್ರಾಯಪಟ್ಟರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಗುರುವಾರ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಶ್ರೀ ಭಗೀರಥ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಭಗೀರಥ ಎಂದರೆ ವಿಶೇಷ ಪ್ರಯತ್ನ, ಅಸಾಧ್ಯವಾದನ್ನು ಸಾಧಿಸಿ ಬಿಟ್ಟರೆ ಅವರು ಮಾಡಿರುವುದು ಭಗೀರಥ ಪ್ರಯತ್ನ ಎಂದು ಭಗೀರಥರನ್ನು ವರ್ಣಿಸಿದರು.ಕಾರ್ಯಕ್ರಮದಲ್ಲಿ ಸಂಗಮೇಶ ಮಿರಗಿ ಅವರು ಉಪನ್ಯಾಸ ನೀಡಿ, ಇಂದಿನ ವಿದ್ಯಾರ್ಥಿಗಳು, ಸಾಧಕರು ಅನೇಕ ಎಡರು-ತೊಡರುಗಳನ್ನು ಸೋಲುಗಳನ್ನು ಲೆಕ್ಕಿಸದೇ ಹಿಡಿದ ಕಾರ್ಯವನ್ನು ಬಿಡದೇ ಭಗೀರಥ ಪ್ರಯತ್ನ ನಮಗೆಲ್ಲ ಮಾದರಿ. ಇಂತಹ ಮಹನೀಯರ ಆದರ್ಶ ಅವರ ಬದುಕು ಮಾದರಿಯಾಗಿಸಿಕೊಂಡು ಸಾಧನೆ ಮಾಡಬೇಕು ಎಂದರು.ಸಮಾಜ ಮುಖಂಡರಾದ ಜಕ್ಕಪ್ಪ ಯಡವೆ ಮಾತನಾಡಿದರು.ಜಿಲ್ಲಾ ಪಂಚಾಯತಿಯ…

Read More

ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ‘ಭಯೋತ್ಪಾದಕ’ ಹೇಳಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ | ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರನ್ನು ‘ಭಯೋತ್ಪಾದಕ’ ಎಂದು ಕರೆದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೇಳಿಕೆಯನ್ನು ಖಂಡಿಸಿ, ಕರ್ನಾಟಕ ಬಿಜೆಪಿ ಗುರುವಾರ ವಿಧಾನಸೌಧದ ಮಹಾತ್ಮ ಗಾಂಧಿ ಪ್ರತಿಮೆ ಮುಂದೆ ಪ್ರತಿಭಟನೆ ನಡೆಸಿತು ಮತ್ತು ಅವರು ದೇಶದ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿತು.ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ವಿಜಯೇಂದ್ರ, ವಿಧಾನಸಭೆ ಮತ್ತು ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಆರ್ ಅಶೋಕ್ ಹಾಗೂ ಛಲವಾದಿ ನಾರಾಯಣಸ್ವಾಮಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಮತ್ತು ಪಕ್ಷದ ಹಲವಾರು ಶಾಸಕರು ಹಾಗೂ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.ಈ ವೇಳೆ ಬಿಜೆಪಿ ನಾಯಕರು ಫಲಕಗಳನ್ನು ಹಿಡಿದು ಖರ್ಗೆ ವಿರುದ್ಧ ಘೋಷಣೆಗಳನ್ನು ಕೂಗಿದರು.ನಮ್ಮ ಪ್ರಧಾನಿ ನರೇಂದ್ರ ಮೋದಿಯವರಿಗೆ ಹಲವಾರು ದೇಶಗಳು ತಮ್ಮ ಅತ್ಯುನ್ನತ ನಾಗರಿಕ ಪ್ರಶಸ್ತಿಗಳನ್ನು ನೀಡಿ ಗೌರವಿಸಿವೆ. ಭಾರತದ ಬೇರೆ ಯಾವುದೇ ಪ್ರಧಾನಿ ಇಷ್ಟೊಂದು ಪ್ರಮಾಣದಲ್ಲಿ ಪ್ರಶಸ್ತಿಗಳನ್ನು ಪಡೆದಿಲ್ಲ. ಇಡೀ ಜಗತ್ತು ನರೇಂದ್ರ ಮೋದಿಯವರ…

