Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಲೇಖನ- ವೀಣಾ ಹೇಮಂತ್ ಗೌಡ ಪಾಟೀಲ್ಮುಂಡರಗಿಗದಗ ಜಿಲ್ಲೆ ಉದಯರಶ್ಮಿ ದಿನಪತ್ರಿಕೆ ಬದುಕಿನಲ್ಲಿ ಬರುವ ಯಾವುದೇ ರೀತಿಯ ಸವಾಲುಗಳನ್ನು ಎದುರಿಸಲು ನಮಗೆ ಚರ್ಚೆ, ಮಾತುಕತೆ ಮತ್ತು ಸಮಾಲೋಚನೆಗಳ ಅವಶ್ಯಕತೆ ಇದೆ.ಈ ಹಿಂದೆ ಮಕ್ಕಳು ಚಿಕ್ಕವರಿದ್ದಾಗ ಅವರಿಗೆ ಒಂದು ನೋಟ್ ಪುಸ್ತಕ ಬೇಕಾದರೆ ಅವರು ತಮ್ಮ ಪಾಲಕರಿಗೆ ಹೇಳುತ್ತಿದ್ದರು. ಹಾಗೆ ಹೇಳಿದೊಡನೆ ಪುಸ್ತಕ ಸಿಗುತ್ತದೆ ಎಂಬುದಕ್ಕೆ ಯಾವುದೇ ಖಾತರಿ ಇರಲಿಲ್ಲ. ಪಾಲಕರು ತಮ್ಮ ಅನುಕೂಲಕ್ಕೆ ತಕ್ಕಂತೆ ಮನೆಯಲ್ಲಿ ಉಳಿದ ಹಿಂದಿನ ವರ್ಷದ ಪುಸ್ತಕಗಳಲ್ಲಿನ ಖಾಲಿ ಹಾಳೆಗಳನ್ನು ಹರಿದು ಅದರಿಂದಲೇ ಮತ್ತೊಂದು ನೋಟು ಪುಸ್ತಕವನ್ನು ತಯಾರಿಸಿ ಅದನ್ನು ಬಳಸಿಕೊಳ್ಳಲು ಹೇಳುತ್ತಿದ್ದರು.ಯೂನಿಫಾರ್ಮ್ ಅಥವಾ ಸಮವಸ್ತ್ರದ್ದು ಕೂಡ ಇದೇ ಕಥೆ. ನಮಗೆ ಹೊಸ ಸಮವಸ್ತ್ರ ಬೇಕೆಂದು ನಾವು ಈ ವರ್ಷಕ್ಕೆ ಪಾಲಕರಲ್ಲಿ ಬೇಡಿಕೆ ಇಟ್ಟರೆ ಅದು ಮಾರ್ಚ್ ತಿಂಗಳಿನಲ್ಲಿಯೇ ಆಗಬೇಕಿತ್ತು. ಶಾಲೆಯ ರಜಾ ದಿನಗಳಲ್ಲಿ ನಮ್ಮ ಹಳೆಯ ಸಮವಸ್ತ್ರವನ್ನು ಪರಿಶೀಲಿಸಿ ಅದನ್ನು ರಿಪೇರಿ ಮಾಡಬಹುದಾದರೆ ಪಾಲಕರು ಅದರ ಹೊಲಿಗೆ ಬಿಚ್ಚಿ ದೊಡ್ಡದಾಗಿಸುವ ಇಲ್ಲವೇ ಇಲ್ಲವೇ ನಮ್ಮ ದೇಹದ ಅಳತೆಗೆ…
ಬಿ.ಎಲ್.ಡಿ.ಇ ಸಂಸ್ಥೆಯ ಎಸ್.ಬಿ ಕಲಾ ಮತ್ತು ಕೆ.ಸಿ.ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಹಳೆಯ ವಿದ್ಯಾರ್ಥಿ ಸಮಾವೇಶ ಕಾರ್ಯಕ್ರಮ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನಮ್ಮ ಮಹಾವಿದ್ಯಾಲಯಕ್ಕೆ ಹಳೆ ವಿದ್ಯಾರ್ಥಿಗಳ ಕೊಡುಗೆ ಅಪಾರವಾದ್ದು, ಅದರಂತೆ ನಮಗೆ ನಿಮ್ಮ ಮುಕ್ತವಾದ ಪ್ರತಿಕ್ರಿಯೆ ನಮಗೆ ಮಹತ್ವದ್ದು ಎಂದು ಪ್ರಾಚಾರ್ಯೆ ಡಾ.