Author: editor.udayarashmi@gmail.com

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಬೆಳಗಾಂವಿ ಗಡಿಭಾಗದಲ್ಲಿ ಮತ್ತು ಮಹಾರಾಷ್ಟçದಲ್ಲಿ ಕನ್ನಡಿಗರ ಮೇಲಿನ ಮರಾಠ ಪುಂಡರ ದೌರ್ಜನ್ಯ ಖಂಡಿಸಿ ನಮ್ಮ ಕರ್ನಾಟಕ ಸೇನೆಯ ಕಾರ್ಯಕರ್ತರು ಉಪತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.ಪಟ್ಟಣದ ನಮ್ಮ ಕರ್ನಾಟಕ ಸೇನೆಯ ಕಾರ್ಯಕರ್ತರು ಮಂಗಳವಾರ ತಹಶೀಲ್ದಾರ ಕಾರ್ಯಾಲಯಕ್ಕೆ ಆಗಮಿಸಿ ಮರಾಠ ಪುಂಡರ ವಿರುದ್ಧ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಬೆಳಗಾಂವಿ ಗಡಿಭಾಗದಲ್ಲಿ ಮತ್ತು ಮಹಾರಾಷ್ಟ್ರದಲ್ಲಿ ಕನ್ನಡಿಗರ ಮೇಲೆ ಹಲ್ಲೆ ಮಾಡಲಾಗುತ್ತಿದೆ. ಕರ್ನಾಟಕ ಸಾರಿಗೆ ಬಸ್‌ಗಳಿಗೆ ಹಾಗೂ ಚಾಲಕರಿಗೆ ಮಸಿ ಬಳಿಯುವ ಮೂಲಕ ದೌರ್ಜನ್ಯ ಮಾಡಲಾಗುತ್ತಿದೆ. ಜೊತೆಗೆ ಕನ್ನಡ ಧ್ಜಜಕ್ಕೂ ಅಪಮಾನ ಮಾಡಲಾಗುತ್ತಿದೆ. ಇದು ಒಕ್ಕೂಟ ವ್ಯವಸ್ಥೆಗೆ ಧಕ್ಕೆ ತರುವಂಥ ಕ್ರಮಗಳಾಗಿದ್ದು ಕೂಡಲೇ ಇಂತಹ ಪ್ರಕರಣಗಳನ್ನು ಹುಟ್ಟುಹಾಕುವ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಕರ್ನಾಟಕ ಸೇನೆ ರಸ್ತೆಗಿಳಿದು ಉಗ್ರ ಪ್ರತಿಭಟನೆ ಕೈಗೊಳ್ಳುತ್ತದೆ ಎಂದು ಎಚ್ಚರಿಸಿದರು.ಪ್ರತಿಭಟನೆಯಲ್ಲಿ ತಾಲ್ಲುಕಾಧ್ಯಕ್ಷ ಹಸನ್‌ಸಾಬ್ ನದಾಫ್, ಪ್ರಕಾಶ ಗುಡಿಮನಿ, ಅಶೋಕ ಗೋಲ್ಲರ, ಹುಸೇನ್ ಕೊಕಟನೂರ, ಸುನೀಲ ಕನಮಡಿ, ಶ್ರೀಕಾಂತ ಬಜಂತ್ರಿ, ಹಮೀದ್ ಮುಲ್ಲಾ, ಅಬ್ಬಾಸಲಿ…