Read More

ಹಿರೇಬೇವನೂರ ಗ್ರಾಮದಲ್ಲಿ ೧.೨೫ ಕೋಟಿ ರೂ ವೆಚ್ಚದ ಶಾದಿ ಮಹಲ್ ಕಟ್ಟಡ ಲೋಕಾರ್ಪಣೆಗೊಳಿಸಿದ ಶಾಸಕ ಯಶವಂತರಾಯಗೌಡ ಅಭಿಮತ ಉದಯರಶ್ಮಿ ದಿನಪತ್ರಿಕೆ ಇಂಡಿ: ಮುಸ್ಲಿಂ ಸಮಾಜದ ಬಡ ಜನತೆಗೆ ಮದುವೆ ಮತ್ತಿತರ ಕಾರ್ಯಗಳನ್ನು ನಡೆಸಲು ಶಾದಿಮಹಲ ಕಟ್ಟಲಾಗಿದ್ದು ಸದುಪಯೋಗ ಪಡೆದುಕೊಳ್ಳಲು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.ತಾಲೂಕಿನ ಹಿರೇಬೇವನೂರ ಗ್ರಾಮದ ಸಕ್ಕರೆ ಕಾರ್ಖಾನೆ ಹತ್ತಿರ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಅಂಜುಮನ ಇಸ್ಲಾಂ ಸಮಿತಿ ಇವರಿಂದ ನಿರ್ಮಿಸಲಾದ ಒಂದು ಕೋಟಿ ೨೫ ಲಕ್ಷ ರೂ ವೆಚ್ಚದ ಶಾದಿ ಮಹಲ್ ಕಟ್ಟಡವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು.ಅಲ್ಪ ಸಂಖ್ಯಾತರ ಮದುವೆ ಹಾಗೂ ಸಮುದಾಯದ ಕಾರ್ಯಕ್ರಮಗಳ ಉದ್ದೇಶಕ್ಕಾಗಿ ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಗೆ ಮುಖ್ಯಮಂತ್ರಿಗಳು ಸಾಕಷ್ಟು ಅನುದಾನವನ್ನು ನೀಡಿದ್ದು ಇಂಡಿ ತಾಲೂಕಿನ ಅಭಿವೃದ್ದಿಗೆ ಮುಖ್ಯಮಂತ್ರಿಗಳ ಕೊಡುಗೆ ಅಪಾರವಾಗಿದೆ ಎಂದರು.ಅಧ್ಯಕ್ಷತೆ ವಹಿಸಿದ ಮೌಲಾನಾ ಶಾಕಿರ ಹುಸೇನ ಖಾಸ್ಮಿ ಮಾತನಾಡಿ ಹಿಂದು ಮುಸ್ಲಿಂ ಬಾಂಧವರು ಈ ನೆಲದಲ್ಲಿ ಅನ್ಯೋನತೆಯಿಂದ ಸಹೋದರತ್ವದಿಂದ ಬಾಳೋಣ ಎಂದರು.ಸಾನಿದ್ಯ ವಹಿಸಿದ ದೇವಾನಂದ ಹಿರೇಮಠ, ಬ್ಲಾಕ್ ಕಾಂಗ್ರೆಸ್ ಮಾಜಿ…

Read More

ಮೈಸೂರು ಜಿಲ್ಲೆಗೇ ಹೆಚ್.ಡಿ.ಕೋಟೆ ತಾಲೂಕು ಮೊದಲನೇ ಸ್ಥಾನ | ಆದರ್ಶ ಶಾಲೆ ವಿದ್ಯಾರ್ಥಿನಿ ವೇದಶ್ರೀ ಟಾಪರ್ ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ.ಕೋಟೆ: ಈ ಬಾರಿಯ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯ ಫಲಿತಾಂಶದಲ್ಲಿ ಹೆಚ್.ಡಿ.ಕೋಟೆ ತಾಲೂಕು ಇತಿಹಾಸ ಸೃಷ್ಟಿಸಿದೆ. ಇದೇ ಮೊದಲ ಬಾರಿಗೆ ತಾಲೂಕು ಶೇ. 96.80 ಫಲಿತಾಂಶದೊಂದಿಗೆ ಮೈಸೂರು ಜಿಲ್ಲೆಯಲ್ಲೆ ಪ್ರಥಮ ಸ್ಥಾನಗಳಿಸಿದೆ. ಈ ಮೂಲಕ ಕ್ಷೇತ್ರ ಶಿಕ್ಷಣಾಧಿಕಾರಿ ತೆಗೆದುಕೊಂಡಿದ್ದ ವಿನೂತನ ಪ್ರಯೋಗ ಸಕ್ಸಸ್ ಕಂಡಿದೆ.ಮಾ.18ರಿಂದ ಏ.2ರವರೆಗೆ ನಡೆದ ವಾರ್ಷಿಕ ಪರೀಕ್ಷೆಯಲ್ಲಿ 31 ಪ್ರೌಢಶಾಲೆ, 23 ಖಾಸಗಿ ಹಾಗೂ 4 ವಸತಿ ಶಾಲೆಗಳಿಂದ ಒಟ್ಟು 3369 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ಹೆಚ್.ಡಿ.ಕೋಟೆ ಪಟ್ಟಣ , ಸರಗೂರು, ಹ್ಯಾಂಡ್ ಪೋಸ್ಟ್, ಡಿ.ಬಿ.ಕುಪ್ಪೆ, ಹೊಮ್ಮರಗಳ್ಳಿ, ಅಂತರಸಂತೆ, ಮಾದಾಪುರ, ಬೀಚನಹಳ್ಳಿ, ಮುಳ್ಳೂರು, ಬಿ.ಮಟಕೆರೆ ಸೇರಿದಂತೆ ಹದಿಮೂರು ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗಿತ್ತು.2,971 ವಿದ್ಯಾರ್ಥಿಗಳು, ಮಾತ್ರ ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ 2,876 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದರೆ 95 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದಾರೆ.ಪಿ.ಎಂ. ಶ್ರೀ ಸರ್ಕಾರಿ ಆದರ್ಶ ವಿದ್ಯಾಲಯದ ವೇದಶ್ರೀ 625ಕ್ಕೆ 618…

