Author: editor.udayarashmi@gmail.com

ಗುತ್ತಿ ಬಸವಣ್ಣ ಕಾಲುವೆಗೆ ನೀರು ಹರಿಸಲು ಆಗ್ರಹಿಸಿ ಪ್ರತಿಭಟನೆ ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲೂಕಿನಲ್ಲಿ ಹರಿಯುವ ಗುತ್ತಿ ಬಸವಣ್ಣ ಕಾಲುವೆಯ ಕೊನೆಯ ಭಾಗದ ವರೆಗೂ ನೀರು ಹರಿಸಬೇಕೆಂದು ಆಗ್ರಹಿಸಿ ರೈತರು ಪ್ರತಿಭಟನೆ ನಡೆಸಿದರು.ಅಲ್ಲಿ ಮಾತನಾಡಿದ ಮುಖಂಡ ಬಸವರಾಜ ಪಾಟೀಲ ಹಂಜಗಿ ಕಾಲುವೆಯ ನೀರು ತಾಂಬಾ ಗ್ರಾಮದ ವರೆಗೆ ಸರಿಯಾಗಿ ಬರುತ್ತದೆ. ನಂತರ ಹಂಜಗಿ ಗ್ರಾಮದ ವರೆಗೆ ಸ್ವಲ್ಪ ಪ್ರಮಾಣದಲ್ಲಿ ಬರುತ್ತದೆ. ಗುತ್ತಿ ಬಸವಣ್ಣ ಕಾಲುವೆಯಲ್ಲಿ ಅಲ್ಲಲ್ಲಿ ಸಾಕಷ್ಟು ಪ್ರಮಾಣದಲ್ಲಿ ಮಣ್ಣು ತುಂಬಿದೆ. ಗಿಡಗಂಟಿಗಳಿವೆ. ಹೀಗಾಗಿ ನೀರು ಕಾಲುವೆಯಲ್ಲಿ ಹರಿದು ಹೋಗದೆ ಬೇರೆ ಕಡೆಗೆ ಹೋಗುತ್ತದೆ. ಅಧಿಕಾರಿ ಗಳ ನೀರ್ಲಕ್ಷದಿಂದ ನೀರು ಸರಿಯಾಗಿ ಕೊನೆಯ ಭಾಗದ ವರೆಗೂ ಹರಿಯುತ್ತಿಲ್ಲ ಎಂದರು.ಕೆಂಚಪ್ಪ ನಿಂಬಾಳ ಮಾತನಾಡಿದರು.ಪ್ರತಿಭಟನೆಯಲ್ಲಿ ಜಟ್ಟೆಪ್ಪ ಸಾಲೋಟಗಿ, ಲಾಯಪ್ಪ ಉಪ್ಪಾರ, ಸುರೇಶ ಜೇವೂರ, ಹಣಮಂತ ಮಸಳಿ, ಶರಣಪ್ಪ ಗುಂದಗಿ, ಗುರಪ್ಪ ಅಗಸರ, ರಮೇಶ ದಳವಾಯಿ, ಬಾಳು ಕೊಟಗೊಂಡ, ಶ್ರೀಮಂತ ಉಪ್ಪಾರ, ಸಿದ್ದಪ್ಪ ಕರಂಡೆ, ದಯಾನಂದ ಕಂಟಗೊಂಡ, ಜಟ್ಟೆಪ್ಪ ತಳವಾರ ಹಾಗೂ ಅಂಜುಟಗಿ, ಹಿರೇರೂಗಿ,ತಡವಲಗಾ ,…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಸಾಹಿತ್ಯ, ರಂಗಭೂಮಿ ಸೇರಿದಂತೆ ಸಾಂಸ್ಕೃತಿ ಚಟುವಟಿಕೆಗಳನ್ನು ಮಾಡಿಕೊಂಡು ಬರುತ್ತಿರುವ ಮಾಧ್ಯಮರಂಗ ಫೌಂಡೇಶನ್ ೨ನೇ ವರ್ಷಾಚರಣೆ ನಿಮಿತ್ತ ಮೊದಲ ಬಾರಿಗೆ ಉಚಿತ ಆರೋಗ್ಯ ತಪಾಸಣೆಯನ್ನು ಡಾ.ಇಲಿಯಾಸ್ ಜಾಲಿಗೇರಿ ಅವರ ಜಾಲಿಗೇರಿ ಆಸ್ಪತ್ರೆ, ಡಾ.ಅರ್ಜುನ ಗೊಟಗುಣಕಿ ಅವರ ಪಾರ್ವತಿ ಲೈಫ್ ಲೈನ್ ಆಸ್ಪತ್ರೆ ಹಾಗೂ ಡಾ.ಚನ್ನಬಸವ ಗೊಟಗುಣಕಿ ಅವರ ಮುಗುಳ್ನಗೆ ಹಲ್ಲಿನ ದವಾಖಾನೆ ಅವರ ಸಹಕಾರೊಂದಿಗೆ ಉಚಿತ ಆರೋಗ್ಯ ತಪಾಸಣೆ ನಡೆಯಲಿದೆ.ಪಟ್ಟಣದ ಬಸವ ಮಂಟಪದಲ್ಲಿ ಫೆ.