Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಆಶ್ರಮ ರಸ್ತೆ ಬಳಿಯ ರಾಮಕೃಷ್ಣ ನಗರದಲ್ಲಿ ಫೆ.೨೬ ಬುಧವಾರ ಸಂಜೆ ೭ ಗಂಟೆಗೆ ಮಹಾ ಶಿವರಾತ್ರಿ ಪ್ರಯುಕ್ತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆರಾಮಕೃಷ್ಣ ಬಡಾವಣೆಯ ಶ್ರೀ ಗಜಾನನ ಮಿತ್ರ ಮಂಡಳಿ ಆಯೋಜಿಸಿದ ಮಹಾ ಶಿವರಾತ್ರಿ ಆಚರಣೆಯ ಸಾನಿಧ್ಯವನ್ನು ಕನ್ನೂರ ಕೈವಲ್ಯ ಕುಟೀರದ ಪೂಜ್ಯ ಪ್ರಕಾಶ ಮಹಾರಾಜರು ವಹಿಸಿಕೊಳ್ಳಲಿದ್ದಾರೆ.ಸಂಜೆ ಪ್ರವಚನ ಹಾಗೂ ಬಡಾವಣೆಯ ಮಹಿಳೆಯರಿಂದ, ಮಕ್ಕಳಿಂದ ಪ್ರವಚನ ಹಾಗೂ ವಿವಿಧ ಸಾಂಸ್ಕೃತಿಕ, ಸಂಗೀತ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.ಶ್ರೀ ರಾಮಕೃಷ್ಣ ಗಜಾನನ್ ಮಿತ್ರ ಮಂಡಲದ ವತಿಯಿಂದ ರಾತ್ರಿ 8.30 ಘಂಟೆಯಿಂದ ಜಾಗರಣೆ ಮತ್ತು ಪೂಜೆ ಆಯೋಜಿಸಲಾಗಿದೆ. ನಂತರ ಉಪವಾಸದ ಸಲುವಾಗಿ ಸರ್ವರಿಗೂ ಉಪಹಾರ ಕೂಟ ಏರ್ಪಡಿಸಲಾಗಿದ್ದು, ಸರ್ವರೂ ಪಾಲ್ಗೊಂಡು ಪುನೀತರಾಗಬೇಕೆಂದು ಶ್ರೀ ರಾಮಕೃಷ್ಣ ಗಜಾನನ್ ಮಿತ್ರ ಮಂಡಲದ ಸಂಜೀವ ಪಾಟೀಲ (ಕನ್ನೂರ) ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಕಾಶ್ ಮಹಾರಾಜರ ಪರಿಚಯ ಪೂಜ್ಯಶ್ರೀ ಪ್ರಕಾಶ್ ಮಹಾರಾಜರು ಕೈವಲ್ಯ ಕುಟೀರ ವಿಜಯಪುರ ಮೂಲತ: ಕನ್ನೂರ ಗ್ರಾಮದವರು. ಸಮರ್ಥ ಸದ್ಗುರು ಶ್ರೀ ಗಣಪತರಾವ್ ಮಹಾರಾಜರು ಶಾಂತಿ ಕುಟೀರ…

Read More

ಉದಯರಶ್ಮಿ ದಿನಪತ್ರಿಕೆ ಆಲಮೇಲ: ಪಟ್ಟಣದ ಸರುಬಾಯಿ ಹಿರೇಮಠ ಅವರು ಹಿಟ್ಟಿನ ಗಿರಣಿ ಮೂಲಕ ಸ್ವ ಉದ್ಯೋಗ ಮಾಡಿಕೊಂಡಿದ್ದು ಅದರ ಜೊತೆಯಲ್ಲಿ ರಾಜ್ಯ ಸರ್ಕಾರ ನೀಡುತ್ತಿರುವ ಗ್ರಹ ಲಕ್ಷ್ಮಿ ಹಣವನ್ನು ಕೂಡಿಟ್ಟು ಸೇಂಗಾ ಹಿಂಡಿ, ರವಾ ವಡಿಯೋ ಮಶೀನ ತರುವ ಮೂಲಕ ಹೆಚ್ಚಿನ ಉದ್ಯೋಗಕ್ಕೆ ಗೃಹ ಲಕ್ಷ್ಮಿ ಹಣವನ್ನು ಸದ್ಬಳಕೆ ಮಾಡಿಕೊಂಡು ಇತರ ಮಹಿಳೆಯರಿಗೆ ಮಾದರಿಯಾಗಿದ್ದಾರೆ.