Subscribe to Updates
Get the latest creative news from FooBar about art, design and business.
Author: editor.udayarashmi@gmail.com
ಚಿಕ್ಕಪಡಸಲಗಿಯಲ್ಲಿ ತೋಂಟದ ಸಿದ್ದಲಿಂಗ ಸ್ವಾಮೀಜಿ ಜಯಂತಿ | ಭಾವೈಕ್ಯತಾ ದಿನಾಚರಣೆ ಉದಯರಶ್ಮಿ ದಿನಪತ್ರಿಕೆ ಚಿಕ್ಕಪಡಸಲಗಿ: ತೋಂಟದ ಡಾ. ಸಿದ್ದಲಿಂಗ ಮಹಾಸ್ವಾಮಿಗಳವರ ಮನಭಾವ ಈ ಯುಗದೊಳು ಭಾವೈಕ್ಯದ ಪುಷ್ಪಧಾರೆಯಲ್ಲಿ ಮಿಂದಿದೆ. ಸಾಮರಸ್ಯವೆಂಬ ಹೂ ತೋಟದ ಭಾವೈಕ್ಯತಾ ಪದರಿನ ಮೊನಚಿನಲ್ಲಿ ಸುಗಂಧ ಭರಿತ ಪರಿಮಳ ಬೀರಿವೆ. ಅವು ಎಂದೂ ಮರೆಯಲಾಗದ ಸವಿ ನೆನಪುಗಳ ಮಧುರ ಬಾಂಧವ್ಯ ತೋರಿವೆ ಎಂದು ಜಕನೂರ ಮಾದಣ್ಣ ಮದಗೊಂಡೇಶ್ವರ ಸಿದ್ಧಾಶ್ರಮದ ಡಾ.ಮಾದುಲಿಂಗ ಮಹಾರಾಜರು ಬಣ್ಣಿಸಿದರು.ಚಿಕ್ಕಪಡಸಲಗಿ ಗ್ರಾಮದಲ್ಲಿ ಗದುಗಿನ ತೋಂಟದಾರ್ಯ ವಿದ್ಯಾಪೀಠ ಸಂಸ್ಥೆಯ ಶಿವಶರಣ ಹರಳಯ್ಯ ಸ್ಮಾರಕ ಪ್ರೌಢಶಾಲೆ ಆವರಣದಲ್ಲಿ ಶುಕ್ರವಾರ ಅಂಗ ಶಿಕ್ಷಣ ಸಂಸ್ಥೆಗಳ ಸಹಯೋಗದಲ್ಲಿ ಲಿಂಗೈಕ್ಯ ಡಾ.ತೋಂಟದ ಸಿದ್ದಲಿಂಗ ಮಹಾಸ್ವಾಮಿಗಳವರ 76 ನೇ ಜಯಂತಿ ಅಂಗವಾಗಿ ಹಮ್ಮಿಕೊಂಡಿದ್ದ ಭಾವೈಕ್ಯತಾ ದಿನಾಚರಣೆ ಹಾಗೂ ಐದು, ಏಳು ಮತ್ತು ಹತ್ತನೇ ತರಗತಿ ಮಕ್ಕಳ ಬೀಳ್ಕೊಡುವ ಸಮಾರಂಭದ ದಿವ್ಯ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.ಸಿದ್ದಲಿಂಗ ಶ್ರೀಗಳು ನುಡಿ ಸಂಸ್ಕೃತಿಯ ಪರಿಪಾಲಕರಾಗಿದ್ದಾರೆ. ಅವರ ವಾಕ್ ಭಾಷಾ ಪ್ರಾವೀಣ್ಯತೆ ಅಪ್ರತಿಮ. ಪೂಜ್ಯರ ಚರಿತ್ರೆ ಪರಮ…