೨೮, ಶುಕ್ರವಾರ ಬೆಳಿಗ್ಗೆ೧೦ ಗಂಟೆಯಿಂದ ಸಾಯಂಕಾಲ ೪ ಗಂಟೆಯವರೆಗೆ ತಪಾಸಣೆ ನಡೆಯಲಿದೆ. ಬಿಪಿ, ಶುಗರ್, ಹೃದಯ ಸಂಬಂಧಿತ ಸಮಸ್ಯೆ, ಸೊಂಟ, ಮೊಳಕಾಲು ನೋವು, ಹಲ್ಲು ಮತ್ತು ವಸಡಿನ ಸಮಸ್ಯೆ ಸೇರಿದಂತೆ ಹಲ್ಲಿಗೆ ಸಂಬಂಧಿಸಿದ ತೊಂದರೆಗಳ ತಪಾಸಣೆಯನ್ನು ನಡೆಸಲಾಗುತ್ತಿದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಿ ಉಚಿತ ಆರೋಗ್ಯ ತಪಾಸಣೆ ಶಿಬಿರದ ಸದುಪಯೋಗ ಪಡೆಯಬೇಕೆಂದು ಮಾಧ್ಯಮರಂಗ ಫೌಂಡೇಶನ್ ಅಧ್ಯಕ್ಷ, ಪತ್ರಕರ್ತ ನಾಗೇಶ ತಳವಾರ ತಿಳಿಸಿದ್ದಾರೆ.ಆರೋಗ್ಯ ಶಿಬಿರವನ್ನು ಶ್ರೀ ಮಾತಾ ಆಸ್ಪತ್ರೆಯ ಡಾ.ಶಿವಕುಮಾರ ಪಶುಪತಿಮಠ ಉದ್ಘಾಟಿಸಲಿದ್ದಾರೆ. ಸಂಗಮೇಶ್ವರ ಆಸ್ಪತ್ರೆಯ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಪ್ರಾಚೀನ ಕಾಲದಿಂದಲೂ ಸಿಂದಗಿಗೆ ತನ್ನದೇ ಆದ ಚಾರಿತ್ರಿಕ ಹಿನ್ನಲೆ ಇದೆ. ಸಿಂದಗಿ ಬಹು ಸಂಸ್ಕೃತಿಗಳ ತವರೂರು ಎಂದು ಸಿ.ಎಮ್.ಮನಗೂಳಿ ಕಾಲೇಜಿನ ಪ್ರಾಧ್ಯಾಪಕ ಡಾ.ಅರವಿಂದ ಮನಗೂಳಿ ಹೇಳಿದರು.ಪಟ್ಟಣದ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದಲ್ಲಿ ಸ್ಥಳಿಯ ಅವ್ವಾ ಫೌಂಡೇಶನ್ ಸಿಂದಗಿ ಹಾಗೂ ಶ್ರೀ ಪದ್ಮರಾಜ ಶಿಕ್ಷಣ ಮಹಾವಿದ್ಯಾಲಯದ ಇತಿಹಾಸ ಘಟಕದ ಸಹಯೋಗದಲ್ಲಿ ನಡೆದ ೧೮೨೪ರ ಸಿಂದಗಿ ಬಂಡಾಯದ ೨೦೦ನೇ ವರ್ಷಾಚರಣೆ ಸವಿನೆನಪಿಗಾಗಿ ಸಿಂದಗಿ ಚಾರಿತ್ರಿಕ ಅವಲೋಕನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.ಸಿಂದಗಿ ತಾಲೂಕಿನ ವಿವಿಧ ಪ್ರದೇಶಗಳಲ್ಲಿ ನಿರ್ಮಾಣಗೊಂಡ ಐತಿಹಾಸಿಕ ದೇವಾಲಯಗಳನ್ನು ವಿದ್ಯಾರ್ಥಿಗಳು ಅಧ್ಯಯನ ಮಾಡಿ ಅದರ ಸಾಧಕ ಬಾಧಕಗಳ ಕುರಿತಾಗಿ ಚರ್ಚಿಸಿ ನಶಿಸಿ ಹೋಗುತ್ತಿರುವ ದೇವಾಲಯಗಳ ಸಂರಕ್ಷಣೆಗಾಗಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಬೇಕು ಎಂದರು.ಈ ವೇಳೆ ಹುನ್ನೂರು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಸಹ ಪ್ರಾಧ್ಯಾಪಕ ಡಾ.ನಿಂಗರಾಜ ಅಸ್ಕಿ ಮಾತನಾಡಿ, ಸಿಂದಗಿ ಸಮ್ಮಿಶ್ರ ಸಂಸ್ಕೃತಿಯ ತವರು ನೆಲೆ. ಮೌರ್ಯರ ಕಾಲದಿಂದ ಯಾದವರ ಕಾಲದವರೆಗೂ ಸಿಂದಗಿಯನ್ನು ವಿವಿಧ ರಾಜಮನೆತನಗಳು ಆಳಿವೆ ಆದರೆ ರಾಷ್ಟ್ರಕೂಟರ ಕಾಲದ…