ವಿಷಯ ತಿಳಿದುಕೊಂಡ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದಿ ಇಲಾಖೆ ಅಧಿಕಾರಿ ಬೇಟಿ ನೀಡಿ ಸರುಬಾಯಿ ಹಿರೇಮಠ ಅವರಿಗೆ ಸನ್ಮಾನಿಸಿ ಅಭಿನಂದಿಸಿದರು.ಸಿಡಿಪಿಓ ಶಂಬುಲಿಂಗ ಹಿರೇಮಠ ಮಾತನಾಡಿ, ಸರ್ಕಾರದ ಯಾವುದೆ ಯೋಜನೆಯಾಗಲಿ ಸರಿಯಾಗಿ ಸದುಪಯೋಗ ಪಡೆದುಕೊಂದು ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು. ರಾಜ್ಯ ಸರ್ಕಾರ ಗ್ರಹ ಲಕ್ಷ್ಮಿ ಯೋಜನೆಯ ಮೂಲಕ ಮನೆ ಯಜಮಾನಿಗೆ ಪ್ರತಿ ತಿಂಗಳು ೨ ಸಾವಿರ ನೀಡುತ್ತಿದ್ದು ಆ ಹಣದಿಂದ ಸ್ವ ಉದ್ಯೋಗದಂತ ಒಳ್ಳೆಯ ಕಾರ್ಯಕ್ಕೆ ಉಪಯೋಗಿದವರನ್ನು ಗುರುತಿಸಿ ಸರ್ಕಾರ ಮತ್ತು ಗ್ಯಾರೇಂಟಿ ಯೋಜನೆ ನುಷ್ಠಾನ ಸಮಿತಿ ಅಭಿನಂದಿಸಲಿದೆ ಎಂದು…

Read More

ಉದಯರಶ್ಮಿ ದಿನಪತ್ರಿಕೆ ಬಸವನಭಾಗೇವಾಡಿ: ತಾಲೂಕಿನ ಹೂವಿನಹಿಪ್ಪರಗಿ ಬಸ್ ನಿಲ್ದಾಣದಲ್ಲಿ ಮೂರು-ನಾಲ್ಕು ದಿನಗಳಿಂದ ಇದ್ದ ಮಾನಸಿಕವಾಗಿ ನೊಂದ ಅಂದಾಜು 55 ವಯಸ್ಸಿನ ಮಹಿಳೆಯ ಬಗ್ಗೆ ಕರ್ನಾಟಕ ರಕ್ಷಣಾ ವೇದಿಕೆಯು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಸೋಮವಾರ ಸಂಜೆ ಸ್ಥಳಕ್ಕೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಶಿಲ್ಪಾ ಹಿರೇಮಠ ಭೇಟಿ ನೀಡಿ ಈ ಮಹಿಳೆಯನ್ನು ವಿಜಯಪುರದ ಸ್ವಾಧಾರ ಕೇಂದ್ರಕ್ಕೆ ಕರೆದುಕೊಂಡು ಹೋದರು.ಈ ಕುರಿತು ಅಧಿಕಾರಿ ಶಿಲ್ಪಾ ಹಿರೇಮಠ ಅವರು ಈ ಮಹಿಳೆಯು ಕಲಬುರಗಿ ಜಿಲ್ಲೆಯ ಮೂಲದವಳಾಗಿದ್ದಾಳೆ. ಇವಳು ಮನೆಯಲ್ಲಿ ಕೆಲ ಕಾರಣಗಳಿಂದ ಮನನೊಂದು ಮನೆ ತೊರೆದು ಬಂದಿದ್ದಾಳೆ. ಸಧ್ಯಕ್ಕೆ ಇವಳನ್ನು ಆರೋಗ್ಯದ ಹಿತ ದೃಷ್ಟಿಯಿಂದ ಸ್ವಾಧಾರ ಕೇಂದ್ರದಲ್ಲಿ ಬಿಡಲಾಗುವದು. ಕೇಂದ್ರದವರು ಇವಳ ಮನೆಯವರನ್ನು ಸಂಪರ್ಕಿಸಿ ಅವಳ ಸಮಸ್ಯೆಯನ್ನು ಪರಿಹರಿಸಿ ನಂತರ ಮನೆಗೆ ಕಳುಹಿಸಿಕೊಡುತ್ತಾರೆ ಎಂದು ಪತ್ರಿಕೆಗೆ ತಿಳಿಸಿದರು. ಈ ಸಂದರ್ಭದಲ್ಲಿ ಸಿದ್ದು ಮೇಟಿ, ಆನಂದ ಕಾಖಂಡಕಿ, ಈರಯ್ಯ ಹಿರೇಮಠ, ಬಸು ತೆಲಗಿ, ಯಲ್ಲಪ್ಪ ಕೋಲಕಾರ, ಮಂಜು ಗುಂಡಾನವರ, ಶಿವು ಗುಂಡಾನವರ ಇತರರು ಇದ್ದರು.

Read More

ಉದಯರಶ್ಮಿ ದಿನಪತ್ರಿಕೆ ಬಸವನಬಾಗೇವಾಡಿ: ಬೆಳಗಾವಿ ಗಡಿಯಲ್ಲಿ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ವಾಹಕನ ಮೇಲೆ ಮರಾಠಿ ಮಾತನಾಡು ಎಂದು ಹಲ್ಲೆ ಮಾಡಿದ ಘಟನೆ ಖಂಡನೀಯ ರಾಷ್ಟ್ರೀಯ ಬಸವಸೈನ್ಯ ಸಂಸ್ಥಾಪಕ ಅಧ್ಯಕ್ಷ ಶಂಕರಗೌಡ ಬಿರಾದಾರ ತಿಳಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಈ ಘಟನೆಗೆ ಸಂಬಂಧಿಸಿದಂತೆ ಕರ್ನಾಟಕ ಸಾರಿಗೆ ಬಸ್ ನಿರ್ವಾಹಕ ಮೇಲೆ ಪೊಲೀಸರು ಪೋಕ್ಸೋ ಕಾಯ್ದೆ ಕೇಸ್ ದಾಖಲೆ ಮಾಡಿದ ಪೊಲೀಸರ ನಡೆಯು ಖಂಡನೀಯ. ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ಹಾಗೂ ಕರ್ನಾಟಕ ಸಾರಿಗೆ ಸಂಸ್ಥೆಯ ಬಸ್ ಗಳಿಗೆ ಮಸಿ ಹಚ್ಚಿ ಚಾಲಕರ ಮೇಲೆ ಹಲ್ಲೆ ಮಾಡಿ ಅವಮಾನಿಸುವ ಘಟನೆಗಳು ದಿನದಿಂದ ದಿನಕ್ಕೆ ಹೆಚ್ಚುತ್ತಿವೆ. ಕರ್ನಾಟಕದ ಬಸ್ ಗಳನ್ನು ತಡೆದು ಚಾಲಕರಿಗೆ ನಿಂದಿಸುವುದು. ಅವರ ಮೇಲೆ ಹಲ್ಲೆ ಮಾಡುವುದು ನೋಡಿದರೆ ನಾವು ಯಾವ ದೇಶದಲ್ಲಿ ಇದ್ದೇವೆ ಅನ್ನಿಸುತ್ತಿದೆ. ನಾವೆಲ್ಲ ಭಾರತೀಯರು ಅನ್ನುವ ಪ್ರಜ್ಞೆ ಇಲ್ಲದೆ ನಮ್ಮ ದೇಶದ ಒಕ್ಕೂಟದ ವ್ಯವಸ್ಥೆ ಯಾವ ದಿಕ್ಕಿನಲ್ಲಿ ಸಾಗುತ್ತಿದೆ. ನಮ್ಮ ಕರ್ನಾಟಕದ ಚಾಲಕರ ಮೇಲೆ ಹಲ್ಲೆ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಇದೇ ಫೆ.