Read More

ಉದಯರಶ್ಮಿ ದಿನಪತ್ರಿಕೆ ದೇವರಹಿಪ್ಪರಗಿ: ಸಮರ್ಪಕ ಗುಣಮಟ್ಟದ ವಿದ್ಯುತ್ ಪೂರೈಕೆ ಹಾಗೂ ಕೈಬಿಟ್ಟಿರುವ ಹಿಂದಿನ ಯೋಜನೆಗಳನ್ನು ಪುನರ್ ಆರಂಭಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘದ ಪದಾಧಿಕಾರಿಗಳು ಪ್ರತಿಭಟನೆ ಕೈಗೊಂಡರು.ಪಟ್ಟಣದ ಹೆಸ್ಕಾಂ ಕಚೇರಿ ಮುಂದೆ ಸೋಮವಾರ ಬೆಳಿಗ್ಗೆಯಿಂದ ಪ್ರತಿಭಟನೆ ಆರಂಭಿಸಿ ವಿವಿಧ ಬೇಡಿಕೆಗಳ ಪರಿಹಾರಕ್ಕೆ ಆಗ್ರಹಿಸಿದರು.ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ರೈತ ಸಂಘದ ಜಿಲ್ಲಾಧ್ಯಕ್ಷ ಶಂಕರಗೌಡ ಹಿರೇಗೌಡರ ಮಾತನಾಡಿ, ಗ್ರಾಮೀಣ ಪ್ರದೇಶದ ತೋಟದ ಮನೆಗಳಿಗೆ ರಾತ್ರಿ ಸಮಯ ಶಾಲಾ ಮಕ್ಕಳಿಗೆ ವಿದ್ಯಾಭ್ಯಾಸ ಮಾಡಲು ಹಾಗೂ ಜಾನುವಾರಗಳ ಸುರಕ್ಷತೆಗಾಗಿ ಸಿಂಗಲ್ ಫೇಸ್ ಅಥವಾ ಟೂ ಫೇಸ್ ವಿದ್ಯುತ್ ಪೂರೈಕೆ ಮಾಡಬೇಕು. ಯುಎನ್‌ಆಯ್‌ಪಿ ಅಂತಹ ಮೊದಲು ಆರಂಭಿಸಿದ ಯೋಜನೆಗಳನ್ನು ಪುನಃ ಆರಂಭಿಸಬೇಕು. ಹಳೆಯದಾದ ಕಂಬಗಳು, ವೈಯರ್‌ಗಳನ್ನು ಬದಲಾಯಿಸಬೇಕು, ಅಕ್ರಮ ಸಕ್ರಮಕ್ಕೆ ರೈತರು ಸಲ್ಲಿಸಿದ ಅರ್ಜಿಗಳ ಕುರಿತು ತುರ್ತಾಗಿ ಕ್ರಮ ಕೈಗೊಳ್ಳಬೇಕು ಎಂದರು.ರೈತ ಮುಖಡರಾದ ಅಜೀಜ್ ಯಲಗಾರ, ಸಾಹೇಬಗೌಡ ದಾನಗೊಂಡ, ವಿರೇಶ ಕುದರಿ, ಸಂಗನಗೌಡ ಬಿರಾದಾರ, ರೇಣುಕಾ ಪಾಟೀಲ ಮಾತನಾಡಿದರು.ಪ್ರತಿಭಟನೆ ಕಾರಣವಾಗಿ ರೈತರು ಪಟ್ಟಣ ಸೇರಿದಂತೆ ವಿವಿಧ…

Read More

ವಿಜಯಪುರ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅತಿ ಹೆಚ್ಚು ಜಿಲ್ಲೆಯಲ್ಲಿ ಉತ್ತಮವಾದ ಮಾಲ್ದಂಡಿ ಜೋಳ ಬೆಳೆಯುತ್ತಿದ್ದು ಬೆಂಬಲ ಬೆಲೆ ಯೋಜನೆಯಡಿ ಬಿಳಿ ಜೋಳ ಖರೀದಿಸುವ ಕುರಿತು ಜಿಲ್ಲೆಯ ರೈತರಲ್ಲಿ ಸೂಕ್ತವಾದ ತಿಳುವಳಿಕೆ ಹಾಗೂ ಜಾಗೃತಿ ಮೂಡಿಸುವಂತೆ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಖಾತೆ ಸಚಿವರಾದ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಬಿ.ಪಾಟೀಲ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.ಮಂಗಳವಾರ ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜರುಗಿದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ (ಕೆಡಿಪಿ) ಸಭೆಯ ಅಧ್ಯಕ್ಷತೆ ವಹಿಸಿದ್ದ ಅವರು, ರೈತರು ಬೆಂಬಲ ಬೆಲೆಯಡಿ ಜೋಳ ಮಾರಾಟಕ್ಕೆ ನೊಂದಣಿ ಮಾಡಿಸುವಂತೆ ಐಇಸಿ ಕಾರ್ಯಕ್ರಮಗಳ ಮೂಲಕ ಅವರಲ್ಲಿ ಜಾಗೃತಿ ಮೂಡಿಸಿ, ನೋಂದಣಿಗೆ ಕ್ರಮ ವಹಿಸಿ ಬೆಂಬಲ ಬೆಲೆಯಡಿ ಜೋಳ ಖರೀದಿಗೆ ಕ್ರಮ ವಹಿಸುವಂತೆ ಅವರು ಸೂಚನೆ ನೀಡಿದರು.ಮಹಾನಗರ ಪಾಲಿಕೆ ಹಾಗೂ ನಗರ ಸ್ಥಳೀಯ ಸಂಸ್ಥೆಯ ವ್ಯಾಪ್ತಿಯ ಎಲ್ಲ…