Read More

ಉದಯರಶ್ಮಿ ದಿನಪತ್ರಿಕೆ ಸಿಂದಗಿ: ಮನೆಯೇ ಮೊದಲ ಪಾಠಶಾಲೆ, ಜನನಿ ತಾನೆ ಮೊದಲ ಗುರು ಎಂಬ ಮಾತಿನಂತೆ ಮಕ್ಕಳಿಗೆ ಸಂಸ್ಕಾರ ನೀಡುವಂತ ಜ್ಞಾನವನ್ನು ನೀಡಬೇಕು. ಮಕ್ಕಳಿಗಾಗಿ ಆಸ್ತಿ ಮಾಡುವ ಬದಲು ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ ಅವರಿಗೆ ಸರಿಯಾದ ವಿದ್ಯಾಭ್ಯಾಸ ಕೊಡಿಸಬೇಕು ಎಂದು ಆರ್.ಡಿ.ಪಾಟೀಲ ಪಪೂ ಕಾಲೇಜಿನ ಉಪನ್ಯಾಸ ಪಿ.ವಿ.ನವಲಿಮಠ ಸಲಹೆ ನೀಡಿದರು.ಪಟ್ಟಣದ ಹೂಗಾರ ಲೇಔಟನಲ್ಲಿರುವ ಸಮತಾ ಸಂಸ್ಥೆಯ ವಿದ್ಯಾಚೇತನ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಹಮ್ಮಿಕೊಂಡ ವಾರ್ಷಿಕ ಕಲರವ ೨ಕೆ೨೫ ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಅವರು, ಎಲ್ಲ ಜೀವಿಗಳಿಗಿಂತ ಮನುಷ್ಯ ಬುದ್ದಿಜೀವಿ. ತನಗೆ ಏನು ಬೇಕು ಅದನ್ನು ಸಾಧಿಸುವ ಬುದ್ದಿ ಶಕ್ತಿಯನ್ನು ಹೊಂದಿದ್ದಾನೆ. ಶಿಕ್ಷಣದ ಜೊತೆಗೆ ಸಂಸ್ಕಾರ ಕಲಿತರೆ ಮಕ್ಕಳು ಹೆತ್ತವರನ್ನು ವೃದ್ಧಾಶ್ರಮಕ್ಕೆ ಸೇರಿಸುವುದು ನಿಲ್ಲುತ್ತೆ ಎಂದರು.ಕಾರ್ಯಕ್ರಮವನ್ನು ತಾಲೂಕಾ ಶಿಕ್ಷಣ ಪ್ರಸಾರಕ ಮಂಡಳಿ ನಿರ್ದೇಶಕ ವಿ.ಬಿ.ಕುರಡಿ ಅವರು ಸಸಿಗೆ ನೀರೂಣಿಸುವ ಮೂಲಕ ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿ ಮಾತನಾಡಿದರು.ಪಾಲಕರ ಪ್ರತಿನಿಧಿಯಾಗಿ ಭಾಗವಹಿಸಿ ಪತ್ರಕರ್ತ ನಾಗೇಶ ತಳವಾರ ಮಾತನಾಡಿದರು. ಇನ್ನೋರ್ವ ಪಾಲಕ…

Read More

ಮಾ.೧ರಿಂದ ೨೦ರವರೆಗೆ ದ್ವೀತಿಯ ಪಿಯುಸಿ ವಾರ್ಷಿಕ ಪರೀಕ್ಷೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದ್ವೀತಿಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಇದೇ ಮಾ.೧ರಿಂದ ೨೦ರವರೆಗೆ ಜಿಲ್ಲೆಯ ೬೩ ಪರೀಕ್ಷಾ ಕೇಂದ್ರಗಳಲ್ಲಿ ಜರುಗಲಿದ್ದು, ಸುವ್ಯವಸ್ಥಿತ ಪರೀಕ್ಷೆಗಾಗಿ ಹಾಗೂ ಮುಂಜಾಗ್ರತಾ ಕ್ರಮವಾಗಿ ಪರೀಕ್ಷಾ ಕೇಂದ್ರಗಳ ಸುತ್ತಲಿನ ೨೦೦ ಮೀಟರ್ ಪ್ರದೇಶವನ್ನು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆ ೨೦೨೩ ಕಲಂ ೧೬೩ರನ್ವಯ ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾ ದಂಡಾಧಿಕಾರಿಗಳಾದ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಆದೇಶ ಹೊರಡಿಸಿದ್ದಾರೆ.ಪರೀಕ್ಷೆಯಲ್ಲಿ ತೊಡಗಿರುವ ಯಾವುದೇ ಅಧಿಕಾರಿ ಹಾಗೂ ಸಿಬ್ಬಂದಿ ಮತ್ತು ಇತರರು ಮೊಬೈಲ್ ಫೋನ್‌ನ್ನು ತರುವುದು ಹಾಗೂ ಬಳಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷೆ ನಡೆಯುವ ದಿನಗಳಂದು ಪರೀಕ್ಷಾ ಕೇಂದ್ರದ ಸಮೀಪದಲ್ಲಿರುವ ಝರಾಕ್ಸ ಅಂಗಡಿಗಳು, ಕಂಪ್ಯೂಟರ ಸೆಂಟರ್‌ಗಳು, ಸೈಬರ್ ಕೆಫೆಗಳು, ಕೋಚಿಂಗ್ ಕೇಂದ್ರಗಳು ತೆರೆಯದಂತೆ ನಿಷೇಧಿಸಿ ಆದೇಶಿಸಲಾಗಿದೆ. ಪರೀಕ್ಷಾ ಕೊಠಡಿಗಳಲ್ಲಿ ವಿದ್ಯಾರ್ಥಿಗಳು ಪುಸ್ತಕಗಳು, ಎಲೆಕ್ಟಾçನಿಕ್ ಗೆಜೆಟ್‌ಗಳನ್ನು, ಮೊಬೈಲ್ ಪೋನ್, ಡಿಜಿಟಲ್ ವಾಚ್ ಬಳಸುವುದನ್ನು ನಿಷೇಧಿಸಲಾಗಿದೆ. ಪರೀಕ್ಷಾ ಕೇಂದ್ರಗಳಲ್ಲಿ ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕೈಗೊಳ್ಳಲಾಗಿದೆ ಹಾಗೂ ಈ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ದಿನಾಂಕ ೦೧-೦೩-೨೦೨೫ ರಿಂದ ೨೦-೦೩-೨೦೨೫ರ ವರೆಗೆ ದ್ವಿತೀಯ ಪಿಯುಸಿ ವಾರ್ಷಿಕೆ ಪರೀಕ್ಷೆ ಜಿಲ್ಲೆಯ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿರುವ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲ ಒದಗಿಸುವ ನಿಟ್ಟಿನಲ್ಲಿ ಹಾಗೂ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಯುವುದರಿಂದ ನಿರಂತರ ವಿದ್ಯುತ್ ಪೂರೈಸುವಂತೆ ಜಿಲ್ಲಾಧಿಕಾರಿ ಟಿ.