Read More

ಉದಯರಶ್ಮಿ ದಿನಪತ್ರಿಕೆ ಕೊಲ್ಹಾರ: ಪಟ್ಟಣದಲ್ಲಿ ಗುರುವಾರ ವಿಜಯಪುರ ಸಿದ್ಧಸಿರಿ ಬಹುರಾಜ್ಯ ಬಹುಉದ್ದೇಶ ಸಹಕಾರಿ ಸೊಸೈಟಿ ನಿಯಮಿತದ ಕೊಲ್ಹಾರ ಶಾಖೆಯ ನೂತನ ಕಟ್ಟಡದ ಭೂಮಿ ಪೂಜೆ ಕಾರ್ಯಕ್ರಮವನ್ನು ಶ್ರೀ ದಿಗಂಬರೇಶ್ವರ ಸಂಸ್ಥಾನ ಮಠದ ಕಲ್ಲಿನಾಥ ದೇವರು ನೆರವೇರಿಸಿದರು.ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕವಾಗಿ ಬ್ಯಾಂಕ್ ನಿರ್ದೇಶಕ ಜಗದೀಶ ಚಂ. ಕ್ಷತ್ರಿ ಮಾತನಾಡಿ, ನಮ್ಮ ಬ್ಯಾಂಕ್ ಎಲ್ಲಾ ವರ್ಗದ ಜನರಿಗೆ ತಮ್ಮ ಬದುಕು ಕಟ್ಟಿಕೊಳ್ಳಲು ಅವಕಾಶ ಒದಗಿಸುತ್ತಿದೆ. ಗ್ರಾಹಕರ ಹಿತರಕ್ಷಣೆ ನಮ್ಮ ಜವಾಬ್ದಾರಿ. ಗ್ರಾಹಕರ ಏಳಿಗೆಯಿಂದ ನಮ್ಮ ಬ್ಯಾಂಕ್‌ನ ಏಳಿಗೆಯಾಗಿದೆ, ಎಂದು ಹೇಳಿದರು.ಸಾನಿಧ್ಯ ವಹಿಸಿ ಮಾತನಾಡಿದ ಶ್ರೀ ಕಲ್ಲಿನಾಥ ದೇವರು, “ಕೊಲ್ಹಾರ ಪಟ್ಟಣವು ಮುಳುಗಡೆ ಸಂತ್ರಸ್ತರ ಪ್ರಮುಖ ವಾಸಸ್ಥಳವಾಗಿದೆ. ಇಲ್ಲಿ ಹೆಚ್ಚಿನವರು ಕೃಷಿ ಅವಲಂಬಿತ ಕಾರ್ಮಿಕರು ಮತ್ತು ರೈತರು ಇದ್ದಾರೆ. ಇವರ ಅಭಿವೃದ್ಧಿಗೆ ಬ್ಯಾಂಕ್‌ಗಳು ಹೆಚ್ಚಿನ ಸಹಕಾರ ನೀಡಬೇಕು,” ಎಂದು ಹೇಳಿದರು.ಕಾರ್ಯಕ್ರಮದಲ್ಲಿ ಷಣ್ಮುಖ ಹಿರೇಮಠ ಸ್ವಾಮಿಗಳು,ಪಟ್ಟಣ ಪಂಚಾಯತ ಅಧ್ಯಕ್ಷ ಚನ್ನಮಲ್ಲಪ್ಪ ಗಿಡ್ಡಪ್ಪಗೋಳ, ಟಿ.ಟಿ. ಹಗೇದಾಳ, ವಿನೀತಕುಮಾರ್ ಟಿ. ದೇಸಾಯಿ, ಶಶಿಧರ್ ಮಲ್ಲಿಕಾರ್ಜುನ ದೇಸಾಯಿ, ಕಲ್ಲಪ್ಪ ಸಂಗಪ್ಪ ಕಾಖಂಡಕಿ, ಬಸವರಾಜ…