Read More

ರಚನೆ- ಡಾ.ಶಶಿಕಾಂತ ಪಟ್ಟಣರಾಮದುರ್ಗ ಉದಯರಶ್ಮಿ ದಿನಪತ್ರಿಕೆ ಕನಸು ಕಾಣುರಾತ್ರಿ ಪೂರ್ತಿಇರುಳು ಕತ್ತಲೆಕಳೆವ ಶಶಿಗೆ ಹಕ್ಕಿ ಗೂಡಲಿಪ್ರಾಣಿ ಪೊದರಲಿನಿನ್ನ ಪ್ರೇಮಅವನ ಬಯಲಲಿ ಸ್ನೇಹ ಒಲವುಶಾಂತಿ ಪ್ರೀತಿಕರುಣೆ ದಯೆಅವನ ಆಸ್ತಿ ನಿನ್ನ ನಗೆಸಿತಾನು ನಗುವನಿನ್ನ ನೋವದಿಬಳಲುವ ಅವನೆ ನಿನಗೆಜೀವ ಸಾಥಿದೂರ ಪಯಣದಸಾರಥಿ ಸೂರ್ಯ ಸುತ್ತಭೂಮಿ ತಿರುಗಲಿಬಾಳ ಬಟ್ಟೆಗೆಚಂದ್ರ ನಿನ್ನ ಸ್ಫೂರ್ತಿ

Read More

ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಓರ್ವ ಪುರುಷ ಒಳ್ಳೆಯ ಪತಿಯಾಗದ ಹೊರತು ಒಳ್ಳೆಯ ತಂದೆಯಾಗಲಾರ, ಕಾರಣ ಮಕ್ಕಳು ತಮ್ಮ ತಂದೆ ತನ್ನ ಪತ್ನಿಯೊಂದಿಗೆ ಅಂದರೆ ತಮ್ಮ ತಾಯಿಯೊಂದಿಗೆ ನಡೆದುಕೊಳ್ಳುವ ರೀತಿಯನ್ನು ಗ್ರಹಿಸುವ ಮೂಲಕ ಕಲಿಯುತ್ತಾರೆ. ನಿಮ್ಮ ಪತ್ನಿಯೊಂದಿಗಿನ ನಿಮ್ಮ ನಡವಳಿಕೆಯೇ ನಿಮ್ಮ ಮಕ್ಕಳ ಬದುಕಿನ ಮೂಲ ಬುನಾದಿಯಾಗಿರುತ್ತವೆ. ನಿಮ್ಮ ನಡವಳಿಕೆಯ ಮೂಲಕ ಮಕ್ಕಳು ಸಾಮಾಜಿಕ ಸಂಬಂಧಗಳು ಗೌರವ ಮತ್ತು ಪ್ರೀತಿಯ ಭಾವವನ್ನು ಕಲಿಯುತ್ತವೆ.ಪುರುಷನಾಗಿ ತಮ್ಮ ಪತ್ನಿಯನ್ನು ಗೌರವಿಸುವುದು ಪ್ರತಿಯೊಬ್ಬ ವ್ಯಕ್ತಿಯ ಕರ್ತವ್ಯ. ನಿಮ್ಮ ಕುಟುಂಬಕ್ಕಾಗಿ ನೀವು ಹಣವನ್ನು ದುಡಿಯಬಹುದು ಆದರೆ ಕೌಟುಂಬಿಕ ಪೋಷಣೆ ಮಾಡುವವಳು ಹೆಣ್ಣು ಮಗಳು ಮಾತ್ರ. ತನ್ನೆಲ್ಲ ಶಕ್ತಿ, ಪ್ರೀತಿ, ವಾತ್ಸಲ್ಯ, ಅಕ್ಕರೆಯ ಭಾವನೆಗಳನ್ನು ಹರಿಸಿ ಆಕೆ ಕುಟುಂಬದ ಸದಸ್ಯರಿಗೆ ಬದುಕಲು ಒಂದು ಸುರಕ್ಷಿತವಾದ ಮತ್ತು ಪ್ರೀತಿಯ ವಾಸಸ್ಥಾನವನ್ನು ನೀಡುತ್ತಾಳೆ. ಆಕೆಯನ್ನು ಗೌರವಿಸುವ ಮೂಲಕ ನೀವು ನಿಮ್ಮ ಕುಟುಂಬದ ಶಾಂತಿ ಮತ್ತು ಸಾಮರಸ್ಯವನ್ನು ಕಾಪಾಡುತ್ತೀರಿ.ನಿಮ್ಮ ಪತ್ನಿ ಕೇವಲ ನಿಮ್ಮ ಸಂಗಾತಿಯಲ್ಲ… ಆಕೆ ನಿಮ್ಮೊಂದಿಗೆ…