ಉದಯರಶ್ಮಿ ದಿನಪತ್ರಿಕೆ ಇಂಡಿ: ತಾಲೂಕಿನ ಮರಗೂರದ ಗ್ರಾಮದ ಭೀಮಾಶಂಕರ ಸಹಕಾರಿ ಸಕ್ಕರೆ ಕಾರ್ಖಾನೆಯ ೨೦೨೪-೨೫ನೇಸಾಲಿನ ಕಬ್ಬು ನುರಿಸುವ ಕಾರ್ಯವನ್ನು ಫೆ, ೨೪ ರಂದು ಮುಕ್ತಾಯಗೊಳಿಸಲಾಗುವುದು ಎಂದು ಕಾರ್ಖಾನೆಯ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಕಬ್ಬು ಬೆಳೆಗಾರರು ಕಾರ್ಖಾನೆಯೊಂದಿಗೆ ಕಬ್ಬು ಪೂರೈಕೆಯ ಕರಾರಿಗೊಳಪಟ್ಟ ತಮ್ಮ ಎಲ್ಲಾ ಕಬ್ಬು ನಮ್ಮ ಕಬ್ಬು ಕಟಾವು ಆದೇಶಪತ್ರಗಳನ್ವಯ ಕಟಾವು ಮಾಡಿ ಫೆ,೨೩ ರಂದು ರಾತ್ರಿ ೧೦-೦೦ ಘಂಟೆಯ ಒಳಗಾಗಿ ಕಾರ್ಖಾನೆಗೆ ಕಬ್ಬು ಪೂರೈಸಿ ಕಬ್ಬು ಪೂರೈಕೆಗಾಗಿ ಕಾರ್ಖಾನೆಯಿಂದ ಪಡೆದುಕೊಂಡ ಎಲ್ಲ ಕಬ್ಬು ಪಟಾವು ಆದೇಶ ಪತ್ರಗಳು ಫೆ, ೨೩ ರಂದು ರವಿವಾರ ರಾತ್ರಿ ೧೦-೦೦ ಗಂಟೆಯ ನಂತರ ರದ್ದುಗೊಳಿಸಲಾಗುತ್ತದೆ. ಅವಧಿಯ ನಂತರ ಕಟಾವುಗೊಳ್ಳದೇ ಉಳಿಯುವ ಕಬ್ಬಿಗೆ ಕಾರ್ಖಾನೆಯು ಯಾವುದೇ ರೀತಿಯಿಂದ ಜವಾಬ್ದಾರಿಯಾಗಿರುವುದಿಲ್ಲ. ಪ್ರಸಕ್ತ ೨೦೨೪-೨೫ನೇ ಸಾಲಿನ ಕಬ್ಬು ನುರಿಸುವ ಹಂಗಾಮು ಯಶಸ್ವಿಗೊಳಿಸಲು ಸಹಕಾರ ನೀಡಿದ ಸಮಸ್ತ ಶೇರುದಾರ ಸದಸ್ಯರಿಗೆ, ರೈತ ಬಾಂಧವರಿಗೆ ಕಬ್ಬು ಕಟಾವು ಅಲ್ಲದೆ ಕಬ್ಬು ಸಾಗಾಣಿಕೆ ಗುತ್ತಿಗೆದಾರರಿಗೆ ಕಾರ್ಖಾನೆಯ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಹಾಗೂ ಕಾರ್ಮಿಕ ಬಂಧುಗಳಿಗೆ ಆಡಳಿತ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಸಮುದಾಯದ ಆರೋಗ್ಯ ಪ್ರಗತಿಯಾಗದ ಹೊರತು ದೇಶದ ಪ್ರಗತಿ ಸಾಧ್ಯವಿಲ್ಲ ಎಂದು ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಶಿವಾನಂದ ಮಾಸ್ತಿಹೊಳಿ ಹೇಳಿದರು.ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಎನ್.ಎಸ್. ಎಸ್ ಕೋಶ, ಸ್ವಾಮಿ ವಿವೇಕಾನಂದ ಅಧ್ಯನಯ ಕೇಂದ್ರ ಹಾಗೂ ಯುವ ರೆಡ್ ಕ್ರಾಸ್ ಘಟಕ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ಪ್ರತಿಬಂಧಕ ಹಾಗೂ ನಿಯಂತ್ರಣ ಘಟಕ, ವಿಜಯಪುರ, ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ ಹಾಗೂ ಕರ್ನಾಟಕ ರಾಜ್ಯ ಏಡ್ಸ ಪ್ರಿವೆನಷನ್ ಸೊಸೈಟಿ, ಬೆಂಗಳೂರು, ಇವರ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯ ಅಂಗವಾಗಿ ‘ರಾಷ್ಟ್ರೀಯ ಯುವ ದಿನಾಚರಣೆ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.ಸ್ವಾಮಿ ವಿವೇಕಾನಂದರು ಆರೋಗ್ಯ, ಶಿಕ್ಷಣ ಹಾಗೂ ಸ್ವಾವಲಂಬನೆಯ ಮೂಲಕ ಸಮಗ್ರ ಸಮಾಜದ ಅಭಿವೃದ್ಧಿಯನ್ನು ಒತ್ತಿಹೇಳಿದರು. ಆರೋಗ್ಯ ಸೇವೆಗಳು ಪ್ರತಿಯೊಬ್ಬರಿಗೂ ಸಮಾನವಾಗಿ ಲಭ್ಯವಾಗಬೇಕು ಮತ್ತು ಸಮುದಾಯದ ಪ್ರತಿಯೊಬ್ಬರೂ ಆರೋಗ್ಯಕರ ಜೀವನ ನಡೆಸಲು ಸೂಕ್ತ ಸೌಲಭ್ಯಗಳನ್ನು ಪಡೆಯಬೇಕು. ಆರೋಗ್ಯ ಮತ್ತು…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ವಿಜಯಪುರದ ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರದ ವತಿಯಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಮಾರ್ಚ್ ೬ ರಿಂದ ಮಾರ್ಚ್ ೮ರವರೆಗೆ “ಮಹಿಳಾ ಸಾಂಸ್ಕೃತಿಕ ಹಬ್ಬ-೨೦೨೫” ಹಮ್ಮಿಕೊಳ್ಳಲಾಗಿದೆ.“ಮಹಿಳಾ ಸಾಂಸ್ಕೃತಿಕ ಹಬ್ಬ-೨೦೨೫”ದ ಅಂಗವಾಗಿ ಕವಿ-ಕವಿಯತ್ರಿಯರಿಂದ ಮಹಿಳಾ ಕೇಂದ್ರಿತ ಕವನಗಳನ್ನು ಆಹ್ವಾನಿಸಲಾಗಿದೆ. ಬಂದ ಕವನಗಳಲ್ಲಿ ಅತ್ತುö್ಯತ್ತಮ ೩ ಕವನಗಳನ್ನು ಆಯ್ಕೆ ಮಾಡಿ, ರಚನೆ ಮಾಡಿದ ಕವಿಯತ್ರಿ/ಕವಿಗಳನ್ನು ಮಾರ್ಚ್ ೮, ೨೦೨೫ ರಂದು ಓದಲು ಅವಕಾಶ ನೀಡಿ, ಅಭಿನಂದನಾ ಪತ್ರ ನೀಡಿ ಗೌರವಿಸಲಾಗುವುದು. ಆಸಕ್ತರು ದಿನಾಂಕ: ೨೫-೦೨-೨೦೨೫ರೊಳಗಾಗಿ ತಮ್ಮ ಕವನಗಳನ್ನು ಪ್ರೊ.ಲಕ್ಷಿö್ಮದೇವಿ ವೈ., ನಿರ್ದೇಶಕರು, ಅಹಲ್ಯಾಬಾಯಿ ಸ್ನಾತಕೋತ್ತರ ಮಹಿಳಾ ಅಧ್ಯಯನ, ಸಂಶೋಧನಾ ಮತ್ತು ವಿಸ್ತರಣಾ ಕೇಂದ್ರ, ಜ್ಞಾನಶಕ್ತಿ ಆವರಣ, ತೊರವಿ, ಕ.