೨೭ ರಿಂದ ಮಾರ್ಚ ೦೧ ವರೆಗೆ ದಲಿತ ದ್ರೋಹಿ ಸರ್ಕಾರದ ವಿರುದ್ದ ಜನಾಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಜನಾಂದೋಲನದ ಸಂಯೋಜರಾದ ರಾಮಣ್ಣ ಬಲ್ಲಹುಣ್ಸಿ ಹೇಳಿದರು.ಅವರು ನಗರದಲ್ಲಿನ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಕಛೇರಿಯಲ್ಲಿ ಮಂಗಳವಾರ ಜರುಗಿದಎಸ್.ಸಿ.ಎಸ್.ಪಿ/ ಮತ್ತು ಟಿ.ಎಸ್.ಪಿ ಹಣ ದುರ್ಬಳಕೆ ಮಾಡಿಕೊಂಡ ಕಾಂಗ್ರೆಸ್ ದಲಿತ ದ್ರೋಹಿ ಸರ್ಕಾರದ ವಿರುದ್ಧ ಜನಾಂದೋಲನ ಹೋರಾಟದ ಪೂರ್ವಬಾವಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು,ರಾಜ್ಯದ್ಯಾಂತ ೧೪ ತಂಡಗಳಲ್ಲಿ ಇದೇ ದಿನಾಂಕ ೨೭ರಿಂದ ಮಾರ್ಚ ದಿನಾಂಕ ೦೧ ವರೆಗೆ ಎಸ್.ಸಿ.ಎಸ್.ಪಿ/ ಮತ್ತು ಟಿ.ಎಸ್.ಪಿ ಹಣ ದುರ್ಬಳಕೆ ಮಾಡಿಕೊಂಡ ಕಾಂಗ್ರೆಸ್ ದಲಿತ ದ್ರೋಹಿ ಸರ್ಕಾರದ ವಿರುದ್ಧ ಜನಾಂದೋಲನ ಹಮ್ಮಿಕೊಳ್ಳಲಾಗಿದ್ದು, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಆಶೋಕ, ಮಾಜಿ ಸಂಸದ ಡಾ. ಉಮೇಶ ಜಾಧವ್, ಅಮರೇಶ್ವರ ನಾಯಕ್, ಬಳ್ಳಾರಿ ಹನುಮಂತಪ್ಪ, ಗುರುರಾಜ ಗಂಟಹೊಳೆ, ರಾಜು ನಾಯ್ಕರ, ಪ್ರತಾಪ್‌ಗೌಡ ಪಾಟೀಲ, ಅರುಣ ಶಹಾಪುರ, ಇವರುಗಳ ನೇತೃತ್ವ ೧೪ ತಂಡಗಳನ್ನು ರಚಿಸಲಾಗಿದೆ, ರಾಮಣ್ಣ ಬಲ್ಲಾಹುಣ್ಸಿ ಹಾಗೂ ಪಿ.ಓಂಕಾರ ತುಮಕುರ ಇವರು…

Read More

ಉದಯರಶ್ಮಿ ದಿನಪತ್ರಿಕೆ ತಿಕೋಟಾ: ತಾಲ್ಲೂಕಿನ ಘೋಣಸಗಿ ತಾಂಡಾ ನಂ 01 ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಗೆ ವಿಜಯಪುರ ಗ್ರಾಮೀಣವಲಯದ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದಿನಿ‌ ಬಳೋಲಮಟ್ಟಿ ಮಂಗಳವಾರ ಭೇಟಿ ನೀಡಿ ಮಕ್ಕಳ ಶೈಕ್ಷಣಿಕ ಗುಣಮಟ್ಟ ಪರಿಶೀಲಿಸಿ ಶಾಲಾ ವಾತಾವರಣ ಹಾಗೂ ಭೌತಿಕ ಸೌಲಭ್ಯ ವೀಕ್ಷಿಸಿ ಹರ್ಷ ವ್ಯಕ್ತಪಡಿಸಿದರು.