Read More

ಲೇಖನ- ಸುಧಾ ಪಾಟೀಲವಿಶ್ವಸ್ಥರುಬಸವ ತಿಳುವಳಿಕೆ ಮತ್ತು ಸಂಶೋಧನ ಕೇಂದ್ರ – ಪುಣೆ ಉದಯರಶ್ಮಿ ದಿನಪತ್ರಿಕೆ ಕಮಲಾದೇವಿಯವರು 1903 ಏಪ್ರಿಲ್ ಮೂರರಂದು ಮಂಗಳೂರಿನಲ್ಲಿ ಜನಿಸಿದರು. ಇವರ ತಾಯಿ ಗಿರಿಜಾಬಾಯಿ, ತಂದೆ ಮಂಗಳೂರಿನ ಜಿಲ್ಲಾ ಕಲೆಕ್ಟರ್ ಆಗಿದ್ದರು. ಕಮಲಾದೇವಿಯವರ ಮದುವೆ ಅವರ 14ನೇ ವಯಸ್ಸಿನಲ್ಲಿ ಆಯಿತು. ಶಾಲಾ ವಿದ್ಯಾರ್ಥಿಯಾಗಿದ್ದಾಗಲೇ ಎರಡು ವರ್ಷಗಳ ಬಳಿಕ ಅವರು ವಿಧವೆಯಾದರೂ ಕಮಲಾದೇವಿ ಧೃತಿಗೆಡಲಿಲ್ಲ. ಉನ್ನತ ವರ್ಗದ ಕುಟುಂಬಗಳ ಹೆಣ್ಣು ಮಕ್ಕಳಿಗೆ ಬಹಿಷ್ಕೃ ತವಾದ ಅಭಿನಯವನ್ನು ಸ್ವೀಕರಿಸಿದ ಕಮಲಾದೇವಿ ಎರಡು ಮೂಕಿ ಚಿತ್ರಗಳಲ್ಲಿ ಸಹ ಅಭಿನಯಿಸಿದರು.1920 ರಲ್ಲಿ ಕಮಲಾದೇವಿಯವರ ಮದುವೆ ಸರೋಜಿನಿ ನಾಯ್ಡು ಅವರ ಸೋದರರಾದ ಸುಪ್ರಸಿದ್ಧ ಕವಿ ಹಾಗೂ ನಾಟಕಕಾರರಾದ ಹರೀoದ್ರನಾಥ್ ಚಟ್ಟೋಪಾಧ್ಯಾಯ ಇವರೊಡನೆ ಜರುಗಿತು. ಕೆಲದಿನಗಳಲ್ಲಿಯೇ ಹರೀoದ್ರನಾಥರೊಡನೆ ಕಮಲಾದೇವಿ ಅಲ್ಲಿ ಬೆಡ್ ಫೋರ್ಡ್ ಕಾಲೇಜು ಸೇರಿಕೊಂಡು ಸಮಾಜಶಾಸ್ತ್ರದ ಅಧ್ಯಯನ ಮಾಡಿದರು. 1923ರಲ್ಲಿ ಭಾರತಕ್ಕೆ ಮರಳಿದ ದಂಪತಿಗಳು ಮಹಾತ್ಮ ಗಾಂಧಿಯವರ ಅಸಹಕಾರ ಚಳುವಳಿಯಲ್ಲಿ ಭಾಗವಹಿಸಿದರು. ಕಮಲಾದೇವಿ ಸೇವಾದಳವನ್ನು ಸೇರಿದರು.1926ರಲ್ಲಿ ಮಾರ್ಗಾರೇಟ್ ಕಜಿನ್ ಇವರ ಸಲಹೆ ಮೇರೆಗೆ ಮದ್ರಾಸ್ ಪ್ರಾಂತೀಯ…