ರಾ.ಅ.ಮ.ವಿವಿ, ವಿಜಯಪುರ-೫೮೬೧೦೮, ಮೊ.ಸಂ.೯೯೦೨೨೩೪೪೬೯ ಇವರಿಗೆ ತಲುಪುವಂತೆ ಹಾಗೂ ಸಾಫ್ಟ್ ಪ್ರತಿಯನ್ನು directorwscksawuv@gmail.comಗೆ ಕಳುಹಿಸಬಹುದಾಗಿದೆ. ವಿಶ್ವವಿದ್ಯಾನಿಲಯದಿಂದ ಯಾವುದೇ ರೀತಿಯ ಪ್ರಯಾಣ ಭತ್ಯೆ, ದಿನ ಭತ್ಯೆ ಮತ್ತು ಸಂಭಾವನೆಯನ್ನು ನೀಡಲಾಗುವುದಿಲ್ಲ ಎಂದು…
ಚಡಚಣ ಪ.ಪಂ ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆ | ಬಹುಮತವಿದ್ದರೂ ಬಿಜೆಪಿಗೆ ದಕ್ಕದ ಉಪಾಧ್ಯಕ್ಷ ಸ್ಥಾನ | ಕಾಂಗ್ರೆಸ್ ನ ಇಲಾಹಿ ನದಾಫ ಆಯ್ಕೆ ಉದಯರಶ್ಮಿ ದಿನಪತ್ರಿಕೆ ಚಡಚಣ: ಸ್ಥಳೀಯ ಪ.ಪಂ ಗೆ ಶುಕ್ರವಾರ ನಡೆದ ಅಧ್ಯಕ್ಷ – ಉಪಾಧ್ಯಕ್ಷ ಚುನಾವಣೆಯಲ್ಲಿ ವರ್ಡ್ ನಂ.15 ರ ಬಿಜೆಪಿ ಸದಸ್ಯ ಮಲ್ಲಿಕಾರ್ಜುನ ಧೋತ್ರೆ ಅವರು ಅವಿರೋಧವಾಗಿ ಹಾಗೂ ಉಪಾಧ್ಯಕ್ಷರಾಗಿ ವಾರ್ಡ್ ನಂ.5 ರ ಕಾಂಗ್ರೆಸ್ ಸದಸ್ಯ ಇಲಾಹಿಸಾಬ ನದಾಫ ಅವರು ತಮ್ಮ ಪ್ರತಿಸ್ಪರ್ಧಿ ವಾರ್ಡ್ ನಂ.9 ರ ಬಿಜೆಪಿ ಸದಸ್ಯ ಶ್ರೀಕಾಂತ ಗಂಟಗಲ್ಲಿ ಅವರನ್ನು ನಾಲ್ಕು ಮತಗಳ ಅಂತರದಿಂದ ಸೋಲಿಸಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಚಡಚಣ ತಹಶೀಲ್ದಾರ ಸಂಜಯ ಇಂಗಳೆ ಅವರು ಘೋಷಿಸಿದ್ದಾರೆ.ಕಳೆದ ವರ್ಷ(2023) ರ ಡಿಸೆಂಬರ ತಿಂಗಳಿನಲ್ಲಿ ಪ.ಪಂ ನ ಒಟ್ಟು 16 ಸ್ಥಾನಗಳಿಗೆ ಜರುಗಿದ ಚುನಾವಣೆಯಲ್ಲಿ ಬಿಜೆಪಿಯ 8 ಜನ ಸದಸ್ಯರು, 4 ಜನ ಕಾಂಗ್ರೆಸ್ ಹಾಗೂ 4 ಜನ ಪಕ್ಷೇತರರು ಆಯ್ಕೆಯಾಗಿದ್ದರು.ಅಧ್ಯಕ್ಷ ಸ್ಥಾನವನ್ನು ಅನುಸೂಚಿತ ಜಾತಿಗೆ ಹಾಗೂ ಉಪಾಧ್ಯಕ್ಷ…
ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ಕಿಮೊಥೆರಪಿ ಕೇಂದ್ರ ಉದ್ಘಾಟಿಸಿದ ಆರೋಗ್ಯ ಸಚಿವ ದಿನೇಶ ಗುಂಡೂರಾವ್ ಹೇಳಿಕೆ ಉದಯರಶ್ಮಿ ದಿನಪತ್ರಿಕೆ ವಿಜಯಪುರ: ರಾಜ್ಯದ ಎಲ್ಲ ಜಿಲ್ಲಾ ಆಸ್ಪತ್ರೆಗಳಲ್ಲಿ ಡೇ-ಕೇರ್ ಕಿಮೊಥೆರಪಿಯನ್ನು ಆರಂಭಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವರಾದ ದಿನೇಶ ಗುಂಡುರಾವ ಹೇಳಿದರು.ಶನಿವಾರ ನಗರದ ಜಿಲ್ಲಾ ಆಸ್ಪತ್ರೆಗೆ ಭೇಟಿ ನೀಡಿ, ವಿಜಯಪುರ ಜಿಲ್ಲಾ ಆಸ್ಪತ್ರೆಯಲ್ಲಿ ನಿರ್ಮಿಸಲಾದ ಕಿಮೊಥೆರಪಿ ಕೇಂದ್ರವನ್ನು ಉದ್ಘಾಟಿಸಿ ಅವರು ಮಾತನಾಡಿ, ಈಗಾಗಲೇ ವಿಜಯಪುರ ಹಾಗೂ ರಾಯಚೂರು ಜಿಲ್ಲೆಯಲ್ಲಿ ಕೇಂದ್ರ ಸ್ಥಾಪಿಸಲಾಗಿದ್ದು, ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಡೇ-ಕೇರ್ ಕಿಮೊಥೆರಪಿಗಳನ್ನು ಸ್ಥಾಪಿಸಲಾಗುತ್ತಿದೆ. ವಿಜಯಪುರದಲ್ಲಿ ಕಿಮೋಥೆರಪಿ ಕೇಂದ್ರದ ಸ್ಥಾಪನೆಯಿಂದ ವಿಜಯಪುರದಿಂದ ದೂರದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಹೋಗುವ ಅನಿವಾರ್ಯತೆ ಇತ್ತು. ಆದರೆ, ದೂರದ ಪ್ರಯಾಣ ಬೆಳೆಸುವ ಬದಲಿಗೆ, ಕ್ಯಾನ್ಸರ್ ರೋಗಿಗಳು ಸ್ಥಳೀಯವಾಗಿಯೇ ಜಿಲ್ಲಾ ಆಸ್ಪತ್ರೆಯಲ್ಲಿ ಸ್ಥಾಪಿಸಲಾದ ಕೇಂದ್ರದಲ್ಲಿಯೇ ಎಲ್ಲ ಚಿಕಿತ್ಸೆ ಸೌಲಭ್ಯ ಒದಗಿಸುವುದರಿಂದ ಇದು ತುಂಬ ಅನುಕೂಲಕರವಾಗಲಿದೆ ಎಂದು ಹೇಳಿದರು.ವಿಜಯಪುರ ಜಿಲ್ಲಾಸ್ಪತ್ರೆಯಲ್ಲಿ ೧೦ ಹಾಸಿಗೆಯುಳ್ಳ ಕಿಮೋಥೆರಪಿ ಡೇ ಕೇರ ಕೇಂದ್ರ ತೆರೆಯುವ ಮೂಲಕ…
ಉದಯರಶ್ಮಿ ದಿನಪತ್ರಿಕೆ ಮುದ್ದೇಬಿಹಾಳ: ತೊಗರಿ ಖರೀದಿ ಪ್ರಕ್ರಿಯೆಯಲ್ಲಿ ಸಾಮಾಜಿಕ ನ್ಯಾಯ ಪಾಲನೆಯಾಗಲಿ ಎಂದು ತಹಸೀಲ್ದಾರ ಬಲರಾಮ ಕಟ್ಟಿಮನಿ ಸಲಹೆ ನೀಡಿದರು.ತ್ರಿವೇಣಿ ಕಾಂಪ್ಲೆಕ್ಷ ಆವರಣದಲ್ಲಿ ದಾಸೋಹಿ ಕುಕ್ಕುಟ ರೈತ ಉತ್ಪಾದಕ ಕಂಪನಿ ವತಿಯಿಂದ ಆರಂಭಿಸಲಾದ ಎಂ.ಎಸ್.ಪಿ ಬೆಲೆಯ ತೊಗರಿ ಖರೀದಿ ಕೇಂದ್ರದಲ್ಲಿ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಿ ಅವರು ಮಾತನಾಡಿದರು.