ಭೂಬಾಲನ್ ಅವರು ಸೂಚನೆ ನೀಡಿದ್ದಾರೆ ಎಂದು ವಿಜಯಪುರ ಹೆಸ್ಕಾಂನ ಕಾರ್ಯ ನಿರ್ವಾಹಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಜಿಲ್ಲೆಯ ಹೆಸ್ಕಾಂನ ಕಾರ್ಯನಿರ್ವಾಹಕ ಅಭಿಯಂತರರು, ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಹಾಗೂ ಸಂಬಂಧಪಟ್ಟ ಅಧಿಕಾರಿಗಳು ಜಿಲ್ಲಾಧಿಕಾರಿಗಳ ಸೂಚನೆಯಂತೆ ನಿರಂತರ ವಿದ್ಯುತ್ ಪೂರೈಸುವತ್ತ ಅಗತ್ಯ ಕ್ರಮವಹಿಸುವಂತೆ ಅವರು ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ತೋಟಗಾರಿಕೆ ಇಲಾಖೆ ವತಿಯಿಂದ ತೋಟಗಾರಿಕೆ ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ೨೦೨೫-೨೬ನೇ ಸಾಲಿಗೆ ೧೦ ತಿಂಗಳ ತರಬೇತಿ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಆಯ್ಕೆಯಾದ ಅಭ್ಯರ್ಥಿಗಳಿಗೆ ಬೆಳಗಾವಿ ಜಿಲ್ಲೆಯ ಹಿಡಕಲ್ ಡ್ಯಾಂನ ತೋಟಗಾರಿಕಾ ತರಬೇತಿ ಕೇಂದ್ರದಲ್ಲಿ ತರಬೇತಿ ಆಯೋಜಿಸಲಾಗಿದೆ.ಎಸ್‌ಎಸ್‌ಎಲ್‌ಸಿ ಉತ್ತೀರ್ಣರಾದ ಹಾಗೂ ಸ್ವಂತ ಜಮೀನು ಹೊಂದಿರುವ ಹಾಗೂ ತರಬೇತಿ ಪಡೆಯಲಿಚ್ಛಿಸುವವರು ಅರ್ಜಿಗಳನ್ನು ನಗರದ ಹಳೆಯ ಪ್ರವಾಸಿ ಮಂದಿರದಲಿÀ ಪ್ರವಾಸಿ ಪ್ಲಾಜಾದಲ್ಲಿರುವ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು (ರಾಜ್ಯ ವಲಯ) ಕಚೇರಿಗೆ ಅಥವಾ www.horticulture.kar.nic.in ªÉ¨ÉìöÊnಮೂಲಕ ಡೌನ್‌ಲೋಡ್ ಏಪ್ರಿಲ್ ೦೧ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಏಪ್ರಿಲ್ ೮ರಂದು ಬೆಳಿಗ್ಗೆ ೧೦ಗಂಟೆಗೆ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು (ರಾಜ್ಯ ವಲಯ) ಕಚೇರಿಯಲ್ಲಿ ನಡೆಯುವ ಸಂದರ್ಶನಕ್ಕೆ ಹಾಜರಾಗುವಂತೆಯೂ, ಈ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಮೊ: ೮೯೭೧೫೧೨೨೮೬ ಮತ್ತು ೯೩೮೦೦೯೮೧೦೩ ಸಂಪರ್ಕಿಸುವಂತೆ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಫೆಬ್ರವರಿ ೨೮ರ ಬೆಳಿಗ್ಗೆ ೧೦:೩೦ಕ್ಕೆ ಎ.ಎಸ್.ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ಸಭಾ ಭವನದಲ್ಲಿ ಭಾರತರತ್ನ ಡಾ. ಬಿ.ಆರ್.