ಮಕ್ಕಳ ವರ್ಗ ಕೋಣೆಗೆ ತೆರಳಿದ ಅವರು ನಲಿಕಲಿ ಮಕ್ಕಳಿಗೆ ಸರಳ ಓದು, ಸರಳ ಶಬ್ದ ಹಾಗೂ ಗಣಿತದ ಮೂಲಕ್ರೀಯೆಗಳ ಮೂಲಕ ಸರಳ ಲೆಕ್ಕಗಳನ್ನು ಮಕ್ಕಳಿಂದ ಮಾಡಿಸಿದರು. ನಾಲ್ಕು ಮತ್ತು ಐದನೇ ತರಗತಿ ಮಕ್ಕಳಿಗೆ ಸರಳ ಇಂಗ್ಲೀಷ ಪದಗಳು ಗುಣಾಕಾರ, ಭಾಗಾಕಾರ ಲೆಕ್ಕಗಳನ್ನು ಮಕ್ಕಳಿಂದ ಮಾಡಿಸಿ ವಿಧ್ಯಾರ್ಥಿಗಳ ಜೊತೆ ಸಂವಾದಿಸಿದರು.ಶಾಲಾ ಅಂದ ಚಂದ ಗೋಡೆ ಬರಹ ಕಂಡು ಹರ್ಷವ್ಯಕ್ತಪಡಿಸಿ ಪಠ್ಯ ಪುಸ್ತಕದ ಬಹುತೇಕ ಎಲ್ಲ ವಿಷಯಗಳನ್ನು ಗೋಡೆಯ ಮೇಲೆ ಬರಹದ ರೂಪದಲ್ಲಿರುವದರಿಂದ ಮಕ್ಕಳಿಗೆ ಪ್ರತಿದಿನ ನೋಡಿ ಕಲಿಯಲು ತುಂಬಾ ಅನೂಕೂಲವಾಗುತ್ತದೆ. ಶಾಲಾ ಆವರಣದಲ್ಲಿ ಗಿಡಗಳು, ಕುಡಿಯುವ ನೀರು, ಶೌಚಾಲಯ, ಕಂಪೌಂಡ್, ಗೇಟ್ ಎಲ್ಲ ಮೂಲಭೂತ ಸೌಲಭ್ಯ ಇರುವದರಿಂದ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ವಿಜಯಪುರ ಮಹಾನಗರ ಪಾಲಿಕೆಯ ಆಯ್ಯ-ವ್ಯಯ ಅಂದಾಜು ಪತ್ರಿಕೆ ತಯಾರಿಸಲು ಸಾರ್ವಜನಿಕರಿಂದ ಸಲಹೆ-ಸೂಚನೆ ಪಡೆದುಕೊಳ್ಳಲು ಫೆ.೨೮ರಂದು ಮಧ್ಯಾಹ್ನ ೪ ಗಂಟೆಗೆ ಮಹಾನಗರ ಪಾಲಿಕೆ ಮುಖ್ಯ ಕಚೇರಿಯಲ್ಲಿ ೨ನೇ ಸುತ್ತಿನ ಆಯ್ಯ-ವ್ಯಯ ಪೂರ್ವಭಾವಿ ಸಭೆ ಆಯೋಜಿಸಲಾಗಿದೆ.ಸಾರ್ವಜನಿಕರು, ಕಲ್ಯಾಣ ಸಂಸ್ಥೆಯ ಪದಾಧಿಕಾರಿಗಳು, ವ್ಯಾಪಾರ ಮತ್ತು ಕೈಗಾರಿಕೆ ಸಂಸ್ಥೆ ಒಕ್ಕೂಟಗಳ ಸದಸ್ಯರು ಮತ್ತು ಇತರೆ ಸಂಘ-ಸಂಸ್ಥೆ ಒಕ್ಕೂಟಗಳ ಸದಸ್ಯರು ಮತ್ತು ಇತರೆ ಸಂಘ ಸಂಸ್ಥೆಗಳ ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಿ ತಮ್ಮ ಅಮೂಲ್ಯವಾದ ಸಲಹೆ-ಸೂಚನೆಗಳನ್ನು ನೀಡುವಂತೆ ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ.