ಆರ್.ಎಂ ಮಿರ್ಧೆ ಹೇಳಿದರುನಗರದ ಬಿ ಎಲ್ ಡಿ ಇ ಸಂಸ್ಥೆಯ ಎಸ್ ಬಿ ಕಲಾ ಮತ್ತು ಕೆ ಸಿ ಪಿ ವಿಜ್ಞಾನ ಮಹಾವಿದ್ಯಾಲಯದಲ್ಲಿ ಐಕ್ಯೂಎಸಿ, ಹಳೆಯ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ಮಾರ್ಚ-೧೭ ರಂದು ಹಳೆಯ ವಿದ್ಯಾರ್ಥಿ ಸಮಾವೇಶ ಕಾರ್ಯಕ್ರಮ ಆಯೋಜಿಸಲಾಯಿತು.ಈ ವೇಳೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ನಮ್ಮ ಮಹಾವಿದ್ಯಾಲಯಕ್ಕೆ ಹಳೆ ವಿದ್ಯಾರ್ಥಿಗಳ ಕೊಡುಗೆ ಅಪಾರವಾದ್ದು ಅದರಂತೆ ನಿಮ್ಮ ಪ್ರತಿಕ್ರಿಯೆ ನಮಗೆ ಮಹತ್ವದ್ದು, ನಮ್ಮ ಮಹಾವಿದ್ಯಾಲಯದದಿಂದ ಹಲವಾರು ವಿದ್ಯಾರ್ಥಿಗಳು ಉನ್ನತ ಹುದ್ದೆಗೆ ತಲುಪಿದ್ದಾರೆ. ನಿಮಗೆ ನೀಡಿರುವ ಶಿಕ್ಷಣ ನಿಮ್ಮ ವೃತ್ತಿ ಜೀವನಕ್ಕೆ ನಾಂದಿಯಾದ ಕಾಲೇಜಿನ ಬಗ್ಗೆ ನಿಮ್ಮ ಅನುಭವಗಳನ್ನು ಮುಕ್ತವಾಗಿ ಹಂಚಿಕೊಳ್ಳಲು ಇದೊಂದು ಸುವರ್ಣ ಅವಕಾಶ ಸದುಪಯೋಗ ಪಡಿಸಿಕೊಳ್ಳಬೇಕು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಮನೆಯೇ ಮೊದಲ ಪಾಠಶಾಲೆ, ತಾಯಿ ಮೊದಲ ಗುರು ಎನ್ನುವಂತೆ, ಮಕ್ಕಳಲ್ಲಿ ಸಂಸ್ಕೃತಿ-ಸಂಸ್ಕಾರಗಳ ಮೌಲ್ಯಧಾರಣೆ ಮಾಡುವಲ್ಲಿ ತಾಯಿ ಪಾತ್ರ ಅಮೂಲ್ಯವಾದುದು. ಪ್ರತಿ ಕುಟುಂಬ, ಸಮಾಜ ಮತ್ತು ರಾಷ್ಟ್ರ ಅಭಿವೃದ್ಧಿ ಸಾಧಿಸಬೇಕಾದರೆ, ಮಹಿಳೆಯರ ಪಾತ್ರ ಪ್ರಮುಖವಾಗಿದೆ. ನಮಗೆಲ್ಲ ಕಿತ್ತೂರು ಚೆನ್ನಮ್ಮ, ಓನಕೆ ಒಬ್ಬವ್ವ, ಝಾನ್ಸಿ ರಾಣಿ ಲಕ್ಷ್ಮಿ, ಜೀಮಾ ಮಾತಾ ಇವರಲ್ಲರ ರಾಷ್ಟ್ರಭಕ್ತಿ-ದೇಶಪ್ರೇಮ ನಮಗೆಲ್ಲ ಆದರ್ಶವಾಗಬೇಕು ಎಂದು ಎಕ್ಸಲಂಟ್ ಕಾಲೇಜಿನ ಪ್ರಾಚಾರ್ಯ ಶ್ರೀ ಮಂಜುನಾಥ ಜುನಗೊಂಡ ಅವರು ಅಭಿಪ್ರಾಯಪಟ್ಟರು.