ಅಂಬೇಡ್ಕರ ಅವರ ಬದುಕು ಮತ್ತು ಸಾಧನೆಗಳ ಪರಿಚಯದ ಕುರಿತ ಓದು ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎ.ಎಸ್.ಪಾಟೀಲ ವಾಣಿಜ್ಯ ಮಹಾವಿದ್ಯಾಲಯದ ಪ್ರಾಚಾರ್ಯರಾದ ಬಿ.ಎಸ್.ಬೆಳಗಲಿ ಅವರು ವಹಿಸಲಿದ್ದು, ಅಪರ ಜಿಲ್ಲಾಧಿಕಾರಿ ಸೋಮಲಿಂಗ ಗೆಣ್ಣೂರ ಅವರು ಉದ್ಘಾಟಿಸುವರು.ಮುಖ್ಯ ಅತಿಥಿಗಳಾಗಿ ಪದವಿಪೂರ್ವ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸಿ.ಕೆ.ಹೊಸಮನಿ, ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಬಸವರಾಜ ಗಂಗನಹಳ್ಳಿ, ಬಾಲಕಿಯರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸಿ.ಬಿ.ನಾಟಿಕಾರ, ದರಬಾರ ಸಂಯುಕ್ತ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ತಿರುಮಲ ಕುಲಕರ್ಣಿ, ಎಕ್ಸಲೆಂಟ್ ವಿಜ್ಞಾನ ಪದವಿ ಪೂರ್ವ ಕಾಲೇಜಿನ ಪ್ರಾಚಾರ್ಯರಾದ ಶ್ರೀಕಾಂತ ಕೆ.ಎಸ್ ಅವರು ಭಾಗವಹಿಸುವರು. ಮಾಧವ ಗುಡಿ ಅವರು ವಿಶೇಷ ಉಪನ್ಯಾಸ ನೀಡಲಿದ್ದು, ಶೃತಿ ಮೇಲಿನಮನಿ ಸುಗಮ ಸಂಗೀತ ನಡೆಸಿಕೊಡಲಿದ್ದಾರೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಪ್ರಕಟಣೆ ತಿಳಿಸಿದೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಜಿಲ್ಲಾಡಳಿತ, ನಗರಾಭಿವೃದ್ಧಿ ಇಲಾಖೆ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ಹಾಗೂ ತಾಳಿಕೋಟಿ ಪುರಸಭೆ ಇವರ ಸಂಯುಕ್ತಾಶ್ರಯದಲ್ಲಿ ಕೇಂದ್ರ ಪುರಸ್ಕೃತ ಅಮೃತ್ ೨.೦ ಯೋಜನೆಯಡಿ ತಾಳಿಕೋಟಿ ಪಟ್ಟಣಕ್ಕೆ ಕುಡಿಯುವ ನೀರಿನ ಸರಬರಾಜು ವಿತರಣಾ ವ್ಯವಸ್ಥೆ ಕಲ್ಪಿಸುವ ಹಂತ ೧ ಹಾಗೂ ೨ರ ಯೋಜನೆಗೆ ತಾಳಿಕೋಟಿಯ ಪುರಸಭೆ ಕಾರ್ಯಲಯದ ಮುಂಭಾಗದಲ್ಲಿ ಮಾರ್ಚ್ ೦೧ರ ಬೆಳಿಗ್ಗೆ ೧೧ಕ್ಕೆ ಭೂಮಿ ಪೂಜೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರಮವನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಲಭ್ಯ ಅಭಿವೃದ್ಧಿ ಇಲಾಖೆಯ ಸಚಿವರಾದ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಂ.ಬಿ.ಪಾಟೀಲ ಅವರು ಭೂಮಿ ಪೂಜೆ ನೆರವೇರಿಸಲಿದ್ದಾರೆ. ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ ಅವರು ಘನ ಉಪಸ್ಥಿತಿ ವಹಿಸಲಿದ್ದಾರೆ. ಕರ್ನಾಟಕ ಸೋಪ್ಸ್ ಮತ್ತು ಡಿಟರ್ಜೆಂಟ್ ನಿಯಮಿತದ ಅಧ್ಯಕ್ಷರಾದ ಶಾಸಕ ಅಪ್ಪಾಜಿ ಸಿ.ಎಸ್.ನಾಡಗೌಡ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.ಮುಖ್ಯ ಅತಿಥಿಗಳಾಗಿ ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವರಾದ ಶಿವಾನಂದ ಪಾಟೀಲ,…

Read More

ತುಮಕೂರಿನ ವಿನಯ್‌ರಾಮ ಹಳೇಮನಿ ಸಂಕಲ್ಪ | ೧೦೮ ಕ್ಷೇತ್ರಗಳಲ್ಲಿ ಪ್ರದರ್ಶನದ ಇರಾದೆ | ಹಿರಿಯ ಜೀವಿಗಳಿಗೆ, ಬಡವರಿಗೆ ದರ್ಶನದ ಭಾಗ್ಯ ಉದಯರಶ್ಮಿ ದಿನಪತ್ರಿಕೆ ವರದಿ: ಚೇತನ ಶಿವಶಿಂಪಿಮುದ್ದೇಬಿಹಾಳ: ಭಕ್ತಿಗೆ ಜಾತಿ, ಮತ, ಪಂಥ ಬೇಧ ಇಲ್ಲ. ಭಕ್ತರು ತಮ್ಮ ಭಕ್ತಿಯನ್ನು ವಿವಿಧ ರೀತಿಯಲ್ಲಿ ತೋರಿಸಿರುವದು ನೋಡಿದ್ದೇವೆ ಕೇಳಿದ್ದೇವೆ. ಅದರಂತೆ ಇಲ್ಲೊಬ್ಬ ಭಕ್ತರು ಹಿರಿಯ ಜೀವಿಗಳಿಗೆ, ಅಯೋಧ್ಯೆಗೆ ತೆರಳಿ ದರ್ಶನ ಪಡೆಯಲಾಗದ ಬಡವರಿಗೆ ಸಾಕ್ಷಾತ್ ಅಯೋಧ್ಯೆಯ ಶ್ರೀ ರಾಮ ಮಂದಿರವನ್ನೇ ತಯಾರಿಸಿ, ಪ್ರದರ್ಶಿಸಿ, ಎಲ್ಲರಿಗೂ ದರ್ಶನದ ಭಾಗ್ಯ ಕಲ್ಪಿಸಿ, ಸಾರ್ವಜನಿಕರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ಹೌದು ಓದುಗರೆ, ಇಲ್ಲಿನ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಈ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಇಲ್ಲಿನ ಜನತೆ ದರ್ಶನ ಪಡೆದು ಪುನೀತರಾಗಿದ್ದಾರೆ. ಇನ್ನು ರಾಮ ಮಂದಿರವನ್ನು ತಯಾರಿಸಿ ಪ್ರದರ್ಶಿಸುತ್ತಿರುವವರು ತುಮಕೂರಿನ ವಿನಯ್‌ರಾಮ ಹಳೇಮನಿ. ಕಳೆದ ಕೆಲವು ವರ್ಷಗಳ ಹಿಂದೆ ತಮ್ಮ ತಂದೆಯನ್ನು ಕಳೆದುಕೊಂಡ ಇವರ ಕುಟುಂಬದಲ್ಲಿರೋದು ಸಧ್ಯ ತಾಯಿ ಮಾತ್ರ. ಶ್ರೀ ರಾಮರ ಆದರ್ಶಗಳನ್ನು ಇಡೀ ವಿಶ್ವಕ್ಕೆ ಹರಡುವ ಹಂಬಲ ಇವರದಾಗಿದ್ದು, ಥರ್ಮಾಕೋಲ್…

Read More