ವೈಜ್ಞಾನಿಕ ಬೆಲೆ ಸಿಗದೆ ಹೈರಾಣಾಗಿದ್ದ ತೊಗರಿ ಬೆಳೆಗಾರರಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಸೇರಿ ಕನಿಷ್ಠ ಬೆಲೆಯಾದರೂ ಸಿಗಬೇಕೆಂಬ ಉದ್ದೇಶದಿಂದ ಜಾರಿ ಮಾಡಿದ ಯೋಜನೆಯ ಪ್ರಯೋಜನವನ್ನು ರೈತರ ಮನೆ ಬಾಗಿಲಿಗೆ ತಲುಪಿಸಬೇಕೆಂಬ ಉದ್ದೇಶದಿಂದ ದಾಸೋಹಿ ಕಂಪನಿಯು ಕೈಗೊಂಡಿರುವ ಕ್ರಮಗಳು ಶ್ಲಾಘನೀಯವಾಗಿದ್ದು ಹೆಚ್ಚಿನ ರೈತರು ಈ ಸೌಲಭ್ಯದ ಸದುಪಯೋಗ ಪಡಿಸಿಕೊಳ್ಳಬೇಕು ಎಂದರು.ವಿಜಯಪುರ ಕೃಷಿ ಉತ್ಪನ್ನ ಮಾರುಕಟ್ಟೆಯ ಸಹಾಯಕ ನಿರ್ದೇಶಕ ಶಿವಾನಂದ ಗೋಠೆ ಮಾತನಾಡಿ ತೊಗರಿ ಬೆಳೆಗೆ ಸರ್ಕಾರ ನಿಗದಿ ಪಡಿಸಿದ ಕನಿಷ್ಠ ಬೆಂಬಲ ಬೆಲೆಗೆ ಜಿಲ್ಲೆಯಾದ್ಯಂತ ಉತ್ತಮ ಪ್ರಕ್ರಿಯೆ ವ್ಯಕ್ತವಾಗಿದ್ದು ಹಲವೆಡೆ ಈಗಾಗಲೆ ಹಲವು ಕಡೆ ಗರಿಷ್ಠ ಮಟ್ಟದಲ್ಲಿ ಖರೀದಿಯು ನಡೆಯುತ್ತಿದೆ. ಈ ಮಧ್ಯೆ…
ಉದಯರಶ್ಮಿ ದಿನಪತ್ರಿಕೆ ಇಂಡಿ: ರಾಜ್ಯ ಸರಕಾರಿ ನೌಕರ ಸಂಘದ, ರಾಜ್ಯ ಪ್ರಚಾರ ಮತ್ತು ಸಂಘಟನಾ ಸಮಿತಿ ಸದಸ್ಯರಾಗಿ ಶಿಕ್ಷಕ ರಮೇಶ್ ಮಂಜಣಿ ಅವರನ್ನು ನೇಮಕ ರಾಜ್ಯಧ್ಯಕ್ಷ ಸಿ ಎಸ್ ಷಡಕ್ಷರಿ ಆದೇಶ ಮಾಡಿದ್ದಾರೆ.ಇಂಡಿ ತಾಲ್ಲೂಕಿನ ತಡವಲಗಾ ಗ್ರಾಮದ ಗಣೇಣ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕ್ರೀಯಾಶೀಲ, ಸಂಘಟನಾ ಚತುರ ಹಾಗೂ ವಾಗ್ಮಿಯಾಗಿರುವ ಶಿಕ್ಷಕ ರಮೇಶ ಮಂಜಣ್ಣಿ ಅವರ ಸೇವೆ ಗಮನಿಸಿ ಸರಕಾರಿ ನೌಕರರ ವಿಚಾರವನ್ನು ಆಲಿಸಿ ಅವರಿಗೆ ಸಕಾರಾತ್ಮಕ ಬೆಂಬಲ ನೀಡುವುದರ ಜೊತೆಗೆ ಸಕ್ರೀಯ ಕಾರ್ಯನಿರ್ವಹಿಸಲು ಆದೇಶ ನೀಡಿರುತ್ತಾರೆ.ಜಿಲ್ಲಾ ಅಧ್ಯಕ್ಷ ಸುರೇಶ ಶೇಡಶ್ಯಾಳ ಸೇರಿದಂತೆ ಜಿಲ್ಲೆಯ ಹಾಗೂ ತಾಲ್ಲೂಕಿನ ಪದಾಧಿಕಾರಿಗಳು ಸಂತಸ ವ್ಯಕ್ತಪಡಿಸಿದ್ದಾರೆ.