Read More

ಉದಯರಶ್ಮಿ ದಿನಪತ್ರಿಕೆ ಚಡಚಣ: ತಾಲೂಕಿನಲ್ಲಿ ಏಪ್ರಿಲ್ 23ರಿಂದ ಮೇ 22ರವರೆಗೆ 9ನೇ ಸುತ್ತಿನ ಉಚಿತ ಕಾಲುಬಾಯಿ (ಎಫ್‌ಎಮ್‌ಡಿ) ಜ್ವರ ಲಸಿಕಾ ಅಭಿಯಾನ ಹಮ್ಮಿಕೊಳ್ಳಲಾಗಿದ್ದು ತಾ.ಪಂ.ಕಾರ್ಯನಿರ್ವಾಹಕ ಅಧಿಕಾರಿ ಅಶೋಕಕುಮಾರ್ ರಾಠೋಡ ಅವರು 9ನೇ ಸುತ್ತಿನ ಲಸಿಕಾ ಅಭಿಯಾನದ ಭಿತ್ತಿಪತ್ರ ಬೀಡುಗೊಡೆಗೊಳಿಸಿದರು.ತಾ.ಪಂ.ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, 2026-27ನೇ ಸಾಲಿನ ರಾಷ್ಟೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದಡಿ ಈ ಅಭಿಯಾನ ನಡೆಯುತ್ತಿದ್ದು, ರೈತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ತಮ್ಮ ಜಾನುವಾರುಗಳಿಗೆ ಲಸಿಕೆ ಹಾಕಿಸಿಕೊಳ್ಳುವ ಮೂಲಕ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ರೈತರಲ್ಲಿ ಮನವಿ ಮಾಡಿಕೊಂಡರು.ಕಾಲುಬಾಯಿ ರೋಗವು ಎತ್ತು, ಹಸು, ಎಮ್ಮೆ ಸೇರಿದಂತೆ ಇತರೆ ಜಾನುವಾರುಗಳಲ್ಲಿ ಕಂಡುಬಂದರೆ ಜಾನುವಾರು ಮಾಲಿಕರಿಗೆ ಆರ್ಥಿಕ ನಷ್ಟ ಉಂಟಾಗುತ್ತದೆ. ರೋಗದಿಂದ ಗುಣಮುಖವಾದ ನಂತರ ಗರ್ಭಧಾರಣೆಯಲ್ಲಿ ವಿಳಂಬವಾಗುವ ಸಾಧ್ಯತೆ ಇದ್ದು, ಹಾಲಿನ ಉತ್ಪಾದನೆಯಲ್ಲಿಯೂ ಕುಸಿತವಾಗುತ್ತದೆ ಎಂದರು, ಜಾನುವಾರಗಳ ಹಿತದೃಷ್ಟಿಯಿಂದ ಮೂರು ತಿಂಗಳಿಗಿಂತ ಮೇಲ್ಪಟ್ಟ ಎಲ್ಲಾ ಜಾನುವಾರುಗಳಿಗೆ ಲಸಿಕೆ ನೀಡುವುದು ಅತ್ಯಗತ್ಯವಾಗಿದೆ ಎಂದು ಹೇಳಿದರು.ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಮುಖ್ಯ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಗುತ್ತರಗಿ ಗ್ರಾಮದ ನಿವಾಸಿ ನಿಂಗಯ್ಯ ಗುರುಪಾದಯ್ಯ ಮಠ ಅವರು ಮಂಡಿಸಿದ “ಸ್ಪೇಷಲ್ ಪ್ಯಾಟರ್ನ್ ಆಂಡ್ ಹ್ಯಾರ‍್ಕಿ ರೂರಲ್ ಸೆಟ್ಲಮೆಂಟ್ಸ್ ಇನ್ ವಿಜಯಪುರ ಡಿಸ್ಟಿçಕ್ಟ್ ಎ ಸ್ಟಾçö್ಯಟಜಿ ಫಾರ್ ಬ್ಯಾಲೆನ್ಸ್÷್ಡ ಡೆವಲಪ್‌ಮೆಂಟ್” ಎಂಬ ಮಹಾಪ್ರಬಂಧಕ್ಕೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದ ಗಾಂದಿ ಭವನದಲ್ಲಿ ಜರುಗಿದ ೭೫ನೇ ಘಟಿಕೋತ್ಸವದಲ್ಲಿ ರಾಜ್ಯಪಾಲರಾದ ಥಾವರಚಂದ್ ಗೆಹಲೋಟ್ ಅವರು ಪಿಹೆಚ್‌ಡಿ ಪದವಿ ಪ್ರಧಾನ ಮಾಡಿದರು.