Read More

ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕನ್ನಡ ಪುಸ್ತಕಗಳನ್ನು ಓದುವವರ ಸಂಖ್ಯೆ ಕ್ಷೀಣಿಸುತ್ತಿರುವ ಈ ದಿನಗಳಲ್ಲಿ, ಸಾಹಿತ್ಯ ಆಸಕ್ತರನ್ನು ಒಂದು ಕಡೆ ಸೇರಿಸಿ ವಿವಿಧ ಸಾಹಿತ್ಯ ಚಟುವಟಿಕೆಗಳನ್ನು ಹಮ್ಮಿಕೊಂಡು ಈ ಮೂಲಕ ಕನ್ನಡದ ಅಳಿಲು ಸೇವೆ ಸಲ್ಲಿಸುವ ಉದ್ದೇಶದ “(ಅ)ಪರಿಚಿತ ಓದುಗರ ಭೇಟಿ” ಕಾರ್ಯಕ್ರಮ ರವಿವಾರ ನಗರದ ಬಾರಾ ಕಮಾನ್ ಉದ್ಯಾನವನದಲ್ಲಿ ಯಶಸ್ವಿಯಾಗಿ ನೆರವೇರಿತು.ಬೆಳಗ್ಗೆ 10-30 ಗಂಟೆಯ ಸುಮಾರಿಗೆ ಸೇರಿದ ಎಲ್ಲ ಸಾಹಿತ್ಯ ಆಸಕ್ತರು ಅಲ್ಲಲ್ಲಿ ಕುಳಿತು ತಮಗೆ ಇಷ್ಟವಾದ ಕೃತಿಗಳನ್ನು ಓದಿದರು. ನಂತರ 12-00 ಗಂಟೆಗೆ ಬೇರೆ ಬೇರೆ ಭಾಗಗಳಿಂದ ಬಂದಿರುವ ಅಪರಿಚಿತ ಓದುಗರು ತಮ್ಮ ತಮ್ಮ ಪರಿಚಯಗಳನ್ನು ಮಾಡಿಕೊಂಡು ಪರಿಚಿತರಾದರು. ಆನಂತರ ವಿವಿಧ ಸಾಹಿತ್ಯ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು. ಕೆಲವು ಆಸಕ್ತರು ತಾವು ಬರೆದ ಸ್ವರಚಿತ ಕವಿತೆಗಳನ್ನು ಓದಿದರು. ಹಾಗೆಯೇ ಕೆಲವರು ತಾವು ಓದಿದ ಇಷ್ಟವಾದ ಪುಸ್ತಕದ ಕುರಿತು ಮಾತನಾಡಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಆಗಮಿಸಿದ ರಘುತ್ತಮ ಅರ್ಜುಣಗಿ ಉಪನ್ಯಾಸಕರು ಸಾಹಿತ್ಯ ಹಾಗೂ ಸಂಸ್ಕೃತಿ ಕುರಿತು ಮಾತನಾಡಿದರು. ‘ಓದುವ ಹವ್ಯಾಸವನ್ನು ರೂಢಿಸಿಕೊಂಡು ತನ್ಮೂಲಕ…