ಉದಯರಶ್ಮಿ ದಿನಪತ್ರಿಕೆ ಇಂಡಿ: ವಿದ್ಯಾರ್ಥಿಗಳು ಸ್ಪಷ್ಟವಾದ ಗುರಿಯನ್ನು ಇಟ್ಟುಕೊಂಡು ಗುರುಗಳ ಮಾರ್ಗದರ್ಶನದಲ್ಲಿ ಸತತ ಪ್ರಯತ್ನ ಮಾಡಿದರೆ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದು ಉಪವಿಭಾಗಾಧಿಕಾರಿ ಅಭಿದ್ ಗದ್ಯಾಳ ಹೇಳಿದರು.ಅವರು ಇಂಡಿ ನಗರದ ಸರ್ಕಾರಿ ಕನ್ನಡ ಹೆಣ್ಣು ಮಕ್ಕಳ ಹಿರಿಯ ಪ್ರಾಥಮಿಕ ಶಾಲೆ ವತಿಯಿಂದ ಸನ್ಮಾನ ಸ್ವೀಕರಿಸಿ ಮಾತನಾಡಿ, ವಿದ್ಯಾರ್ಥಿನಿಯರಾದ ನಿಮ್ಮ ಮೇಲೆ ಹೆಚ್ಚು ಜವಾಬ್ದಾರಿ ಇರುತ್ತದೆ ಆದ್ದರಿಂದ ನಿಮ್ಮ ತಂದೆ ತಾಯಿಗಳಿಗೆ ನಿಮ್ಮ ಕುಟುಂಬಕ್ಕೆ ಹಿತವೆನಿಸುವ ಒಳ್ಳೆಯ ಕಾರ್ಯಗಳನ್ನು ಮಾಡಬೇಕು ಇಂದಿನ ಸಮಾಜದಲ್ಲಿ ಪುರುಷರಿಗೆ ಹಾಗೂ ಮಹಿಳೆಯರಿಗೆ ಸಮಾನವಾದ ಅವಕಾಶಗಳಿರುತ್ತವೆ. ನೀವು ಸಾಧನೆ ಮಾಡಬಹುದು ಆದರೆ ಜೀವನದಲ್ಲಿ ಸ್ಪಷ್ಟವಾದ ಗುರಿಯನ್ನು ಇಟ್ಟುಕೊಂಡು ಗುರುಗಳ ಮಾರ್ಗದರ್ಶನದಲ್ಲಿ ಸಾಗಿ ಗುರಿ ತಲುಪುವವರೆಗೂ ಎಂತಹ ಕಠಿಣ ಪರಿಸ್ಥಿತಿ ಬಂದರು ದೃತಿಗಡದೆ ಮುಂದೆ ಸಾಗಬೇಕು ಆಗ ಮಾತ್ರ ನೀವು ಸಂಕಲ್ಪ ಮಾಡಿದ ಗುರಿ ತಲುಪಲು ಸಾಧ್ಯವಿದೆ ಎಂದರು.ಈ ಶಾಲೆಯ ವಿದ್ಯಾರ್ಥಿನಿಯರು ರಾಜ್ಯೋತ್ಸವ ದಿನದಂದು ಮಾಡಿದ ಸಂಸ್ಕೃತಿಕ ನೃತ್ಯ ತುಂಬಾ ಪ್ರಶಂಷನೀಯವಾದದ್ದು ಹಾಗೆ ಅಭ್ಯಾಸದಲ್ಲಿಯೂ ನಿಮ್ಮ ಸಾಧನೆ ಇರಲಿ ಎಂದರು.ಇದೆ…