ಅವರು ನಗರದ ಅಥಣಿ ರಸ್ತೆಯ ಅಲ್-ಅಮೀನ ಆಸ್ಪತ್ರೆಯ ಎದುರಿಗೆ ಇರುವ ಲಕ್ಷ್ಮಿ ದೇವಸ್ಥಾನದ ೩ ನೇಯ ವರ್ಷದ ಜಾತ್ರಾ ಮಹೋತ್ಸವ ಕಾರ್ಯಕ್ರಮದಲ್ಲಿ “ಆಧುನಿಕ ಜಗತ್ತಿನಲ್ಲಿ ಸಂಸ್ಕೃತಿ-ಸAಸ್ಕಾರ ಉಳಿಸುವಲ್ಲಿ ಮಹಿಳೆಯರ ಪಾತ್ರ” ವಿಷಯ ಕುರಿತು ಉಪನ್ಯಾಸ ನೀಡಿ ಮಾತನಾಡುತ್ತಿದ್ದರು.ಅವರು ಮಾತನಾಡುತ್ತಾ, ನಮ್ಮ ಜನಪದ ಸಂಸ್ಕೃತಿ ಶ್ರೀಮಂತವಾಗಿದ್ದು, ಜಾನಪದ, ಒಗಟು, ಕಲೆ, ಸಂಸ್ಕೃತಿ, ಹಾಸ್ಯ, ಬೀಸುವ ಕಲ್ಲಿನ ಪದ ಮತ್ತು ಗರತಿ ಹಾಡುಗಳ ನಮ್ಮ ಭವ್ಯ ಸಂಸ್ಕೃತಿಗೆ ಹಿಡಿದ ಕೈಗನ್ನಡಿಯಾಗಿವೆ. ಇಂದಿನ ನಾಗರಿಕ ಅಕ್ಷರ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ನ್ಯಾಯಮೂರ್ತಿ ನಾಗಮೋಹನದಾಸ ಒಳ ಮಿಸಲಾತಿ ಏಕ ಸದಸ್ಯ ವಿಚಾರಣಾ ಆಯೋಗ ವಿರೋಧಿಸಿ ದಿನಾಂಕ ೨೫-೦೩-೨೦೨೬ ರಂದು ಮುಂಜಾನೆ ೧೦.೩೦ ಘಂಟೆಗೆ ಬೆಂಗಳೂರಿನ ಪ್ರೀಡಂ ಪಾರ್ಕನಲ್ಲಿ ಪ್ರತಿಭಟನಾ ರ್ಯಾಲಿ ಹಮ್ಮಿಕೊಂಡಿದ್ದು, ವಿಜಯಪುರ ಜಿಲ್ಲೆಯ ಸಮಸ್ತ ಛಲವಾದಿ ಬಂಧುಗಳು ಹೋರಾಟದಲ್ಲಿ ಭಾಗವಹಿಸಬೇಕೆಂದು ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾದ ರಾಜ್ಯ ಉಪಾಧ್ಯಕ್ಷರಾದ ಚಂದ್ರಶೇಖರ ಕೊಡಬಾಗಿ, ಜಿಲ್ಲಾ ಛಲವಾದಿ ಮಹಾಸಭಾದ ಅಧ್ಯಕ್ಷರುಗಳಾದ ಸುನೀಲ ಉಕ್ಕಲಿ, ಮತ್ತು ರಾಹುಲ ಕುಬಕಡ್ಡಿ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸುರೇಶ ಘೋಣಸಗಿ, ಕುಮಾರ ಶಹಾಪುರ ಅವರು ಪತ್ರಿಕಾ ಹೇಳಿಕೆ ನೀಡುವುದರ ಮೂಲಕ ಜಿಲ್ಲೆಯ ಸಮಸ್ತ ಛಲವಾದಿ ಸಮುದಾಯದ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಪ್ರಕಟಣೆಯಲ್ಲಿ ವಿನಂತಿಸಿಕೊಂಡಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಹೆಚ್.ಡಿ.ಕೋಟ: ತಾಲೂಕಿನ ಬೋಚಿಕಟ್ಟೆ ಸಮೀಪ ಇರುವ ಚಿತ್ತಧಾಮದಲ್ಲಿ ಅರಣ್ಯ ಇಲಾಖೆ, ಮೈಸೂರು ಪ್ರಾದೇಶಿಕ ವಿಭಾಗ, ಹೆಚ್ ಡಿ ಕೋಟೆ ಉಪ ವಿಭಾಗ, ಹೆಚ್ ಡಿ ಕೋಟೆ ವಲಯ, ಹಾರ್ಟ್ ಸಂಸ್ಥೆ ಮೈಸೂರು ಸಹಯೋಗದೊಂದಿಗೆ ಅಣಬೆ ಬೇಸಾಯ ತರಬೇತಿ ಕಾರ್ಯಾಗಾರ ನಡೆಯಿತು. ಹಾರ್ಟ್ ಸಂಸ್ಥೆ ಅಧ್ಯಕ್ಷ ಶಿವಕುಮಾರ್ ಮಾತನಾಡಿ, ಗ್ರಾಮೀಣ ಜನರು ಕೃಷಿಯ ಜೊತೆಗೆ ಅಣಬೆ ಬೇಸಾಯದಂತಹ ಉಪ ಬೇಸಾಯ ಮಾಡಿಕೊಂಡು ಆರ್ಥಿಕವಾಗಿ ಸಬಲರಾಗಬೇಕು . ಸ್ವಾವಲಂಬಿ ಬದುಕು ಕಟ್ಟಿಕೊಳ್ಳಬೇಕು. ಅಣಬೆಗೆ ಮಾರುಕಟ್ಟೆಯಲ್ಲಿ ಒಳ್ಳೆಯ ಬೆಲೆ ಇದೆ. ತರಬೇತಿ ಪಡೆದು ಅತಿ ಹೆಚ್ಚಾಗಿ ಅಣಬೆ ಬೆಳೆದು, ಆದಾಯ ಗಳಿಸುವ ಮೂಲಕ ಆರ್ಥಿಕವಾಗಿ ಸದೃಢರಾಗಬೇಕು ಎಂದು ಹೇಳಿದರು.ಸಂಪನ್ಮೂಲ ವ್ಯಕ್ತಿ ಪ್ರಸನ್ನ ಮಾತನಾಡಿ, ದೊಡ್ಡ ಬಳ್ಳಾಪುರ, ಹೊಸಕೋಟೆ ಸೇರಿದಂತೆ ವಿವಿಧೆಡೆ ಅಣಬೆ ಬೇಸಾಯ ಮಾಡುವವರ ಸಂಖ್ಯೆ ಹೆಚ್ಚಾಗಿದೆ. ಇದೀಗ ಸುಲಭವಾಗಿ ಒಂದು ಕೋಣೆಯಲ್ಲಿ ಅಣಬೆ ಬೆಳಯಲು ಬೇಕಾದ ವಾತಾವರಣ ನಿರ್ಮಿಸಿ ಸುಲಭವಾಗಿ ಅಣಬೆಗಳನ್ನು ಬೆಳೆದು ಮಾರಾಟ ಮಾಡಬಹುದು, ಮಾರುಕಟ್ಟೆಯಲ್ಲಿ 500 ಗ್ರಾಂ ಅಣಬೆಗೆ…