Read More

ಕಂದಾಯ ಇಲಾಖೆ ಘೋಷಣೆ | ಸಚಿವ ಕೃಷ್ಣ ಬೈರೇಗೌಡ ತೀರ್ಮಾನ | ಹಣ ಡಬ್ಲಿಂಗ್ ಆಸೆಯಿಂದ ಮೋಸ ಹೋಗಿದ್ದ ಗ್ರಾಹಕರು ಬೆಂಗಳೂರು: ಐಎಂಎ ಹಗರಣದಲ್ಲಿ ಹಣ ಕಳೆದುಕೊಂಡ ಎಲ್ಲಾ ಜನರಿಗೂ ರಂಜಾನ್ ಹಬ್ಬಕ್ಕೂ ಮುನ್ನ ನಿಗದಿತ ಪರಿಹಾರದ ಮೊತ್ತವನ್ನು ನೀಡುವುದಾಗಿ ಕಂದಾಯ ಇಲಾಖೆ ಸೋಮವಾರ ಘೋಷಿಸಿದೆ.ಬಹುಕೋಟಿ ಹಗರಣ ನಡೆದ ನಂತರ ಸಂಸ್ಥೆಯ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿತ್ತು. ಈ ಎಲ್ಲಾ ಆಸ್ತಿಗಳನ್ನೂ ಮಾರಿ ರಂಜಾನ್ ಹಬ್ಬಕ್ಕೆ ಮುನ್ನ ಮೋಸ ಹೋದವರಿಗೆ ಹಣ ಹಿಂತಿರುಗಿಸುವ ಸಂಬಂಧ ಸಚಿವ ಕೃಷ್ಣ ಬೈರೇಗೌಡ ಅವರು ಸಭೆ ನಡೆಸಿ ಹಲವು ತೀರ್ಮಾನಗಳನ್ನು ಕೈಗೊಂಡಿದ್ದಾರೆ.ಐಎಂಎ (ಐ-ಮಾನಿಟರಿ ಅಡ್ವೈಸರಿ) ಬಹುಕೋಟಿ ವಂಚನೆ ಪ್ರಕರಣದಿಂದಾಗಿ ಹಣ ಕಳೆದುಕೊಂಡ ಎಲ್ಲಾ ಠೇವಣಿದಾರರಿಗೂ ರಂಜಾನ್ ಹಬ್ಬಕ್ಕೂ ಮುನ್ನ ನಿಗದಿತ ಪರಿಹಾರದ ಹಣವನ್ನು ನೀಡಲು ಸೂಕ್ತ ಕ್ರಮವಹಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದ್ದು, ಐಎಂಎ ಹಗರಣದ ಮೊತ್ತ ಎಷ್ಟು? ಈ ವರೆಗೆ ಈ ಸಂಸ್ಥೆಯ ಎಷ್ಟು ಕೋಟಿ ಮೌಲ್ಯದ ಸ್ಥಿರಾಸ್ತಿ/ಚರಾಸ್ತಿಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ? ಕಳೆದ…

Read More

ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ಪಟ್ಟಣದ ಸಂಗಮೇಶ್ವರ ನಗರದಲ್ಲಿರುವ ಶ್ರೀ ಬೀರಲಿಂಗೇಶ್ವರ ಜಾತ್ರಾ ಮಹೋತ್ಸವ ಫೆ೨೭ ರಂದು ಶ್ರದ್ಧಾ ಭಕ್ತಿಯಿಂದ, ವಿಜ್ರಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ.ಅಂದು ಬೆಳಿಗ್ಗೆ ೬ಗಂಟೆಗೆ ಶ್ರೀ ಬೀರಲಿಂಗೇಶ್ವರ ಪಲ್ಲಕ್ಕಿಯು ತಂಗಡಗಿ ಗ್ರಾಮದ ಕೃಷ್ಣಾ ನದಿಯ ಗಂಗಸ್ಥಳಕ್ಕೆ ಹೋಗಿ ಬರುವದು. ಬಳಿಕ ಪಟ್ಟಣದ ಕಿಲ್ಲಾ ಗಲ್ಲಿಯಲ್ಲಿರುವ ಶ್ರೀ ಲಕ್ಷ್ಮಿ ಭಾವಿಯಿಂದ ಕುಂಭ, ಕಳಸ, ವಿಶೇಶ ಡೊಳ್ಳಿನ ವಾಲಗ ಹಾಗೂ ಸಕಲ ವಾದ್ಯ ವೈಭವಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ದೇವಸ್ಥಾನಕ್ಕೆ ಕರೆತರಲಾಗುವದು. ಬಳಿಕ ಮಹಾ ಮಂಗಳಾರುತಿ ನಂತರ ಮಹಾಪ್ರಸಾದ.ಮಧ್ಯಾಹ್ನ ೩ಕ್ಕೆ ಮಹಿಳೆಯರಿಗಾಗಿ ಮ್ಯೂಸಿಕಲ್ ಚೇರ್ ಸ್ಪರ್ದೆ, ೪ಕ್ಕೆ ಮಹಿಳೆಯರಿಗಾಗಿ ನಿಂಬೆ ಹಣ್ಣಿನ ಓಟದ ಸ್ಪರ್ದೆ, ೫ಕ್ಕೆ ರೈತ ಗೀತೆ ಸಾಂಸ್ಕೃತಿಕ ಕಾರ್ಯಕ್ರಮ ಬಳಿಕ ಧರ್ಮಸಭೆ, ಸಂಜೆ ೭ ಕ್ಕೆ ಚಿತ್ತಾಕಾರದ ಆಕರ್ಷಕ ಮದ್ದು ಸುಡುವದು ಹೀಗೆ ವಿವಿಧ ವಿಶೇಶ ಕಾರ್ಯಕ್ರಮಗಳು ಜರುಗಲಿದ್ದು, ಭಕ್ತಾದಿಗಳು ತನು ಮನ ಧನದಿಂದ ಸೇವೆ ಸಲ್ಲಿಸಿ ಶ್ರೀ ಬೀರಲಿಂಗೇಶ್ವರರ ಕೃಪೆಗೆ ಪಾತ್ರರಾಗುವಂತೆ ಪ್ರಕಟಣೆ ತಿಳಿಸಿದೆ.