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ಆರ್ಥಿಕ ವರ್ಷ ೨೦೨೫-೨೬ ರಿಂದ ಆರ್ಥಿಕ ವರ್ಷ ೨೦೨೭-೨೮ ರ ಅವಧಿಯ ವಿದ್ಯುತ್ ದರ ಪರಿಷ್ಕರಣೆ ಕುರಿತು ಸಾರ್ವಜನಿಕ ವಿಚಾರಣಾ ಸಭೆಯನ್ನು ಫೆಬ್ರವರಿ ೨೭ ರಂದು ಬೆಳಿಗ್ಗೆ ೧೦.೩೦ ಕ್ಕೆ ನವನಗರದ ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತದ ನಿಗಮ ಕಛೇರಿಯ ನೂತನ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಹೆಸ್ಕಾಂನ ಅಧಿಕ್ಷಕ ಅಭಿಯಂತರರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಗರದ ಸೌಂದರ್ಯಿಕರಣಕ್ಕಾಗಿ ಸ್ವಚ್ಛತೆ, ರಸ್ತೆ ನಿರ್ಮಾಣ, ಉದ್ಯಾನವನಗಳ ನಿರ್ವಹಣೆ ಸೇರಿದಂತೆ ಜನದಟ್ಟಣೆಯನ್ನು ನಿಯಂತ್ರಿಸಿ ಸುಗಮ ವಾಹನ ಸಂಚಾರಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ನಗರದ ಮಧ್ಯ ಭಾಗದಲ್ಲಿ ಸುಸಜ್ಜಿತವಾದ ಕಾರ ಪಾರ್ಕಿಂಗ್ ನಿರ್ಮಾಣಕ್ಕೆ ಸ್ಥಳ ಗುರುತಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ದಿ ಖಾತೆ ಹಾಗೂ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾದ ಡಾ.ಎಂ.ಬಿ.ಪಾಟೀಲ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ನಗರದ ನಗರಾಭಿವೃದ್ದಿ ಪ್ರಾಧಿಕಾರದ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಸಭೆಯಲ್ಲಿ ಮಾತನಾಡಿದ ಅವರು, ನಗರದ ವಾಹನ ದಟ್ಟಣೆಯನ್ನು ನಿಯಂತ್ರಿಸಲು ಸೂಕ್ತವಾದ ಯೋಜನೆಯೊಂದು ರೂಪಿಸಿಕೊಂಡು ವಿಜಯಪುರ ನಗರದ ಸೌಂದರ್ಯಿಕರಣಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ನಗರದ ಸಂಚಾರ ನಿರ್ವಹಣೆಗೆ ಪೊಲೀಸ್ ಇಲಾಖೆ ರೂಪಿಸಿರುವ ಅಡ್ವಾನ್ಸ್ ಟ್ರಾಫಿಕ್ ಮ್ಯಾನೇಜ್‌ಮೆಂಟ್ ಸಿಸ್ಟಮ್ ಸರ್ಕಾರದ ಪೂರ್ವಾನುಮೋದನೆಯೊಂದಿಗೆ ಅನುಷ್ಠಾನಗೊಳಿಸುವಂತೆ ಅವರು ಸೂಚನೆ ನೀಡಿದರು.