ಕರ್ನಾಟಕ ವಿಶ್ವವಿದ್ಯಾಲಯವು ಪಿ.ಎಚ್‌ಡಿ ಪದವಿ ಪ್ರಧಾನ ಮಾಡಿದಕ್ಕೆ ವಿಭಾಗದ ಮುಖ್ಯಸ್ಥ ಭೂಗೋಳಶಾಸ್ತ್ರ ವಿಭಾಗದ ಪ್ರಾಧ್ಯಾಪಕ ಡಾ.ಎಲ್.ಟಿ.ನಾಯಕ ಸೇರಿದಂತೆ ಗ್ರಾಮಸ್ಥರು ಅಭಿನಂದಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ನಗರದಲ್ಲಿರುವ ಭುವನೇಶ್ವರಿ ವಿದ್ಯಾವರ್ಧಕ ಸಂಸ್ಥೆಯ ಕಾವ್ಯಾ ಪ್ರೌಢಶಾಲೆಯ ವಿದ್ಯಾರ್ಥಿಗಳು ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-೧ರಲ್ಲಿ ಉತ್ತಮ ಸಾಧನೆ ಮಾಡಿದ್ದಾರೆ. ಎಸ್‌ಎಸ್‌ಎಲ್‌ಸಿ ಮುಖ್ಯ ಪರೀಕ್ಷೆ-೧ರಲ್ಲಿ ೧೬ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ ಉತ್ತಮ ಶ್ರೇಣಿಯಲ್ಲಿ ೧೬ ವಿದ್ಯಾರ್ಥಿಗಳು ಪಾಸಾಗಿದ್ದು, ಶಾಲೆಯ ಒಟ್ಟು ಫಲಿತಾಂಶ ಶೇ.೧೦೦ಕ್ಕೆ ೧೦೦ರಷ್ಟಾಗಿದೆೆ.ದಾನಮ್ಮ ಕಟ್ಟಿಮನಿ ೬೨೫ ಅಂಕಗಳಿಗೆ ೫೬೪ (೯೦.೨೪%) ಅಂಕ ಪಡೆದುಕೊಂಡು ಪ್ರಥಮ ಸ್ಥಾನ, ಜಿಯಾಅಂಜುಮ್ ಶೇಖ ೫೫೭ (೮೯.೧೨%) ದ್ವಿತೀಯ ಸ್ಥಾನ, ಅಶ್ವಿನಿ ಗಡೆದ ೫೫೩ (೮೮.೪೮%) ತೃತೀಯ ಸ್ಥಾನ, ಹರ್ಷ ಶಿವಸಿಂಪಿ ೫೧೫ (೮೨.೪%), ಶ್ರೇಯಸ್ ಮಠ ೫೧೨ (೮೧.೯೨%), ಸಾಕ್ಷಿ ಸುಣಗಾರ ೪೬೬ (೭೪.೫೬%), ಮಾಜಾನ್ ಮೋಕಾಸಿ ೪೬೦ (೭೩.೬%), ದಸಗೀಡಿಸಾಬ್ ಬಮ್ಮನಜೋಗಿ ೪೪೨ (೭೦.೭%), ಮಮತಾ ಚವ್ಹಾಣ ೪೫೧ (೭೨.೨೫%), ಸಂಧ್ಯಾ ಹಳ್ಳಪ್ಪನವರ್ ೪೦೪ (೬೪.೬೪%) ಅಂಕಗಳನ್ನು ಪಡದುಕೊಂಡು ಉತ್ತಮ ಶ್ರೇಣಿಯಲ್ಲಿ ಪಾಸಾಗಿ ಶಾಲೆಗೆ ಕೀರ್ತಿ ತಂದಿದ್ದಾರೆ.ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಸಿ.ಎಂ.ನಾಗರಬೆಟ್ಟ, ಕಾರ್ಯದರ್ಶಿ ಕಾಂಚನಾ ನಾಗರಬೆಟ್ಟ,…

Read More