ಉದಯರಶ್ಮಿ ದಿನಪತ್ರಿಕೆ ವಿಜಯಪುರ: 2025 ನೇ ಸಾಲಿನಲ್ಲಿ ಎಸ್ಎಸ್ಎಲ್ಸಿ ಪರೀಕ್ಷೆಗಳಿಗೆ ಸಂಬಂಧಿಸಿದಂತೆ ವಿಜಯಪುರ ಗ್ರಾಮೀಣ ವಲಯದ ಎಲ್ಲ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಭಯ ಮುಕ್ತವಾಗಿ ಪರೀಕ್ಷೆ ಬರೆಯಲು ಆಯ್ದ ಪ್ರೌಢಶಾಲಾ ಮುಖ್ಯೋಪಾಧ್ಯಾಯರಿಂದ ಪಾಲಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ನೇರ ಫೋನಿನ ಕಾರ್ಯಕ್ರಮವನ್ನು ವಿಜಯಪುರ ಗ್ರಾಮೀಣವಲಯದ ಬಿಇಓಕಛೇರಿಯಲ್ಲಿ ಏರ್ಪಡಿಸಿ ಮಕ್ಕಳಲ್ಲಿ ಪರೀಕ್ಷಾ ಭಯವನ್ನು ಹೋಗಲಾಡಿಸಲು ಇರುವ ಎಲ್ಲ ಸಂದೇಹಗಳನ್ನು ನಿವಾರಣೆ ಮಾಡಲಾಯಿತು.ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಕ್ಷೇತ್ರ ಶಿಕ್ಷಣಾಧಿಕಾರಿ ಪ್ರಮೋದಿನಿ ಬಳೋಲಮಟ್ಟಿ ಯಾವುದೇ ಕಾರಣಕ್ಕೂ ಮಕ್ಕಳು ಹಾಗೂ ಪಾಲಕರು ಪರೀಕ್ಷೆಯನ್ನು ಯಶಸ್ವಿಯಾಗಿ ಯಾವುದೇ ಚಿಂತೆಯನ್ನು ಮಾಡದೆ ಭಯಮುಕ್ತವಾಗಿ ಪರೀಕ್ಷೆ ಬರೆಯಲು ತಿಳಿಸಿದರು.ಅಕ್ಷತಾ ವಾಡೆದ್ ಜಿಎಚ್ಎಸ್ ಸಿದ್ದಾಪುರಕ್ಕೆಮೊದಲ ಕಾಲ್ ಮಾಡಿ ಪರೀಕ್ಷೆ ಭಯ ನಿವಾರಣೆ ಕುರಿತು ಪ್ರಶ್ನೆಯನ್ನು ಕೇಳಿದರು. ಪರೀಕ್ಷೆಯ ಬಗ್ಗೆ ಭಯಪಡಬೇಕಾಗಿಲ್ಲ ವೆಬ್ ಕಾಸ್ಟಿಂಗ್ ಇದೆ ಎನ್ನುವುದು ಮರೆತು ತಮ್ಮ ಪಾಡಿಗೆ ತಾವು ಪರೀಕ್ಷೆ ಬರೆಯಬೇಕು ಎಂದು ತಿಳಿ ಹೇಳಿದರು.ಈ ಕಾರ್ಯಕ್ರಮದಲ್ಲಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯರುಗಳಾದ ರವೀಂದ್ರ ಎಲ್ಲಡಗಿ, ಶಾಂತೇಶ ಅವಟಿ, ವಿ.ಆರ್. ಪುರೋಹಿತ, ಎಲ್. ಟಿ. ಮುಲ್ಲಾ,…