ಉದಯರಶ್ಮಿ ದಿನಪತ್ರಿಕೆ ಹೆಚ್ ಡಿ ಕೋಟೆ: ತಾಲೂಕಿನ ಹೃದಯ ಭಾಗದಲ್ಲಿರುವ ಡಾ. ಬಾಬು ಜಗಜೀವನ್ ರಾಮ್ ಭವನದ ಕಾಮಗಾರಿಯನ್ನು ಹೆಚ್ ಡಿ ಕೋಟೆ ಹಾಗೂ ಸರಗೂರು ತಾಲೂಕಿನ ಮಾದಿಗ ಸಮುದಾಯದ ಮುಖಂಡರು ಹಾಗೂ ಅಧಿಕಾರಿಗಳು ಭೇಟಿ ನೀಡಿ ವೀಕ್ಷಣೆ ಮಾಡಿದರು. ಶಾಸಕರ ನಿಧಿಯಿಂದ ಹೆಚ್ಚುವರಿ ಹಣ ಬಿಡುಗಡೆ ಮಾಡಿರುವ ಹಿನ್ನೆಲೆ ಸುಸ್ಥಿರ ಕಟ್ಟಡ ವಿನ್ಯಾಸದ ಪರಿಕಲ್ಪನೆ ಸಂಬಂಧ ವಿಸಿಟ್ ಮಾಡಿ ಚರ್ಚಿಸಿದರು.ಡಾ. ಬಾಬು ಜಗಜೀವನ್ ರಾಮ್ ವಿಚಾರ ವೇದಿಕೆ ಅಧ್ಯಕ್ಷ ಸಿ.ತಿಮ್ಮಯ್ಯ ಮಾತನಾಡಿ, ತಾಲೂಕಿನ ಹೃದಯ ಭಾಗದಲ್ಲಿರುವ ಈ ಕಟ್ಟಡವನ್ನು ಸುಸಜ್ಜಿತವಾಗಿ ನಿರ್ಮಿಸಬೇಕಾಗಿದೆ. ಹೆಚ್ಚುವರಿ ಹಣ ಬಿಡುಗಡೆ ಮಾಡಿರುವ ಹಿನ್ನೆಲೆ ಮತ್ತಷ್ಟು ವಿನ್ಯಾಸದೊಂದಿಗೆ ಕಾಮಗಾರಿ ಪೂರ್ಣಗೊಳಿಸಬೇಕಾಗಿದೆ. ಭಾರತದ ಸ್ವಾತಂತ್ರ್ಯ ಹೋರಾಟಗಾರ, ದಲಿತ ನಾಯಕ ಮತ್ತು ಹಸಿರು ಕ್ರಾಂತಿಯ ಹರಿಕಾರರಾದ ಡಾ. ಬಾಬು ಜಗಜೀವನ್ ರಾಂ ಈ ಒಂದು ಸ್ಥಳಕ್ಕೆ ಭೇಟಿ ನೀಡಿದ್ದು ಇತಿಹಾಸ. ಶಾಸಕರಾಗಿದ್ದಾಗ ಎಂ.ಪಿ. ವೆಂಕಟೇಶ್ ಅವರು, ಈ ಜಾಗವನ್ನು ನಮ್ಮ ಸಮುದಾಯಕ್ಕೆ ಮೀಸಲಿರಿಸುವ ಮೂಲಕ ಸಮುದಾಯದ ಅಭಿವೃದ್ಧಿಗೆ ಶ್ರಮಿಸಿದ್ದರು…
ಉದಯರಶ್ಮಿ ದಿನಪತ್ರಿಕೆ ಕಲಬುರಗಿ: ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳ ಬೆಳವಣಿಗೆಗೆ ಮಾರಕವಾದ ಅಂಶಗಳನ್ನು ಅಳವಡಿಸಿ 2026 27ನೇ ಸಾಲಿನ ಹಣಕಾಸು ವರ್ಷದಿಂದ ಜಾರಿಗೆಗೊಳಿಸಲು ಸಿದ್ಧಪಡಿಸಲಾಗಿರುವ ಹೊಸ ಜಾಹೀರಾತು ನೀತಿಯನ್ನು ಕಲ್ಯಾಣ ಕರ್ನಾಟಕ ಸಂಪಾದಕರ ಸಂಘ ಕಲಬುರಗಿ ವಿಭಾಗ ತೀವ್ರವಾಗಿ ಖಂಡಿಸಿದೆ. ಪತ್ರಿಕೆಗಳ ಬೆಳವಣಿಗೆಗೆ ಮಾರಕವಾಗಿರುವ ಅಂಶಗಳನ್ನು ಕೈಬಿಡುವಂತೆ ಮಾರ್ಚ್ 17ರಂದು ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಒತ್ತಾಯಿಸಲಾಗಿದೆ.