ವಿಜಯಪುರ ನಗರದಲ್ಲಿ ಮಳೆಗಾಲದಲ್ಲಿ ಜಲಾವೃತಗೊಳ್ಳುವ ಪ್ರದೇಶಗಳಲ್ಲಿನ ತಗ್ಗು ಪ್ರದೇಶಗಳಾದ ಸರ್ಕಾರಿ ಆಸ್ತಿ, ರಾಜ್…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಯಾಳವಾರ ಪಿಕೆಪಿಎಸ್ ವ್ಯಾಪ್ತಿಯ ಗ್ರಾಮಗಳ ಎಲ್ಲ ರೈತ ಸಮುದಾಯದ ಅನುಕೂಲಕ್ಕಾಗಿ ತೊಗರಿ ಖರೀದಿ ಕೇಂದ್ರಕ್ಕೆ ಚಾಲನೆ ನೀಡಲಾಗಿದೆ. ರೈತ ಬಾಂಧವರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಸಂಘದ ಅಧ್ಯಕ್ಷ ರಾಜುಗೌಡ ನಾಡಗೌಡ್ರ ಹೇಳಿದರು.ತಾಲ್ಲೂಕಿನ ಯಾಳವಾರ ಗ್ರಾಮದ ತೊಗರಿ ಖರೀದಿ ಕೇಂದ್ರದಲ್ಲಿ ಮಂಗಳವಾರ ತೊಗರಿ ಖರೀದಿಗೆ ಚಾಲನೆ ನೀಡಿ ಮಾತನಾಡಿದರು. ಈಗಾಗಲೇ ರೈತರ ಹೆಸರುಗಳು ನೊಂದಣಿಯಾಗಿದ್ದು, ಮತ್ತು ಎಲ್ಲ ರೈತಸದಸ್ಯರು ಇದರ ಸದುಪಯೋಗ ಪಡೆದುಕೊಳ್ಳಬೇಕು .ಈ ಭಾಗದ ಪ್ರತಿಯೊಬ್ಬ ರೈತರ ತೊಗರಿ ಖರೀದಿಯಾಗುವವರೆಗೂ ಎಲ್ಲವನ್ನು ಪ್ರಾಮಾಣಿಕವಾಗಿ ಖರೀದಿ ಮಾಡಲಾಗುವುದು ಎಂದು ಹೇಳುತ್ತಾ, ರೈತರ ಕುರಿತು ವಿಶೇಷ ಕಾಳಜಿ ವಹಿಸಬೇಕು ಎಂದು ಸಿಬ್ಬಂದಿಗೆ ಸೂಚಿಸಿದರು.ಸಾನಿಧ್ಯ ವಹಿಸಿದ್ದ ಮಹಾಲಿಂಗೇಶ್ವರಶ್ರೀ ಹಾಗೂ ಕಾಶೀನಾಥ ಸ್ವಾಮೀಜಿ ತೂಕದ ಯಂತ್ರಕ್ಕೆ ಪೂಜೆ ಸಲ್ಲಿಸಿ ಆಶೀರ್ವಚನ ನೀಡಿದರು.ಪಿಕೆಪಿಎಸ್ ಉಪಾಧ್ಯಕ್ಷ ರಾಜುಗೌಡ ನ್ಯಾಮಣ್ಣವರ, ಸದಸ್ಯರಾದ ಆನಂದಗೌಡ ಮೂಲಿಮನಿ, ತಮ್ಮಣ್ಣ ನಾಯ್ಕೋಡಿ, ಕಾರ್ಯ ನಿರ್ವಹಣಾಧಿಕಾರಿ ಚೆನ್ನಬಸಪ್ಪ ಲಗಳಿ, ಕುಪೇಂದ್ರ ಜಾಯವಾಡಗಿ, ಮುತ್ತುಗೌಡ ಪಾಟೀಲ, ಬಸನಗೌಡ ದೊಡಮನಿ, ಅರುಣ ಹುಣಶ್ಯಾಳ, ರವಿಗೌಡ…

Read More