Read More

ಒಂಭತ್ತು ವಿವಿಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆಗೆ ಎಬಿವಿಪಿ ಖಂಡನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯದ ಒಂಭತ್ತು ವಿಶ್ವ ವಿದ್ಯಾಲಯಗಳನ್ನು ಮುಚ್ಚಲು ಹೊರಟಿರುವ ರಾಜ್ಯ ಸರ್ಕಾರದ ನಡೆಗೆ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ತೀವ್ರ ಖಂಡನೆ ವ್ಯಕ್ತಪಡಿಸಿದೆ.ಈ ಕುರಿತಂತೆ ಸೋಮವಾರ ನಗರದಲ್ಲಿ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಎಬಿವಿಪಿಯ ರಾಜ್ಯ ಕಾರ್ಯದರ್ಶಿ ಸಚಿನ ಕುಳಗೇರಿ ಮಾತನಾಡಿ, ಶಿಕ್ಷಣ ಎನ್ನುವುದು ಹೊರೆಯಲ್ಲ ಅದು ಸರ್ಕಾರಗಳ ಜವಾಬ್ದಾರಿ. ಸರ್ಕಾರ ಈ ವರ್ಷದ ಬಜೆಟ್ನಲ್ಲಿ ಹೊಸ ವಿಶ್ವ ವಿಧ್ಯಾಲಯಗಳಿಗೆ ಅನುದಾನ ನೀಡಬೇಕು ಎಂದರು.ಕರ್ನಾಟಕ ರಾಜ್ಯ ಗುಣಮಟ್ಟದ ವಿಶ್ವ ವಿದ್ಯಾಲಯಗಳನ್ನು ಹೊಂದಿರುವ ರಾಜ್ಯ, ಗುಣಮಟ್ಟದ ಉನ್ನತ ಶಿಕ್ಷಣ ದೊರೆಯುವ ಕಾರಣಕ್ಕೆ ಬೇರೆ ಬೇರೆ ರಾಜ್ಯಗಳಿಂದ ಸಾವಿರಾರು ವಿದ್ಯಾರ್ಥಿಗಳು ಕರ್ನಾಟಕಕ್ಕೆ ಉನ್ನತ ಶಿಕ್ಷಣವನ್ನ ಪಡೆಯಲು ಬರುತ್ತಾರೆ. ಆದರೆ ಇತ್ತೀಚೆಗೆ ನಡೆದ ಕರ್ನಾಟಕ ರಾಜ್ಯ ಸಚಿವ ಸಂಪುಟದ ಉಪ ಸಮಿತಿಯ ಸಭೆಯಲ್ಲಿ ರಾಜ್ಯದ ೯ ವಿಶ್ವವಿದ್ಯಾಲಯಗಳನ್ನು ಆರ್ಥಿಕ ಕಾರಣ ಹಾಗೂ ಇನ್ನಿತರ ಮೂಲಭೂತ ಸೌಲಭ್ಯಗಳ ಕೊರತೆಯ ಕಾರಣವನ್ನು ಕೊಟ್ಟು ವಿವಿಗಳನ್ನು…

Read More