ಸಂಘದ ಪದಾಧಿಕಾರಿಗಳಾದ ಸುರೇಶ್ ಗೌರೆ, ಗುರುರಾಜ್ ಕುಲಕರ್ಣಿ, ಆನಂದ್ ಮಣ್ಣೂರ, ಹನುಮಂತ್ ರಾವ್ ಭೋಧನ್ ಕರ್ ಮತ್ತಿತರರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಳೆದ ಅನೇಕ ದಶಕಗಳಿಂದ ಜನತೆಯ ಧ್ವನಿಯಾಗಿ ಕಾರ್ಯನಿರ್ವಹಿಸುತ್ತಿರುವ ಪ್ರಜಾಪ್ರಭುತ್ವದ ನಾಲ್ಕನೇ ಅಂಗವೆಂದೆ ಪರಿಗಣಿಸಲಾದ ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳು ಹೊಸ ಜಾಹೀರಾತು ನೀತಿಯಿಂದ ಸಂಪೂರ್ಣ ಸ್ಥಗಿತ ಗೊಳ್ಳುವ ಆತಂಕ ಎದುರಾಗಿದೆ. ಸಣ್ಣ ಪತ್ರಿಕೆಗಳ ಬೆಳವಣಿಗೆಗಾಗಿ ಪ್ರೋತ್ಸಾಹ ನೀಡುವ ಸಲುವಾಗಿ ಹೊಸ ಜಾಹೀರಾತು ನೀತಿ ಕೈ ಬಿಟ್ಟು ಎಂದಿನಂತೆ ಹಳೆಯ ಪ್ರೋತ್ಸಾಹ ನೀತಿಯನ್ನು ಮುಂದುವರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟು ನಿಟ್ಟಿನ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಅವಿಭಕ್ತ ಕುಟುಂಬಗಳು ನೈತಿಕ ಮೌಲ್ಯ ಕಾಪಾಡಿಕೊಂಡಿದ್ದವು. ಕೌಟುಂಬಿಕ ಸೌಹಾರ್ದ ಸಂಬಂಧಗಳು ಗಟ್ಟಿಯಾಗಿದ್ದವು. ಅವಿಭಕ್ತ ಕುಟುಂಬದಲ್ಲಿ ಮಾನವೀಯ ಸದ್ಗುಣಗಳನ್ನು ಮೈಗೂಡಿಸಿಕೊಂಡು ಸಮಾಜದಲ್ಲಿ ಮಾದರಿಯ ಜೀವನ ನಡೆಸುತ್ತಿದ್ದರು ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಹಾಸಿಂಪೀರ ವಾಲಿಕಾರ ಅಭಿಪ್ರಾಯ ವ್ಯಕ್ತಪಡಿಸಿದರು.ಮಂಗಳವಾರ ಸಂಜೆ ಅಥಣಿ ರಸ್ತೆಯ ನವರಸಪೂರ ಸೇನಾ ನಗರದಲ್ಲಿ ಮೂರನೇ ವಷ೯ದ ಶ್ರೀ ಲಕ್ಷ್ಮೀದೇವಿ ದೇವಸ್ಥಾನದ ಜಾತ್ರಾ ಮಹೋತ್ಸವದ ನಿಮಿತ್ತ ಅವಿಭಕ್ತ ಕುಟುಂಬದ ಮಹತ್ವ ಕುರಿತು ಉಪನ್ಯಾಸ ನೀಡಿದ ಹಾಸಿಂಪೀರ ವಾಲಿಕಾರ ಕುಟುಂಬದ ಹಿರಿಯ ಸದಸ್ಯರಿಗೆ ಗೌರವ, ಕಿರಿಯ ಸದಸ್ಯರಿಗೆ ವಾತ್ಸಲ್ಯ ಹಾಗೂ ಸಾಮೂಹಿಕ ಬೋಜನ.ಕುಟುಂಬದ ಅಭಿಮಾನ ಹಾಗೂ ಕುಟುಂಬದಲ್ಲಿ ಅನೇಕ ಜನ ಸಹೋದರರು. ಮಕ್ಕಳು ಅನ್ಯೋನ್ಯತೆಯಿಂದ ಬದುಕುತ್ತಿದ್ದರು ಇಂದು ವಿಭಕ್ತ ಕುಟುಂಬದಲ್ಲಿ ಗಂಡ ಹೆಂಡತಿ ಮಾತ್ರ ಇದ್ದು ತಮ್ಮ ಮಕ್ಕಳೊಂದಿಗೆ ಬದಕುತ್ತಿದ್ದಾರೆ ಎಂದರುಶಿಕ್ಷಣ ಇಲಾಖೆಯ ವಿಶ್ರಾಂತ ಅಧಿಕಾರಿ ಎಸ್ ಎಲ್ ಇಂಗಳೇಶ್ವರ ಮುಖ್ಯ ಅತಿಥಿಯಾಗಿ ಮಾತನಾಡಿ ಗ್ರಾಮೀಣ ಪ್ರದೇಶದ ಜನರೆಲ್ಲರೂ ಅವಿಭಕ್ತ ಕುಟುಂಬದಲ್ಲಿ ಬೆಳೆದು ದೊಡ್ಡವರಾದವರು. ನಗರೀಕರಣ…
ವಿಜಯಪುರದಲ್ಲಿ ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಅಧಿಕಾರಿಗಳಿಗೆ ಸೂಚನೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳು, ಗುತ್ತಿಗೆದಾರರು ಹಾಗೂ ಗ್ರಾಮ ಪಂಚಾಯತಿ ಮಟ್ಟದ ಅಧಿಕಾರಿಗಳು ಸಮನ್ವಯ ಸಾಧಿಸಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಪಂಚಾಯತಿ ಉಪ ಕಾರ್ಯದರ್ಶಿ ಪ್ರಕಾಶ ವಡ್ಡರ ಹೇಳಿದರು.ಇಲ್ಲಿನ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಡಿ ಸುಜಲಾಮ್ ಆಪ್ ಕುರಿತು ಜಿಲ್ಲಾ ಮಟ್ಟದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.ಜಲ ಜೀವನ್ ಮಿಷನ್ ಹಾಗೂ ಜಲಧಾರೆ ಯೋಜನೆಗಳು ಜನರಿಗಾಗಿ ಇರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಮಹತ್ವಾಕಾಂಕ್ಷಿ ಯೋಜನೆಯಾಗಿದೆ. ನೀರು ಮಾನವ ಸಂಕುಲದ ಒಂದು ಅವಿಭಾಜ್ಯ ಅಂಗವಾಗಿದೆ. ಆದ್ದರಿಂದ ಗ್ರಾಮೀಣ ಜನರಿಗೆ ಕುಡಿಯುವ ನೀರು ಪೂರೈಸುವಲ್ಲಿ ಅತ್ಯಂತ ಪ್ರಾಮಾಣಿಕವಾಗಿ ಶ್ರಮವಹಿಸಬೇಕು ಎಂದರು.ನೀರು ಪೂರೈಕೆಯಲ್ಲಿ ಯಾವುದೇ ಸಮಸ್ಯೆಗಳು ಬಾರದಂತೆ ಜಾಗೃತಿ ವಹಿಸಬೇಕು. ಸರ್ಕಾರವು ಅಭಿವೃದ್ಧಿಪಡಿಸಿದ ಸುಜಲಾಮ್ ಆಪ್ ಬಗ್ಗೆ ಮಾಹಿತಿ ತಿಳಿದುಕೊಂಡು, ಮುಂಬರುವ…
ಇಲಾಖೆಯಲ್ಲಿ ಸುಧಾರಣೆಗಳನ್ನು ತರಲು ಮುಖ್ಯಮಂತ್ರಿ & ಅಧಿಕಾರಿಗಳೊಂದಿಗೆ ಸಭೆ | ವಿಧಾನಸಭೆಯಲ್ಲಿ ಸಚಿವ ಕೃಷ್ಣ ಭೈರೇಗೌಡ ಹೇಳಿಕೆ ಬೆಂಗಳೂರು: ಕರ್ನಾಟಕ ಸಾರ್ವಜನಿಕ ಸೇವಾ ಆಯೋಗ (KPSC) ಮೂಲಕ ಗೆಜೆಟೆಡ್ ಪ್ರೊಬೇಷನರಿ ಅಧಿಕಾರಿಗಳ (ಗ್ರೂಪ್ A ಮತ್ತು B) ನೇಮಕಾತಿಯನ್ನು ಪ್ರತಿ ವರ್ಷ ಪ್ರಕಟಿಸಲು ಸರ್ಕಾರ ಸಿದ್ಧವಾಗಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.ದುರುಪಯೋಗ ಮತ್ತು ನ್ಯಾಯಾಂಗ ವ್ಯಾಜ್ಯಗಳನ್ನು ತಡೆಯಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ಅನುಸರಿಸುವ ಉತ್ತಮ ಕ್ರಮಗಳನ್ನು ಅಳವಡಿಸಿಕೊಳ್ಳಲಾಗುತ್ತದೆ ಎಂದರು.ಇಲಾಖೆಯಲ್ಲಿ ಸುಧಾರಣೆಗಳನ್ನು ತರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯ ಕಾರ್ಯದರ್ಶಿ, ಹಣಕಾಸು ಇಲಾಖೆ ಮತ್ತು ಡಿಪಿಎಆರ್ (DPAR) ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ ಎಂದು ಹೇಳಿದರು.ನೇಮಕಾತಿ ಅಧಿಸೂಚನೆ ಸಾಮಾನ್ಯವಾಗಿ ನಾಲ್ಕು ವರ್ಷಕ್ಕೊಮ್ಮೆ ಹೊರಡಿಸುವುದರಿಂದ, ನಿರಂತರವಾಗಿ ಪರೀಕ್ಷೆ ಬರೆಯಲು ವಯೋಮಿತಿ ಅಡ್ಡಿಯಾಗುವ ಕಾರಣ ಯುವ ಅಭ್ಯರ್ಥಿಗಳು ನ್ಯಾಯಾಲಯದ ಮೊರೆ ಹೋಗುತ್ತಾರೆ. ಇದರಿಂದ ಕೆಪಿಎಸ್ ಸಿ ಹೆಚ್ಚು ವ್ಯಾಜ್ಯಗಳನ್ನು ಎದುರಿಸುತ್ತಿದೆ ಎಂದರು.ಯುಪಿಎಸ್ ಸಿ ಮಾದರಿಯಲ್ಲಿ ಪರೀಕ್ಷೆಗಳನ್ನು ನಡೆಸಲು ಕೆಪಿಎಸ್ ಸಿಯೊಂದಿಗೆ ಚರ್ಚಿಸಿ…
